ನಿಧನ

ತೀವ್ರ ರಕ್ತಸ್ರಾವದಿಂದ ಬಾಣಂತಿ ಸಾವು

ಸುಳ್ಯ: ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದ ತುಂಬು ಗರ್ಭಿಣಿ, ಹೆಣ್ಣು ಮಗುವಿಗೆ ಜನ್ಮ ನೀಡಿದ ಕೆಲವೇ ಗಂಟೆಗಳಲ್ಲಿ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿರುವ ಘಟನೆ ಸುಳ್ಯ ತಾಲೂಕಿನಲ್ಲಿ ನಡೆದಿದೆ. ಸಂಪಾಜೆ ಗ್ರಾಮದ ಬಾಬು ಮತ್ತು ಚಿನ್ನಮ್ಮ ದಂಪತಿಯ ಪುತ್ರಿ. ಬೆಳ್ತಂಗಡಿಯ ನಾರಾವಿ ಗ್ರಾಮದ ನೂಜೋಡಿ ಮಾಪಾಲ ಮನೆಯ ಶೇಖರ ಮಲೆಕುಡಿಯ ಅವರ ಧರ್ಮಪತ್ನಿ ಮಧುರಾ (29) ಅವರು ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದು , ವೈದ್ಯರ ನಿರ್ಲಕ್ಷ್ಯವೇ ಈ ಘಟನೆಗೆ  ಕಾರಣವೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈಗಾಗಲೇ ಮೂರೂವರೆ ವರ್ಷದ ಗಂಡು ಮಗುವಿದ್ದು […]

ತೀವ್ರ ರಕ್ತಸ್ರಾವದಿಂದ ಬಾಣಂತಿ ಸಾವು Read More »

ವಿವೇಕಾನಂದ ಕಾಲೇಜಿನ ನಿವೃತ್ತ ಉದ್ಯೋಗಿ ಕುಞಣ್ಣ ಗೌಡ ಸ್ವರ್ಗಸ್ಥ

ಪುತ್ತೂರು: ಪುತ್ತೂರಿನ ನೆಹರು ನಗರದ ನಿವಾಸಿಯಾಗಿದ್ದ ಕುಞಣ್ಣ ಗೌಡರು ಅಸೌಖ್ಯದಿಂದ ಇಂದು ಬೆಳಿಗ್ಗೆ ಸ್ವರ್ಗಸ್ಥರಾದರು. ಕಠಿಣ ಪರಿಶ್ರಮಿ73 ವರ್ಷ ವಯಸ್ಸಿನ ಕುಞಣ್ಣರು ಜೀವನದ ಆರಂಭದ ದಿನಗಳಲ್ಲಿ ವಿಟ್ಲದ ಆಸ್ಪತ್ರೆಯೊಂದರಲ್ಲಿ ಕಾಂಪೌಂಡರ್ ಆಗಿ, ಸಿ.ಪಿ.ಸಿ.ಆರ್.ಐ.ನಲ್ಲಿ ದಿನಗೂಲಿ ನೌಕರರಾಗಿ ದುಡಿದು ಬದುಕು ಕಟ್ಟಿಕೊಂಡಿದ್ದರು. ಬಳಿಕ ವಿವೇಕಾನಂದ ಕಾಲೇಜಿನಲ್ಲಿ ಗ್ರಂಥಾಲಯ ಸಹಾಯಕರಾಗಿ ಸೇವೆಗೆ ಸೇರಿದ್ದರು. ನಿಷ್ಠೆಗೆ ಪರ್ಯಾಯ ಪದವಾಗಿದ್ದ ಕುಞಣ್ಣರು ಬಳಿಕ ಕಚೇರಿ ಗುಮಾಸ್ತರಾಗಿ ಕೊನೆಯಲ್ಲಿ ಕಛೇರಿ ಅಧೀಕ್ಷಕರಾಗಿ ಸೇವಾ ನಿವೃತ್ತಿ ಪಡೆದಿದ್ದರು. ನಿವೃತ್ತಿ ನಂತರವೂ ಸೇವೆಸೇವಾ ನಿವೃತ್ತಿಯ ಬಳಿಕ ವಿವೇಕಾನಂದ

ವಿವೇಕಾನಂದ ಕಾಲೇಜಿನ ನಿವೃತ್ತ ಉದ್ಯೋಗಿ ಕುಞಣ್ಣ ಗೌಡ ಸ್ವರ್ಗಸ್ಥ Read More »

