ನಿಧನ

ಆಸ್ಪತ್ರೆ ಕಟ್ಟಡ ಮಹಡಿಯಿಂದ ಜಿಗಿದು ಆತ್ಮಹತ್ಯೆ !

ಪುತ್ತೂರು: ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ತಿಂಗಳಾಡಿ ಮೂಲದ ಕೂಲಿ ಕಾರ್ಮಿಕ ವಸಂತ ಆತ್ಮಹತ್ಯೆ ಮಾಡಿಕೊಂಡವರು. ವಸಂತ ಅವರು ಫಿಟ್ಸ್ ಕಾಯಿಲೆಯಿಂದ ಬಳಲುತ್ತಿದ್ದು, ಮೂರು ದಿನಗಳ ಹಿಂದೆ ಚಿಕಿತ್ಸೆಗಾಗಿ ಸುಳ್ಯ ಕೆವಿಜಿ ಆಯುರ್ವೇದಿಕ್‌ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಮುಂಜಾನೆ ಆರು ಗಂಟೆ ಸುಮಾರಿಗೆ ಆಸ್ಪತ್ರೆಯ ಕಟ್ಟಡದ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯರನ್ನು ಅಗಲಿದ್ದಾರೆ. ಸುಳ್ಯ ಸರ್ಕಾರಿ […]

ಆಸ್ಪತ್ರೆ ಕಟ್ಟಡ ಮಹಡಿಯಿಂದ ಜಿಗಿದು ಆತ್ಮಹತ್ಯೆ ! Read More »

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜೇಷ್ಠ ಕಾರ್ಯಕರ್ತ ಗೋಪಾಲ ಚೆಟ್ಟಿಯಾರ್ ನಿಧನ

ಪೆರ್ಲ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಜೇಷ್ಠ ಕಾರ್ಯಕರ್ತ  ಪೆರ್ಲದ ಗೋಪಾಲ ಚೆಟ್ಟಿಯಾರ್ ( 78) ಇಂದು ನಿಧನ ಹೊಂದಿದ್ದಾರೆ. ಕಳೆದ ಐದು ದಶಕಗಳಿಂದ ವಿಭಾಗ, ಪ್ರಾಂತ, ಕ್ಷೇತ್ರೀಯ ಸ್ಥರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ಮುನ್ನಡೆಸಿದ್ದಾರೆ. ಮೂಲತಃ ಕೇರಳದ ಪೆರ್ಲದವರಾಗಿದ್ದ ಅವರು ವಿದ್ಯಾರ್ಥಿ ಜೀವನದಲ್ಲೇ  ಸಂಘದ ಸ್ವಯಂ ಸೇವಕರಾಗಿ, ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದರು. ತಹಸೀಲ್ದಾರರಾಗಿದ್ದ ಅವರು ನಿವೃತ್ತಿ ಬಳಿಕ ಪೂರ್ಣ ಪ್ರಮಾಣದಲ್ಲಿ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜೇಷ್ಠ ಕಾರ್ಯಕರ್ತ ಗೋಪಾಲ ಚೆಟ್ಟಿಯಾರ್ ನಿಧನ Read More »

ನವೀನ್ ಕಿಶೋರ್ ಹೃದಯಾಘಾತದಿಂದ ನಿಧನ

ಪುತ್ತೂರು: ಸುದ್ದಿ ಬಿಡುಗಡೆ ಪತ್ರಿಕೆಯ ಸಿಬ್ಬಂದಿ ಕುದ್ದುಪದವು ನಿವಾಸಿ ನವೀನ್ ಕಿಶೋರ್ ಎಂಬವರು ಜ.30 ರ ನಸುಕಿನ ಜಾವ ಹೃದಯಾಘಾತದಿಂದ ನಿಧನರಾದರು. ಜ.29ರ ಸಂಜೆ ಮನೆಗೆ ಹೋದವರು ರಾತ್ರಿ ಹೃದಯಾಘಾತಕ್ಕೀಡಾಗಿದ್ದಾರೆ. ತಡ ರಾತ್ರಿ 2 ಗಂಟೆ ಸುಮಾರಿಗೆ ಅವರ ಸಹೋದರ ಎಚ್ಚರಗೊಂಡಾಗ ನವೀನ್ ಕಿಶೋ‌ರ್ ಅವರು  ಕುಸಿದು ಬಿದ್ದಿರುವುದು ಬೆಳಕಿಗೆ ಬಂದಿದೆ. ತಕ್ಷಣ ಮನೆ ಮಂದಿ ಮತ್ತು ಸ್ಥಳೀಯರು ಸೇರಿ ವಿಟ್ಲ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ನವೀನ್ ಕಿಶೋ‌ರ್ ಆಗಲೇ ಮೃತಪಟ್ಟಿದ್ದರು.  ಮೃತರು ತಾಯಿ ಪದ್ಮನಿ, ಸಹೋದರ

ನವೀನ್ ಕಿಶೋರ್ ಹೃದಯಾಘಾತದಿಂದ ನಿಧನ Read More »

