ಅಪಘಾತ

ರಿಕ್ಷಾ ಪಲ್ಟಿ: ವಿದ್ಯಾರ್ಥಿಗಳಿಗೆ ಗಾಯ

ಉಪ್ಪಿನಂಗಡಿ: ಇಲ್ಲಿನ ಕಲ್ಲೇರಿ ಸಮೀಪದಿಂದ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ರಿಕ್ಷಾ ಪಲ್ಟಿಯಾಗಿ, ವಿದ್ಯಾರ್ಥಿಗಳು ಗಾಯಗೊಂಡ ಘಟನೆ ವರದಿಯಾಗಿದೆ. ಎದುರಿನಿಂದ ಬಂದ ದ್ವಿಚಕ್ರ ವಾಹನವನ್ನು ತಪ್ಪಿಸುವ ಭರದಲ್ಲಿ ರಿಕ್ಷಾ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ರಿಕ್ಷಾದಲ್ಲಿದ್ದ ವಿದ್ಯಾರ್ಥಿಗಳು ಗಾಯಗೊಂಡಿದ್ದು, ಉಪ್ಪಿನಂಗಡಿ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ರಿಕ್ಷಾ ಪಲ್ಟಿ: ವಿದ್ಯಾರ್ಥಿಗಳಿಗೆ ಗಾಯ Read More »

3 ದಿನದಿಂದ 40 ಅಡಿ ಆಳದ ಬಾವಿಯಲ್ಲಿದ್ದ ಹೋರಿಯ ರಕ್ಷಣೆ | ಅಗ್ನಿಶಾಮಕ ದಳದಿಂದ ಯಶಸ್ವಿ ಕಾರ್ಯಾಚರಣೆ

ಸುಬ್ರಹ್ಮಣ್ಯ : ಕಳೆದ 3 ದಿನಗಳ ಹಿಂದೆ ಬಾವಿಗೆ ಬಿದ್ದಿದ್ದ ಹೋರಿಯನ್ನು ಅಗ್ನಿಶಾಮಕ ದಳ ರಕ್ಷಿಸಿದ ಘಟನೆ ಸುಬ್ರಹ್ಮಣ್ಯದ ದೇವರಗದ್ದೆ ಬಳಿ ನಡೆದಿದೆ. ದೇವರಗದ್ದೆ ನಿವಾಸಿ ವಿಠಲ ಶೆಟ್ಟಿ ಎಂಬವರ 40 ಅಡಿಯ ಬಾವಿಗೆ ಹೋರಿ ಬಿದ್ದಿತ್ತು. ಗಮನಕ್ಕೆ ಬಂದ ತಕ್ಷಣ ಸ್ಥಳೀಯರ ಸಹಾಯದಿಂದ ಮೇಲಕ್ಕೆತ್ತಲು ಪ್ರಯತ್ನ ನಡೆಸಲಾಗಿತ್ತು. ಆದರೆ ಪ್ರಯೋಜನವಾಗಿರಲಿಲ್ಲ. ಸೆ. 10ರಂದು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಹೋರಿಯನ್ನು ರಕ್ಷಿಸಿದ್ದಾರೆ. ಸಮಾಜ ಸೇವಕ ರವಿ ಕಕ್ಕೆಪದವು ಅವರು ಸುಬ್ರಹ್ಮಣ್ಯ ಪಿ.ಎಸ್.ಐ. ಅವರಿಗೆ ಮಾಹಿತಿ

3 ದಿನದಿಂದ 40 ಅಡಿ ಆಳದ ಬಾವಿಯಲ್ಲಿದ್ದ ಹೋರಿಯ ರಕ್ಷಣೆ | ಅಗ್ನಿಶಾಮಕ ದಳದಿಂದ ಯಶಸ್ವಿ ಕಾರ್ಯಾಚರಣೆ Read More »

