ಸುದ್ದಿ

ಸ್ಪೀಕರ್‌ ಖಾದರ್‌ ಹರಿಕಥೆ ಟೀಕೆಗೆ ಕರಾವಳಿಯಲ್ಲಿ ಆಕ್ರೋಶ

ಅನುದಾನ ಕೇಳಿದಾಗ ಹರಿಕಥೆ ಹೇಳಬೇಡಿ ಎಂದು ಶಾಸಕ ಯಶ್‌ಪಾಲ್‌ ಸುವರ್ಣ ಬಾಯಿಮುಚ್ಚಿಸಿದ ಖಾದರ್‌ ಉಡುಪಿ: ವಿಧಾನಸಭೆ ಅಧಿವೇಶನದಲ್ಲಿ ಉಡುಪಿ ಪರ್ಯಾಯಕ್ಕೆ ಅನುದಾನ ಕೋರಿ ಮಾತನಾಡಿದ ಸಂದರ್ಭ ಉಡುಪಿ ಬಿಜೆಪಿ ಶಾಸಕ ಯಶಪಾಲ್ ಸುವರ್ಣ ಮತ್ತು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ನಡುವೆ ನಡೆದ ಮಾತಿನ ಚಕಮಕಿ ವ್ಯಾಪಕ ಟ್ರೋಲ್‌ಗೆ ಒಳಗಾಗಿದೆ. ಕರಾವಳಿ ಭಾಗದಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಶಾಸಕರ ಹೇಳಿಕೆ ಮತ್ತು ಸ್ಪೀಕರ್ ನಡೆ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿದೆ. ಅಧಿವೇಶನದಲ್ಲಿ ಮಾತನಾಡುವ ವೇಳೆ ಶಾಸಕ ಯಶಪಾಲ್ […]

ಸ್ಪೀಕರ್‌ ಖಾದರ್‌ ಹರಿಕಥೆ ಟೀಕೆಗೆ ಕರಾವಳಿಯಲ್ಲಿ ಆಕ್ರೋಶ Read More »

ಅಮಲೇರಿದಾಗ ಬಸ್ಸನ್ನೇ ಕದ್ದುಕೊಂಡು ಹೋದ ಕುಡುಕರು!

ಜನ ಸಂಚಾರವಿಲ್ಲದ ಕಾರಣ ತಪ್ಪಿದ ಅನಾಹುತ ಬೆಂಗಳೂರು : ಶರಾಬಿನ ಮತ್ತಿನಲ್ಲಿ ಬಸ್ಸನ್ನೇ ಕದ್ದುಕೊಂಡು ಹೋದ ಘಟನೆಯೊಂದು ಬೆಂಗಳೂರು ಹೊರವಲಯದ ಆನೇಕಲ್‌ನಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ಬಸ್‌ ಚಲಾಯಿಸಿಕೊಂಡು ಪಲಾಯನ ಮಾಡಲು ಯತ್ನಿಸಿದ ವೇಳೆ ನಿಯಂತ್ರಣ ತಪ್ಪಿ ವ್ಯಕ್ತಿ ಮತ್ತು ರಸ್ತೆ ಬದಿಯ ವಿದ್ಯುತ್​​ ಕಂಬಗಳಿಗೆ ಬಸ್ ಡಿಕ್ಕಿಯಾಗಿ ಕುಡುಕುರು ಸಿಕ್ಕಿಬಿದ್ದಿದ್ದಾರೆ. ಘಟನೆ ನಿನ್ನೆ ರಾತ್ರಿ ​​ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದ ಥಳಿರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಬಸ್‌ನ ಮುಂಭಾಗ ಜಖಂ ಆಗಿದ್ದು, ರಾತ್ರಿ ವೇಳೆ ಜನ ಸಂಚಾರ

ಅಮಲೇರಿದಾಗ ಬಸ್ಸನ್ನೇ ಕದ್ದುಕೊಂಡು ಹೋದ ಕುಡುಕರು! Read More »

