ಅಪಘಾತ

ಬೈಕ್-ಕಾರು ಡಿಕ್ಕಿ : ಬೈಕ್ ಸವಾರ ಗಂಭೀರ

ಪುತ್ತೂರು: ಬೈಕ್ ಮತ್ತು ಕಾರು ಡಿಕ್ಕಿಯಾದ ಘಟನೆ ಇಂದು ಬೆಳಿಗ್ಗೆ ಕೊಡಿನೀರು ಎಂಬಲ್ಲಿ ನಡೆದಿದೆ. ಸವಣೂರಿನಿಂದ ಪುತ್ತೂರು ಕಡೆ ಬರುತ್ತಿದ್ದ ಬೈಕ್ ಸವಾರ ಬಾಲಕೃಷ್ಣ ಗೌಡ, ಪುತ್ತೂರಿನಿಂದ ಸುಬ್ರಹ್ಮಣ್ಯ ಕಡೆಗೆ ಬರುತ್ತಿದ್ದ ಕಾರು ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದಿಂದ ಬೈಕ್ ಸವಾರನಿಗೆ ಗಂಭಿರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೈಕ್-ಕಾರು ಡಿಕ್ಕಿ : ಬೈಕ್ ಸವಾರ ಗಂಭೀರ Read More »

ಬಸ್-ಟ್ಯಾಂಕರ್ ಡಿಕ್ಕಿ : 19 ಮಂದಿಗೆ ಗಾಯ

ಬೆಳ್ತಂಗಡಿ: ಬಸ್ ಹಾಗೂ ಟ್ಯಾಂಕರ್ ಡಿಕ್ಕಿ ಹೊಡೆದುಕೊಂಡ ಪರಿಣಾಮ 19 ಮಂದಿ ಗಾಯಗೊಂಡ ಘಟನೆ ಬೆಳ್ತಂಗಡಿ ಮಾರಿಗುಡಿ ಬಳಿ ಇಂದು ನಡೆದಿದೆ. ಬೆಳ್ತಂಗಡಿ ಕಡೆಯಿಂದ ಗುರುವಾಯನಕೆರೆಯತ್ತ ಬರುತ್ತಿದ್ದ ವಿಶಾಲ್ ಬಸ್‍, ಎದುರಿನಿಂದ ಬರುತ್ತಿದ್ದ ಎಚ್‍.ಪಿ. ಕಂಪೆನಿಯ ಪೆಟ್ರೋಲಿಯಂ ಕಂಪೆನಿಯ ಟ್ಯಾಂಕರ್ ನಡುವೆ ಮಾರಿಗುಡಿ ಬಳಿ ಡಿಕ್ಕಿ ಸಂಭವಿಸಿದೆ. ಅಪಘಾತದಿಂದ ಎರಡೂ ವಾಹನಗಳ ಚಾಲಕರು ಸಹಿತ  ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ ಗಾಯಾಳುಗಳನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಎರಡೂ ವಾಹನಗಳ ಮುಂಭಾಗದ ಗಾಜು ಒಡೆದು ಜಖಂಗೊಂಡಿದೆ.

ಬಸ್-ಟ್ಯಾಂಕರ್ ಡಿಕ್ಕಿ : 19 ಮಂದಿಗೆ ಗಾಯ Read More »

ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ದುರಂತ ಘಟನೆ ಭಾನುವಾರ ಸಂಜೆ ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಮತ್ತು ಇಲಿಯಾನ್ ಅವರ ಪುತ್ರಿ ಮರಿಯಂ ನಾಶಿಯಾ (14) ಮೃತ ಬಾಲಕಿಯರು. ಬಂಟ್ವಾಳ ತಾಲೂಕಿನ ನಾವೂರು ಸಮೀಪದ ಮೈಂದಾಳದಲ್ಲಿ ಸಂಬಂಧಿಕರ ಮನೆಗೆ ಬಂದಿದ್ದರು. ಮನೆಯವರೊಂದಿಗೆ ಸಂಜೆ ಮಕ್ಕಳು ಸ್ಥಳೀಯ ನೀರಕಟ್ಟೆ ಎಂಬಲ್ಲಿ ನೇತ್ರಾವತಿ ನದಿಗೆ ತರಳಿ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ. ಮಕ್ಕಳು ನೀರಿನಲ್ಲಿ ಮುಳುಗುವುದನ್ನು ಕಣ್ಣಾರೆ ಕಂಡರೂ ಈಜು

ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು Read More »

ಹೃದಯಾಘಾತದಿಂದ ಹೊಟೇಲ್ ಉದ್ಯಮಿ ಮೃತ್ಯು | ಬೈಕ್ ಚಲಾಯಿಸುತ್ತಿರುವಾಲೇ ನಡೆಯಿತು ಘಟನೆ

ಪುತ್ತೂರು : ಮಂಗಳೂರಿನಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಕುರಿಯ ನಿವಾಸಿ ಬಾಲಕೃಷ್ಣ ಗೌಡ (49) ಅವರು ಮೇ 3ರಂದು ಹೃದಯಾಘಾತದಿಂದ ನಿಧನರಾದರು. ಬಾಲಕೃಷ್ಣ ಗೌಡ ಅವರು ಬೈಕ್ ಓಡಿಸುತ್ತಿರುವಾಗ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಹೃದಯಾಘಾತದಿಂದ ಹೊಟೇಲ್ ಉದ್ಯಮಿ ಮೃತ್ಯು | ಬೈಕ್ ಚಲಾಯಿಸುತ್ತಿರುವಾಲೇ ನಡೆಯಿತು ಘಟನೆ Read More »

