ನುಳಿಯಾಲು ಸೀತಾರಾಮ ರೈ ತೋಟದಮೂಲೆ ನಿಧನ
ಬೆಟ್ಟಂಪಾಡಿ: ನಿಡ್ಪಳ್ಳಿ ಗ್ರಾಮದ ನುಳಿಯಾಲು ತರವಾಡು ಕುಟುಂಬದ ಹಿರಿಯರಾದ ನುಳಿಯಾಲು ಸೀತಾರಾಮ ರೈ ತೋಟದ ಮೂಲೆ (80) ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಸ್ವಗೃಹದಲ್ಲಿ ನಿಧನರಾದರು. ಮೃತರು ಮಿತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾಗಿ, ಭಾರತೀಯ ಜನತಾ ಪಕ್ಷದ ಗ್ರಾಮ ಸಮಿತಿ ಅಧ್ಯಕ್ಷರಾಗಿ, ವಿನಾಯಕ ನಗರ ಶ್ರೀ ಸಿದ್ಧಿವಿನಾಯಕ ಮಂದಿರ ಸ್ಥಾಪಕಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ಪುತ್ರಿ ಹಾಗೂ ಪುತ್ರರನ್ನು ಅಗಲಿದ್ದಾರೆ.
ನುಳಿಯಾಲು ಸೀತಾರಾಮ ರೈ ತೋಟದಮೂಲೆ ನಿಧನ Read More »










