ನಿಧನ

ಪ್ರವಾಸಕ್ಕೆ ಗೆಳೆಯರ ಜೊತೆಗೆ ಮಲ್ಪೆಗೆ ಬಂದ ವ್ಯಕ್ತಿ ಸಾವು

ಉಡುಪಿ: ಪ್ರವಾಸಕ್ಕೆಂದು ಮಲ್ಪೆಗೆ ಬಂದಿದ್ದ ವ್ಯಕ್ತಿಯೊಬ್ಬರು ಹೊಟೇಲ್ ರೂಮಿನಲ್ಲೇ ‌ಮೃತಪಟ್ಟ ಘಟನೆ ನಡೆದಿದೆ. ಬೆಂಗಳೂರಿನ ಅನೇಕಲ್ ‌ನಿವಾಸಿ ಧನಂಜಯ್ ಕೆ. ಎನ್. (37) ಎನ್ನುವವರೇ ಮೃತ ದುರ್ದೈವಿ. ಇವರು ಸುಮಾರು 4 ವರ್ಷಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇವರು ಎ. 19 ರಂದು ತಮ್ಮ ಗೆಳೆಯರ ಜೊತೆಗೆ ಮಲ್ಪೆಗೆ ‌ಪ್ರವಾಸಕ್ಕೆ ಬಂದಿದ್ದಾರೆ. ಎ. 20 ರಂದು ತೀವ್ರ ಅನಾರೋಗ್ಯಕ್ಕೆ ತುತ್ತಾಗಿ ಕೊಠಡಿಯಲ್ಲೇ ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮಲ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರವಾಸಕ್ಕೆ ಗೆಳೆಯರ ಜೊತೆಗೆ ಮಲ್ಪೆಗೆ ಬಂದ ವ್ಯಕ್ತಿ ಸಾವು Read More »

ಮಾವ – ಅಳಿಯ ಕೆರೆಯಲ್ಲಿ ಮುಳುಗಿ ಸಾವು

ಹಾಸನ: ಜಿಲ್ಲೆಯ ಅರಸೀಕೆರೆಯ ಎನ್ ಹೊಸಳ್ಳಿ ಗ್ರಾಮದಲ್ಲಿ ಮಾವ ಮತ್ತು ಅಳಿಯ ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ‌ಮಾವ ಪ್ರಭಾಕರ್ (45) ಮತ್ತು ಪ್ರತೀಕ್ (12) ಎಂದು ಗುರುತಿಸಲಾಗಿದೆ. ಸೋಮನಹಳ್ಳಿಯ ಪ್ರತೀಕ್ ಬೇಸಿಗೆ ರಜೆಯ ಪ್ರಯುಕ್ತ ಮಾವ ಪ್ರಭಾಕರ್ ಅವರ ಮನೆಗೆ ಬಂದಿದ್ದ. ಮಾವ ಮತ್ತು ಅಳಿಯ ಕೆರೆಯ ಏರಿ ಮೇಲೆ ನಡೆದುಕೊಂಡು ಹೋಗುತ್ತಿದ್ದಾಗ ಅಳಿಯ ಪ್ರತೀಕ್ ಕಾಲು ಜಾರಿ ಕೆರೆಗೆ ಬಿದ್ದಿದ್ದಾನೆ. ಆತನ ರಕ್ಷಣೆಗೆ ಪ್ರಭಾಕರ್ ಸಹ ನೀರಿಗೆ ಇಳಿದಿದ್ದು, ಈಜು ಬಾರದ

ಮಾವ – ಅಳಿಯ ಕೆರೆಯಲ್ಲಿ ಮುಳುಗಿ ಸಾವು Read More »

ಕಾಡುಕೋಣ ದಾಳಿಗೆ ಯುವಕ ಸಾವು

ಕಳಸ: ಕಾಡುಕೋಣ ದಾಳಿ ನಡೆಸಿದ ಪರಿಣಾಮ ಯುವಕನೊಬ್ಬ ಮೃತಪಟ್ಟ ಘಟನೆ ಕಳಸದ ‌ಮೈದಾಡಿ ಎಸ್ಟೇಟ್‌ನಲ್ಲಿ ನಡೆದಿದೆ. ಚೇತನ್ (30) ಎಂಬ ಯುವಕನೇ ಮೃತ ದುರ್ದೈವಿ. ದಾಳಿಯಲ್ಲಿ ಕಾಡುಕೋಣದ ಕೊಂಬು ಚೇತನ್ ಅವರ ಎದೆಗೆ ಗಂಭೀರ ಪ್ರಮಾಣದಲ್ಲಿ ತಾಗಿದೆ. ಅವರನ್ನು ಕಳಸದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಯಿತಾದರೂ, ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿದೆ. ಮೃತ ಯುವಕನ ಕುಟುಂಬಸ್ಥರ ಆಕ್ರಂದನ ಮನಕಲಕುವಂತಿತ್ತು. ಕಳಸ ಭಾಗದಲ್ಲಿ ಕಾಡುಕೋಣಗಳ ಹಾವಳಿ ಜಾಸ್ತಿಯಾಗಿದ್ದು, ಇದು ಸಾರ್ವಜನಿಕರ ಆತಂಕ ಹೆಚ್ಚಿಸಿದೆ.

