ಸುದ್ದಿ

ಅಬ್ದುಲ್‌ ರಹಿಮಾನ್‌ ಶವಯಾತ್ರೆ ವೇಳೆ ಫರಂಗಿಪೇಟೆಯಲ್ಲಿ ಉದ್ವಿಗ್ನ ಸ್ಥಿತಿ

ರಸ್ತೆತಡೆ ಮಾಡಿ ಸರಕಾರದ ವಿರುದ್ಧ ಘೋಷಣೆ ಕೂಗಿದ ಉದ್ರಿಕ್ತ ಗುಂಪು ಮಂಗಳೂರು: ಬಂಟ್ವಾಳದ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ದುಷ್ಕರ್ಮಿಗಳಿಂದ ಕೊಲೆಯಾದ ಅಬ್ದುಲ್ ರಹಿಮಾನ್(34) ಮೃತದೇಹ ಸಾಗಾಟದ ವೇಳೆ ಫರಂಗಿಪೇಟೆಯಲ್ಲಿ ಭಾರಿ ಸಂಖ್ಯೆಯಲ್ಲಿ ಜಮಾಯಿಸಿದ ಜನರ ಗುಂಪು ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದೆ. ದೇರಳಕಟ್ಟೆ ಯೇನೆಪೊಯ ಆಸ್ಪತ್ರೆಯಲ್ಲಿ ಮಂಗಳವಾರ ರಾತ್ರಿಯೇ ಮೃತದೇಹದ ಮರಣೋತ್ತರ ಪರೀಕ್ಷೆ ನಡೆದು ಇಂದು ಮುಂಜಾನೆ ಕುತ್ತಾರ್ ಮದನಿ ನಗರದ ಮಸೀದಿಯಲ್ಲಿ ಮಯ್ಯತ್ ಸ್ನಾನ ನಿರ್ವಹಿಸಿ ಅಲ್ಲಿಂದ ಪೊಲೀಸ್ ಬಂದೋಬಸ್ತ್‌ನಲ್ಲಿ ಮೃತದೇಹವನ್ನು ಕೊಂಡೊಯ್ಯಲಾಯಿತು. […]

ಅಬ್ದುಲ್‌ ರಹಿಮಾನ್‌ ಶವಯಾತ್ರೆ ವೇಳೆ ಫರಂಗಿಪೇಟೆಯಲ್ಲಿ ಉದ್ವಿಗ್ನ ಸ್ಥಿತಿ Read More »

ಐಪಿಎಲ್‌ : ಮುಗಿದ ಲೀಗ್‌ ಹಂತ; ಮೇ 29ರಿಂದ ಪ್ಲೇ ಆಫ್‌ ಪಂದ್ಯಗಳು

ಆರ್‌ಸಿಬಿ, ಪಂಜಾಬ್‌, ಗುಜರಾತ್‌, ಮುಂಬೈ ತಂಡಗಳ ನಡುವೆ ಹಣಾಹಣಿ ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್​ನ ಲೀಗ್ ಹಂತದ ಪಂದ್ಯಗಳು ನಿನ್ನೆಗೆ ಮುಗಿದಿದ್ದು, ಪ್ಲೇಆಫ್ ಪಂದ್ಯಗಳು ಮೇ 29ರಿಂದ ಶುರುವಾಗಲಿವೆ. ಈ ಸುತ್ತಿನಲ್ಲಿ ಒಟ್ಟು ನಾಲ್ಕು ಪಂದ್ಯಗಳು ನಡೆಯಲಿವೆ. ಅಂದರೆ ಮೊದಲ ಮೂರು ಮ್ಯಾಚ್​ಗಳು ಫೈನಲ್​ಗಾಗಿ ನಡೆಯಲಿರುವ ಅರ್ಹತಾ ಪಂದ್ಯಗಳು. ಇದಾದ ಬಳಿಕ ಜೂನ್ 3 ರಂದು ಫೈನಲ್ ಮ್ಯಾಚ್ ನಡೆಯಲಿದೆ. 10 ತಂಡಗಳಲ್ಲಿ ಅತ್ಯಧಿಕ ಗೆಲುವು ದಾಖಲಿಸಿದ ನಾಲ್ಕು ತಂಡಗಳು ಮುಂದಿನ ಹಂತಕ್ಕೇರಿವೆ. ಅದರಂತೆ ದ್ವಿತೀಯ ಸುತ್ತಿನಲ್ಲಿ

