ಅಪಘಾತ

ಪಿಕಪ್ ವಾಹನ ಡಿಕ್ಕಿ : ಬಾಲಕ ಮಹಮ್ಮದ್ ರಂಝೀನ್ ಮೃತ್ಯು

ಬೆಳ್ತಂಗಡಿ: ಪಿಕಪ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ಬುಧವಾರ ಬೆಳ್ತಂಗಡಿ ಲಾಯಿಲ ವೃತ್ತದ ಬಳಿ ಸಂಭವಿಸಿದೆ. ಪಾರಂಕಿ ಗ್ರಾಮದ ಅರ್ತಿಲ ನಿವಾಸಿ ಮಹಮ್ಮದ್ ರಫೀಕ್ ಎಂಬವರ ಪುತ್ರ ಮಹಮ್ಮದ್ ರಂಝೀನ್ (10) ಮೃತಪಟ್ಟ ಬಾಲಕ. ಶಾಲೆಗೆ ರಜೆಯಿದ್ದರಿಂದ ಲಾಯಿಲದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದ ಬಾಲಕ ಅಂಗಡಿಗೆ ಹೋಗಿ ಲಾಯಿಲ ವೃತ್ತದ ಬಳಿ ರಸ್ತೆ ದಾಟುತ್ತಿದ್ದ ವೇಳೆ ಉಜಿರೆಯಿಂದ ಬಂದ ಪಿಕಪ್ ಢಿಕ್ಕಿ ಹೊಡೆದಿದೆ. ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ಬಾಲಕನನ್ನು ಸ್ಥಳೀಯರ ಸಹಕಾರದಿಂದ […]

ಪಿಕಪ್ ವಾಹನ ಡಿಕ್ಕಿ : ಬಾಲಕ ಮಹಮ್ಮದ್ ರಂಝೀನ್ ಮೃತ್ಯು Read More »

ಪ್ರಾಣ ಉಳಿಸಿಕೊಳ್ಳಲು ಕಟ್ಟಡದಿಂದ ಜಿಗಿದ!

ಸಿಲಿಂಡರ್ ಸ್ಫೋಟಗೊಂಡು ಕೆಫೆಯೊಂದಕ್ಕೆ ಬೆಂಕಿ ಹತ್ತಿಕೊಂಡಿದ್ದು, ವ್ಯಕ್ತಿಯೋರ್ವರು ನಾಲ್ಕನೇ ಮಹಡಿಯಿಂದ ಕೆಳಗೆ ಹಾರಿದ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ. ನಾಲ್ಕನೇ ಮಹಡಿಯಿಂದ ಹಾರಿದ ವ್ಯಕ್ತಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಕೋರಮಂಗಲ ನೆಕ್ಸಾ ಶೋ ರೂಂ ಕಟ್ಟಡದ ಮೇಲ್ಭಾಗದ ಕೆಫೆಯೊಂದರಲ್ಲಿ ಬುಧವಾರ ಸಿಲಿಂಡರ್ ಸ್ಫೋಟಗೊಂಡಿದೆ. ಇದರಿಂದ ಬೆಂಕಿ ಕೆನ್ನಾಲಿಗೆ ಕಟ್ಟಡವನ್ನು ವ್ಯಾಪಿಸಿದ್ದು, ಇದರಿಂದ ತಪ್ಪಿಸಿಕೊಳ್ಳಲು ವ್ಯಕ್ತಿ ಕಟ್ಟಡದಿಂದ ಕೆಳಗೆ ಧುಮುಕಿದ್ದಾನೆ.

ಪ್ರಾಣ ಉಳಿಸಿಕೊಳ್ಳಲು ಕಟ್ಟಡದಿಂದ ಜಿಗಿದ! Read More »

ಸಿಡಿಲು ಬಡಿದು ಮನೆಗೆ ಹಾನಿ!

