ನಿಧನ

ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಪೋಟ

ತೃಶೂರ್ : ಎಂಟು ವರ್ಷದ ಬಾಲಕಿ ಮೊಬೈಲ್ ಫೋನ್ ಸ್ಫೋಟಗೊಂಡು ಮೃತಪಟ್ಟಿರುವ ದಾರುಣ ಘಟನೆ ಕೇರಳದಲ್ಲಿ ಸಂಭವಿಸಿದೆ. ಮೂರನೇ ತರಗತಿ ಬಾಲಕಿ ಆದಿತ್ಯಶ್ರೀ ರಾತ್ರಿ ತಾಯಿಯ ಮೊಬೈಲ್‌ನಲ್ಲಿ ಗೇಮ್ ಆಡುತ್ತಿದ್ದಾಗ ಅದು ಸ್ಫೋಟಗೊಂಡಿದೆ. ಮುಖ ಮತ್ತು ಕೈಗೆ ಗಂಭೀರ ಸ್ವರೂಪದ ಸುಟ್ಟ ಗಾಯವಾಗಿದ್ದ ಬಾಲಕಿಯನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯಿದರೂ ಪ್ರಯೋಜನವಾಗಲಿಲ್ಲ. ತಶೂರು ಸಮೀಪದ ತಿರುವಿಲಾಮಲದ ಪಟ್ಟಿಪರಂಬು ಎಂಬಲ್ಲಿ ಈ ಘಟನೆ ಸಂಭವಿಸಿದೆ. ವಿಧಿವಿಜ್ಞಾನ ತಜ್ಞರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಪೋಟ Read More »

ರೈಲಿನ ಟಾಯ್ಲೆಟ್‌ನಲ್ಲಿ ಮೃತದೇಹ ಪತ್ತೆ : ಹೊರಜಗತ್ತಿಗೆ ವಿಷಯ ತಿಳಿದದ್ದು 24 ತಾಸು ಬಳಿಕ

ಮುಂಬಯಿ-ಮಂಗಳೂರು ರೈಲಿನಲ್ಲಿ ನಡೆದ ಮನಕಲಕುವ ಘಟನೆ ಮಂಗಳೂರು : ರೈಲಿನಲ್ಲಿ ಮೃತಪಟ್ಟ ವ್ಯಕ್ತಿಯ ಶವ ಮುಂಬಯಿಯಿಂದ ಮಂಗಳೂರು ತನಕ ಬಂದು ವಾಪಸು ಮುಂಬಯಿಗೆ ಹೋದ ಘಟನೆ ಮುಂಬಯಿ-ಮಂಗಳೂರು ಜಂಕ್ಷನ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಸಂಭವಿಸಿದೆ. ರೈಲಿನಲ್ಲಿ ಪ್ರಯಾಣಿಸುವಾಗ ನಾಪತ್ತೆಯಾಗಿದ್ದಾರೆಂದು ಭಾವಿಸಿ ಈ ವ್ಯಕ್ತಿಯ ಮನೆಯವರು ಮಂಗಳೂರು ಮತ್ತು ಮುಂಬಯಿಯಲ್ಲಿ ಹಲವು ನಿಲ್ದಾಣಗಳಲ್ಲಿ ಹುಡುಕಾಡಿದ್ದರು. ರೈಲಿನ ಸಿಬ್ಬಂದಿ ಕೂಡ ಇಡೀ ರೈಲನ್ನು ಹುಡುಕಾಡಿ ರೈಲಿನಲ್ಲಿ ಪತ್ತೆಯಾಗಿಲ್ಲ ಎಂದು ವರದಿ ನೀಡಿದ್ದರು. ಆದರೆ ಶವ ಭರ್ತಿ 24 ತಾಸು ಶೌಚಾಲಯದ ಒಳಗೆ

ರೈಲಿನ ಟಾಯ್ಲೆಟ್‌ನಲ್ಲಿ ಮೃತದೇಹ ಪತ್ತೆ : ಹೊರಜಗತ್ತಿಗೆ ವಿಷಯ ತಿಳಿದದ್ದು 24 ತಾಸು ಬಳಿಕ Read More »