ನಗರಸಭಾ ಸದಸ್ಯ ರಮೇಶ್ ರೈ ಮೃತ  ದೇಹ ಪತ್ತೆ

ಪುತ್ತೂರು: ನಗರಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ರವರು ಪಾಣೆಮಂಗಳೂರು ಹಳೆ ಸೇತುವೆಯಲ್ಲಿ ಬೈಕ್ ಮೊಬೈಲ್ ಬಿಟ್ಟುಹೋದ ಘಟನೆ ನಡೆದಿದ್ದು, ಇದೀಗ ಅವರ ಮೃತದೇಹ ಪತ್ತೆಯಾಗಿದೆ.. ರಮೇಶ್ ರೈ ಅವರು ಇತ್ತೀಚೆಗೆ ಪುತ್ತೂರು ನಗರಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅಯ್ಕೆಯಾಗಿದ್ದರು. ಇಂದು ಬೆಳಿಗ್ಗೆ ಸುಮಾರು 11 ಗಂಟೆಯಿಂದ ಬೈಕ್ ಹಾಗೂ ಸೊತ್ತುಗಳು ಇಲ್ಲಿ ಅನಾಥವಾಗಿ ಕಂಡು ಬಂದಿದೆ ಎಂದು ಸ್ಥಳೀಯರು ಪೋಲೀಸರಿಗೆ ತಿಳಿಸಿದ್ದು, ಸ್ಥಳದಲ್ಲಿ ಸಿಕ್ಕಿದ ಮೊಬೈಲ್ ನಿಂದ  ಪೋನ್ ಮಾಡಿದಾಗ ಇದು ಪುತ್ತೂರು ರಮೇಶ್

ನಗರಸಭಾ ಸದಸ್ಯ ರಮೇಶ್ ರೈ ಮೃತ  ದೇಹ ಪತ್ತೆ Read More »

ಹಾವು ಕಡಿದು ಯುವಕ ಮೃತ್ಯು

ಬಂಟ್ವಾಳ: ಹಾವು ಕಡಿದು ಯುವಕನೊಬ್ಬ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಪಾದೆಮನೆ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ದಿವಂಗತ ಇಸ್ಮಾಯಿಲ್ ಎಂಬುವವರ ಪುತ್ರ ಅಶ್ರಫ್ (28) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡುತ್ತಿದ್ದ ಇವರು  ಪಾಂಡವರಕಲ್ಲಿನ ಮನೆಯೊಂದರಲ್ಲಿ ಮಧ್ಯಾಹ್ನದ ಸಮಯ ಅಡಿಕೆ ಸುಲಿಯುತ್ತಿದ್ದ ಸಂದರ್ಭ ಕಾಲಿನ ಬೆರಳಿಗೆ ಹಾವು ಕಚ್ಚಿತ್ತು ಎನ್ನಲಾಗಿದೆ. ತಕ್ಷಣ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.  ಇವರಿಗೆ

ಹಾವು ಕಡಿದು ಯುವಕ ಮೃತ್ಯು Read More »

ಚಲಿಸುತ್ತಿದ್ದ ಆಟೋದಲ್ಲಿ ಹೃದಯಾಘಾತ : ಚಾಲಕ ಶರತ್ ಕುಮಾರ್ ನಿಧನ

ಕೊಕ್ಕಡ: ಆಟೋ ರಿಕ್ಷಾ ಚಾಲನೆ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಇಂದು ಕೊಕ್ಕಡದಲ್ಲಿ ನಡೆದಿದೆ. ಕೊಕ್ಕಡ ಸಮೀಪದ ಕೆಂಪಕೋಡಿನ ನಿವಾಸಿ ರಘುರಾಮ ಮಡಿವಾಳ ಅವರ ಪುತ್ರ  ಶರತ್ ಕುಮಾರ್ ಕೆ. (36) ಮೃತಪಟ್ಟವರು. ಶರತ್ ಕುಮಾರ್ ಇಂದು ಬೆಳಿಗ್ಗೆ ಸ್ವಂತ ಆಟೋದಲ್ಲಿ ವಿದ್ಯಾರ್ಥಿಗಳನ್ನು ಶಾಲೆಗೆ ಬಿಟ್ಟು ಮನೆಗೆ ಮರಳುತ್ತಿದ್ದರು. ಈ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸ್ಥಳೀಯರು ಕೂಡಲೇ ಶರತ್‌ ರನ್ನು ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದರು. ಆದಾಗಲೇ ಅವರು ನಿಧನ ಹೊಂದಿದ್ದರು. ಮೃತರು