ಐಪಿಎಲ್‌ : ಮುಗಿದ ಲೀಗ್‌ ಹಂತ; ಮೇ 29ರಿಂದ ಪ್ಲೇ ಆಫ್‌ ಪಂದ್ಯಗಳು Read More »

ಅಬ್ದುಲ್‌ ರಹಿಮಾನ್‌ ಹತ್ಯೆ : 15 ಮಂದಿಯ ವಿರುದ್ಧ ಪ್ರಕರಣ ದಾಖಲು

ಕೊಲೆ ಮಾಡಿದವರಲ್ಲಿ ಸ್ಥಳೀಯ ಇಬ್ಬರು ಪರಿಚಯಸ್ಥರು ಎಂದು ಮಾಹಿತಿ ಬಂಟ್ವಾಳ: ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಕೊಳತ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಹಾಗೂ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ (32) ಹತ್ಯೆ ಮತ್ತು ಕಲಂದರ್ ಶಾಫಿ ಎಂಬವರ ಮೇಲಿನ ಕೊಲೆಯತ್ನ ಪ್ರಕರಣ‌ ಸಂಬಂಧ ಸ್ಥಳೀಯ ಇಬ್ಬರು ಸೇರಿ 15 ಮಂದಿಯ ವಿರುದ್ಧ ಬಂಟ್ವಾಳ‌ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಬ್ದುಲ್ ರಹಿಮಾನ್ ಅವರ‌ ಕೊಲೆ ಮತ್ತು ಕಲಂದರ್ ಶಾಫಿ ಕೊಲೆಯತ್ನ ಪ್ರಕರಣದಲ್ಲಿ ದೀಪಕ್ ಮತ್ತು

ಅಬ್ದುಲ್‌ ರಹಿಮಾನ್‌ ಹತ್ಯೆ : 15 ಮಂದಿಯ ವಿರುದ್ಧ ಪ್ರಕರಣ ದಾಖಲು Read More »

ಮಂಗಳೂರು : ಹುಟ್ಟೂರು ಕೊಳತ್ತಮಜಲ್‌ಗೆ ಅಬ್ದುಲ್‌ ರಹಿಮಾನ್‌ ಮೃತದೇಹ ರವಾನೆ

ಸರಣಿ ಹತ್ಯೆಗಳಿಂದ ಕರಾವಳಿಯಲ್ಲಿ ಆತಂಕದ ವಾತಾವರಣ- ಮೇ 30ರವರೆಗೆ ನಿಷೇಧಾಜ್ಞೆ ಮಂಗಳೂರು: ಕರಾವಳಿಯಲ್ಲಿ ಮತ್ತೆ ನೆತ್ತರು ಹರಿದಿದೆ. ಬಂಟ್ವಾಳ ಸಮೀಪ ಮುಸ್ಲಿಂ ಯುವಕನನ್ನು ಬರ್ಬರವಾಗಿ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಕರಾವಳಿಯಲ್ಲಿ ಮತ್ತೆ ಆತಂಕದ ವಾತಾವರಣ ಉಂಟು ಮಾಡಿದೆ. ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಮುಸ್ಲಿಮರು ಒತ್ತಾಯಿಸಿ ರಾತ್ರಿಯಿಡೀ ಪ್ರತಿಭಟನೆ ನಡೆಸಿದ್ದಾರೆ. ಪರಿಸ್ಥಿತಿ ಉದವಿಗ್ನಗೊಂಡಿರುವ ಹಿನ್ನೆಲೆಯಲ್ಲಿ ಮೇ 30ರ ಸಂಜೆ 6ಗಂಟೆವರೆಗೂ ಮಂಗಳೂರು ಕಮೀಷನರೇಟ್ ಹಾಗೂ ಮಂಗಳೂರು ಪೊಲೀಸ್‌ ವ್ಯಾಪ್ತಿಯಡಿ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದ್ದು ಹೆಚ್ಚುವರಿ ಪೊಲೀಸರನ್ನು

ಮಂಗಳೂರು : ಹುಟ್ಟೂರು ಕೊಳತ್ತಮಜಲ್‌ಗೆ ಅಬ್ದುಲ್‌ ರಹಿಮಾನ್‌ ಮೃತದೇಹ ರವಾನೆ Read More »

