ಸುದ್ದಿ

ಉತ್ತರ ಭಾರತ ಚಳಿಗೆ ಗಢಗಢ : 1.1 ಡಿಗ್ರಿ ಸೆಲ್ಸಿಯಸ್‌ಗೆ ಕುಸಿತದ ತಾಪಮಾನ

ರಸ್ತೆ ಗೋಚರಿಸದೆ ಹಲವೆಡೆ ಸರಣಿ ಅಪಘಾತ ನವದೆಹಲಿ: ಉತ್ತರ ಭಾರತದಲ್ಲಿ ಶೀತ ವಾತಾವರಣ ತೀವ್ರಗೊಂಡಿದೆ. ದಟ್ಟಮಂಜಿನಿಂದ ರಸ್ತೆಗಳೇ ಕಾಣದಂತೆ ಆಗಿದೆ. ಕಡಿಮೆ ಗೋಚರತೆಯಿಂದಾಗಿ ಅಲ್ಲಲ್ಲಿ ಅಪಘಾತ ನಾಲ್ವರು ಸಾವನ್ನಪ್ಪಿದ್ದು, ಸುಮಾರು 30 ಮಂದಿ ಗಾಯಗೊಂಡಿದ್ದಾರೆ. ಪಂಜಾಬ್ ಮತ್ತು ಹರ್ಯಾಣದಲ್ಲಿ ಅಕ್ಕಪಕ್ಕದಲ್ಲಿರುವವರೂ ಕಾಣದಷ್ಟು ದಟ್ಟ ಮಂಜು ಆವರಿಸುತ್ತಿದೆ. ಭಾನುವಾರ, ಸೋಮವಾರ ಉತ್ತರ ಭಾರತದಲ್ಲಿ ಶೀತಗಾಳಿ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಕೆಲ ದಿನಗಳಿಂದ ಕಾಶ್ಮೀರ ಕಣಿವೆ ಪ್ರದೇಶದಲ್ಲಿ ಶೂನ್ಯಕ್ಕಿಂತಲೂ ಕಡಿಮೆ ತಾಪಮಾನ […]

ಉತ್ತರ ಭಾರತ ಚಳಿಗೆ ಗಢಗಢ : 1.1 ಡಿಗ್ರಿ ಸೆಲ್ಸಿಯಸ್‌ಗೆ ಕುಸಿತದ ತಾಪಮಾನ Read More »

ಅಕ್ರಮ ಮರಳುಗಾರಿಕೆ ಮೇಲೆ ದಾಳಿ : ಲಕ್ಷಾಂತರ ರೂ. ಮೌಲ್ಯದ ಸೊತ್ತು ವಶ

ಬೆಳ್ತಂಗಡಿ : ಸರ್ಕಾರಕ್ಕೆ ರಾಜಧನ ಕಟ್ಟದೆ ನದಿಯ ಕಿನಾರೆಯಿಂದ ಹಿಟಾಚಿ ಬಳಸಿ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜ.8 ರಂದು ಬೆಳಗ್ಗೆ 7 ಗಂಟೆಗೆ ಸಿಬ್ಬಂದಿ ಜೊತೆ ಬೆಳ್ತಂಗಡಿ ಸಬ್‌ಇನ್ಸ್‌ಪೆಕ್ಟರ್ ಆನಂದ್ ಎಂ ರೌಂಡ್‌ ಕರ್ತವ್ಯದಲ್ಲಿರುವಾಗ ಮಾಹಿತಿದಾರರಿಂದ ಸಿಕ್ಕ ಖಚಿತ ಮಾಹಿತಿ ಮೇರೆಗೆ ಕಡಿರುದ್ಯಾವರ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ದಾಳಿ ಮಾಡಿದಾಗ ನೇತ್ರಾವತಿ ನದಿ ಕಿನಾರೆಯಿಂದ ಮರಳು ಕಳ್ಳತನ ಮಾಡಿ ಹಿಚಾಚಿ ಮೂಲಕ ಟಿಪ್ಪರ್ ಲಾರಿಗೆ ತುಂಬಿಸಿ

