ಶೈಕ್ಷಣಿಕ

ಎಲ್‌ಕೆಜಿಯಿಂದ ಪಿಯುಸಿ ತನಕದ ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ

ಬಡ ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡಲು ಸರ್ಕಾರದ ಮಹತ್ವದ ನಿರ್ಧಾರ ಬೆಂಗಳೂರು: ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳ ಎಲ್‌ಕೆಜಿಯಿಂದ ಪಿಯುಸಿ ತನಕದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ. ಈ ಕುರಿತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್‌ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು […]

ಎಲ್‌ಕೆಜಿಯಿಂದ ಪಿಯುಸಿ ತನಕದ ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ Read More »

ಭಾರತೀಯ ಚಾರ್ಟರ್ಡ್ ಎಕೌಂಟೆಂಟ್ಸ್ ಸಂಸ್ಥೆ (ಐಸಿಎಐ) 2025 ರಲ್ಲಿ ನಡೆಸಿದ ಸಿ.ಎ. ಪರೀಕ್ಷೆಯಲ್ಲಿ ಮುಹಮ್ಮದ್ ಇಯಾಸ್‍ ಉತ್ತೀರ್ಣ

ಪುತ್ತೂರು: ಭಾರತೀಯ ಚಾರ್ಟರ್ಡ್‍ ಎಕೌಂಟೆಂಟ್ಸ್ ಸಂಸ್ಥೆ (ಐಸಿಎಐ)ಯು 2025 ರಲ್ಲಿ ನಡೆಸಿದ ಸಿ.ಎ. ಪರೀಕ್ಷೆಯಲ್ಲಿ ಬಂಟ್ವಾಳ ತಾಲೂಕಿನ ಪೆರ್ನೆ ನಿವಾಸಿ ಮುಹಮ್ಮದ್ ಇಯಾಸ್ ರವರು ಮೊದಲ ಪ್ರಯತ್ನದಲ್ಲಿಯೇ ಗ್ರೂಪ್ ಒಂದು ಮತ್ತು ಗ್ರೂಪ್  ಎರಡರಲ್ಲೂ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಪೆರ್ನೆ ನಿವಾಸಿ ಇಸ್ಮಾಯಿಲ್ ಮತ್ತು ರುಖ್ಯಾ ದಂಪತಿಯ ಕಿರಿಯ ಪುತ್ರನಾಗಿರುವ ಮುಹಮ್ಮದ್ ಇಯಾಸ್ ರವರು ಸಿಎ ಗಣೇಶ್ ರಾವ್ ಪಿ. ಅವರ ಮಾರ್ಗದರ್ಶನದಲ್ಲಿ ಕಳೆದ ಮೇ ತಿಂಗಳು ನಡೆದ ಸಿಎ ಅಂತಿಮ ಪರೀಕ್ಷೆಗೆ ಹಾಜರಾಗಿ ಉತ್ತೀರ್ಣರಾಗಿದ್ದಾರೆ. ಮುಹಮ್ಮದ್ ಇಯಾಸ್

ಭಾರತೀಯ ಚಾರ್ಟರ್ಡ್ ಎಕೌಂಟೆಂಟ್ಸ್ ಸಂಸ್ಥೆ (ಐಸಿಎಐ) 2025 ರಲ್ಲಿ ನಡೆಸಿದ ಸಿ.ಎ. ಪರೀಕ್ಷೆಯಲ್ಲಿ ಮುಹಮ್ಮದ್ ಇಯಾಸ್‍ ಉತ್ತೀರ್ಣ Read More »

ರಾಜ್ಯ ಪಠ್ಯಕ್ರಮದ ಎಸ್‌ಎಸ್‌ಎಲ್‌ಸಿ ಮಕ್ಕಳಿಗೂ ಸಿಬಿಎಸ್‌ಇ ಮಾದರಿ ಪರೀಕ್ಷೆ

ಪರೀಕ್ಷಾ ಪದ್ಧತಿಯಲ್ಲಿ ಸಮಗ್ರ ಬದಲಾವಣೆಗೆ ಸಮಿತಿ ಶಿಫಾರಸು ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳ ಮಕ್ಕಳಿಗೂ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಮಾದರಿಯಲ್ಲೇ ಎಸ್‌ಎಸ್ಎಲ್‌ಸಿ ಪರೀಕ್ಷೆ ನಡೆಸುವ ಪ್ರಸ್ತಾವವೊಂದನ್ನು ಸರ್ಕಾರದ ಮುಂದಿಡಲಾಗಿದೆ. ಸಿಬಿಎಸ್‌ಇ ಪಠ್ಯಕ್ರಮದ ಪ್ರಕಾರ ಲಿಖಿತ ಪರೀಕ್ಷೆ ಹಾಗೂ ಆಂತರಿಕ ಅಂಕಗಳೂ ಸೇರಿ 100ಕ್ಕೆ ಕನಿಷ್ಠ 33 ಅಂಕ ಪಡೆದವರು ಉತ್ತೀರ್ಣರಾಗಲಿದ್ದಾರೆ. ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ.

