ನಿಧನ

ತುಳು ರಂಗಭೂಮಿ ಕಲಾವಿದ ಸುರೇಶ್‍ ವಿಟ್ಲ ನಿಧನ

ವಿಟ್ಲ: ತುಳು ರಂಗ ಭೂಮಿ ಕಲಾವಿದ, ಮಂಜೇಶ್ವರ ಶಾರದಾ ಆರ್ಟ್ಸ್ನ ಕಲಾವಿದ ಸುರೇಶ್ ವಿಟ್ಲ ಇಂದು ನಿಧನ ಹೊಂದಿದರು. ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರಿಗೆ ಹೆಚ್ಚಿನ ಚಿಕಿತ್ಸೆಗೆ ಕರೆದೊಯ್ಯಲಾಯಿತಾದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರು ಪತ್ನಿ, ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ತುಳು ರಂಗಭೂಮಿ ಕಲಾವಿದ ಸುರೇಶ್‍ ವಿಟ್ಲ ನಿಧನ Read More »

ಬಾಲಿವುಡ್‌ನ ಹಿರಿಯ ನಟ, ನಿರ್ದೇಶಕ ಮನೋಜ್‌ ಕುಮಾರ್‌ ನಿಧನ

ರಾಷ್ಟ್ರಪ್ರೇಮದ ಚಿತ್ರಗಳಿಂದ ಪ್ರಸಿದ್ಧರಾಗಿದ್ದ ಮನೋಜ್‌ ಕುಮಾರ್‌ ಮುಂಬಯಿ: ಬಾಲಿವುಡ್‌ನ ಹಿರಿಯ ನಟ ಹಾಗೂ ನಿರ್ದೇಶಕ ಮನೋಜ್ ಕುಮಾರ್ ಇಂದು ನಸುಕಿನ ವೇಳೆ ನಿಧನ ಹೊಂದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಹಲವು ಸಮಯದಿಂದ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಾ ಇದ್ದರು. ಅವರು ರಾಷ್ಟ್ರಪ್ರೇಮದ ಸಿನಿಮಾಗಳಿಗೆ ಹೆಸರುವಾಸಿಯಾಗಿದ್ದರು. ಈ ಕಾರಣಕ್ಕೆ ಅವರಿಗೆ ‘ಭಾರತ್ ಕುಮಾರ್’ ಎಂಬ ಹೆಸರು ಇತ್ತು.ಮನೋಜ್ ಕುಮಾರ್ ಅವರನ್ನು ಕೆಲ ವಾರಗಳ ಹಿಂದೆ ಮುಂಬಯಿಯ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಂದು ಮುಂಜಾನೆ

ಬಾಲಿವುಡ್‌ನ ಹಿರಿಯ ನಟ, ನಿರ್ದೇಶಕ ಮನೋಜ್‌ ಕುಮಾರ್‌ ನಿಧನ Read More »

ಬೈಕ್‍ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ  ಮಹಿಳೆ

ಉಡುಪಿ : ರಸ್ತೆಯಲ್ಲಿ ನಡೆದುಕೊಂಡು ಹೋದ ಮಹಿಳೆಯೋರ್ವಳಿಗೆ ಬೈಕ್‍ ಸವಾರ ಡಿಕ್ಕಿಹೊಡೆದು, ಸ್ಥಳದಲ್ಲೇ ಮೃತ ಪಟ್ಟ ಘಟನೆ ನಡೆದಿದೆ. ಮೃತ ಮಹಿಳೆ ಮೇರಿವಾಜ್ ಮಿಯಾರು ನಿವಾಸಿಯಾಗಿದ್ದು ರಸ್ತೆ ಬದಿ ನಡೆದುಕೊಂಡು ಬರುತ್ತಿರುವಾಗಲೇ ಹಿ೦ಬದಿಯಿ೦ದ ವೇಗವಾಗಿ ಬಂದ ಬೈಕ್ ಸವಾರ ಸಂತೋಷ್ ಎಂಬವರು ಮಹಿಳೆಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಡಿಕ್ಕಿ ರಭಸಕ್ಕೆ ಮಹಿಳೆ ಕೆಲ ದೂರ ಹೋಗಿ ಬಿದ್ದಿದ್ದು ಅಪಘಾತದ ಭೀಕರತೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ಬೈಕ್ ಸವಾರ ಸಂತೋಷ್ ಕೂಡ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತದ

ಬೈಕ್‍ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ  ಮಹಿಳೆ Read More »