ಪುತ್ತೂರು: ಸಿಡಿಲು ಬಡಿದು ಮನೆಗೆ ಹಾನಿಯಾದ ಘಟನೆ ಸಾಲ್ಮರ ಸಮೀಪ ಮಂಗಳವಾರ ಸಂಭವಿಸಿದೆ. ಸಾಲ್ಮರ ಜಿಡೆಕಲ್ಲು ನಿವಾಸಿ ಜೆ.ಕೆ ಅಶ್ರಫ್ ಎಂಬವರ ಮನೆಗೆ ಸಿಡಿಲು ಬಡಿದಿದ್ದು, ಅಪಾರ ಹಾನಿ ಸಂಭವಿಸಿದೆ. ಪಕ್ಕದ ತೆಂಗಿನಮರಕ್ಕೂ ಹಾನಿಯುಂಟಾಗಿದೆ. ಮಂಗಳವಾರ ಸಂಜೆ ಸುರಿದ ಮಳೆಯೊಂದಿಗೆ ಸಿಡಿಲಿನ ಆರ್ಭಟವೂ ಇತ್ತು. ಇದರಿಂದ ಹಲವೆಡೆ ಹಾನಿ ಸಂಭವಿಸಿದೆ.

ಸಿಡಿಲು ಬಡಿದು ಮನೆಗೆ ಹಾನಿ! Read More »

ಮಂಗಳೂರು : ಮನೆಗೆ ಸಿಡಿಲು ಬಡಿದು ತಾಯಿ ಮತ್ತು ಮಗುವಿಗೆ ಗಾಯ

ಮಂಗಳೂರು : ಮನೆಗೆ ಸಿಡಿಲು ಬಡಿದು ಮನೆಯಲ್ಲಿದ್ದ ತಾಯಿ ಮತ್ತು ಮಗು ಗಾಯಗೊಂಡ ಘಟನೆ ಮಂಗಳೂರು ನಗರದ ಹೊರವಲಯದ ವಾಮಾಂಜೂರಿನಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ. ಶ್ವೇತಾ ಹಾಗೂ 5 ವರ್ಷದ ಮಗುವಿನ ಕಿವಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆ ಸಂದರ್ಭ ಮನೆಯಲ್ಲಿದ್ದ ನಾಲ್ವರು ಸದಸ್ಯರಿದ್ದು ಇಬ್ಬರು ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

ಮಂಗಳೂರು : ಮನೆಗೆ ಸಿಡಿಲು ಬಡಿದು ತಾಯಿ ಮತ್ತು ಮಗುವಿಗೆ ಗಾಯ Read More »

ಸಿಡಿಲಿಗೆ ಸುಟ್ಟು ಹೋದ ಫೊಟೋ ಸ್ಟುಡಿಯೋ: ಲಕ್ಷಾಂತರ ರೂ. ಹಾನಿ!

ಪುತ್ತೂರು: ಪುತ್ತೂರು  ಮುಖ್ಯ ರಸ್ತೆಯಲ್ಲಿರುವ ಪೋಟೋ ಡೆವಲಪ್ ಸ್ಟುಡಿಯೋ ಆಡ್ ಲ್ಯಾಬ್ ಮಂಗಳವಾರ ಮಧ್ಯಾಹ್ನ ಬಂದ ಸಿಡಿಲಿಗೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಸರಣಿ ಸಿಡಿಲು ಬಂದಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಕಂಪ್ಯೂಟರ್ ಸೇರಿ ಎಲ್ಲಾ ಉಪಕರಣಗಳು ಸುಟ್ಟು ಹೋಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಅಕ್ಕಪಕ್ಕದ ಅಂಗಡಿಯವರು ಬೆಂಕಿ ಶಮನ ಮಾಡುವ ಕಾರ್ಯ ಮಾಡಿದ್ದು, ಅಗ್ನಿಶಾಮಕ ದಳ ಆಗಮಿಸಿ ಸುಟ್ಟವಸ್ತುಗಳನ್ನು ಹಾಗೂ ಬೆಂಕಿಗೆ ತೀವ್ರ ಗೊಳ್ಳಲು ಸಹಕರಿಸುವ ವಸ್ತುಗಳನ್ನು ಹೊರ ಹಾಕುವ ಕಾರ್ಯ ಮಾಡಿದರು. ಅವಘಡದಿಂದ ಲಕ್ಷಾಂತರ ರೂಪಾಯಿ

