ಸುದ್ದಿ

ಕರ್ನಾಟಕದಲ್ಲಿ ಎಸ್‌ಡಿಪಿಐ ಮೂಲಕ ಪಿಎಫ್‌ಐ ಸಕ್ರಿಯ : ಸಂಸತ್ತಿನಲ್ಲಿ ಕ್ಯಾ.ಚೌಟ ಕಳವಳ

ಕಾಂಗ್ರೆಸ್‌ನಿಂದ ಎಸ್‌ಡಿಪಿಐಗೆ ನಿರಂತರ ಪೋಷಣೆ ಎಂದು ತಿಳಿಸಿದೆ ಸಂಸದ ಮಂಗಳೂರು : ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ಕಾರ್ಯಕರ್ತರ ಸೋಗಿನಲ್ಲಿ ನಮ್ಮ ಚುನಾವಣಾ ವ್ಯವಸ್ಥೆಯೊಳಗೆ ಮರುಪ್ರವೇಶಕ್ಕೆ ಪ್ರಯತ್ನಿಸುತ್ತಿರುವ ಅತ್ಯಂತ ಗಂಭೀರ ವಿಚಾರವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿ ಕಳವಳ ವ್ಯಕ್ತಪಡಿಸಿದ್ದಾರೆ. ಜಾರಿ ನಿರ್ದೇಶನಾಲಯದ (ಇ.ಡಿ) 2025ರ ನವೆಂಬರ್ 8ರ ಪತ್ರಿಕಾ ಪ್ರಕಟಣೆಯನ್ನು ಉಲ್ಲೇಖಿಸಿ ಸದನದಲ್ಲಿ ಮಾತನಾಡಿದ ಕ್ಯಾ.ಚೌಟ, ಎಸ್‌ಡಿಪಿಐಯು ನಿಷೇಧಿತ […]

ಕರ್ನಾಟಕದಲ್ಲಿ ಎಸ್‌ಡಿಪಿಐ ಮೂಲಕ ಪಿಎಫ್‌ಐ ಸಕ್ರಿಯ : ಸಂಸತ್ತಿನಲ್ಲಿ ಕ್ಯಾ.ಚೌಟ ಕಳವಳ Read More »

ಇಂದು ವಿಶಾಖಪಟ್ಟಣಂನಲ್ಲಿ ಭಾರತ – ದಕ್ಷಿಣ ಆಫ್ರಿಕಾ ಅಂತಿಮ ಏಕದಿನ

ಸರಣಿ ಉಳಿಸಿಕೊಳ್ಳಲು ಗೆಲ್ಲಲೇ ಬೇಕಾದ ಒತ್ತಡದಲ್ಲಿ ಟೀಂ ಇಂಡಿಯಾ ವಿಶಾಖಪಟ್ಟಣಂ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಈಗ ಅಂತಿಮಪಂದ್ಯ ಇಂದು ಮಧ್ಯಾಹ್ನ ವಿಶಾಖಪಟ್ಟಣಂನಲ್ಲಿ ನಡೆಯಲಿದೆ. ಸರಣಿ 1-1 ರಲ್ಲಿ ಸಮಬಲಗೊಂಡಿರುವುದರಿಂದ ಸರಣಿ ವಿಜೇತರನ್ನು ನಿರ್ಧರಿಸಲು ಇಂದಿನ ಪಂದ್ಯ ಉಭಯ ತಂಡಗಳಿಗೆ ನಿರ್ಣಾಯಕವಾಗಿದೆ. ಟೆಸ್ಟ್‌ ಸರಣಿಯನ್ನು ಹೀನಾಯವಾಗಿ ಸೋತಿರುವ ಭಾರತ ಏಕದಿನ ಸರಣಿಯಲ್ಲಾದರೂ ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ. ಭಾರತ ತಂಡಕ್ಕೆ ಇದು ಮಾಡು ಇಲ್ಲ ಮಡಿ ಪಂದ್ಯವಾಗಿದೆ. ವಿಶಾಖಪಟ್ಟಣಂನ ಎಸಿಎ-ವಿಡಿಸಿಎ ಕ್ರಿಕೆಟ್

ಇಂದು ವಿಶಾಖಪಟ್ಟಣಂನಲ್ಲಿ ಭಾರತ – ದಕ್ಷಿಣ ಆಫ್ರಿಕಾ ಅಂತಿಮ ಏಕದಿನ Read More »