ಹಾಲು ಸಾಗಾಟದ ಟ್ಯಾಂಕರ್ ಪಲ್ಟಿ : ಚಾಲಕನಿಗೆ ಗಾಯ 

ಕಡಬ  : ಹಾಲು ಸಾಗಾಟದ ಟ್ಯಾಂಕರ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಗಾಯಗೊಂಡ ಘಟನೆ ಪಡ್ಪಿನಂಗಡಿಯಿಂದ ವರದಿಯಾಗಿದೆ. ಎಡಮಂಗಲ, ಏನೆಕಲ್ಲು, ಪಂಜ  ಹಾಲು ಉತ್ಪಾದಕರ ಸಹಕಾರ ಸಂಘಗಳ ಬಿ.ಎಂ.ಸಿ.ಯಿಂದ ಹಾಲು ಶೇಖರಿಸಿ ಸಾಗಾಟ ಮಾಡುತ್ತಿದ್ದ ನಂದಿನಿ ಹಾಲಿನ ಟ್ಯಾಂಕರ್ ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿಯ ಪಡ್ಪಿನಂಗಡಿಯಲ್ಲಿ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದೆ. ಘಟನೆಯಿಂದ ಚಾಲಕನಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಟ್ಯಾಂಕರಿನಲ್ಲಿರುವ ಹಾಲು ಸುರಕ್ಷಿತವಾಗಿರುವುದಾಗಿ ತಿಳಿದು ಬಂದಿದೆ.

ಹಾಲು ಸಾಗಾಟದ ಟ್ಯಾಂಕರ್ ಪಲ್ಟಿ : ಚಾಲಕನಿಗೆ ಗಾಯ  Read More »

ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಗೂಡ್ಸ್ ವಾಹನ | ದ್ವಿಚಕ್ರ ವಾಹನ ಸವಾರನಿಗೆ ಗಾಯ

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿ ಐವತ್ತೊಕ್ಲು ಬಳಿ ದ್ವಿಚಕ್ರ ವಾಹನಕ್ಕೆ ಗೂಡ್ಸ್ ವಾಹನ  ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಗಾಯಗೊಂಡ ಘಟನೆ ನಡೆದಿದ. ದ್ವಿಚಕ್ರ ವಾಹನ ಸವಾರ ಆಸ್ತಿಕ್ ಗಾಯಗೊಂಡವರು. ಐವತ್ತೊಕ್ಲು ಗ್ರಾಮದ ನೆಲ್ಲಿಕಟ್ಟೆ ತಿರುವು ರಸ್ತೆ ಬಳಿ ಪಂಜ ಕಡೆಯಿಂದ ಬರುತ್ತಿದ್ದ ಗೂಡ್ಸ್ ವಾಹನ ಸುಬ್ರಹ್ಮಣ್ಯ ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ. ಪರಿಣಾಮ ದ್ವಿಚಕ್ರ ವಾಹನ ಸವಾರ ಆಸ್ತಿಕ್ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಗಾಯಗೊಂಡ ಆಸ್ತಿಕ್ ರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು

ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಗೂಡ್ಸ್ ವಾಹನ | ದ್ವಿಚಕ್ರ ವಾಹನ ಸವಾರನಿಗೆ ಗಾಯ Read More »

ಎರಡು ಬೈಕ್-ಕಾರ್ ಡಿಕ್ಕಿ | ಓರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲು

ಪುತ್ತೂರು: ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಮುಕ್ರಂಪಾಡಿ ಬಳಿ ಎರಡು ಬೈಕ್‍ ಹಾಗೂ ಕಾರು ಡಿಕ್ಕಿ ಹೊಡೆದುಕೊಂಡ ಪರಿಣಾಮ ಓರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಂಪ್ಯ ಅಕ್ಷಯ ಕಾಲೇಜಿನ ವಿದ್ಯಾರ್ಥಿ ಮೆಲ್ವಿನ್ ಪುರುಷರಕಟ್ಟೆ ಎಂಬವರು ಪಲ್ಸರ್ ಬೈಕ್ ನಲ್ಲಿ ಪುತ್ತೂರು ಕಡೆಗೆ ಹೋಗುತ್ತಿದ್ದಾಗ ಮುಕ್ರಂಪಾಡಿ ತಿರುವಿನಲ್ಲಿ ಓವರ್ ಟೇಕ್ ಮಾಡುವ ಭರದಲ್ಲಿ ಕಾರಿನ ಹಿಂಬದಿ ಟಯರ್‍ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಹಾಗೂ ಕಾರಿನ ಟಯರ್‍ ಗಳು ಒಡೆದು ಹೋಗಿವೆ. ಅಲ್ಲರ್ ಬೈಕ್‍ ನ ಹಿಂದುಗಡೆ ಬರುತ್ತಿದ್ದ

