ಸುದ್ದಿ

ಹುರುಳಿಲ್ಲದ ವಿಷಯಕ್ಕೆ ವಿಷ ತುಂಬುವ ಪಿತೂರಿ : ಕಿಕ್‌ಬ್ಯಾಕ್‌ ಆರೋಪಕ್ಕೆ ಸಿದ್ದರಾಮಯ್ಯ ಕಿಡಿ

ಗಣಿ ಗುತ್ತಿಗೆಯಲ್ಲಿ 500 ಕೋ.ರೂ. ಕಿಕ್‌ಬ್ಯಾಕ್‌ ಪಡೆದ ಆರೋಪಕ್ಕೆ ಸ್ಪಷ್ಟನೆ ನೀಡಿದ ಸಿಎಂ ಬೆಂಗಳೂರು: ಗಣಿ ಗುತ್ತಿಗೆ ನವೀಕರಣದಲ್ಲಿ 500 ಕೋ. ರೂ. ಕಿಕ್‌ಬ್ಯಾಕ್‌ ಪಡೆದಿರುವ ಆರೋಪವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಕರಿಸಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಗೊಂದಲಗಳನ್ನು ಸೃಷ್ಟಿಸುವ ಪ್ರಯತ್ನ ನಡೆದಿದೆ ಎಂದು ಹೇಳಿದ್ದಾರೆ. ಇಂತಹ ಅಪಪ್ರಚಾರಗಳು ನಾನು ಅಧಿಕಾರಕ್ಕೆ ಬಂದಾಗಿನಿಂದಲೂ ನಡೆದುಕೊಂಡು ಬರುತ್ತಿದೆ. ಕೆಲವು ದುಷ್ಟಶಕ್ತಿಗಳು ರಾಜಭವನವನ್ನು ತಪ್ಪು ದಾರಿಗೆಳೆಯುವ ಕೆಲಸವನ್ನು ನಿರಂತರವಾಗಿ ಮಾಡುತ್ತಿವೆ ಎಂದು ತಿಳಿಸಿದ್ದಾರೆ.2015ಕ್ಕಿಂತ ಮೊದಲು ಅಸ್ತಿತ್ವದಲ್ಲಿದ್ದ ಎಂಎಂಡಿಆರ್‌-1957 ಕಾಯ್ದೆಯಲ್ಲಿ ನವೀಕರಣವು […]

ಹುರುಳಿಲ್ಲದ ವಿಷಯಕ್ಕೆ ವಿಷ ತುಂಬುವ ಪಿತೂರಿ : ಕಿಕ್‌ಬ್ಯಾಕ್‌ ಆರೋಪಕ್ಕೆ ಸಿದ್ದರಾಮಯ್ಯ ಕಿಡಿ Read More »

ಕಾರಿನಲ್ಲಿ ಚಿನ್ನ, ನಗದು, ಮಾರಕಾಯುಧ ಪತ್ತೆ

ಪಲಾಯನ ಮಾಡಲೆತ್ನಿಸಿದ ಕಾರನ್ನು8 ಕಿ.ಮೀ. ಬೆನ್ನಟ್ಟಿ ಹಿಡಿದ ಪೊಲೀಸರು ಕಾಸರಗೋಡು: ಕಾರೊಂದನ್ನು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದಾಗ ಭಾರಿ ಪ್ರಮಾಣದ ಚಿನ್ನಾಭರಣ, ನಗದು ಮತ್ತು ಮಾರಕಾಯುಧಗಳು ಪತ್ತೆಯಾದ ಘಟನೆ ಕೇರಳ-ಕರ್ನಾಟಕ ಗಡಿಯ ಆದೂರು ಚೆಕ್‌ಪೋಸ್ಟ್‌ ಸಮೀಪ ನಡೆದಿದೆ. ವಾಹನ ತಪಾಸಣೆ ಸಂದರ್ಭದಲ್ಲಿ ನಿಲ್ಲಿಸದೆ ಪರಾರಿಯಾಗಿದ್ದ ಕಾರನ್ನು ಬೆನ್ನಟ್ಟಿ ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ ಚಿನ್ನಾಭರಣ , ಬೆಳ್ಳಿ ಹಾಗೂ ಇನ್ನಿತರ ವಸ್ತುಗಳ ಜೊತೆಗೆ ಮಾರಕಾಯುಧಗಳು ಮತ್ತು ಕಳ್ಳತನಕ್ಕೆ ಬಳಸುವ ಪರಿಕರಗಳು ಸಿಕ್ಕಿವೆ. ಕಾರಿನಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ. ಅಬಕಾರಿ

