ನಿಧನ

ಹೃದಯಾಘಾತದಿಂದ ಪುತ್ತೂರಿನ ಯುವಕ ಬೆಂಗಳೂರಿನಲ್ಲಿ ನಿಧನ

ಪುತ್ತೂರು: ಪಡ್ನೂರು ಪಂಜಿಗುಡ್ಡೆಯ ನಿವಾಸಿ ಯುವಕನೊಬ್ಬ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಕೆನರಾ ಬ್ಯಾಂಕಿನ ಪುತ್ತೂರು ಶಾಖೆಯ ಸಿಬ್ಬಂದಿ ತನಿಯಪ್ಪ ನಾಯ್ಕ್ ಎಂಬವರ ಪುತ್ರ ಗುರುರಾಜ್ (22) ಎಂಬವರೇ ‌ಮೃತ ದುರ್ದೈವಿ. ಗುರುರಾಜ್ ಬೆಂಗಳೂರಿನ ಕಿಸ್ಕೋ ಕಂಪನಿಯಲ್ಲಿ ಎ.ಸಿ. ಮೆಕ್ಯಾನಿಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಪಿ.ಜಿ. ಯಲ್ಲಿ ವಾಸವಿದ್ದರು. ರಾತ್ರಿ ಪಾಳಿಯಲ್ಲಿ ‌ಕೆಲಸ‌ ಮಾಡುತ್ತಿದ್ದ ಅವರು ಕೆಲಸಕ್ಕೆ ಹೊರಡುವ ಮೊದಲು ಬಾತ್ ರೂಂ‌ಗೆ ಹೋಗಿದ್ದಾರೆ. ಅದೇ ಸಂದರ್ಭದಲ್ಲಿ ಅವರಿಗೆ ಹೃದಯಾಘಾತವಾಗಿದೆ. ಆದರೆ ರೂಮ್‌ನಲ್ಲಿ ಯಾರೂ ಇರದೇ […]

ಹೃದಯಾಘಾತದಿಂದ ಪುತ್ತೂರಿನ ಯುವಕ ಬೆಂಗಳೂರಿನಲ್ಲಿ ನಿಧನ Read More »

ಪತ್ನಿ ಜೊತೆ ಮೊಬೈಲ್ ಸಂಪರ್ಕದಲ್ಲಿದ್ದ ಸ್ನೇಹಿತ: ಗ್ಯಾರೇಜ್ ಮಾಲೀಕ ಆತ್ಮಹತ್ಯೆ

ಕಡಬ: ಪತ್ನಿ ತನ್ನ ಗೆಳೆಯನ ಜೊತೆ ಮೊಬೈಲ್ ಸಂಪರ್ಕದಲ್ಲಿ ಇದ್ದಾಳೆಂದು ಆತ್ಮಹತ್ಯೆಗೆ ಪ್ರಯತ್ನ ನಡೆಸಿದ್ದ ಗ್ಯಾರೇಜ್ ಮಾಲೀಕ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ. ಕುಟ್ರುಪ್ಪಾಡಿ ನಿವಾಸಿ ರಾಕೇಶ್(36) ಎಂಬವರೇ ಮೃತ ದುರ್ದೈವಿ. ರಾಕೇಶ್ ಅವರು ಕಳಾರದಲ್ಲಿ ದ್ವಿಚಕ್ರ ವಾಹನಗಳ ಗ್ಯಾರೇಜ್ ಹೊಂದಿದ್ದರು. ರಾಕೇಶ್ ಅವರ ಪತ್ನಿಯ ಜೊತೆಗೆ ಅವರ ಸ್ನೇಹಿತ ಮೊಬೈಲ್ ಮೂಲಕ ನಿರಂತರ ಸಂಪರ್ಕದಲ್ಲಿದ್ದ ವಿಷಯ ಅವರ ಗಮನಕ್ಕೆ ಬಂದಿತ್ತು. ಈ ವಿಚಾರವಾಗಿ ತೀವ್ರವಾಗಿ ನೊಂದಿದ್ದ ಅವರು ಅಮಲು ಪದಾರ್ಥದ ಜೊತೆಗೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ

ಪತ್ನಿ ಜೊತೆ ಮೊಬೈಲ್ ಸಂಪರ್ಕದಲ್ಲಿದ್ದ ಸ್ನೇಹಿತ: ಗ್ಯಾರೇಜ್ ಮಾಲೀಕ ಆತ್ಮಹತ್ಯೆ Read More »

ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಸುಮಾರು 65 ವರ್ಷದ ಮಹಿಳೆಯ ಮೃತದೇಹ ಇದಾಗಿದೆ. ಇಂದು ಬೆಳಗ್ಗೆ ನದಿಗೆ ಹಾರಿರಬಹುದು ಎಂದು ಅಂದಾಜಿಸಲಾಗಿದೆ. ಮೃತದೇಹವನ್ನು ಸ್ಥಳೀಯರು ಮೇಲಕ್ಕೆತ್ತಿದ್ದು, ಅದನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿರುವುದಾಗಿ ಬಂಟ್ವಾಳ ಠಾಣಾ ಪೊಲೀಸರು ಮಾಹಿತಿ ನೀಡಿದ್ದಾರೆ. ಸಂಬಂಧಪಟ್ಟವರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.

ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ Read More »

ಶೇಂದಿ ಇಳಿಸಲು ಹೋದ ವ್ಯಕ್ತಿ ಮರದಲ್ಲೇ ಸಾವು

ಕಡಬ: ಶೇಂದಿ ಇಳಿಸಲು ತೆಂಗಿನ ಮರವೇರಿದ್ದ ವ್ಯಕ್ತಿಯೊಬ್ಬರು ಮರದ ಮೇಲೆಯೇ ಮೃತಪಟ್ಟ ಘಟನೆ ಕೊಲ್ಲಮೊಗ್ರು ಗ್ರಾಮದಲ್ಲಿ ನಡೆದಿದೆ. ಮೃತದೇಹವನ್ನು ‌ಸ್ಥಳೀಯರ ಸಹಕಾರದಿಂದ ಮರದಿಂದ ಕೆಳಕ್ಕೆ ಇಳಿಸಲಾಯಿತು ಎಂದು ತಿಳಿದು ಬಂದಿದೆ.

ಶೇಂದಿ ಇಳಿಸಲು ಹೋದ ವ್ಯಕ್ತಿ ಮರದಲ್ಲೇ ಸಾವು Read More »

ವಿದ್ಯಾರ್ಥಿನಿಯನ್ನು ಭೀಕರವಾಗಿ ಕೊಂದು ಆರೋಪಿ ಪರಾರಿ

ಬೆಂಗಳೂರು: ಬಿಬಿಎಂ ‌ವಿದ್ಯಾರ್ಥಿನಿಯನ್ನು ಆಕೆಯ ಸ್ನೇಹಿತನೇ ಭೀಕರವಾಗಿ ಹತ್ಯೆ ಮಾಡಿದ ಘಟನೆ ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯ ತಮ್ಮೇನಹಳ್ಳಿಯಲ್ಲಿ ನಡೆದಿದೆ. ಕೊಲೆಯಾದ ವಿದ್ಯಾರ್ಥಿನಿಯನ್ನು ಆಂಧ್ರ ಮೂಲದ ದೇವಿಶ್ರೀ (21) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಪ್ರೇಮ್‌ವರ್ಧನ್ ಎಂದು ಗುರುತಿಸಲಾಗಿದೆ. ದೇವಿಶ್ರೀಯು ಪ್ರೇಮ್‌ಶೇಖರ್ ಜೊತೆಗೆ ಮತ್ತೊಬ್ಬ ಯುವತಿಯ ರೂಂ‌ಗೆ ತೆರಳಿದ್ದಳು. ಆದರೆ ರಾತ್ರಿಯಾದರೂ ಆಕೆ ಅಲ್ಲಿಂದ ಬಂದಿಲ್ಲ. ಇದರಿಂದ ಆತಂಕಗೊಂಡ ಕುಟುಂಬ ವರ್ಗ ಮತ್ತು ಆಕೆಯ ರೂಂಮೇಟ್ಸ್ ಮಾಹಿತಿ ನೀಡಿದ ನಂತರ ಪ್ರಕರಣ ದಾಖಲು ಮಾಡಲಾಗಿದೆ. ಈ ಬಗ್ಗೆ ಪೊಲೀಸರು ಪರಿಶೀಲನೆ

ವಿದ್ಯಾರ್ಥಿನಿಯನ್ನು ಭೀಕರವಾಗಿ ಕೊಂದು ಆರೋಪಿ ಪರಾರಿ Read More »