ಕಾಡುಕೋಣ ದಾಳಿಗೆ ಯುವಕ ಸಾವು Read More »

ಕುರಿ ತೊಳೆಯಲು ಹೋದ ಸಹೋದರರು ಕೆರೆಗೆ ಬಿದ್ದು ಮೃತ್ಯು

ಹಾಸನ: ಇಬ್ಬರು ಸಹೋದರರು ಕುರಿಯನ್ನು ತೊಳೆಯುವುದಕ್ಕಾಗಿ ಕೆರೆಗೆ ಇಳಿದಿದ್ದು, ಮುಳುಗಿ ಸಾವನ್ನಪ್ಪಿದ ಘಟನೆ ಅರಸೀಕೆರೆಯ ಜಾವಗಲ್‌ನಲ್ಲಿ ನಡೆದಿದೆ. ಮೃತ ಬಾಲಕರನ್ನು ಯಾಸಿನ್(13) ಮತ್ತು ಇಮ್ರಾನ್(15) ಎಂದು ಗುರುತಿಸಲಾಗಿದೆ. ಎಂಟು ಮತ್ತು ಹತ್ತನೇ ತರಗತಿಯಲ್ಲಿ ಈ ಇಬ್ಬರು ಬಾಲಕರು ಕಲಿಯುತ್ತಿದ್ದರು. ಬೇಸಿಗೆ ರಜೆಯಾದ್ದರಿಂದ ಇವರಿಬ್ಬರೂ ತಮ್ಮ ಕುರಿಗಳನ್ನು ತೊಳೆಯಲು ಜಾವಗಲ್ ದೊಡ್ಡಕೆರೆಗೆ ತೆರಳಿದ್ದರು. ಆಕಸ್ಮಿಕವಾಗಿ ಕಾಲು ಜಾರಿ ಕೆರೆಯ ಆಳವಾದ ಭಾಗಕ್ಕೆ ಬಿದ್ದು ಮೃತ ಪಟ್ಟಿದ್ದಾರೆ. ಒಬ್ಬರನ್ನೊಬ್ಬರು ರಕ್ಷಿಸುವ ಪ್ರಯತ್ನ ಮಾಡಿದ ಅವರು ಕೊನೆಗೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವುದಾಗಿದೆ.

ಕುರಿ ತೊಳೆಯಲು ಹೋದ ಸಹೋದರರು ಕೆರೆಗೆ ಬಿದ್ದು ಮೃತ್ಯು Read More »

ಮಧುರ ಕಂಠದ ಗಾಯಕಿ ಆಶಾ ಭೋಸ್ಲೆ ‌ನಿಧನ: ಪ್ರಧಾನಿ ಮೋದಿ ಸಂತಾಪ

ಮುಂಬೈ: ನಗರದ ಖಾಸಗಿ ಆಸ್ಪತ್ರೆಯಲ್ಲಿ ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರು ಕೊನೆಯುಸಿರೆಳೆದಿದ್ದಾರೆ. ಕಳೆದ ಶನಿವಾರದಂದು ಅವರಿಗೆ ಹೃದಯಾಘಾತವಾಗಿತ್ತು. ಅವರನ್ನು ತಕ್ಷಣವೇ ಮುಂಬೈನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತ ಪಟ್ಟಿದ್ದಾರೆ. ಹೆಸರಾಂತ ಗಾಯಕಿ ಆಶಾ ಭೋಸ್ಲೆ ‌ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಬೋಸ್ಲೆ ಅವರ ದಶಕಗಳ ಕಾಲದ ಸಂಗೀತ ಪ್ರಯಾಣವು ದೇಶದ ಸಾಂಸ್ಕೃತಿಕ ಪರಂಪರೆಯನ್ನು ಶ್ರೀಮಂತಗೊಳಿಸಿದೆ. ಭಾರತ ಕಂಡ ಅತ್ಯಂತ ಪ್ರತಿಮಾರೂಪದ ಮತ್ತು ಬಹುಮುಖ ಪ್ರತಿಭೆಯ