ಮಹೇಶ್ ಶೆಟ್ಟಿ ತಿಮರೋಡಿಗೆ ಮಾತೃವಿಯೋಗ

ಬೆಳ್ತಂಗಡಿ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕ, ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರ ತಾಯಿ ಅಮಣಿ ಶೆಟ್ಟಿ ನಿಧನರಾಗಿದ್ದಾರೆ. 85 ವರ್ಷ ಪ್ರಾಯದ ಅಮಣಿ ಶೆಟ್ಟಿಯವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮೃತರು ಪುತ್ರ ಮಹೇಶ್ ಶೆಟ್ಟಿ ತಿಮರೋಡಿ ಸಹಿತ ಐವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿಗೆ ಮಾತೃವಿಯೋಗ Read More »

ನಿವೃತ್ತ ಪ್ರಾಂಶುಪಾಲ ವಿಶ್ವನಾಥ ಶೆಟ್ಟಿ ನಿಧನ

ಪುತ್ತೂರು: ನಿವೃತ್ತ ಪ್ರಾಂಶುಪಾಲ ಕಲ್ಲಾರೆ ನಿವಾಸಿ ವಿಶ್ವನಾಥ ಶೆಟ್ಟಿ (78) ಇಂದು ನಿಧನರಾದರು. ವಿಶ್ವನಾಥ ಶೆಟ್ಟಿಯವರು ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜ್‌ನಲ್ಲಿ ಉಪನ್ಯಾಸಕರಾಗಿ ಬಳಿಕ ಬಂಟ್ವಾಳ ತಾಲೂಕಿನ ವಾಮದಪದವು ಜೂನಿಯ‌ರ್ ಕಾಲೇಜ್‌ನಲ್ಲಿ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ವಿಶ್ವನಾಥ ಶೆಟ್ಟಿಯವರ ಪುತ್ರ ಕಳೆದ ಒಂದು ವರ್ಷಗಳ ಹಿಂದೆ ಹೃದಯಾಘಾತದಿಂದ  ನಿಧನರಾಗಿದ್ದರು.

ನಿವೃತ್ತ ಪ್ರಾಂಶುಪಾಲ ವಿಶ್ವನಾಥ ಶೆಟ್ಟಿ ನಿಧನ Read More »

ಅನಾರೋಗ್ಯದಿಂದಿದ್ದ ಯುವತಿ ಐಶ್ವರ್ಯ ನಿಧನ

ಪುತ್ತೂರು: ಕಲ್ಲೇಗ ರಕ್ತೇಶ್ವರಿ ವಠಾರ ನಿವಾಸಿ ಐಶ್ವರ್ಯ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಇಂಜಿನಿಯರಿಂಗ್‍ ಪದವೀಧರೆಯಾಗಿರುವ ಐಶ್ವರ್ಯ ಹಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯತ್ತಿದ್ದರು ಎನ್ನಲಾಗಿದೆ. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರು ಮನೆಯವರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

ಅನಾರೋಗ್ಯದಿಂದಿದ್ದ ಯುವತಿ ಐಶ್ವರ್ಯ ನಿಧನ Read More »

ಪಿಎಲ್‍ ಡಿ ಬ್ಯಾಂಕ್‍ ಮಾಜಿ ಅಧ್ಯಕ್ಷ ಹಸಂತಡ್ಕ ರಾಮ ಭಟ್‍ ನಿಧನ

ಪುತ್ತೂರು: ಬಜರಂಗದಳ ಪ್ರಾಂತ ಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಅವರ ತಂದೆ ಹಸಂತಡ್ಕ ರಾಮ ಭಟ್ ಜ.21 ಭಾನುವಾರ ತಡರಾತ್ರಿ ನಿಧನರಾಗಿದ್ದಾರೆ. ಪಿಎಲ್‍ಡಿ ಬ್ಯಾಂಕ್‍ ಮಾಜಿ ಅಧ್ಯಕ್ಷರಾಗಿದ್ದ ಅವರು, ಸಂಘ ಪರಿವಾರದ ಹಿರಿಯ ಕಾರ್ಯಕರ್ತರಾಗಿದ್ದರು. ಅವರು ಈ ಹಿಂದೆ ಪುತ್ರನ ವಿವಾಹ ಸಂದರ್ಭದಲ್ಲಿ ನೇತ್ರದಾನ ಮಾಡುವ ಕುರಿತು ನೋಂದಾವಣೆ ಮಾಡಿದ್ದರು. ಅದರಂತೆ ಭಾನುವಾರ ರಾತ್ರಿ ಮಂಗಳೂರಿನಿಂದ ನೇತ್ರ ತಜ್ಞರು ಆಗಮಿಸಿದ್ದರು. ಮೃತರರು ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಪಿಎಲ್‍ ಡಿ ಬ್ಯಾಂಕ್‍ ಮಾಜಿ ಅಧ್ಯಕ್ಷ ಹಸಂತಡ್ಕ ರಾಮ ಭಟ್‍ ನಿಧನ Read More »