ಅಕ್ರಮ ಮರಳುಗಾರಿಕೆ ಮೇಲೆ ದಾಳಿ : ಲಕ್ಷಾಂತರ ರೂ. ಮೌಲ್ಯದ ಸೊತ್ತು ವಶ Read More »

ಕಾರಿಗೆ ಲಾರಿ ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಕಾರು ಹಾಗೂ ಕ್ಯಾಂಟರ್ ಲಾರಿ ಮಧ್ಯೆ ಡಿಕ್ಕಿ ಸಂಭವಿಸಿ ನಾಲ್ವರು ದಾರುಣವಾಗಿ‌ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಹಿಂಡಸಕಟ್ಟೆ ಗ್ರಾಮದ ಬಳಿ ನಡೆದಿದೆ. ಬೀದರ್-ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿ 150ಎ ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರಲ್ಲಿದ್ದ ‌ನಾಲ್ವರು‌ ಸ್ಥಳದಲ್ಲೇ ‌ದುರ್ಮರಣಕ್ಕೀಡಾಗಿದ್ದಾರೆ. ಡಿಕ್ಕಿಯ‌ ರಭಸಕ್ಕೆ‌‌ ಸ್ವಿಫ್ಟ್ ಕಾರು ನಜ್ಜುಗುಜ್ಜಾಗಿ‌ ಕಾರಿನ ಅವಶೇಷಗಳು ದಿಕ್ಕಿಗೊಂದು ಬಿದ್ದಿವೆ. ಕಾರಿನಲ್ಲಿದ್ದವರು ಕೂಡ ಅಪಘಾತದ ವೇಳೆ ಚೆಲ್ಲಾಪಿಲ್ಲಿಯಾಗಿ ದಿಕ್ಕಿಗೊಬ್ಬರು ಬಿದ್ದಿದ್ದು, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ‌. ಮೃತರೆಲ್ಲರೂ ಹಿರಿಯೂರು ತಾಲ್ಲೂಕಿನ ‌ನಂಜಯ್ಯನಕೊಟ್ಟಿಗೆ

ಕಾರಿಗೆ ಲಾರಿ ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು Read More »

ಇರಾನ್‌ನಲ್ಲಿ ನಾಗರಿಕ ದಂಗೆ : 200ಕ್ಕೂ ಹೆಚ್ಚು ಮಂದಿ ಸಾವು

ಪ್ರತಿಭಟನೆಯನ್ನು ನಿರ್ದಯವಾಗಿ ದಮನಿಸುತ್ತಿರುವ ಇರಾನ್‌ ಸರ್ಕಾರ ಟೆಹ್ರಾನ್‌: ಇರಾನ್‌ ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ 13 ದಿನಕ್ಕೆ ಕಾಲಿಟ್ಟಿದ್ದು, ಹಿಂಸಾಚಾರ ಮತ್ತಷ್ಟು ಹೆಚ್ಚಿದೆ. ಸರ್ಕಾರದ ಸೂಚನೆ ಮೇರೆಗೆ ಭದ್ರತಾ ಪಡೆಗಳು ಹಲವು ಸ್ಥಳಗಳಲ್ಲಿ ಗುಂಡು ಹಾರಿಸಿದ್ದು, 200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ವೈದ್ಯರ ಮಾಹಿತಿ ಪ್ರಕಾರ, ರಾಜಧಾನಿ ಟೆಹ್ರಾನ್‌ನಲ್ಲಿರುವ 6 ಆಸ್ಪತ್ರೆಗಳಲ್ಲಿ ಕನಿಷ್ಠ 217 ಪ್ರತಿಭಟನಾಕಾರರು ಸಾವನ್ನಪ್ಪಿದ್ದಾರೆ. ಈ ಪೈಕಿ ಹೆಚ್ಚಿನವರು ಗುಂಡಿನ ದಾಳಿಗೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಉತ್ತರ ಟೆಹ್ರಾನ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಯುವ

ಇರಾನ್‌ನಲ್ಲಿ ನಾಗರಿಕ ದಂಗೆ : 200ಕ್ಕೂ ಹೆಚ್ಚು ಮಂದಿ ಸಾವು Read More »

ಅಯೋಧ್ಯೆ ರಾಮ ಮಂದಿರದ 15 ಕಿ.ಮೀ. ಸುತ್ತಮುತ್ತ ಮಾಂಸಾಹಾರ ನಿಷೇಧ

ಆನ್‌ಲೈನ್‌ನಲ್ಲೂ ಮಾಂಸಾಹಾರ, ಮದ್ಯ ತರಿಸಿಕೊಳ್ಳಲು ಅವಕಾಶವಿಲ್ಲ ಲಖನೌ: ಅಯೋಧ್ಯೆಯ ರಾಮ ಮಂದಿರದ 15 ಕಿ.ಮೀ ವ್ಯಾಪ್ತಿಯಲ್ಲಿ ಮಾಂಸಾಹಾರ ಪದಾರ್ಥಗಳ ವಿತರಣೆಯನ್ನ ನಿಷೇಧಿಸಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಮಾಂಸಾಹಾರ ಪದಾರ್ಥಗಳನ್ನ ಪೂರೈಕೆ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ʻಪಂಚಕೋಶ ಪರಿಕ್ರಮʼದ ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ. ಅಯೋಧ್ಯೆಯ ಕೆಲವು ಹೋಟೆಲ್‌ಗಳು ಮತ್ತು ಹೋಂ ಸ್ಟೇಗಳು ಅತಿಥಿಗಳಿಗೆ ಮಾಂಸಾಹಾರ ಮತ್ತು ಮದ್ಯ ಪೂರೈಕೆ ಮಾಡುತ್ತಿವೆ ಎನ್ನುವ ಆರೋಪ ಕೇಳಿಬಂದಿದೆ. ಅಂತಹ ಚಟುವಟಿಕೆಗಳಿಂದ ದೂರ ಇರುವಂತೆ ಅಧಿಕಾರಿಗಳು

ಅಯೋಧ್ಯೆ ರಾಮ ಮಂದಿರದ 15 ಕಿ.ಮೀ. ಸುತ್ತಮುತ್ತ ಮಾಂಸಾಹಾರ ನಿಷೇಧ Read More »

ಚಾರ್ಮಾಡಿ ಘಾಟಿಯಲ್ಲಿ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ

ಚಾಲಕ ಸಹಿತ ಮೂವರು ಅದೃಷ್ಟವಶಾತ್‌ ಪಾರು ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಎರಡನೆಯ ತಿರುವಿನಲ್ಲಿ ಮೆಕ್ಕೆಜೋಳ ಸಾಗಾಟದ ಲಾರಿಯೊಂದು ಬೆಂಕಿಗೆ ಆಹುತಿಯಾದ ಘಟನೆ ಶನಿವಾರ ಬೆಳಗ್ಗಿನ ಜಾವ 3 ಗಂಟೆಯ ವೇಳೆ ಸಂಭವಿಸಿದೆ. ಸ್ಥಳಕ್ಕೆ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದವರು ಧಾವಿಸಿ ಬೆಂಕಿ ನಂದಿಸಿದ್ದಾರೆ. ಲಾರಿ ಸಂಪೂರ್ಣ ಸುಟ್ಟು ಕರಕಲಾಗಿದೆ ಎಂದು ತಿಳಿದು ಬಂದಿದೆ. ಜಾವಗಲ್‌ನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಮೆಕ್ಕೆಜೋಳ ಸಾಗಾಟದ ಲಾರಿಗೆ ತಾಂತ್ರಿಕ ಅಡಚಣೆಯಿಂದ ಚಾರ್ಮಾಡಿ ಘಾಟಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಲಾರಿಯ ಟಯರ್‌ನ ಭಾಗದಿಂದ ಆರಂಭವಾದ