ನದಿಯಲ್ಲಿ ಮೀನು ಹಿಡಿಯಲು ಹೋದ ನಾಲ್ವರು ಯುವಕರು ನೀರಿನಲ್ಲಿ ಮುಳುಗಿ ಸಾವು

ಬ್ರಹ್ಮಾವರ ಸಮೀಪ ಕುದ್ರು ಬಳಿ ನಡೆದ ಘಟನೆ ಉಡುಪಿ : ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ವರು ನೀರುಪಾಲಾಗಿರುವ ಘಟನೆ ಜಿಲ್ಲೆ ಬ್ರಹ್ಮಾವರ ತಾಲೂಕಿನ ಕುಕ್ಕುಡೆ ಕಿಣಿಯರ ಕುದ್ರು ಬಳಿ ನದಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಇಬಾಜ್, ಫಜಾನ್, ಸೂಫಾನ್, ಫರಾನ್​ ಮೃತರು. ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಮೂಲದವರು ಎಂದು ಗುರುತಿಸಲಾಗಿದೆ. ರಂಜಾನ್ ಹಬ್ಬಕ್ಕೆ ಬ್ರಹ್ಮಾವರದ ಸಂಬಂಧಿಕರ ಮನೆಗೆ ಬಂದಿದ್ದರು. ದೋಣಿ ಮೂಲಕ ಮೀನು ಹಿಡಿಯಲು ಏಳು ಯುವಕರು ತೆರಳಿದ್ದರು. ನದಿಯಲ್ಲಿ ನೀರಿನ ಮಟ್ಟ

ನದಿಯಲ್ಲಿ ಮೀನು ಹಿಡಿಯಲು ಹೋದ ನಾಲ್ವರು ಯುವಕರು ನೀರಿನಲ್ಲಿ ಮುಳುಗಿ ಸಾವು Read More »

ಬೆಳ್ತಂಗಡಿ : ನವವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ

ಬೆಳ್ತಂಗಡಿ : ನವವಿವಾಹಿತೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿಯಲ್ಲಿ ಸಂಭವಿಸಿದೆ.ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿ ನಿವಾಸಿ ಕೌಶಲ್ಯ (26) ಎರಡು ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಕೌಶಲ್ಯ ಅವರು ಇತ್ತೀಚೆಗಷ್ಟೇ ನೆರೆಯ ಸೂರ್ಯಬೆಟ್ಟು ನಿವಾಸಿ ಜೊತೆ ಪ್ರೀತಿಸಿ ಮದುವೆಯಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ : ನವವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ Read More »

ಮಂಗಳೂರು : ಪಣಂಬೂರು ಬೀಚ್ ನ ಬ್ರೇಕ್ ವಾಟರ್ ಬಳಿ ಯುವಕನ ಮೃತದೇಹ ಪತ್ತೆ

ಬಂಟ್ವಾಳ : ಬೆಂಗಳೂರಿಗೆ ಎಂದು ಮನೆಯಿಂದ ಹೊರಟು ಹೋದ ಯುವಕನ ಮೃತದೇಹ ಮಂಗಳೂರಿನ ಪಣಂಬೂರಿನಲ್ಲಿ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಎಡೆ ಮಾಡಿದೆ.ಬಂಟ್ವಾಳ ಮೊಡಂಕಾಪು ನಿವಾಸಿ ಉಷಾ ಎಂಬವರ ಮಗ ವಿನಯ್ (25) ಮೃತಪಟ್ಟ ಯುವಕ. ಮಂಗಳೂರಿನ ಪಣಂಬೂರು ಬೀಚ್ ನ ಬ್ರೇಕ್ ವಾಟರ್ ಬಳಿ ಇಂದು ಯುವಕನ ಮೃತದೇಹ ಪತ್ತೆಯಾಗಿದ್ದು, ಪಣಂಬೂರು ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ವಿನಯ್ ಯಾವ ಕಾರಣದಿಂದ ಮೃತಪಟ್ಟಿದ್ಧಾನೆ ಎಂಬುದು ಸ್ಪಷ್ಟವಾಗಿಲ್ಲ.

