ಶೈಕ್ಷಣಿಕ

ಪುತ್ತೂರಿನ ಎವಿಜಿ ಶಾಲೆಗೆ ಬೆಂಗಳೂರು ಡಿಡಿಪಿಐ ಲೋಕೇಶ್ .ಸಿ  ಭೇಟಿ

ಪುತ್ತೂರು: ಬನ್ನೂರು ಕೃಷ್ಣ ನಗರದಲ್ಲಿರುವ ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಗೆ ಈ ಹಿಂದೆ ಪುತ್ತೂರಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದು, ಇದೀಗ ಪದೋನ್ನತಿ ಹೊಂದಿ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ವಿದ್ಯಾಂಗ ಉಪನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಲೋಕೇಶ್. ಸಿ ಅವರು ಭೇಟಿ ನೀಡಿದರು. ಶಾಲೆಯ ತರಗತಿ ಕೊಠಡಿ, ಕಂಪ್ಯೂಟರ್ ಕೊಠಡಿಯನ್ನು ಹಾಗೂ ಕಚೇರಿಯನ್ನು ವೀಕ್ಷಿಸಿದ ಅವರು ಶಾಲಾ ಪರಿಸರ ಹಾಗೂ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದುಕೊಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಶಾಲೆಯ ವತಿಯಿಂದ ಅವರನ್ನು ಹಾಗೂ ಅವರೊಂದಿಗೆ ಬಂದಿದ್ದ […]

ಪುತ್ತೂರಿನ ಎವಿಜಿ ಶಾಲೆಗೆ ಬೆಂಗಳೂರು ಡಿಡಿಪಿಐ ಲೋಕೇಶ್ .ಸಿ  ಭೇಟಿ Read More »

ಶಾಲೆಗಳಿಗೆ ದಸರಾ ರಜೆ ಘೋಷಣೆ | ಕರ್ನಾಟಕ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ

ಬೆಂಗಳೂರು: ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಿದ್ದು, ಇಡೀ ಕರ್ನಾಟಕದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ. ಈ ಹಿಂದೆ ಕರಾವಳಿ ಭಾಗದಲ್ಲಿ ದಸರಾ ರಜೆಯಲ್ಲಿ ಕೊಂಚ ಮಾರ್ಪಾಡು ಆಗುತ್ತಿತ್ತು. ಆದ್ರೆ ಈ ಬಾರಿ ಯಾವುದೇ ಮಾರ್ಪಾಡು ಆಗಿಲ್ಲ. ಇಡೀ ಕರ್ನಾಟಕದ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಲಾಗಿದೆ. ಅಕ್ಟೋಬರ್ 3 ರಿಂದ 20ರ ತನಕ ಅಂದರೆ 17 ದಿನಗಳ ಕಾಲ ದಸರಾ ರಜೆ ಸಿಗಲಿದೆ.

ಶಾಲೆಗಳಿಗೆ ದಸರಾ ರಜೆ ಘೋಷಣೆ | ಕರ್ನಾಟಕ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ Read More »

ರಾಜ್ಯ-ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರ ಜಿಲ್ಲಾ ಸಮಿತಿ ಸಭೆ

ಪುತ್ತೂರು: ದ. ಕ ಜಿಲ್ಲೆಯ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರ ಸಂಘದ ಸಭೆ ಪುತ್ತೂರಿನ ಮಾತೃಛಾಯಾ ಸಭಾಂಗಣದಲ್ಲಿ  ಜಿಲ್ಲಾಧ್ಯಕ್ಷ ರಾಷ್ಟ್ರ ಪ್ರಶಸ್ತಿ ಪುರಸ್ಕೃತ  ಬಿ.ಐತಪ್ಪ ನಾಯ್ಕ್ ಅಧ್ಯಕ್ಷತೆಯಲ್ಲಿ ಜರಗಿತು. ಬೆಂಗಳೂರಿನ ಕೇಂದ್ರ ಸಂಘದ ಸಭೆಯ  ಈ ವರೆಗಿನ ಬೆಳವಣಿಗೆಗಳನ್ನು ಕಾರ್ಯದರ್ಶಿ  ರಮೇಶ್. ರಾಯಿ ವಿವರಿಸಿದರು. ಕಳೆದ ಐದು ವರ್ಷಗಳಲ್ಲಿ ಬೆಂಗಳೂರಿನ ಎಲ್ಲಾ ಸಭೆಗಳಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪರವಾಗಿ ಭಾಗವಹಿಸಿದ  ರಮೇಶ್ ರಾಯಿ ಅವರನ್ನು  ಸನ್ಮಾನಿಸಲಾಯಿತು. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಗಂಗಾಧರ ಆರ್ ಕೆ