ಕಮಲಹಾಸನ್‌ರ ಥಗ್‌ಲೈಫ್‌ ಸಿನಿಮಾಕ್ಕೆ ಕನ್ನಡಿಗರ ಪ್ರತಿಭಟನೆಯ ಬಿಸಿ

ನಿಮ್ಮ ಕನ್ನಡ ನಮ್ಮಿಂದ ಬಂದಿದ್ದು ಎಂದು ಹೇಳಿ ಕನ್ನಡಿಗರನ್ನು ಕೆರಳಿಸಿರುವ ನಟ ಬೆಂಗಳೂರು: ಕಮಲಹಾಸನ್ ಅವರ ತಮಿಳಿನಿಂದಲೇ ಕನ್ನಡ ಹುಟ್ಟಿದೆ ಎಂಬ ಹೇಳಿಕೆ ಕನ್ನಡಿಗರ ಸ್ವಾಭಿಮಾನವನ್ನು ಕೆರಳಿಸಿದೆ. ನಿನ್ನೆಯಿಂದೀಚೆಗೆ ಮಾಧ್ಯಮಗಳಲ್ಲಿ ಮತ್ತು ಸೋಷಿಯಲ್‌ ಮೀಡಿಯಾಗಳಲ್ಲಿ ಕಮಲ ಹಾಸನ್‌ ಹೇಳಿಕೆ ವಿರುದ್ಧ ಭಾರಿ ಚರ್ಚೆ ನಡೆಯುತ್ತಿದೆ. ನಟನ ಮುಂಬರುವ ಥಗ್‌ಲೈಫ್‌ ಚಿತ್ರದ ಬಿಡುಗಡೆಯನ್ನು ತಡೆಯಬೇಕೆಂದು ಅನೇಕ ಕನ್ನಡ ಪರ ಹೋರಾಟಗಾರರು ಕರೆ ಕೊಟ್ಟಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಖ್ಯಾತ ಗಾಯಕ ಸೋನು ನಿಗಮ್ ಕನ್ನಡಿಗರನ್ನು ಕೆರಳಿಸುವ ಕೆಲಸ ಮಾಡಿದ್ದರು.

ಕಮಲಹಾಸನ್‌ರ ಥಗ್‌ಲೈಫ್‌ ಸಿನಿಮಾಕ್ಕೆ ಕನ್ನಡಿಗರ ಪ್ರತಿಭಟನೆಯ ಬಿಸಿ Read More »

ಇಷ್ಟಾರ್ಥ ಸಿದ್ಧಿಯ  ತಾಳಮದ್ದಳೆ ಸತ್ವ ಪರೀಕ್ಷೆ

ಶ್ರೀ ದುರ್ಗಾಂಬ ಕಲಾಸಂಗಮ ಶ್ರೀ ಕ್ಷೇತ್ರ ಶರವೂರು ಆಲಂಕಾರು ವತಿಯಿಂದ  ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ಭಕ್ತರ ಇಷ್ಟಾರ್ಥ ಸಿದ್ಧಿಗಾಗಿ ಸತ್ವ ಪರೀಕ್ಷೆ  ಯಕ್ಷಗಾನ ತಾಳಮದ್ದಳೆ ಸೇವೆ ನಡೆಯಿತು  ಭಾಗವತರಾಗಿ ಪದ್ಮನಾಭ ಕುಲಾಲ್,  ನಿತೀಶ್ ಮನೊಳಿತ್ತಾಯ,ಚೆಂಡೆ ಮತ್ತು ಮದ್ದಳೆಯಲ್ಲಿ  ಕೇಶವ ಬೈಪಡಿತ್ತಾಯ,ಚಂದ್ರ ದೇವಾಡಿಗ ನಗ್ರಿ,   ಶ್ರೀಹರಿ ನಗ್ರಿ,ಚಕ್ರತಾಳದಲ್ಲಿ ಸಂಜಯ ಕಡಬ ಅರ್ಥಧಾರಿಗಳಾಗಿ ಗಣರಾಜ ಕುಂಬ್ಳೆ ಮತ್ತು ದಿವಾಕರ ಆಚಾರ್ಯ ಗೇರುಕಟ್ಟೆ( ಶ್ರೀ ಕೃಷ್ಣ) ಅಂಬಾ ಪ್ರಸಾದ್ ಪಾತಾಳ (ಸುಭದ್ರೆ)ನಾರಾಯಣ ಭಟ್ ಆಲಂಕಾರು(ರುಕ್ಮಿಣಿ) ರಾಮ್ ಪ್ರಕಾಶ್ ಕೊಡಂಗೆ