ಐಷರಾಮಿ ಕಾರಿನಲ್ಲಿ ಗೋ ಕಳ್ಳತನ : ಬೆನ್ನಟ್ಟಿಕೊಂಡು ಹೋದ ಹಿಂದೂ ಕಾರ್ಯಕರ್ತರು

10 ಕಿ.ಮೀ. ಸಿನಿಮಾ ಶೈಲಿಯಲ್ಲಿ ಚೇಸ್‌ ಮಾಡಿದರೂ ತಪ್ಪಿಸಿಕೊಂಡ ದುಷ್ಕರ್ಮಿಗಳು ಚಿಕ್ಕಮಗಳೂರು: ರಸ್ತೆ ಬದಿ ಮಲಗಿದ್ದ ಗೋವುಗಳನ್ನು ಎಕ್ಸ್‌ಯುವಿ 500 ಕಾರಿನಲ್ಲಿ ತುಂಬಿಕೊಂಡು ಎಸ್ಕೇಪ್ ಆಗುತ್ತಿದ್ದ ಗೋ ಕಳ್ಳರನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಸಿನಿಮಾ ಶೈಲಿಯಲ್ಲಿ ಚೇಸ್ ಮಾಡಿರುವ ಘಟನೆ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಪ್ಪದಿಂದ‌ ಕುದುರೆಗುಂಡಿಯವರೆಗೆ ಸುಮಾರು 10 ಕಿ.ಮೀ ಎರಡು ಕಾರುಗಳು ರೇಸ್‌ನಂತೆ ಅತಿವೇಗವಾಗಿ ಸಾಗಿವೆ. ಹಿಂದೂ ಸಂಘಟಕರು ಈ ಚೇಸ್ ಮಾಡಿರುವ ದೃಶ್ಯವನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾರೆ. ಕೊಪ್ಪ ಪಟ್ಟಣದಿಂದ

ಐಷರಾಮಿ ಕಾರಿನಲ್ಲಿ ಗೋ ಕಳ್ಳತನ : ಬೆನ್ನಟ್ಟಿಕೊಂಡು ಹೋದ ಹಿಂದೂ ಕಾರ್ಯಕರ್ತರು Read More »

ಶಾಲಾ ಬಾಲಕಿಗೆ ಕಿರುಕುಳ : ವೃದ್ಧ ಬಂಧನ

ಮಂಗಳೂರು: ಶಾಲಾ ಬಾಲಕಿಗೆ ವೃದ್ಧನೊಬ್ಬ ಲೈಂಗಿಕ ಕಿರುಕುಳ ನೀಡಿದ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ಸುರತ್ಕಲ್ ಪೊಲೀಸರು ಪೊಕ್ಸೊ ಕಾಯ್ದೆಯಡಿ ಆರೋಪಿಯನ್ನು ಚೇಳಾಯರು ಎಂಬಲ್ಲಿ ಬಂಧಿಸಿದ್ದಾರೆ. ಸುರತ್ಕಲ್ ಚೇಳಾಯರು ನಿವಾಸಿ ಸುಂದರ ಪೂಜಾರಿ (60) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಟ್ಯೂಶನ್ ಮುಗಿಸಿ ಬಸ್‌ನಲ್ಲಿ ಬಂದು ಮುಕ್ಕದಲ್ಲಿ ಇಳಿದು ತನ್ನ ಮನೆಗೆ ಒಳ ರಸ್ತೆಯಾಗಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಆ ರಸ್ತೆಯಾಗಿ ಬಂದ ಆರೋಪಿ ಲೈಂಗಿಕ ಕಿರುಕುಳ ನೀಡಿರುವುದಾಗಿ ದೂರಿನಲ್ಲಿ ಸಂತ್ರಸ್ತೆ ತಿಳಿಸಿದ್ದಾಳೆ. ಈ ಘಟನೆ

ಶಾಲಾ ಬಾಲಕಿಗೆ ಕಿರುಕುಳ : ವೃದ್ಧ ಬಂಧನ Read More »