ಮಧುರ ಕಂಠದ ಗಾಯಕಿ ಆಶಾ ಭೋಸ್ಲೆ ‌ನಿಧನ: ಪ್ರಧಾನಿ ಮೋದಿ ಸಂತಾಪ Read More »

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಭಾರತೀಯ ಸಿನಿಮಾರಂಗದ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಬೋಸ್ಲೆ ಯವರಿಗೆ ನಿನ್ನೆ ತೀವ್ರ ಉಸಿರಾಟದ ಸಮಸ್ಯೆ ಮತ್ತು ಎದೆ ನೋವಿನಿಂದ ಮುಂಬೈನ ಬ್ರಿಜ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಚಿಕಿತ್ಸೆಗೆ ಸ್ಪಂದಿಸದೆ ಇಂದು ಮದ್ಯಾಹ್ನ ನಿಧನರಾಗಿದ್ದಾರೆ. ಕಳೆದ ಕೆಲ ತಿಂಗಳುಗಳಿಂದ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಆಶಾ ಬೋಸ್ಲೆ ಅವರು ಹಲವಾರು ಅಂಗಾಂಗ ವೈಫಲ್ಯದಿಂದ ನಿಧನ ಹೊಂದಿದ್ದಾರೆ ಎನ್ನಲಾಗಿದೆ. ಆಶಾ ಭೋಸ್ಲೆ ಅವರು ಹಿಂದಿ ಕನ್ನಡ ಮರಾಠಿ ತಮಿಳು ತೆಲುಗು

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ Read More »

ಚಾರಣಕ್ಕೆ ಬಂದು ಕಾಣೆಯಾಗಿದ್ದ ಕೇರಳದ ಶ್ರೀನಂದಾ ಶವ ಪ್ರಪಾತದಲ್ಲಿ ‌ಪತ್ತೆ

ಚಿಕ್ಕಮಗಳೂರು: ಕಳೆದ ಮೂರು ದಿನಗಳಿಂದ ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ನಾಪತ್ತೆಯಾಗಿದ್ದ ಕೇರಳದ 14 ವರ್ಷದ ಬಾಲಕಿ ಶ್ರೀನಂದಾ ಮೃತದೇಹ 2000 ಅಡಿ ಆಳದ ಪ್ರಪಾತದಲ್ಲಿ ಪತ್ತೆಯಾಗಿದೆ. ಶ್ರೀನಂದಾ ಎಪ್ರಿಲ್ 7 ರಂದು ಕಾಣೆಯಾಗಿದ್ದರು. ಎಸ್.ಡಿ.ಆರ್.ಎಫ್. ಮತ್ತು ಪೊಲೀಸ್ ತಂಡಗಳ ತೀವ್ರ ಶೋಧ ಕಾರ್ಯದ ನಂತರ ಇಂದು ಮೃತದೇಹ ಪತ್ತೆಯಾಗಿದೆ.ಸುಮಾರು 40 ಜನ ಪ್ರವಾಸಿಗರ ತಂಡದಲ್ಲಿ ಶ್ರೀನಂದಾ ‌ಸಹ ಇದ್ದರು. ಮಾಣಿಕ್ಯಧಾರಾ ಸಮೀಪ ಹಠತ್ತಾಗಿ ಶ್ರೀನಂದಾ ಕಾಣೆಯಾಗಿದ್ದರು. ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಇಂದು ಅವರ

ಚಾರಣಕ್ಕೆ ಬಂದು ಕಾಣೆಯಾಗಿದ್ದ ಕೇರಳದ ಶ್ರೀನಂದಾ ಶವ ಪ್ರಪಾತದಲ್ಲಿ ‌ಪತ್ತೆ Read More »

