ಅಪಘಾತ

ಬೈಕ್‍ ಗೆ ಜೀಪು ಡಿಕ್ಕಿ : ಬೈಕ್ ಸವಾರ ಮೃತ್ಯು, ಇಬ್ಬರು ಗಂಭೀರ

ಪುತ್ತೂರು: ಬೈಕ್‍ ಗೆ ಜೀಪು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ, ಇಬ್ಬರು ಗಂಭೀರ ಗಾಯಗೊಂಡ ಘಟನೆ ಬುಧವಾರ ರಾತ್ರಿ ನರಿಮೊಗರು ಗ್ರಾಮದ ಪಾಪೆತ್ತಡ್ಕದಲ್ಲಿ ಸಂಭವಿಸಿದೆ. ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್(48) ಮೃತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ ಲೋಕೇಶ್ ಅವರು ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ […]

ಬೈಕ್‍ ಗೆ ಜೀಪು ಡಿಕ್ಕಿ : ಬೈಕ್ ಸವಾರ ಮೃತ್ಯು, ಇಬ್ಬರು ಗಂಭೀರ Read More »

ಏಕಾಏಕಿ ಬ್ರೇಕ್ ಹಾಕಿದ ಆಟೋ ಚಾಲಕ | ನಾಲ್ಕು ವರ್ಷದ ಮಗು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯ

ಕಡಬ:  ಆಟೋ ಚಾಲಕ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಆಟೋದಲ್ಲಿ ಪ್ರಯಾಣಿಸುತ್ತಿದ್ದ ನಾಲ್ಕು ವರ್ಷ ಮಗುವೊಂದು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡ ಘಟನೆ ರಾಮಕುಂಜದಲ್ಲಿ ಇಂದು ನಡೆದಿದೆ. ಸಾತ್ವಿಕ್ (4) ರಸ್ತೆಗೆಸೆಯಲ್ಪಟ್ಟು  ಗಾಯಗೊಂಡ ಮಗು. ಆಟೋರಿಕ್ಷಾ ಚಾಲಕ ಶಿವಪ್ರಸಾದ್ ಎಂಬವರು ಆಟೋವನ್ನು ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ವೇಗವಾಗಿ ಚಲಾಯಿಸಿಕೊಂಡು ಇಳಿಜಾರು ರಸ್ತೆಯಲ್ಲಿ ಬ್ರೇಕ್ ಹಾಕಿದಾಗ ಆಟೋರಿಕ್ಷಾದಲ್ಲಿದ್ದ ಮಗು ಡಾಮಾರು ರಸ್ತೆಗೆ ಬಿದ್ದು ಗಾಯಗೊಂಡಿದೆ ಎನ್ನಲಾಗಿದೆ. ಮಗುವನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ.

ಏಕಾಏಕಿ ಬ್ರೇಕ್ ಹಾಕಿದ ಆಟೋ ಚಾಲಕ | ನಾಲ್ಕು ವರ್ಷದ ಮಗು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯ Read More »

ಕಾರು ಡಿಕ್ಕಿ ಹೊಡೆದು ಪಾದಾಚಾರಿ ಮೃತ್ಯು

ಸುಳ್ಯ : ಸುಳ್ಯ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಬಳಿ ನಡೆದುಕೊಂಡು ಹೊಗುತ್ತಿದ್ದ ಸುಳ್ಯ ಜಟ್ಟಿಪಳ್ಳ ನಿವಾಸಿ ಗೋಪಾಲ ಎಂಬವರಿಗೆ ಕಾರೊಂದು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬುಧವಾರ ಮುಂಜಾನೆ ಬಸ್ ನಿಲ್ದಾಣ ಬಳಿ ನಡೆದುಕೊಂಡು ಹೊಗುತ್ತಿದ್ದ ಸಂದರ್ಭದಲ್ಲಿ ಕಾರು ಗುದ್ದಿದರೆನ್ನಲಾಗಿದೆ.ಸ್ಥಳಕ್ಕೆ ಆಗಮಿಸಿದ ಪ್ರಗತಿ ಅಂಬ್ಯುಲೆನ್ಸ್ ಚಾಲಕ ಅಚ್ಚು ಅವರು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಿದರು. ಗೋಪಾಲ ಅವರು ಜಟ್ಟಿಪಳ್ಳ ನಿವಾಸಿಯಾಗಿದ್ದು ಹಲವಾರು ವರ್ಷಗಳಿಂದ ಮೇಸ್ತ್ರಿ ವೃತಿಯನ್ನು ಮಾಡುತ್ತಿದ್ದರು.