ಬಂಟ್ವಾಳ : ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಸೆರೆ

ಬಂಟ್ವಾಳ : ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ, 810 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ಬಂಧಿತರು ಬಂಟ್ವಾಳ ತುಂಬೆ ನಿವಾಸಿ ಸಮೀರ್ (31) ಹಾಗೂ ಬಂಟ್ವಾಳ ಗೂಡಿನ ಬಳಿ ನಿವಾಸಿ ಮೊಹಮ್ಮದ್ ಅಸೀಫ್ (35) ಸೆರೆಯಾಗಿರುವ ಆರೋಪಿಗಳು. ಡಿಸೆಂಬರ್ 13ರ ಸಂಜೆ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಹನಮನಗರ ಪ್ರದೇಶದ ರಾಷ್ಟ್ರೀಯ ಹೆದ್ದಾರಿ ಬಳಿ ಗಾಂಜಾ ಮಾರಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಆಧಾರವಾಗಿ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ

ಬಂಟ್ವಾಳ : ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಸೆರೆ Read More »

ಅಪಾರ್ಟ್‌ಮೆಂಟ್‌ ನಿವಾಸಿ ಸಂಘಟನೆ ಪದಾಧಿಕಾರಿಗಳಿಗೆ ಡಿಕೆಶಿ ಧಮಕಿ : ವ್ಯಾಪಕ ಆಕ್ರೋಶ

ಸಂವಾದ ಕಾರ್ಯಕ್ರಮದಲ್ಲಿ ಬಹಿರಂಗವಾಗಿ ಬೆದರಿಕೆ ದಾಟಿಯಲ್ಲಿ ಮಾತನಾಡಿದ ಡಿಸಿಎಂ ಬೆಂಗಳೂರು : ಬೆಂಗಳೂರಿನ ಅಪಾರ್ಟ್‌ಮೆಂಟ್‌ ನಿವಾಸಿಗಳ ಸಂಘಟನೆಯ ಪದಾಧಿಕಾರಿಗಳ ಜೊತೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಡೆದುಕೊಂಡ ರೀತಿಗೆ ಭಾರಿ ಆಕ್ರೋಶ ಮತ್ತು ಟೀಕೆ ವ್ಯಕ್ತವಾಗಿದೆ. ದೂರು ನೀಡಲು ಬಂದವರ ಜೊತೆಗೆ ದರ್ಪದಿಂದ ಮಾತನಾಡಿದ್ದಲ್ಲದೆ ಬೆದರಿಕೆಯನ್ನೂ ಹಾಕಿರುವ ಶಿವಕುಮಾರ್‌ ವಿರುದ್ಧ ಸೋಷಿಯಲ್‌ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಅನೇಕರು ಇದು ಅಹಂಕಾರದ ಪರಮಾವಧಿ ಎಂದು ಅಭಿಪ್ರಾಯಪಟ್ಟಿದ್ದಾರೆ. ವಿಪಕ್ಷ ಬಿಜೆಪಿ ಕೂಡ ಡಿಕೆಶಿ ವರ್ತನೆಯನ್ನು ಟೀಕಿಸಿದೆ. ಕರ್ನಾಟಕ ಅಪಾರ್ಟ್​ಮೆಂಟ್ ಮಾಲೀಕತ್ವ ಮತ್ತು ನಿರ್ವಹಣೆ

ಅಪಾರ್ಟ್‌ಮೆಂಟ್‌ ನಿವಾಸಿ ಸಂಘಟನೆ ಪದಾಧಿಕಾರಿಗಳಿಗೆ ಡಿಕೆಶಿ ಧಮಕಿ : ವ್ಯಾಪಕ ಆಕ್ರೋಶ Read More »

