ಸುದ್ದಿ

ಮಾರ್ಚ್ ತಿಂಗಳ ಸಗಟು ಬೆಲೆ ಹಣದುಬ್ಬರ ಕುಸಿತ

ದೆಹಲಿ : ಸಗಟು ಬೆಲೆ ಸೂಚ್ಯಂಕ (WPI) ಆಧಾರಿತ ಹಣದುಬ್ಬರವು ಕಳೆದ ತಿಂಗಳು ಮಾರ್ಚ್ ನಲ್ಲಿ 29 ತಿಂಗಳ ಕನಿಷ್ಠ ಮಟ್ಟಕ್ಕೆ ಶೇಕಡಾ 1.34ಕ್ಕೆ ಇಳಿದಿದೆ.ಮೂಲ ಲೋಹಗಳು ಮತ್ತು ಆಹಾರ ಉತ್ಪನ್ನಗಳ ಬೆಲೆಗಳಲ್ಲಿನ ಮಿತವ್ಯಯದಿಂದಾಗಿ ಹಣದುಬ್ಬರ ಇಳಿಕೆಯಾಗಿದೆ ಎಂದು ಸರ್ಕಾರದ ಅಂಕಿಅಂಶಗಳು ಹೇಳುತ್ತವೆ. ಇದು ಡಬ್ಲ್ಯುಪಿಐ ಆಧಾರಿತ ಹಣದುಬ್ಬರ ಇಳಿಕೆಯಾದ ಸತತ ಹತ್ತನೇ ತಿಂಗಳು. ಉತ್ಪನ್ನ ವಸ್ತುಗಳು ಮತ್ತು ಇಂಧನ ಮತ್ತು ವಿದ್ಯುತ್ ಬೆಲೆಗಳನ್ನು ಸರಾಗಗೊಳಿಸುವ ಮೂಲಕ ಫೆಬ್ರವರಿ ತಿಂಗಳಲ್ಲಿ ಇದು ಶೇಕಡಾ 3.85ರಷ್ಟಿತ್ತು. ಮಾರ್ಚ್ ತಿಂಗಳಲ್ಲಿ […]

ಮಾರ್ಚ್ ತಿಂಗಳ ಸಗಟು ಬೆಲೆ ಹಣದುಬ್ಬರ ಕುಸಿತ Read More »

ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ಪುತ್ತೂರು : ಪುತ್ತೂರು ವಿಧಾನಸಭಾ ಕೇತ್ರದಿಂದ ಬಿಜೆಪಿ ಟಿಕೆಟ್ ವಂಚಿತರಾಗಿದ್ದ ಹಿಂದೂ ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲ ಪಕ್ಷೇತರನಾಗಿ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿ ಸಹಾಯಕ ಆಯುಕ್ತರ ಕಚೇರಿಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ನೀಡಿದರು. ಪುತ್ತೂರಿನ ದರ್ಬೆಯಿಂದ ಮಿನಿ ವಿಧಾನಸೌಧದ ವರೆಗೆ ಮೆರವಣಿಗೆಯ ಮೂಲಕ ತೆರಳಿದ ಅರುಣ್ ಪುತ್ತಿಲ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಸಲ್ಲಿಕೆಗೆ ಮುನ್ನ ಹಿಂದೂ ಸಂಘಟನೆಗಳ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆ ನಡೆಸಿ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಕಿಕ್ಕಿರಿದ ಜನಸ್ತೋಮ

ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಇತಿಹಾಸದಲ್ಲೇ ಮೊದಲ ಬಾರಿಗೆ ಅತೀ ಹೆಚ್ಚು ಆದಾಯ ಗಳಿಕೆ

ಮಂಗಳೂರು : 5,000 ವರ್ಷಕ್ಕೂ ಅಧಿಕ ಹಿನ್ನೆಲೆಯನ್ನು ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದಲ್ಲಿರುವ ಶ್ರೀಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಇತಿಹಾಸದಲ್ಲೇ ಮೊದಲ ಬಾರಿಗೆ ಅತೀ ಹೆಚ್ಚು ಆದಾಯ ಗಳಿಕೆಯಾಗಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಈ ವರ್ಷದ ವಾರ್ಷಿಕ ಆದಾಯ 123 ಕೋಟಿ ರೂ ದಾಖಲಾಗಿದೆ. 2022ರ ಎಪ್ರಿಲ್‌ನಿಂದ 2023ರ ಮಾರ್ಚ್ 31ರ ತನಕದ ಆರ್ಥಿಕ ವರ್ಷದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು 123 ಕೋಟಿ ರೂ. ಆದಾಯ ಗಳಿಸಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಇತಿಹಾಸದಲ್ಲೇ ಮೊದಲ ಬಾರಿಗೆ ಅತೀ ಹೆಚ್ಚು ಆದಾಯ ಗಳಿಕೆ Read More »

