ಪುತ್ತೂರಿನೊಡೆಯನಿಗೆ ವೈಭವದ ಲಕ್ಷದೀಪೋತ್ಸವ
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರಿನ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ. 19 ರಂದು ವೈಭವದ ಲಕ್ಷ ದೀಪೋತ್ಸವ ಕಾರ್ಯಕ್ರಮ ನಡೆಯಿತು. ಸಾವಿರಾರು ಭಕ್ತರು ದೇವಾಲಯದ ರಥ ಬೀದಿಯ ಉದ್ದಕ್ಕೂ ಸಾಲು ಸಾಲು ಹಣತೆಗಳನ್ನು ಹಚ್ಚಿ ಶ್ರೀ ಮಹಾಲಿಂಗೇಶ್ವರ ದೇವರ ಲಕ್ಷದೀಪ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದುಕೊಟ್ಟರು. ದೇವಸ್ಥಾನದ ತಂತ್ರಿಗಳಾದ ಕುಂಟಾರು ರವೀಶ ತಂತ್ರಿಗಳ ಮಾರ್ಗದರ್ಶನದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆದವು. ಬ್ರ. ವೇ. ಮೂ. ಗುರು ತಂತ್ರಿ ಅವರು ಲಕ್ಷ ದೀಪೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಿದರು. […]
ಪುತ್ತೂರಿನೊಡೆಯನಿಗೆ ವೈಭವದ ಲಕ್ಷದೀಪೋತ್ಸವ Read More »










