ಸುದ್ದಿ

ಈ ವಾರವೇ ಅಮೆರಿಕ – ಇರಾನ್‌ ಯುದ್ಧ ಶುರು?

ಇರಾನ್‌ ಸುತ್ತ ಭಾರಿ ಪ್ರಮಾಣದಲ್ಲಿ ಯುದ್ಧ ಸನ್ನದ್ಧತೆ ಮಾಡಿಕೊಂಡಿರುವ ಅಮೆರಿಕ ವಾಷಿಂಗ್ಟನ್ : ಈ ವಾರಾಂತ್ಯದಲ್ಲೇ ಅಮೆರಿಕ ಮತ್ತು ಇರಾನ್‌ ನಡುವೆ ಪೂರ್ಣ ಪ್ರಮಾಣದ ಯುದ್ಧ ಶುರುವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅಮೆರಿಕದ ಬೆದರಿಕೆಯನ್ನು ಲೆಕ್ಕಿಸದೆ ಇರಾನ್‌ ತನ್ನ ಅಣ್ವಸ್ತ್ರ ಕಾರ್ಯಕ್ರಮವನ್ನು ಮುಂದುವರಿಸಿರುವುದು ಯುದ್ಧಕ್ಕೆ ನೆಪವಾಗಬಹುದು ಎನ್ನಲಾಗಿದೆ. ಇರಾನ್ ಮೇಲಿನ ದಾಳಿಗೆ ಅಮೆರಿಕದ ಮಿಲಿಟರಿ ಸಿದ್ಧತೆಗಳು ಪೂರ್ಣಗೊಂಡಿವೆ. ಮಧ್ಯಪ್ರಾಚ್ಯದಲ್ಲಿ ಅಮೆರಿಕದ ಯುದ್ಧನೌಕೆಗಳು, ಯುದ್ಧ ವಿಮಾನಗಳು ಮತ್ತು ಇಂಧನ ತುಂಬುವ ವಿಮಾನಗಳು ಇರಾನ್ ವಿರುದ್ಧದ ಯುದ್ಧಕ್ಕೆ ಸಿದ್ಧವಾಗಿವೆ. ಈ […]

ಈ ವಾರವೇ ಅಮೆರಿಕ – ಇರಾನ್‌ ಯುದ್ಧ ಶುರು? Read More »

ಅಕ್ರಮ ಮರಳುಗಾರಿಕೆ : ಇಬ್ಬರ ಬಂಧನ

ಬೆಳ್ತಂಗಡಿ: ಕರಂಬಾರು ಗ್ರಾಮದ ಬೊಟ್ಟೆಲ್ ಮಾರಿನಲ್ಲಿ ಫಲ್ಗುಣಿ ನದಿಯಿಂದ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ವೇಳೆ ವೇಣೂರು ಪೊಲೀಸರು ದಾಳಿ ಮಾಡಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವೇಣೂರು ಪೊಲೀಸ್ ಸಿಬಂದಿ ಬೀರೇಶ್ ಅವರು ಗಸ್ತು ತಿರುಗುತ್ತಿದ್ದ ಸಂದರ್ಭ ಬಂದ ಖಚಿತ ಮಾಹಿತಿಯಂತೆ ಕರಂಬಾರಿನ ಬೊಟ್ಟೆಲ್ ಮಾರಿನ ನದಿ ಕಿನಾರೆಗೆ ತೆರಳಿದಾಗ ಆರೋಪಿಗಳಾದ ವಸಂತ ಹಾಗೂ ರಮೇಶ ಅಕ್ರಮವಾಗಿ ಮರಳುಗಾರಿಕೆ ನಡೆಸಿ ಪಿಕಪ್ ವಾಹನಕ್ಕೆ ತುಂಬಿಸುತ್ತಿದ್ದು, ಪೊಲೀಸರನ್ನು ಕಂಡು ಪರಾರಿಯಾಗಿದ್ದಾರೆ. ಪಿಕಪ್ ವಾಹನದಲ್ಲಿ ಸುಮಾರು 1 ಯುನಿಟ್‌ನಷ್ಟು ಮರಳು

ಅಕ್ರಮ ಮರಳುಗಾರಿಕೆ : ಇಬ್ಬರ ಬಂಧನ Read More »

