ಶೈಕ್ಷಣಿಕ

ಇಂದು ನೀಟ್‌ ಪರೀಕ್ಷೆ : ಕಿವಿಯೋಲೆ, ಬಳೆ, ಸರ, ಕಾಲ್ಗೆಜ್ಜೆ ನಿಷೇಧ

ರಾಜ್ಯದಲ್ಲಿ 1.49 ಲಕ್ಷ ಅಭ್ಯರ್ಥಿಗಳು; 381 ಪರೀಕ್ಷಾ ಕೇಂದ್ರಗಳು ಬೆಂಗಳೂರು: 2025-26ನೇ ಸಾಲಿನ ವೈದ್ಯಕೀಯ ಪ್ರವೇಶಕ್ಕೆ ಇಂದು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್‌) ನಡೆಯಲಿದೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಎನ್‌ಟಿಎ ವತಿಯಿಂದ ನೀಟ್ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನಡೆಸಲಾಗುತ್ತಿದೆ. ದೇಶದಲ್ಲಿ ಏಕಕಾಲಕ್ಕೆ ನಡೆಯುವ ಈ ಪರೀಕ್ಷೆಗೆ ರಾಜ್ಯದಲ್ಲಿ 381 ಪರೀಕ್ಷಾ ಕೇಂದ್ರಗಳಿವೆ. ರಾಜ್ಯದ 1.49 ಲಕ್ಷ ವಿದ್ಯಾರ್ಥಿಗಳು ನೀಟ್​ ಪರೀಕ್ಷೆ ಬರೆಯಲಿದ್ದಾರೆ. ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಈ […]

ಇಂದು ನೀಟ್‌ ಪರೀಕ್ಷೆ : ಕಿವಿಯೋಲೆ, ಬಳೆ, ಸರ, ಕಾಲ್ಗೆಜ್ಜೆ ನಿಷೇಧ Read More »

ಎಸ್.ಎಸ್.ಎಲ್.ಸಿ.ಯಲ್ಲಿ ವಿದ್ಯಾರಶ್ಮಿಗೆ ಶೇಕಡಾ 100 ಫಲಿತಾಂಶ ಮತ್ತು 16 ಡಿಸ್ಟಿಂಕ್ಷನ್

ಸವಣೂರು: ವಿದ್ಯಾರಶ್ಮಿ ವಿದ್ಯಾಲಯ ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾದ ವಿದ್ಯಾರಶ್ಮಿ ವಿದ್ಯಾಲಯದ 41 ವಿದ್ಯಾರ್ಥಿಗಳ ಪೈಕಿ 41 ವಿದ್ಯಾರ್ಥಿಗಳು ತೇರ್ಗಡೆಯಾಗಿ 100 ಶೇಕಡಾ ಫಲಿತಾಂಶ ಲಭಿಸಿದೆ. 16 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 15 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ವಿಶಿಷ್ಟ ಶ್ರೇಣಿಯ ಸಾಧಕರು: ಸೃಜನ್.ಕೆ-618 (ಸುಧೀರ್ ಕೆ ಮತ್ತು ಸುಪ್ರಿಯ ಇವರ ಪುತ್ರ),  ಹೆಚ್.ಎಸ್.ಶ್ರುತ ಜೈನ್-617 (ಹೆಚ್ ಶ್ರೇಯಾಂಸ ಕುಮಾರ್ ಇಂದ್ರ ಮತ್ತು ಶ್ವೇತ ಬಿ ಎಸ್ ಇವರ ಪುತ್ರಿ), ಎಂ.ವೈಷ್ಣವಿ-616 (ಲಕ್ಷ್ಮೀಶ ಮತ್ತು ರಾಧಿಕ

ಎಸ್.ಎಸ್.ಎಲ್.ಸಿ.ಯಲ್ಲಿ ವಿದ್ಯಾರಶ್ಮಿಗೆ ಶೇಕಡಾ 100 ಫಲಿತಾಂಶ ಮತ್ತು 16 ಡಿಸ್ಟಿಂಕ್ಷನ್ Read More »

ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಶಾಲೆಗೆ ನೂರು ಶೇಕಡಾ ಫಲಿತಾಂಶ

ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಹೈಸ್ಕೂಲ್ ಕುತ್ಯಾರು 2025 ಮಾರ್ಚ ನಲ್ಲಿ ಜರಗಿದ ಎಸ್. ಎಸ್. ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪರೀಕ್ಷೆಗೆ ಹಾಜರಾದ 11 ವಿದ್ಯಾರ್ಥಿಗಳು  ಉತ್ತೀರ್ಣರಾಗಿ ನೂರು ಶೇಕಡ ಫಲಿತಾಂಶ ಬಂದಿರುತ್ತದೆ. ಸಂಸ್ಥೆಯ ಪರಮ ಪೋಷಕರಾದ ಪೂಜ್ಯ  ಶ್ರೀ ಶ್ರೀ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಮತ್ತು ಆಡಳಿತ ಮಂಡಳಿಯ ಅಧ್ಯಕ್ಷರಾದ ಸೂರ್ಯ ಕುಮಾರ್ ಹಳೆಯಂಗಡಿ, ಕಾರ್ಯದರ್ಶಿ ಗುರುರಾಜ ಕೆ ಮಂಗಳೂರು ಮತ್ತು ಸಂಸ್ಥೆಯ ಶೈಕ್ಷಣಿಕ ಸಲಹೆಗಾರ ದಿವಾಕರ ಆಚಾರ್ಯ ಗೇರುಕಟ್ಟೆ  ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಶಾಲೆಗೆ ನೂರು ಶೇಕಡಾ ಫಲಿತಾಂಶ Read More »

ಎಸ್‌ಎಸ್‌ಎಲ್‌ಸಿ ಫಲಿತಾಂಶ : ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ

ಶೇ.62.34 ಮಕ್ಕಳು ತೇರ್ಗಡೆ; ಬಾಲಕಿಯರೇ ಮುಂದು ಬೆಂಗಳೂರು: 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫಲಿತಾಂಶ ಪ್ರಕಟವಾಗಿದೆ. ಒಟ್ಟಾರೆ ಶೇ.62.34 ಫಲಿತಾಂಶ ಬಂದಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ.ದಕ್ಷಿಣ ಕನ್ನಡ ಜಿಲ್ಲೆ (91.12%) ಮೊದಲ ಸ್ಥಾನ ಗಳಿಸಿದೆ. ಉಡುಪಿ (89.96%) ಎರಡನೇ ಸ್ಥಾನ ಪಡೆದರೆ, ಉತ್ತರಕನ್ನಡ (83.19%) ಮೂರನೇ ಸ್ಥಾನ ಪಡೆದಿದೆ. ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ಮೂಲಕ ಫಲಿತಾಂಶ ಪ್ರಕಟಿಸಿದ್ದಾರೆ.22 ವಿದ್ಯಾರ್ಥಿಗಳು 625/625 ಅಂಕಗಳನ್ನು ಪಡೆದಿದ್ದಾರೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶಿಕ್ಷಣ

ಎಸ್‌ಎಸ್‌ಎಲ್‌ಸಿ ಫಲಿತಾಂಶ : ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ Read More »

ಎರಡು ವೆಬ್‌ಸೈಟ್‌ಗಳಲ್ಲಿ ವೀಕ್ಷಿಸಿ ಎಸ್‌ಎಸ್‌ಎಲ್‌ಸಿ ಫಲಿತಾಂಶ : ಎಸ್‌ಎಂಎಸ್‌ನಲ್ಲೂ ಸಿಗುತ್ತದೆ ರಿಸಲ್ಟ್‌

ಅಧಿಕೃತ ವೆಬ್‌ಸೈಟ್‌ https://kseab.karnataka.gov.in ಅಥವಾ https://karresults.nic.in ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಎಸ್ಎಸ್​​ಎಲ್​ಸಿ ಪರೀಕ್ಷೆ ವಿದ್ಯಾರ್ಥಿಗಳು ಫಲಿತಾಂಶವನ್ನು ಇಂದು ಮಧ್ಯಾಹ್ನ ಪ್ರಕಟಿಸಲಿದ್ದು, ಮಧ್ಯಾಹ್ನ 12.30ರ ಬಳಿಕ ವೆಬ್‌ಸೈಟ್‌ಗಳಲ್ಲಿ ಫಲಿತಾಂಶ ವೀಕ್ಷಣೆಗೆ ಸಿಗುತ್ತದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 12.30ರ ನಂತರ ವೆಬ್‌ಸೈಟ್‌ನಲ್ಲಿ SSLC ಫಲಿತಾಂಶ ಲಭ್ಯವಾಗಲಿದೆ. http://karresults.nic.in ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಮಾರ್ಚ್‌, ಏಪ್ರಿಲ್ ತಿಂಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲಾಗಿದೆ. 8,96,447 ವಿದ್ಯಾರ್ಥಿಗಳು

