ಸುದ್ದಿ

ಕೆಂಪುಕೋಟೆ ಕಾರು ಬಾಂಬ್‌ ಸ್ಫೋಟ ಪ್ರಕರಣ : ಇನ್ನೋರ್ವ ಆರೋಪಿ ಸೆರೆ

ಟೆರರ್‌ ಡಾಕ್ಟರ್‌ ಉಮರ್‌ ಉನ್‌ ನಬಿಗೆ ಆಶ್ರಯ ನೀಡಿದ್ದ ಆರೋಪಿ ನವದೆಹಲಿ: ದೆಹಲಿ ಕೆಂಪುಕೋಟೆ ಬಳಿ ಕಾರು ಬಾಂಬ್‌ ಸ್ಫೋಟ ಸಂಭವಿಸುವುದಕ್ಕೆ ಮುನ್ನ ಟೆರರ್‌ ಡಾಕ್ಟರ್‌ ಉಮರ್‌ ಉನ್‌ ನಬಿಗೆ ಆಶ್ರಯ ನೀಡಿದ್ದ ಆರೋಪದ ಮೇಲೆ ಫರಿದಾಬಾದ್‌ ನಿವಾಸಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ. ಬಂಧಿತ ಸೋಯಾಬ್‌ ಈ ಪ್ರಕರಣದ 7ನೇ ಆರೋಪಿ ಎಂದು ಎನ್‌ಐಎ ತಿಳಿಸಿದೆ. ಕೆಂಪುಕೋಟೆ ಸಮೀಪ ಕಾರು ಸ್ಫೋಟ ಸಂಭವಿಸುವುದಕ್ಕೆ ಮುನ್ನ ಸೋಯಾಬ್‌ ಉಗ್ರ ಉಮರ್‌ಗೆ ಆಶ್ರಯ ನೀಡಿರುವುದು ತನಿಖೆ ವೇಳೆ ಬಹಿರಂಗವಾಗಿದೆ. […]

ಕೆಂಪುಕೋಟೆ ಕಾರು ಬಾಂಬ್‌ ಸ್ಫೋಟ ಪ್ರಕರಣ : ಇನ್ನೋರ್ವ ಆರೋಪಿ ಸೆರೆ Read More »

ಸಂವಿಧಾನ ಬಲವಾದ ಪ್ರಜಾಪ್ರಭುತ್ವದ ಅಡಿಪಾಯ : ಮೋದಿ

ಸಂವಿಧಾನ ದಿನಾಚರಣೆ ಸಂದರ್ಭದಲ್ಲಿ ದೇಶದ ಜನರಿಗೆ ಪತ್ರದ ಮೂಲಕ ಕರ್ತವ್ಯದ ಕರೆ ನವದೆಹಲಿ: ಭಾರತ ಇಂದು ಸಂವಿಧಾನ ದಿನವನ್ನು ಆಚರಿಸುತ್ತಿದೆ. ಈ ವಿಶೇಷ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಪತ್ರ ಬರೆದು, ಸಂವಿಧಾನ ಬಲವಾದ ಪ್ರಜಾಪ್ರಭುತ್ವದ ಅಡಿಪಾಯವಾಗಿರುವುದರಿಂದ ನಾಗರಿಕರು ತಮ್ಮ ಸಾಂವಿಧಾನಿಕ ಕರ್ತವ್ಯಗಳನ್ನು ಪೂರೈಸಬೇಕೆಂದು ಕರೆಕೊಟ್ಟಿದ್ದಾರೆ. ಈ ಪತ್ರದಲ್ಲಿ ಪ್ರಧಾನಿ ಮೋದಿ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸುವ ಜವಾಬ್ದಾರಿಯನ್ನು ಹೇಳಿದ್ದಾರೆ. 18 ವರ್ಷ ತುಂಬಿದ ಮತ್ತು ಮೊದಲ ಬಾರಿಗೆ ಮತದಾರರಾಗುವ ಯುವಕರನ್ನು

ಸಂವಿಧಾನ ಬಲವಾದ ಪ್ರಜಾಪ್ರಭುತ್ವದ ಅಡಿಪಾಯ : ಮೋದಿ Read More »

ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಶಾಂತಿಮೊಗರು ಕುದ್ಮಾರಿನಲ್ಲಿ ವೈಭವದ ಷಷ್ಠಿ ಮಹೋತ್ಸವ

ಕಡಬ: ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಯವರ ಮಾರ್ಗದರ್ಶನದಲ್ಲಿ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಶಾಂತಿಮೊಗರು ಕುದ್ಮಾರಿನಲ್ಲಿ ಇಂದು ವೈಭವದ ಷಷ್ಠಿ ಮಹೋತ್ಸವ ನಡೆಯಲಿದೆ. ಆ ಪ್ರಯುಕ್ತ ಬೆಳಗ್ಗೆ ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ, ದೇವರಿಗೆ ಕಲಶ ಪೂಜೆ, ಕಲಶಾಭಿಷೇಕ, ಮಹಾ ಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಮಹಾ ಪೂಜೆ, ದೇವರ ಬಲಿ, ಶ್ರೀ ಭೂತ ಬಲಿ ಮಹೋತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ವೈದಿಕ ಮಂತ್ರಾಕ್ಷತೆ ಕಾರ್ಯಕ್ರಮ ನಡೆಯಲಿದೆ. ಶ್ರೀ ಕ್ಷೇತ್ರದಲ್ಲಿ ಷಷ್ಠಿ

ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಶಾಂತಿಮೊಗರು ಕುದ್ಮಾರಿನಲ್ಲಿ ವೈಭವದ ಷಷ್ಠಿ ಮಹೋತ್ಸವ Read More »

ಖ್ಯಾತ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ ನಿಧನ

ಉಡುಪಿ: ಚೆಲುವೆ ಚಿತ್ರಾವತಿ, ರತಿ ರೇಖಾ, ಶೂದ್ರ ತಪಸ್ವಿನಿಯಂಥ ಸೂಪರ್‌ ಹಿಟ್‌ ಯಕ್ಷಗಾನ ಪ್ರಸಂಗಗಳನ್ನು ರಚಿಸಿದ್ದ ಪ್ರಸಂಗಕರ್ತ, ನಿವೃತ್ತ ಶಿಕ್ಷಕ ಕಂದಾವರ ರಘುರಾಮ ಶೆಟ್ಟಿಯವರು ಬುಧವಾರ ಬೆಳಗ್ಗೆ (ನ.26) ನಿಧನರಾಗಿದ್ದಾರೆ. ಅವರಿಗೆ 89 ವರ್ಷ ಪ್ರಾಯವಾಗಿತ್ತು. ಕಂದಾವರ ರಘುರಾಮ ಶೆಟ್ಟಿಯವರು ತಾಳಮದ್ದಳೆ ಅರ್ಥಧಾರಿ, ಹವ್ಯಾಸಿ ವೇಷಧಾರಿಯಾಗಿ ಮತ್ತು ನಾಟಕ ಕಲಾವಿದರಾಗಿಯೂ ಪ್ರಸಿದ್ಧರಾಗಿದ್ದರು. ಕುಂದಾಪುರ ತಾಲೂಕಿನ ಬಳ್ಕೂರು ಗ್ರಾಮದ ಕಂದಾವರ ಅವರ ಹುಟ್ಟೂರು. ಶಿಕ್ಷಕರಾಗಿ, ಸಹಶಿಕ್ಷಕರಾಗಿ, ಮುಖ್ಯೋಪಾಧ್ಯಾಯರಾಗಿ ಸುಮಾರು 35 ವರ್ಷಗಳ ಅಧ್ಯಾಪನ ವೃತ್ತಿ ಮಾಡಿ ನಿವೃತ್ತರಾಗಿದ್ದರು. ಮಾದರಿ

ಖ್ಯಾತ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ ನಿಧನ Read More »