ಕಾರಿನಲ್ಲಿ ಚಿನ್ನ, ನಗದು, ಮಾರಕಾಯುಧ ಪತ್ತೆ Read More »

ಬಾವಿಗೆ ಬಿದ್ದ ಚಿರತೆ | ಅರಣ್ಯಾಧಿಕಾರಿಗಳಿಂದ ರಕ್ಷಣೆ

ಮೂಡುಬಿದಿರೆ: ಚಿರತೆಯೊಂದು ಬಾವಿಗೆ ಬಿದ್ದಿದ್ದರಿಂದ ಅರಣ್ಯಾಧಿಕಾರಿಗಳು ರಕ್ಷಣೆ ಮಾಡಿದ ಘಟನೆ ಮಡುಬಿದಿರೆ ತಾಲೂಕಿನ ಶಿರ್ತಾಡಿ ಗ್ರಾಮದಲ್ಲಿ ನಡೆದಿದೆ. ಮಂಗಳವಾರ ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಮಕ್ಕಿ ನಿವಾಸಿ ರಮೇಶ ಪೂಜಾರಿ ಎಂಬುವರ ಮನೆಯ ಬಾವಿಗೆ ಚಿರತೆಯು ಅಯತಪ್ಪಿ ಬಿದ್ದಿದೆ.  ಇದನ್ನು ರಕ್ಷಿಸಲೆಂದು ಅರಣ್ಯಾಧಿಕಾರಿಗಳು ಮನೆಗೆ ಬಂದಿದ್ದರು. ಮೂಡುಬಿದಿರೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶ್ರೀಧರ್‍ ರವರ ನಿರ್ದೇಶನದಂತೆ, ಮೂಡುಬಿದಿರೆ ವಲಯ ಅರಣ್ಯಾಧಿಕಾರಿ ಕಿರಣ್ ಕುಮಾರ್ ಜಿ. ಮಾರ್ಗದರ್ಶನದಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ಕಾವ್ಯಾ ಆರ್., ರಾಘವೇಂದ್ರ ಶೆಟ್ಟಿ, ಬಸಪ್ಪ

ಬಾವಿಗೆ ಬಿದ್ದ ಚಿರತೆ | ಅರಣ್ಯಾಧಿಕಾರಿಗಳಿಂದ ರಕ್ಷಣೆ Read More »

ಅಕ್ಷಯ  ಕಾಲೇಜಿನಲ್ಲಿ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ “ಕೃತ್ವ 2025”

ಪುತ್ತೂರು : ಅಕ್ಷಯ    ಕಾಲೇಜಿನಲ್ಲಿ   ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳನ್ನು  ಒಳಗೊಂಡ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ “ಕೃತ್ವ 2025”  ನ್ನು ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನ ಪರೀಕ್ಷಾಂಗ ಕುಲಸಚಿವರಾದ ಡಾ. ಶ್ರೀಧರ್ ಹೆಚ್.ಜಿ., ಉದ್ಘಾಟಿಸಿದರು.   ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನ ಪರೀಕ್ಷಾಂಗ ಕುಲಸಚಿವರಾದ ಡಾ. ಶ್ರೀಧರ್ ಹೆಚ್.ಜಿ.,  ಮಾತನಾಡಿ, ಮಾನವ  ಜೀವನದ  ಅತ್ಯಂತ  ಶ್ರೇಷ್ಠವಾದ  ಸಂಪತ್ತು  ಅಂದರೆ  ಅದು ವಿದ್ಯೆ.  ವಿದ್ಯೆಯು ಕಾಮಧೇನುವಿಗೆ

ಅಕ್ಷಯ  ಕಾಲೇಜಿನಲ್ಲಿ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ “ಕೃತ್ವ 2025” Read More »

