ನಿಧನ

ನೇಣುಬಿಗಿದು ಯುವತಿ ಆತ್ಮಹತ್ಯೆ

ಬ್ರಹ್ಮಾವರ : ಯುವತಿಯೋರ್ವಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಕುಟುಂಬದ ಆರ್ಥಿಕ ಪರಿಸ್ಥಿತಿಯಿಂದ ಮನನೊಂದು ಅತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸೆಲಿನ್ ಡಿಸೋಜ(46) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಮಾ.9ರಂದು ಸಂಜೆ ಮನೆಯ ಹಾಲ್‌ನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೇಣುಬಿಗಿದು ಯುವತಿ ಆತ್ಮಹತ್ಯೆ Read More »

ಮನನೊಂದ ಡೆಂಟಲ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು  | ಪುತ್ತೂರಿನ ಯುವಕ ನಾಪತ್ತೆ |  ಪ್ರಕರಣ ದಾಖಲು

ಪುತ್ತೂರು:  ಸುಳ್ಯದ ಡೆಂಟಲ್ ಕಾಲೇಜಿನಲ್ಲಿ ಓದುತ್ತಿದ್ದ ಯುವತಿಯೊಬ್ಬಳು ವಸತಿ ಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ತೆಲಸಂಗ ಗ್ರಾಮದ ಕೃತಿಕಾ ಸಿದ್ದಣ್ಣ ನಿಡೋಣಿ ಆತ್ಮಹತ್ಯೆ ಮಾಡಿಕೊಂಡ ಯುವತಿ ಎನ್ನಲಾಗಿದೆ. ಮೃತಳ ತಂದೆ ನೀಡಿದ ದೂರಿನ ಮೇರೆಗೆ ಪುತ್ತೂರಿನ ನವೀನ್ ಮತ್ತು ವಸತಿ ಗ್ರಹದ ಮೇಲ್ವಿಚಾರಕಿ ತಾರ ಕುಮಾರಿ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಯುವತಿಗೆ ಪುತ್ತೂರಿನ ನವೀನ್ ಎಂಬಾತ ಪದೇ ಪದೇ ಕರೆ ಮಾಡಿ ತೊಂದರೆ ನೀಡಿ ಫೋಟೋ ವಿಡಿಯೋಗಳನ್ನು ತಂದೆಗೆ

ಮನನೊಂದ ಡೆಂಟಲ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು  | ಪುತ್ತೂರಿನ ಯುವಕ ನಾಪತ್ತೆ |  ಪ್ರಕರಣ ದಾಖಲು Read More »

ಮುನ್ನೂರು ಗ್ರಾಮ ಪಂಚಾಯಿತಿ ಸದಸ್ಯ ಅಬ್ದುಲ್ ಆಜೀಜ್ ನಿಧನ

ತೊಕ್ಕೊಟ್ಟು : ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮ ಪಂಚಾಯಿತಿ ಸದಸ್ಯ ಆರ್.ಕೆ.ಸಿ. ಅಬ್ದುಲ್ ಆಜೀಜ್ (42) ಹೃದಯಾಘಾತದಿಂದ ಬುಧವಾರ ಸಂಜೆ ನಿಧಾನರಾದರು.   ಮುಂಬಯಿಗೆ ತೆರಳಿದ್ದ ಅವರು ರೈಲಿನಲ್ಲಿ ವಾಪಾಸಾಗುತ್ತಿದ್ದಾಗ ಕುಮಟಾ ಬಳಿ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದರು. ಕುತ್ತಾರು ಮದನಿ ನಗರದ ನಿವಾಸಿಯಾಗಿದ್ದ ಅಬ್ದುಲ್ ಆಜೀಜ್ ರಸ್ತೆ ನಿರ್ಮಾಣ ಗುತ್ತಿಗೆ ಸಂಸ್ಥೆ ಆರ್ ಕೆ ಸಿ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲಕರ ಪುತ್ರರಾಗಿದ್ದ ಅವರು ಉದ್ಯಮಿಯಾಗಿ ಯುವಕರಿಗೆ  ಹೊಸ ಹೊಸ ಉದ್ಯೋಗವಕಾಶ ಕಲ್ಪಿಸಿ ಕೊಟ್ಟಿದ್ದರು. ತನ್ನ ಮಾಲೀಕತ್ವದಲ್ಲಿದ್ದ ನಾಟೇಕಲ್ ಸಮೀಪದ