ರಾತ್ರಿ ಬೆಳಗಾಗುವುದರೊಳಗೆ ಕಾಳಿ ದೇವಿಗೆ ಮಾತೆ ಮೇರಿಯ ಅಲಂಕಾರ

ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಅರ್ಚಕನ ಬಂಧನ ಮುಂಬೈ : ಮುಂಬೈಯ ಚೆಂಬೂರಿನಲ್ಲಿರುವ ಸಣ್ಣ ದೇವಸ್ಥಾನವೊಂದರಲ್ಲಿ ಕಾಳಿದೇವಿಯ ಪ್ರತಿಮೆಯನ್ನು ಮಾತೆ ಮೇರಿಯಂತೆ ಅಲಂಕರಿಸಿ ಭಕ್ತರ ಭಾವನೆಗೆ ಧಕ್ಕೆಯುಂಟುಮಾಡಿದ ಘಟನೆ ಬೆಳಕಿಗೆ ಬಂದಿದ್ದು, ಪೊಲೀಸರು ಈ ದೇವಸ್ಥಾನದ ಅರ್ಚಕನನ್ನು ಬಂದಿಸಿದ್ದಾರೆ. ಚೆಂಬೂರಿನ ಅನಿಕ್‌ ಎಂಬಲ್ಲಿರುವ ಸ್ಮಶಾನದೊಳಗಿರುವ ಕಾಳಿಕಾ ಮಾತೆಯ ಗುಡಿಯ ವಿಗ್ರಹವನ್ನು ರಾತ್ರೋರಾತ್ರಿ ಕ್ರೈಸ್ತರ ಮಾತೆಮೇರಿಯಂತೆ ಅಲಂಕರಿಸಲಾಗಿತ್ತು. ವಿಗ್ರಹಕ್ಕೆ ಹೊಂಬಣ್ಣದ ಸೀರೆ ಉಡಿಸಿ, ಶಿರದ ಬಳಿ ಶಿಲುಬೆ ಇರಿಸಿ ತೋಳಿನಲ್ಲಿ ಚಿಕ್ಕ ಮಗುವೊಂದನ್ನು ಇರಿಸಲಾಗಿತ್ತು. ಇಷ್ಟು ಮಾತ್ರವಲ್ಲದೆ

ರಾತ್ರಿ ಬೆಳಗಾಗುವುದರೊಳಗೆ ಕಾಳಿ ದೇವಿಗೆ ಮಾತೆ ಮೇರಿಯ ಅಲಂಕಾರ Read More »

ಯುವಕನ ಮೇಲೆ ಚೂರಿಯಿಂದ ದಾಳಿ : ಎಲ್ಲ 4 ಆರೋಪಿಗಳ ಬಂಧನ

ಎಡಪದವು ಬಳಿ ಹಲ್ಲೆ ನಡೆಸಿ ಪಲಾಯನ ಮಾಡಿದ್ದ ದುಷ್ಕರ್ಮಿಗಳು ಮಂಗಳೂರು: ಬಜಪೆ ಸಮೀಪ ಎಡಪದವು ಎಂಬಲ್ಲಿ ಅಖಿಲೇಶ್ ಎಂಬವರ‌ ಮೇಲೆ ಚೂರಿ ಇರಿದ ಪ್ರಕರಣ ಸಂಬಂಧ ಪೊಲೀಸರು ಎಲ್ಲ ನಾಲ್ಕು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳೂರು ಬಂದರು ನಿವಾಸಿ ಸಿನಾನ್, ವೇಣೂರು ನಿವಾಸಿ ಇರ್ಷಾದ್, ವಾಮಂಜೂರು ನಿವಾಸಿ ಸುಹೈಲ್ ಅಕ್ರಮ್ ಮತ್ತು‌ ವಾಮಂಜೂರು ಪಿಲಿಕುಳ ನಿವಾಸಿ ನಿಸಾನ್ ಬಂಧಿತರು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ. ಬಂಧಿತರ ಪೈಕಿ ಮಂಗಳೂರು ಬಂದರು ನಿವಾಸಿ ಸಿನಾನ್‌ನನ್ನು ಸಾರ್ವಜನಿಕರು

ಯುವಕನ ಮೇಲೆ ಚೂರಿಯಿಂದ ದಾಳಿ : ಎಲ್ಲ 4 ಆರೋಪಿಗಳ ಬಂಧನ Read More »