ಎರಡು ವೆಬ್‌ಸೈಟ್‌ಗಳಲ್ಲಿ ವೀಕ್ಷಿಸಿ ಎಸ್‌ಎಸ್‌ಎಲ್‌ಸಿ ಫಲಿತಾಂಶ : ಎಸ್‌ಎಂಎಸ್‌ನಲ್ಲೂ ಸಿಗುತ್ತದೆ ರಿಸಲ್ಟ್‌ Read More »

ಅಕ್ಷಯ ಕಾಲೇಜು ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಮಗ್ರ ಚಾಂಪಿಯನ್!

ಪುತ್ತೂರಿನ ಸಂತ ಫಿಲೋಮಿನಾ ಸ್ನಾತಕೋತ್ತರ ಪದವಿ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಅಂತರ್‌ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಅಕ್ಷಯ ಕಾಲೇಜಿನ ವಿದ್ಯಾರ್ಥಿಗಳ ತಂಡವು ಸಮಗ್ರ ಚಾಂಪಿಯನ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. M.Com, M.Scಮತ್ತು MSW ವಿಭಾಗಗಳಲ್ಲಿ ನಡೆದ ಸ್ಪರ್ಧೆಗಳಲ್ಲಿ ಅಕ್ಷಯ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಮೆರೆದಿದ್ದಾರೆ. ವಿದ್ಯಾರ್ಥಿಗಳ ಪ್ರಶಸ್ತಿಗಳ ವಿವರ ಹೀಗಿದೆ : Canvas Expression: ದ್ವಿತೀಯ ಬಹುಮಾನ – ಮಧುಸೂದನ್ ಮತ್ತು ಸುಜನ್ (ಪ್ರಥಮ ಇಂಟೀರಿಯರ್ ಡೆಕೋರೆಷನ್),,The Search Begins: ದ್ವಿತೀಯ ಬಹುಮಾನ – ಪೃಥ್ವಿರಾಜ್,

ಅಕ್ಷಯ ಕಾಲೇಜು ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಮಗ್ರ ಚಾಂಪಿಯನ್! Read More »

ಅರ್ಹರನ್ನು ಸನ್ಮಾನಿಸಿದರೆ ಸನ್ಮಾನಿಸಿದವರಿಗೊಂದು ಹೆಮ್ಮೆ : – ಡಾ. ಪ್ರಭಾಕರ ಭಟ್  ಕಲ್ಲಡ್ಕ | ನಿರಂಜನ, ಶಂಕರ ಸಾಹಿತ್ಯ ಪ್ರಶಸ್ತಿ ಪ್ರದಾನ

ಪುತ್ತೂರು: ಹಿರಿಯರಾದರೂ ಸಕ್ರಿಯರಾಗಿರುವ ಅನೇಕರ ಉತ್ಸಾಹ ನಮಗೆ ಪ್ರೇರಣೆ. ಸದಾಶಿವ ಭಟ್ ಪಳ್ಳು ಅವರಂತಹ ಸಾಧಕರು ಹತ್ತು ಭಾಷೆಗಳಲ್ಲಿ ಸಾಹಿತ್ಯ ರಚನೆ ಮಾಡುತ್ತಾರೆ ಎಂದಾದರೆ ಅವರ ಸಂಪರ್ಕಕ್ಕೆ ಬಂದವರೂ ಒಳ್ಳೆಯ ಭಾಷಾ ಜ್ಞಾನವನ್ನು ಹೊಂದಬಹುದು. ಅರ್ಹ ವ್ಯಕ್ತಿಗಳಿಗೆ ಸನ್ಮಾನ ಮಾಡಿದರೆ ಸನ್ಮಾನಿಸಿದವರಿಗೂ ಅದು ಹೆಮ್ಮೆಯ ಕ್ಷಣ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ನುಡಿದರು. ಅವರು ಮಂಗಳವಾರ ಪುತ್ತೂರು ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಕಾಲೇಜು (ಸ್ವಾಯತ್ತ) ಇಲ್ಲಿನ ಸುವರ್ಣ ಮಹೋತ್ಸವ

