ನಿಧನ

ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ

300ಕ್ಕೂ ಆಧಿಕ ಚಿತ್ರಗಳಲ್ಲಿ ನಟಿಸಿದ್ದ ನಟ, ರಾಜಕಾರಣಿ ಮುಂಬೈ: ಬಾಲಿವುಡ್‌ನ ದಂತಕಥೆ ಹೀ-ಮ್ಯಾನ್’ ಎಂದೇ ಖ್ಯಾತರಾಗಿದ್ದ ಹಿರಿಯ ನಟ ಧರ್ಮೇಂದ್ರ ವಿಧಿವಶರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆ ಮುಂಬೈ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು ಇವರಿಗೆ 89 ವರ್ಷ ವಯಸ್ಸಾಗಿತ್ತು. ಶ್ವಾಸಕೋಶದ ಸಮಸ್ಯೆಯಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರು ದಶಕಗಳಿಗೂ ಹೆಚ್ಚು ಕಾಲದ ಸಿನಿಪಯಣದಲ್ಲಿ ಧರ್ಮೇಂದ್ರ ಭಾರತೀಯ ಚಿತ್ರರಂಗದಲ್ಲಿ ಅಳಿಸಲಾಗದ ಛಾಪು ಮೂಡಿಸಿದ್ದಾರೆ. ಡಿಸೆಂಬರ್ 25ರಂದು ಬಿಡುಗಡೆಯಾಗಲಿರುವ ‘ಇಕ್ಕೀಸ್’ ಅವರ ಕೊನೆಯ ಚಿತ್ರವಾಗಲಿದೆ. ಅವರು ಪತ್ನಿ ಹೇಮಾಮಾಲಿನಿ ಮತ್ತು ಮಕ್ಕಳಾದ ಸನ್ನಿ […]

ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ Read More »

ಅತಿವೇಗದ ಚಾಲನೆ: ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಸವಾರರಿಬ್ಬರ ದುರ್ಮರಣ

ಬೆಂಗಳೂರು: ಅತಿ ವೇಗದಿಂದ ಚಲಾಯಿಸುತ್ತಿದ್ದ ಬೈಕ್ ಸವಾರಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಾಗಡಿ ತಾಲೂಕಿನ ರಸ್ತೆ ಪಾಳ್ಯದ ಗಾಂಧಿ ಫಾರಂ ಬಳಿ ನಡೆದಿದೆ. ಬೆಂಗಳೂರಿನಿಂದ ಹಾಸನದ ಕಡೆಗೆ ಬೈಕ್‌ನಲ್ಲಿ ಯುವಕರಿಬ್ಬರು ಬರುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಮೃತದೇಹಗಳ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದ್ದು ಶವಗಳನ್ನು ನೆಲಮಂಗಲದ ಸರ್ಕಾರಿ ಆಸ್ಪತ್ರೆಯಲ್ಲಿರಿಸಲಾಗಿದೆ. ಕುದೂರು ‌ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅತಿವೇಗದ ಚಾಲನೆ: ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಸವಾರರಿಬ್ಬರ ದುರ್ಮರಣ Read More »

ಕಾರು-ಬೈಕ್ ಅಪಘಾತ: ಸವಾರ ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಕಡೂರಿನ ಬುಕ್ಕಸಾಗರ ಬಳಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಅನಿಲ್ (21) ಎಂಬವರೇ ‌ಮೃತ ದುರ್ದೈವಿ. ಮೂಲತಃ ಕೇರಳದ ಕಣ್ಣೂರಿನವರಾದ ಅನಿಸ್ ಕಡೂರಿನ ಬಟ್ಟೆ ಅಂಗಡಿಯೊಂದರಲ್ಲಿ ‌ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಅವರು ದತ್ತಪೀಠಕ್ಕೆ ತೆರಳಿ ವಾಪಾಸಾಗುತ್ತಿದ್ದ ‌ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಕಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾರು-ಬೈಕ್ ಅಪಘಾತ: ಸವಾರ ಸ್ಥಳದಲ್ಲೇ ಸಾವು Read More »

ಪಟ್ಟಣ ಪಂಚಾಯತ್ ನಾಮನಿರ್ದೇಶಿತ ಸದಸ್ಯ ಆತ್ಮಹತ್ಯೆ

ಬೆಳ್ತಂಗಡಿ: ಪಟ್ಟಣ ಪಂಚಾಯತ್ ನಾಮನಿರ್ದೇಶಿತ ಸದಸ್ಯ, ರೆಂಕೆದಗುತ್ತು ನಿವಾಸಿ ಅಬ್ದುಲ್ ಬಶೀರ್ ತಮ್ಮ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆಟೋ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಅವರ ಮೃತದೇಹ ಇಂದು ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಮನೆಯಲ್ಲಿ ಪತ್ತೆಯಾಗಿದೆ. ಮೃತರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ.

