ಸುದ್ದಿ

ಉಚಿತ ಡ್ರೋನ್ ಹಾರಾಟ ತರಬೇತಿಯ ಶಿಬಿರಾರ್ಥಿಗಳಿಗೆ DGCA ಪ್ರಮಾಣಪತ್ರ ಪ್ರದಾನ

ಘಟಕೇಸರ್, ಹೈದರಾಬಾದ್: ಇಲ್ಲಿನ TARA UAV Pvt Ltd (TARA Done Academy) ಇದರ ವಿಶಾಲ 10 ಎಕರೆಯ ಸುಸಜ್ಜಿತ ಆವರಣದಲ್ಲಿ ಗ್ರಾಮೀಣ ಮಹಿಳೆಯರಿಗಾಗಿ ಆಯೋಜಿಸಲ್ಪಟ್ಟ 12 ದಿನಗಳ ಉಚಿತ Drone Piloting ಮತ್ತು GIS ತರಬೇತಿ ಸಮಾಪನಗೊಂಡಿತು. ದೆಹಲಿಯ DMI Housing and Finance Pvt Ltd ಇವರು ಪ್ರವರ್ತಿಸಿದ ತರಬೇತಿಯನ್ನು ಹೈದರಾಬಾದ್’ನ TARA UAV Pvt Ltd (TARA Done Academy) ಇದರ Accountable Manager Dr. ಜಿ. ಟಿ. ವಿಜಯ್ ಕುಮಾರ್ ಇವರು […]

ಉಚಿತ ಡ್ರೋನ್ ಹಾರಾಟ ತರಬೇತಿಯ ಶಿಬಿರಾರ್ಥಿಗಳಿಗೆ DGCA ಪ್ರಮಾಣಪತ್ರ ಪ್ರದಾನ Read More »

ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ವಜ್ರಾಭರಣಗಳ ವಾರ್ಷಿಕ ಮಹೋತ್ಸವ ‘ಗ್ಲೋ ಫೆಸ್ಟ್’: ಕೊನೆಯ ಮೂರು ದಿನಗಳಷ್ಟೇ ಬಾಕಿ

ಪುತ್ತೂರು: ನಗರದ ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಡಿ. 15 ರಿಂದ ಜ. 15 ರ ವರೆಗೆ ವಜ್ರಾಭರಣಗಳ ವಾರ್ಷಿಕ ಮಹೋತ್ಸವ ‘ಗ್ಲೋ ಫೆಸ್ಟ್’ ನಡೆಯುತ್ತಿದ್ದು, ಕೊನೆಯ ಮೂರು ದಿನಗಳಲ್ಲಿ ಈ ಮಹೋತ್ಸವ ಕೊನೆಗೊಳ್ಳಲಿದೆ. ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಂಸ್ಥೆ ತಿಳಿಸಿದೆ. ಈ ಸಂದರ್ಭದಲ್ಲಿ ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್‌ಗೆ 7000 ರೂ. ವರೆಗೆ ಸಂಸ್ಥೆ ರಿಯಾಯಿತಿ ನೀಡಲಿದೆ. ದುಬಾರಿ ಎಂದು ಖರೀದಿ ಮಾಡಲು ಹಿಂದೇಟು ಹಾಕುವವರಿಗೆ ‌ಕೈಗೆಟುಕುವ ದರದಲ್ಲಿ ವಜ್ರಾಭರಣಗಳು

ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ವಜ್ರಾಭರಣಗಳ ವಾರ್ಷಿಕ ಮಹೋತ್ಸವ ‘ಗ್ಲೋ ಫೆಸ್ಟ್’: ಕೊನೆಯ ಮೂರು ದಿನಗಳಷ್ಟೇ ಬಾಕಿ Read More »

