ನಿಧನ

ಚಿತ್ರದುರ್ಗ ಭೀಕರ ಅಪಘಾತ: ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಧನ ಘೋಷಿಸಿದ ಪ್ರಧಾನಿ ಮೋದಿ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ಸಮೀಪ ನಡೆದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ, ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ಧನ ಘೋಷಣೆ ಮಾಡಿದ್ದಾರೆ. ಸೀ ಬರ್ಡ್ ಬಸ್ಸು ಮತ್ತು ಕಂಟೇನರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ಈ ಅಪಘಾತದಲ್ಲಿ ಸುಮಾರು 21 ಕ್ಕೂ ಅಧಿಕ ಜನರು ಗಾಯಗೊಂಡಿದ್ದು, ಸುಮಾರು 17 ಜನರು ಮೃತಪಟ್ಟಿದ್ದಾರೆ. ಬಸ್ಸು ಸಂಪೂರ್ಣವಾಗಿ ಸುಟ್ಟು […]

ಚಿತ್ರದುರ್ಗ ಭೀಕರ ಅಪಘಾತ: ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಧನ ಘೋಷಿಸಿದ ಪ್ರಧಾನಿ ಮೋದಿ Read More »

ಕೆನಡಾದಲ್ಲಿ ಭಾರತೀಯ ಮಹಿಳೆಯ ಹತ್ಯೆ: ಆರೋಪಿಯ ಪತ್ತೆಗೆ ಬಲೆ ಬೀಸಿರುವ ಪೊಲೀಸರು

ಟೊರೊಂಟೊ: ಕೆನಡಾದಲ್ಲಿ ಭಾರತೀಯ ಮಹಿಳೆಯೊಬ್ಬರ ಹತ್ಯೆಯಾಗಿದ್ದು, ಶಂಕಿತ ಆರೋಪಿಯ ಗುರುತು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಆರೋಪಿಯನ್ನು ಅಬ್ದುಲ್ ಗಫೂರ್ (32) ಎಂದು ಗುರುತಿಸಲಾಗಿದೆ. ಹತ್ಯೆಯಾದ ‌ಮಹಿಳೆಯನ್ನು ಹಿಮಾಂಶಿ ಖುರಾನಾ (30) ಎಂದು ಗುರುತಿಸಲಾಗಿದೆ. ಆಕೆಯ ಪ್ರಿಯಕರನೇ ಈ ಹತ್ಯೆ ನಡೆಸಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದು, ಆರೋಪಿಯ ಪತ್ತೆಗಾಗಿ ಹುಡುಕಾಟ ಆರಂಭಿಸಲಾಗಿದೆ. ಡಿ. 19 ರಂದು ಹಿಮಾಂಶಿ ನಾಪತ್ತೆ ಎಂಬುದಾಗಿ ಪೋಲೀಸ್ ಠಾಣೆಗೆ ಕರೆ ಬಂದಿದ್ದು, ಡಿ. 20 ರಂದು ಆಕೆಯ ಶವವನ್ನು ಅವರು ಕಾಣೆಯಾಗಿದ್ದಾರೆ ಎಂದು

ಕೆನಡಾದಲ್ಲಿ ಭಾರತೀಯ ಮಹಿಳೆಯ ಹತ್ಯೆ: ಆರೋಪಿಯ ಪತ್ತೆಗೆ ಬಲೆ ಬೀಸಿರುವ ಪೊಲೀಸರು Read More »