ಪತ್ನಿಯನ್ನು ಕತ್ತು ಬಿಗಿದು ಕೊಂದ ಇಸ್ರೋ ನಿವೃತ್ತ ಉದ್ಯೋಗಿ

ತಾನು ಸತ್ತರೆ ಪತ್ನಿ ಅನಾಥಳಾಗುತ್ತಾಳೆ ಎಂದು ಕೃತ್ಯ ಬೆಂಗಳೂರು: ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ಪತ್ನಿಯನ್ನೇ ಕೊಲೆ ಮಾಡಿದ ಆಘಾತಕಾರಿ ಘಟನೆ ಬೆಂಗಳೂರು ಹೊರವಲಯದ ಅವಲಹಳ್ಳಿ ಬಳಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಟವಲ್‌ನಿಂದ ಕತ್ತು ಬಿಗಿದು ನಾಗೇಶ್ವರ್‌ ರಾವ್‌ ಎಂಬಾತ (75) ಪತ್ನಿ ಸಂಧ್ಯಾ (65) ಅವರನ್ನು ಕೊಲೆ ಮಾಡಿದ್ದಾನೆ. ಮೂರು ವರ್ಷಗಳಿಂದ ಅಪಾರ್ಟ್‌ಮೆಂಟ್‌ನಲ್ಲಿ ದಂಪತಿ ವಾಸವಿದ್ದರು. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಾಗೇಶ್ವರ್‌ ರಾವ್‌ ಆತ್ಮಹತ್ಯೆ ಮಾಡಿಕೊಳ್ಳಲು ತೀರ್ಮಾನ ಮಾಡಿದ್ದ. ತಾನು ಆತ್ಮಹತ್ಯೆ ಮಾಡಿದರೆ ಪತ್ನಿ ಒಂಟಿಯಾಗುತ್ತಾಳೆ. ಆಕೆಯನ್ನು

ಪತ್ನಿಯನ್ನು ಕತ್ತು ಬಿಗಿದು ಕೊಂದ ಇಸ್ರೋ ನಿವೃತ್ತ ಉದ್ಯೋಗಿ Read More »

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಪಾತಕಿ ಸೆರೆ

ಕೊಲೆ, ಗ್ಯಾಂಗ್‌ರೇಪ್‌, ದರೋಡೆ ಸೇರಿ 26 ಪ್ರಕರಣಗಳಲ್ಲಿ ಭಾಗಿ ಮಂಗಳೂರು : ನಗರ ಪೊಲೀಸ್ ಕಮಿಷನರೇಟ್ ಮತ್ತು ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ವಿವಿಧ 26 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮತ್ತು 9 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಹಳೆಯಂಗಡಿಯ ಕೊಪ್ಪಳ ಹೌಸ್‌ನ ಸಫ್ವಾನ್ ಹುಸೈನ್ (42) ಬಂಧಿತ ಆರೋಪಿ. ಆರೋಪಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಮತ್ತು ಉಡುಪಿ ಜಿಲ್ಲೆ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2 ಕೊಲೆ, 4 ಕೊಲೆಯತ್ನ, ಗ್ಯಾಂಗ್‌ರೇಪ್,

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಪಾತಕಿ ಸೆರೆ Read More »

ಇಂದು ಸಾರಿಗೆ ನೌಕರರ ಬೆಂಗಳೂರು ಚಲೋ ಪ್ರತಿಭಟನೆ

ಸರ್ಕಾರದ ಜೊತೆಗಿನ ಮಾತುಕತೆ ವಿಫಲ; ಮುಷ್ಕರ ಸಾಧ್ಯತೆ ಬೆಂಗಳೂರು: ವಿವಿಧ ಬೇಡಿಕೆಗೆ ಆಗ್ರಹಿಸಿ ಸಿಡಿದೆದ್ದಿರುವ ಸಾರಿಗೆ ನೌಕರರ ಮನವೊಲಿಸುವ ಪ್ರಯತ್ನ ವಿಫಲಗೊಂಡಿದೆ. ಸರ್ಕಾರ ಕೊಟ್ಟಿರುವ ಆಫರ್‌ಗೆ ಬಗ್ಗದ ನೌಕರರು ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ಸಂಪೂರ್ಣ ಬೇಡಿಕೆ ಈಡೇರಲೇಬೇಕು ಏಂಬ ಬೇಡಿಕೆಯೊಂದಿಗೆ ಇಂದು ಬೆಂಗಳೂರು ಚಲೋಗೆ ಮುಂದಾಗಿದ್ದಾರೆ. ಸಾರಿಗೆ ನೌಕರರು ಹೋರಾಟ ಜೋರಾಗುವ ಸಾಧ್ಯತೆ ಕಂಡುಕೊಂಡ ನಿನ್ನೆ ಸರ್ಕಾರ, ನೌಕರರನ್ನು ಸಮಾಧಾನ ಪಡಿಸುವ ಯತ್ನಕ್ಕೆ ಮುಂದಾದರೂ ಪ್ರಯೋಜನ ಆಗಿಲ್ಲ. ನೌಕರರ ಬೇಡಿಕೆ ಪ್ರಕಾರ ಸರ್ಕಾರ 38 ತಿಂಗಳ ಹಿಂಬಾಕಿ