ಇಸ್ರೋದ PSLV – C62 ರಾಕೆಟ್‌ ಹಾರಾಟದ ಕೊನೆಯ ಹಂತದಲ್ಲಿ ತಾಂತ್ರಿಕ ವ್ಯತ್ಯಯ

ಬೆಂಗಳೂರು: ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋ ಉಡಾವಣೆ ಮಾಡಿದ PSLV – C62 ರಾಕೆಟ್‌ ಹಾರಾಟದ ಕೊನೆಯ ಹಂತದಲ್ಲಿ ತಾಂತ್ರಿಕ ವ್ಯತ್ಯಯಗಳು ಕಂಡುಬಂದಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ವಿವರವಾದ ವಿಶ್ಲೇಷಣೆಗೆ ಇಸ್ರೋ ವಿಜ್ಞಾನಿಗಳು ಮುಂದಾಗಿದ್ದಾರೆ. ಆರಂಭಿಕ ಹಂತಗಳಲ್ಲಿ ರಾಕೆಟ್ ಯಶಸ್ವಿ ಹಾರಾಟ ನಡೆಸಿದೆ. ಆದರೆ ಮೂರನೇ ಹಂತದ ಕೊನೆಯಲ್ಲಿ ನಿರೀಕ್ಷಿತ ಪಥದಲ್ಲಿ ಹಾರಾಟ ನಡೆದಿಲ್ಲ ಎಂದು ಸಂಸ್ಥೆ ಮಾಹಿತಿ ನೀಡಿದೆ. ಈ ಹಿನ್ನೆಲೆ ಉಡಾವಣೆಯ ನಂತರದ ಟೆಲಿಮೆಟ್ರಿ ಮಾಹಿತಿ ಪರಿಶೀಲನೆ ನಡೆಸಲಾಗುವುದಾಗಿಯೂ

ಇಸ್ರೋದ PSLV – C62 ರಾಕೆಟ್‌ ಹಾರಾಟದ ಕೊನೆಯ ಹಂತದಲ್ಲಿ ತಾಂತ್ರಿಕ ವ್ಯತ್ಯಯ Read More »

ಸಭ್ಯ ಬಟ್ಟೆ ಧರಿಸುವಂತೆ ಬುದ್ಧಿ ಹೇಳಿದ್ದಕ್ಕೆ ಹೋಂ ಗಾರ್ಡ್ ಮೇಲೆ ಹಲ್ಲೆ ನಡೆಸಿದ ಯುವತಿ ಪೊಲೀಸರ ವಶಕ್ಕೆ

ಬೆಂಗಳೂರು: ಯುವತಿಯನ್ನು ಕೆಲವು ಯುವಕರು ಚುಡಾಯಿಸುತ್ತಿದ್ದಾಗ, ಅಸಭ್ಯ ಬಟ್ಟೆ ಧರಿಸಿ ರಸ್ತೆಗೆ ಬರಬೇಡಮ್ಮ ಎಂದು ಬುದ್ಧಿ ಹೇಳಿದ ಹೋಂ ಗಾರ್ಡ್ ಮೇಲೆಯೇ ಆಕೆ ಹಲ್ಲೆ ನಡೆಸಿದ ಘಟನೆ ಕೆ. ಆರ್. ಪುರಂ ರೈಲ್ವೆ ನಿಲ್ದಾಣದ ಬಳಿ ನಡೆದಿದ್ದು ಆರೋಪಿಯನ್ನು ರಾಮಮೂರ್ತಿ ನಗರ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಮೋಹಿನಿ ಎಂದು ಗುರುತಿಸಲಾಗಿದ್ದು, ಗಾಯಾಳು ಹೋಂ ಗಾರ್ಡ್ ಲಕ್ಷ್ಮೀ ನರಸಮ್ಮ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ 12 ವರ್ಷಗಳಿಂದ ಲಕ್ಷ್ಮೀ ನರಸಮ್ಮ ಹೋಂ ಗಾರ್ಡ್ ಆಗಿ ಕೆಲಸ

ಸಭ್ಯ ಬಟ್ಟೆ ಧರಿಸುವಂತೆ ಬುದ್ಧಿ ಹೇಳಿದ್ದಕ್ಕೆ ಹೋಂ ಗಾರ್ಡ್ ಮೇಲೆ ಹಲ್ಲೆ ನಡೆಸಿದ ಯುವತಿ ಪೊಲೀಸರ ವಶಕ್ಕೆ Read More »

ಆರು ವರ್ಷದ ಬಾಲಕಿಯರ ಕಿಡ್ನಾಪ್, ಕೊಲೆ ಪ್ರಕರಣಕ್ಕೆ ಟ್ವಿಸ್ಟ್: ಪೊಲೀಸರು ಹೇಳಿದ್ದೇನು ಗೊತ್ತಾ?

