ಅಪಘಾತ

ಬೈಕ್‍ ಅಪಘಾತ : ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು

ಬೆಳ್ತಂಗಡಿ; ಭೀಕರ ಬೈಕ್‍ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಾರಾವಿ ಕುತ್ಲೂರಿನಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಬೈಕ್ ಸವಾರರಾದ ಪ್ರಶಾಂತ್ ಹಾಗೂ ದಿನೇಶ್ ಎಂಬವರೇ ಮೃತಪಟ್ಟವರು. ಕುತ್ಲೂರು ಪುರುಷ ಗುಡ್ಡೆ ಸಮೀಪ ಕೊಕ್ರಾಡಿ ನಾರಾವಿ ರಸ್ತೆಯಲ್ಲಿ ಬೈಕ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಇಬ್ಬರು ಸವಾರರು ಸ್ಥಳದಲ್ಲಿಯೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ರಾತ್ರಿಯ ವೇಳೆ ಯಾವುದೋ ಕಾರ್ಯಕ್ರಮ ಮುಗಿಸಿ ಹಿಂತಿರುಗುವ ವೇಳೆ ರಾತ್ರಿ ಹನ್ನೆರಡು ಗಂಟೆಯ […]

ಬೈಕ್‍ ಅಪಘಾತ : ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು Read More »

ಹಾರುತ್ತಿರುವಾಗಲೇ ರೆಕ್ಕೆ ತುಂಡಾಗಿ ಹೆಲಿಕಾಪ್ಟರ್‌ ನದಿಗೆ ಪತನ : 6 ಮಂದಿ ಸಾವು

ನ್ಯೂಯಾರ್ಕ್ : ಹಾರುತ್ತಿದ್ದ ಹೆಲಿಕಾಪ್ಟರ್‌ನ ರೆಕ್ಕೆ ತುಂಡಾದ ಪರಿಣಾಮ ಅದು ನದಿಗೆ ಪತನಗೊಂಡು ಆರು ಮಂದಿ ಮೃತಪಟ್ಟ ಘಟನೆ ಅಮೆರಿಕದ ಮ್ಯಾನ್‌ಹಾಟನ್ ಬಳಿ ಸಂಭವಿಸಿದ್ದು, ಈ ಅವಘಡದ ವೀಡಿಯೊ ಜಗತ್ತಿನಾದ್ಯಂತ ಸಿಕ್ಕಾಪಟ್ಟೆ ವೈರಲ್‌ ಆಗಿದೆ.ಗುರುವಾರ ಹೆಲಿಕಾಪ್ಟರ್ ಹಡ್ಸನ್‌ ನದಿಗೆ ಬಿದ್ದಿದೆ. ಮೃತಪಟ್ಟವರಲ್ಲಿ ಸೀಮನ್ಸ್ ಕಂಪನಿಯ ಅಧ್ಯಕ್ಷ ಆಗಸ್ಟಿನ್ ಎಸ್ಕೋಬರ್, ಅವರ ಪತ್ನಿ ಹಾಗೂ ಮೂವರು ಮಕ್ಕಳು ಸೇರಿದ್ದಾರೆ. ಕಳೆದ ಕೆಲ ತಿಂಗಳುಗಳಿಂದ ಅಮೆರಿಕದಲ್ಲಿ ವಾಯುಮಾರ್ಗ ಮಧ್ಯದಲ್ಲಿ ಸಂಭವಿಸುತ್ತಿರುವ ಅಪಘಾತಗಳ ಸರಣಿಗೆ ಇದು ಹೊಸ ಸೇರ್ಪಡೆಯಾಗಿದೆ.ಪ್ರತ್ಯಕ್ಷದರ್ಶಿಗಳು ಈ ಘಟನೆಯನ್ನು

ಹಾರುತ್ತಿರುವಾಗಲೇ ರೆಕ್ಕೆ ತುಂಡಾಗಿ ಹೆಲಿಕಾಪ್ಟರ್‌ ನದಿಗೆ ಪತನ : 6 ಮಂದಿ ಸಾವು Read More »