ರಾಜ್ಯ-ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರ ಜಿಲ್ಲಾ ಸಮಿತಿ ಸಭೆ Read More »

5,8,9 ಬೋರ್ಡ್ ಪರೀಕ್ಷೆ ಈ ವರ್ಷವೂ ಇಲ್ಲ | ಮೌಲ್ಯಾಂಕನ ಮುಂದುವರಿಸಲು  ಶಿಕ್ಷಣ ಇಲಾಖೆ ಸೂಚನೆ 

ರಾಜ್ಯ ಪಠ್ಯಕ್ರಮದ 5, 8 ಮತ್ತು 9ನೇ ತರಗತಿ ಮಕ್ಕಳಿಗೆ  ಬೋರ್ಡ್ ಪರೀಕ್ಷೆಯ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇರುವುದರಿಂದ, 2024-25ನೇ ಈ ಹಿಂದೆ ಇದ್ದಂತೆ ಎಲ್ಲ ತರಗತಿಗಳಿಗೂ ಮೌಲ್ಯಾಂಕನ ಮುಂದುವರೆಸಲು ಶಿಕ್ಷಣ ಇಲಾಖೆ ಸೂಚಿಸಿದೆ. ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳು 1ರಿಂದ 9ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಭಾಗ 1 ಮತ್ತು ಭಾಗ 2ರ ಆಧಾರದಲ್ಲಿ ರೂಪಣಾತ್ಮಕ ಮತ್ತು ಸಂಕಲನಾತ್ಮಕ ಮೌಲ್ಯಾಂಕನ ಪೂರ್ಣಗೊಳಿಸಬೇಕು. ಅಂತಿಮವಾಗಿ ಫಲಿತಾಂಶ ನಿರ್ಧರಿಸಲು

5,8,9 ಬೋರ್ಡ್ ಪರೀಕ್ಷೆ ಈ ವರ್ಷವೂ ಇಲ್ಲ | ಮೌಲ್ಯಾಂಕನ ಮುಂದುವರಿಸಲು  ಶಿಕ್ಷಣ ಇಲಾಖೆ ಸೂಚನೆ  Read More »

ಜುಲೈ 25 ರಿಂದ 27 ರವರೆಗೆ NEET-PG ಪರೀಕ್ಷೆ | 2 ಗಂಟೆ ಮುಂಚಿತಾಗಿ ಪ್ರಶ್ನೆ ಪತ್ರಿಕೆ ಸಿದ್ಧ

ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳ ಪ್ರವೇಶ ಪಡೆಯುವುದಕ್ಕೆ ನಡೆಯಲಿರುವ ನೀಟ್ -ಪಿಜಿ ಪರೀಕ್ಷೆ ಜುಲೈ ತಿಂಗಳ 25 ರಿಂದ ಜುಲೈ 27 ರವರೆಗೆ ನಡೆಯಲಿದ್ದು, ಮುಖ್ಯವಾಗಿ ಪ್ರಶ್ನೆ ಪತ್ರಿಕೆಗಳು ಸೋರಿಕೆ ತಡೆಗಟ್ಟುವುದಕ್ಕಾಗಿ ಪರೀಕ್ಷೆ ನಡೆಯುವುದಕ್ಕೂ 2 ಗಂಟೆಗಳ ಮುಂಚಿತಾಗಿ ಪ್ರಶ್ನೆ ಪರೀಕ್ಷೆಯನ್ನು ಸಿದ್ಧಪಡಿಸಲಾಗುತ್ತದೆ ಎಂದು ತಿಳಿದುಬಂದಿದೆ. ಜೂನ್ 23 ಕ್ಕೆ ನಿಗದಿಯಾಗಿದ್ದ NEET-PG ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯ ಹಿನ್ನೆಲೆಯಲ್ಲಿ ಪರೀಕ್ಷೆ ಆರಂಭದ ಕೆಲವು ಗಂಟೆ ಮುಂಚೆ ಪರೀಕ್ಷೆ ರದ್ದು ಮಾಡಲಾಗಿತ್ತು. ಇದರಿಂದ ಹಲವು ರೀತಿಯ ಪ್ರತಿಭಟನೆ ನಡೆದಿದ್ದು,

ಜುಲೈ 25 ರಿಂದ 27 ರವರೆಗೆ NEET-PG ಪರೀಕ್ಷೆ | 2 ಗಂಟೆ ಮುಂಚಿತಾಗಿ ಪ್ರಶ್ನೆ ಪತ್ರಿಕೆ ಸಿದ್ಧ Read More »

ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘ ರಚನೆ

ಸವಣೂರು : ವಿದ್ಯಾರಶ್ಮಿ ವಿದ್ಯಾಲಯದ 2024 -25 ನೇ ಸಾಲಿನ ವಿದ್ಯಾರ್ಥಿ ಸರಕಾರ ರಚನೆಯಾಯಿತು. ಅಧ್ಯಕ್ಷರಾಗಿ ದ್ವಿತೀಯ ಪಿ ಯು ಸಿ ವಾಣಿಜ್ಯ ವಿಭಾಗದ ಕೆ.ಯಶಸ್ವಿ ರೈ ,ಉಪಾಧ್ಯಕ್ಷರಾಗಿ 10 ನೇ ತರಗತಿಯ ಎಂ ವೈಷ್ಣವಿ, ಕಾರ್ಯದರ್ಶಿಯಾಗಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಖದೀಜ ಅಝೀಲಾ ಎ.ಎಸ್ , ಜತೆ ಕಾರ್ಯದರ್ಶಿಯಾಗಿ 5 ನೇ ತರಗತಿಯ ಶ್ರೀ ಹರ್ಷ ಸಿ. ಕೆ, ಕ್ರೀಡಾ ಕಾರ್ಯದರ್ಶಿಯಾಗಿ ಪ.ಪೂ ವಿಭಾಗದಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಪ್ರತೀಕ್ ಮತ್ತು ಶಾಲಾ

ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘ ರಚನೆ Read More »

ಇಂದು ನಿಗದಿ ಪಡಿಸಿದ್ದ ನೀಟ್-ಪಿಜಿ ಪರೀಕ್ಷೆ ಮುಂದೂಡಿಕೆ

ನವದೆಹಲಿ : ರಾಷ್ಟ್ರೀಯ ಪರೀಕ್ಷಾ ಮಂಡಳಿ ಇಂದು ನಿಗದಿ ಪಡಿಸಿದ್ದ ನೀಟ್-ಪಿಜಿ ಪ್ರವೇಶ ಪರೀಕ್ಷೆಯನ್ನು ಮುಂದೂಡಲಾಗಿದೆ. ಹೊಸ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ನೀಟ್-ಯುಜಿ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳ ನಿರ್ವಹಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಮುಖ್ಯಸ್ಥ ಸುಬೋದ್ ಕುಮಾರ್ ಸಿಂಗ್ ಅವರನ್ನ ಶನಿವಾರ ರಾತ್ರಿ ಹುದ್ದೆಯಿಂದ ವಜಾಗೊಳಿಸಲಾಗಿದೆ. ಇನ್ನು 1985ರ ಬ್ಯಾಚ್ ನಿವೃತ್ತ ಅಧಿಕಾರಿ ಪ್ರದೀಪ್ ಸಿಂಗ್ ಕರೋಲಾ ಅವರನ್ನು ನಿಯಮಿತ ಮುಖ್ಯಸ್ಥರನ್ನು ನೇಮಿಸುವವರೆಗೆ ಅಥವಾ

ಇಂದು ನಿಗದಿ ಪಡಿಸಿದ್ದ ನೀಟ್-ಪಿಜಿ ಪರೀಕ್ಷೆ ಮುಂದೂಡಿಕೆ Read More »

ವಿದ್ಯಾರ್ಥಿ ಜೀವನದಲ್ಲಿ ಕ್ರಿಯಾತ್ಮಕ ಸೃಜನಶೀಲತೆ ಬಹು ಮುಖ್ಯ: ಪ್ರೊ ವಿ.ಗಣಪತಿ ಭಟ್

ಪುತ್ತೂರು: ಭವಿಷ್ಯ ಸುಭದ್ರವಾಗಿರಬೇಕಾದರೆ ವಿದ್ಯಾರ್ಥಿ ಜೀವನದಲ್ಲೇ ಕೌಶಲ್ಯಗಳನ್ನು ಉತ್ತಮಗೊಳಿಸುವುದಕ್ಕೆ ಪ್ರಯತ್ನಿಸಬೇಕು. ಸೃಜನಶೀಲತೆ ಮತ್ತು ಸಕ್ರಿಯತೆಗಳ ಮೂಲಕ ಮಾತ್ರವೇ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ. ಹಾಗಾಗಿ ವಿದ್ಯಾರ್ಥಿ ಜೀವನದಲ್ಲಿ ಲಭಿಸುವ ವಿಪುಲ ಅವಕಾಶಗಳನ್ನು ಬಳಸಿಕೊಂಡರೆ ಮಾತ್ರ ಸಮಾಜದಲ್ಲಿ ಇತರರು ಗುರುತಿಸುವ ರೀತಿಯಲ್ಲಿ ಬೆಳೆಯಬಹುದು ಎಂದು ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿ.ಗಣಪತಿ ಭಟ್ ಅಭಿಪ್ರಾಯಪಟ್ಟರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಸ್ನಾತಕೋತ್ತರ ವಾಣಿಜ್ಯ ವಿಭಾಗದ ವತಿಯಿಂದ ಪದವಿ ವಿದ್ಯಾರ್ಥಿಗಳಿಗೆ ಆಯೋಜಿಸಿದ ವಿವೇಕ ಶೋಧನ -2024