ಪಟ್ಟಣ ಪಂಚಾಯತ್ ನಾಮನಿರ್ದೇಶಿತ ಸದಸ್ಯ ಆತ್ಮಹತ್ಯೆ Read More »

ಅನಾರೋಗ್ಯದಿಂದ ಖಳನಟ ಹರೀಶ್ ರಾಯ್ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ಖಳನಟ ಹರೀಶ್ ರಾಯ್ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಥೈರಾಯ್ಡ್ ಕ್ಯಾನ್ಸರ್‌‌ನಿಂದ ಬಳಲುತ್ತಿದ್ದ ಅವರು ಕಿದ್ವಾಯಿ ‌ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಸುಮಾರು ಎರಡು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ಮಿಂಚಿದ್ದ ಅವರು, ಕೆಜಿಎಫ್ ಚಿತ್ರದಲ್ಲಿನ ಚಾಚಾ ಪಾತ್ರದ ನಟನೆಯ ಬಳಿಕ ಕೆಜಿಎಫ್ ಚಾಚಾ ಎಂದೇ ಪರಿಚಿತರಾಗಿದ್ದರು‌.

ಅನಾರೋಗ್ಯದಿಂದ ಖಳನಟ ಹರೀಶ್ ರಾಯ್ ನಿಧನ Read More »

ಪುತ್ರಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಂದೆ

ಕೋಲಾರ: ಮಗಳನ್ನು ಕೊಂದ ತಂದೆಯೊಬ್ಬ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಳಬಾಗಿಲು ತಾಲೂಕಿನ ಮುಡಿಯನೂರಿನಲ್ಲಿ ನಡೆದಿದೆ. ಐದು ವರ್ಷದ ಪುತ್ರಿ ನಿಹಾರಿಕಾಳನ್ನು ಕೊಂದು ತಂದೆ ಲೋಕೇಶ್ (37) ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಕೌಟುಂಬಿಕ ಕಲಹದಿಂದ ಲೋಕೇಶ್ ಅವರ ಪತ್ನಿ ಮನೆ ಬಿಟ್ಟು ನಾಪತ್ತೆಯಾಗಿದ್ದರು‌. ಇದರಿಂದ ನೊಂದ ಲೋಕೇಶ್ ಪುತ್ರಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆ ಬಳಿಕ ಶವವನ್ನು ಕಾರಿನಲ್ಲಿಟ್ಟು ಲೋಕೇಶ್ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಮುಳಬಾಗಿಲು ಗ್ರಾಮಾಂತರ

ಪುತ್ರಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಂದೆ Read More »

ನೇತ್ರಾವತಿ ನದಿಗೆ ಹಾರಿ ವೃದ್ಧೆ ಆತ್ಮಹತ್ಯೆ

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವೃದ್ಧೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸರಪಾಡಿಯಲ್ಲಿ ನಡೆದಿದೆ. ಮೃತರನ್ನು ಅಲ್ಲಿಪಾದೆಯ ಉಜಿರಾಡಿ ನಿವಾಸಿ ಮೀನಾಕ್ಷಿ ಪೂಜಾರಿ (70) ಎಂದು ಗುರುತಿಸಲಾಗಿದೆ. ಸರಪಾಡಿಯ ಅಂಗಡಿಯೊಂದಕ್ಕೆ ಹೋಗಿ ಬಂದ ಮೀನಾಕ್ಷಿ ಅವರು, ಅಲ್ಲಿಂದ ನೇರವಾಗಿ ನೇತ್ರಾವತಿ ನದಿ ಸಮೀಪ ಬಂದಿದ್ದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲ್ಲೇ ಸಮೀಪದಲ್ಲಿ ಮರಳು ತೆಗೆಯುತ್ತಿದ್ದ ಕಾರ್ಮಿಕರು ನದಿಗೆ ಹಾರಿ ಅವರನ್ನು ಬದುಕಿಸಲು ಪ್ರಯತ್ನ ನಡೆಸಿದರಾದರೂ, ಆ ಪ್ರಯತ್ನ ವಿಫಲವಾಗಿದೆ. ಸ್ಥಳಕ್ಕೆ ಬಂಟ್ವಾಳ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

ನೇತ್ರಾವತಿ ನದಿಗೆ ಹಾರಿ ವೃದ್ಧೆ ಆತ್ಮಹತ್ಯೆ Read More »

