ಸುದ್ದಿ

ಬಿಯರ್‌, ವಿಸ್ಕಿ ಬೆಲೆ ತುಸು ಇಳಿಕೆ

ಅಲ್ಕೊಹಾಲ್ ಇನ್ ಬೇವರೇಜ್ ನೀತಿಯಿಂದಾಗಿ ಕಡಿಮೆಯಾದ ಬೆಲೆ ಬೆಂಗಳೂರು: ಅಬಕಾರಿ ತೆರಿಗೆ ಪರಿಷ್ಕರಣೆ ಬೆನ್ನಲ್ಲೇ ರಾಜ್ಯ ಸರ್ಕಾರ ಬಿಯರ್‌ ಮತ್ತು ವಿಸ್ಕಿ ಬೆಲೆ ತುಸು ಇಳಿಕೆ ಮಾಡಿ ಮದ್ಯಪ್ರಿಯರು ಖುಷಿಪಡುವ ಸುದ್ದಿ ಕೊಟ್ಟಿದೆ. ಕರ್ನಾಟಕದಲ್ಲಿ ಮೈಲ್ಡ್ ಮತ್ತು ಲಾಗರ್ ಬಿಯರ್‌ಗಳ ಬೆಲೆ ಮೇ 11ರಿಂದ ಜಾರಿಗೆ ಬರುವಂತೆ ಶೇ.20-25 ಇಳಿಕೆಯಾಗಿದೆ. ಅಬಕಾರಿ ಇಲಾಖೆ ಬಿಯರ್ ಮತ್ತು ಸ್ಪಿರಿಟ್ಸ್‌ಗಳಿಗೆ ‘ಅಲ್ಕೊಹಾಲ್ ಇನ್ ಬೇವರೇಜ್’ (AiB) ನೀತಿಯಡಿ ಹೊಸ ದರಪಟ್ಟಿಯನ್ನು ಬಿಡುಗಡೆ ಮಾಡಿದ್ದು, 5 ಶೇಕಡಾ ಆಲ್ಕೊಹಾಲ್ v/v(volume/volume) ಹೊಂದಿರುವ […]

ಬಿಯರ್‌, ವಿಸ್ಕಿ ಬೆಲೆ ತುಸು ಇಳಿಕೆ Read More »

ನಕಲಿ ದಾಖಲೆ ಬಳಸಿ ಪಾಸ್‌ಪೋರ್ಟ್‌ ಸೃಷ್ಟಿ : ಕೇಸ್‌ ದಾಖಲು

ಮಹಿಳೆಗೆ ಗೊತ್ತಿಲ್ಲದಂತೆ ಅವರ ಹೆಸರಿನಲ್ಲಿ ಪಾಸ್‌ಪೋರ್ಟ್‌ ಪಡೆದು ವಿದೇಶಕ್ಕೆ ಪ್ರಯಾಣ ಮಂಗಳೂರು : ಬೇರೊಬ್ಬರ ಗುರುತಿನ ದಾಖಲೆ ಪತ್ರಗಳನ್ನು ದುರುಪಯೋಗಪಡಿಸಿ ನಕಲಿ ಪಾಸ್‌ಪೋರ್ಟ್‌ ರಚಿಸಿ ವಂಚನೆಗೈದ ಸಂಬಂಧ ಕ್ರಿಮಿನಲ್‌ ಪ್ರಕರಣ ದಾಖಲಾಗಿದೆ. ಉಳ್ಳಾಲ ನಿವಾಸಿ ಪ್ರೀತಾ ಡಿ.ಸೋಜ, ಪ್ರೇಮ್‌ ಡಿ.ಸೋಜ ಹಾಗೂ ಯಶೋದಾ ಕೇಶವ ಸೇರಿದಂತೆ ಹಲವರ ವಿರುದ್ಧ ಗಂಭೀರ ಆರೋಪಗಳಡಿ ಸಿಎಸ್‌ಬಿ ಪೊಲೀಸರು ಕ್ರಿಮಿನಲ್‌ ಪ್ರಕರಣ ದಾಖಲಿಸಿದ್ದಾರೆ. ಉಳ್ಳಾಲ ನಿವಾಸಿ ಯಶೋದಾ ಕೇಶವ ಎಂಬ ಮಹಿಳೆಯ ಹೆಸರಿನಲ್ಲಿ ಅನ್ಯ ಮಹಿಳೆಯೊಬ್ಬರು ಪಾಸ್‌ಪೋರ್ಟ್‌ ಪಡೆದು ವಿದೇಶಕ್ಕೆ ಪ್ರಯಾಣಿಸಿರುವ