ಬೆದ್ರಾಳ ನಂದಿಕೇಶ್ವರ ಭಜನಾ ಮಂದಿರ ಸ್ಥಾಪಕಾಧ್ಯಕ್ಷ ಶ್ರೀಪಾಲ್ ಜೈನ್ ನಿಧನ

ಪುತ್ತೂರು: ಬೆದ್ರಾಳ ನಂದಿಕೇಶ್ವರ ಭಜನಾ ಮಂದಿರದ ಸ್ಥಾಪಕಾಧ್ಯಕ್ಷ ಶ್ರೀಪಾಲ್ ಜೈನ್ (74) ನಿಧನರಾಗಿದ್ದಾರೆ. ಕೊಡುಗೈ ದಾನಿಯಾಗಿದ್ದ ಅವರು, ಸರಳ, ಸಜ್ಜನಿಕೆ ವ್ಯಕ್ತಿಯಾಗಿದ್ದರು. ಸಾಮಾಜಿಕ, ಧಾರ್ಮಿಕ ಮುಖಂಡರಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು, ಸೊಸೆಯಂದಿರನ್ನು ಅಗಲಿದ್ದಾರೆ.

ಬೆದ್ರಾಳ ನಂದಿಕೇಶ್ವರ ಭಜನಾ ಮಂದಿರ ಸ್ಥಾಪಕಾಧ್ಯಕ್ಷ ಶ್ರೀಪಾಲ್ ಜೈನ್ ನಿಧನ Read More »

ಮೋದಿ ಹುಟ್ಟುಹಬ್ಬದಂದು ಉಚಿತ ಸೇವೆ ನೀಡುತ್ತಿದ್ದ ಸೆಲೂನ್ ಬಾಲ ನಿಧನ

ಪುತ್ತೂರು: ದೂರದ ತಮಿಳ್ನಾಡಿನಲ್ಲಿ ಜನಿಸಿ ಪುತ್ತೂರಿನ ಸಂಟ್ಯಾರ್ ನಲ್ಲಿ ಸೆಲೂನ್ ಬಾಲ ಅಣ್ಣಾ ಎಂದೇ ಖ್ಯಾತರಾಗಿದ್ದ ಬಾಲ ಅವರು ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ.ಎಲ್ಲರಿಗೂ ಚಿರಪರಿಚಿತರಾಗಿ ತನ್ನ ಕಾಯಕವನ್ನು ನಿಷ್ಠೆಯಿಂದ ಪ್ರೀತಿಯಿಂದ ಮಾಡುತ್ತಿರುವ ಬಾಲಾ ಅವರು ಜ. 07ರಂದು ಸ್ವಗೃಹ ದಲ್ಲಿ ಹೃದಯಘಾತದಿಂದ ನಿಧನ ರಾಗಿದ್ದಾರೆ. ಅಪ್ಪಟ ದೇಶಪ್ರೇಮಿಯಾಗಿರುವ ಬಾಲ ಅವರು ನರೇಂದ್ರ ಮೋದಿಯ ಅಪ್ಪಟ ಅಭಿಮಾನಿ. ಪ್ರಧಾನ ಮಂತ್ರಿ ನರೇಂದ್ರ ಮೋದಿಯ ಹುಟ್ಟುಹಬ್ಬದಂದು ತನ್ನ ಸೆಲೂನ್ ನಲ್ಲಿ ಎಲ್ಲರಿಗೂ ಉಚಿತವಾಗಿ ಹೇರ್ ಕಟ್ಟಿಂಗ್ ಮಾಡಿಸುತ್ತಿದ್ದರು ಎಂದು ಸ್ಥಳೀಯರು

ಮೋದಿ ಹುಟ್ಟುಹಬ್ಬದಂದು ಉಚಿತ ಸೇವೆ ನೀಡುತ್ತಿದ್ದ ಸೆಲೂನ್ ಬಾಲ ನಿಧನ Read More »

ಎಡಕ್ಕಾನ ಗಣಪತಿ ಭಟ್ ನಿಧನ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಅಯ್ಯಪ್ಪ ಗುಡಿಯ ಮಾಜಿ ಅರ್ಚಕ ಸುಳ್ಯ ತಾಲೂಕಿನ ಕಲ್ಮಡ್ಕ ನಿವಾಸಿ ಎಡಕ್ಕಾನ ಗಣಪತಿ  ಭಟ್ (79) ಶನಿವಾರ ನಿಧನರಾದರು. ಕಲ್ಮಡ್ಕದ ಎಡಕ್ಕಾನ ನಿವಾಸಿಯಾಗಿರುವ ಮೃತರು ಹಲವು ವರ್ಷಗಳ ಕಾಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಯ್ಯಪ್ಪ ಗುಡಿಯಲ್ಲಿ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ್ದರು. ಇತ್ತೀಚೆಗೆ ಅಸೌಖ್ಯದಿಂದ ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯನ್ನು ಅಗಲಿದ್ದಾರೆ.

ಎಡಕ್ಕಾನ ಗಣಪತಿ ಭಟ್ ನಿಧನ Read More »

error: Content is protected !!
Scroll to Top