ಬೆಂಗಳೂರು: ಆರು ವರ್ಷದ ವಲಸೆ ಬಾಲಕಿಯ ಕಿಡ್ನಾಪ್ ಮತ್ತು ಕೊಲೆ ಪ್ರಕರಣ ವೈಟ್‌ ಫೀಲ್ಡ್ ನಲ್ಲಿ ನಡೆದಿದ್ದು, ಈ ಪ್ರಕರಣದ ಬಗ್ಗೆ ಮತ್ತೊಂದು ಶಾಕಿಂಗ್ ಹೇಳಿಕೆಯನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ. ಹತ್ಯೆ ನಡೆಸುವುದಕ್ಕೂ ಮುನ್ನ ಆರೋಪಿ ಯೂಸುಫ್ ಮೀರ್ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಹೆಚ್ಚಿನ ವಿಚಾರಣೆಯ ದೃಷ್ಟಿಯಿಂದ ಆರೋಪಿಯನ್ನು ಹೆಚ್ಚುವರಿ 10 ದಿನಗಳ ಕಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ಆರು ತಿಂಗಳ ಹಿಂದೆ ನಗರಕ್ಕೆ ಬಂದಿದ್ದು, ಸ್ಕ್ರ್ಯಾಪ್ ಸಂಗ್ರಹಿಸುವ ಕೆಲಸ

ಆರು ವರ್ಷದ ಬಾಲಕಿಯರ ಕಿಡ್ನಾಪ್, ಕೊಲೆ ಪ್ರಕರಣಕ್ಕೆ ಟ್ವಿಸ್ಟ್: ಪೊಲೀಸರು ಹೇಳಿದ್ದೇನು ಗೊತ್ತಾ? Read More »

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಕುಡಿಯುವ ಶುದ್ಧ ನೀರಿನ ಘಟಕದ ಉದ್ಘಾಟನೆ

ಉಪ್ಪಿನಂಗಡಿ: ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಉಳಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧರ್ಮದರ್ಶಿಯವರು ಸೇವಾ ರೂಪದಲ್ಲಿ ನೀಡಿದ ಶುದ್ಧ ಕುಡಿಯುವ ನೀರಿನ ಘಟಕವನ್ನು ಡಾ. ಯೋಗಿಂದ್ರ ಭಟ್ ಉಳಿ ಉದ್ಘಾಟಿಸಿ, ಶುಭ ಹಾರೈಸಿದರು. ಯಕ್ಷದ್ರುವ ಪಟ್ಲ ಫೌಂಡೇಶನ್ ಸ್ಥಾಪಕ ಅಧ್ಯಕ್ಷ ಭಾಗವತ ಪಟ್ಲ ಸತೀಶ್ ಶೆಟ್ಟಿ, ದೇವಸ್ಥಾನದ ಆಡಳಿತ ಸೇವಾ ಟ್ರಸ್ಟಿನ ಅಧ್ಯಕ್ಷ ಭಾಸ್ಕರ ಬಾರ್ಯ, ಕಾರ್ಯದರ್ಶಿ ಪ್ರಶಾಂತ ಪೈ, ಪವಿತ್ರ ಪಾಣಿ ಸೂರ್ಯನಾರಾಯಣ ಕುದ್ದಣ್ಣಾಯ, ಅರ್ಚಕ ಗುರುಪ್ರಸಾದ ನೂರಿತ್ತಾಯ, ವಾಣಿ ಶಿಕ್ಷಣ ಸಂಸ್ಥೆಯ

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಕುಡಿಯುವ ಶುದ್ಧ ನೀರಿನ ಘಟಕದ ಉದ್ಘಾಟನೆ Read More »

