ನಿಧನ

108 ವರ್ಷಗಳ ಇತಿಹಾಸವುಳ್ಳ ವೈಜಯಂತೀ ಪಂಚಾಂಗದ ಸಂಪಾದಕರಾದ ಯರ್ಮುಂಜ ಶಂಕರ ಜೋಯಿಸರು ನಿಧನ  

ಪುತ್ತೂರು : ದೃಗ್ಗಣಿತರೀತ್ಯಾ ಪಂಚಾಂಗವನ್ನು ತಯಾರಿಸಿ ಧರ್ಮಕರ್ಮಗಳಿಗೆ ಕಾಲನಿರ್ಣಯವನ್ನು ಮಾಡಿಕೊಂಡು ಬರುತ್ತಿರುವ 108 ವರ್ಷಗಳ ಇತಿಹಾಸವುಳ್ಳ ವೈಜಯಂತೀ ಪಂಚಾಂಗದ ಸಂಪಾದಕರಾದ ಯರ್ಮುಂಜ ಶಂಕರ ಜೋಯಿಸರು  (72) ಅಂಗರಜೆಯ ಸ್ವಗೃಹದಲ್ಲಿ ಶನಿವಾರ ನಿಧನರಾಗಿದ್ದಾರೆ. ಯರ್ಮುಂಜ ಭೀಮ ಜೋಯಿಸರ ಮಗನಾದ ಅವರು ವೈಜಯಂತೀ ಪಂಚಾಂಗದ ಆದ್ಯಪ್ರವರ್ತಕರಾದ ಯರ್ಮುಂಜ ಶಂಕರ ಜೋಯಿಸರ ಮೊಮ್ಮಗ. ಧರ್ಮಶಾಸ್ತ್ರದಲ್ಲಿಯೂ ಇವರ ಪಾಂಡಿತ್ಯವು ಅಗಾಧವಾಗಿತ್ತು. ಹಲವು ಜೌತಿಷ ವಿದ್ವತ್ ಗೋಷ್ಠಿಗಳಲ್ಲಿ ಪ್ರಬಂಧ ಮಂಡಿಸಿರುವ ಇವರು ವಾಸ್ತುಪ್ರಕಾರ ಅನೇಕ ಗೃಹನಿರ್ಮಾಣಕ್ಕೆ ಮಾರ್ಗದರ್ಶನವನ್ನು ನೀಡಿರುವರು. ಅವರು ಬೈಲೂರು ಅನಂತಪದ್ಮನಾಭ ತಂತ್ರಿ […]

108 ವರ್ಷಗಳ ಇತಿಹಾಸವುಳ್ಳ ವೈಜಯಂತೀ ಪಂಚಾಂಗದ ಸಂಪಾದಕರಾದ ಯರ್ಮುಂಜ ಶಂಕರ ಜೋಯಿಸರು ನಿಧನ   Read More »

ಯಕ್ಷಗಾನದ ಹಿರಿಯ ಅರ್ಥಧಾರಿ ಕೆ.ವಿ. ಗಣಪಯ್ಯ ಅಸ್ತಂಗತ

ಹಿರಿಯ ತಲೆಮಾರಿನ ಯಕ್ಷಗಾನದ ಅರ್ಥದಾರಿಗಳಲ್ಲಿ ಅಗ್ರಮಾನ್ಯರೆನಿಸಿದ ಕಲಾವಿದ ಅರ್ಥಧಾರಿ, ನಿವೃತ್ತ ಶಿಕ್ಷಕ ಕಿವಿ ಗಣಪಯ್ಯ  ಅಸೌಖ್ಯದಿಂದ  ನಿಧನರಾಗಿದ್ದಾರೆ.  ಸ್ವಾತಂತ್ರ್ಯ ಪೂರ್ವದಲ್ಲಿ 1933 ಜೂನ್ 5ರಂದು ಜನಿಸಿದ ಅವರು ಸುದೀರ್ಘ 92 ವರ್ಷಗಳ ತುಂಬು ಜೀವನವನ್ನು ನಡೆಸಿದ್ದಾರೆ.  ಅವರು ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕುಗಳ ಅನೇಕ  ಸರಕಾರಿ ಶಾಲೆಗಳಲ್ಲಿ ಹಿಂದಿ ಪಂಡಿತರಾಗಿ, ಶಿಕ್ಷಕರಾಗಿ ಮುಖ್ಯೋಪಾಧ್ಯಾಯರಾಗಿ ಪ್ರಭಾರ ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ್ದರು. ದೇರಾಜೆ, ಶೇಣಿ, ಪೆರ್ಲ, ಸಾಮಗ ಮುಂತಾದ ಹಿರಿಯ ಅರ್ಥದಾರಿಗಳ ಜೊತೆಗೆ ಸರಿಸಾಟಿ ಎನಿಸಿ ಅರ್ಥಗಾರಿಕೆಯಲ್ಲಿ ಮೆರೆದ  ಕೆ.ವಿ.ಗಣಪಯ್ಯನವರು