ಜಾತ್ರಾ ಸಂದರ್ಭ ರಥದ ಚಕ್ರದಡಿ ‌ಸಿಲುಕಿ ವ್ಯಕ್ತಿ ಮೃತ್ಯು

ಕಲಬುರ್ಗಿ: ಹಾಗರಗುಂಡಗಿ ಗ್ರಾಮದ ಶ್ರೀ ಶರಣಬಸವೇಶ್ವರ ದೇವರ ಜಾತ್ರೆಯ ರಥೋತ್ಸವದ ವೇಳೆ ರಥದ ಚಕ್ರದಡಿಗೆ ಸಿಲುಕಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ. ಮೃತನನ್ನು ವಿನೋದ್ ರೆಡ್ಡಿ ಎಂದು ಗುರುತಿಸಲಾಗಿದೆ. ರಥದ ಹಗ್ಗವನ್ನು ಎಳೆಯುತ್ತಿದ್ದ ‌ವೇಳೆ ಅಯತಪ್ಪಿ ಬಿದ್ದು ಈ ದುರ್ಘಟನೆ ಸಂಭವಿಸಿದೆ. ರಥದ ಚಕ್ರ ವಿನೋದ್ ಅವರ ತೊಡೆಯ ಮೇಲೆ ಚಲಿಸಿದ್ದು, ಪರಿಣಾಮ ಅವರಿಗೆ ತೀವ್ರ ರಕ್ತಸ್ರಾವ ಉಂಟಾಗಿದೆ. ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆಗೆ ಸಂಬಂಧಿಸಿದ ಹಾಗೆ ಫರಹತ್ತಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾತ್ರಾ ಸಂದರ್ಭ ರಥದ ಚಕ್ರದಡಿ ‌ಸಿಲುಕಿ ವ್ಯಕ್ತಿ ಮೃತ್ಯು Read More »

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ ಹಿರಿಯ ಸದಸ್ಯ ಕುಶಾಲಪ್ಪ ಗೌಡ ನಿಧನ

ಉಪ್ಪಿನಂಗಡಿ : ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ ಹಿರಿಯ ಸದಸ್ಯರಾಗಿ ಅರ್ಥಧಾರಿಯಾಗಿ ಭಾಗವಹಿಸುತ್ತಿದ್ದ ಶ್ರೀ ಕುಶಾಲಪ್ಪ ಗೌಡ (78) ಇವರು ಅಲ್ಪಕಾಲದ ಅಸೌಖ್ಯದಿಂದ ದಿನಾಂಕ 31.03.2026ರಂದು ಉಪ್ಪಿನಂಗಡಿ ಕಟ್ಟೆಚಾರು  ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಇವರು  ಉಪ್ಪಿನಂಗಡಿಯ ಶ್ರೀ ಗಣೇಶ ಸ್ಟೋರ್ ಜವಳಿ ಮಳಿಗೆಯಲ್ಲಿ ದೀರ್ಘಕಾಲ ಕಾರ್ಯನಿರ್ವಹಿಸುತ್ತಿದ್ದು, ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸಂಘದ ಹಿರಿಯ ಸದಸ್ಯರಾಗಿದ್ದ ಇವರು ಸುಮಾರು ಮೂರು ದಶಕಗಳಿಗಿಂತಲೂ ಹೆಚ್ಚು ಕಾಲ ಸಂಘದೊಂದಿಗೆ ಸಕ್ರಿಯರಾಗಿದ್ದರು. ರಾವಣ, ಇಂದ್ರಜಿತು, ವಾಲಿ,ಸುಗ್ರೀವ,ಮಾಗಧ ,ಕೌರವ ಮುಂತಾದ ಪಾತ್ರಗಳನ್ನು ನಿರ್ವಹಿಸುತ್ತಿದ್ದರಲ್ಲದೆ

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ ಹಿರಿಯ ಸದಸ್ಯ ಕುಶಾಲಪ್ಪ ಗೌಡ ನಿಧನ Read More »

ಅಸೌಖ್ಯದಿಂದ ಮಹಿಳೆ ಸಾವು

ಪುತ್ತೂರು: ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ‌ಮೃತಪಟ್ಟ ಘಟನೆ ನಿನ್ನೆ ನಡೆದಿದೆ. ಮೃತರನ್ನು ದೇವಚಳ್ಳ ಗ್ರಾಮದ ಕಲ್ಲುಪಣೆ ಕೃಷ್ಣಪ್ಪ ನಾಯ್ಕ ಎಂಬವರ ಪುತ್ರಿ ಉಷಾಲತಾ(31) ಎಂದು ಗುರುತಿಸಲಾಗಿದೆ. ಉಷಾ ಅವರು ಮಾವಿನಕಟ್ಟೆಯ ಅರ್ಣ ಗ್ಯಾಸ್‌ನಲ್ಲಿ ಉದ್ಯೋಗಿಯಾಗಿದ್ದರು. ಕಳೆದ ಎರಡು ವರ್ಷದ ಹಿಂದಷ್ಟೇ ಅಲೆಟ್ಟಿಯ ಸೂರಜ್ ಎಂಬವರ ಜೊತೆ ಇವರ ವಿವಾಹ ನಡೆದಿತ್ತು. ಮೃತರು ಪತಿ, ತಂದೆ, ತಾಯಿ, ಸಹೋದರಿಯರನ್ನು ಅಗಲಿದ್ದಾರೆ.

ಅಸೌಖ್ಯದಿಂದ ಮಹಿಳೆ ಸಾವು Read More »

error: Content is protected !!
Scroll to Top