ಅಪಘಾತ

ಪಯಸ್ವನಿ ನದಿಯಲ್ಲಿ ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ !

ಸುಳ್ಯ: ಸುಳ್ಯ ಕೆ.ವಿ.ಜಿ ಕ್ಯಾಂಪಸ್ ಬಳಿಯ ಬಸ್ಮಡ್ಕ ಎಂಬಲ್ಲಿ ಪಯಸ್ವಿನಿ ನದಿಯಲ್ಲಿ ಮುಳುಗಿ ಯುವಕ ಕಣ್ಮರೆಯಾದ ವ್ಯಕ್ತಿ ಶವ ಪತ್ತೆಯಾಗಿದೆ. ಬಟ್ಟೆ ಒಗೆಯಲು ಹಾಗೂ ಸ್ನಾನಕ್ಕೆಂದು ನದಿಗೆ ಬಂದ ಮೂವರು ಯುವಕರು ನೀರಿಗೆ ಇಳಿದಿದ್ದರು ಅದರಲ್ಲಿ ಒಬ್ಬರು ಕಣ್ಮರೆಯಾಗಿದ್ದರು. ಆ ವ್ಯಕ್ತಿಯ ಪತ್ತೆಗಾಗಿ ಸುಳ್ಯ ಆರಕ್ಷಕ ಠಾಣೆ ಸಿಬ್ಬಂದಿಗಳು ಅಗ್ನಿಶಾಮಕ ದಳ ಹಾಗೂ ಪೈಚಾರಿನ ಮುಳುಗು ತಜ್ಞರ ತಂಡ ಶೋಧ ಮುಂದುವರಿಸಿದ್ದರು. ಇದೀಗ ಮೃತ ದೇಹವನ್ನು ನೀರಿನಿಂದ ಮೇಲೇತ್ತಲಾಗಿದೆ ಎಂದು ತಿಳಿದು ಬಂದಿದೆ.

ಪಯಸ್ವನಿ ನದಿಯಲ್ಲಿ ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ ! Read More »

ನದಿಯಲ್ಲಿ ಈಜಲು ತೆರಳಿದ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರುಪಾಲು !

ನದಿಯಲ್ಲಿ ಈಜಲು ತೆರಳಿದ್ದ ಮೂವರು ಇಂಜಿನೀಯರಿಂಗ್ ವಿದ್ಯಾರ್ಥಿಗಳು ನೀರುಪಾಲಾಗದ ಘಟನೆ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಅರ್ಜಿ ಗ್ರಾಮದ ಬರಪೊಳೆಯ ಕೊಂಗಣ ನದಿಯಲ್ಲಿ ನಡೆದಿದೆ. ರಷಿಕ್ ಕುಶಾಲಪ್ಪ (20), ಆಕಾಶ್ ಬಿದ್ದಪ್ಪ (20) ಹಾಗೂ ಸುದೀಶ್ ಅಯ್ಯಪ್ಪ (20) ನೀರುಪಾಲದ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಕೊಡಗಿನ ಪೊನ್ನಂಪೇಟೆ ಸಿಇಟಿ ಕಾಲೇಜಿನಲ್ಲಿ 2ನೇ ವರ್ಷದ ಎಂಜಿನಿಯರಿಂಗ್ ಓದುತ್ತಿದ್ದ ಐವರ ತಂಡ ವೀಕೆಂಡ್ ಕಾರಣಕ್ಕೆ ಕೊಂಗಣ ನದಿಯಲ್ಲಿ ಈಜಲು ತೆರಳಿದ್ದು ಈ ವೇಳೆ ಘಟನೆ ಸಂಭವಿಸಿದೆ. ನೀರಿನ ಹರಿವು ಹೆಚ್ಚಿದ್ದರಿಂದ ಮೂವರು

ನದಿಯಲ್ಲಿ ಈಜಲು ತೆರಳಿದ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರುಪಾಲು ! Read More »

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ !

ಪುತ್ತೂರು: ಆಲ್ಟೋ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸರ್ವೆ ದೇವಸ್ಥಾನ ಬಳಿ ಇಂದು ಮಧ್ಯಾಹ್ನ ನಡೆದಿದೆ. ಆಲ್ಟೋ ಕಾರಿನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ಬೆಳಂದೂರಿನವರೆನ್ನಲಾದ ಮುಸ್ಲಿಂ ಕುಟುಂಬ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಅಪಘಾತದಿಂದ ಸಣ್ಣ ಪುಟ್ಟ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಅಪಫಾತದ ತೀವ್ರತೆಗೆ ಕಾರಿನ ಎದುರು ಭಾಗ ನಜ್ಜುಗುಜ್ಜಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ! Read More »

ಬೈಕ್ ಸಹಸವಾರನ ಮೇಲೆ ಲಾರಿ ಹರಿದು ಮೃತ್ಯು !