ನಕಲಿ ದಾಖಲೆ ಬಳಸಿ ಪಾಸ್‌ಪೋರ್ಟ್‌ ಸೃಷ್ಟಿ : ಕೇಸ್‌ ದಾಖಲು Read More »

ಸಿಎನ್‌ಜಿ ದರವೂ ಕೆ.ಜಿ.ಗೆ 2 ರೂ. ಏರಿಕೆ

ಪೆಟ್ರೋಲ್‌, ಡೀಸೆಲ್‌ ಬೆನ್ನಲ್ಲೇ ಇನ್ನೊಂದು ಬರೆ ಬೆಂಗಳೂರು : ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಬೆನ್ನಲ್ಲೇ ಈಗ ಸಾಮಾನ್ಯ ಜನರಿಗೆ ಮತ್ತೊಂದು ಆಘಾತ ಎದುರಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರ್ಮುಜ್ ಜಲಸಂಧಿಯ ದಿಗ್ಬಂಧನದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ದೇಶಾದ್ಯಂತ ಸಿಎನ್‌ಜಿ ದರದಲ್ಲಿ ಪ್ರತಿ ಕೆ.ಜಿ. ಗೆ 2 ರೂಪಾಯಿ ಏರಿಕೆ ಮಾಡಲಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ದರ ಲೀಟರ್​ಗೆ 3 ರೂ.ನಷ್ಟು ಏರಿಕೆಯಾದ ಬೆನ್ನಲ್ಲೇ ಸಿಎನ್​ಜಿ ದರ ಕೂಡ ಏರಿಕೆಯಾಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಸಿಎನ್‌ಜಿ

ಸಿಎನ್‌ಜಿ ದರವೂ ಕೆ.ಜಿ.ಗೆ 2 ರೂ. ಏರಿಕೆ Read More »

ಕೇರಳದಲ್ಲಿ ಕಾನೂನು ರಚಿಸುವುದು ನಾವೇ : ಮುಸ್ಲಿಂ ಲೀಗ್‌ ಘೋಷಣೆ

ಮೆರವಣಿಗೆಯಲ್ಲಿ ಪ್ರಚೋದನಾಕಾರಿ ಘೋಷಣೆ, ಭಾರಿ ವಿವಾದ ತಿರುವನಂತಪುರಂ: ಕೇರಳದ ಮುಖ್ಯಮಂತ್ರಿ ಆಯ್ಕೆ ಮುಸ್ಲಿಂ ಲೀಗ್‌ ಮತ್ತು ಜಮಾತ್‌ ಎ ಇಸ್ಲಾಮ್‌ ಆದೇಶದ ಪ್ರಕಾರ ನಡೆದಿದೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಇದನ್ನು ಸಮರ್ಥಿಸುವ ಬೆಳವಣಿಗೆ ಕೇರಳದಲ್ಲಿ ನಡೆದಿದೆ. ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಅವರ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಅವರ ಮಿತ್ರಪಕ್ಷವಾದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಆಯೋಜಿಸಿದ್ದ ವಿಜಯೋತ್ಸವದ ಮೆರವಣಿಗೆಯಲ್ಲಿ ಕೂಗಲಾದ ಪ್ರಚೋದನಾಕಾರಿ ಘೋಷಣೆಗಳು ಭಾರಿ ವಿವಾದಕ್ಕೆ ಕಾರಣವಾಗಿವೆ. ಇಡುಕ್ಕಿ ಜಿಲ್ಲೆಯಲ್ಲಿ ನಡೆದ ಈ ಮೆರವಣಿಗೆಯಲ್ಲಿ, “ಮುಸ್ಲಿಂ