ಇಂದು ಸಾರಿಗೆ ನೌಕರರ ಬೆಂಗಳೂರು ಚಲೋ ಪ್ರತಿಭಟನೆ Read More »

ಟಿ20 ವಿಶ್ವಕಪ್‌ : ಸಂಭ್ರಮಕ್ಕಿಂತ ಕಳವಳ ಹುಟ್ಟಿಸಿದ ನಾಲ್ಕನೇ ಗೆಲುವು

ದುರ್ಬಲ ನೆದರ್ಲ್ಯಾಂಡ್ಸ್ ವಿರುದ್ಧ ಬರೀ 17 ರನ್‌ಗಳಿಂದ ಗೆದ್ದ ಟೀಂ ಇಂಡಿಯಾ ಅಹಮದಾಬಾದ್‌: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಿನ್ನೆ ರಾತ್ರಿ ನಡೆದ ನೆದರ್ಲ್ಯಾಂಡ್ಸ್ ವಿರುದ್ಧದ ಟಿ20 ವಿಶ್ವಕಪ್​ನ ಕೊನೆಯ ಲೀಗ್ ಪಂದ್ಯದಲ್ಲಿ ಟೀಂ ಇಂಡಿಯಾ ಬರೀ 17 ರನ್​ಗಳಿಂದ ಗೆದ್ದಿರುವುದು ಕ್ರಿಕೆಟ್‌ ಪ್ರೇಮಿಗಳಲ್ಲಿ ಆತಂಕವುಂಟು ಮಾಡಿದೆ. ನೆದರ್ಲ್ಯಾಂಡ್ಸ್‌ನಂಥ ದುರ್ಬಲ ತಂಡದ ಎದುರು ಚಾಂಪಿಯನ್‌ ತಂಡವೊಂದು ಆಡುವ ಆಟ ಇದಾಗಿರಲಿಲ್ಲ. ಭಾರತ ಸತತ ಗೆಲುವು ದಾಖಲಿಸಿ ಟೂರ್ನಿಯಲ್ಲಿ ಅಜೇಯ ಓಟವನ್ನೇನೋ ಮುಂದವರೆಸಿದೆ. ಇನ್ನಿರುವುದು ಸೂಪರ್‌ 8ರ ಘಟ್ಟದ

ಟಿ20 ವಿಶ್ವಕಪ್‌ : ಸಂಭ್ರಮಕ್ಕಿಂತ ಕಳವಳ ಹುಟ್ಟಿಸಿದ ನಾಲ್ಕನೇ ಗೆಲುವು Read More »

ವಿಧಾನಸೌಧದಲ್ಲಿ ಮಾದ್ಯಮಗಳ ನಿರ್ಬಂಧ: ಬಿ.ವೈ. ವಿಜಯೇಂದ್ರ ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರದ ಮೇಲೆ ಕಿಡಿ ಕಾರಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ, ಇದೊಂದು ಅಯೋಗ್ಯ ಸರ್ಕಾರ ಎಂದು ಹೇಳಿದ್ದಾರೆ. ವಿಧಾನ ಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಹೇರಿರುವುದನ್ನು ಖಂಡಿಸಿದ ಅವರು ಇದೊಂದು ನಾಲಾಯಕ್ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ನದ್ದು ಪ್ರಜಾಪ್ರಭುತ್ವವನ್ನು ಅಣಕಿಸುವ ನಡೆ ಎಂದು ಟೀಕಿಸಿರುವ ಅವರು, ಮಾಧ್ಯಮ ನಿರ್ಬಂಧ ಒಂದು ಪ್ರಜಾಪ್ರಭುತ್ವದ ವಿರೋಧಿ ನಡೆ. ಅಧಿವೇಶನದಲ್ಲಿ ದ್ವೇಷ ಭಾಷಣ ವಿರೋಧಿ ಕಾಯ್ದೆ ಜಾರಿಗೆ ತಂದ ಕಾಂಗ್ರೆಸ್ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಾಕ್ ಪರ

ವಿಧಾನಸೌಧದಲ್ಲಿ ಮಾದ್ಯಮಗಳ ನಿರ್ಬಂಧ: ಬಿ.ವೈ. ವಿಜಯೇಂದ್ರ ಆಕ್ರೋಶ Read More »