ರಾಜ್ಯ ಪಠ್ಯಕ್ರಮದ ಎಸ್‌ಎಸ್‌ಎಲ್‌ಸಿ ಮಕ್ಕಳಿಗೂ ಸಿಬಿಎಸ್‌ಇ ಮಾದರಿ ಪರೀಕ್ಷೆ Read More »

ವಾರದ ಆರು ದಿನ ಮೊಟ್ಟೆ ವಿತರಣೆ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

ಸೋಮವಾರ, ಶನಿವಾರ ಮೊಟ್ಟೆ ಕೊಡದ ಕುರಿತು ದೂರು ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯವಾಗಿ 6 ದಿನ ಮೊಟ್ಟೆ ವಿತರಿಸಬೇಕು ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಮಕ್ಕಳಲ್ಲಿ ಪೌಷ್ಟಿಕಾಂಶ ಕೊರತೆ ನಿವಾರಿಸುವ ಉದ್ದೇಶದಿಂದ 1ರಿಂದ 10ನೇ ತರಗತಿ ವರೆಗಿನ ಮಕ್ಕಳಿಗೆ ವಾರದ 6 ದಿನ ಮೊಟ್ಟೆ ಕೊಡುವ ಕಾರ್ಯಕ್ರಮ ಸರ್ಕಾರ ಘೋಷಣೆ ಮಾಡಿದೆ. ಕೆಲವು ಶಾಲೆಗಳಲ್ಲಿ ಎಸ್‌ಡಿಎಂಸಿ ಸೂಚನೆ ಮೇರೆಗೆ 3 ದಿನ ಮೊಟ್ಟೆ, 3 ದಿನ ಬಾಳೆಹಣ್ಣು ಕೊಡುತ್ತಿದ್ದಾರೆ. ಸೋಮವಾರ ಮತ್ತು ಶನಿವಾರ

ವಾರದ ಆರು ದಿನ ಮೊಟ್ಟೆ ವಿತರಣೆ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ Read More »

ಸಿಎ ಇಂಟರ್ ಮೀಡಿಯೇಟ್‍ ಪರೀಕ್ಷೆಯಲ್ಲಿ ನಿಧಿರಾಜ್‍ ಎಂ.ಪಿ. ಉತ್ತೀರ್ಣ’

ಪುತ್ತೂರು: ಇನ್ಸ್ಟಿಟ್ಯೂಟ್‌ ಆಫ್‌ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ(ಐಸಿಎಐ) ನಡೆಸುವ ಸಿಎ ಇಂಟರ್ಮೀಡಿಯೇಟ್ ಪರೀಕ್ಷೆಯ ಎರಡೂ ಗ್ರೂಪ್‌ಗಳಲ್ಲಿ ಉತ್ತಮ ಅಂಕಗಳನ್ನು ಗಳಿಸುವ ಮೂಲಕ ನಿಧಿರಾಜ್ ಎಂ.ಪಿ. ಉತ್ತೀರ್ಣರಾಗಿದ್ದಾರೆ. ನಿಧಿರಾಜ್‍ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿದ್ದು, 2023-24ನೇ ಶೈಕ್ಷಣಿಕ ವರ್ಷದಲ್ಲಿ ಪಿಯುಸಿ ವ್ಯಾಸಂಗ ಪೂರ್ಣಗೊಳಿಸಿದ್ದರು. ಅವರು ಹಾಸನದ  ಗುಲಾಬಿ.ಕೆ ಅವರ ಪುತ್ರನಾಗಿದ್ದಾರೆ.  