ಕೇರಳದಲ್ಲಿ ಕಾನೂನು ರಚಿಸುವುದು ನಾವೇ : ಮುಸ್ಲಿಂ ಲೀಗ್‌ ಘೋಷಣೆ Read More »

ಸಿಡಿಲು ಬಡಿದು ಕಾರ್ಮಿಕ ಸಾವು

ಸೇತುವೆ ಕಾಮಗಾರಿ ವೇಳೆ ಸಂಭವಿಸಿದ ದುರಂತ ಉಡುಪಿ: ರಾಷ್ಟ್ರೀಯ ಹೆದ್ದಾರಿ-66ರ ಕುಂದಾಪುರ ಸಮೀಪ ಅರಾಟೆ ಸೇತುವೆ ಸಮೀಪ ಗುರುವಾರ ಸಂಜೆ ಸಿಡಿಲು ಬಡಿದು ಕಾರ್ಮಿಕನೊಬ್ಬ ಮೃತಪಟ್ಟ ದಾರುಣ ಘಟನೆ ನಡೆದಿದೆ. ಪಂಜಾಬ್ ಮೂಲದ ಕಾರ್ಮಿಕ ಅಶುತೋಷ್ (35) ಮೃತ ವ್ಯಕ್ತಿ. ಮತ್ತೋರ್ವ ಕಾರ್ಮಿಕ ಲವಜೋತ್ ಸಿಂಗ್ (28) ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅರಾಟೆ ಹಳೆ ಸೇತುವೆಯ ದುರಸ್ತಿ ಕಾಮಗಾರಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದು, ಗುರುವಾರ ಸಂಜೆ ಪಂಜಾಬ್ ಮೂಲದ ಕಾರ್ಮಿಕರು ಕಾಮಗಾರಿಯಲ್ಲಿ ತೊಡಗಿದ್ದ ವೇಳೆ ಈ

ಸಿಡಿಲು ಬಡಿದು ಕಾರ್ಮಿಕ ಸಾವು Read More »

ಪೆಟ್ರೋಲ್‌, ಡೀಸೆಲ್‌ ಬೆಲೆ ಲೀಟರಿಗೆ ತಲಾ 3 ರೂ. ಏರಿಕೆ

ಜನರಿಗೆ ನೇರವಾಗಿ ತಟ್ಟತೊಡಗಿದ ಯುದ್ಧದ ಬಿಸಿ ನವದೆಹಲಿ: ನಿರೀಕ್ಷೆಯಂತೆ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿ ಲೀಟರ್‌ಗೆ 3 ರೂಪಾಯಿ ಹೆಚ್ಚಳವಾಗಿದೆ. ನಾಲ್ಕು ವರ್ಷಗಳ ಬಳಿಕ ಈ ಎರಡು ಇಂಧನಗಳ ಬೆಲೆ ಹೆಚ್ಚಾಗಿದೆ. ತೈಲ ಮಾರಾಟ ಕಂಪನಿಗಳು ಜಾಗತಿಕ ಮಾರುಕಟ್ಟೆಯ ಇಂಧನ ದರ ಏರಿಕೆಗೆ ಅನುಗುಣವಾಗಿ ದರವನ್ನು ಏರಿಕೆ ಮಾಡಿವೆ. ಪರಿಷ್ಕೃತ ದರ ಇಂದು ಬೆಳಿಗ್ಗೆಯಿಂದಲೇ ಜಾರಿಯಾಗಿದೆ. ದರ ಏರಿಕೆಯಿಂದ ಬೆಂಗಳೂರಿನಲ್ಲಿ ಪ್ರತಿ ಲೀಟರ್‌ ದರ 106.17 ರೂ. ಏರಿಕೆಯಾದರೆ ಡಿಸೇಲ್‌ ದರ 94.10 ರೂ.