ಕಡಬ: ಮನೆಯಂಗಳದಿಂದ ನಾಯಿಯನ್ನು ಹೊತ್ತೊಯ್ದ ಚಿರತೆ

ಬೃಹತ್‌ ಗಾತ್ರದ ಚಿರತೆಯ ಓಡಾಟ ಸಿಸಿಟಿವಿಯಲ್ಲಿ ಸೆರೆ ಕಡಬ : ಎಡಮಂಗಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಸುಮ ನೂಜಿಲ ಅವರ ಮನೆಯಂಗಳಕ್ಕೆ ಜ.7ರಂದು ಬಂದ ಬೃಹತ್ ಗಾತ್ರದ ಚಿರತೆಯೊಂದು ಸಾಕುನಾಯಿಯನ್ನು ಹೊತ್ತೊಯ್ದಿದೆ. ಪಂಜ ಮೀಸಲು ಅರಣ್ಯ ವ್ಯಾಪ್ತಿಗೆ ಒಳಪಟ್ಟ ಎಡಮಂಗಲ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿರುವುದು ಸಾರ್ವಜನಿಕರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಜ.7ರಂದು ಸುಮ ನೂಜಿಲ ಅವರ ಕುಟುಂಬದವರು ಕಾರ್ಯಕ್ರಮವೊಂದಕ್ಕೆ ತೆರಳಿದ್ದರಿಂದ ಮನೆಗೆ ಬೀಗ ಹಾಕಲಾಗಿತ್ತು. ಸಾಯಂಕಾಲ ಸುಮಾರು 7 ಗಂಟೆಯ ಹೊತ್ತಿಗೆ

ಕಡಬ: ಮನೆಯಂಗಳದಿಂದ ನಾಯಿಯನ್ನು ಹೊತ್ತೊಯ್ದ ಚಿರತೆ Read More »

EOS-N1 ‘ಅನ್ವೇಷಾ’ ನಭಕ್ಕೆ: ಇಸ್ರೋ ಮುಡಿಗೆ ಮತ್ತೊಂದು ಹೆಮ್ಮೆಯ ಗರಿ

ಬೆಂಗಳೂರು: ದೇಶದ ಹೆಮ್ಮೆಯ ಇಸ್ರೋ ಮತ್ತೊಂದು ಮಹತ್ವದ ಮೈಲಿಗಲ್ಲು ದಾಖಲಿಸಿದೆ. 2026 ರ ಮೊದಲ ಬಾಹ್ಯಾಕಾಶ ಮಿಷನ್ ‘ಅನ್ವೇಷಾ’ ಉಪಗ್ರಹವನ್ನು ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ನಭಕ್ಕೆ ಕಳುಹಿಸಿದೆ. PSLV -C62 ರಾಕೆಟ್ ಮೂಲಕ EOS-N1 ‘ಅನ್ವೇಷಾ’ ಉಪಗ್ರಹವನ್ನು ಉಡಾಯಿಸಲಾಗಿದೆ. ಇದನ್ನು ಡಿಆರ್‌ಡಿಒ ಅಭಿವೃದ್ಧಿ ಮಾಡಿದ್ದು, ಕಣ್ಗಾವಲು ಮತ್ತು ರಕ್ಷಣಾ ಉದ್ದೇಶಗಳಿಗೆ ಇದು ಬಳಕೆಯಾಗಲಿದೆ. 600 km ಎತ್ತರದ ಕಕ್ಷೆಯಲ್ಲಿ 400 kg ತೂಕದ ಈ ಉಪಗ್ರಹ ಭೂಮಿಯನ್ನು ಸುತ್ತಲಿದೆ. ಈ ಉಪಗ್ರಹ

EOS-N1 ‘ಅನ್ವೇಷಾ’ ನಭಕ್ಕೆ: ಇಸ್ರೋ ಮುಡಿಗೆ ಮತ್ತೊಂದು ಹೆಮ್ಮೆಯ ಗರಿ Read More »