ಸಿಡಿಲಿಗೆ ಸುಟ್ಟು ಹೋದ ಫೊಟೋ ಸ್ಟುಡಿಯೋ: ಲಕ್ಷಾಂತರ ರೂ. ಹಾನಿ! Read More »

ಸಿಎನ್‍ಜಿ ಆಟೋ ರಿಕ್ಷಾಕ್ಕೆ ಬೆಂಕಿ: ಇಬ್ಬರು ಸಜೀವ ದಹನ

ಆಟೋ ರಿಕ್ಷಾವೊಂದಕ್ಕೆ ಹಠಾತ್ತನೇ ಬೆಂಕಿ ತಗುಲಿ ಇಬ್ಬರು ಸಜೀವ ದಹನವಾದ ಘಟನೆ ಕಣ್ಣೂರಿನ ಕತಿರೂರಿನಲ್ಲಿ ನಡೆದಿದೆ. ಅಪಘಾತದಲ್ಲಿ ಚಾಲಕ ಅಭಿಲಾಷ್ (37) ಮತ್ತು ಆತನ ಸ್ನೇಹಿತ ಸಜೀಶ್ (36) ಸುಟ್ಟು ಕರಕಲಾಗಿದ್ದಾರೆ. ಆಟೋರಿಕ್ಷಾ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಅಟೋ ಪಲ್ಟಿಯಾಗಿದ್ದು, ಸಿಎನ್ ಜಿ ಸಿಲಿಂಡರ್‌ನಿಂದ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ಕೆನ್ನಾಲಗೆಗೆ ಆಟೋ ರಿಕ್ಷಾದ ಹತ್ತಿರಕ್ಕೂ ಹೋಗಲು ಆಗಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಬಳಿಕ ಅಗ್ನಿಶಾಮಕ ದಳ ಬೆಂಕಿ ನಂದಿಸಿದ್ದು, ಪೊಲೀಸರು ಮೃತದೇಹಗಳನ್ನು  ಹೊರ

ಸಿಎನ್‍ಜಿ ಆಟೋ ರಿಕ್ಷಾಕ್ಕೆ ಬೆಂಕಿ: ಇಬ್ಬರು ಸಜೀವ ದಹನ Read More »

ಅಡಕೆ ಸಾಗಾಟದ ಪಿಕಪ್ ಪಲ್ಟಿ

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಅಡಕೆ ಸಾಗಾಟದ ಪಿಕಪ್ ಪಲ್ಟಿಯಾದ ಘಟನೆ ಕೋಡಿಂಬಾಡಿಯಲ್ಲಿ ನಡೆದಿದೆ. ಅಡಿಕೆ ಅನ್ಲೋಡ್ ಮಾಡಿ ಸಾಗರದಿಂದ ವಾಪಾಸ್ಸಾಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಅಡಕೆ ಸಾಗಾಟದ ಪಿಕಪ್ ಪಲ್ಟಿ Read More »