ಯಕ್ಷ ಕಲಾವಿದ ಸುಜನಾ ಸುಳ್ಯ ನಿಧನ

ಸುಳ್ಯ: ರಂಗಮನೆ’ ಎಂಬ ಕಲಾ ಕೇಂದ್ರದ ರೂವಾರಿ ಮತ್ತು ನಿರ್ದೇಶಕ ಜೀವನ್‌ರಾಮ್‌ ಸುಳ್ಯ ಅವರ ತಂದೆ, ತೆಂಕುತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ, ಸುಳ್ಯ ರಂಗ ಮನೆಯ ಸುಜನಾ ಸುಳ್ಯ ಅವರು ಇಂದು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಸುಳ್ಯದ ಜಯರಾಮ ನಾವೂರು ಅವರು ಸುಜನಾ ಸುಳ್ಯ ಎಂದೇ ಪ್ರಸಿದ್ಧರಾಗಿದ್ದವರು. ವಯೋಸಹಜ ಅನಾರೋಗ್ಯದ ಹಿನ್ನೆಲೆ ಅವರು ಸುಳ್ಯದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯಗಾರರಾಗಿದ್ದ ಅವರು, ಯಕ್ಷಗಾನ ಮತ್ತು ರಂಗಭೂಮಿ ಸೇರಿದಂತೆ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಂಡಿದ್ದರು.ಶ್ರೀಯುತರ ನಿಧನಕ್ಕೆ

ಯಕ್ಷ ಕಲಾವಿದ ಸುಜನಾ ಸುಳ್ಯ ನಿಧನ Read More »

ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದ ಸುಳ್ಯದ ಶಿಕ್ಷಕಿ ಸಾವು

ಬಹಳ ಅಪರೂಪದ ಕಾಯಿಲೆಗೆ ತುತ್ತಾಗಿದ್ದ ನೃತ್ಯ ಶಿಕ್ಷಕಿ ಸುಳ್ಯ : ವಿರಳ ಹಾಗೂ ತೀರ ಅಪರೂಪದ ಕಾಯಿಲೆ Hyper IGE Mediated Mast cell activation syndromeನಿಂದ (ಹೈಪರ್-IgE ಸಿಂಡ್ರೋಮ್‌) ಬಳಲುತ್ತಿದ್ದ ಗಾಂಧಿನಗರ ನಿವಾಸಿ ಚಾಂದಿನಿ ಜೀವನ್ಮರಣ ಹೋರಾಟ ಕೊನೆಗೂ ಫಲಿಸಿಲ್ಲ. ಕಳೆದ ಕೆಲವು ವರ್ಷಗಳಿಂದ ಚಾಂದಿನಿ ಈ ಕಾಯಿಲೆಯಿಂದ ಬಳಲುತ್ತಿದ್ದು, ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದರು. ಇವರಿಗಿದ್ದ ಕಾಯಿಲೆ ಏನು ಎಂಬುದನ್ನು ಪತ್ತೆ ಮಾಡಲು ಆರೋಗ್ಯ ಇಲಾಖೆಗೆ ಬಹಳ ಸಮಯ ಹಿಡಿದಿತ್ತು. ಅಂತಿಮವಾಗಿ ಇವರಿಗೆ ಇದ್ದಿದ್ದು

ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದ ಸುಳ್ಯದ ಶಿಕ್ಷಕಿ ಸಾವು Read More »

ತೆಂಕುತಿಟ್ಟಿನ ಹಿರಿಯ ಭಾಗವತ ದಿನೇಶ್‌ ಅಮ್ಮಣ್ಣಾಯ ಇನ್ನಿಲ್ಲ

ಪೌರಾಣಿಕ, ತುಳು ಪ್ರಸಂಗಗಳ ಅಮೋಘ ಭಾಗವತಿಕೆಯ ಪರಂಪರೆ ಕೊನೆಯ ಕೊಂಡಿ ಮಂಗಳೂರು : ರಸರಾಗ ಚಕ್ರವರ್ತಿ ಎಂದು ಅರಿಯಲ್ಪಡುತ್ತಿದ್ದ ತೆಂಕುತಿಟ್ಟಿನ ಹಿರಿಯ ಭಾಗವತ ದಿನೇಶ್‌ ಅಮ್ಮಣ್ಣಾಯ ಗುರುವಾರ ನಿಧನರಾಗಿದ್ದಾರೆ. ಅವರಿಗೆ 65 ವರ್ಷ ಪ್ರಾಯವಾಗಿತ್ತು. ಕಂಚಿನ ಕಂಠ ಹಾಗೂ ವಿಶಿಷ್ಟ ರಾಗ ಸಂಯೋಜನೆಯ ಮೂಲಕ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಯಕ್ಷಕಲಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಅವರು ಪೌರಾಣಿಕ ಮತ್ತು ತುಳು ಪ್ರಸಂಗಗಳೆರಡರಲ್ಲೂ ತಮ್ಮ ಛಾಪು ಮೂಡಿಸಿ ಯಕ್ಷಗಾನ ಕ್ಷೇತ್ರಕ್ಕೆ ಹೊಸ ದಿಕ್ಕು ತೋರಿಸಿದ್ದರು. ಯಕ್ಷಗಾನ ಕ್ಷೇತ್ರದ ಹಿರಿಯ

ತೆಂಕುತಿಟ್ಟಿನ ಹಿರಿಯ ಭಾಗವತ ದಿನೇಶ್‌ ಅಮ್ಮಣ್ಣಾಯ ಇನ್ನಿಲ್ಲ Read More »

error: Content is protected !!
Scroll to Top