ಇಂದು ಧರ್ಮಶಾಲಾದಲ್ಲಿ 3ನೇ ಟಿ20 ಪಂದ್ಯ

ಟೀಮ್‌ ಇಂಡಿಯಾಕ್ಕೆ ಕ್ಯಾಪ್ಟನ್‌, ವೈಸ್‌ ಕ್ಯಾಪ್ಟನ್‌ಗಳ ಕಳಪೆ ಫಾರ್ಮ್‌ ಹೊರೆ ಧರ್ಮಶಾಲಾ : ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 3ನೇ ಟಿ20 ಪಂದ್ಯ ಇಂದು ಧರ್ಮಶಾಲಾದಲ್ಲಿ ನಡೆಯಲಿದೆ. ಸರಣಿ 1-1 ಸಮಬಲ ಸಾಧಿಸಿರುವುದರಿಂದ ಈ ಪಂದ್ಯ ನಿರ್ಣಾಯಕವಾಗಿದೆ. ಮಳೆಯ ಸಾಧ್ಯತೆ ಇದ್ದರೂ ಅತ್ಯಾಧುನಿಕ ಒಳಚರಂಡಿ ವ್ಯವಸ್ಥೆ ಇದೆ. ಧರ್ಮಶಾಲಾದ ಪಿಚ್ ಆರಂಭದಲ್ಲಿ ವೇಗದ ಬೌಲರ್‌ಗಳಿಗೆ ಸಹಕಾರಿ, ನಂತರ ಸ್ಪಿನ್ನರ್‌ಗಳಿಗೆ ತಿರುವು ನೀಡಬಹುದು. ಭಾರತದ ಬ್ಯಾಟಿಂಗ್ ಪ್ರದರ್ಶನ ಮತ್ತು ಪಿಚ್ ಪರಿಸ್ಥಿತಿಗಳು ಪಂದ್ಯದ ಫಲಿತಾಂಶವನ್ನು ನಿರ್ಧರಿಸಲಿವೆ. ಭಾರತಕ್ಕೆ

ಇಂದು ಧರ್ಮಶಾಲಾದಲ್ಲಿ 3ನೇ ಟಿ20 ಪಂದ್ಯ Read More »

ಅನಾರೋಗ್ಯದಿಂದ ಒಂದೂವರೆ ತಿಂಗಳ ಮಗು ಸಾವು

ಸವಣೂರು: ಉಸಿರಾಟದ ಸಮಸ್ಯೆ, ವಾಂತಿಯಿಂದ ‌ಬಳಲುತ್ತಿದ್ದ ಒಂದೂವರೆ ತಿಂಗಳಿನ ಮಗುವೊಂದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಓಡಂತರ್ಯದಲ್ಲಿ ನಡೆದಿದೆ. ಗುತ್ತಿಗಾರು ಗ್ರಾಮದ ಕಮಿಲ ನಿವಾಸಿಗಳಾದ ಮಾಧವ ಮತ್ತು ವೀಣಾ ದಂಪತಿಯ ಮಗು ನಿಶ್ಚಿತ್ ಮೃತಪಟ್ಟ ದುರ್ದೈವಿ. ಡಿ. 5 ರಂದು ಮಗುವಿಗೆ ವಾಂತಿ ಕಾಣಿಸಿಕೊಂಡಿದ್ದು, ತಕ್ಷಣವೇ ಕುಂಬ್ರದಲ್ಲಿರುವ ಖಾಸಗಿ ಕ್ಲಿನಿಕ್ ಒಂದರಿಂದ ಮಗುವಿಗೆ ಔಷಧಿ ತಂದಿದ್ದಾರೆ. ಆದರೆ, ಆ ದಿನ ರಾತ್ರಿ ವೇಳೆ ಮಗುವಿನ ಆರೋಗ್ಯ ಮತ್ತಷ್ಟು ಹದೆಗೆಟ್ಟಿದ್ದು, ವಾಂತಿಯ ಜೊತೆಗೆ ಉಸಿರಾಟದ ತೊಂದರೆ ಆರಂಭವಾಗಿದೆ. ತಕ್ಷಣವೇ