ಯಕ್ಷಗಾನದ ಹಿರಿಯ ಅರ್ಥಧಾರಿ ಕೆ.ವಿ. ಗಣಪಯ್ಯ ಅಸ್ತಂಗತ Read More »

ವಿವೇಕಾನಂದ ಕಾಲೇಜು ವಿದ್ಯಾರ್ಥಿ ಅಶ್ವೀಜ್ ಕಶ್ಯಪ್‍ ನಿಧನ

ಪುತ್ತೂರು: ವಿವೇಕಾನಂದ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಅಶ್ವೀಜ್ ಕಶ್ಯಪ್ (18) ಮಂಗಳವಾರ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು. ಪುತ್ತೂರು ವಿವೇಕಾನಂದ ಕಾಲೇಜಿನ ದ್ವಿತೀಯ ವರ್ಷದ ಸೈನ್ಸ್ ವಿಭಾಗದ ವಿದ್ಯಾರ್ಥಿಯಾಗಿದ್ದ ಅಶ್ವೀಜ್ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಪೆರ್ಲ ನಿವಾಸಿಯಾಗಿದ್ದ ಅಶ್ವೀಜ್ ತಂದೆ, ತಾಯಿ, ಅಜ್ಜ, ಅಜ್ಜಿಯನ್ನು ಅಗಲಿದ್ದಾರೆ.

ವಿವೇಕಾನಂದ ಕಾಲೇಜು ವಿದ್ಯಾರ್ಥಿ ಅಶ್ವೀಜ್ ಕಶ್ಯಪ್‍ ನಿಧನ Read More »

ವಿಜಯವಾಣಿ ಪತ್ರಿಕೆ ಉಪಸಂಪಾದಕ ಗಿರೀಶ್‍ ಕೆ.ಎಲ್‍. ನಿಧನ

ಮಂಗಳೂರು: ವಿಜಯವಾಣಿ ಮಂಗಳೂರು ಆವೃತ್ತಿಯ ಹಿರಿಯ ಉಪಸಂಪಾದಕ, ಮಂಗಳೂರು ಶಕ್ತಿನಗರ ನಿವಾಸಿ ಗಿರೀಶ್ ಕೆ.ಎಲ್ (49) ಸೋಮವಾರ ಹೃದಯಾಘಾತದಿಂದ ನಿಧನರಾದರು. ಶಕ್ತಿ, ಉಷಾಕಿರಣ. ಉದಯವಾಣಿ ಪತ್ರಿಕೆಗಳಲ್ಲಿ ಗಿರೀಶ್ ಕೆ.ಎಲ್ ಅವರು ಸೇವೆ ಸಲ್ಲಿಸಿದ್ದರು. ವಿಜಯವಾಣಿ ಆರಂಭದಿಂದಲೇ ಹಿರಿಯ ಉಪಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದ ಗಿರೀಶ್ ಅವರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

ವಿಜಯವಾಣಿ ಪತ್ರಿಕೆ ಉಪಸಂಪಾದಕ ಗಿರೀಶ್‍ ಕೆ.ಎಲ್‍. ನಿಧನ Read More »

ಪುತ್ತೂರಿನ ಚಿರಪರಿಚಿತ, ಕಂಪೌಂಡರ್ ನರಸಿಂಹ ಭಟ್‍ ನಿಧನ

ಪುತ್ತೂರು: ಪುತ್ತೂರಿನ ಚಿರಪರಿಚಿತ, ವೈದ್ಯ ಲೋಕದ ಕಂಪೌಂಡರ್ ಹಾರಾಡಿ ನಿವಾಸಿ ಕಂಪೌಂಡರ್ ನರಸಿಂಹ ಭಟ್ (82) ಅವರು ಸೋಮವಾರ ರಾತ್ರಿ ನಿಧನರಾದರು. ಪುತ್ತೂರಿನ ಚಿಕಿತ್ಸಾಲಯವೊಂದರಲ್ಲಿ ಕಾಂಪೌಂಡರ್ ಆಗಿ 68 ವರ್ಷ ಸೇವೆ ಸಲ್ಲಿಸಿದ ನರಸಿಂಹ ಭಟ್ ನಿವೃತ್ತಿಗೊಂಡು ಮನೆಯಲ್ಲಿದ್ದರು. ಡಾ.ಶಿವರಾಮ ಭಟ್ ಜೊತೆ ಕಾಂಪೌಂಡರ್ ಆಗಿ ಕೆಲಸ ಮಾಡಿದ ನರಸಿಂಹ ಭಟ್ ಅವರು ಎಲ್ಲರಿಗೂ ಚಿರಪರಿಚಿತರು. ಮೃತರು ಪತ್ನಿ ಕಾವೇರಮ್ಮ, ಪುತ್ರ ವಿದೇಶದಲ್ಲಿರುವ ಕಾರ್ತಿಕ್, ಇಬ್ಬರು ಸಹೋದರರನ್ನು ಅಗಲಿದ್ದಾರೆ