ಮಂಗಳೂರು : ಪಣಂಬೂರು ಬೀಚ್ ನ ಬ್ರೇಕ್ ವಾಟರ್ ಬಳಿ ಯುವಕನ ಮೃತದೇಹ ಪತ್ತೆ Read More »

ಉಪ್ಪಿನಂಗಡಿ: ಸ್ಕೂಟರ್-ಕಾರು ಡಿಕ್ಕಿ : ತಂದೆ ಸಾವು, ಇಬ್ಬರು ಮಕ್ಕಳು ಗಂಭೀರ

ಉಪ್ಪಿನಂಗಡಿ : ಏ. 22 ರಂದು ಕಲ್ಲೇರಿ ಎಂಬಲ್ಲಿ ಸ್ಕೂಟರ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನಪ್ಪಿದ್ದು, ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಳೆಂಜಿಬೈಲು ನಿವಾಸಿ ಜಾಫರ್ (35) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ಇವರು ತನ್ನೆರಡು ಮಕ್ಕಳೊಂದಿಗೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದ ಕಾರು ಇವರ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಮಕ್ಕಳಿಬ್ಬರು ಗಂಭೀರ ಗಾಯಗೊಂಡಿದ್ದು,

ಉಪ್ಪಿನಂಗಡಿ: ಸ್ಕೂಟರ್-ಕಾರು ಡಿಕ್ಕಿ : ತಂದೆ ಸಾವು, ಇಬ್ಬರು ಮಕ್ಕಳು ಗಂಭೀರ Read More »

ಟ್ರಕ್‌-ಬಸ್‌ ಡಿಕ್ಕಿ ಯಾಗಿ 4 ಸಾವು, 22 ಮಂದಿಗೆ ಗಾಯ

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತ ಪುಣೆ : ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಪುಣೆ ಸಮೀಪ ಭೀಕರ ಅಪಘಾತ ಸಂಭವಿಸಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಟ್ರಕ್-ಬಸ್ ಮುಖಾಮುಖಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿ, 22 ಮಂದಿ ಗಾಯಗೊಂಡಿದ್ದಾರೆ. ಇಂದು ಬೆಳಗಿನ ಜಾವ ಅಪಘಾತ ಸಂಭವಿಸಿದೆ. .ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಅಂಬೇಗಾಂವ್‌ನ ಸ್ವಾಮಿ ನಾರಾಯಣ ದೇಗುಲದ ಬಳಿ ನವಲೆ ಸೇತುವೆ ಬಳಿ ಅಪಘಾತ ಸಂಭವಿಸಿದೆ.ಸಕ್ಕರೆ ಮೂಟೆ ಸಾಗಿಸುತ್ತಿದ್ದ ಟ್ರಕ್‌ ಟೂರಿಸ್ಟ್‌ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ

ಟ್ರಕ್‌-ಬಸ್‌ ಡಿಕ್ಕಿ ಯಾಗಿ 4 ಸಾವು, 22 ಮಂದಿಗೆ ಗಾಯ Read More »

ಕಿರುತೆರೆ ನಟ ಸಂಪತ್ ಜಯರಾಮ್ ಆತ್ಮಹತ್ಯೆ

ಅಗ್ನಿಸಾಕ್ಷಿ ಧಾರಾವಾಹಿ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲೂ ನಟಿಸಿದ್ದರು ಬೆಂಗಳೂರು : ಕಿರುತೆರೆಯ ಜನಪ್ರಿಯ ಧಾರಾವಾಹಿ ಅಗ್ನಿಸಾಕ್ಷಿಯಲ್ಲಿ ನಟಿಸಿ ಫೇಮಸ್ ಆಗಿದ್ದ ಹಾಗೂ ಸಾಕಷ್ಟು ಸಿನಿಮಾಗಳಲ್ಲೂ ಬಣ್ಣ ಹಚ್ಚಿದ್ದ ಸಂಪತ್ ಜಯರಾಮ್(35) ಅವರು ನಿಧನರಾಗಿದ್ದಾರೆ. ಕೆಲವು ಕನ್ನಡ ಸಿನೆಮಾ ಹಾಗೂ ದಾರವಾಹಿಗಳಲ್ಲಿ ಸಂಪತ್‌ ಕುಮಾರ್‌ ನಟಿಸಿದ್ದರು. ಆದರೆ ಇತ್ತೀಚೆಗೆ ಕೆಲ ಸಮಯದಿಂದ ಸೂಕ್ತ ಅವಕಾಶ ಸಿಗದೆ ಚಿಂತೆಯಲ್ಲಿದ್ದರು. ಶನಿವಾರ (ಏ.22) ನೆಲಮಂಗಲದಲ್ಲಿರುವ ತಮ್ಮ ನಿವಾಸದಲ್ಲೇ ಸಂಪತ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು ಎಂಬುದು ತಿಳಿದುಬಂದಿಲ್ಲ. ವೈವಾಹಿಕ ಜೀವನಕ್ಕೆ