ಸಿಡಿಲು ಬಡಿದು ವ್ಯಕ್ತಿ ಮೃತ್ಯು

ಸುಬ್ರಹ್ಮಣ್ಯ: ಸಿಡಿಲು ಬಡಿದು ವ್ಯಕ್ತಿಯೋರ್ವರು ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ  ನಡೆದಿದೆ. ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದರ್ (34) ಸಿಡಿಲು ಬಡಿದು ಮೃತಪಟ್ಟವರು. ಶುಕ್ರವಾರ ಸಂಜೆ ಸುಬ್ರಹ್ಮಣ್ಯ ಪರಿಸರದಲ್ಲಿ ಸಂಜೆ ಗಾಳಿ, ಗುಡುಗು ಆರಂಭಗೊಂಡಿದ್ದು ಈ ವೇಳೆ ಮನೆಯಂಗಳದಲ್ಲಿ ಒಣಗಿಸಲು ಹಾಕಲಾಗಿದ್ದ ಅಡಿಕೆಯನ್ನು ಸೋಮಸುಂದರ್ ಅವರು ರಾಶಿ ಮಾಡುವ ವೇಳೆ ಸಿಡಿಲು ಬಡಿದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸೋಮ ಸುಂದರ್ ಅವರು ಸುಬ್ರಹ್ಮಣ್ಯ ಸಮೀಪ

ಸಿಡಿಲು ಬಡಿದು ವ್ಯಕ್ತಿ ಮೃತ್ಯು Read More »

ಚಾಲಕನ ನಿಯಂತ್ರಣ ತಪ್ಪಿದ ಕಾರು | ಹೋಟೆಲ್‌ ಗೆ  ಡಿಕ್ಕಿ

ಸಂಪಾಜೆ : ಪುತ್ತೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‌ವೊಂದಕ್ಕೆ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ದಂಪತಿಗೆ ಗಂಭೀರ ಗಾಯಗೊಂಡು, ಸುಳ್ಯದ ಆಸ್ಪತ್ರೆಗೆ ದಾಖಲಾದ ಘಟನೆ ದ.ಕ. ಸಂಪಾಜೆ ಎಂಬಲ್ಲಿ ಮೇ.3ರ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ. ವಿಟ್ಲದ ಅಡ್ಯನಡ್ಕದ ದಂಪತಿಗಳು ಕಾರಿನಲ್ಲಿ ಮಡಿಕೇರಿ ಕಡೆಗೆ ಹೋಗುತ್ತಿದ್ದ ವೇಳೆ ಸಂಪಾಜೆಯ ಹೈವೆ ಹೋಟೆಲ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಹೋಟೆಲಿನ ಮುಂಭಾಗದ ಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಚಾಲಕ ಹಾಗೂ ಮುಂಭಾಗದಲ್ಲಿ ಕುಳಿತಿದ್ದ

ಚಾಲಕನ ನಿಯಂತ್ರಣ ತಪ್ಪಿದ ಕಾರು | ಹೋಟೆಲ್‌ ಗೆ  ಡಿಕ್ಕಿ Read More »

ಬೈಕ್ ಡಿಕ್ಕಿ : ವೃದ್ಧ ಗಂಭೀರ ಗಾಯ

ಬಂಟ್ವಾಳ : ಬಸ್ಸಿಗಾಗಿ ಕಾಯುತ್ತಿದ್ದ ವೃದ್ಧರೊಬ್ಬರಿಗೆ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪುದು ಗ್ರಾಮದ ಫರಂಗಿಪೇಟೆ ಎಂಬಲ್ಲಿ ಸಂಭವಿಸಿದೆ. ಫರಂಗಿಪೇಟೆ ನಿವಾಸಿ ಶೇಖಬ್ಬ (71) ಗಾಯಗೊಂಡವರು. ಫರಂಗಿಪೇಟೆ ಜಂಕ್ಷನ್ನಿನಲ್ಲಿ ಬುಧವಾರ ಮಧ್ಯಾಹ್ನ ಬಸ್ಸಿಗಾಗಿ ಕಾಯುತ್ತಿರುವ ಸಂದರ್ಭ ಹೆದ್ದಾರಿಯಲ್ಲಿ ಅಕ್ಷಯ್ ನಾಯ್ಕ ಎಂಬವರು ಚಲಾಯಿಸಿಕೊಂಡು ಬಂದ ಬೈಕ್ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಶೇಖಬ್ಬ ಅವರನ್ನು ತಕ್ಷಣ ಮಂಗಳೂರಿನ ಯುನಿಟಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್ ಡಿಕ್ಕಿ : ವೃದ್ಧ ಗಂಭೀರ ಗಾಯ Read More »

ಬೈಕ್-ಕಾರು ಡಿಕ್ಕಿ : ಎರಡು ತುಂಡುಗಳಾದ ಬೈಕ್ !