ಅರ್ಹರನ್ನು ಸನ್ಮಾನಿಸಿದರೆ ಸನ್ಮಾನಿಸಿದವರಿಗೊಂದು ಹೆಮ್ಮೆ : – ಡಾ. ಪ್ರಭಾಕರ ಭಟ್  ಕಲ್ಲಡ್ಕ | ನಿರಂಜನ, ಶಂಕರ ಸಾಹಿತ್ಯ ಪ್ರಶಸ್ತಿ ಪ್ರದಾನ Read More »

ಕೆ.ಎಸ್. ಎಸ್ ಕಾಲೇಜಿನ ಪ್ರಾಕೃತ ಪ್ರವೇಶ ಮತ್ತು ಡಿಪ್ಲೋಮಾ ಕೋರ್ಸಿಗೆ ಉತ್ತಮ ಫಲಿತಾಂಶ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಇತಿಹಾಸ ವಿಭಾಗ ಹಾಗೂ ರಾಷ್ಟ್ರೀಯ ಪ್ರಾಕೃತ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆ ಶ್ರವಣಬೆಳಗೊಳ ಜಂಟಿಯಾಗಿ  ಪ್ರಾಕೃತ ಸರ್ಟಿಫಿಕೇಟ್ ಮತ್ತು ಡಿಪ್ಲೋಮ  ಕೋರ್ಸ್ನ ಫಲಿತಾಂಶ ಕಾರ್ಯಕ್ರಮ ನಡೆಯಿತು. ಇತಿಹಾಸ ವಿಭಾಗದ ಮುಖ್ಯಸ್ಥ ಡಾ ಪ್ರಸಾದ. ಎನ್ ಹಾಗೂ ಇತಿಹಾಸ ಉಪನ್ಯಾಸಕಿ ನಮಿತಾ ಎಂ ಎ ಅವರ ಮಾರ್ಗದರ್ಶನದಲ್ಲಿ   ಪ್ರತಿ ವರ್ಷ ಕೆ.ಎಸ್. ಎಸ್ ಕಾಲೇಜಿನ ಪ್ರಾಕೃತ ಪ್ರವೇಶ ಮತ್ತು ಡಿಪ್ಲೋಮಾ ಕೋರ್ಸಿಗೆ ಉತ್ತಮ ಫಲಿತಾಂಶ ನಡೆಸಲಾಗುತ್ತದೆ.  ಈ ಕೋರ್ಸಿಗೆ 31 ವಿದ್ಯಾರ್ಥಿಗಳು ದಾಖಲಾಗಿ

ಕೆ.ಎಸ್. ಎಸ್ ಕಾಲೇಜಿನ ಪ್ರಾಕೃತ ಪ್ರವೇಶ ಮತ್ತು ಡಿಪ್ಲೋಮಾ ಕೋರ್ಸಿಗೆ ಉತ್ತಮ ಫಲಿತಾಂಶ Read More »