ಅನಾರೋಗ್ಯದಿಂದ ಒಂದೂವರೆ ತಿಂಗಳ ಮಗು ಸಾವು Read More »

ಡಿ.15 – ಜ. 15: ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ವಜ್ರಾಭರಣಗಳ ವಾರ್ಷಿಕ ಮಹೋತ್ಸವ ‘ಗ್ಲೋ ಫೆಸ್ಟ್’

ಪುತ್ತೂರು: ನಗರದ ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಡಿ. 15 ರಿಂದ ಜ. 15 ರ ವರೆಗೆ ವಜ್ರಾಭರಣಗಳ ವಾರ್ಷಿಕ ಮಹೋತ್ಸವ ‘ಗ್ಲೋ ಫೆಸ್ಟ್’ ನಡೆಯಲಿದ್ದು, ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಂಸ್ಥೆ ತಿಳಿಸಿದೆ. ಈ ಸಂದರ್ಭದಲ್ಲಿ ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್‌ಗೆ 7000 ರೂ. ವರೆಗೆ ಸಂಸ್ಥೆ ರಿಯಾಯಿತಿ ನೀಡಲಿದೆ. ದುಬಾರಿ ಎಂದು ಖರೀದಿ ಮಾಡಲು ಹಿಂದೇಟು ಹಾಕುವವರಿಗೆ ‌ಕೈಗೆಟುಕುವ ದರದಲ್ಲಿ ವಜ್ರಾಭರಣಗಳು ಸಂಸ್ಥೆಯಲ್ಲಿ ಲಭ್ಯವಿದ್ದು, 3500 ರೂ. ಗಳಿಂದ ವಜ್ರಾಭರಣಗಳು

ಡಿ.15 – ಜ. 15: ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ವಜ್ರಾಭರಣಗಳ ವಾರ್ಷಿಕ ಮಹೋತ್ಸವ ‘ಗ್ಲೋ ಫೆಸ್ಟ್’ Read More »

ಡಿ.16 : ಧರ್ಮಸ್ಥಳದಲ್ಲಿ ಮಹಿಳಾ ನ್ಯಾಯ ಸಮಾವೇಶ

ಕೊಂದವರು ಯಾರು ಅಭಿಯಾನ ಸಮಿತಿಯಿಂದ ಮೌನ ಮೆರವಣಿಗೆ ಮಂಗಳೂರು: ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅತ್ಯಾಚಾರ, ಕೊಲೆ, ಅಸಹಜ ಸಾವುಗಳಿಗೆ ಕಾರಣ ಯಾರು ಎಂದು ಪತ್ತೆಹಚ್ಚಲು ಒತ್ತಾಯಿಸಿ ವಿವಿಧ ಮಹಿಳಾ ಸಂಘಟನೆಗಳ ಸಹಭಾಗಿತ್ವದಲ್ಲಿ ಕೊಂದವರು ಯಾರು ಅಭಿಯಾನ ಸಮಿತಿಯ ವತಿಯಿಂದ ಮಹಿಳೆಯರ ಮೌನ ಮೆರವಣಿಗೆ ಹಾಗೂ ಮಹಿಳಾ ನ್ಯಾಯ ಸಮಾವೇಶ ಡಿ.16ರಂದು ಬೆಳ್ತಂಗಡಿಯಲ್ಲಿ ನಡೆಯಲಿದ್ದು, ರಾಜ್ಯದ ವಿವಿಧ ಭಾಗಗಳಿಂದ 1,000ದಷ್ಟು ಮಹಿಳೆಯರು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಅಭಿಯಾನದ ಪ್ರಮುಖರಾದ ಜ್ಯೋತಿ ಎ. ತಿಳಿಸಿದ್ದಾರೆ. ಶುಕ್ರವಾರ

ಡಿ.16 : ಧರ್ಮಸ್ಥಳದಲ್ಲಿ ಮಹಿಳಾ ನ್ಯಾಯ ಸಮಾವೇಶ Read More »

error: Content is protected !!
Scroll to Top