ಬಂಟ್ವಾಳ: ಬೈಕೊಂದು ಸ್ಕಿಡ್ ಆಗಿ ಅಡ್ಡಬಿದ್ದು ಬೈಕ್‍ ನಲ್ಲಿದ್ದ ಸಹಸವಾರನ ಮೇಲೆ ಲಾರಿ ಹರಿದು ಸ್ಥಳದಲ್ಲೇ ಮೃತಪಟ್ಟ ಘಟನೆ ಬಿ.ಸಿ.ರೋಡು ವೃತ್ತದ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ. ಬೆಂಗ್ರೆ ನಿವಾಸಿ ರಮೀಜ್‍ (20) ಮೃತಪಟ್ಟ ಸಹಸವಾರ. ಬೈಕ್‍ ಸ್ಕಿಡ್ ಆಗಿ ಡಾಮಾರು ರಸ್ತೆಗೆ ಬಿದ್ದಿದ್ದು, ರಮೀಜ್‍ ಅವರ ಮೇಲೆಯೇ ಲಾರಿ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂದರ್ಭ ಲಾರಿ ಸಮೇತ ಚಾಲಕ ಪರಾರಿಯಾಗಿದ್ದು, ಬಳಿಕ ಪೊಲೀಸರು ಲಾರಿಯನ್ನು ಪತ್ತೆ ಮಾಡಿದ್ದಾರೆ. ಈ ವೇಳೆ ವೃತ್ತದ ಬಳಿ ಸಂಚಾರ

ಬೈಕ್ ಸಹಸವಾರನ ಮೇಲೆ ಲಾರಿ ಹರಿದು ಮೃತ್ಯು ! Read More »

ಬೀಚ್‍ನಲ್ಲಿ ಅಲೆಯ ಸೆಳೆತಕ್ಕೆ ಸಿಲುಕಿದ ಮೂವರು ಯುವಕರು | ಇಬ್ಬರು ಮೃತ್ಯು, ಓರ್ವನ ರಕ್ಷಣೆ

ಉಳ್ಳಾಲ: ಸಮುದ್ರಕ್ಕೆ ಈಜಲು ತೆರಳಿದ ಯುವಕರಿಬ್ಬರು ಅಲೆಯ ಸೆಳೆತಕ್ಕೆ ಸಿಲುಕಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಸಮ್ಮರ್ ಸ್ಯಾಂಡ್ ಬೀಚ್‍ನಲ್ಲಿ ನಡೆದಿದೆ. ಬಶೀರ್ (23) ಹಾಗೂ ಸಲ್ಮಾನ್ (19) ಮೃತಪಟ್ಟ ಯುವಕರು. ಕುಟುಂಬ ಸಮೇತ ಉಳ್ಳಾಲ ದರ್ಗಾ ಸಂದರ್ಶನಕ್ಕೆ ಬಂದಿದ್ದ ಅವರು ಬಳಿಕ ಬೀಚ್‍ಗೆ ತೆರಳಿ ನೀರಿನಲ್ಲಿ ಆಟವಾಡುತ್ತಿದ್ದ ಸಂದರ್ಭ ಬಶೀರ್, ಸಲ್ಮಾನ್ ಹಾಗೂ ಸೈಫ್ ಅಲಿ ಅಲೆಗೆ ಸಿಲುಕಿ ನಾಪತ್ತೆಯಾಗಿದ್ದರು. ಈ ಸಂದರ್ಭ ಸ್ಥಳೀಯ ಈಜುಗಾರರು ಸಲ್ಮಾನ್‍ ಹಾಗೂ ಸೈಫುಲ್ಲಾ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಈ

ಬೀಚ್‍ನಲ್ಲಿ ಅಲೆಯ ಸೆಳೆತಕ್ಕೆ ಸಿಲುಕಿದ ಮೂವರು ಯುವಕರು | ಇಬ್ಬರು ಮೃತ್ಯು, ಓರ್ವನ ರಕ್ಷಣೆ Read More »