ಮುನ್ನೂರು ಗ್ರಾಮ ಪಂಚಾಯಿತಿ ಸದಸ್ಯ ಅಬ್ದುಲ್ ಆಜೀಜ್ ನಿಧನ Read More »

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ನಿವೃತ್ತ ಡಿಎಫ್ ಓ ಎನ್. ಪದ್ಮನಾಭ ಮಾಣಿಂಜ ನಿಧನ 

ಬೆಳ್ತಂಗಡಿ: ಕುಕ್ಕಿನಡ್ಡ ಕುಟುಂಬ ಮನೆತನದ ಹಿರಿಯ ತಲೆ, ನಿವೃತ್ತ ಡಿಎಫ್ ಓ, ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್. ಪದ್ಮನಾಭ ಮಾಣಿಂಜ (87) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಗುರುವಾರ ಮುಂಜಾನೆ ನಿಧನರಾದರು. ಮಾಜಿ ಶಾಸಕ ಕೆ.ವಸಂತ ಬಂಗೇರರೊಂದಿಗೆ ಉತ್ತಮ ಸಂಬಂಧ ಹೊಂದಿದ ಅವರು, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಸಂಘದ ಸರ್ವತೋಮುಖ ಬೆಳವಣಿಗೆಗೆ ಸಹಕರಿಸಿದ್ದರು.ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಪ್ರಗತಿಯ ಹಿಂದೆ ಪದ್ಮನಾಭ

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ನಿವೃತ್ತ ಡಿಎಫ್ ಓ ಎನ್. ಪದ್ಮನಾಭ ಮಾಣಿಂಜ ನಿಧನ  Read More »

ಆಟೋ ಚಾಲಕ ಕೃಷ್ಣ  ಆತ್ಮಹತ್ಯೆ

ಪುತ್ತೂರು : ಪರಿಯತ್ತೋಡಿ ನಿವಾಸಿಯಾದ ಆಟೋ ಚಾಲಕನೋರ್ವ ಮನೆಯ ಬಳಿಯಲ್ಲಿ  ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ನಡೆದಿದೆ. ಪೆರಿಯತ್ತೋಡಿ ದಿ.ಹುಕ್ರಪ್ಪ ಗೌಡ ಅವರ ಪುತ್ರ ಕೃಷ್ಣ(40)ರವರು ಆತ್ಮಹತ್ಯೆ ಮಾಡಿಕೊಂಡವರು ಎನ್ನಲಾಗಿದೆ. ಬೆಳಿಗ್ಗೆ ಅವರು ರಿಕ್ಷಾದಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ದಿದ್ದರು. ಮಧ್ಯಾಹ್ನದ ವೇಳೆ ಸಾಲ ವಸೂಲಿಗಾರರ ಕರೆ ಬಂದಿತ್ತು. ಅದಾದ ಬಳಿಕ ಮೃತ ಕೃಷ್ಣ ಅವರು ಮನೆಯ ಬಳಿಯ ಮರವೊಂದರ ಗೆಲ್ಲಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಸಹೋದರರಾದ ಕುಶಾಲಪ್ಪ, ರಿಕ್ಷಾ ಚಾಲಕ ಶಿವರಾಮ,

ಆಟೋ ಚಾಲಕ ಕೃಷ್ಣ  ಆತ್ಮಹತ್ಯೆ Read More »

ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ಪಡಂಗಡಿ : ನವವಿವಾಹಿತೆ ನೇಣುಬಿಗಿದುಕೊಂಡಿರುವ ಘಟನೆ ಮಾ.1ರಂದು ಬೆಂಗಳೂರಿನಲ್ಲಿರುವ ಸಂಬಂದಿಕರ ಮನೆಯಲ್ಲಿ ನಡೆದಿದೆ. ನೇಣುಬಿಗಿದು ಆತ್ಮೆಹತ್ಯೆ ಮಾಡಿಕೊಂಡವರು ಪಡಂಗಡಿ ಗ್ರಾಮದ ಬದ್ಯಾರು ಬರಾಯ ಮನೆ ನಿವಾಸಿ ಪ್ರಕಾಶ್ ರವರ ಪತ್ನಿ ಪೂಜಾಶ್ರೀ ಎನ್ನಲಾಗಿದೆ. ಕೆಲಸ ಹುಡುಕುತ್ತಿದ್ದ ಪೂಜಾಶ್ರೀಯರನ್ನು ಪತಿ ಪ್ರಕಾಶ್ ರವರು ಬೆಂಗಳೂರಿನಲ್ಲಿರುವ ತನ್ನ ಸಂಬಂಧಿಕರ ಮನೆಗೆ ಕಳುಹಿಸಿದ್ದರು. ಪ್ರಕಾಶ್‌ ಬದ್ಯಾರು ಗ್ರಾಮದ ಬರಾಯದ ತಮ್ಮ ಮನೆಯಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದರು.  ಪೂಜಾ ಮೂಲತಃ ಕಣಿಯೂರು ಗ್ರಾಮದ ನೆಲ್ಲಿ ಬಾಕಿಮಾರು ಮನೆಯ ವಾರಿಜ ಹಾಗೂ ಸೇಸಪ್ಪ ಪೂಜಾರಿ

ಮಹಿಳೆ ನೇಣು ಬಿಗಿದು ಆತ್ಮಹತ್ಯೆ Read More »

ಸೋಜಾ ಮೆಟಲ್ಸ್ ಮಾಲಕ ಅಲೆಕ್ಸ್ ಮಿನೇಜಸ್ ನಿಧನ

ಪುತ್ತೂರು: ಸೋಜಾ ಮೆಟಲ್ಸ್ ಮಾಲಕ ಅಲೆಕ್ಸ್ ಮಿನೇಜಸ್ ಅನಾರೋಗ್ಯದಿಂದ ಶುಕ್ರವಾರ ಬೆಳಿಗ್ಗೆ ಇಂದು ನಿಧನರಾಗಿದ್ದಾರೆ. ಅಲ್ಪಕಾಲದ ಅನಾರೋಗ್ಯದಿಂದ ಇಂದು ಬೆಳಿಗ್ಗೆ ನಿಧನರಾದರು. ಮೃತರು ಪತ್ನಿ ಹಾಗೂ ಮೂರು ಮಕ್ಕಳನ್ನು ಅಗಲಿದ್ದಾರೆ.

ಸೋಜಾ ಮೆಟಲ್ಸ್ ಮಾಲಕ ಅಲೆಕ್ಸ್ ಮಿನೇಜಸ್ ನಿಧನ Read More »

ಕೆರೆಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆ

ಉಪ್ಪಿನಂಗಡಿ: ತನ್ನದೇ ಮನೆಯ ತೋಟದ ಕೆರೆಗೆ ಹಾರಿ ಯುವಕನೋರ್ವ  ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕದಲ್ಲಿ ನಡೆದಿದೆ. ಕಿಂಡೋವು ಜಿನ್ನಪ್ಪ ಗೌಡ ಎಂಬವರ ಪುತ್ರ ಶ್ರೀನಿವಾಸ ಆತ್ಮಹತ್ಯೆ ಮಾಡಿಕೊಂಡ ಯುವಕ. ಕೂಲಿ ಕಾರ್ಮಿಕನಾಗಿದ್ದ ಶ್ರೀನಿವಾಸ ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದು, ಮಂಗಳವಾರ ಮುಂಜಾನೆ ಆತನ ಶವ ತೋಟದಲ್ಲಿನ ಕೆರೆಯಲ್ಲಿ ಪತ್ತೆಯಾಗಿತ್ತು. ಈತನ ಸಾವಿಗೆ ಕಾರಣ ತಿಳಿದುಬಂದಿಲ್ಲ. ಉಪ್ಪಿನಂಗಡಿ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಕೆರೆಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆ Read More »