ಆಲೋವೆರಾ ಜ್ಯೂಸ್ ಎಂದು ತಿಳಿದು ಕ್ರಿಮಿನಾಶಕ ಸೇವಿಸಿದ ಬಾಲಕಿ | ಚಿಕಿತ್ಸೆ ಫಲಿಸದೆ ಬಾಲಕಿ ಮೃತ್ಯು

ಬೆಂಗಳೂರು : ಆಲೋವೆರಾ ಜ್ಯೂಸ್ ಎಂದು ತಪ್ಪಾಗಿ ತಿಳಿದು ಕ್ರಿಮಿನಾಶಕ ಸೇವಿಸಿದ ಬಾಲಕಿಯೋರ್ವಳು ಮೃತಪಟ್ಟಿರುವ ಘಟನೆ ಮೈಸೂರು ರಸ್ತೆಯ ಬ್ಯಾಟರಾಯನಪುರದಲ್ಲಿ ನಡೆದಿದೆ. ಮೃತಳು 9ನೇ ತರಗತಿಯ ವಿದ್ಯಾರ್ಥಿನಿ 11ನೇ ವರ್ಷದ ಬಾಲಕಿ ನಿಧಿ ಕೃಷ್ಣ ಎಂದು ಹೇಳಲಾಗಿದೆ. ಆರೋಗ್ಯ ಕಾಪಾಡಿಕೊಳ್ಳುವ ಸಲುವಾಗಿ ನಿಧಿ ಪ್ರತಿದಿನ ಅಲೋವೆರಾ ಜ್ಯೂಸ್ ಕುಡಿಯುತ್ತಿದ್ದಳು. ಆದರೆ, ಮನೆಯವರು ಅಲೋವೆರಾ ಜ್ಯೂಸ್‌ನ ಡಬ್ಬದಲ್ಲಿ ಗಿಡಗಳಿಗೆ ಬಳಸುವ ಹರ್ಬಿಸೈಡ್ ಎಂಬ ಕ್ರಿಮಿನಾಶಕ ಔಷಧವನ್ನು ತುಂಬಿದ್ದರು. ಇದರಿಂದ ಮಾ.18ರಂದು ಬಾಲಕಿ ಜ್ಯೂಸ್ ಎಂದು ಭಾವಿಸಿ ಈ ಕ್ರಿಮಿನಾಶಕವನ್ನು

ಆಲೋವೆರಾ ಜ್ಯೂಸ್ ಎಂದು ತಿಳಿದು ಕ್ರಿಮಿನಾಶಕ ಸೇವಿಸಿದ ಬಾಲಕಿ | ಚಿಕಿತ್ಸೆ ಫಲಿಸದೆ ಬಾಲಕಿ ಮೃತ್ಯು Read More »

ಮಹಾತ್ಮ ಗಾಂಧಿಯವರ ಮರಿ ಮೊಮ್ಮಗಳು ನೀಲಾಂಬೆನ್ ಪಾರಿಖ್  ನಿಧನ

ಗುಜರಾತ್ : ಮಹಾತ್ಮ ಗಾಂಧಿಯವರ ಮರಿ ಮೊಮ್ಮಗಳು ನೀಲಾಂಬೆನ್ ಪಾರಿಖ್ (92) ಮಂಗಳವಾರ ಬೆಳಿಗ್ಗೆ ನವಸಾರಿಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು. ನೀಲಾಂಬೆನ್, ಹರಿಲಾಲ್ ಗಾಂಧಿ ಮತ್ತು ಅವರ ಪತ್ನಿ ಗುಲಾಬ್ ಅವರ ಐದು ಮಕ್ಕಳಲ್ಲಿ ಹಿರಿಯವರಾದ ರಾಮಿಬೆನ್ ಅವರ ಮಗಳು,  ಅವರು ತಮ್ಮ 93 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದರು. ಅವರು ಮಹಾತ್ಮ ಗಾಂಧಿಯವರ ಮಗ ಹರಿದಾಸ್ ಗಾಂಧಿಯವರ ಮೊಮ್ಮಗಳು, ನೀಲಾಂಬೆನ್ ತಮ್ಮ ಮಗ ಡಾ. ಸಮೀರ್ ಪಾರಿಖ್ ಅವರೊಂದಿಗೆ ನವಸಾರಿ ಜಿಲ್ಲೆಯಲ್ಲಿ ವಾಸಿಸುತ್ತಿದ್ದರು.ಅವರ ಅಂತ್ಯಕ್ರಿಯೆಯ ಮೆರವಣಿಗೆ ಇಂದು

ಮಹಾತ್ಮ ಗಾಂಧಿಯವರ ಮರಿ ಮೊಮ್ಮಗಳು ನೀಲಾಂಬೆನ್ ಪಾರಿಖ್  ನಿಧನ Read More »