ಗ್ಯಾಸ್‌ ಕಟ್ಟರ್‌ನಿಂದ ಎಟಿಎಂ ಕತ್ತರಿಸಿ 18 ಲ.ರೂ. ಕಳ್ಳತನ

ಬೆಂಗಳೂರು: ಗ್ಯಾಸ್ ಕಟ್ಟರ್ ಬಳಸಿ ಎಟಿಎಂನ್ನು ಕತ್ತರಿಸಿ 18 ಲ.ರೂ. ಕಳ್ಳತನ ಮಾಡಿದ ಘಟನೆ ಇಂದು ನಸುಕಿನ ಹೊತ್ತು ಕಲಬುರಗಿ ನಗರದಲ್ಲಿ ಸಂಭವಿಸಿದೆ. ಕಲಬುರಗಿಯ ರಾಮನಗರದ ಬಳಿ ಇರುವ ಎಸ್‌ಬಿಐ ಎಟಿಎಂನಿಂದ ಕಳ್ಳರು ಹಣ ದೋಚಿದ್ದಾರೆ. ಮಂಗಳವಾರ ಸಂಜೆ 3 ಗಂಟೆಗೆ ಬ್ಯಾಂಕ್ ಸಿಬ್ಬಂದಿ ಎಟಿಎಂಗೆ ಹಣ ತುಂಬಿಸಿದ್ದರು. ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಎಟಿಎಂನಲ್ಲಿ ಸೆಕ್ಯೂರಿಟಿ ಇಲ್ಲದನ್ನು ಗಮನಿಸಿದ ಖದೀಮರು ಕನ್ನ ಹಾಕಿದ್ದಾರೆ. ಎಟಿಎಂನಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳಿಗೆ ಬ್ಲಾಕ್ ಸ್ಪ್ರೇ ಮಾಡಿ ಗ್ಯಾಸ್ ಕಟ್ಟರ್‌ನಿಂದ

ಗ್ಯಾಸ್‌ ಕಟ್ಟರ್‌ನಿಂದ ಎಟಿಎಂ ಕತ್ತರಿಸಿ 18 ಲ.ರೂ. ಕಳ್ಳತನ Read More »

ಏ.12ರಿಂದ ಸುಬ್ರಹ್ಮಣ್ಯ-ಬೆಂಗಳೂರು ನಡುವೆ ಹೊಸ ರೈಲು : ಸೋಮಣ್ಣ

ಬೆಂಗಳೂರು: ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಮತ್ತು ಬೆಂಗಳೂರು ನಡುವೆ ಏ.12ರಿಂದ ಹೊಸ ರೈಲು ಸಂಚಾರ ಪ್ರಾರಂಭವಾಗಲಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಬುಧವಾರ ಘೋಷಣೆ ಮಾಡಿದ್ದಾರೆ. ತುಮಕೂರಿನಲ್ಲಿ ರೈಲ್ವೆ ಗೇಟ್ ಮೇಲ್ಸೇತುವೆಗೆ ಗುದ್ದಲಿ ಪೂಜೆ ನೆರವೇರಿಸುವ ವೇಳೆ ಕರ್ನಾಟಕದಲ್ಲಿ ರೈಲ್ವೆ ಇಲಾಖೆಯ ಯೋಜನೆಗಳಿಗೆ ಸಂಬಂಧಿಸಿ ಮಹತ್ವದ ಮಾಹಿತಿ ಹಂಚಿಕೊಂಡರು. ಏ.12 ರಂದು ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಒಂದು ಹೊಸ ರೈಲು ಬಿಡುತ್ತಿದ್ದೇವೆ. ದಿನಕ್ಕೆ ನಾಲ್ಕು ಬಾರಿ ಹೋಗಿ ಬಲಿದೆ ಎಂದು

ಏ.12ರಿಂದ ಸುಬ್ರಹ್ಮಣ್ಯ-ಬೆಂಗಳೂರು ನಡುವೆ ಹೊಸ ರೈಲು : ಸೋಮಣ್ಣ Read More »

7ನೇ ವಾರದಲ್ಲಿಯೂ ಅದ್ಭುತ ಪ್ರದರ್ಶನ ಕಂಡ  “ಭಾವ ತೀರ ಯಾನ’ ಸಿನಿಮಾ | ನಾಳೆ ಬೆಳಗ್ಗೆ 11:00 ಗಂಟೆಗೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 7ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.10 ಗುರುವಾರದಂದು ಬೆಳಗ್ಗೆ 11:00 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ. ಸರಕಾರಿ ರಜೆ ಇರುವುದರಿಂದ ಎಲ್ಲರೂ ಇದರ ಪ್ರಯೋಜನವನ್ನು ಪಡಕೊಳ್ಳುವಂತೆ ನಿರ್ಮಾಪಕರು ತಿಳಿಸಿದ್ದಾರೆ

7ನೇ ವಾರದಲ್ಲಿಯೂ ಅದ್ಭುತ ಪ್ರದರ್ಶನ ಕಂಡ  “ಭಾವ ತೀರ ಯಾನ’ ಸಿನಿಮಾ | ನಾಳೆ ಬೆಳಗ್ಗೆ 11:00 ಗಂಟೆಗೆ ಚಿತ್ರ ಪ್ರದರ್ಶನ Read More »

ಪಾಟ್ರಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ‌ ಮುಖ್ಯೋಪಾಧ್ಯಾಯ ಶರಣಪ್ಪ ಉಮರಾಗಿ ಹೃದಯಾಘಾತದಿಂದ ನಿಧನ