ಚಾಕು ಹಿಡಿದು ಹಸುವನ್ನು ಬೆದರಿಸಿದ ಪ್ರಕರಣ: ಪೊಲೀಸರಿಂದ ಸ್ವಯಂಪ್ರೇರಿತ ದೂರು ದಾಖಲು

ಮಂಗಳೂರು: ಹಸುವೊಂದು ಹೊಟೇಲ್‌ಗೆ ನುಗ್ಗಿ ಅಲ್ಲಿದ್ದ ಆಹಾರಗಳನ್ನು ತಿಂದಿದ್ದು, ಆ ಹಸುವನ್ನು ಹೆದರಿಸಲು ಹೊಟೇಲ್ ಮಾಲೀಕ ಚಾಕು ಹಿಡಿದು ಹಸುವನ್ನು ಹೆದರಿಸಿದ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲು ಮಾಡಿರುವ ಘಟನೆ ನಡೆದಿದೆ. ಈ ಘಟನೆಯಲ್ಲಿ ಹಸುವಿಗೆ ಸಣ್ಣ ಪ್ರಮಾಣದ ಗಾಯಗಳಾಗಿದ್ದು, ಯಾರಿಂದಲೂ ಯಾವುದೇ ರೀತಿಯ ಪ್ರಕರಣ ದಾಖಲಾಗಿಲ್ಲ. ಆದರೆ ಪೊಲೀಸರೇ ಈ ವಿಚಾರದಲ್ಲಿ ಹಸುವಿಗೆ ಹಲ್ಲೆ ನಡೆಸಿದ ಹೊಟೇಲ್ ಮಾಲೀಕ ಮತ್ತು ಹಸುವಿನ ವಾರೀಸುದಾರರ ಮೇಲೆ ಕೇಸು ದಾಖಲು ಮಾಡಿರುವುದಾಗಿದೆ. ಹಸುವಿಗೆ ಗಾಯಗಳಾಗಿರುವ

ಚಾಕು ಹಿಡಿದು ಹಸುವನ್ನು ಬೆದರಿಸಿದ ಪ್ರಕರಣ: ಪೊಲೀಸರಿಂದ ಸ್ವಯಂಪ್ರೇರಿತ ದೂರು ದಾಖಲು Read More »

ಟೋಲ್‌ಗೇಟ್‌ ವಿರುದ್ಧ ಭಾರಿ ಪ್ರತಿಭಟನೆ : ಕಾಸರಗೋಡು-ಮಂಗಳೂರು ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ

ಆರಿಕ್ಕಾಡಿಯಲ್ಲಿ ಟೋಲ್‌ ವಸೂಲಿ ಶುರುವಾದ ದಿನವೇ ಪ್ರತಿಭಟನೆಯ ಬಿಸಿ ಮಂಜೇಶ್ವರ : ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕುಂಬಳೆ ಸಮೀಪ ಆರಿಕ್ಕಾಡಿಯಲ್ಲಿ ಟೋಲ್‌ ವಸೂಲು ಮಾಡುವುದನ್ನು ಪ್ರತಿಭಟಿಸಲು ಸೋಮವಾರ ಬೆಳಗ್ಗೆಯೇ ಸಾವಿರಾರು ಜನರು ಜಮಾಯಿಸಿದ ಪರಿಣಾಮವಾಗಿ ಮಂಗಳೂರು-ಕಾಸರಗೋಡು ನಡುವೆ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಆರಿಕ್ಕಾಡಿಯಲ್ಲಿ ಇಂದಿನಿಂದ ಟೋಲ್‌ ವಸೂಲಿ ಶುರುವಾಗಿದೆ. ಈಗಾಗಲೇ ಕೇರಳ-ಕರ್ನಾಟಕ ಗಡಿಯಾಗಿರುವ ತಲಪ್ಪಾಡಿಯಲ್ಲಿ ಟೋಲ್‌ಗೇಟ್‌ ಇದ್ದು, ಇಲ್ಲಿಂದ ಬರೀ 20 ಕಿ.ಮೀ. ದೂರದಲ್ಲಿರುವ ಆರಿಕ್ಕಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇನ್ನೊಂದು ಟೋಲ್‌ಗೇಟ್‌ ಹಾಕಿದೆ. ಎರಡು ಟೋಲ್‌ಗೇಟ್‌ಗಳ

ಟೋಲ್‌ಗೇಟ್‌ ವಿರುದ್ಧ ಭಾರಿ ಪ್ರತಿಭಟನೆ : ಕಾಸರಗೋಡು-ಮಂಗಳೂರು ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ Read More »

error: Content is protected !!
Scroll to Top