ಉಡುಪಿ: ಪ್ರಧಾನಿ ಮೋದಿ ಸ್ವಾಗತಕ್ಕೆ ಭರದ ಸಿದ್ಧತೆ; ಬಿಗಿ ಭದ್ರತೆ ಏರ್ಪಾಡು

ಬನ್ನಂಜೆಯಿಂದ ಕಲ್ಸಂಕದವರೆಗೆ ರೋಡ್‌ ಶೋ ನಡೆಸಲು ವ್ಯವಸ್ಥೆ ಉಡುಪಿ: ಶುಕ್ರವಾರ ಉಡುಪಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರ ರೋಡ್‌ ಶೋದಲ್ಲಿ ಭಾಗವಹಿಸಲಿದ್ದಾರೆ. ಶುಕ್ರವಾರ ಪೂರ್ವಾಹ್ನ 11.40ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಉಡುಪಿ ಬನ್ನಂಜೆಯ ಡಾ.ವಿ.ಎಸ್. ಆಚಾರ್ಯ ಬಸ್ ನಿಲ್ದಾಣದ ಬಳಿ ಶ್ರೀ ನಾರಾಯಣ ಗುರು ಸರ್ಕಲ್‌ನಿಂದ ಪ್ರಾರಂಭಗೊಂಡು ಸಿಟಿ ಬಸ್ ನಿಲ್ದಾಣ ಮಾರ್ಗವಾಗಿ ಕಲ್ಸಂಕ ಜಂಕ್ಷನ್‌ವರೆಗೆ ಸಾಗಲಿದೆ. ಕಲ್ಸಂಕ ರಸ್ತೆಯಿಂದ ನೇರವಾಗಿ ಪಾರ್ಕಿಂಗ್ ಏರಿಯಾ-ರಥಬೀದಿ ಮೂಲಕ ಮಧ್ಯಾಹ್ನ 12ಕ್ಕೆ ಶ್ರೀ ಕೃಷ್ಣ ಮಠವನ್ನು

ಉಡುಪಿ: ಪ್ರಧಾನಿ ಮೋದಿ ಸ್ವಾಗತಕ್ಕೆ ಭರದ ಸಿದ್ಧತೆ; ಬಿಗಿ ಭದ್ರತೆ ಏರ್ಪಾಡು Read More »

ದಕ್ಷ ಐಎಎಸ್‌ ಅಧಿಕಾರಿಯ ಪ್ರಾಣಕ್ಕೆ ಎರವಾದ ಶ್ವಾನ

ಭೀಕರ ಅಪಘಾತದಲ್ಲಿ ಮೂವರು ಸಾವು ಬೆಂಗಳೂರು: ಕಲಬುರಗಿಯ ಜೇವರ್ಗಿ ಸಮೀಪ ನಿನ್ನೆ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಸಹಿತ ಮೂವರು ಸಾವನ್ನಪ್ಪಿದ್ದಾರೆ. ಮಾರ್ಗ ಮಧ್ಯೆ ಶ್ವಾನ ಅಡ್ಡಬಂದ ಹಿನ್ನೆಲೆ ಅದನ್ನು ತಪ್ಪಿಸಲು ಹೋಗಿ ಜೇವರ್ಗಿ ಬೈಪಾಸ್‌ನಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಹಾಂತೇಶ್ ಬೀಳಗಿ ಅವರ ಸೋದರರಾದ ಶಂಕರ ಬೀಳಗಿ

ದಕ್ಷ ಐಎಎಸ್‌ ಅಧಿಕಾರಿಯ ಪ್ರಾಣಕ್ಕೆ ಎರವಾದ ಶ್ವಾನ Read More »