ಚಾರ್ಮಾಡಿ ಘಾಟಿಯಲ್ಲಿ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ Read More »

ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಮಧ್ಯೆ ಬಂದು ನಿಂತ ಕಾಡಾನೆ

ತಾಸಿಗೂ ಅಧಿಕ ಹೊತ್ತು ಟ್ರಾಫಿಕ್‌ ಜಾಮ್‌, ವಾಹನ ಸವಾರರಿಗೆ ಭೀತಿ ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಚಾರ್ಮಾಡಿ ಘಾಟಿಯ 2ನೇ ಮತ್ತು 3ನೇ ತಿರುವಿನ ಮಧ್ಯೆ ಶುಕ್ರವಾರ ರಾತ್ರಿ ಭಾರಿ ಗಾತ್ರದ ಕಾಡಾನೆ ರಸ್ತೆ ಮಧ್ಯೆ ಕಾಣಿಸಿಕೊಂಡಿದ್ದು,ವಾಹನ ಸವಾರರಲ್ಲಿ ಭೀತಿ ಆವರಿಸಿದೆ. ಶುಕ್ರವಾರ ರಾತ್ರಿ ಸುಮಾರು 9.45ರ ವೇಳೆಗೆ ಮರವನ್ನು ಮುರಿದು ರಸ್ತೆ ಮಧ್ಯೆ ನಿಂತ ಕಾಡಾನೆ, ಒಂದು ತಾಸಿಗೂ ಅಧಿಕ ಕಾಲ ಅಲ್ಲೇ ಅಲೆಯುತ್ತಿತ್ತು. ಪರಿಣಾಮವಾಗಿ ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡು ಭಾರಿ ಟ್ರಾಫಿಕ್

ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಮಧ್ಯೆ ಬಂದು ನಿಂತ ಕಾಡಾನೆ Read More »

ಇಸ್ರೇಲ್‌ ಪ್ರಧಾನಿಯನ್ನು ಅಪಹರಿಸಲು ಅಮೆರಿಕಕ್ಕೆ ಪಾಕಿಸ್ತಾನ ಒತ್ತಾಯ

ಬೆಂಜಮಿನ್‌ ನೆತನ್ಯಾಹು ಅವರನ್ನು ಕಿಡ್ನಾಪ್‌ ಮಾಡಿ ಎಂದು ಆಗ್ರಹ ಇಸ್ಲಾಮಾಬಾದ್: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಅಪಹರಿಸಬೇಕು ಎಂಬ ವಿಚಿತ್ರ ಬೇಡಿಕೆಯೊಂದನ್ನು ಅಮೆರಿಕ ಮತ್ತು ಟರ್ಕಿಯ ಮುಂದೆ ಪಾಕಿಸ್ಥಾನ ಇಟ್ಟಿದೆ. ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಅಮೆರಿಕ ಹಾಗೂ ಟರ್ಕಿಗೆ ಈ ಒತ್ತಾಯ ಮಾಡಿದ್ದಾರೆ. ಪಾಕಿಸ್ತಾನದ ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಖವಾಜಾ ಆಸಿಫ್, ವೆನೆಜುವೆಲಾ ಅಧ್ಯಕ್ಷರನ್ನು ಅಮೆರಿಕ ಅಪಹರಿಸಿದಂತೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನೂ ಅಪಹರಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಬೆಂಜಮಿನ್ ನೆತನ್ಯಾಹು

ಇಸ್ರೇಲ್‌ ಪ್ರಧಾನಿಯನ್ನು ಅಪಹರಿಸಲು ಅಮೆರಿಕಕ್ಕೆ ಪಾಕಿಸ್ತಾನ ಒತ್ತಾಯ Read More »