ಎರಡು ಬೈಕ್-ಕಾರ್ ಡಿಕ್ಕಿ | ಓರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲು Read More »

ಕಾರ್ಮಿಕರಿಗೆ ಕಾರು ಡಿಕ್ಕಿ : ಒರ್ವ ಮೃತ್ಯು, ಮೂವರು ಗಂಭೀರ ಗಾಯ

ಸುಳ್ಯ : ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರು ಡಿಕ್ಕಿ ಹೊಡೆದ ಕಾರಣ ಒಬ್ಬ ಮೃತಪಟ್ಟು 3 ಮಂದಿ ಗಂಭೀರ ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಅಡ್ಕಾರಿನಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಗಂಭೀರ ಗಾಯಗೊಂಡ ಇಬ್ಬರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಒಬ್ಬರು ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಡ್ಕಾರಿನ ಹೊಟೇಲ್ ಒಂದರ ಮುಂಭಾಗದಲ್ಲಿ ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಹುಣಸೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರೊಂದು ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ. ಒಬ್ಬರು ಮೃತಪಟ್ಟು 3

ಕಾರ್ಮಿಕರಿಗೆ ಕಾರು ಡಿಕ್ಕಿ : ಒರ್ವ ಮೃತ್ಯು, ಮೂವರು ಗಂಭೀರ ಗಾಯ Read More »

ಖಾಸಗಿ ಬಸ್ ನಿರ್ವಾಹಕ ಬಸ್ಸಿನಿಂದ ಬಿದ್ದು ಮೃತ್ಯು

ಮಂಗಳೂರು: ಖಾಸಗಿ ಬಸ್ಸಿನ ಫುಟ್ ಬೋರ್ಡ್‍ ನಲ್ಲಿ ನಿಂತಿದ್ದ ಬಸ್ ನಿರ್ವಾಹಕರೊಬ್ಬರು ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಮಂಗಳೂರಿನ ನಂತೂರು ವೃತ್ತದ ಬಳಿ ನಡೆದಿದೆ. ಮೃತಪಟ್ಟ ನಿರ್ವಾಹಕರನ್ನು ಹೀರಯ್ಯ (23) ಎಂದು ಗುರುತಿಸಲಾಗಿದೆ. ಕಾಟಿಪಳ್ಳದಿಂದ ನಂತೂರು ವೃತ್ತವಾಗಿ ಮಂಗಳಾದೇವಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿನ ಮುಂಭಾಗದ ಫುಟ್ ಬೋರ್ಡ್‍ ನಲ್ಲಿ ನಿಂತಿದ್ದಾಗ ಆಯತಪ್ಪಿ ಕೆಳಗೆ ಬಿದ್ದಾಗ ಸಂಚಾರಿ ಪೊಲೀಸರು ಸಾರ್ವಜನಿಕರ ಸಹಕಾರದಿಂದ ಆಸ್ಪತ್ರೆಗೆ ದಾಖಲಿಸಿದರೂ ಆದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

ಖಾಸಗಿ ಬಸ್ ನಿರ್ವಾಹಕ ಬಸ್ಸಿನಿಂದ ಬಿದ್ದು ಮೃತ್ಯು Read More »