ದಶಕಗಳ ಬಿಜೆಪಿ ನಂಟನ್ನು ಕಡಿದುಕೊಂಡು ಕಾಂಗ್ರೆಸ್ ಸೇರ್ಪಡೆಯಾದ ಜಗದೀಶ್ ಶೆಟ್ಟರ್

ಬೆಂಗಳೂರು : ಬಿಜೆಪಿ ಟಿಕೆಟ್ ಸಿಗದೆ ಹತಾಶರಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿ ಇಂದು ವಿಧ್ಯುಕ್ತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ದಶಕಗಳ ಬಿಜೆಪಿ ನಂಟನ್ನು ಅಧಿಕೃತವಾಗಿ ಕಡಿದುಕೊಂಡಿದ್ದಾರೆ.ನಿನ್ನೆ ರಾತ್ರಿಯೇ ಬಿಜೆಪಿ ಕಚೇರಿಗೆ ಆಪ್ತ ಸಹಾಯಕರ ಮೂಲಕ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಪತ್ರವನ್ನು ರವಾನಿಸಿದ್ದ ಶೆಟ್ಟರ್ ಇಂದು ಬೆಳಗ್ಗೆ ಕಾಂಗ್ರೆಸ್ ಪಕ್ಷ ಸೇರಿದರು. ಈ ಮೂಲಕ ತಮ್ಮ ಮೂರು ದಶಕಗಳ ಬಿಜೆಪಿಯೊಂದಿಗಿನ ಸಂಬಂಧಕ್ಕೆ ಜಗದೀಶ್ ಶೆಟ್ಟರ್ ವಿದಾಯ ಹಾಡಿದ್ದಾರೆ.

ದಶಕಗಳ ಬಿಜೆಪಿ ನಂಟನ್ನು ಕಡಿದುಕೊಂಡು ಕಾಂಗ್ರೆಸ್ ಸೇರ್ಪಡೆಯಾದ ಜಗದೀಶ್ ಶೆಟ್ಟರ್ Read More »

ಹೋಟೆಲ್‌ ಊಟ-ತಿಂಡಿ ಖರ್ಚು ಅಭ್ಯರ್ಥಿ ಲೆಕ್ಕದಲ್ಲಿ ದಾಖಲೆ

ಬೆಂಗಳೂರು : ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣಾ ಅಕ್ರಮಗಳಿಗೆ ಸಹಕರಿಸದಂತೆ ಹೋಟೆಲ್ ಮಾಲೀಕರಿಗೆ ಚುನಾವಣಾ ಆಯೋಗ ಸೂಚನೆ ನೀಡಿದೆ. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ಗುಂಪು ಗುಂಪಾಗಿ ಹೋಟೆಲ್‌ಗಳಿಗೆ ಭೇಟಿ ನೀಡಿದಾಗ ಮತ್ತು ಅಭ್ಯರ್ಥಿಗಳ ಪರವಾಗಿ ಯಾರೇ ಚೀಟಿ ಅಥವಾ ಟೋಕನ್ ನೀಡಿ ಊಟ, ಉಪಹಾರ ನೀಡುವಂತೆ ಕೋರಿದಲ್ಲಿ ಅಂತಹವರ ಮಾಹಿತಿಯನ್ನು ಹೋಟೆಲ್‌ ಮಾಲೀಕರು ಜಿಲ್ಲಾಡಳಿತಕ್ಕೆ ನೀಡಬೇಕಿದೆ. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪ್ರಚಾರಕ್ಕೆ ತಗಲುವ ಎಲ್ಲ ವೆಚ್ಚಗಳನ್ನು ಚುನಾವಣಾ ವೆಚ್ಚ ವೀಕ್ಷಕರು

ಹೋಟೆಲ್‌ ಊಟ-ತಿಂಡಿ ಖರ್ಚು ಅಭ್ಯರ್ಥಿ ಲೆಕ್ಕದಲ್ಲಿ ದಾಖಲೆ Read More »