ಚಲಿಸುತ್ತಿದ್ದ ಆಟೋದಲ್ಲಿ ಹೃದಯಾಘಾತ : ಚಾಲಕ ಶರತ್ ಕುಮಾರ್ ನಿಧನ Read More »

ಕೃಷಿಕ ಮಹಾಬಲ ಶೆಟ್ಟಿ ಪಡ್ಡಾಯಿ ನಿಧನ

ಪುತ್ತೂರು: ಬಂಟ್ವಾಳ ತಾಲೂಕಿನ ಸರಪಾಡಿ ನಿವಾಸಿ ಮಹಾಬಲ ಶೆಟ್ಟಿ ಪಡ್ಡಾಯಿ ಇಂದು ಮುಂಜಾನೆ ನಿಧನರಾದರು. ಕೃಷಿಕರಾಗಿದ್ದ ಅವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ, ಮೂರು ಗಂಡು ಹಾಗೂ ನಾಲ್ವರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ.

ಕೃಷಿಕ ಮಹಾಬಲ ಶೆಟ್ಟಿ ಪಡ್ಡಾಯಿ ನಿಧನ Read More »

ಪತ್ರಿಕಾ ವಿತರಕ ಜಗದೀಶ್ ಭಟ್ ನಿಧನ

ವಿಟ್ಲ: ಕಳೆದ 50 ವರ್ಷಗಳಿಂದ ದಿನಪತ್ರಿಕೆ ಮಾರಾಟ ಮಾಡುತ್ತಿದ್ದ ಜಗದೀಶ್ ಭಟ್ (86) ನಿಧನರಾಗಿದ್ದಾರೆ. ವಿಟ್ಲ ಪರಿಸರದಲ್ಲಿ ಪೇಪ‌ರ್ ಭಟ್ರು ಎಂದೇ ಹೆಸರುವಾಸಿಯಾಗಿದ್ದ ಜಗದೀಶ್‌ ಭಟ್‌ ರವರು ಮೊದಲು ಗಣೇಶ್ ಬೀಡಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು.  ಅವರು ಬಳಿಕ ಪತ್ರಿಕಾ ವಿತರಕರಾಗಿ ಸೇವೆಯನ್ನು ಸಲ್ಲಿಸುತ್ತಿದ್ದರು. ವಿಟ್ಲ ಜಾತ್ರಾ ಸಂದರ್ಭ ದೇವಸ್ಥಾನದ ಆನೆ ಬಾಗಿಲು ಸಮೀಪ ಸೂಜಿ ವ್ಯಾಪಾರ ಮಾಡಿ ಜನರ ಪ್ರೀತಿ ಪಾತ್ರರಾಗಿದ್ದರು. ಮೃತರು ಪತ್ನಿ ಹಾಗು ಮೂವರು ಪುತ್ರರು, ಪುತ್ರಿ, ಮೊಮ್ಮಕ್ಕಳನ್ನು ಅಗಲಿದ್ದಾರೆ.

ಪತ್ರಿಕಾ ವಿತರಕ ಜಗದೀಶ್ ಭಟ್ ನಿಧನ Read More »

ವಿದ್ಯುತ್ ದುರಸ್ಥಿ ವೇಳೆ ಸಹಾಯಕ ಪವರ್ ಮ್ಯಾನ್ ಮೃತ್ಯು

ಬೆಳ್ತಂಗಡಿ: ಕುವೆಟ್ಟು ಗ್ರಾಮದ ಸಹಾಯಕ ಪವರ್ ಮ್ಯಾನ್ ವಿಜೇಶ್ ಜೈನ್ HT ಲೈನ್ ನಲ್ಲಿ ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಓಡಿನ್ನಾಳ ಗ್ರಾಮದ ಕೆಂಜಿಲ ಮನೆ ನಿವಾಸಿ ಸುಕುಮಾರ್ ಜೈನ್ ಮತ್ತು ಪೂರ್ಣಿಮಾ ಜೈನ್ ದಂಪತಿಗಳ ಎರಡನೇ ಮಗ ವಿಜೇಶ್ ಜೈನ್ (27) ಎಂಬವರು ಓಡಿಲ್ನಾಳ ಗ್ರಾಮದ ಕುಮ್ಮುಂಜ ಎಂಬಲ್ಲಿ HT ಲೈನ್ ನಲ್ಲಿ ಕೆಲಸ ಮಾಡುತ್ತಿದ್ದಾಗ ಮೇ.30 ರಂದು ವಿದ್ಯುತ್ ಶಾಕ್ ತಗುಲಿ ಮೃತಪಟ್ಟಿದ್ದಾರೆ. ಮೃತಪಟ್ಟ ವಿಜೇಶ್ ಜೈನ್ ಶವವನ್ನು