ಗುಡ್ಡ ಕುಸಿತ |  ಮಣ್ಣಿನಡಿ ಸಿಲುಕಿದ ಕಾರ್ಮಿಕರು | ಸ್ಥಳೀಯರಿಂದ ರಕ್ಷಣೆ

ವಿಟ್ಲ: ಗುಡ್ಡ ಜರಿದು ಕಾರ್ಮಿಕರು ಮಣ್ಣಿನ ಅಡಿ ಸಿಲುಕಿದ ಘಟನೆ ಸೂರಿಕುಮೇರು ಸಮೀಪದ ಕಾಯರಡ್ಕದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ದಾಸಕೋಡಿ ನೆಲ್ಲಿ ನಿವಾಸಿ ಉಮೇಶ್ ನಾಯ್ಕ( 60)  ಮತ್ತು ಬಾಯಿಲ ನಿವಾಸಿ ರಾಜೇಶ್ ನಾಯ್ಕ(40) ಮಣ್ಣಿನಡಿ ಸಿಲುಕಿ ಗಾಯಗೊಂಡವರು. ಜೆಸಿಂತಾ ಮಾರ್ಟಿಸ್  ಎಂಬವರ ಮನೆಯ ಕಾಂಪೌಂಡ್ ನ ಕಾಮಗಾರಿ ನಡೆಯುತ್ತಿದ್ದ ಸಂದರ್ಭ ಹಠಾತ್ತನೆ ಮೇಲಿನ‌ಗುಡ್ಡ ಕುಸಿದಿದೆ. ಈ ಸಂದರ್ಭ ಕೆಲಸದಲ್ಲಿ ನಿರತರಾಗಿದ್ದ ಈ ಇಬ್ಬರು ಕಾರ್ಮಿಕರು ಮಣ್ಣಿನೊಳಗೆ ಸಿಲುಕಿಕೊಂಡರು. ತಕ್ಷಣ ಸ್ಥಳೀಯರು ಗಾಯಾಳುಗಳನ್ನು ರಕ್ಷಿಸಿ ಆ್ಯಂಬುಲೆನ್ಸ್ ಮೂಲಕ 

ಗುಡ್ಡ ಕುಸಿತ |  ಮಣ್ಣಿನಡಿ ಸಿಲುಕಿದ ಕಾರ್ಮಿಕರು | ಸ್ಥಳೀಯರಿಂದ ರಕ್ಷಣೆ Read More »

ನಿಲ್ಲಿಸಿದ್ದ ಲಾರಿಯಲ್ಲಿ ಮೃತದೇಹ ಪತ್ತೆ !

ಉಪ್ಪಿನಂಗಡಿ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿ ನಿಲ್ಲಿಸಲಾಗಿದ್ದ ಲಾರಿಯೊಂದರಲ್ಲಿ ಮೃತದೇಹವೊಂದು ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೈಸೂರು ಜಿಲ್ಲೆಯ ಚೆನ್ನಪಟ್ಟಣದ ಖಲೀಲ್ ಖಾನ್ (58) ಮೃತಪಟ್ಟ ವ್ಯಕ್ತಿ. ಈ ಘಟನೆ ಎರಡು ದಿನಗಳ ಬಳಿಕ ಬೆಳಕಿಗೆ ಬಂದಿದ್ದು, ಮೈಸೂರಿನಿಂದ ಬಿ.ಸಿ.ರೋಡಿಗೆ ಹಾಸಿಗೆ ಲೋಡನ್ನು ಲಾರಿಯಲ್ಲಿ ತಂದು ಖಾಲಿ ಮಾಡಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಲಾರಿಯನ್ನು ನಿಲ್ಲಿಸಲಾಗಿತ್ತು. ಲಾರಿಯ ಬಾಗಿಲು ಚಿಲಕ ಹಾಕಿದ್ದರಿಂದ ಘಟನೆ ತಿಳಿದು ಬಂದಿಲ್ಲ. ಡಿ.29 ರಂದು ಲಾರಿಯಿಂದ ವಾಸನೆ ಬರಲಾರಂಭಿಸಿದ್ದು, ಸಂಶಯಗೊಂಡು ಸ್ಥಳೀಯರು ಪರಿಶೀಲನೆ

ನಿಲ್ಲಿಸಿದ್ದ ಲಾರಿಯಲ್ಲಿ ಮೃತದೇಹ ಪತ್ತೆ ! Read More »

ಪಾದಚಾರಿ ಯುವತಿಗೆ ಕಾರು ಡಿಕ್ಕಿ | ಗಾಯಾಳು ಮೃತ್ಯು

ಬಂಟ್ವಾಳ : ಪಾದಚಾರಿ ಯುವತಿಗೆ ಕಾರು ಡಿಕ್ಕಿಯಾದ ಪರಿಣಾಮ ಯುವತಿ ಗಂಭೀರ ಗಾಯಗೊಂಡ ಘಟನೆ ಗುರುವಾರ ತಡರಾತ್ರಿ ಬಿ.ಸಿ.ರೋಡು ಸಮೀಪದ ಪಚ್ಚಿನಡ್ಕದಲ್ಲಿ ನಡೆದಿದ್ದು, ಮಂಗಳೂರಿನ ಖಾಸಗಿ  ಆಸ್ಪತ್ರೆಯಲ್ಲಿ ತೀವ್ರನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಇದೀಗ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸ್ಥಳೀಯ ‌ನಿವಾಸಿ ಚೈತ್ರ (22 ) ಮೃತಪಟ್ಟ ಯುವತಿ. ಮಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿರುವ ಚೈತ್ರ ಅವರಿಗೆ ನಿಶ್ಚಿತಾರ್ಥ ನಡೆದು ಮದುವೆಗೆ ದಿನ ನಿಗದಿಯಾಗಿದೆ ಎಂದು ತಿಳಿದುಬಂದಿದೆ. ಸಂಜೆ ಕೆಲಸ ಬಿಟ್ಟು ಬಸ್ ನಿಂದ ಇಳಿದು