ಆಘಾತದ ಅಲೆಯೆಬ್ಬಿಸಿದ ಖ್ಯಾತ ವೈದ್ಯೆ, ಮಗನ ಆತ್ಮಹತ್ಯೆ

ಒಂದೇ ಮನೆಯಲ್ಲಿ 10 ವರ್ಷಗಳಲ್ಲಿ 4 ಮಂದಿ ಆತ್ಮಹತ್ಯೆ ಶಿವಮೊಗ್ಗ : ನಗರದ ಖ್ಯಾತ ಸ್ತ್ರೀರೋಗ ತಜ್ಞೆ ಡಾ. ಜಯಶ್ರೀ ಹೊಮ್ಮರಡಿ ಹಾಗೂ ಅವರ ಪುತ್ರ ಆಕಾಶ್ ಹೊಮ್ಮರಡಿ ಆತ್ಮಹತ್ಯೆ ಮಾಡಿಕೊಂಡಿರುವುದು ಇಡೀ ರಾಜ್ಯದಲ್ಲಿ ಆಘಾತದ ಅಲೆ ಎಬ್ಬಿಸಿದೆ. ಶಿವಮೊಗ್ಗ ನಗರದ ಅಶ್ವತ್ಥ್ ಬಡಾವಣೆಯ ಮನೆಯಲ್ಲಿ ಘಟನೆ ನಡೆದಿದ್ದು, ತಾಯಿ ಮತ್ತು ಮಗ ಪ್ರತ್ಯೇಕ ರೂಮ್‌ಗಳಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಾ.ಜಯಶ್ರೀ (57) ಮತ್ತು ಮಗ ಆಕಾಶ್(32) ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ವಿನೋಬನಗರ

ಆಘಾತದ ಅಲೆಯೆಬ್ಬಿಸಿದ ಖ್ಯಾತ ವೈದ್ಯೆ, ಮಗನ ಆತ್ಮಹತ್ಯೆ Read More »

ಐದನೇ ದಿನಕ್ಕೆ ಮುಂದುವರಿದ ಇಂಡಿಗೋ ಬಿಕ್ಕಟ್ಟು : ದೇಶಾದ್ಯಂತ ಪ್ರಯಾಣಿಕರ ಪರದಾಟ

ಟಿಕೆಟ್‌ ದರ ಹತ್ತುಪಟ್ಟು ಹೆಚ್ಚಿಸಿದ ಇತರ ವಿಮಾನಗಳು ನವದೆಹಲಿ: ಇಂಡಿಗೋ ವಿಮಾನ ಸಂಚಾರ ಅವ್ಯವಸ್ಥೆ 5ನೇ ದಿನವೂ ಮುಂದುವರಿದಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಎಲ್ಲೆಡೆ ಪ್ರಯಾಣಿಕರ ಪರದಾಟ ಮುಂದುವರಿದಿದೆ. ನೂರಾರು ಸಂಖ್ಯೆಯ ಪ್ರಯಾಣಿರರು ಏರ್ಪೋರ್ಟ್‌ನಲ್ಲೇ ಕಾಲ ಕಳೆಯುವಂತಾಗಿದೆ. ಇಂಡಿಗೋ ಏರ್‌ಲೈನ್ಸ್‌ ವಿರುದ್ಧ ಆಕ್ರೋಶ ಪ್ರಯಾಣಿಕರು ವ್ಯಕ್ತಪಡಿಸುತ್ತಿದ್ದು, ಏರ್‌ಪೋರ್ಟ್‌ ಸಿಬ್ಬಂದಿ ನಮಗೆ ಸರಿಯಾದ ಮಾಹಿತಿ ಕೊಡುತ್ತಿಲ್ಲ. ಕೊನೇ ಕ್ಷಣದಲ್ಲಿ ವಿಮಾನ ಹಾರಾಟ ರದ್ದು ಎಂದು ಹೇಳುತ್ತಿದ್ದಾರೆ. 2 ದಿನದಲ್ಲಿ ನಿಮ್ಮ ಹಣ ರೀಫಂಡ್‌ ಆಗುತ್ತೆ ಅಂತಾ

ಐದನೇ ದಿನಕ್ಕೆ ಮುಂದುವರಿದ ಇಂಡಿಗೋ ಬಿಕ್ಕಟ್ಟು : ದೇಶಾದ್ಯಂತ ಪ್ರಯಾಣಿಕರ ಪರದಾಟ Read More »

ತಿಮರೋಡಿ ಗಡಿಪಾರಿಗೆ ಮತ್ತೆ ನೋಟಿಸ್‌ ಜಾರಿ?