ಪೆಟ್ರೋಲ್‌, ಡೀಸೆಲ್‌ ಬೆಲೆ ಲೀಟರಿಗೆ ತಲಾ 3 ರೂ. ಏರಿಕೆ Read More »

ಮೂರನೇ ಹಂತದಲ್ಲಿ ಕರ್ನಾಟಕ ಸಹಿತ 16 ರಾಜ್ಯಗಳಲ್ಲಿ ಎಸ್‌ಐಆರ್‌

ಮನೆ ಮನೆಗೆ ಭೇಟಿ ನೀಡಿ ಅರ್ಹ ಮತದಾರರನ್ನು ಗುರುತಿಸುವ ಕಾರ್ಯ ನವದೆಹಲಿ: ಭಾರತ ಚುನಾವಣಾ ಆಯೋಗ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸಲು ಆದೇಶ ಪ್ರಕಟಿಸಿದೆ. ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ ಹೊರತು ಪಡಿಸಿ ಉಳಿದ ರಾಜ್ಯಗಳಲ್ಲಿ ಎಸ್‌ಐಆರ್‌ ನಡೆಯಲಿದೆ. ಈ ರಾಜ್ಯಗಳಲ್ಲಿ ಕಷ್ಟಕರವಾದ ಭೂ ಪ್ರದೇಶ, ಹವಾಮಾನ ಅಡಚಣೆಗಳು ಮತ್ತು ಕಾರ್ಯಾಚರಣೆಯ ಸವಾಲುಗಳು, ವಿಶೇಷವಾಗಿ ಹಿಮಪಾತ ಪೀಡಿತ

ಮೂರನೇ ಹಂತದಲ್ಲಿ ಕರ್ನಾಟಕ ಸಹಿತ 16 ರಾಜ್ಯಗಳಲ್ಲಿ ಎಸ್‌ಐಆರ್‌ Read More »

ತಗ್ಗಿನಲ್ಲಿ ಹಾರಿದ ಪ್ರಯಾಣಿಕ ವಿಮಾನಗಳು : ಆತಂಕಕ್ಕೊಳಗಾದ ಜನ

ಮಳೆ ಪರಿಣಾಮ ಲ್ಯಾಂಡ್‌ ಆಗಲು ಸಾಧ್ಯವಾಗದೆ ಆಕಾಶದಲ್ಲೇ ಗಿರಕಿ ಹೊಡೆದ ವಿಮಾನಗಳು ವಿಟ್ಲ: ವಿಟ್ಲ ಪರಿಸರದಲ್ಲಿ ನಿನ್ನೆ ಎರಡು ವಿಮಾನಗಳು ಬಹಳ ತಗ್ಗಿನಲ್ಲಿ ಹಾರಾಟ ನಡೆಸಿ ಸ್ಥಳೀಯರಲ್ಲಿ ಕೆಲಹೊತ್ತು ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಕೆಲ ಸಮಯದ ಹಿಂದೆಯಷ್ಟೇ ಈ ಪರಿಸರದಲ್ಲಿ ಖನಿಜ ಶೋಧಕ್ಕಾಗಿ ಕಿರು ವಿಮಾನ ತಗ್ಗಿನಲ್ಲಿ ಹಾರಾಟ ನಡೆಸಿತ್ತು. ಆರಂಭದಲ್ಲಿ ಜನರು ಇದೇ ಮಾದರಿಯ ಹಾರಾಟ ಇದಾಗಿರಬಹುದು ಎಂದು ಭಾವಿಸಿದ್ದರು. ಆದರೆ ಇದು ದೊಡ್ಡ ವಿಮಾನವಾಗಿರುವುದರಿಂದ ಜನ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿರಬಹುದು ಎಂದು

ತಗ್ಗಿನಲ್ಲಿ ಹಾರಿದ ಪ್ರಯಾಣಿಕ ವಿಮಾನಗಳು : ಆತಂಕಕ್ಕೊಳಗಾದ ಜನ Read More »