ವಿದ್ಯುತ್ ದುರಸ್ಥಿ ವೇಳೆ ಸಹಾಯಕ ಪವರ್ ಮ್ಯಾನ್ ಮೃತ್ಯು Read More »

ಲಾರಿಗೆ ಡಿಕ್ಕಿ ಹೊಡೆದ ಬೈಕ್ | ಯುವಕ ಮೃತ್ತು

ವಿಟ್ಲ: ಲಾರಿಯ ಹಿಂಬದಿಗೆ ಬೈಕ್‍ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ್ದು, ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳಪದವುನಲ್ಲಿ ನಡೆದಿದೆ. ಒಕ್ಕೆತ್ತೂರು ಮೂಲದ ಇಬ್ಬರು ಯುವಕರು ಮಂಗಳಪದವು ಕಡೆಗೆ ತೆರಳುತ್ತಿದ್ದ ವೇಳೆ ಕನ್ಯಾನ ಕಡೆಯಿಂದ ಬಾಯ್ಸ್ ಮಣ್ಣು ಸಾಗಾಟ ಮಾಡುತ್ತಿದ್ದ ಅದರ ಚಾಲಕ ಮಂಗಳಪದವು ಎಂಬಲ್ಲಿ ರಸ್ತೆಯಲ್ಲಿಯೇ ಲಾರಿ ನಿಲ್ಲಿಸಿದ್ದು, ಅದಕ್ಕೆ ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಡಿಕ್ಕಿಯಾದ ರಭಸಕ್ಕೆ ಇಬ್ಬರಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಯಿತು.  ಆದರೆ ಇರ್ಫಾನ್ (19) ಚಿಕಿತ್ಸೆ

ಲಾರಿಗೆ ಡಿಕ್ಕಿ ಹೊಡೆದ ಬೈಕ್ | ಯುವಕ ಮೃತ್ತು Read More »

ಹಿರಿಯ ಸಾಹಿತಿ ಎಚ್.ಎಸ್ ವೆಂಕಟೇಶಮೂರ್ತಿ ನಿಧನ

ಚಲನಚಿತ್ರ ಸಾಹಿತಿಯಾಗಿಯೂ ಗುರುತಿಸಿಕೊಂಡಿದ್ದ ಸಾಹಿತಿ ಬೆಂಗಳೂರು: ಕನ್ನಡ ಖ್ಯಾತ ಕವಿ, ಸಾಹಿತಿ, ನಾಟಕ ರಚನೆಕಾರ ಎಚ್‌ಎಸ್‌ವಿ ಎಂದೇ ಚಿರಪರಿಚಿತರಾಗಿದ್ದ ಎಚ್.ಎಸ್ ವೆಂಕಟೇಶಮೂರ್ತಿ ಇಂದು ನಿಧನರಾಗಿದ್ದಾರೆ. ಮೂಲತಃ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಎಂಬ ಸಣ್ಣ ಗ್ರಾಮದ ಮಧ್ಯಮವರ್ಗದ ಕುಟುಂಬವೊಂದರಲ್ಲಿ 23-06-1944ರಲ್ಲಿ ಜನಿಸಿದ ಎಚ್.ಎಸ್ ವೆಂಕಟೇಶಮೂರ್ತಿ ಮೂವತ್ತು ವರ್ಷಗಳ ಕಾಲ ಗ್ರಾಮ್ಯಜೀವನ ನಡೆಸಿ ನಂತರ ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಎಮ್.ಎ ಪದವಿ ಪಡೆದರು. ನಂತರ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ 1973ರಲ್ಲಿ ನೇಮಕಗೊಂಡರು. ಕನ್ನಡದಲ್ಲಿ

ಹಿರಿಯ ಸಾಹಿತಿ ಎಚ್.ಎಸ್ ವೆಂಕಟೇಶಮೂರ್ತಿ ನಿಧನ Read More »

error: Content is protected !!
Scroll to Top