ರಿಕ್ಷಾ-ಕಾರು ಡಿಕ್ಕಿ : ರಿಕ್ಷಾ ಚಾಲಕನಿಗೆ ಗಂಭೀರ ಗಾಯ

ಬಂಟ್ವಾಳ: ರಿಕ್ಷಾ ಹಾಗೂ ಕಾರು ಡಿಕ್ಕಿ ಹೊಡೆದುಕೊಂಡು ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ಬಿ.ಸಿ.ರೋಡು ಸಮೀಪದ ಲಯನ್ಸ್ ಸೇವಾ ಮಂದಿರದ ಬಳಿ ನಡೆದಿದೆ. ರಿಕ್ಷಾ ಚಾಲಕ ಮಹಮ್ಮದ್ ಸಾದಿಕ್ ಗಂಭಿರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಅಮಿತಾ ಅವರಿಗೆ ಅಲ್ಪಸ್ವಲ್ಪ ಗಾಯಗಳಾಗಿವೆ. ಕಾರು ಚಾಲಕನ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಿಕ್ಷಾ-ಕಾರು ಡಿಕ್ಕಿ : ರಿಕ್ಷಾ ಚಾಲಕನಿಗೆ ಗಂಭೀರ ಗಾಯ Read More »

ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್ : ಸವಾರನಿಗೆ ಗಾಯ

ಬೆಳ್ತಂಗಡಿ: ನಿಯಂತ್ರಣ ಕಳೆದುಕೊಂಡ ಬೈಕ್ ಸ್ಕಿಡ್ ಆಗಿ ಸವಾರ ರಸ್ತೆಗೆ ಎಸೆಯಲ್ಪಟ್ಟ ಬಳಿಕ ಬೈಕ್ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದ ಘಟನೆ ಪಿಲ್ಯ ಸಮೀಪ ನಡೆದಿದೆ. ರಸ್ತೆಗೆ ಎಸೆಯಲ್ಪಟ್ಟ ಬೈಕ್ ಸವಾರ ಸ್ಥಳೀಯ ವಿಘ್ನೇಶ್(22)ಗಂಭೀರ ಗೊಂಡಿದ್ದಾರೆ. ಕ್ಷಣ ಅವರನ್ನು ಉಜಿರೆ  ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಇನ್ನೋವಾ ಕಾರಿನ ಲಾಯಿಲದ ಪ್ರಕಾಶ್ ಕಾಶಿಬೆಟ್ಟು ಬೈಕ್ ಸವಾರನ ವಿರುದ್ಧ ದೂರು ನೀಡಿದ್ದಾರೆ ಎಂದು

ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್ : ಸವಾರನಿಗೆ ಗಾಯ Read More »

ಮಿನಿ ಲಾರಿ-ಬೈಕ್ ಡಿಕ್ಕಿ : ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು

ಕಾಸರಗೋಡು: ಮಿನಿ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೊಗ್ರಾಲ್ ಪುತ್ತೂರಿನ ಇಬ್ಬರು ಯುವಕರು ಮೃತಪಟ್ಟ ಘಟನೆ ಇಂದು ಮುಂಜಾನೆ ಕಣ್ಣೂರು ತಾಲಾಪ್ ಬಳಿ ಸಂಭವಿಸಿದೆ. ಮೊಗ್ರಾಲ್ ಪುತ್ತೂರು ಕಂಬಾರ್ ಬೆದ್ರಡ್ಕ ನಿವಾಸಿ ಮುನಾಫ್ (24) ಹಾಗೂ ಸ್ನೇಹಿತ ಲತೀಫ್ (23) ಮೃತಪಟ್ಟ ದುರ್ದೈವಿಗಳು ಕಣ್ಣೂರಿನಿಂದ ಕಾಸರಗೋಡು ಕಡೆಗೆ ತೆರಳುತ್ತಿದ್ದ ಬೈಕ್, ಮಂಗಳೂರಿನಿಂದ ಕಣ್ಣೂರು ಕಡೆಗೆ ಹೋಗುತ್ತಿದ್ದ ಮಿನಿ ಲಾರಿ ಕಣ್ಣೂರು ಎ.ಕೆ.ಜಿ. ಆಸ್ಪತ್ರೆ ಎದುರು ಡಿಕ್ಕಿಯಾಗಿದೆ. ಅಪಘಾತದಿಂದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು

ಮಿನಿ ಲಾರಿ-ಬೈಕ್ ಡಿಕ್ಕಿ : ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು Read More »

error: Content is protected !!
Scroll to Top