ಹೃದಯಾಘಾತದಿಂದ ಯುವಕ ಮೃತ್ಯು

ಪುತ್ತೂರು: ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಪೆರ್ನೆಯಲ್ಲಿ ಇಂದು ಸಂಜೆ ನಡೆದಿದೆ. ಪೆರ್ನೆ ನಿವಾಸಿ ವೃತ್ತಿಯಲ್ಲಿ ವೆಲ್ಡಿಂಗ್‍ ಕೆಲಸ ಮಾಡುತ್ತಿದ್ದ ನವೀನ್ ಕುಮಾರ್ (27) ಮೃತ ಯುವಕ. ಅವರು ಉತ್ತಮ ಕಬಡ್ಡಿ ಆಟಗಾರರೂ ಆಗಿದ್ದರು. ಮೃತರು ತಾಯಿ, ಸಹೋದರಿಯರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಹೃದಯಾಘಾತದಿಂದ ಯುವಕ ಮೃತ್ಯು Read More »

ತೆಂಕುತಿಟ್ಟಿನ ಹಿರಿಯ ಮದ್ಲೆಗಾರ ಬಿ.ಗೋಪಾಲಕೃಷ್ಣ ಕುರುಪ್ ನಿಧನ

ಯಕ್ಷಗಾನ ಕ್ಷೇತ್ರದಲ್ಲಿ ಭಾಗವತರಾಗಿ, ಮದ್ದಳೆಗಾರರಾಗಿ  ಮತ್ತು ಯಕ್ಷಗಾನದ ಪರಂಪರೆಯ ಬಗ್ಗೆ ಅಪೂರ್ವ ಜ್ಞಾನವನ್ನು ಹೊಂದಿದ್ದ  ರಾಜ್ಯ ಪ್ರಶಸ್ತಿ ಪುರಸ್ಕೃತ  ಬಿ.ಗೋಪಾಲಕೃಷ್ಣ ಕುರುಪ್ (90ವರ್ಷ) ಮಾರ್ಚ್ 19 ರಂದು ನಿಧನರಾದರು. ಚೆಂಡೆ-ಮದ್ದಲೆ ನುಡಿತಗಳಲ್ಲಿ ಅಪೂರ್ವಜ್ಞಾನವನ್ನು ಪಡೆದುಕೊಂಡಿದ್ದ ಕುರುಪರು ಅದನ್ನು ಪಠ್ಯರೂಪದಲ್ಲಿ ದಾಖಲಿಸಿದ ಮೊದಲಿಗರಾಗಿದ್ದರು. 1952 ರಲ್ಲಿ ಕೂಡ್ಲು ಮೇಳದಲ್ಲಿ ಪೂರ್ವರಂಗಕ್ಕೆ ಹಾಡುವ ಅವಕಾಶದೊಂದಿಗೆ ಮದ್ಲೆಗಾರ ಕುದ್ರೆಕೂಡ್ಲು ರಾಮಭಟ್ ಇವರ ಮಾರ್ಗದರ್ಶನದಲ್ಲಿ ಯಕ್ಷಗಾನ ಕ್ಷೇತ್ರದಲ್ಲಿ ಮುಂದುವರಿದರು.  ಹಿರಿಯ ಬಲಿಪ ನಾರಾಯಣ ಭಾಗವತ,  ಅಗರಿ ಶ್ರೀನಿವಾಸ ಭಾಗವತ,  ಕುದ್ರೆಕೂಡ್ಲು ರಾಮ ಭಟ್ಟ,

ತೆಂಕುತಿಟ್ಟಿನ ಹಿರಿಯ ಮದ್ಲೆಗಾರ ಬಿ.ಗೋಪಾಲಕೃಷ್ಣ ಕುರುಪ್ ನಿಧನ Read More »

ಕಿನ್ನಿಗೋಳಿಯ ಉಳವಾಡಿಯಲ್ಲಿ ಚಿರತೆಯ ಶವ ಪತ್ತೆ

ಮಂಗಳೂರು : ಚಿರತೆಯೊಂದು ಅಸಹಜ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಇಂದು ಬೆಳಗ್ಗೆ (ಮಾ.೧೬) ಕಿನ್ನಿಗೋಳಿ ಸಮೀಪದ ಉಳವಾಡಿಯಲ್ಲಿ ನಡೆದಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ವೈದ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಿನ್ನಿಗೋಳಿ ಸುತ್ತಮುತ್ತ ಹಲವು ಬಾರಿ ಚಿರತೆ ಕಂಡು ಬಂದಿದ್ದು, ಸಾಕು ನಾಯಿಗಳು ಚಿರತೆಗೆ ಆಹಾರವಾಗಿವೆ ಎನ್ನಲಾಗಿದೆ. ಚಿರತೆ ಓಡಾಡುವ ದೃಶ್ಯಗಳು ಸಿ.ಸಿ. ಟಿವಿಯಲ್ಲಿ ಸೆರೆಯಾಗಿದ್ದು, ಕೆಲ ತಿಂಗಳ ಹಿಂದೆ ಮೂಲ್ಕಿಯಲ್ಲಿ ಮನೆಯೊಳಗೆ ಚಿರತೆ ನುಗ್ಗಿದೆ ಎಂದು ತಿಳಿದು ಬಂದಿದೆ.