ಮನೆ ಮೇಲೆ ಬಿದ್ದ ಬಸ್‌ : 30 ಪ್ರಯಾಣಿಕರಿಗೆ ಗಾಯ

ಬಾಳೆಹೊನ್ನೂರು: ಬೆಂಗಳೂರಿನಿಂದ ಶೃಂಗೇರಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಸಮೀಪ ಮೂರುಗದ್ದೆ ಮತ್ತು ಜಲದುರ್ಗದ ನಡುವೆ ಜಯಪುರ ಬಳಿ ನಿಯಂತ್ರಣ ತಪ್ಪಿ ಮನೆಯ ಮೇಲೆ ಉರುಳಿ ಬಿದ್ದು 30 ಪ್ರಯಾಣಿಕರು ಗಾಯಗೊಂಡಿದ್ದಾರೆ. ಬೆಂಗಳೂರು ಡಿಪೋಗೆ ಸೇರಿದ ಬಸ್‌ನಲ್ಲಿ 45 ಪ್ರಯಾಣಿಕರಿದ್ದರು. ಪುಟ್ಟಪ್ಪ ಪೂಜಾರಿ ಎಂಬವರ ಮನೆಯ ಮೇಲೆ ಬಸ್ ಉರುಳಿ ಬಿದ್ದಿದೆ. ಗಾಯಗೊಂಡ 10 ಮಂದಿಯನ್ನು ಜಯಪುರದ ಸರ್ಕಾರಿ ಆಸ್ಪತ್ರೆಗೆ ಜನರನ್ನು ದಾಖಲಿಸಲಾಗಿದ್ದು, ಚಾಲಕ ವೆಂಕಪ್ಪ ಸೇರಿದಂತೆ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪ ಆಸ್ಪತ್ರೆಗೆ

ಮನೆ ಮೇಲೆ ಬಿದ್ದ ಬಸ್‌ : 30 ಪ್ರಯಾಣಿಕರಿಗೆ ಗಾಯ Read More »

ಭಾರೀ ಗಾಳಿಮಳೆ : ಮನೆ ಮೇಲೆ ಬಿದ್ದ ತೆಂಗಿನಮರ

ಪುತ್ತೂರು: ಇಂದು ಸಂಜೆ ಸುರಿದ ಭಾರೀ ಗಾಳಿ ಮಳೆಗೆ ನಗರಸಭಾ ವ್ಯಾಪ್ತಿಯ ಗುಂಪಕಲ್ಲು ಎಂಬಲ್ಲಿ ಮನೆಯೊಂದರ ಮೇಲೆ ತೆಂಗಿನಮರ ಬಿದ್ದು ಮನೆಗೆ ಹಾನಿ ಉಂಟಾದ ಘಟನೆ ನಡೆದಿದೆ. ಅಕ್ಕಪಕ್ಕದಲ್ಲಿದ್ದ ಶ್ವೇತಾ ಹಾಗೂ ವಿಜಯ ಎಂಬವರ ಮನೆ ಮೇಲೆ ತೆಂಗಿ ಮರ ಬಿದ್ದು ಮನೆಗೆ ಹಾನಿಯಾಗಿದೆ. ಸ್ಥಳಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿ ಪರಿಶೀಲನೆ ಮಾಡಿ ಮನೆ ಮೇಲೆ ಬಿದ್ದ ತೆಂಗಿನ ಮರವನ್ನು ತೆರವುಗೊಳಿಸುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಭಾರೀ ಗಾಳಿಮಳೆ : ಮನೆ ಮೇಲೆ ಬಿದ್ದ ತೆಂಗಿನಮರ Read More »

ಶಾಲೆಯಲ್ಲಿ ಬೆಂಕಿ ಅವಘಡ : ಡಿಸಿಎಂ ಪವನ್‌ ಕಲ್ಯಾಣ್‌ ಪುತ್ರನಿಗೆ ಗಂಭೀರ ಗಾಯ

ಸಿಂಗಾಪುರ: ಸಿಂಗಾಪುರದ ಶಾಲೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಆಂಧ್ರಪ್ರದೇಶ ಉಪಮುಖ್ಯಮಂತ್ರಿ ನಟ ಪವನ್ ಕಲ್ಯಾಣ್ ಕಿರಿಯ ಮಗ ಮಾರ್ಕ್ ಶಂಕರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಕಿ ಅವಘಡದಲ್ಲಿ ಮಾರ್ಕ್‌ ಶಂಕರ್ ಕೈ, ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಶ್ವಾಸಕೋಶಕ್ಕೆ ಹೊಗೆ ನುಗ್ಗಿ ತೀವ್ರ ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರನ್ನು ಸಿಂಗಾಪುರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪವನ್ ಕಲ್ಯಾಣ್ ಹಾಗೂ ಅನ್ನಾ ದಂಪತಿಗೆ 2017ರಲ್ಲಿ ಮಾರ್ಕ್ ಶಂಕರ್ ಜನಿಸಿದರು. ಸದ್ಯ ಪವನ್ ಕಲ್ಯಾಣ್ ಮೂರನೇ

