ಸುದ್ದಿ

ಲೆಬನಾನ್‌ ಮೇಲೆ ಇಸ್ರೇಲ್‌ ಭೀಕರ ದಾಳಿ : 250ಕ್ಕೂ ಹೆಚ್ಚು ಮಂದಿ ಸಾವು

10 ನಿಮಿಷದಲ್ಲಿ 100ಕ್ಕೂ ಹೆಚ್ಚು ಕ್ಷಿಪಣಿ ಅಟ್ಯಾಕ್‌ ಹೊರ್ಮುಜ್‌ ಜಲಸಂಧಿಯನ್ನು ಮತ್ತೆ ಮುಚ್ಚಿದ ಇರಾನ್‌ ಟೆಲ್‌ ಅವಿವ್‌: ಕದನ ವಿರಾಮ ಘೋಷಣೆಯಾಗಿದ್ದರೂ ಇದನ್ನು ಕ್ಯಾರೇ ಮಾಡದ ಇಸ್ರೇಲ್‌ ವಾಯುಪಡೆ ಲೆಬನಾನ್‌ ಮೇಲೆ ಕೇವಲ 10 ನಿಮಿಷಗಳಲ್ಲಿ 100 ಕ್ಷಿಪಣಿ ದಾಳಿ ನಡೆಸಿದೆ. ಇದನ್ನು ಈ ಯುದ್ಧದ ಅತ್ಯಂತ ದೊಡ್ಡ ಸಂಘಟಿತ ದಾಳಿ ಎಂದು ಇಸ್ರೇಲ್ ಬಣ್ಣಿಸಿದೆ. ಈ ಬೆಳವಣಿಗೆ ಬೆನ್ನಲ್ಲೇ ಇರಾನ್‌ ಹೊರ್ಮುಜ್‌ ಜಲಸಂಧಿಯನ್ನು ಮತ್ತೆ ಮುಚ್ಚಿದೆ. ರಾಜಧಾನಿ ಬೈರೂತ್ ಮಧ್ಯಭಾಗ, ಬೆಕಾ ವ್ಯಾಲಿ ಮತ್ತು ದಕ್ಷಿಣ […]

ಲೆಬನಾನ್‌ ಮೇಲೆ ಇಸ್ರೇಲ್‌ ಭೀಕರ ದಾಳಿ : 250ಕ್ಕೂ ಹೆಚ್ಚು ಮಂದಿ ಸಾವು Read More »

ವಿದ್ಯಾರ್ಥಿಗಳ ಡ್ರಗ್ಸ್‌ ಜಾಲ ಭೇದಿಸಿದ ಪೊಲೀಸರು : ಐವರು ಸೆರೆ

ಬಾಡಿಗೆ ರೂಮ್‌ನಲ್ಲಿದ್ದುಕೊಂಡು ಡ್ರಗ್ಸ್‌ ದಂಧೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಮಂಗಳೂರು: ಶೈಕ್ಷಣಿಕ ನಗರಿ ಮಂಗಳೂರಿನಲ್ಲಿ ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ನಡೆಯುತ್ತಿದ್ದ ಮಾದಕ ವಸ್ತು ಜಾಲದ ವಿರುದ್ಧ ಪೊಲೀಸರು ಭಾರಿ ಕಾರ್ಯಾಚರಣೆ ನಡೆಸಿದ್ದಾರೆ. ಮಾದಕ ವಸ್ತು ಮಾರಾಟ ಜಾಲದಲ್ಲಿ ತೊಡಗಿದ್ದ ಐವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದ್