ನಿಧನ

ನೇತ್ರಾವತಿ ನದಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆ

ಬಂಟ್ವಾಳ : ನೇತ್ರಾವತಿ ನದಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾದ ಘಟನೆ ಏ. 16 ರಂದು ಕೌಳಿಗೆ ಮನೆ ಸಜಿಪ ಮುನ್ನೂರು ಗ್ರಾಮದಲ್ಲಿ ಸಂಭವಿಸಿದೆ. ಪರಮೇಶ್ವರ ಎನ್ ಕೆ(75) ಎಂಬವರೇ ಮೃತ ವ್ಯಕ್ತಿ. ಏ. 14 ರಂದು ರಾತ್ರಿ 10.00 ಗಂಟೆಗೆ ಟಾರ್ಚ ಹಿಡಿದುಕೊಂಡು ಮನೆಯಿಂದ ಹೊರಗೆ ಹೋದವರು ಮರಳಿ ಬಾರದೇ ಇದ್ದಾಗ ಮನೆಯ ಸುತ್ತ ಮುತ್ತ ಪರಿಸರದಲ್ಲಿ ಹಾಗೂ ಸಂಬಂಧಿಕರಲ್ಲಿ ವಿಚಾರಿಸಿ ಯಾವುದೇ ಮಾಹಿತಿ ಸಿಗದ ಕಾರಣ ಮಗನಾದ ಶಿವಾನಂದ ರ ಹೇಳಿಕೆಯಂತೆ ಬಂಟ್ವಾಳ ಪೊಲೀಸ್‌ ಠಾಣೆಯಲ್ಲಿ […]

ನೇತ್ರಾವತಿ ನದಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆ Read More »

ಅಮಿತ್‌ ಶಾ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ದುರಂತ : ಬಿಸಿಲಿನ ಝಳದಿಂದ 8 ಮಂದಿ ಸಾವು

ಮುಂಬಯಿ : ಮಹಾರಾಷ್ಟ್ರ ಭೂಷಣ-2022 ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 8 ಮಂದಿ ಬಿಸಿಲಿನ ಝಳದಿಂದ ಮೃತಪಟ್ಟಿದ್ದಾರೆ. ಅಲ್ಲದೆ 35ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಜ್ಯ ಸರ್ಕಾರ ಕಾರ್ಯಕ್ರಮ ಆಯೋಜಿಸಿದ್ದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸಮಾಜ ಸುಧಾರಕ ಅಪ್ಪಾ ಸಾಹೇಬ್‌ ಅವರಿಗೆ ಮಹಾರಾಷ್ಟ್ರ ಭೂಷಣ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು. ದುರಂತದ ಸುದ್ದಿ ತಿಳಿದ ಮುಖ್ಯಮಂತ್ರಿ ಏಕನಾಥ್ ಶಿಂಧೆ ನವಿ ಮುಂಬಯಿಯ ಎಂಜಿಎಂ ಆಸ್ಪತ್ರೆಗೆ ದಾಖಲಾದವರ ಆರೋಗ್ಯ ವಿಚಾರಿಸಿದರು. ಬಿಸಿಲಿನ ಝಳದಿಂದ

ಅಮಿತ್‌ ಶಾ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ದುರಂತ : ಬಿಸಿಲಿನ ಝಳದಿಂದ 8 ಮಂದಿ ಸಾವು Read More »

ಕ್ರಿಮಿನಾಶಕ ಸೇವಿಸಿ ವ್ಯಕ್ತಿ ಸಾವು

ಸುಳ್ಯ : ಕ್ರಿಮಿನಾಶಕ ಸೇವಿಸಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸಂಪಾಜೆ ಗ್ರಾಮದ ಗೂನಡ್ಕ ಎಂಬಲ್ಲಿ ಏ.13 ರಂದು ಸಂಭವಿಸಿದೆ. ವಸಂತ್‌ ಕುಮಾರ್‌ ಎಂಬವರೇ ಮೃತಪಟ್ಟ ವ್ಯಕ್ತಿ. ಮದ್ಯಪಾನ ದುಶ್ಚಟ ಹೊಂದಿದ್ದ ಇವರು ಏ.13 ರಂದು ಕ್ರಿಮಿನಾಶಕ ಸೇವಿಸಿದ್ದು, ಚಿಕಿತ್ಸೆಗಾಗಿ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್‌ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಅವರು ಆಸ್ಪತ್ರೆಯಲ್ಲೇ ಮೃತಪಟ್ಟಿರುತ್ತಾರೆ. ಈ ಕುರಿತು ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕ್ರಿಮಿನಾಶಕ ಸೇವಿಸಿ ವ್ಯಕ್ತಿ ಸಾವು Read More »

ಕಂದಕಕ್ಕೆ ಉರುಳಿ ಬಿದ್ದ ಬಸ್‌ : 12 ಮಂದಿ ಸಾವು, 25 ಮಂದಿ ಗಾಯ

ಮಹಾರಾಷ್ಟ್ರ : ಮಹಾರಾಷ್ಟ್ರ ರಾಜ್ಯದಲ್ಲಿ ಜವರಾಯ ಅಟ್ಟಹಾಸ ಮೆರದಿದ್ದು, ಖಾಸಗಿ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡು, 12 ಮಂದಿ ದುರ್ಮರಣವನ್ನಪ್ಪಿರುವ ಘಟನೆ ರಾಯಗಢದ ಪುಣೆ- ಮುಂಬೈ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ 4 ಗಂಟೆಗೆ ಸಂಭವಿಸಿದೆ.ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ. 40 ಜನರಿದ್ದ ಖಾಸಗಿ ಬಸ್​ ಪುಣೆಯಿಂದ ಮುಂಬೈ ಕಡೆಗೆ ಹೋಗುತ್ತಿದ್ದು. ಬೆಳಗಿನ ಜಾವ 4 ಗಂಟೆ ಸುಮಾರಿಗೆ ಪ್ರಯಾಣಿಕರು ನಿದ್ರೆಯಲ್ಲಿದ್ದಾಗ

ಕಂದಕಕ್ಕೆ ಉರುಳಿ ಬಿದ್ದ ಬಸ್‌ : 12 ಮಂದಿ ಸಾವು, 25 ಮಂದಿ ಗಾಯ Read More »

ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ಸ್‌ ಮಧ್ಯೆ ಭೀಕರ ಅಪಘಾತ : 6 ಮಂದಿ ಸಾವು

ಸಂಪಾಜೆ : ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ಸ್‌ ನಡುವೆ ಭೀಕರ ಅಪಘಾತವು ಮಾಣಿ-ಮೈಸೂರು ರಾ.ಹೆದ್ದಾರಿಯ ಸಂಪಾಜೆ ಎಂಬಲ್ಲಿ ಸಂಭವಿಸಿದೆ. ರಾಜ್ಯ ರಸ್ತೆ ಸಾರಿಗೆ ಬಸ್ಸು ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಮಕ್ಕಳು, ಇಬ್ಬರು ಮಹಿಳೆಯರು, ಓರ್ವ ಗಂಡಸು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.ಸುಳ್ಯದಿಂದ ವಿರಾಜಪೇಟೆಗೆ ತೆರಳುತ್ತಿದ್ದ ಬಸ್ ಹಾಗೂ ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಆರು ಜನ ಸಾವನ್ನಪ್ಪಿದ್ದು, ಮೃತದೇಹವನ್ನು ಸುಳ್ಯದ ಖಾಸಗಿ ಆಸ್ಪತ್ರೆ

ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ಸ್‌ ಮಧ್ಯೆ ಭೀಕರ ಅಪಘಾತ : 6 ಮಂದಿ ಸಾವು Read More »

ತೆಂಗಿನಮರದಿಂದ ಬಿದ್ದು ವ್ಯಕ್ತಿ ಸಾವು

ಸುಳ್ಯ : ತೆಂಗಿನಮರದಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಕೆಮ್ರಾಜೆ ಗ್ರಾಮದ ಬೊಳ್ಳಾಜೆ ಕಂದೂರು ಎಂಬಲ್ಲಿ ಎ. 11 ರಂದು ಸಂಭವಿಸಿದೆ. ಹರೀಶ್ ಜಿ ಎಂಬವರೇ ಮೃತಪಟ್ಟ ವ್ಯಕ್ತಿ. ಇವರು ನೆಮ್ಮೂರು ಕೆಮ್ರಾಜೆ ಗ್ರಾಮದ ಬೊಳ್ಳಾಜೆ ಕಂದೂರು ಎಂಬಲ್ಲಿಗೆ ತೆಂಗಿನಕಾಯಿ ಕೊಯ್ಯುವ ಕೆಲಸಕ್ಕೆ ಹೋಗಿದ್ದು, ತೆಂಗಿನಕಾಯಿ ಕೊಯ್ದು ಮರದಿಂದ ಇಳಿಯುತ್ತಿದ್ದಂತೆ ಆಕಸ್ಮಿಕವಾಗಿ ಮರದಿಂದ ನೆಲಕ್ಕೆ ಬಿದ್ದು ಸ್ಮೃತಿ ಕಳೆದುಕೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಅಂಬ್ಯುಲೆನ್ಸ್‌ನಲ್ಲಿ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು ಹರೀಶ್‌ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ತೆಂಗಿನಮರದಿಂದ ಬಿದ್ದು ವ್ಯಕ್ತಿ ಸಾವು Read More »

ಪುತ್ತೂರು : ಮಲಗಿದಲ್ಲೇ ಬಟ್ಟೆ ವ್ಯಾಪಾರಿ ಸಾವು

ಪುತ್ತೂರು : ಪುತ್ತೂರಿನ ಬೊಳುವಾರಿನಲ್ಲಿ ವ್ಯಕ್ತಿಯೋರ್ವರು ಮಲಗಿದ್ದಲ್ಲೇ ಮೃತಪಟ್ಟಿರುವ ಘಟನೆ ಎ. 10 ರಂದು ಸಂಭವಿಸಿದೆ. ನಂದಕುಮಾರ್ (50) ಎಂಬವರೇ ಮೃತ ವ್ಯಕ್ತಿ. ಇವರು ಸುಮಾರು 20 ವರ್ಷಗಳ ಹಿಂದೆ ಪುತ್ತೂರಿಗೆ ಬಂದು ಬೊಳುವಾರಿನಲ್ಲಿ ತನ್ನ ಸಂಸಾರದೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದು ಬಟ್ಟೆ ವ್ಯಾಪಾರ ಮಾಡಿಕೊಂಡಿದ್ದರು. ಎ. 3 ರಂದು ನಂದಕುಮಾರ್ ರವರ ಪತ್ನಿ ಗೋಮತಿಯವರು ಮಗನೊಂದಿಗೆ ಸ್ವಂತ ಊರಿಗೆ ಹೋಗುವಾಗ ಅರಿವಳಗನ್(ನಂದಕುಮಾರ್‌ ರವರ ಗೆಳೆಯ) ಅವರಲ್ಲಿ ನಂದಕುಮಾರ್ ರವರನ್ನು ನೋಡಿಕೊಳ್ಳುವಂತೆ ತಿಳಿಸಿದ್ದರು. ಎ.10 ರಂದು ಗೋಮತಿಯವರು

ಪುತ್ತೂರು : ಮಲಗಿದಲ್ಲೇ ಬಟ್ಟೆ ವ್ಯಾಪಾರಿ ಸಾವು Read More »

