ನಿಧನ

ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಗೋಪಾಲಕೃಷ್ಣ ಗೌಡ ಆರೇಲ್ತಡಿ ನಿಧನ

 ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ, ಮಾಜಿ ಉಪಾಧ್ಯಕ್ಷ ಗೋಪಾಲಕೃಷ್ಣ ಗೌಡ ಆರೇಲ್ತಡಿ ಇಂದು (ಗುರುವಾರ) ಸಂಜೆ ಆರೇಲ್ತಡಿಯ ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು.  ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಸವಣೂರು ಆರೇಲ್ತಡಿ ಒಕ್ಕೂಟದ ಪ್ರಸ್ತುತ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ, ಆರೇಲ್ತಡಿ ಇರ್ವೆರು ಉಳ್ಳಾಕುಲು ಕೆಡೆಂಜೋಡಿತ್ತಾಯ ಪರಿವಾರ ದೈವಗಳ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ, ಬ್ರಹ್ಮ ಕಲಶ ಸಮಿತಿಗಳಲ್ಲಿ ಸಕ್ರೀಯವಾಗಿ ದುಡಿದಿದ್ದರು. ಪ್ರಗತಿಪರ ಕೃಷಿಕರಾಗಿ, ಹೈನುಗಾರರಾಗಿ ಗುರುತಿಸಿಕೊಂಡಿದ್ದರು

ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಗೋಪಾಲಕೃಷ್ಣ ಗೌಡ ಆರೇಲ್ತಡಿ ನಿಧನ Read More »

ಹೃದಯಾಘಾತದಿಂದ ವಿದ್ಯಾರ್ಥಿನಿ ಮೃತ್ಯು

ಹಾಸನ: ಪದವಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಕುಸಿದುಬಿದ್ದು ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನ ಕೆ.ವಿ. (21) ಮೃತಪಟ್ಟವರು. ಕವನ ಹಾಸನ ನಗರದಲ್ಲಿ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಮುಗಿಸಿ ಸಂಜೆ ಮನೆಗೆ ಬಂದ ಕವನಗೆ ಧಿಡೀರ್ ಆಗಿ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಆಕೆ ಕುಸಿದು ಬಿದ್ದಿದ್ದಾಳೆ. ಪೋಷಕರು ತಕ್ಷಣ ಹಾಸನದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಅಷ್ಟರಲ್ಲಿ ಕವನ

ಹೃದಯಾಘಾತದಿಂದ ವಿದ್ಯಾರ್ಥಿನಿ ಮೃತ್ಯು Read More »

ಕಿರುತೆರೆ ನಟ ಶ್ರೀಧರ ನಾಯಕ್‌ ನಿಧನ

ಬೆಂಗಳೂರು: ಕನ್ನಡ ಕಿರುತೆರೆ ಮತ್ತು ಚಲನಚಿತ್ರ ನಟ ಶ್ರೀಧರ್ ನಾಯಕ್ (47) ನಿನ್ನೆ ರಾತ್ರಿ ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಧರ್ ನಾಯಕ್ ಅವರಿಗೆ ಇತ್ತೀಚೆಗೆ ಅನಾರೋಗ್ಯ ಉಲ್ಬಣಗೊಂಡಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರು ಎಳೆದಿದ್ದಾರೆ. ಬೆಂಗಳೂರಿನ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಅವರ ಮೃತದೇಹ ಇಡಲಾಗಿದೆ. ಗುರುತೇ ಸಿಗದಷ್ಟು ಬದಲಾಗಿ ಶ್ರೀಧರ್ ನಾಯಕ್ ಬೆಡ್ ಮೇಲೆ ಮಲಗಿದ್ದು ನೋಡಿ ಹಲವರಿಗೆ ಶಾಕ್ ಆಗಿತ್ತು. ಸಹಾಯ ಮಾಡುವಂತೆ ಅನೇಕರು ಕೋರಿಕೊಂಡಿದ್ದರು. ಶ್ರೀಧರ್ ಅವರಿಗೆ ಅನಾರೋಗ್ಯ ಉಂಟಾದ ವಿಚಾರದ ಬಗ್ಗೆ ಏಪ್ರಿಲ್​ನಲ್ಲಿ