ಪುತ್ತೂರಿನ ಚಿರಪರಿಚಿತ, ಕಂಪೌಂಡರ್ ನರಸಿಂಹ ಭಟ್‍ ನಿಧನ Read More »

ಬೈಕ್ ಡಿಕ್ಕಿ ; ಮಹಿಳೆ ಮೃತ್ಯು

ಬಿ.ಸಿ.ರೋಡ್ : ರಸ್ತೆ ದಾಟಲು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಂತುಕೊಂಡಿದ್ದ ವಯಸ್ಸಾದ  ಮಹಿಳೆಯೋರ್ವರಿಗೆ ದ್ವಿಚಕ್ರ ವಾಹನ‌ ಡಿಕ್ಕಿಯಾಗಿ ಮೃತಪಟ್ಟ ಘಟನೆ ಬಿಸಿರೋಡಿನ ಕೈಕಂಬದ ಮಿತ್ತಬೈಲು ಎಂಬಲ್ಲಿ ಜ.30 ರಂದು ಗುರುವಾರ ಸಂಜೆ ವೇಳೆ ನಡೆದಿದೆ. ಪುದು ಸಮೀಪದ ‌ಸುಜೀರು ನಿವಾಸಿ ಬೀಪಾತುಮ್ಮ ( 68) ಮೃತಪಟ್ಟ ಮಹಿಳೆ.  ಮಿತ್ತಬೈಲು ಮೊಹಿದ್ದೀನ್ ಜುಮಾಮಸೀದಿ ಹಾಲ್ ನಲ್ಲಿ ಸಂಬಂಧಿಕರೊಬ್ಬರ ಮದುವೆ ಕಾರ್ಯಕ್ರಮ ಮುಗಿಸಿ ,ವಾಪಸು ಮನೆ ಕಡೆಗೆ ಹೋಗುವುದಕ್ಕೆ ಹೆದ್ದಾರಿಯನ್ನು ದಾಟಲು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಂತುಕೊಂಡಿದ್ದ ವೇಳೆ ಅತೀವೇಗ

ಬೈಕ್ ಡಿಕ್ಕಿ ; ಮಹಿಳೆ ಮೃತ್ಯು Read More »

ಮುಕ್ರಂಪಾಡಿ ಬೊಮ್ಮಣ್ಣ ಗೌಡ ನಿಧನ

ಪುತ್ತೂರು : ಪುತ್ತೂರಿನ ದರ್ಬೆಯ ಮುಕ್ರಂಪಾಡಿ ನಿವಾಸಿ ಬೊಮ್ಮಣ್ಣ ಗೌಡ ನಿಧನರಾಗಿದ್ದಾರೆ. ಮೃತರು ಪತ್ನಿ ಪ್ರೇಮಾ, ಶೋಭಾ .ಕೆ, ಸತೀಶ್ ಗೌಡ, ವಿದ್ಯಾ .ಕೆ, ಹರೀಶ್.ಕೆ, ಶಿವಪ್ರಸಾದ್, ಪವಿತ್ರ, ಕುಟುಂಬಸ್ಥರನ್ನು ಅಗಲಿದ್ದಾರೆ.

ಮುಕ್ರಂಪಾಡಿ ಬೊಮ್ಮಣ್ಣ ಗೌಡ ನಿಧನ Read More »