ಕಲ್ಲರಕೋಡಿ ಸರ್ಕಾರಿ ಶಾಲಾ ದೈ. ಶಿ. ಶಿಕ್ಷಕನ ಶವ ಮನೆಯ ಬಾವಿಯಲ್ಲಿ ಪತ್ತೆ

ಅನಾರೋಗ್ಯದ ಕಾರಣದಿಂದ ಆತ್ಮಹತ್ಯೆ ಶಂಕೆ ಉಳ್ಳಾಲ: ನರಿಂಗಾಣದ ಕಲ್ಲರಕೋಡಿ ಸರ್ಕಾರಿ ಶಾಲಾ ದೈಹಿಕ ಶಿಕ್ಷಕ ಪ್ರಭಾಕರ ಜೋಗಿ (51) ಎಂಬವರ ಶವ ಕೊಂಡಾಣದ ಅವರ ಮನೆಯ ಬಾವಿಯಲ್ಲಿ ಪತ್ತೆಯಾಗಿದೆ. ಅನಾರೋಗ್ಯದ ಕಾರಣದಿಂದ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ನಿನ್ನೆ ಸಂಜೆಯ ವೇಳೆಗೆ ಅವರು ತಮ್ಮ ಪುತ್ರಿಯನ್ನು ಉಚ್ಚಿಲದ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಬಿಟ್ಟು ಬಂದಿದ್ದರು. ಆ ಬಳಿಕ ತಮ್ ಪತ್ನಿ ಮತ್ತು ಮಗನ ಜೊತೆಗೆ ವಾರ್ಷಿಕೋತ್ಸವಕ್ಕೆ ಹೋಗಲು ತಯಾರಿ ಸಹ ಮಾಡಿಕೊಂಡಿದ್ದರು. ಆ ಬಳಿಕ ಪ್ರಭಾಕರ್

ಕಲ್ಲರಕೋಡಿ ಸರ್ಕಾರಿ ಶಾಲಾ ದೈ. ಶಿ. ಶಿಕ್ಷಕನ ಶವ ಮನೆಯ ಬಾವಿಯಲ್ಲಿ ಪತ್ತೆ Read More »

ಮಲಯಾಳಂ ಚಿತ್ರರಂಗದ ಖ್ಯಾತ ನಟ ಶ್ರೀನಿವಾಸನ್‌ ನಿಧನ

225ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ನಟ, ನಿರ್ಮಾಪಕ, ನಿರ್ದೇಶಕ ಕೊಚ್ಚಿ : ಖ್ಯಾತ ಮಲಯಾಳಂ ನಟ, ನಿರ್ದೇಶಕ ಶ್ರೀನಿವಾಸನ್ ಇಂದು ನಿಧನ ಹೊಂದಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ಅವರು ವಿವಿಧ ಕಾಯಿಲೆಯಿಂದ ಬಳಲುತ್ತಿದ್ದರು. ಅವರು ಕೇರಳದ ಉದಯಂಪೆರೂರ್​​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ. ಶ್ರೀನಿವಾಸನ್ ಅವರಿಗೆ ಕೆಲವು ಅನಾರೋಗ್ಯ ಸಮಸ್ಯೆಗಳು ಇದ್ದವು. ಕಳೆದ ಕೆಲ ವರ್ಷಗಳಿಂದ ಅವರ ಆರೋಗ್ಯ ಹದಗೆಟ್ಟಿತ್ತು. ಹೀಗಾಗಿ, ಸಿನಿಮಾ ರಂಗದಲ್ಲಿ ಅವರು ಅಷ್ಟಾಗಿ ಆ್ಯಕ್ಟೀವ್

ಮಲಯಾಳಂ ಚಿತ್ರರಂಗದ ಖ್ಯಾತ ನಟ ಶ್ರೀನಿವಾಸನ್‌ ನಿಧನ Read More »

ಬೈಕ್ ಗುದ್ದಿ ‌ವ್ಯಕ್ತಿ ಸ್ಥಳದಲ್ಲೇ ಸಾವು

ಪಡುಬಿದ್ರೆ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಚ ಘಟನೆ ತೆಂಕ ಎರ್ಮಾಳಿನ ಸತ್ಯಂ ಬಾರ್ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ತೆಂಕ ಎರ್ಮಾಳಿನ ಅಣ್ಣಯ್ಯ ಬಂಗೇರ (67) ಅವರೇ ಮೃತ ದುರ್ದೈವಿ. ಬೈಕ್ ಸವಾರ ಬಾದಾಮಿ ಮೂಲದ ಹಸನ್ ಅವರು ಕಾಪುವಿನಿಂದ ಸುರತ್ಕಲ್ ಕಡೆಗೆ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಬೈಕ್ ಅಣ್ಣಯ್ಯ ಅವರಿಗೆ ಗುದ್ದಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಸನ್ ಅವರಿಗೂ ತೀವ್ರ ತರದ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಬೈಕ್ ಗುದ್ದಿ ‌ವ್ಯಕ್ತಿ ಸ್ಥಳದಲ್ಲೇ ಸಾವು Read More »