ಹೊಸ ಪ್ರಕರಣಗಳನ್ನು ಸೇರಿಸಿ ಮತ್ತೆ ಗಡಿಪಾರು ನೋಟಿಸ್‌ ಬೆಳ್ತಂಗಡಿ: ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಮತ್ತೆ ಗಡಿಪಾರು ಮಾಡುವ ಬಗ್ಗೆ ನೋಟಿಸ್ ನೀಡಿರುವುದಾಗಿ ತಿಳಿದು ಬಂದಿದೆ. ಈ ವಿಚಾರ ಸೋಷಿಯಲ್‌ ಮೀಡಿಯಾದಲ್ಲಿ ನಿನ್ನೆಯಿಂದ ಬಹಳ ವೈರಲ್‌ ಆಗುತ್ತಿದೆ. ಈ ಹಿಂದೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ಆದೇಶ ಮಾಡಿದ್ದರು ಈ ಆದೇಶವನ್ನು ಪ್ರಶ್ನಸಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ

ತಿಮರೋಡಿ ಗಡಿಪಾರಿಗೆ ಮತ್ತೆ ನೋಟಿಸ್‌ ಜಾರಿ? Read More »

ಧರ್ಮಸ್ಥಳ ಪ್ರಕರಣ ತನಿಖೆ ಪೂರ್ಣಗೊಂಡಿಲ್ಲ : ಮೊಹಾಂತಿ ಸ್ಪಷ್ಟನೆ

ತನಿಖೆ ಇನ್ನೂ ಮುಂದುವರಿಯಲಿದೆ ಎಂದು ಎಸ್‌ಐಟಿ ಮುಖ್ಯಸ್ಥ ಬೆಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಸರಕಾರಕ್ಕೆ ಸಲ್ಲಿಕೆ ಆಗಿರುವುದು ಈವರೆಗಿನ ವರದಿ ಮಾತ್ರ. ಚಾಜ್‌ರ್ಶೀಟ್ ಅಲ್ಲ ಎಂದು ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ ಬೆಂಗಳೂರಿನ ನೃಪತುಂಗ ರಸ್ತೆಯ ರಾಜ್ಯ ಪೊಲೀಸ್‌ ಪ್ರಧಾನ ಕಚೇರಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಧರ್ಮಸ್ಥಳ ಪ್ರಕರಣದಲ್ಲಿ ಅಂತಿಮ ಚಾಜ್‌ರ್ಶೀಟ್ ಸಲ್ಲಿಕೆಯಾಗಿದೆ ಅಥವಾ ಸಿದ್ಧಗೊಂಡಿದೆ ಎಂದು ಹೇಳಿದವರು ಯಾರು? ಪ್ರಕರಣ ಇನ್ನೂ ತನಿಖೆ ಹಂತದಲ್ಲಿದೆ. ಈಗ ಸಲ್ಲಿಕೆ ಆಗಿರುವುದು

ಧರ್ಮಸ್ಥಳ ಪ್ರಕರಣ ತನಿಖೆ ಪೂರ್ಣಗೊಂಡಿಲ್ಲ : ಮೊಹಾಂತಿ ಸ್ಪಷ್ಟನೆ Read More »

ಗುಂಪು ಮಾರಾಮಾರಿಯಲ್ಲಿ ಕಾಂಗ್ರೆಸ್‌ ನಾಯಕ ಹತ್ಯೆ

ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು ಬೆಂಗಳೂರು : ಎರಡು ಗುಂಪುಗಳ ಮಧ್ಯೆ ನಡೆದ ಮಾರಾಮಾರಿಯಲ್ಲಿ ಕಾಂಗ್ರೆಸ್ ಗ್ರಾಮ ಪಂಚಾಯತ್‌ ಸದಸ್ಯ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ಚರ ಮಠದ ಬಳಿ ನಡೆದಿದೆ. ಗಣೇಶ್ ಗೌಡ ಕೊಲೆಯಾದ ದುರ್ದೈವಿ. ಕೊಲೆಗೂ ಮುನ್ನ ಶುಕ್ರವಾರ ರಾತ್ರಿ 10.30ರ ವೇಳೆ ಸಖರಾಯಪಟ್ಟಣ ಬಾರ್ ಬಳಿ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿತ್ತು. ಬಾರ್ ಬಳಿ ಗಲಾಟೆ ನಡೆದ ಅರ್ಧ ಗಂಟೆ ನಂತರ ಮಠದ ಬಳಿ

ಗುಂಪು ಮಾರಾಮಾರಿಯಲ್ಲಿ ಕಾಂಗ್ರೆಸ್‌ ನಾಯಕ ಹತ್ಯೆ Read More »