ಕಾಡಿನಲ್ಲಿರುವ ಐರೋಳ್ ಹಣ್ಣು ತಿಂದು  ಮೃತಪಟ್ಟ ವ್ಯಕ್ತಿ

ಸುಳ್ಯ : ಕಾಡಿನಲ್ಲಿರುವ ಐರೋಳ್ ಹಣ್ಣನ್ನು ತಿಂದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ. ಅಮರ ಪಟ್ಟೂರು ಗ್ರಾಮದ ಕುಳ್ಳಾಜೆಯಲ್ಲಿ 2023ರ ಅಕ್ಟೋಬರ್‌ನಲ್ಲಿ ಲೋಕಯ್ಯ ಹಾಗೂ ಅವರ ಮಗಳು ಲೀಲಾವತಿಯವರು ಐರೋಳ್ ಹಣ್ಣನ್ನು ತಿಂದಿದ್ದು, ಪರಿಣಾಮ ಇಬ್ಬರೂ ಅಸ್ವಸ್ಥಗೊಂಡಿದ್ದರು. ಬಳಿಕ ಔಷಧ ಪಡೆದುಕೊಂಡಿದ್ದ ಲೋಕಯ್ಯ ಅವರು ಗುಣಮುಖರಾಗಿದ್ದರು. ಲೀಲಾವತಿ ಕೆಲವು ದಿನಗಳ ಬಳಿಕ ಮೃತರಾಗಿದ್ದರು ಆದರೀಗ ಲೋಕಯ್ಯ ಗುಣಮುಖರಾಗಿದ್ದರೂ, ಕೆಲವು ದಿನಗಳಿಂದ ಅಸೌಖ್ಯಗೊಂಡಿದ್ದು, ಬುಧವಾರ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಕಾಡಿನಲ್ಲಿರುವ ಐರೋಳ್ ಹಣ್ಣು ತಿಂದು  ಮೃತಪಟ್ಟ ವ್ಯಕ್ತಿ Read More »

ಪ್ರಖ್ಯಾತ ಹೃದ್ರೋಗ ತಜ್ಞ ಡಾ. ಕೆ. ಎಂ. ಚೆರಿಯನ್ ನಿಧನ

ಬೆಂಗಳೂರು : ಖ್ಯಾತ ಹೃದ್ರೋಗ ತಜ್ಞ, ಹೆಸರುವಾಸಿಯಾದ ಪ್ರಖ್ಯಾತ ಶಸ್ತ್ರ ಚಿಕಿತ್ಸಕ ಡಾ. ಕೆ. ಎಂ. ಚೆರಿಯನ್ ಬೆಂಗಳೂರಿನಲ್ಲಿ ಭಾನುವಾರ ನಿಧನರಾಗಿದ್ದಾರೆ. ಡಾ. ಚೆರಿಯನ್ ಫ್ರಾಂಟಿಯರ್ ಲೈಫ್ಲೈನ್ ಮತ್ತು ಡಾ.ಚೆರಿಯನ್ ಹಾರ್ಟ್ ಫೌಂಡೇಶನ್ ನ್ನು ಸ್ಥಾಪಿಸಿದರು. ಅವರು 1991 ರಲ್ಲಿ ಪದ್ಮಶ್ರೀ ಸೇರಿದಂತೆ ವಿವಿಧ ಪ್ರಶಸ್ತಿಗಳನ್ನು ಪಡೆದಿದ್ದಾರೆ. 1975 ರಲ್ಲಿ ಚೆನ್ನೈನ ಪೆರಂಬೂರಿನ ದಕ್ಷಿಣ ರೈಲ್ವೆ ಪ್ರಧಾನ ಕಚೇರಿ ಆಸ್ಪತ್ರೆಯಲ್ಲಿ ಭಾರತದ ಮೊದಲ ಯಶಸ್ವಿ ಪರಿಧಮನಿ ಅಪಧಮನಿ ಬೈಪಾಸ್ ಶಸ್ತ್ರಚಿಕಿತ್ಸೆ ನಡೆಸಿದ್ದರು. ಮೊದಲ ಹೃದಯ-ಶ್ವಾಸಕೋಶ ಕಸಿ, ಮೊದಲ

ಪ್ರಖ್ಯಾತ ಹೃದ್ರೋಗ ತಜ್ಞ ಡಾ. ಕೆ. ಎಂ. ಚೆರಿಯನ್ ನಿಧನ Read More »

ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ನಿಧನ

ಮಂಗಳೂರು : ಹಿರಿಯ ಪತ್ರಕರ್ತ, ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರ ಗುರುವಪ್ಪ ಬಾಳೆಪುಣಿ (62) ಅಲ್ಪಕಾಲದ ಅಸೌಖ್ಯದಿಂದ ಇಂದು ಬಾಳೆಪುಣಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಬಾಳೆಪುಣಿ ಅವರು 26 ವರ್ಷ ಹೊಸದಿಗಂತ ಪತ್ರಿಕೆಯ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದರು. ಮಂಗಳೂರು ಮಿತ್ರ , ಕರಾವಳಿ ಅಲೆ ಪತ್ರಿಕೆಗಳಲ್ಲಿಯೂ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದರು. ಹರೇಕಳ ಹಾಜಬ್ಬ ಅವರನ್ನು

ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ನಿಧನ Read More »

error: Content is protected !!
Scroll to Top