ಕಿನ್ನಿಗೋಳಿಯ ಉಳವಾಡಿಯಲ್ಲಿ ಚಿರತೆಯ ಶವ ಪತ್ತೆ Read More »

ಕೆರೆಗೆ ಸ್ನಾನಕ್ಕೆಂದು ತೆರಳಿದ ಬಾಲಕ ಮೃತ್ಯು

ಗದಗ: ಹೋಳಿ ಹಬ್ಬದ ಸಂದರ್ಭದಲ್ಲಿ ಗ್ರಾಮದ ತುಂಬೆಲ್ಲಾ ರಂಗುರಂಗಿನ ಹೋಳಿ ಆಟವಾಡಿ ಕೆರೆಯಲ್ಲಿ ಸ್ನಾನಕ್ಕೆ ಹೋದ ಬಾಲಕ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ಲಕ್ಷೇಶ್ವರ ತಾಲೂಕಿನ ಯಳವತ್ತಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಗ್ರಾಮದ ಗುಂಡೇಶ್ವರ ಕೆರೆಯಲ್ಲಿ ದೇವೇಂದ್ರ ರಾಚನಗೌಡ (16) ಎಂದು ಪತ್ತೆ ಹಚ್ಚಲಾಗಿದೆ. ದೇವೇಂದ್ರ ಬೆಳಗ್ಗೆಯಿಂದ ಸ್ನೇಹಿತರೊಂದಿಗೆ ಊರಲ್ಲಿ ಬಣ್ಣದ ಹೋಳಿ ಆಟವಾಡಿದ್ದಾನೆ. ನಂತರ ನಾಲ್ಕು ಜನ ಸ್ನೇಹಿತರು ಒಟ್ಟಾಗಿ ಕೆರೆಗೆ ಈಜಲು ಹೋಗಿದ್ದರು.  ಮೂರು ಜನ ದಡದಲ್ಲಿ ಸ್ನಾನ ಮಾಡಿದ್ದು,

ಕೆರೆಗೆ ಸ್ನಾನಕ್ಕೆಂದು ತೆರಳಿದ ಬಾಲಕ ಮೃತ್ಯು Read More »

ಬಹುಭಾಷಾ ಪಂಡಿತ, ಹಿರಿಯ ಸಾಹಿತಿ ಡಾ.ಪಂಚಾಕ್ಷರಿ ಹಿರೇಮಠ ನಿಧನ

ಬಹುಭಾಷಾ ಪಂಡಿತ, ಕನ್ನಡದ ಹಿರಿಯ ಸಾಹಿತಿ, ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಡಾ. ಪಂಚಾಕ್ಷರಿ ಹಿರೇಮಠ (92) ನಿಧನರಾಗಿದ್ದಾರೆ. ಧಾರವಾಡದ ಜಯನಗರ ನಿವಾಸಿ ಹಾಗೂ ನಗರದ ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ನಿವೃತ್ತ ಪ್ರಾದ್ಯಾಪಕರಾಗಿದರು. ಪಂಚಾಕ್ಷರಿ ಅವರು ಪತ್ನಿ, ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ. ಕನ್ನಡದ ಹಿರಿಯ ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ ಅವರು 19 ಕಾವ್ಯ ಸಂಕಲನಗಳು, 11 ಕಥಾ ಸಂಕಲನಗಳು, ಉರ್ದು ಮತ್ತು ಹಿಂದಿಯಿಂದ ಕನ್ನಡಕ್ಕೆ ತಂದ 8 ಅನುವಾದಿತ ಕಾದಂಬರಿಗಳು, 13 ಪ್ರಬಂಧ ಮತ್ತು ವಿಮರ್ಶೆಯ

ಬಹುಭಾಷಾ ಪಂಡಿತ, ಹಿರಿಯ ಸಾಹಿತಿ ಡಾ.ಪಂಚಾಕ್ಷರಿ ಹಿರೇಮಠ ನಿಧನ Read More »

error: Content is protected !!
Scroll to Top