ಕಿರುತೆರೆ ನಟ ಶ್ರೀಧರ ನಾಯಕ್‌ ನಿಧನ Read More »

ಪತ್ನಿಯ ಸೀಮಂತದಂದೇ ಕುಸಿದು ಬಿದ್ದು ಪತಿ ಮೃತ್ಯು

ವಿಟ್ಲ: ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕನ್ಯಾನದಲ್ಲಿ ನಡೆದಿದೆ. ಕನ್ಯಾನ ಮಿತ್ತನಡ್ಕ ನಿವಾಸಿ ಪಿಕಪ್ ಚಾಲಕ ಸತೀಶ್‍ (33) ಮೃತಪಟ್ಟವರು. ಪತ್ನಿಯ ಸೀಮಂತದ ದಿನ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ತಂದೆ, ತಾಯಿ, ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ

ಪತ್ನಿಯ ಸೀಮಂತದಂದೇ ಕುಸಿದು ಬಿದ್ದು ಪತಿ ಮೃತ್ಯು Read More »

ಒಳಮೊಗ್ರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಮಾಧವ ರೈ ಕುಂಬ್ರ ನಿಧನ

ಪುತ್ತೂರು: ಒಳಮೊಗ್ರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ, ಕುಂಬ್ರ ವರ್ತಕರ ಸಂಘದ ಮಾಜಿ ಅಧ್ಯಕ್ಷ ಎಸ್ ಮಾಧವ ರೈ ಕುಂಬ್ರ (61) ಹೃದಯಾಘಾತದಿಂದ ಗುರುವಾರ ರಾತ್ರಿ ನಿಧನರಾಗಿದ್ದಾರೆ. ಭಾರತೀಯ ಜನತಾ ಪಾರ್ಟಿಯ ಹಿರಿಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿ ಬೂತ್ ಅಧ್ಯಕ್ಷರಾಗಿ ಪ್ರಸ್ತುತ ಒಳಮೊಗ್ರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಕುಂಬ್ರ ವರ್ತಕರ ಸಂಘದ ಮಾಜಿ ಅಧ್ಯಕ್ಷರಾಗಿ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಆರಾಧನಾ ಸಮಿತಿ ಕುರಿಯ ಮಾಡಾವು ಏಳ್ನಾಡುಗುತ್ತು ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ಪಬ್ಲಿಕ್ ಸ್ಕೂಲ್

ಒಳಮೊಗ್ರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಮಾಧವ ರೈ ಕುಂಬ್ರ ನಿಧನ Read More »

 ಬಪ್ಪಳಿಗೆ ಬಿ. ಅಬ್ದುಲ್ ರಹಿಮಾನ್ ನಿಧನ

ಪುತ್ತೂರು : ಪುತ್ತೂರು ಕೇಂದ್ರ ಜುಮಾ ಮಸೀದಿ ಜಮಾಅತ್ ಗೆ ಒಳಪಟ್ಟ ಪುತ್ತೂರಿನ ಬಪ್ಪಳಿಗೆ ಮಸ್ಜಿದುನ್ನೂರು ಜುಮಾ ಮಸೀದಿಯ ಆಡಳಿತ ಸಮಿತಿ ಮಾಜಿ ಅಧ್ಯಕ್ಷರಾದ  ಬನ್ನೂರು ನಿವಾಸಿ ಅಬ್ದುಲ್‍ ರಹಿಮಾನ್‍ ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪುತ್ತೂರು ಪುರಸಭೆಯ ಮಾಜಿ ಕೌನ್ಸಿಲರ್ ಮತ್ತು ಪುತ್ತೂರು ಪುರಸಭೆಯ ಸ್ಥಾಯೀ ಸಮಿತಿಯ ಮಾಜಿ ಅಧ್ಯಕ್ಷರಾಗಿದ್ದರು. ಮೃತರಿಗೆ ಪುತ್ರ ಹಾಗೂ ಅಪಾರ ಬಂಧುಬಳಗದವರನ್ನು ಅಗಲಿದ್ದಾರೆ.