ರಸ್ತೆ ದಾಟುತ್ತಿದ್ದ ಯುವತಿಗೆ ಕಾರು ಡಿಕ್ಕಿ : ಸ್ಥಳದಲ್ಲೇ ಮೃತ್ಯು

ಬಂಟ್ವಾಳ : ರಸ್ತೆ ದಾಟುತ್ತಿದ್ದ ಯುವತಿಯೋರ್ವರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಯುವತಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ದಾಸಕೋಡಿ ಎಂಬಲ್ಲಿ ನಡೆದಿದೆ.ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಎಂಬವರ ಪುತ್ರಿ ಪಾವನ (23) ಮೃತಪಟ್ಟವರು. ಬಿ.ಸಿ.ರೋಡಿನ ಸ್ಕ್ಯಾನಿಂಗ್ ಸೆಂಟರ್ ಒಂದರಲ್ಲಿ ಕೆಲಸ ಮಾಡುತ್ತಿರುವ ಪಾವನಿ ಸಂಜೆ ಕೆಲಸ ಬಿಟ್ಟು ಬಸ್‍ ನಲ್ಲಿ ತೆರಳಿ ದಾಸಕೋಡಿಯಲ್ಲಿ ಇಳಿದು ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ ಕಾರೊಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಯುವತಿ

ರಸ್ತೆ ದಾಟುತ್ತಿದ್ದ ಯುವತಿಗೆ ಕಾರು ಡಿಕ್ಕಿ : ಸ್ಥಳದಲ್ಲೇ ಮೃತ್ಯು Read More »

ಅಪಘಾತ: ಮಾನವೀಯತೆ ಮೆರೆದ ಪುತ್ತಿಲ ಪರಿವಾರ

ಪುತ್ತೂರು: ಕಾರು ಡಿಕ್ಕಿಯಾಗಿ ಗಾಯಗೊಂಡ ವ್ಯಕ್ತಿಯೊಬ್ಬರನ್ನು ಪುತ್ತಿಲ ಪರಿವಾರ ಕಾರ್ಯಕರ್ತರು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಗುರುವಾರ ಸಂಜೆ ಭಾರಿ ಮಳೆ ಸುರಿಯುತ್ತಿದ್ದ ಸಂದರ್ಭ ರಸ್ತೆ ದಾಟುತಿದ್ದ ವ್ಯಕ್ತಿಗೆ ಕುಂಬ್ರದಲ್ಲಿ ಕಾರು  ಅಪಘಾತಗೊಂಡಿದೆ. ಅಪಘಾತಗೊಂಡ ವ್ಯಕ್ತಿಯನ್ನು ತಕ್ಷಣ ಪುತ್ತಿಲ ಪರಿವಾರದ ಕಾರ್ಯಕರ್ತರು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.

ಅಪಘಾತ: ಮಾನವೀಯತೆ ಮೆರೆದ ಪುತ್ತಿಲ ಪರಿವಾರ Read More »

ಮೈಮೇಲೆ ಹರಿದ ಕಾರು: ಯುವಕ ಸ್ಥಳದಲ್ಲೇ ಮೃತ್ಯು!

ಮಂಗಳೂರು: ದ್ವಿಚಕ್ರ ವಾಹನ ಸವಾರರೊಬ್ಬರ ಮೇಲೆ ಕಾರು ಹರಿದು ಮೃತಪಟ್ಟ ಘಟನೆ ಕುಂಟಿಕಾನದಲ್ಲಿ ನಡೆದಿದೆ. ಕಾವೂರು ನಿವಾಸಿ ಕೌಶಿಕ್ (21) ಮೃತಪಟ್ಟ ದುರ್ದೈವಿ. ನಗರದ ಕುಂಟಿಕಾನದ ಎ.ಜೆ. ಆಸ್ಪತ್ರೆಯಿಂದ ಹೊರಬರುತ್ತಿದ್ದ ದ್ವಿಚಕ್ರ ವಾಹನ ರಿಕ್ಷಾವೊಂದಕ್ಕೆ ತಗುಲಿ ಅಡ್ಡಬಿದ್ದಿದೆ. ಈ ವೇಳೆ ಸವಾರ ನೆಲಕ್ಕೆ ಬಿದ್ದಾಗ ಅವರ ಮೇಲೆ ಏಕಾಏಕಿ ಕಾರು ಹರಿದಿದೆ. ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

ಮೈಮೇಲೆ ಹರಿದ ಕಾರು: ಯುವಕ ಸ್ಥಳದಲ್ಲೇ ಮೃತ್ಯು! Read More »

error: Content is protected !!
Scroll to Top