ಶಾಲೆಯಲ್ಲಿ ಬೆಂಕಿ ಅವಘಡ : ಡಿಸಿಎಂ ಪವನ್‌ ಕಲ್ಯಾಣ್‌ ಪುತ್ರನಿಗೆ ಗಂಭೀರ ಗಾಯ Read More »

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು | ಓರ್ವ ಮಹಿಳೆಗೆ ಗಾಯ

ಬೆಳ್ತಂಗಡಿ : ಮೂಡಿಗೆರೆ ಕಡೆಯಿಂದ ಬೆಳ್ತಂಗಡಿಯ ಕಡೆಗೆ ಬರುತ್ತಿದ್ದ ಅಮ್ಮಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಹೊಂಡಕ್ಕೆ ಉರುಳಿ ಮರಕ್ಕೆ ಢಿಕ್ಕಿ ಹೊಡೆದ ಘಟನೆ ಸೋಮವಾರ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಾಲೇಜೊಂದರ ದಾಖಲಾತಿಗೆ ಬರುತ್ತಿದ್ದ ಸಕಲೇಶಪುರ ಕಡೆಯ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.  ಈ ಅಪಘಾತದಲ್ಲಿ ಓರ್ವ ಮಹಿಳೆ ಗಾಯಗೊಂಡಿದ್ದಾರೆ  ಎನ್ನಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು | ಓರ್ವ ಮಹಿಳೆಗೆ ಗಾಯ Read More »

ಕಾರು-ಟೆಂಪೋ ಡಿಕ್ಕಿ : ಅಂಗಡಿಗೆ ನುಗ್ಗಿದ ಟೆಂಪೋ

ಪುತ್ತೂರು: ಕಾರು ಮತ್ತು ಟೆಂಪೋ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಟೆಂಪೋ ಅಂಗಡಿಗೆ ನುಗ್ಗಿದ ಘಟನೆ ಪುತ್ತೂರು ಖಾಸಗಿ ಬಸ್‍ ನಿಲ್ದಾಣದ ಬಳಿ ಇಂದು ನಡೆದಿದೆ. ಕಾರು ಮತ್ತು ಟೆಂಪೋ ನಡುವೆ ಡಿಕ್ಕಿಯಾಗಿದ್ದು ಪರಿಣಾಮ ಟೆಂಪೋ ಪಕ್ಕದಲ್ಲಿದ್ದ ಅಂಗಡಿಯೊಂದಕ್ಕೆ ನುಗ್ಗಿದೆ. ಘಟನೆ ಪರಿಣಾಮ ವಾಹನಗಳಿಗೆ ಮತ್ತು ಅಂಗಡಿಗೆ ಹಾನಿಯಾಗಿದ್ದು ಚಾಲಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಕಾರು-ಟೆಂಪೋ ಡಿಕ್ಕಿ : ಅಂಗಡಿಗೆ ನುಗ್ಗಿದ ಟೆಂಪೋ Read More »