 ಬಪ್ಪಳಿಗೆ ಬಿ. ಅಬ್ದುಲ್ ರಹಿಮಾನ್ ನಿಧನ Read More »

ಆರ್ ಎಸ್‍ ಎಸ್‍ ಹಿರಿಯ ಕಾರ್ಯಕರ್ತ, ನಾಟಿ ವೈದ್ಯ, ಪ್ರತಿಷ್ಠಿತ ಕಳುವಾಜೆ ಮನೆತನದ ಜಿನ್ನಪ್ಪ ಗೌಡ ಕಳುವಾಜೆ ನಿಧನ

ಪುತ್ತೂರು: ಕಡಬ ತಾಲೂಕಿನ ಕೃಷಿ ಕುಟುಂಬದ ನಾಟಿವೈದ್ಯ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ಕಳುವಾಜೆ ಜಿನ್ನಪ್ಪ ಗೌಡರು ಇಂದು ಕಾಯ ತ್ಯಜಿಸಿದರು. ಎರಡು ದಿನಗಳ ಹಿಂದೆ ಮೆದುಳಿನ ವೈಫಲ್ಯ ಅವರನ್ನು ಬಾಧಿಸಿತ್ತು. ಕಳುವಾಜೆ ಮನೆತನದ ಪ್ರಸಿದ್ಧ ನಾಟಿ ವೈದ್ಯರಾಗಿದ್ದ ದಿ. ಸೋಮಪ್ಪ – ಬಾಲಕ್ಕ ದಂಪತಿಗಳ ಹಿರಿಯ ಮಗನಾಗಿ 1943ರ ಜನವರಿ 20ರಂದು ಜನಿಸಿದ ಕಳುವಾಜೆ ಜಿನ್ನಪ್ಪ ಗೌಡರಿಗೆ 82 ವರ್ಷ ವಯಸ್ಸಾಗಿತ್ತು. ಪತ್ನಿ ಶ್ರೀಮತಿ ಜಾನಕಿ ಬಂಡಾಜೆಯವರೊಂದಿಗಿನ ದಾಂಪತ್ಯದಲ್ಲಿ ಯಮುನಾ, ಜಯಂತಿ, ಭಾಸ್ಕರ

ಆರ್ ಎಸ್‍ ಎಸ್‍ ಹಿರಿಯ ಕಾರ್ಯಕರ್ತ, ನಾಟಿ ವೈದ್ಯ, ಪ್ರತಿಷ್ಠಿತ ಕಳುವಾಜೆ ಮನೆತನದ ಜಿನ್ನಪ್ಪ ಗೌಡ ಕಳುವಾಜೆ ನಿಧನ Read More »

ಅಮರ್ ಲೈಟಿಂಗ್ಸ್ ಮಾಲಕ ರವೀಂದ್ರ ನಿಧನ

ಪುತ್ತೂರು: ಅಮರ್ ಲೈಟಿಂಗ್ಸ್ ನ ಮಾಲಕ, ನೆಲ್ಲಿಕಟ್ಟೆ ನಿವಾಸಿ ರವೀಂದ್ರ ಅನಾರೋಗ್ಯದಿಂದ ಸೋಮವಾರ ನಿಧನರಾದರು. ನೆಲ್ಲಿಕಟ್ಟೆಯಲ್ಲಿ ಅಮರ್ ಲೈಟಿಂಗ್ಸ್ ಸಂಸ್ಥೆಯನ್ನು ಹಲವಾರು ವರ್ಷಗಳಿಂದ ನಡೆಸಿಕೊಂಡು ಬಂದಿರುವ ಅವರು, ನೆಲ್ಲಿಕಟ್ಟೆ  ಮಿತ್ರ ಮಂಡಲದ  ಹಿರಿಯ ಸದಸ್ಯರಾಗಿದ್ದರು. ಮೃತರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.