ಕಾರು ಡಿಕ್ಕಿ ಹೊಡೆದು ಪಾದಾಚಾರಿ ಮೃತ್ಯು Read More »

ಕಾರಿಗೆ ಕಂಟೈನರ್‌ ಡಿಕ್ಕಿ : ಕಾರು ಜಖಂ

ಸುಳ್ಯ: ಗಾಂಧಿನಗರ ಮಸೀದಿಯ ಮುಂಭಾಗ ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡಿರುವುದಾಗಿ ವರದಿಯಾಗಿದೆ. ಏ.16ರಂದು ಮುಂಜಾನೆ ಈ ಘಟನೆ ನಡೆದಿದೆ. ಗಾಂಧಿನಗರ ಪೆಟ್ರೋಲ್ ಬಂಕ್ ಮಾಲಕ ಮುಜೀಬ್‌ ರವರು ಬೆಳಗ್ಗೆ 5ರ ಸುಮಾರಿಗೆ ಮಸೀದಿಗೆ ಕಾರಿನಲ್ಲಿ ಬಂದಿದ್ದರು. ಕಾರನ್ನು ಮಸೀದಿಯ ಎದುರಿನ ರಸ್ತೆಯ ಇನ್ನೊಂದು ಬದಿಯಲ್ಲಿ ಗಾಂಧಿನಗರ ಕಡೆಗೆ ಮುಖ ಮಾಡಿ ನಿಲ್ಲಿಸಿದ್ದರು. ಸುಮಾರು 5.30ರ ವೇಳೆಗೆ ಪುತ್ತೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತಿದ್ದ ಕಂಟೈನರ್ ರಸ್ತೆ ಬದಿ ನಿಲ್ಲಿಸಿದ್ದ ಕಾರಿನ

ಕಾರಿಗೆ ಕಂಟೈನರ್‌ ಡಿಕ್ಕಿ : ಕಾರು ಜಖಂ Read More »

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಸುಳ್ಯ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ಇಂದು ಮುಂಜಾನೆ ಸುಳ್ಯದ ಅರಂತೋಡಿನಲ್ಲಿ ನಡೆದಿದೆ. ಬೆಂಗಳೂರಿನಿಂದ ತೊಡಿಕಾನಕ್ಕೆ ಬರುತ್ತಿದ್ದ ಕಾರು ಚಾಲಕ ನಿದ್ರೆಯ ಮಂಪರಿನಲ್ಲಿದ್ದರು ಎನ್ನಲಾಗಿದ್ದು, ನಿಯಂತ್ರಣ ತಪ್ಪಿ ರಸ್ತೆ ಬದಿ ಉರುಳಿ ಬಿದ್ದಿದೆ. ಚಾಲಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ Read More »

ಮೋದಿ ರೋಡ್ ಶೋ | ಕೆಲ ಹೊತ್ತಿನ ಮುಂಚೆ ಕಟ್ಟಡದಲ್ಲಿ ಅಗ್ನಿದುರಂತ

ಮಂಗಳೂರು : ಮಂಗಳೂರಿನಲ್ಲಿ  ಇಂದು ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಕಾರ್ಯಕ್ರಮದ ಬಳಿ ಕಟ್ಟಡವೊಂದರಲ್ಲಿ ಅಗ್ನಿ ದುರಂತವಾದ ಘಟನೆ  ನಡೆದಿದೆ. ಭಾನುವಾರ ಸಂಜೆ ರೋಡ್ ಶೋ ಆರಂಭವಾಗುವ ಕೆಲ‌ಹೊತ್ತಿನ ಮುಂಚೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿಯ ಕಟ್ಟಡವೊಂದರಲ್ಲಿ ಅಗ್ನಿ ದುರಂತವಾಗಿದೆ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸು ಕಾರ್ಯ ನಡೆಸಿದ್ದಾರೆ.

ಮೋದಿ ರೋಡ್ ಶೋ | ಕೆಲ ಹೊತ್ತಿನ ಮುಂಚೆ ಕಟ್ಟಡದಲ್ಲಿ ಅಗ್ನಿದುರಂತ Read More »

ಕ್ಯಾಂಟಿನ್ ಗೆ ನುಗ್ಗಿದ ಕಾರು : ಮೂವರಿಗೆ ಗಾಯ, ಓರ್ವ ಗಂಭೀರ

ಸುಳ್ಯ: ಕಾರೊಂದು ಕ್ಯಾಂಟಿನ್‌ಗೆ ನುಗ್ಗಿದ ಪರಿಣಾಮ ಮೂರು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಪೆರಾಜೆ ಪೀಚೆಯ ಲಿಖಿತ್, ಪೀಚೆ ಸುಮನ್ ಹಾಗೂ ಹೋಟೆಲ್ ಮಾಲಕ ನೌಫಲ್ ಗಾಯಗೊಂಡವರು. ಕ್ಯಾಂಟಿನ್‌ಗೆ ನುಗ್ಗಿ ಡಿಕ್ಕಿ ಹೊಡೆದ ಕಾರಣ ಚಹಾ ಕುಡಿಯುತ್ತಿದ್ದ ಇಬ್ಬರು ಹಾಗೂ ಕ್ಯಾಂಟೀನ್ ಮಾಲಕರು ಗಾಯಗೊಂಡಿದ್ದಾರೆ. ಅರಂತೋಡು ಕಡೆಗೆ ಹೋಗಿದ್ದ ಪೀಚೆ ಮನೆ ಲಿಖಿತ್ ಮತ್ತು ಸುಮನ್  ನೌಫಲ್ ರ ಹೋಟೆಲ್ ನಲ್ಲಿ ಚಾ ಕುಡಿಯುತ್ತಿದ್ದ ವೇಳೆ  ವೇಗವಾಗಿ ಬಂದ ರಿಡ್ಜ್ ಕಾರು ಕ್ಯಾಂಟಿನ್ ಗೆ ನುಗ್ಗಿ ಅನಾಹುತ