ಇಷ್ಟಾರ್ಥ ಸಿದ್ಧಿಯ  ತಾಳಮದ್ದಳೆ ಸತ್ವ ಪರೀಕ್ಷೆ Read More »

ಹಾಲಿ ಶಾಸಕರಾದ ಎಸ್.ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಬಿಜೆಪಿಯಿಂದ ಉಚ್ಚಾಟನೆ

ಬಿಜೆಪಿ ಹೈಕಮಾಂಡ್ ಹಾಲಿ ಶಾಸಕರಾದ ಎಸ್.ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಅವರನ್ನ ಪಕ್ಷದಿಂದ ಉಚ್ಚಾಟನೆ ಮಾಡಿದ್ದು, ಈ ಮೂಲಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಶಾಸಕರಾದ ಎಸ್.ಟಿ. ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರನ್ನು ತಕ್ಷಣದಿಂದಲೇ ಜಾರಿಯಾಗುವಂತೆ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿ ಆದೇಶ ನೀಡಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಬಿಜೆಪಿ ಶಿಸ್ತು ಸಮಿತಿ ಇಬ್ಬರು ಶಾಸಕರಿಗೆ ನೋಟಿಸ್ ನೀಡಿತ್ತು. ಆ ನೋಟಿಸ್‌ಗೆ ಮೇ

ಹಾಲಿ ಶಾಸಕರಾದ ಎಸ್.ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಬಿಜೆಪಿಯಿಂದ ಉಚ್ಚಾಟನೆ Read More »

ಪ್ರಜ್ವಲ್‌ ರೇವಣ್ಣ ಮೊಬೈಲ್‌ನಲ್ಲಿತ್ತಂತೆ 2 ಸಾವಿರ ಅಶ್ಲೀಲ ಫೋಟೊ, 50 ವಿಡಿಯೋ

ನ್ಯಾಯಾಲಯಕ್ಕೆ ಮಾಹಿತಿ ನೀಡಿದ ರೇವಣ್ಣ ಕುಟುಂಬದ ಮಾಜಿ ಚಾಲಕ ಬೆಂಗಳೂರು: ಸರಣಿ ಅತ್ಯಾಚಾರ ಹಾಗೂ ಬೆದರಿಕೆ ಪ್ರಕರಣಗಳಲ್ಲಿ ಬಂಧಿತರಾಗಿ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಪ್ರಕರಣದ ವಿಚಾರಣೆ ವೇಳೆ ಅವರ ಮಾಜಿ ಕಾರು ಚಾಲಕ ಕಾರ್ತಿಕ್‌ ಸ್ಫೋಟಕ ಸಾಕ್ಷ್ಯ ನುಡಿದಿದ್ದಾರೆ. ಪ್ರಜ್ವಲ್‌ ಮೊಬೈಲ್‌ನಲ್ಲಿ ಸುಮಾರು 2 ಸಾವಿರ ಅಶ್ಲೀಲ ಫೋಟೋಗಳು ಹಾಗೂ 40ರಿಂದ 50 ವಿಡಿಯೋಗಳಿದ್ದವು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ್ದಾರೆ. ನ್ಯಾಯಾಲಯದಲ್ಲಿ ಸೋಮವಾರ ಪ್ರಕರಣದ ವಿಚಾರಣೆಗೆ ಹಾಜರಾದ ಕಾರ್ತಿಕ್‌, ಪ್ರಜ್ವಲ್‌ ಮೊಬೈಲ್‌ನಲ್ಲಿದ್ದ

ಪ್ರಜ್ವಲ್‌ ರೇವಣ್ಣ ಮೊಬೈಲ್‌ನಲ್ಲಿತ್ತಂತೆ 2 ಸಾವಿರ ಅಶ್ಲೀಲ ಫೋಟೊ, 50 ವಿಡಿಯೋ Read More »