ಅಮರ್ ಲೈಟಿಂಗ್ಸ್ ಮಾಲಕ ರವೀಂದ್ರ ನಿಧನ Read More »

ರೈಲಿನಲ್ಲಿ ಹೃದಯಘಾತವಾಗಿ ವ್ಯಕ್ತಿ ಮೃತ್ಯು

ಮಂಗಳೂರು : ರೈಲಿನಲ್ಲಿ ಕುಳಿತಿದ್ದ ವ್ಯಕ್ತಿಯೋರ್ವ ಹೃದಯಘಾತವಾಗಿ ಸಾವನ್ನಪ್ಪಿದ ಘಟನೆ ಮಂಗಳೂರಿನ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಮೇ.17ರ ಮಧ್ಯಾಹ್ನ 3:30ರ ಸುಮಾರಿಗೆ ಮಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‍ ನ ಜನರಲ್ ಕೋಚ್ ನಲ್ಲಿ ಕುಳಿತಿದ್ದ ಸುಮಾರು 45 ವರ್ಷ ವಯಸ್ಸಿನ ವ್ಯಕ್ತಿಯೋರ್ವರಿಗೆ ಹೃದಯಾಘಾತವಾಗಿದೆ. ತಕ್ಷಣ  ಆರ್‍ಪಿಎಫ್‍ ಇನ್ಸ್‍ಪೆಕ್ಟರ್‍ ಮನೋಜ್‍ ಕುಮಾರ್‍ ಯಾದವ್‍ ಮತ್ತು ಸಿಬ್ಬಂದಿಗಳು ವ್ಯಕ್ತಿಗೆ ಸಿಪಿ ಆರ್‍ ಕೊಡಿಸಿ ಸರ್ಕಾರಿ ವೆನ್ಲಾಕ್‍ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆಗೆ  ಸ್ಪಂದಿಸದೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ರೈಲಿನಲ್ಲಿ ಹೃದಯಘಾತವಾಗಿ ವ್ಯಕ್ತಿ ಮೃತ್ಯು Read More »

ನಿದ್ದೆ ಮಾತ್ರೆ ಸೇವಿಸಿ ಚಿಂತಾಜನಕ ಸ್ಥಿತಿಯಲ್ಲಿದ್ದ ಕಲಾ ಶಿಕ್ಷಕ ಸಾವು

ತಾಯಿಯ ಜೊತೆ ನಿದ್ದೆ ಮಾತ್ರೆ ಸೇವಿಸಿದ್ದ ರಾಜ್ಯಮಟ್ಟದ ಕಲಾವಿದ ಬೆಳ್ತಂಗಡಿ : ತಾಯಿಯ ಜೊತೆಗೆ ನಿದ್ದೆ ಮಾತ್ರೆ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಬೆಳ್ತಂಗಡಿಯ ಮುಂಡಾಜೆ ಗ್ರಾಮದ ಕೂಳೂರು ನಿವಾಸಿ, ಚಿತ್ರ ಕಲಾ ಶಿಕ್ಷಕ, ರಾಜ್ಯಮಟ್ಟದ ಕಲಾವಿದ ಜಯರಾಮ್ ಕೆ (58) ಶುಕ್ರವಾರ ರಾತ್ರಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಕೊನೆಯುಸಿರೆಳೆದಿದ್ದಾರೆ. ಆರ್ಥಿಕ ಸಮಸ್ಯೆ ಮತ್ತು ಅನಾರೋಗ್ಯದ ಕಾರಣದಿಂದ ಮೇ 10ರಂದು ಹಿಂದೆ ಜೀವನದಲ್ಲಿ ಜಿಗುಪ್ಸೆ ಹೊಂದಿ ಪತ್ರ ಬರೆದಿಟ್ಟು ತಾಯಿಯ ಒಡಗೂಡಿ ಅಪರಿಮಿತ

ನಿದ್ದೆ ಮಾತ್ರೆ ಸೇವಿಸಿ ಚಿಂತಾಜನಕ ಸ್ಥಿತಿಯಲ್ಲಿದ್ದ ಕಲಾ ಶಿಕ್ಷಕ ಸಾವು Read More »

error: Content is protected !!
Scroll to Top