ಜಗದೀಶ್‌ ಶೆಟ್ಟರ್‌ ಇಂದು ಕಾಂಗ್ರೆಸ್‌ ಸೇರುವ ಸಾಧ್ಯತೆ

ಟಿಕೆಟ್‌ ಸಿಗದೆ ಬಿಜೆಪಿಗೆ ಗುಡ್‌ಬೈ ಹೇಳಿದ ಮಾಜಿ ಮುಖ್ಯಮಂತ್ರಿ ಬೆಂಗಳೂರು : ಟಿಕೆಟ್ ಸಿಗದ ನಿರಾಶೆಯಲ್ಲಿ ಬಿಜೆಪಿ ತೊರೆದಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ.ಜಗದೀಶ್ ಶೆಟ್ಟರ್ ಅವರನ್ನು ಕಾಂಗ್ರೆಸ್‌ಗೆ ಕರೆತರುವ ಹೊಣೆಯನ್ನು ಲಿಂಗಾಯಿತ ನಾಯಕರಾದ ಎಂ.ಬಿ. ಪಾಟೀಲ್ ಹಾಗೂ ಶಾಮನೂರು ಶಿವಶಂಕರಪ್ಪ ಅವರಿಗೆ ನೀಡಲಾಗಿದೆ. ಭಾನುವಾರ ತಡ ರಾತ್ರಿಯವರೆಗೂ ಶಾಮನೂರ ಶಿವಶಂಕರಪ್ಪ ಅವರ ನಿವಾಸದಲ್ಲಿ ರಾಜ್ಯ ಕಾಂಗ್ರೆಸ್

ಜಗದೀಶ್‌ ಶೆಟ್ಟರ್‌ ಇಂದು ಕಾಂಗ್ರೆಸ್‌ ಸೇರುವ ಸಾಧ್ಯತೆ Read More »

ಅಮಿತ್‌ ಶಾ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ದುರಂತ : ಬಿಸಿಲಿನ ಝಳದಿಂದ 8 ಮಂದಿ ಸಾವು

ಮುಂಬಯಿ : ಮಹಾರಾಷ್ಟ್ರ ಭೂಷಣ-2022 ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 8 ಮಂದಿ ಬಿಸಿಲಿನ ಝಳದಿಂದ ಮೃತಪಟ್ಟಿದ್ದಾರೆ. ಅಲ್ಲದೆ 35ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಜ್ಯ ಸರ್ಕಾರ ಕಾರ್ಯಕ್ರಮ ಆಯೋಜಿಸಿದ್ದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸಮಾಜ ಸುಧಾರಕ ಅಪ್ಪಾ ಸಾಹೇಬ್‌ ಅವರಿಗೆ ಮಹಾರಾಷ್ಟ್ರ ಭೂಷಣ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು. ದುರಂತದ ಸುದ್ದಿ ತಿಳಿದ ಮುಖ್ಯಮಂತ್ರಿ ಏಕನಾಥ್ ಶಿಂಧೆ ನವಿ ಮುಂಬಯಿಯ ಎಂಜಿಎಂ ಆಸ್ಪತ್ರೆಗೆ ದಾಖಲಾದವರ ಆರೋಗ್ಯ ವಿಚಾರಿಸಿದರು. ಬಿಸಿಲಿನ ಝಳದಿಂದ

ಅಮಿತ್‌ ಶಾ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ದುರಂತ : ಬಿಸಿಲಿನ ಝಳದಿಂದ 8 ಮಂದಿ ಸಾವು Read More »

ಅತೀಕ್, ಅಶ್ರಫ್ ಹತ್ಯೆ ಪ್ರಕರಣ : ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಿದ ಸಿಎಂ ಯೋಗಿ

ಪ್ರಯಾಗರಾಜ್ : ಗುಂಡಿನ ದಾಳಿಯಲ್ಲಿ ಮಾಫಿಯಾ ಡಾನ್ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಖಾಲಿದ್ ಅಜೀಂ ಅಲಿಯಾಸ್ ಅಶ್ರಫ್ ಸಾವನ್ನಪ್ಪಿದ ನಂತರ ಉತ್ತರ ಪ್ರದೇಶದ ಎಲ್ಲಾ ಜಿಲ್ಲೆಗಳಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದ್ದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಈ ಘಟನೆಯ ಹಿನ್ನೆಲೆಯಲ್ಲಿ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಸುಗಮವಾಗಿಡಲು ಯೋಗಿ ಸಂಪೂರ್ಣ ಗಮನ ಹರಿಸುತ್ತಿದ್ದಾರೆ. ಯುಪಿ ಡಿಜಿಪಿ ಸೇರಿದಂತೆ ಎಲ್ಲಾ ಉನ್ನತ ಅಧಿಕಾರಿಗಳಿಗೆ ಪ್ರಯಾಗ್‌ರಾಜ್‌ಗೆ ಹೋಗುವಂತೆ ಸೂಚಿಸಿದ್ದಾರೆ. ಅಲ್ಲದೆ ಪ್ರತಿ 2