ಕ್ಯಾಂಟಿನ್ ಗೆ ನುಗ್ಗಿದ ಕಾರು : ಮೂವರಿಗೆ ಗಾಯ, ಓರ್ವ ಗಂಭೀರ Read More »

ಬೈಹುಲ್ಲು ತರುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ

ಬೆಳ್ತಂಗಡಿ:  ಮಿನಿ ಲಾರಿಯೊಂದು ಬೈಹುಲ್ಲು ಮಾರಾಟಕ್ಕೆ ಆಗಮಿಸುತ್ತಿದ್ದ ವೇಳೆ ಆಕಸ್ಮಿಕ ಬೆಂಕಿ ಬಿದ್ದ ಘಟನೆ  ಬೆಳ್ತಂಗಡಿ ತಾಲ್ಲೂಕಿನ ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಟ್ಟೆಮಾರು ಎಂಬಲ್ಲಿ ನಡೆದಿದೆ. ಸ್ಥಳೀಯರು ಸಾಹಸ ಪ್ರದರ್ಶಿಸಿ ಬೆಂಕಿಯನ್ನು ನಂದಿಸಿ ಲಾರಿಯನ್ನು ಉಳಿಸಿದ್ದಾರೆ. ಹಾಸನದ ಸಕಲೇಶಪುರದ ಬೈಹುಲ್ಲು ವ್ಯಾಪಾರಸ್ಥರೋರ್ವರು ಹೈನುಗಾರಿಕೆ ಮಾಡುವ ಕೃಷಿಕರ ಮನೆ ಮನೆಗೆ ಬೈಹುಲ್ಲನ್ನು ಹಾಕಲು ತನ್ನ ಮಿನಿ ಲಾರಿಯಲ್ಲಿ ಹುಲ್ಲನ್ನು ತರುವಾಗ  ಏಕಾಏಕಿ ಬೆಂಕಿ ಹತ್ತಿಕೊಂಡಿದೆ. ಈ ವೇಳೆ ಸ್ಥಳೀಯವರೊಬ್ಬರು ಬೊಬ್ಬೆ ಹಾಕಿ ಲಾರಿ ಚಾಲಕನಿಗೆ ಮಾಹಿತಿ ನೀಡಿದರು.

ಬೈಹುಲ್ಲು ತರುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ Read More »

ಬೈಕ್ – ಪಿಕಪ್‌ ಡಿಕ್ಕಿ : ಬೈಕ್ ಸವಾರನಿಗೆ‌ ಗಾಯ

ಬೆಳ್ಳಾರೆ:ಪೇಟೆಯಲ್ಲಿ ಬೈಕ್‌ ಹಾಗೂ ಪಿಕಪ್ ಡಿಕ್ಕಿ ಹೊಡೆದುಕೊಂಡು ಬೈಕ್ ಸವಾರನಿಗೆ ಗಂಭೀರ ಗಾಯವಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಬೈಕ್‌ ಸವಾರ ಪುಡ್ಕಜೆವರಾಗಿದ್ದು ಅವರಿಗೆ ತಲೆಗೆ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿರುವುದಾಗಿ ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಬೈಕ್ – ಪಿಕಪ್‌ ಡಿಕ್ಕಿ : ಬೈಕ್ ಸವಾರನಿಗೆ‌ ಗಾಯ Read More »

ರೈಲು ಡಿಕ್ಕಿ ಹೊಡೆದು ವ್ಯಕ್ತಿ ಮೃತ್ಯು

ಮಾಣಿ: ಯುವಕನೋರ್ವ ರೈಲು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಮಾಣಿಯಲ್ಲಿ ನಡೆದಿದೆ. ವೀರಕಂಭ ಮಜಿ ಶಾಲಾ ಬಳಿ ನಿವಾಸಿ ವಿಶ್ವನಾಥ (38) ಮೃತಪಟ್ಟವರು. ಬೆಂಗಳೂರು-ಮಂಗಳೂರು ರೈಲು ಡಿಕ್ಕಿ ಹೊಡೆದು ಮೃತಪಟ್ಟಿರಬೇಕೆಂದು ತಿಳಿದು ಬಂದಿದ್ದು, ಸ್ಥಳಕ್ಕೆ ರೈಲ್ವೇ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆಕಸ್ಮಿಕವೋ, ಆತ್ಮಹತ್ಯಯೋ ಎಂದು ತಿಳಿದು ಬರಬೇಕಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.              

ರೈಲು ಡಿಕ್ಕಿ ಹೊಡೆದು ವ್ಯಕ್ತಿ ಮೃತ್ಯು Read More »

error: Content is protected !!
Scroll to Top