ಸಿಎ ಇಂಟರ್ ಮೀಡಿಯೇಟ್‍ ಪರೀಕ್ಷೆಯಲ್ಲಿ ನಿಧಿರಾಜ್‍ ಎಂ.ಪಿ. ಉತ್ತೀರ್ಣ’ Read More »

ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಿಎ ಅಂತಿಮ ಪರೀಕ್ಷೆಯಲ್ಲಿ ಆದಿತ್ಯ ಆರ್. ಬನ್ನೂರು ತೇರ್ಗಡೆ

ಪುತ್ತೂರು: ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆ (ICAI) ಮೇ 2025ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಅದಿತ್ಯ ಆರ್. ಬನ್ನೂರು ಉತ್ತೀರ್ಣರಾಗಿದ್ದಾರೆ. ಈವರು ಪುತ್ತೂರಿನ ಹಿರಿಯ ಬಿಜೆಪಿ ಕಾರ್ಯಕರ್ತ ಹಾಗೂ ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು ಮತ್ತು ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು, ಪುತ್ತೂರಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ಥೆ ಸುಧಾ ಕುಮಾರಿ ಪಿ.ಕೆ ದಂಪತಿ ಪುತ್ರ. ಅದಿತ್ಯ ಅವರು ತಮ್ಮ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾಭ್ಯಾಸವನ್ನು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲದಲ್ಲಿ ಪೂರ್ಣಗೊಳಿಸಿದ್ದಾರೆ.

ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಿಎ ಅಂತಿಮ ಪರೀಕ್ಷೆಯಲ್ಲಿ ಆದಿತ್ಯ ಆರ್. ಬನ್ನೂರು ತೇರ್ಗಡೆ Read More »

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ INVESTITURE ಸಮಾರಂಭ

ಪುತ್ತೂರು: ಕೃಷ್ಣನಗರದಲ್ಲಿ ಶಿಕ್ಷಣ ಕೈಂಕರ್ಯ ನಡೆಸುತ್ತಿರುವ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನ 2025-26ನೇ ಸಾಲಿನ ವಿದ್ಯಾರ್ಥಿ ಸರಕಾರದ ಪದಗ್ರಹಣ ಸಮಾರಂಭ – IVESTITURE – ಶಾಲಾ ತೆರೆದ ಸಭಾಂಗಣದಲ್ಲಿ ನಡೆಯಿತು. ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ದೈಹಿಕ ಶಿಕ್ಶಣ ನಿರ್ದೇಶಕರಾದ ಬಾಲಚಂದ್ರ ಬಾರ್ತಿಕುಮೇರು ಮುಖ್ಯ ಪದಗ್ರಹಣ ಅಧಿಕಾರಿಗಳಾಗಿ ಆಗಮಿಸಿದ್ದರು. ಮಾತನಾಡುತ್ತಾ ಅವರು ‘ಶಾಲೆಯಲ್ಲಿ ಎರಡು ನಾಯಕರು ಮುಖ್ಯ – ಪ್ರಾಂಶುಪಾಲರು ಮತ್ತು ವಿದ್ಯಾರ್ಥಿ ನಾಯಕ’ ಎಂದರು.ನಾಯಕರು ಸಶಕ್ತವಾಗಿದ್ದಾಗ ದೇಶವಾಗಲೀ, ಸಂಸ್ಥೆಯಾಗಲೀ ದೃಢವಾಗಿರುತ್ತದೆ ಎಂದು ಪ್ರತಿಪಾದಿಸಿದರು. ವಿದ್ಯಾರ್ಥಿ ಸರಕಾರದ ವಿವಿಧ

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ INVESTITURE ಸಮಾರಂಭ Read More »

ಪುತ್ತೂರು ತಾಲೂಕಿನ 18 ಸರ್ಕಾರಿ ಶಾಲೆಗಳಲ್ಲಿ ಕನ್ನಡದ ಜೊತೆಗೆ ಇಂಗ್ಲಿಷ್‌ ಮೀಡಿಯಂ ಕಲಿಕೆ

ದ.ಕ. ಜಿಲ್ಲೆಯ 115 ಸೇರಿ ರಾಜ್ಯದ 4,134 ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಬೋಧನೆಗೆ ಅನುಮತಿ ಮಂಗಳೂರು: ಪುತ್ತೂರಿನ 18 ಸೇರಿ ದಕ್ಷಿಣ ಕನ್ನಡ ಜಿಲ್ಲೆಯ 115 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2025–26ನೇ ಶೈಕ್ಷಣಿಕ ವರ್ಷದಿಂದ ಇಂಗ್ಲಿಷ್‌ ಮಾಧ್ಯಮ ಶುರುವಾಗಲಿದೆ. ರಾಜ್ಯದ ಒಟ್ಟು 4,134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇತರ ಮಾಧ್ಯಮಗಳ ಜೊತೆಗೆ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ಹೊಸದಾಗಿ ಪ್ರಾರಂಭಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯ 115 ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು

ಪುತ್ತೂರು ತಾಲೂಕಿನ 18 ಸರ್ಕಾರಿ ಶಾಲೆಗಳಲ್ಲಿ ಕನ್ನಡದ ಜೊತೆಗೆ ಇಂಗ್ಲಿಷ್‌ ಮೀಡಿಯಂ ಕಲಿಕೆ Read More »