ವಿದ್ಯಾರ್ಥಿ ಜೀವನದಲ್ಲಿ ಕ್ರಿಯಾತ್ಮಕ ಸೃಜನಶೀಲತೆ ಬಹು ಮುಖ್ಯ: ಪ್ರೊ ವಿ.ಗಣಪತಿ ಭಟ್ Read More »

ಮೇ.29 ರಿಂದ ಶಾಲಾರಂಭ | ಶಿಕ್ಷಕರು ಮೇ.29, ವಿದ್ಯಾರ್ಥಿಗಳು ಮೇ 31 ರಿಂದ ಹಾಜರಾಗುವಂತೆ ಆದೇಶ

ಬೆಂಗಳೂರು : ಹೊಸ ಶೈಕ್ಷಣಿಕ ವರ್ಷದ ಶಾಲಾರಂಭ ಮೇ.29 ರಿಂದ ಎಂಬ ಸಾರ್ವಜನಿಕ ಶಿಕ್ಷಣ ಇಲಾಖೆಯ ಈ ಹಿಂದಿನ ಆದೇಶದಲ್ಲಿ ಸ್ವಲ್ಪ ಬದಲಾವಣೆಯಾಗಿದ್ದು, ವಿದ್ಯಾರ್ಥಿಗಳು ಮತ್ತೆರಡು ದಿನ ರಜೆ ಅವಧಿ ಪಡೆಯಲಿದ್ದಾರೆ. ಮೇ.29 ರಿಂದಲೇ ಶಿಕ್ಷಕರು ಶಾಲೆಗೆ ಹಾಜರಾಗಲು ಸೂಚಿಸಲಾಗಿದೆ. ಮೇ.31ರಂದು ಮಕ್ಕಳು ಶಾಲೆಗೆ ಬರುವಂತೆ ಸೂಚಿಸಲಾಗಿದೆ. ಮೇ.29ರಂದು ಶಾಲೆಗೆ ಬರುವ ಶಿಕ್ಷಕರು ಸಿದ್ಧತಾ ಕಾರ್ಯವನ್ನು ನಡೆಸಲಿದ್ದಾರೆ. ಮಕ್ಕಳು ಮೇ.31ರಂದು ಶಾಲೆಗೆ ಬಂದರಾಯಿತು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೇ.29 ರಿಂದ ಶಾಲಾರಂಭ | ಶಿಕ್ಷಕರು ಮೇ.29, ವಿದ್ಯಾರ್ಥಿಗಳು ಮೇ 31 ರಿಂದ ಹಾಜರಾಗುವಂತೆ ಆದೇಶ Read More »

ಕಡಬ ಐಐಸಿಟಿ ಮೊಂಟೆಸ್ಸರಿ ಶಿಕ್ಷಣ ಸಂಸ್ಥೆಗೆ ಪ್ರಥಮ ವರ್ಷದಲ್ಲಿ 100% ಫಲಿತಾಂಶ

ಕಡಬ: ಭಾರತ ಸರಕಾರದ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ ಅಧೀನದಲ್ಲಿರುವ ಇಂಡಿಯನ್ ಇನ್ಸ್ಟಿಟ್ಯೂಟ್  ಆಫ್ ಕ್ಯಾರಿಯರ್ ಟ್ರೈನಿಂಗ್ ನ ಆಶ್ರಯದಲ್ಲಿ ಕಡಬದ ಸೈಂಟ್ ಜೋಕಿಮ್ಸ್  ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಐ ಎಸ್ ಓ 9001: 2015 ಸಂಸ್ಥೆಯಿಂದ ಪ್ರಾಮಾಣಿಕರಿಸಿದ ಐಐಸಿಟಿ  ಶಿಕ್ಷಣ ಸಂಸ್ಥೆಯ ವತಿಯಿಂದ ಮೊಂಟೆಸ್ಸರಿ (ನರ್ಸರಿ ಟೀಚರ್ ಟ್ರೈನಿಂಗ್) ಶಿಕ್ಷಕರ ತರಬೇತಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 9 ವಿದ್ಯಾರ್ಥಿನಿಯರಲ್ಲಿ 5 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 4 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗುವುದರೊಂದಿಗೆ ಸಂಸ್ಥೆಗೆ

ಕಡಬ ಐಐಸಿಟಿ ಮೊಂಟೆಸ್ಸರಿ ಶಿಕ್ಷಣ ಸಂಸ್ಥೆಗೆ ಪ್ರಥಮ ವರ್ಷದಲ್ಲಿ 100% ಫಲಿತಾಂಶ Read More »

error: Content is protected !!
Scroll to Top