ನಕಲ್‌ ಕರ್ನೆ ಲಿಯೆ ಅಕಲ್‌ ಚಾಹಿಯೆ : ವಿದೇಶಿ ನೆಲದಲ್ಲಿ ಪಾಕಿಸ್ತಾನವನ್ನು ಲೇವಡಿ ಮಾಡಿದ ಓವೈಸಿ

ನಕಲಿ ಫೋಟೊ ಉಡುಗೊರೆ ಕೊಟ್ಟು ಜಗತ್ತಿನೆದುರು ಅಪಹಾಸ್ಯಕ್ಕೀಡಾದ ಪಾಕ್‌ ನವದೆಹಲಿ : ಪಾಕಿಸ್ತಾನದ ಪ್ರಧಾನಮಂತ್ರಿ ಶಹಬಾಜ್‌ ಷರೀಫ್‌ಗೆ ಅಲ್ಲಿನ ಸೇನಾ ಮುಖ್ಯಸ್ಥ ಅಸೀಮ್‌ ಮುನೀರ್‌ ನೀಡಿದ ಫೋಟೊ ಇಡೀ ಜಗತ್ತಿನಲ್ಲಿ ನಗೆಪಾಟಲಾಗಿದೆ. ಚೀನದ 2019ರ ಮಿಲಿಟರಿ ಡ್ರಿಲ್‌ನ ಫೋಟೊವನ್ನು ಆಪರೇಷನ್‌ ಸಿಂಧೂರ ಸಂದರ್ಭದಲ್ಲಿ ಭಾರತದ ವಿರುದ್ಧ ಪಾಕಿಸ್ತಾನಕ್ಕೆ ಸಿಕ್ಕಿದ ಗೆಲುವು ಎಂದು ಹೇಳಿಕೊಂಡು ಸನ್ಮಾನ ಸಮಾರಂಭದಲ್ಲಿ ಮುನೀರ್‌ ಈ ಫೋಟೊವನ್ನು ಪ್ರಧಾನಿಗೆ ಉಡುಗೊರೆ ನೀಡಿದ್ದರು. ಕ್ಷಣಾರ್ಧದಲ್ಲಿ ಈ ಫೋಟೊದ ಅಸಲಿ ಮೂಲ ಪತ್ತೆಯಾಗಿದ್ದು, ಪಾಕಿಸ್ತಾನದ ಸೇನೆ ಇನ್ನಿಲ್ಲದಂತೆ

ನಕಲ್‌ ಕರ್ನೆ ಲಿಯೆ ಅಕಲ್‌ ಚಾಹಿಯೆ : ವಿದೇಶಿ ನೆಲದಲ್ಲಿ ಪಾಕಿಸ್ತಾನವನ್ನು ಲೇವಡಿ ಮಾಡಿದ ಓವೈಸಿ Read More »

ಶಾಲೆಗಳಿಗೆ ಕೊರೊನ ಮಾರ್ಗಸೂಚಿ ಸದ್ಯಕ್ಕಿಲ್ಲ : ಮಧು ಬಂಗಾರಪ್ಪ

ಆರೋಗ್ಯದಲ್ಲಿ ವ್ಯತ್ಯಾಸವಿದ್ದರೆ ಮಕ್ಕಳನ್ನು ಶಾಲೆಗೆ ಕಳುಹಿಸಬೇಡಿ ಎಂದು ಸಲಹೆ ಬೆಂಗಳೂರು: ರಾಜ್ಯದಲ್ಲಿ ಕೊರೊನ ಪ್ರಕರಣಗೂ ವರದಿಯಾಗುತ್ತಿದ್ದರೂ ಸದ್ಯಕ್ಕೆ ಶಾಲೆಗಳಿಗೆ ಯಾವುದೇ ಮಾರ್ಗಸೂಚಿ ಹೊರಡಿಸುವುದಿಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಮೇ 29ರಿಂದ ಶಾಲೆಗಳು ಪ್ರಾರಂಭವಾಗುತ್ತಿವೆ. ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಮಾರ್ಗಸೂಚಿ ಶಾಲೆಗಳಿಗೆ ಕೊಡುವ ಅಗತ್ಯವಿಲ್ಲ. ಆದರೆ ಎಚ್ಚರಿಕೆ, ಮುಂಜಾಗ್ರತಾ ಕ್ರಮವಹಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಕೊಟ್ಟರೆ ಅವುಗಳನ್ನು ಅನುಷ್ಠಾನಕ್ಕೆ ತರುತ್ತೇವೆ. ಆರೋಗ್ಯ ಇಲಾಖೆ ಮತ್ತು ಕೇಂದ್ರ ಸರ್ಕಾರ

ಶಾಲೆಗಳಿಗೆ ಕೊರೊನ ಮಾರ್ಗಸೂಚಿ ಸದ್ಯಕ್ಕಿಲ್ಲ : ಮಧು ಬಂಗಾರಪ್ಪ Read More »

error: Content is protected !!
Scroll to Top