ಕರಾವಳಿಯ ಅಂಗನವಾಡಿಗಳಲ್ಲಿ LKG, UKG ಆರಂಭಿಸಲು ಸಿದ್ಧತೆ

ಮಂಗಳೂರು: ಮಕ್ಕಳಿಗೆ ಪ್ರಾಥಮಿಕ ಹಂತದಲ್ಲೇ ಇಂಗ್ಲೀಷ್ ಶಿಕ್ಷಣ ನೀಡುವ ಸಲುವಾಗಿ ಮತ್ತು ಅಂಗನವಾಡಿ ಕೇಂದ್ರಗಳನ್ನು ಬಲಪಡಿಸುವ ಉದ್ದೇಶದೊಂದಿಗೆ ಕರಾವಳಿ ಭಾಗದಲ್ಲಿನ 110 ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆ‌ಜಿ, ಯುಕೆಜಿ ತರಗತಿಗಳನ್ನು ಆರಂಭಿಸಲು ತಯಾರಿ ನಡೆದಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ದಕ್ಷಿಣ ಕನ್ನಡ ಜಿಲ್ಲೆಯ 70 ಅಂಗನವಾಡಿಗಳು ಮತ್ತು ಉಡುಪಿ ಜಿಲ್ಲೆಗಳಿಗೆ ಸಂಬಂಧಿಸಿದ‌ 40 ಅಂಗನವಾಡಿ ಕೇಂದ್ರಗಳಲ್ಲಿ ಕೆಜಿ ತರಗತಿಗಳನ್ನು ಆರಂಭ ಮಾಡುವ ನಿಟ್ಟಿನಲ್ಲಿ ಪೂರ್ವತಯಾರಿಗಳನ್ನು ಆರಂಭ ಮಾಡಿದೆ. ಈ ಬಗ್ಗೆ ಇಲಾಖೆ ಸದ್ಯ ಮೌಖಿಕ ನಿರ್ದೇಶನ

ಕರಾವಳಿಯ ಅಂಗನವಾಡಿಗಳಲ್ಲಿ LKG, UKG ಆರಂಭಿಸಲು ಸಿದ್ಧತೆ Read More »

ಸರ್ಕಾರಿ ಶಿಕ್ಷಣ ಸಂಸ್ಥೆ ಉಳಿಸಲು ಹತ್ತು ಲಕ್ಷಕ್ಕೂ ಅಧಿಕ ಜನರಿಂದ ಸಹಿ

ಮಡಿಕೇರಿ: ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ‘ಸಾರ್ವಜನಿಕ ಶಿಕ್ಷಣ ಉಳಿಸಿ’ ಎಂಬ ಧ್ಯೇಯದಡಿ ಉಳಿಸಲು ಮತ್ತು ಬಲಪಡಿಸಲು ಕೈಗೊಂಡ 50 ಲಕ್ಷ ಸಹಿ ಸಂಗ್ರಹ ಅಭಿಯಾನದಲ್ಲಿ ಈಗಾಗಲೇ 10 ಲಕ್ಷಗಳಷ್ಟು ‌ಸಹಿ ಸಂಗ್ರಹ ಮಾಡಲಾಗಿದೆ ಎಂದು AIDSO ಜಿಲ್ಲಾ ಸಹ ಸಂಚಾಲಕಿ ‌ಸ್ವಾತಿ ಅವರು ತಿಳಿಸಿದ್ದಾರೆ. ಕರ್ನಾಟಕ ಸರ್ಕಾರ 6,200 ಸರ್ಕಾರಿ ಶಾಲೆಗಳನ್ನು ಹಬ್ ಆ್ಯಂಡ್ ಸ್ಪೋಕ್ ಮಾದರಿಯಡಿ ಸಂಯೋಜನೆಯ ಹೆಸರಲ್ಲಿ ಮುಚ್ಚುವ ಜನ ವಿರೋಧಿ ನಡೆ ಪ್ರದರ್ಶಿಸಿದೆ. ಸರ್ಕಾರದ ಈ ನಿಲುವಿನ ವಿರುದ್ಧ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು

ಸರ್ಕಾರಿ ಶಿಕ್ಷಣ ಸಂಸ್ಥೆ ಉಳಿಸಲು ಹತ್ತು ಲಕ್ಷಕ್ಕೂ ಅಧಿಕ ಜನರಿಂದ ಸಹಿ Read More »

error: Content is protected !!
Scroll to Top