ಬಂಟ್ವಾಳ : ಬುರ್ಖಾ ಧರಿಸಿಕೊಂಡು ಬಂದು ಜವುಳಿ ಅಂಗಡಿ ಮಾಲಕನ ಮೇಲೆ ಕತ್ತಿಯಿಂದ ಕಡಿದು ಹಲ್ಲೆ ಮಾಡಿದ ಪತ್ನಿ
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅಂಗಡಿಯಲ್ಲೇ ನಡೆದ ಘಟನೆ ಬಂಟ್ವಾಳ : ಜವುಳಿ ಅಂಗಡಿಗೆ ಮಾರುವೇಷದಲ್ಲಿ ಬಂದ ಪತ್ನಿ ಗಂಡನಿಗೆ ಕತ್ತಿಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬಿ.ಸಿ.ರೋಡಿನಲ್ಲಿ ಬುಧವಾರ ರಾತ್ರಿ ನಡೆದಿದೆ. ಜವುಳಿ ಅಂಗಡಿ ಮಾಲಕ ಕೃಷ್ಣ ಕುಮಾರ್ ಸೋಮಯಾಜಿ ಎಂಬವರಿಗೆ ಪತ್ನಿ ಜ್ಯೋತಿ ಸೋಮಯಾಜಿ ಎಂಬವರು ಕತ್ತಿಯಿಂದ ಕಡಿದು ಗಾಯಗೊಳಿಸಿದ್ದಾರೆ. ಬಿ.ಸಿ.ರೋಡಿನಲ್ಲಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಮೀಪ ಇರುವ ಸೋಮಯಾಜಿ ಟೆಕ್ಸ್ಟೈಲ್ಸ್ ಮಳಿಗೆಗೆ ನುಗ್ಗಿದ ಜ್ಯೋತಿ ಕ್ಯಾಶ್ ಕೌಂಟರ್ನಲ್ಲಿ ಕುಳಿತಿದ್ದ ಗಂಡನಿಗೆ ಪತ್ನಿ ಕತ್ತಿಯಿಂದ ಕಡಿದು […]