ಡಾ. ಸುರೇಶ್‍ ಪುತ್ತೂರಾಯರಿಗೆ ಮಾತೃವಿಯೋಗ

ಪುತ್ತೂರು: ಮಹಾವೀರ ಆಸ್ಪತ್ರೆಯ ಖ್ಯಾತ ವೈದ್ಯರಾದ ಡಾ.ಸುರೇಶ್ ಪುತ್ತೂರಾಯರವರ ತಾಯಿ ಸುನಂದಾ ಪುತ್ತೂರಾಯ (82 ವ.) ಅವರು ಮುಂಬಯಿಯಲ್ಲಿರುವ ಹಿರಿಯ ಪುತ್ರನ ಮನೆಯಲ್ಲಿ ಫೆ.25ರಂದು ಸಂಜೆ ನಿಧನರಾದರು. ಸುನಂದಾರವರು ಕಿರಿಯ ಪುತ್ರ ಡಾ.ಸುರೇಶ್ ಪುತ್ತೂರಾಯ ರವರ ಮನೆಯಲ್ಲಿ ವಾಸವಿದ್ದು, ಕೆಲ ತಿಂಗಳ ಹಿಂದೆ ಮುಂಬಯಿಯಲ್ಲಿ ಇಂಜಿನಿಯರ್ ಆಗಿರುವ ಹಿರಿಯ ಪುತ್ರ ಗೋಪಾಲಕೃಷ್ಣರವರ ಮನೆಗೆ ತೆರಳಿದ್ದರು. ಮೃತರು ಪುತ್ರರಾದ ಗೋಪಾಲಕೃಷ್ಣಪುತ್ತೂರಾಯ. ಡಾ.ಸುರೇಶ್ ಪುತ್ತೂರಾಯ, ಪುತ್ರಿಯರಾದ ಶಶಿಕಲಾ ಸಾಮಗ ಉಡುಪಿ, ಧರ್ಮಸ್ಥಳ ಎಸ್‌.ಡಿ.ಎಂ ಕಾಲೇಜಿನ ಸಹ ಪ್ರಾಧ್ಯಾಪಕಿ ಹರಿಣಿ ಪುತ್ತೂರಾಯ,

ಡಾ. ಸುರೇಶ್‍ ಪುತ್ತೂರಾಯರಿಗೆ ಮಾತೃವಿಯೋಗ Read More »

ಮಹಡಿಯಿಂದ ಬಿದ್ದು ವ್ಯಕ್ತಿ ಮೃತ್ಯು

ಉಡುಪಿ: ಅಪಾರ್ಟ್‌ಮೆಂಟ್ ನ 14ನೇ ಮಹಡಿಯಿಂದ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಮಂಗಳವಾರ ಬ್ರಹ್ಮಗಿರಿಯಲ್ಲಿ ಮಧ್ಯಾಹ್ನ ನಡೆದಿದೆ. ಮೃತಪಟ್ಟವರು ಲೇಖಿರಾಜ್ (29) ಎನ್ನಲಾಗಿದೆ. ಮೃತರು ಲೇಖಿರಾಜ್ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಅಧ್ಯಕ್ಷ ವೈ.ಸುಧೀರ್ ಅವರ ಪುತ್ರ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದರು ತಿಳಿದು ಬಂದಿದೆ. ಘಟನೆಗೆ ಸಂಬಂಧ ಪಟ್ಟಂತೆ ನಿಖರ ಕಾರಣ ತಿಳಿದುಬರಬೇಕಿದೆ. ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸ್‌ ಠಾಣೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪೊಲೀಸರು ಈ ನಿಟ್ಟಿನಲ್ಲಿ ತನಿಖೆಯನ್ನು ಮುಂದುವರಿಸಿದ್ದಾರೆ.

ಮಹಡಿಯಿಂದ ಬಿದ್ದು ವ್ಯಕ್ತಿ ಮೃತ್ಯು Read More »

error: Content is protected !!
Scroll to Top