ಕಾರು ಅಪಘಾತದಲ್ಲಿ ಇನ್‌ಸ್ಪೆಕ್ಟರ್‌ ಸಜೀವ ದಹನ

ಡಿವೈಡರ್‌ಗೆ ಡಿಕ್ಕಿಯಾದ ಕಾರಿಗೆ ಬೆಂಕಿ ಹತ್ತಿಕೊಂಡು ದುರಂತ ಬೆಂಗಳೂರು : ಧಾರವಾಡದಲ್ಲಿ ಶುಕ್ರವಾರ ಕಾರು ಡಿವೈಡರ್​ಗೆ ಡಿಕ್ಕಿಯಾಗಿ ನಡುರಸ್ತೆಯಲ್ಲೇ ಹೊತ್ತಿ ಉರಿದಿದ ಭೀಕರ ಅಪಘಾತದಲ್ಲಿ ಲೋಕಾಯುಕ್ತ ಇನ್ಸ್​​ಪೆಕ್ಟರ್ ಒಬ್ಬರು ಸಜೀವ ದಹನವಾಗಿದ್ದಾರೆ. ಧಾರವಾಡ ಜಿಲ್ಲೆ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಹಾವೇರಿ ಲೋಕಾಯುಕ್ತ ಇನ್‌ಸ್ಪೆಕ್ಟರ್​​​ ಪಂಚಾಕ್ಷರಿ ಸಾಲಿಮಠ ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ. ಸಾಲಿಮಠ ಅವರು ಇಂದು ಐ20 ಕಾರಿನಲ್ಲಿ ಗದಗ ಕಡೆ ಹೊರಟ್ಟಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ

ಕಾರು ಅಪಘಾತದಲ್ಲಿ ಇನ್‌ಸ್ಪೆಕ್ಟರ್‌ ಸಜೀವ ದಹನ Read More »

ಡಿಕೆಶಿಗೂ ಇದೆ ನ್ಯಾಶನಲ್‌ ಹೆರಾಲ್ಡ್‌ ಹಗರಣದ ನಂಟು : ನೋಟಿಸ್‌ ಜಾರಿ

ಹಗರಣದ ಪ್ರಮುಖ ಮಾಹಿತಿ ಡಿಕೆಶಿ ಬಳಿ ಇರುವ ಅನುಮಾನ ಬೆಂಗಳೂರು : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ಕಾಂಗ್ರೆಸ್​ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಹೊಸ ಎಫ್​ಐಆರ್ ದಾಖಲಿಸಿದ ಬೆನ್ನಲ್ಲೇ ಇದೇ ಪ್ರಕರಣಕ್ಕೆ ಸಂಬಂಧಿಸಿ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೂ ನೋಟಿಸ್​ ಜಾರಿ ಮಾಡಿ ಡಿಸೆಂಬರ್ 19ರೊಳಗೆ ದೆಹಲಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಈ ಪ್ರಕರಣದ ಪ್ರಮುಖ ಮಾಹಿತಿ ಡಿಕೆಶಿ ಬಳಿ ಇದೆ ಎಂದು ದೆಹಲಿ ಪೊಲೀಸರು ನಂಬಿದ್ದಾರೆ.

ಡಿಕೆಶಿಗೂ ಇದೆ ನ್ಯಾಶನಲ್‌ ಹೆರಾಲ್ಡ್‌ ಹಗರಣದ ನಂಟು : ನೋಟಿಸ್‌ ಜಾರಿ Read More »

ಬಾಲಕಿ ನೇಣು ಬಿಗಿದು ಆತ್ಮಹತ್ಯೆ

ಉಳ್ಳಾಲ: ಹದಿನಾರು ವರ್ಷದ ಹುಡುಗಿಯೊಬ್ಬಳು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾವೂರು ಇನೋಳಿ ಎಂಬಲ್ಲಿ ನಡೆದಿದೆ. ಮೃತಳನ್ನು ಇನೋಳಿ ಕಾನ ನಿವಾಸಿ ಝೈನಾಜ್ ಎಂದು ಗುರುತಿಸಲಾಗಿದೆ. ಮೃತ ಬಾಲಕಿ SSLC ಓದಿನ ಬಳಿಕ ಬ್ಯೂಟಿಷಿಯನ್ ಕೋರ್ಸ್‌ಗೆ ‌ಸೇರಿಕೊಂಡಿದ್ದಳು. ಆದರೆ ಗುರುವಾರ ಅನಾರೋಗ್ಯದ ಕಾರಣ ಹೇಳಿ ಮನೆಯಲ್ಲೇ ಉಳಿದುಕೊಂಡಿದ್ದಳು. ತನ್ನ ಅಜ್ಜಿ ಹಾಗೂ ತಾಯಿ ಮನೆಯಲ್ಲಿಲ್ಲದ ‌ಸಮಯ ನೋಡಿ ಈಕೆ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಾಲಕಿ ನೇಣು ಬಿಗಿದು ಆತ್ಮಹತ್ಯೆ Read More »

error: Content is protected !!
Scroll to Top