ಅಯೋಧ್ಯೆಯ ಶ್ರೀ ರಾಮ ಮತ್ತು ಪರಿವಾರಕ್ಕೆ ಉಡುಪಿಯ ‘ಸ್ವರ್ಣಾ’ಭರಣ

ಉಡುಪಿ: ಶ್ರೀ ರಾಮ ಜನ್ಮಭೂಮಿ ಅಯೋಧ್ಯೆಯ ಭವ್ಯ ಶ್ರೀ ರಾಮ ಮಂದಿರದ ಮೊದಲ ಮಹಡಿಯಲ್ಲಿನ ಶ್ರೀ ರಾಮ ದರ್ಬಾರ್‌ನಲ್ಲಿರುವ ರಾಮ ಪಟ್ಟಾಭಿಷೇಕದ ಶ್ರೀ ರಾಮ, ಲಕ್ಷ್ಮಣ, ಸೀತೆ, ಭರತ, ಶತ್ರುಘ್ನ ಮತ್ತು ಆಂಜನೇಯ ವಿಗ್ರಹಗಳಿಗೆ ಸ್ವರ್ಣಾಭರಣಗಳನ್ನು ಉಡುಪಿಯಿಂದ ಸಿದ್ಧಪಡಿಸಿ ಅರ್ಪಣೆ ಮಾಡಲಾಗಿದೆ. ಟ್ರಸ್ಟ್‌ನ ‌ಮನವಿಯಂತೆ ಉಡುಪಿಯ ಸ್ವರ್ಣ ಜ್ಯುವೆಲ್ಲರ್ಸ್‌ನವರು ಕೇವಲ ಹತ್ತು ದಿನಗಳಲ್ಲಿ ಈ ಆಭರಣಗಳನ್ನು ನಿರ್ಮಿಸಿ ಅರ್ಪಣೆ ಮಾಡಿದ್ದಾರೆ. ಗುಜ್ಜಾಡಿಯ ದೀಪಕ್ ಮತ್ತು ಇತರರು ಅಯೋಧ್ಯೆಗೆ ತೆರಳಿ ಈ ಆಭರಣಗಳನ್ನು ಪರಿವಾರ ಸಮೇತ ಶ್ರೀ ರಾಮನಿಗಾಗಿ

ಅಯೋಧ್ಯೆಯ ಶ್ರೀ ರಾಮ ಮತ್ತು ಪರಿವಾರಕ್ಕೆ ಉಡುಪಿಯ ‘ಸ್ವರ್ಣಾ’ಭರಣ Read More »

ಅನಾರೋಗ್ಯದಿಂದ ಬೇಸತ್ತು ಯುವತಿ ಆತ್ಮಹತ್ಯೆ

ಪುತ್ತೂರು: ಅನಾರೋಗ್ಯದ ಕಾರಣಕ್ಕೆ ಬೇಸತ್ತು ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೈಯ್ಯೂರಿನಲ್ಲಿ ನಡೆದಿದೆ. ನೀತಾ (22) ಎಂಬ ಯುವತಿಯೇ‌ ಮೃತ ದುರ್ದೈವಿ. ತಾಯಿ ಮತ್ತು ಅಕ್ಕನ ಜೊತೆ ವಾಸಿಸುತ್ತಿದ್ದ ನೀತಾ‌ರಿಗೆ ಕೆಲ‌ಸಮಯದಿಂದ ಆರೋಗ್ಯ ಸಮಸ್ಯೆ ಕಾಡುತ್ತಿತ್ತು. ಇದಕ್ಕೆ ಚಿಕಿತ್ಸೆ ಸಹ ಪಡೆಯುತ್ತಿದ್ದರು. ನೀತಾ ಅವರ ಅಕ್ಕ ಕೆಲಸದ ನಿಮಿತ್ತ ಮತ್ತು ನೀ ತಾ ಅವರಿಗೆ ಔಷಧಿ ತರಲೆಂದು ಹೊರಹೋಗಿದ್ದ ಸಮಯದಲ್ಲಿ ಶಾಲನ್ನು ಕಿಟಕಿಯ ಸರಳಿಗೆ ಕಟ್ಟಿ ನೀತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಜೆ ಗೀತಾ ಮನೆಗೆ

ಅನಾರೋಗ್ಯದಿಂದ ಬೇಸತ್ತು ಯುವತಿ ಆತ್ಮಹತ್ಯೆ Read More »

error: Content is protected !!
Scroll to Top