ಸಿಗರೇಟ್ ಸೇವನೆ, ಅಸಭ್ಯ ವರ್ತನೆ: ಆರೋಪಿ ಮೊಸಾದ್ ಪೊಲೀಸ್ ಬಲೆಗೆ

ಪುತ್ತೂರು: ಸಾರ್ವಜನಿಕವಾಗಿ ಸಿಗರೇಟ್ ಸೇದುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬಜತ್ತೂರು ಗ್ರಾಮದ ಕಾಂಚನ ಮುಕ್ವೆ ಎಂಬಲ್ಲಿ ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ವಿಟ್ಲ ಪಡ್ನೂರಿನ ಮೊಹಮ್ಮದ್ ಮೊಸಾದ್ ಎಸ್ ಎಂದು ಗುರುತಿಸಲಾಗಿದ್ದು, ಆತ ಡ್ರಗ್ಸ್ ಸೇವನೆ ಮಾಡಿರುವ ಸಂಗತಿ ಸಹ ವೈದ್ಯಕೀಯ ಪರೀಕ್ಷೆಯಲ್ಲಿ ಬಯಲಾಗಿದೆ. ಸಾರ್ವಜನಿಕರಿಂದ ಬಂದ ಮಾಹಿತಿಯನ್ವಯ ರೌಂಡ್ಸ್ ವೇಳೆ ಆರೋಪಿಯನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ.

ಸಿಗರೇಟ್ ಸೇವನೆ, ಅಸಭ್ಯ ವರ್ತನೆ: ಆರೋಪಿ ಮೊಸಾದ್ ಪೊಲೀಸ್ ಬಲೆಗೆ Read More »

ನಂದಿನಿ ಉತ್ಪನ್ನಗಳು ಸುರಕ್ಷಿತವಾಗಿವೆ: KMF ಸ್ಪಷ್ಟನೆ

ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದ್ದು, ಅವುಗಳು ಸುರಕ್ಷಿತವಲ್ಲ ಎನ್ನುವ ತಪ್ಪು ಸಂದೇಶ ರವಾನೆ ಮಾಡಲಾಗುತ್ತಿದೆ. ಈ ಹಿನ್ನೆಲೆ ಸಂಸ್ಥೆಯು ತಮ್ಮ ಉತ್ಪನ್ನಗಳು ಸುರಕ್ಷಿತವಾಗಿವೆ ಎನ್ನುವುದಾಗಿ ಮಾಹಿತಿ ನೀಡಿದೆ. ಹಾಗೆಯೇ ಸುಳ್ಳು ಆರೋಪಗಳನ್ನು ಮಾಡಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಸಹ ಕರ್ನಾಟಕ ಹಾಲು ಒಕ್ಕೂಟ ನೀಡಿದೆ. ನಂದಿನಿ ಉತ್ಪನ್ನಗಳ ವಿಚಾರದಲ್ಲಿ ಸಂಸ್ಥೆಯು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಎಲ್ಲಾ ಸೂಚನೆಗಳನ್ನು, ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಿದೆ. ನಂದಿನಿ ಹಾಲು

ನಂದಿನಿ ಉತ್ಪನ್ನಗಳು ಸುರಕ್ಷಿತವಾಗಿವೆ: KMF ಸ್ಪಷ್ಟನೆ Read More »

ಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಗುರುವಾರ ಸಂಜೆ ತನಕ ಸರ್ಕಾರಕ್ಕೆ ಡೆಡ್‌ಲೈನ್‌

ಬೃಹತ್‌ ಮುಷ್ಕರಕ್ಕೆ ಸಜ್ಜಾಗುತ್ತಿರುವ ಕೆಎಸ್‌ಆರ್‌ಟಿಸಿ ನೌಕರರು; ಸಂಚಾರ ವ್ಯತ್ಯಯ ಸಾಧ್ಯತೆ ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಬೃಹತ್‌ ಮುಷ್ಕರಕ್ಕೆ ಮುಂದಾಗಿದ್ದು, ಗುರುವಾರ ಸಂಜೆ ಬಳಿಕ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಸಂಚಾರದಲ್ಲಿ ವ್ಯತ್ಯಯ ಆಗುವ ಸಾಧ್ಯತೆ ಇದೆ. ಸಾರಿಗೆ ನೌಕರರು ನಾಳೆ ‘ಬೆಂಗಳೂರು ಚಲೋ’ ಕೈಗೊಂಡು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿ 4 ನಿಗಮದ ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ನಾಳೆ ಸಂಜೆ 4 ಗಂಟೆವರೆಗೆ ಸರ್ಕಾರಕ್ಕೆ ಡೆಡ್‌ಲೈನ್ ನೀಡಲಾಗಿದೆ. ಬೇಡಿಕೆ

ಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಗುರುವಾರ ಸಂಜೆ ತನಕ ಸರ್ಕಾರಕ್ಕೆ ಡೆಡ್‌ಲೈನ್‌ Read More »

error: Content is protected !!
Scroll to Top