ಕೆಜಿಎಫ್ ಚಾಪ್ಚರ್-2 ಸಹ ನಿರ್ದೇಶಕನ 4 ವರ್ಷದ ಪುತ್ರ ಸಾವು

ಬೆಂಗಳೂರು: ಕೆಜಿಎಫ್ ಚಾಪ್ಚರ್-2 ಸಹ ನಿರ್ದೇಶಕ ಕೀರ್ತನ್ ನಾಡಗೌಡ ಅವರ ನಾಲ್ಕು ವರ್ಷದ ಪುತ್ರ ಲಿಫ್ಟ್ ಅಪಘಾತದಲ್ಲಿ ಮೃತಪಟ್ಟ ಘಟನೆ ನಡೆದಿದೆ. ಚಿರಂಜೀವಿ ಸೋನಾರ್ಷ್ ಕೆ. ನಾಡಗೌಡ ಆಕಸ್ಮಿಕವಾಗಿ ಲಿಫ್ಟ್ ಒಳಗಡೆ‌‌ ಸಿಕ್ಕಿ ಮೃತಪಟ್ಟ ನತದೃಷ್ಟ ಬಾಲಕ. ಮಗನನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ.

ಕೆಜಿಎಫ್ ಚಾಪ್ಚರ್-2 ಸಹ ನಿರ್ದೇಶಕನ 4 ವರ್ಷದ ಪುತ್ರ ಸಾವು Read More »

ವಿದ್ಯುತ್ ತಂತಿ ದುರಸ್ತಿ ವೇಳೆ ಶಾಕ್ ಹೊಡೆದು ಓರ್ವ ಸಾವು, ಮತ್ತೋರ್ವ ಗಂಭೀರ

ಹಾಸನ: ವಿದ್ಯುತ್ ತಂತಿ ದುರಸ್ತಿ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ಬಿಹಾರ ಮೂಲದ ಕಾರ್ಮಿಕನೊಬ್ಬ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಕಾಟೀಹಳ್ಳಿಯ ಟೀಚರ್ಸ್ ಕಾಲನಿಯಲ್ಲಿ ನಡೆದಿದೆ. ಬರಿಕುಲ್ (18) ಎಂಬವರೇ ಮೃತ ದುರ್ದೈವಿ. ಗಾಯಾಳುವನ್ನು ಸಲೀಂ(17) ಎಂದು ಗುರುತಿಸಲಾಗಿದೆ. ತಾಂತ್ರಿಕ ದೋಷದ ಕಾರಣ ಈ ಇಬ್ಬರು ಕಂಬ ಏರಿ ದುರಸ್ತಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಇದೇ ಸಮಯದಲ್ಲಿ ತಂತಿಗಳಲ್ಲಿ ವಿದ್ಯುತ್ ಪ್ರವಹಿಸಿದ್ದು ಇಬ್ಬರಿಗೂ ತೀವ್ರ ಪ್ರಮಾಣದಲ್ಲಿ ಶಾಕ್ ಹೊಡೆದಿದೆ. ಬರೀಕುಲ್ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದು, ಸಲೀಂ ಪ್ರಜ್ಞಾಹೀನ

ವಿದ್ಯುತ್ ತಂತಿ ದುರಸ್ತಿ ವೇಳೆ ಶಾಕ್ ಹೊಡೆದು ಓರ್ವ ಸಾವು, ಮತ್ತೋರ್ವ ಗಂಭೀರ Read More »

