ಚಾಲಕನ ನಿಯಂತ್ರಣ ತಪ್ಪಿದ ಕಾರು : ವಿದ್ಯುತ್ ಕಂಬಕ್ಕೆ ಡಿಕ್ಕಿ
ಸುಬ್ರಹ್ಮಣ್ಯ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಸುಬ್ರಹ್ಮಣ್ಯ-ಕಡಬ ರಾಜ್ಯ ಹೆದ್ದಾರಿಯ ಕುಲ್ಕುಂದ ವಲಯ ಅರಣ್ಯಾಧಿಕಾರಿ ಕಚೇರಿ ಬಳಿ ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುತ್ತಿದ್ದ ಕಾರು ಎದುರಿನಿಂದ ಬಂದ ವಾಹನಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಕಾರು ಜಖಂಗೊಂಡಿದೆ. ಘಟನೆಯಲ್ಲಿ ವಿದ್ಯುತ್ ಕಂಬ ಮುರಿದಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಚಾಲಕನ ನಿಯಂತ್ರಣ ತಪ್ಪಿದ ಕಾರು : ವಿದ್ಯುತ್ ಕಂಬಕ್ಕೆ ಡಿಕ್ಕಿ Read More »