ಬಾಲಿವುಡ್ ನಟ ಧರ್ಮೇಂದ್ರ ಇನ್ನಿಲ್ಲ

ಮುಂಬೈ: ಬಾಲಿವುಡ್‌ನ ಹಿರಿಯ ನಟ ಎವರ್‌ಗ್ರೀನ್ ಸ್ಟಾರ್, ಆ್ಯಕ್ಷನ್ ಕಿಂಗ್ ಎಂದೇ ಖ್ಯಾತಿ ಪಡೆದಿದ್ದ ಧರ್ಮೇಂದ್ರ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 89 ವರ್ಷವಾಗಿತ್ತು. ಕೆಲ ಸಮಯದಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿಂದ ಕೊಂಚ‌ ಚೇತರಿಸಿಕೊಂಡು ಮನೆಗೆ ತೆರಳಿದ್ದರು. ಸುಮಾರು 300 ಕ್ಕೂ ಅಧಿಕ ಚಿತ್ರಗಳಲ್ಲಿ ಅವರು ಅಭಿನಯಿಸಿ ಪ್ರೇಕ್ಷಕರನ್ನು ರಂಜಿಸಿದ್ದರು. ಅವರ ನಿಧನಕ್ಕೆ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಬಾಲಿವುಡ್ ನಟ ಧರ್ಮೇಂದ್ರ ಇನ್ನಿಲ್ಲ Read More »

ಅಪರಿಚಿತ ವಾಹನ ಢಿಕ್ಕಿ: ವ್ಯಕ್ತಿ ಸ್ಥಳದಲ್ಲೇ ಸಾವು

ಮಡಿಕೇರಿ: ಭಾನುವಾರ ರಾತ್ರಿ ಗೋಣಿಕೊಪ್ಪದಲ್ಲಿ ನಡೆದ ಭೀಕರ ಅಪಘಾತ ಒಂದರಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಕೈಕೇರಿ ಸಮೀಪ ಈ ದುರಂತ ನಡೆದಿದೆ. ವೇಗವಾಗಿ ಬಂದ ವಾಹನವೊಂದು ಪಾದಚಾರಿಯೋರ್ವರಿಗೆ ಢಿಕ್ಕಿ ಹೊಡೆದ ಪರಿಣಾಮ ಅವರ ತಲೆ ಮತ್ತು ಎದೆಯ ಭಾಗಕ್ಕೆ ತೀವ್ರ ಪ್ರಮಾಣದ ಗಾಯಗಳಾಗಿವೆ. ಸ್ಥಳದಲ್ಲೇ ಅವರು ಸಾವನ್ನಪ್ಪಿದ್ದಾರೆ. ಢಿಕ್ಕಿ ಹೊಡೆದ ವಾಹನ ಸ್ಥಳದಿಂದ ಪರಾರಿಯಾಗಿದೆ. ಗೋಣಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಅಪರಿಚಿತ ವಾಹನ ಢಿಕ್ಕಿ: ವ್ಯಕ್ತಿ ಸ್ಥಳದಲ್ಲೇ ಸಾವು Read More »

ನೇಣು ಬಿಗಿದು ಯುವಕ ಆತ್ಮಹತ್ಯೆ

ಪುತ್ತೂರು: ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಪುರುಷರಕಟ್ಟೆಯ ಇಂದಿರಾನಗರದ ಯುವಕನೊಬ್ಬ ನೇಣು ಬಿಗಿದು‌ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತನನ್ನು ಪ್ರತೀಕ್ ಜೋಗಿ (23) ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನ ಶೋ ರೂಮ್ ವರ್ಕ್ ಶಾಪ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಇತ್ತೀಚೆಗಷ್ಟೇ ಊರಿಗೆ ಬಂದಿದ್ದ. ನ. 21 ರಂದು ಮಧ್ಯಾಹ್ನ ಮನೆಯಲ್ಲಿ ಮೊಬೈಲ್ ನೋಡುತ್ತಿದ್ದ, ಬಳಿಕ ಕಾಣೆಯಾಗಿದ್ದ. ಅನುಮಾನಗೊಂಡ ಮನೆ ಮಂದಿ ಆತನನ್ನು ಹುಡುಕಾಡಿದ್ದು, ಈ ವೇಳೆ ಮನೆಯ ಕೋಣೆಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಈತನ

ನೇಣು ಬಿಗಿದು ಯುವಕ ಆತ್ಮಹತ್ಯೆ Read More »

ಕುಸಿದು ಬಿದ್ದು ವ್ಯಕ್ತಿ ಸಾವು: ಸಾವಿನ ಬಗ್ಗೆ ಸಂದೇಹ ವ್ಯಕ್ತಪಡಿಸಿ ಪುತ್ರಿಯಿಂದ ದೂರು

ಪುತ್ತೂರು: ಇಡ್ಕಿದು ನಿವಾಸಿ ಹರೀಶ್ ಎಂಬವರು ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದು, ಈ ಸಾವಿನ ಬಗ್ಗೆ ಸಂದೇಹ ವ್ಯಕ್ತಪಡಿಸಿ ಮೃತರ ಪುತ್ರಿ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ತಮ್ಮ ಮನೆಯ ಶೌಚಾಲಯಕ್ಕೆ ಹೋಗಿ ಹೊರಬಂದ ವ್ಯಕ್ತಿ ಕುಸಿದು ಬಿದ್ದು ಮೃತಪಟ್ಟಿರುವುದಾಗಿದೆ. ಕುಸಿದು ಬಿದ್ದ ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ, ಅದಾಗಲೇ ಅವರು ಮೃಪಟ್ಟಿದ್ದರು. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿತ್ತು. ಸಂಜೆಯ ವೇಳೆ ಈ ಸಾವಿನ ಬಗ್ಗೆ ಸಂದೇಹ

ಕುಸಿದು ಬಿದ್ದು ವ್ಯಕ್ತಿ ಸಾವು: ಸಾವಿನ ಬಗ್ಗೆ ಸಂದೇಹ ವ್ಯಕ್ತಪಡಿಸಿ ಪುತ್ರಿಯಿಂದ ದೂರು Read More »

ಚೌಕಿಯಲ್ಲಿ ವೇಷ ಕಳಚುತ್ತಿರುವಾಗಲೇ ಯಕ್ಷಗಾನ ಕಲಾವಿದ ಕುಸಿದು ಬಿದ್ದು ಸಾವು

ಮಂದಾರ್ತಿ ಮೇಳದ ಮಹಿಷಾಸುರ ವೇಷಧಾರಿ ಈಶ್ವರ ಗೌಡ ನೆಮ್ಮಾರ್‌ ಮುಖದ ಬಣ್ಣ ತೆಗೆಯುವ ಮುನ್ನವೇ ಸೆಳೆದೊಯ್ದ ವಿಧಿ ಉಡುಪಿ: ಯಕ್ಷಗಾನ ಕಲಾವಿದರೊಬ್ಬರು ಚೌಕಿಯಲ್ಲಿ ಬಣ್ಣ ಕಳಚುತ್ತಿರುವಾಗಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಬುಧವಾರ ತಡರಾತ್ರಿ ಸಂಭವಿಸಿದೆ. ಮಂದಾರ್ತಿ ಮೇಳದ ಬಣ್ಣದ ವೇಷಗಾರ ಈಶ್ವರ ಗೌಡ ನೆಮ್ಮಾರ್‌ ತೀರಿಕೊಂಡಿರುವ ಕಲಾವಿದ. ಕುಂದಾಪುರ ಸಮೀಪ ಸೌಡ ಎಂಬಲ್ಲಿ ನಿನ್ನೆ ರಾತ್ರಿ ದೇವಿ ಮಹಾತ್ಮೆ ಪ್ರಸಂಗ ಯಕ್ಷಗಾನವಿತ್ತು. ಈಶ್ವರ ಗೌಡ ನೆಮ್ಮಾರ್‌ ಮಹಿಷಾಸುರನ ಪಾತ್ರ ಮಾಡಿದ್ದರು. ಪಾತ್ರ ಮುಗಿದ ಬಳಿಕ ತಡರಾತ್ರಿ ಚೌಕಿಯಲ್ಲಿ

ಚೌಕಿಯಲ್ಲಿ ವೇಷ ಕಳಚುತ್ತಿರುವಾಗಲೇ ಯಕ್ಷಗಾನ ಕಲಾವಿದ ಕುಸಿದು ಬಿದ್ದು ಸಾವು Read More »

error: Content is protected !!
Scroll to Top