ಕೆದಿಲ: ಕೆದಿಲ ಗ್ರಾಮದ ಪಾಟ್ರಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶರಣಪ್ಪ ಉಮರಾಗಿರವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಶರಣಪ್ಪ ರವರು ಪಾಟ್ರಕೋಡಿ ಶಾಲೆಯಲ್ಲಿ ಹಲವಾರು ವರ್ಷಗಳಿಂದ ಸೇವೆ ಮಾಡಿದ್ದು, ಶಾಲಾ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ. ಶರಣಪ್ಪ ಉಮರಾಗಿಯವರು ವಿದ್ಯಾರ್ಥಿಗಳ ಹಾಗೂ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದರು. ಇದೀಗ ತಮ್ಮ ಕುಟುಂಬಸ್ಥರನ್ನು, ಬಂಧು-ಬಳಗವನ್ನು ಅಗಲಿದ್ದಾರೆ.

ಪಾಟ್ರಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ‌ ಮುಖ್ಯೋಪಾಧ್ಯಾಯ ಶರಣಪ್ಪ ಉಮರಾಗಿ ಹೃದಯಾಘಾತದಿಂದ ನಿಧನ Read More »

ಯಾಸಿನ್‌ ಭಟ್ಕಳ್‌ ಸಹಿತ ಐವರು ಉಗ್ರರ ಗಲ್ಲುಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್‌

2013ರಲ್ಲಿ ಹೈದರಾಬಾದ್‌ನಲ್ಲಿ ಸಂಭವಿಸಿದ ಬಾಂಬ್‌ ಸ್ಫೋಟ ಪ್ರಕರಣದ ಅಪರಾಧಿಗಳು ಹೈದರಾಬಾದ್‌: ಹೈದರಾಬಾದ್‌ನಲ್ಲಿ 2013ರಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಇಂಡಿಯನ್‌ ಮುಜಾಹಿದಿನ್‌ ಉಗ್ರ ಯಾಸಿನ್ ಭಟ್ಕಳ್ ಸೇರಿ ಐವರು ಅಪರಾಧಿಗಳಿಗೆ ನೀಡಿದ್ದ ಮರಣದಂಡನೆಯನ್ನು ತೆಲಂಗಾಣ ಹೈಕೋರ್ಟ್ ಎತ್ತಿಹಿಡಿದಿದೆ. ನಿಷೇಧಿತ ಭಯೋತ್ಪಾದಕ ಸಂಘಟನೆ ಇಂಡಿಯನ್ ಮುಜಾಹಿದ್ದೀನ್‌ನ ಈ ಐವರು ಭಯೋತ್ಪಾದಕರು 2013ರಲ್ಲಿ ಹೈದರಾಬಾದ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದರು. ಈ ಸ್ಫೋಟದಲ್ಲಿ 18 ಮಂದಿ ಸಾವನ್ನಪ್ಪಿ, 131 ಜನರು ಗಾಯಗೊಂಡಿದ್ದರು. ನ್ಯಾಯಮೂರ್ತಿಗಳಾದ ಲಕ್ಷ್ಮಣ್ ಮತ್ತು ಪಿ. ಶ್ರೀಸುಧಾ

ಯಾಸಿನ್‌ ಭಟ್ಕಳ್‌ ಸಹಿತ ಐವರು ಉಗ್ರರ ಗಲ್ಲುಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್‌ Read More »

ಹವಮಾನ ಇಲಾಖೆ ಮುನ್ಸೂಚನೆ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು, ನಾಳೆ ಎಲ್ಲೋ ಅಲರ್ಟ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಳಿಗೆ ನಿನ್ನೆ ಸಂಜೆ ಸುರಿದ ಮಳೆಯಿಂದ ವಾತಾವರಣ ಕೊಂಚ ತಂಪಾಗಿದ್ದು, ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ ಪ್ರದೇಶಗಳಲ್ಲಿ ನಿನ್ನೆ ಗಾಳಿ ಸಹಿತ ಉತ್ತಮ ಮಳೆಯಾಗಿದೆ. ಜಿಲ್ಲೆಯಾದ್ಯಂತ ಬೆಳಗ್ಗೆಯಿಂದಲೇ ಮೋಡದಿಂದ ಕೂಡಿದ ವಾತಾವರಣ ಇತ್ತು.  ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಮುಂದಿನ ಎ.9 ಮತ್ತು 10 ರಂದು “ಎಲ್ಲೋ ಅಲರ್ಟ್” ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

ಹವಮಾನ ಇಲಾಖೆ ಮುನ್ಸೂಚನೆ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು, ನಾಳೆ ಎಲ್ಲೋ ಅಲರ್ಟ್ Read More »

error: Content is protected !!
Scroll to Top