ಅತೀಕ್, ಅಶ್ರಫ್ ಹತ್ಯೆ ಪ್ರಕರಣ : ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಿದ ಸಿಎಂ ಯೋಗಿ Read More »

ರಾಜ್ಯದಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿ ಆಗಲಿ, ಆ ಸ್ಥಾನ ನನಗೆ ಬೇಡ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ಕೋಲಾರ : ರಾಜ್ಯದಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿ ಆಗಲಿ, ಆ ಸ್ಥಾನ ನನಗೆ ಬೇಡ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು ಅಷ್ಟೇ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಜಿಲ್ಲೆಯಲ್ಲಿ ರಾಜ್ಯ ಕಾಂಗ್ರೆಸ್ ಆಯೋಜಿಸಿದ ಜೈ ಭಾರತ ಸಮಾವೇಶದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಯಾರಾಗಬೇಕೆಂದು ಕಾಂಗ್ರೆಸ್ ನಾಯಕರು ತಲೆ ಕೆಡಿಸಿಕೊಳ್ಳಬೇಡಿ. ರಾಜ್ಯದ ಜನರ ಬಗ್ಗೆ ಮಾತ್ರ ತಲೆಕೆಡಿಸಿಕೊಳ್ಳಿ. ಪಕ್ಷಕ್ಕೆ ಬಹುಮತ ಬಂದಾಗ ಸಿಎಂ ಬಗ್ಗೆ ಶಾಸಕರು ನಿರ್ಧರಿಸುತ್ತಾರೆ. ಡಬಲ್​ ಇಂಜಿನ್​ ಸರ್ಕಾರ

ರಾಜ್ಯದಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿ ಆಗಲಿ, ಆ ಸ್ಥಾನ ನನಗೆ ಬೇಡ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ Read More »

ಸಿಧು ಮೂಸೆವಾಲಾ ಹತ್ಯೆಗೆ ಬಳಸಲಾಗಿದ್ದ ಪಿಸ್ತೂಲ್‌ನ್ನೇ ಅತೀಕ್, ಅಶ್ರಫ್ ಹತ್ಯೆಗೆ ಬಳಸಲಾಗಿದೆ

ಲಖನೌ : ಮಾಫಿಯಾ ಡಾನ್ ಅತೀಕ್ ಅಹ್ಮದ್ ಹಾಗೂ ಆತನ ಸಹೋದರ ಅಶ್ರಫ್ ಅಹ್ಮದ್ ಹತ್ಯೆಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಹತ್ಯೆಗೆ ಬಳಸಲಾಗಿದ್ದ ಜಿಗಾನಾ ಮೇಡ್ ಪಿಸ್ತೂಲ್ ಅನ್ನೇ ಇಬ್ಬರೂ ಸಹೋದರ ಹತ್ಯೆಗೆ ಬಳಸಲಾಗಿದೆ. ಜಿಗಾನಾ ಮೇಡ್ ಪಿಸ್ತೂಲ್ ಅನ್ನು ಟರ್ಕಿಯಲ್ಲಿ ತಯಾರಿಸಲಾಗುತ್ತದೆ. ಗುಂಡಿನ ದಾಳಿ ನಡೆಸಿದ್ದ ಲವಲೇಶ್ ತಿವಾರಿ, ಸನ್ನಿ ಮತ್ತು ಅರುಣ್ ಮೌರ್ಯ ಎಂಬ ಮೂವರು ದಾಳಿಕೋರರನ್ನು ಬಂಧಿಸಿದ್ದು ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ

ಸಿಧು ಮೂಸೆವಾಲಾ ಹತ್ಯೆಗೆ ಬಳಸಲಾಗಿದ್ದ ಪಿಸ್ತೂಲ್‌ನ್ನೇ ಅತೀಕ್, ಅಶ್ರಫ್ ಹತ್ಯೆಗೆ ಬಳಸಲಾಗಿದೆ Read More »

error: Content is protected !!
Scroll to Top