ಸಂವಿಧಾನ, ನ್ಯಾಯಾಂಗ ವಿರೋಧಿ ನಿರ್ಧಾರ: ಹಿಜಾಬ್‌ ಅನುಮತಿಗೆ ಸುನಿಲ್‌ ಕುಮಾರ್‌ ಆಕ್ರೋಶ

ಶಿಕ್ಷಣವನ್ನು ಇಸ್ಲಾಮೀಕರಣ ಮಾಡುವ ವ್ಯವಸ್ಥಿತ ಷಡ್ಯಂತ್ರ ಎಂದ ಯಶ್‌ಪಾಲ್‌ ಸುವರ್ಣ ಉಡುಪಿ: ಶಾಲೆ-ಕಾಲೇಜುಗಳಲ್ಲಿ ಹಿಜಾಬ್‌ ಧರಿಸಲು ಅನುಮತಿ ನೀಡಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹಿಂದೂ ಸಂಘಟನೆಗಳು ಮತ್ತು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಸ್ಲಿಂ ತುಷ್ಟೀಕರಣಕ್ಕಾಗಿ ಸಂವಿಧಾನ, ನ್ಯಾಯಾಲಯ ಎಲ್ಲವನ್ನೂ ಬಲಿಕೊಡಲು ಕಾಂಗ್ರೆಸ್‌ ತಯಾರಿದೆ ಎಂಬುದು ಇದರಿಂದ ಸಾಬೀತಾಗಿದೆ ಎಂದು ಅವರು ಹೇಳಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಕಾರ್ಕಳದ ಶಾಸಕ ಹಾಗೂ ಮಾಜಿ ಸಚಿವ ವಿ.ಸುನೀಲ್‌ ಕುಮಾರ್‌, ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ತನ್ನ ಮುಸ್ಲಿಂ ಓಲೈಕೆ

ಸಂವಿಧಾನ, ನ್ಯಾಯಾಂಗ ವಿರೋಧಿ ನಿರ್ಧಾರ: ಹಿಜಾಬ್‌ ಅನುಮತಿಗೆ ಸುನಿಲ್‌ ಕುಮಾರ್‌ ಆಕ್ರೋಶ Read More »

ಚಲಿಸುತ್ತಿದ್ದ ಬಸ್ಸಿನಲ್ಲಿ ಮಹಿಳೆ ಮೇಲೆ ಗ್ಯಾಂಗ್‌ ರೇಪ್‌

ಮನೆಗೆ ಹೋಗಲು ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಯನ್ನು ಬಲವಂತವಾಗಿ ಬಸ್‌ಗೆ ಹತ್ತಿಸಿಕೊಂಡು ಕೃತ್ಯ ನವದೆಹಲಿ: ಚಲಿಸುತ್ತಿದ್ದ ಖಾಸಗಿ ಬಸ್ಸಿನೊಳಗೆ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ನಂಗ್ಲೋಯಿಯಲ್ಲಿ ನಡೆದಿದೆ. ಬಸ್ಸಿನಲ್ಲಿ ತನ್ನ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಸಂತ್ರಸ್ತೆ ದೂರು ನೀಡಿದ್ದಾರೆ. ಸಂತ್ರಸ್ತೆಯ ದೂರಿನ ಆಧಾರ ಮೇಲೆ ಪ್ರಕರಣ ದಾಖಲಿಸಿಕೊಂಡ ದೆಹಲಿ ಪೊಲೀಸರು ಬಸ್ ಡ್ರೈವರ್, ಕಂಡಕ್ಟರ್‌ನನ್ನು ಬಂಧಿಸಿದ್ದಾರೆ. ಸೋಮವಾರ ರಾತ್ರಿ 11 ಗಂಟೆಯ ವೇಳೆಗೆ ಘಟನೆ ನಡೆದಿದ್ದು, ಎಂದಿನಂತೆ ಕೆಲಸ ಮುಗಿಸಿ ಮಹಿಳೆ ಸರಸ್ವತಿ ವಿಹಾರ್

ಚಲಿಸುತ್ತಿದ್ದ ಬಸ್ಸಿನಲ್ಲಿ ಮಹಿಳೆ ಮೇಲೆ ಗ್ಯಾಂಗ್‌ ರೇಪ್‌ Read More »

error: Content is protected !!
Scroll to Top