ಪುತ್ತೂರು : ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

ಪುತ್ತೂರು : ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಟ್ಟಂಪಾಡಿಯ ಗುಮ್ಮಟಗದ್ದೆ ಎಂಬಲ್ಲಿ ಸಂಭವಿಸಿದೆ. ಪುಣ್ಯಶ್ರೀ ಎಂಬವರೇ ಆತ್ಮಹತ್ಯೆ ಮಾಡಿಕೊಂಡವರು. ಎ. 4 ರಂದು ಇವರು ತನ್ನ ಇಬ್ಬರು ಮಕ್ಕಳೊಂದಿಗೆ ತವರು ಮನೆಗೆ ಹೋಗಿದ್ದು, ಬಳಿಕ ಅಲ್ಲಿಯೇ ಇದ್ದರು. ಎ. 10 ರಂದು ರಾತ್ರಿ ಸುಮಾರು ಸಂಜೆ 3.55 ರ ವೇಳೆಗೆ ತನ್ನ ಪತಿ ಪುರುಷೋತ್ತಮ ರವರಿಗೆ ಕರೆ ಮಾಡಿ ಮಾತನಾಡಿದ್ದಾರೆ. ನಂತರ ರಾತ್ರಿ ಸುಮಾರು 10.00 ಗಂಟೆಯ ವೇಳೆಗೆ ತಮ್ಮ ಮನೆಯ ಬಳಿಗೆ ಬಂದು

ಪುತ್ತೂರು : ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ Read More »

ಕಡಬ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ

ಕಡಬ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರೆಂಜಿಲಾಡಿ ಗ್ರಾಮದ ಮೀನಾಡಿ ಎಂಬಲ್ಲಿ ಎ. 8 ರಂದು ಸಂಭವಿಸಿದೆ. ಬೆಳ್ಯಪ್ಪ ಗೌಡ(75) ಎಂಬವರೇ ಮೃತ ವ್ಯಕ್ತಿ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಜೀವನದಲ್ಲಿ ಜಿಗುಪ್ಸೆಗೊಂಡು ಎ. 8 ರಂದು ದನದ ಕೊಟ್ಟಿಗೆಯ ಅಡ್ಡಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಕಡಬ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಡಬ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ Read More »

ತೊಕ್ಕೊಟ್ಟು : ವ್ಯಾಪಾರಿ ನೇಣು ಬಿಗಿದು ಆತ್ಮಹತ್ಯೆ

ಉಳ್ಳಾಲ : ತೊಕ್ಕೊಟ್ಟು ಜಂಕ್ಷನ್‌ನಲ್ಲಿರುವ ಹೊಲಿಗೆ ಸಂಬಂಧಿತ ಮಳಿಗೆಯೊಂದರ ಮಾಲಕ ತನ್ನ ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.10 ರಂದು ಬೆಳಗ್ಗೆ ಸಂಭವಿಸಿರುತ್ತದೆ. ಪ್ರವೀಣ್ ಆಳ್ವ (45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮೂಲತ ಸೇವಂತಿಗುಡ್ಡೆ ನಿವಾಸಿಯಾಗಿದ್ದ ಇವರು ಪ್ರಸ್ತುತ ಕನೀರುತೋಟದಲ್ಲಿ ವಾಸಿಸುತ್ತಿದ್ದರು. ತೊಕ್ಕೊಟ್ಟು ಜಂಕ್ಷನ್ ಬಳಿ ಟೈಲರ್‌ಗಳಿಗೆ ಸಂಬಂಧಿಸಿದ ಹೊಲಿಗೆ ನೂಲು ಸೇರಿದಂತೆ ಇತರ ಕಚ್ಚಾ ವಸ್ತುಗಳನ್ನು ಪೂರೈಸುವ ಅಂಗಡಿಯನ್ನು ಕಳೆದ ಏಳೆಂಟು ವರ್ಷಗಳಿಂದ ನಡೆಸುತ್ತಿದ್ದರು. ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಅವರು‌ ಬೆಳಗ್ಗೆ 6.30ಕ್ಕೆ ಮನೆಯಿಂದ

ತೊಕ್ಕೊಟ್ಟು : ವ್ಯಾಪಾರಿ ನೇಣು ಬಿಗಿದು ಆತ್ಮಹತ್ಯೆ Read More »

error: Content is protected !!
Scroll to Top