ಪಾದಚಾರಿ ಯುವತಿಗೆ ಕಾರು ಡಿಕ್ಕಿ | ಗಾಯಾಳು ಮೃತ್ಯು Read More »

ಲಾರಿ-ಕಾರು ಅಪಘಾತ | ಮೆಸ್ಕಾಂ ಅಧಿಕಾರಿಗೆ ಗಂಭೀರ ಗಾಯ

ಪುತ್ತೂರು: ಲಾರಿ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಮೆಸ್ಕಾಂ ಅಧಿಕಾರಿಯೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಗುರುವಾರ ತಡರಾತ್ರಿ ಸುಮಾರಿಗೆ ಕೋಡಿಂಬಾಡಿ ಧರ್ಮಶ್ರೀ ಭಜನಾ ಮಂದಿರದ ತಿರುವಿನಲ್ಲಿ ಸಂಭವಿಸಿದೆ. ಮೆಸ್ಕಾಂ ಅಧಿಕಾರಿ ಆನಂದ ಉಕ್ಕುಡ ತೀವ್ರ ಗಾಯಗೊಂಡವರು. ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಇಕೋಸ್ಪೋರ್ಟ್ಸ್  ಕಾರು ಮತ್ತು ಎದುರುಗಡೆಯಿಂದ ಬರುತ್ತಿದ್ದ ಈಚರ್ ಲಾರಿ  ನಡುವೆ ಅಪಘಾತ ಸಂಭವಿಸಿದೆ. ಕಾರಿನ ಮುಂಭಾಗ ಜಖಂಗೊಂಡಿದ್ದು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕಾರು ಚಾಲಕ ಲೇಖನ್ ಬನ್ನೂರು ಹಾಗೂ ಇನ್ನೋರ್ವರು ಅಪಾಯದಿಂದ ಪಾರಾಗಿದ್ದಾರೆ. ಹೆಚ್ಚಿನ

ಲಾರಿ-ಕಾರು ಅಪಘಾತ | ಮೆಸ್ಕಾಂ ಅಧಿಕಾರಿಗೆ ಗಂಭೀರ ಗಾಯ Read More »

ಪಾದಚಾರಿ ಯುವತಿಗೆ ಕಾರು ಡಿಕ್ಕಿಯಾಗಿ ಗಂಭೀರ ಗಾಯ

ಬಂಟ್ವಾಳ : ಪಾದಚಾರಿ ಯುವತಿಗೆ ಕಾರು ಡಿಕ್ಕಿಯಾದ ಪರಿಣಾಮ ಯುವತಿ ಗಂಭೀರ ಗಾಯಗೊಂಡ ಘಟನೆ ಗುರುವಾರ ತಡರಾತ್ರಿ ಬಿ.ಸಿ.ರೋಡು ಸಮೀಪದ ಪಚ್ಚಿನಡ್ಕದಲ್ಲಿ ನಡೆದಿದೆ. ಸ್ಥಳೀಯ ‌ನಿವಾಸಿ ಚೈತ್ರ (22 ) ಗಾಯಗೊಂಡ ಯುವತಿ ಮಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿರುವ ಚೈತ್ರ ಅವರಿಗೆ ನಿಶ್ಚಿತಾರ್ಥ ನಡೆದು ಮದುವೆಗೆ ದಿನ ನಿಗದಿಯಾಗಿದೆ ಎಂದು ತಿಳಿದುಬಂದಿದೆ. ಸಂಜೆ ಕೆಲಸ ಬಿಟ್ಟು ಬಸ್ ನಿಂದ ಇಳಿದು ತಾಯಿ ಜೊತೆಗೆ ಮನೆಯ ಕಡೆಯ ತೆರಳುತ್ತಿದ್ದ ವೇಳೆ ಅಪಘಾತ ನಡೆದಿದೆ. ಅತೀ ವೇಗ ಮತ್ತು

ಪಾದಚಾರಿ ಯುವತಿಗೆ ಕಾರು ಡಿಕ್ಕಿಯಾಗಿ ಗಂಭೀರ ಗಾಯ Read More »

error: Content is protected !!
Scroll to Top