ಇಂದು ಸಂಜೆ ಶಾಮನೂರ ಶಿವಶಂಕರಪ್ಪ ಅಂತ್ಯಕ್ರಿಯೆ

ಗಣ್ಯರ ಸಹಿತ ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ ದಾವಣಗೆರೆ : ಕಾಂಗ್ರೆಸ್​​ನ ಹಿರಿಯ ಮುತ್ಸದ್ದಿ ನಾಯಕ, ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ವಯೋಸಹಜ ಅನಾರೋಗ್ಯದಿಂದ ಭಾನುವಾರ ಲಿಂಗೈಕ್ಯರಾಗಿದ್ದು, ಅವರ ಅಂತ್ಯಸಂಸ್ಕಾರ ದಾವಣಗೆರೆಯಲ್ಲಿ ಇಂದು ಸಂಜೆ ನಡೆಯಲಿದೆ. ಬೆಂಗಳೂರಿನಿಂದ ಇಂದು ನಸುಕಿನ ಜಾವ ಶಾಮನೂರರ ಪಾರ್ಥಿವ ಶರೀರ ದಾವಣಗೆರೆಗೆ ಆಗಮಿಸಿದೆ. ಬೆಳಗ್ಗೆ 7 ರಿಂದ 12ರ ವರೆಗೆ ಶಾಮನೂರ ಪುತ್ರ ಸಚಿವ ಎಸ್​​ಎಸ್​​ ಮಲ್ಲಿಕಾರ್ಜುನ್ ಅವರ ನಿವಾಸದಲ್ಲಿ

ಇಂದು ಸಂಜೆ ಶಾಮನೂರ ಶಿವಶಂಕರಪ್ಪ ಅಂತ್ಯಕ್ರಿಯೆ Read More »

ಅನಾರೋಗ್ಯದಿಂದ ಒಂದೂವರೆ ತಿಂಗಳ ಮಗು ಸಾವು

ಸವಣೂರು: ಉಸಿರಾಟದ ಸಮಸ್ಯೆ, ವಾಂತಿಯಿಂದ ‌ಬಳಲುತ್ತಿದ್ದ ಒಂದೂವರೆ ತಿಂಗಳಿನ ಮಗುವೊಂದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಓಡಂತರ್ಯದಲ್ಲಿ ನಡೆದಿದೆ. ಗುತ್ತಿಗಾರು ಗ್ರಾಮದ ಕಮಿಲ ನಿವಾಸಿಗಳಾದ ಮಾಧವ ಮತ್ತು ವೀಣಾ ದಂಪತಿಯ ಮಗು ನಿಶ್ಚಿತ್ ಮೃತಪಟ್ಟ ದುರ್ದೈವಿ. ಡಿ. 5 ರಂದು ಮಗುವಿಗೆ ವಾಂತಿ ಕಾಣಿಸಿಕೊಂಡಿದ್ದು, ತಕ್ಷಣವೇ ಕುಂಬ್ರದಲ್ಲಿರುವ ಖಾಸಗಿ ಕ್ಲಿನಿಕ್ ಒಂದರಿಂದ ಮಗುವಿಗೆ ಔಷಧಿ ತಂದಿದ್ದಾರೆ. ಆದರೆ, ಆ ದಿನ ರಾತ್ರಿ ವೇಳೆ ಮಗುವಿನ ಆರೋಗ್ಯ ಮತ್ತಷ್ಟು ಹದೆಗೆಟ್ಟಿದ್ದು, ವಾಂತಿಯ ಜೊತೆಗೆ ಉಸಿರಾಟದ ತೊಂದರೆ ಆರಂಭವಾಗಿದೆ. ತಕ್ಷಣವೇ

ಅನಾರೋಗ್ಯದಿಂದ ಒಂದೂವರೆ ತಿಂಗಳ ಮಗು ಸಾವು Read More »

ಪಡ್ಡಾಯೂರಿನ ವ್ಯಕ್ತಿ ಮೃತ್ಯು

ಪುತ್ತೂರು: ನೆಹರೂ ನಗರದ ಪಡ್ಡಾಯೂರಿನವರಾದ, ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತ ದಾಮೋದರ ನೆಲಪ್ಪ ಅವರು ನಿಧನರಾಗಿದ್ದಾರೆ. ಅವರು ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ತೀವ್ರವಾಗಿ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿ ಕೆಲಸ ಮಾಡುತ್ತಿದ್ದ ಅವರು ಕುಚುಂಬಸ್ಥರು, ಬಂಧು ಮಿತ್ರರನ್ನು ಅಗಲಿದ್ದಾರೆ.

ಪಡ್ಡಾಯೂರಿನ ವ್ಯಕ್ತಿ ಮೃತ್ಯು Read More »

error: Content is protected !!
Scroll to Top