ಎಂಡಿ ಹೋಮಿಯೋಪಥಿ ಪರೀಕ್ಷೆಯಲ್ಲಿ ಶ್ರೀವಿದ್ಯಾ ಭಟ್‍ ವಿವಿಗೆ 8ನೇ ರ‍್ಯಾಂಕ್

ಪುತ್ತೂರು: ಶ್ರೀವಿದ್ಯಾ ಭಟ್ ಅವರು ಎಂಡಿ ಹೋಮಿಯೋಪಥಿ ಪರೀಕ್ಷೆಯಲ್ಲಿ ವಿಶ್ವವಿದ್ಯಾನಿಲಯಕ್ಕೆ  8ನೇ ರ‍್ಯಾಂಕ್ ಗಳಿಸಿದ್ದಾರೆ. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯಲ್ಲಿ ನಡೆದ ಅರ್ಗನಾನ್ ಆಫ್ ಮೆಡಿಸಿನ್ ಮತ್ತು ಹೋಮಿಯೋಪಥಿ ಫಿಲಾಸಫಿ ವಿಷಯದ ಎಂಡಿ ಹೋಮಿಯೋಪಥಿ ಪರೀಕ್ಷೆಯಲ್ಲಿ ವಿಶ್ವವಿದ್ಯಾನಿಲಯಕ್ಕೆ  8ನೇ ರ‍್ಯಾಂಕ್ ಗಳಿಸಿದ್ದಾರೆ ಅವರು ಪುತ್ತೂರು ಬೆದ್ರಾಳ ನಿವಾಸಿ ಮನ್ವಿತ್ ಕುಮಾರ್ ಅವರ ಪತ್ನಿ , ಪಳ್ಳ ಮುಳ್ಳೇರಿಯ ನಿವಾಸಿ  ದಿ. ಶ್ರೀಮನ್ನಾರಾಯಣ ಭಟ್ ಹಾಗೂ ಸರಸ್ವತಿ ದಂಪತಿ ಪುತ್ರಿ

ಎಂಡಿ ಹೋಮಿಯೋಪಥಿ ಪರೀಕ್ಷೆಯಲ್ಲಿ ಶ್ರೀವಿದ್ಯಾ ಭಟ್‍ ವಿವಿಗೆ 8ನೇ ರ‍್ಯಾಂಕ್ Read More »

ಕೌಶಲ್ಯಗಳ ಬೆಳವಣಿಗೆಗೆ ವಿಮರ್ಶಾತ್ಮಕ ಚಿಂತನೆ ಅಗತ್ಯ – ಬಲರಾಮ ಆಚಾರ್ಯ | ಫಿಲೋಕಾರ್ನಿವಾಲ್- 2025 ಪಿಜಿಫೆಸ್ಟ್ ಉದ್ಘಾಟನೆ

ಪುತ್ತೂರು: ಪುತ್ತೂರು ಸಂತ ಫಿಲೋಮಿನ ಕಾಲೇಜು (ಸ್ವಾಯತ್ತ) ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸ್ನಾತಕೋತ್ತರ ವಿಭಾಗಗಳ ಫೆಸ್ಟ್ “ಫಿಲೋಕಾರ್ನಿವಾಲ್ 2025” ಸೋಮವಾರ ಉದ್ಘಾಟನೆಗೊಂಡಿತು. ಜಿ..ಎಲ್. ಆಚಾರ್ಯ ಸಮೂಹ ಸಂಸ್ಥೆಗಳ ಎಂಡಿ ಬಲರಾಮ ಆಚಾರ್ಯ ಉದ್ಘಾಟನೆ ನೆರವೇರಿಸಿ ಮಾತನಾಡಿ, ಪ್ರಸ್ತುತ ದಿನಮಾನದಲ್ಲಿ ಕೌಶಲ್ಯಗಳು ಬಹುಮುಖ್ಯವಾಗಿದ್ದು ಕೌಶಲ್ಯಗಳ ಬೆಳವಣಿಗೆಗೆ ವಿಮರ್ಶಾತ್ಮಕ ಚಿಂತನೆಯ ಅಗತ್ಯವಿದೆ.  ವಿದ್ಯಾರ್ಥಿಗಳು ಕೇವಲ ತರಗತಿ ಚಟುವಟಿಗಳಲ್ಲಿ ಮಾತ್ರ ತೊಡಗಿಕೊಳ್ಳದೆ ಇಂತಹ ಫೆಸ್ಟ್ ಗಳನ್ನು ಆಯೋಜನೆ ಮಾಡಿ ತಮ್ಮನ್ನು ತಾವು ತೊಡಗಿಸಿಕೊಂಡರೆ ಪ್ರತಿಯೊಬ್ಬರಲ್ಲೂ ಕೌಶಲ್ಯಗಳ ಅಭಿವೃದ್ಧಿ ಸಾಧ್ಯ

ಕೌಶಲ್ಯಗಳ ಬೆಳವಣಿಗೆಗೆ ವಿಮರ್ಶಾತ್ಮಕ ಚಿಂತನೆ ಅಗತ್ಯ – ಬಲರಾಮ ಆಚಾರ್ಯ | ಫಿಲೋಕಾರ್ನಿವಾಲ್- 2025 ಪಿಜಿಫೆಸ್ಟ್ ಉದ್ಘಾಟನೆ Read More »

error: Content is protected !!
Scroll to Top