ಬೆಳ್ತಂಗಡಿ: ಬೈಕ್‍ ಹಾಗೂ ಕಾರು ಡಿಕ್ಕಿ ಹೊಡೆದುಕೊಂಡ ಘಟನೆ ಬೆಳಾಲು ಉಜಿರೆ ರಸ್ತೆಯಲ್ಲಿರುವ ಮಾಚಾರು ಸಮೀಪ ಇಂದು ನಡೆದಿದೆ. ಅಪಘಾತದಲ್ಲಿ ಬೈಕ್ ಎರಡು ತುಂಡಾಗಿ ಬಿದ್ದಿದ್ದು, ಬೈಕಿನಲ್ಲಿದ್ದವರು ಪವಾಡಸದೃಶ್ಯವಾಗಿ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಅಪಘಾತದ ವೇಳೆ ಬೈಕ್ ಸವಾರ ಬೈಕಿನಿಂದ ಎಸೆಯಲ್ಪಟ್ಟಿದ್ದು ರಸ್ತೆಬದಿಗೆ ಬಿದ್ದಿದ್ದಾರೆ. ಆದರೆ ಯಾವುದೇ ಹೆಚ್ಚಿನ ಗಾಯಗಳಾಗಿಲ್ಲ. ಕಾರಿಗೂ ಹಾನಿಯಾಗಿದ್ದು ಕಾರಿನಲ್ಲಿದ್ದವರೂ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಬೈಕ್-ಕಾರು ಡಿಕ್ಕಿ : ಎರಡು ತುಂಡುಗಳಾದ ಬೈಕ್ ! Read More »

ಮರದ ಕೊಂಬೆ ನಡುವೆ ಸಿಲುಕಿ ವ್ಯಕ್ತಿ ಮೃತ್ಯು !

ಸುಳ್ಯ: ವ್ಯಕ್ತಿಯೊಬ್ಬರು ಮರ ಕಡಿಯುತ್ತಿದ್ದ ವೇಳೆ ಮರದ ಕೊಂಬೆಯ ನಡುವೆ ಸಿಲುಕಿ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಸುಳ್ಯದ ಕುರುಂಜಿಗುಡ್ಡೆಯಲ್ಲಿ ಇಂದು ನಡೆದಿದೆ. ಬೆಳ್ಯಪ್ಪ ನಾಯ್ಕ ಕೇರ್ಪಳ ಮನೆ ಮೃತಪಟ್ಟವರು. ಮರ ಕಡಿಯುತ್ತಿದ್ದ ವೇಳೆ ಕೊಂಬೆಗಳ ನಡುವೆ ಸಿಲುಕಿದ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮರದ ಕೊಂಬೆ ನಡುವೆ ಸಿಲುಕಿ ವ್ಯಕ್ತಿ ಮೃತ್ಯು ! Read More »

ಪ್ಯಾರಾಗ್ಲೀಡಿಂಗ್‍ : ಶಿಕ್ಷಕಿ ಮೃತ್ಯು

ಥಾಯ್ಲೆಂಡ್: ಕೇರಳದ ಶಿಕ್ಷಕಿಯೊಬ್ಬರು ಪ್ಯಾರಾಗ್ಲೀಡಿಂಗ್‍ ಮಾಡುವಾಗ ಥಾಯ್ಲೆಂಡ್‌ನಲ್ಲಿ ದುರಂತ ಅಂತ್ಯ ಕಂಡಿದ್ದಾರೆ. ಚಿರಂಚಿರ ಸರಕಾರಿ ಯುಪಿ ಶಾಲೆಯ ಮುಖ್ಯ ಶಿಕ್ಷಕಿ ರಾಣಿ ಮ್ಯಾಥ್‍ ಮೃತಪಟ್ಟವರು. ರಾಣಿ ಮ್ಯಾಥ್ ಅವರ ಪತಿ ಕೂಡ ಥಾಯ್ಲೆಂಡ್‌ನಲ್ಲಿದ್ದಾರೆ. ಅವರು ರಜೆಯಲ್ಲಿ ಸುತ್ತಾಡಲು ಥಾಯ್ಲೆಂಡ್ ಗೆ ಹೋಗಿದ್ದರು.. ಅಪಘಾತದಲ್ಲಿ ಗಾಯಗೊಂಡಿದ್ದ ಅವರು ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರದ ನಂತರ ಮೃತದೇಹವನ್ನು ಮನೆಗೆ ತರಲಾಗುವುದು ಎಂದು ಸಂಬಂಧಿಕರು ತಿಳಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಪ್ಯಾರಾಗ್ಲೀಡಿಂಗ್‍ : ಶಿಕ್ಷಕಿ ಮೃತ್ಯು Read More »

error: Content is protected !!
Scroll to Top