ಬಳ್ಳಾರಿ ಬ್ಯಾನರ್‌ ಗಲಾಟೆ ಪ್ರಕರಣದ ತನಿಖೆ ಸಿಐಡಿಗೆ ವಹಿಸಿದ ಸರ್ಕಾರ

ಕಾಂಗ್ರೆಸ್‌ ಕಾರ್ಯಕರ್ತನ ಸಾವಿನ ಬಳಿಕ ರಾಜಕೀಯ ಕಚ್ಚಾಟಕ್ಕೆ ತಿರುಗಿದ ಪ್ರಕರಣ ಬೆಂಗಳೂರು: ಬ್ಯಾನರ್‌ ಅಳವಡಿಸುವ ವಿಚಾರದಲ್ಲಿ ನಡೆದ ಗಲಭೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತ ಸಾವಿಗೀಡಾದ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಲ್ಲ ಪ್ರಕರಣಗಳನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ಘಟನೆ ರಾಜಕೀಯ ಸ್ವರೂಪ ಪಡೆದುಕೊಂಡು ತೀವ್ರ ವಿವಾದ ಸೃಷ್ಟಿಸಿರುವ ಹಿನ್ನೆಲೆ ಸರ್ಕಾರ ಮಹತ್ವದ ನಿರ್ಣಯ ಕೈಗೊಂಡಿದೆ. ಬಳ್ಳಾರಿ ಪ್ರಕರಣ ಸಿಐಡಿಗೆ ವಹಿಸುವ ವಿಚಾರ ಸಂಬಂಧ ಇಂದೇ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಚರ್ಚೆ

ಬಳ್ಳಾರಿ ಬ್ಯಾನರ್‌ ಗಲಾಟೆ ಪ್ರಕರಣದ ತನಿಖೆ ಸಿಐಡಿಗೆ ವಹಿಸಿದ ಸರ್ಕಾರ Read More »

ಈ ಸಲ ಭಾನುವಾರ ಕೇಂದ್ರ ಬಜೆಟ್‌ ಮಂಡನೆ

ಜನವರಿ 28ರಿಂದ ಸಂಸತ್ತಿನ ಬಜೆಟ್‌ ಅಧಿವೇಶನ ಪ್ರಾರಂಭ ನವದೆಹಲಿ: ಕೇಂದ್ರ ಬಜೆಟನ್ನು ಫೆ.1ರಿಂದ ಮಂಡಿಸುವುದು ಕಳೆದ ಕೆಲವು ವರ್ಷಗಳಿಂದ ಪಾಲಿಸಿಕೊಂಡು ಬಂದ ವಾಡಿಕೆ. ಆದರೆ ಈ ಸಲ ಫೆ.1 ಭಾನುವಾರ ಬರಲಿದೆ. ಹೀಗಾಗಿ ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾನುವಾರ ಬಜೆಟ್‌ ಮಂಡನೆಯಾಗಲಿದೆ. 2025-26ನೇ ಸಾಲಿನ ಬಜೆಟನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಫೆಬ್ರವರಿ 1ರ ಭಾನುವಾರದಂದೇ ಸಂಸತ್ತಿನಲ್ಲಿ ಮಂಡಿಸಲಿದ್ದಾರೆ. ಬಜೆಟ್ ದಾಖಲೆಯ ಪೂರ್ವಗಾಮಿಯಾಗಿರುವ ಆರ್ಥಿಕ ಸಮೀಕ್ಷೆಯನ್ನು ಜನವರಿ 29ರಂದು ಮುಖ್ಯ ಆರ್ಥಿಕ ಸಲಹೆಗಾರ ವಿ

ಈ ಸಲ ಭಾನುವಾರ ಕೇಂದ್ರ ಬಜೆಟ್‌ ಮಂಡನೆ Read More »

error: Content is protected !!
Scroll to Top