ಕಿರುತೆರೆ ನಟ ಸಂಪತ್ ಜಯರಾಮ್ ಆತ್ಮಹತ್ಯೆ Read More »

ಪುತ್ತೂರು : ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಟ್ಟಣಿಗೆಮುಡ್ನೂರು ಗ್ರಾಮದ ಪುಳಿಮಾರಡ್ಕದಲ್ಲಿ ಏ. 19 ರಂದು ಸಂಭವಿಸಿದೆ. ರಹಿಮಾನ್ ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ನೆಟ್ಟಣಿಗೆಮುಡ್ನೂರು ಗ್ರಾಮದ ಪುಳಿಮಾರಡ್ಕದಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದು, ಸುಮಾರು 15 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರು. ಮಂಗಳೂರಿನ ಕಂಕನಾಡಿ ಮತ್ತು ಶಿವಮೊಗ್ಗ ಆಸ್ಪತ್ರೆಯಿಂದ ಚಿಕಿತ್ಸೆಯನ್ನು ಮಾಡಿದ್ದು, ಸರಿಯಾಗಿ ಗುಣಮುಖಗೊಂಡಿರದ ಕಾರಣ ಇವರ ಯೋಗಕ್ಷೇಮವನ್ನು ಇವರ ಚಿಕ್ಕಮ್ಮನ ಮಗ ಮಹಮ್ಮದ್ ಹಾರಿಸ್ ನೋಡಿಕೊಳ್ಳುತ್ತಿದ್ದರು. ಏ. 19 ರಂದು ಸಂಜೆ 6.45

ಪುತ್ತೂರು : ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ಭಾರತೀಯ ವಿದ್ಯಾರ್ಥಿ ಅಮೆರಿಕದಲ್ಲಿ ದುಷ್ಕರ್ಮಿಗಳ ಗುಂಡೇಟಿನಿಂದ ಮೃತ್ಯು

ಕೊಲಂಬಸ್ : ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ವಿದ್ಯಾರ್ಥಿಯೋರ್ವ ದುಷ್ಕರ್ಮಿಗಳ ಗುಂಡೇಟಿನಿಂದ ಸಾವನ್ನಪ್ಪಿರುವ ಘಟನೆ ಏ. 21 ರಂದು ಅಮೆರಿಕದಲ್ಲಿ ಸಂಭವಿಸಿದೆ.ಮೃತನನ್ನು ಸಾಯಿಶ್ ವೀರಾ(24) ಎಂದು ಗುರುತಿಸಲಾಗಿದೆ. ಇವರು ಕೊಲಂಬಸ್ ನ ಇಂಧನ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದು ಅಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಗುಂಡೇಟಿನಿಂದ ಸಾವನ್ನಪ್ಪಿದ್ದಾನೆ ಎಂದು ಯುಎಸ್ ರಾಜ್ಯ ಓಹಿಯೋದ ಪೊಲೀಸರು ತಿಳಿಸಿದ್ದಾರೆ. ಸಾಯಿಶ್ ಸ್ನಾತಕೋತ್ತರ ಕೋರ್ಸ್ ಮಾಡುತ್ತಿದ್ದು ಕೇವಲ 10 ದಿನಗಳ ಅಂತರದಲ್ಲಿ ಪದವಿಯೊಂದಿಗೆ H1B ವೀಸಾದ ಅಡಿಯಲ್ಲಿ ಆಯ್ಕೆಯಾಗಿದ್ದರು. ಇಂಧನ

ಭಾರತೀಯ ವಿದ್ಯಾರ್ಥಿ ಅಮೆರಿಕದಲ್ಲಿ ದುಷ್ಕರ್ಮಿಗಳ ಗುಂಡೇಟಿನಿಂದ ಮೃತ್ಯು Read More »

error: Content is protected !!
Scroll to Top