ನಡುರಸ್ತೆಯಲ್ಲಿ ಹೊತ್ತಿ ಉರಿದ ಬಸ್ : ತಪ್ಪಿದ ಅನಾಹುತ
ಮಡಿಕೇರಿ: ಪ್ರವಾಸಿ ಬಸ್ಸೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ವಿರಾಜಪೇಟೆಯ ಮಾಕುಟ್ಟ ಬಳಿಯ ಮಗಡಿಪಾರೆ ಆಂಜನೇಯ ದೇವಾಲಯದ ಬಳಿ ಇಂದು ಬೆಳಗ್ಗೆ ನಡೆದಿದೆ. ಕೇರಳ ನೋಂದಣಿಯ ಖಾಸಗಿ ಬಸ್ ಇದಾಗಿದ್ದು, ಪ್ರವಾಸಿಗರನ್ನು ಮೈಸೂರಿನಲ್ಲಿ ಇಳಿಸಿ ವಾಪಸ್ ತೆರಳುವಾಗ ಈ ಅವಘಡ ಸಂಭವಿಸಿದೆ. ಬಸ್ನಲ್ಲಿ ಚಾಲಕ ಮತ್ತು ನಿರ್ವಾಹಕ ಇಬ್ಬರೇ ಇದ್ದರು. ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎನ್ನಲಾಗುತ್ತಿದೆ. ಅಕಸ್ಮಾತ್ ಪ್ರವಾಸಿಗರಿದ್ದಿದ್ದರೆ ಭಾರಿ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ತೆರಳಿ ಬೆಂಕಿ ನಂದಿಸಿದ್ದಾರೆ. […]
ನಡುರಸ್ತೆಯಲ್ಲಿ ಹೊತ್ತಿ ಉರಿದ ಬಸ್ : ತಪ್ಪಿದ ಅನಾಹುತ Read More »