ಆಟೋ – ಕಾರು ಡಿಕ್ಕಿ | ಆಟೋ ಚಾಲಕ ಗಂಭೀರ ಗಾಯ

ಬೆಳ್ತಂಗಡಿ : ಆಟೋ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ  ಆಟೋ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ವೇಣೂರು ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ನೌಶದ್ ಗಂಭೀರವಾಗಿ ಗಾಯಗೊಂಡ ಆಟೋ ಚಾಲಕ ಎನ್ನಲಾಗಿದೆ. ಕಾರು ಚಾಲಕ ಲಾರಿಯೊಂದನ್ನು ಓವರ್ ಟೇಕ್ ಮಾಡಲು ಹೋಗಿ ಈ ದುರ್ಘಟನೆ ನಡೆದಿದೆ. ಅತಿ ವೇಗದಿಂದ ಕಾರನ್ನು ಚಲಾಯಿಸಿದ ಪರಿಣಾಮ ಎದುರಿನಿಂದ ಬರುತ್ತಿದ್ದ ಆಟೋಗೆ ಡಿಕ್ಕಿ ಹೊಡೆದಿದ್ದಾನೆ. ಬಳಿಕ ಚಾಲಕನ ನಿಯಂತ್ರಣ ತಪ್ಪಿ ಕಾರು ಮಗುಚಿ ಬಿದ್ದಿದೆ. ಗಂಭೀರವಾಗಿ ಗಾಯಗೊಂಡಿರುವ ಆಟೋ ಚಾಲಕನನ್ನು ಮಂಗಳೂರಿನ

ಆಟೋ – ಕಾರು ಡಿಕ್ಕಿ | ಆಟೋ ಚಾಲಕ ಗಂಭೀರ ಗಾಯ Read More »

ಸುಳ್ಯ : ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಲಾರಿ

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಟಾಟಾ 407 ಮಿನಿ ಲಾರಿ ಪಲ್ಟಿಯಾದ ಘಟನೆ ಮಾಣಿ-ಮೈಸೂರು ಹೆದ್ದಾರಿಯ ಸುಳ್ಯದ ಓಡಬಾಯಿಯ ಗುಂಡ್ಯಡ್ಕ ಸಮೀಪ ನಡೆದಿದೆ. ಬೆಳ್ತಂಗಡಿಯಿಂದ ಕುಶಾಲನಗರ ಕಡೆಗೆ ಹೋಗುತ್ತಿದ್ದ ವಾಹನ ಗುಂಡ್ಯಡ್ಕ ಸಮೀಪ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ರಸ್ತೆ ಬದಿಯ ಮೋರಿಗೆ ಪಲ್ಟಿಯಾಗಿ ಬಿದ್ದಿದೆ. ಅಪಘಾತದಲ್ಲಿ ಲಾರಿ ಜಖಂಗೊಂಡಿದ್ದು, ವಾಹನದಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ಸುಳ್ಯ : ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಲಾರಿ Read More »

ನೀರಕಟ್ಟೆಯಲ್ಲಿ ಬಸ್‌ ಪಲ್ಟಿಯಾಗಿ ಮೃತಪಟ್ಟ ಯುವಕ ಬೆಂಗಳೂರಿನವರು

12 ಮಂದಿಗೆ ಗಾಯ; ಓರ್ವನಿಗೆ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಉಪ್ಪಿನಂಗಡಿ: ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಇಂದು ಮುಂಜಾನೆ ಖಾಸಗಿ ಬಸ್‌ ಪಲ್ಟಿಯಾಗಿ ಮೃತಪಟ್ಟ ವ್ಯಕ್ತಿಯನ್ನು ಬೆಂಗಳೂರಿನ ನಿವಾಸಿ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 12 ಮಂದಿ ಗಾಯಗೊಂಡಿದ್ದು, ಈ ಪೈಕಿ ಓರ್ವನ ಸ್ಥಿತಿ ಚಿಂತಾಜನಕವಿದೆ ಎನ್ನಲಾಗಿದೆ. ಬೆಂಗಳೂರಿನಿಂದ ಉಡುಪಿಗೆ ಬರುತ್ತಿದ್ದ ಖಾಸಗಿ ಬಸ್‌ ಬೆಳಗ್ಗೆ 5 ಗಂಟೆಗೆ ವೇಳೆಗೆ ನೀರಕಟ್ಟೆಯ ಕಡಿದಾದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.ಮೃತಪಟ್ಟವರನ್ನು ಬೆಂಗಳೂರಿನ ಯಡಿಯೂರು ನಿವಾಸಿ ಹರ್ಷ (24) ಎಂದು

ನೀರಕಟ್ಟೆಯಲ್ಲಿ ಬಸ್‌ ಪಲ್ಟಿಯಾಗಿ ಮೃತಪಟ್ಟ ಯುವಕ ಬೆಂಗಳೂರಿನವರು Read More »

error: Content is protected !!
Scroll to Top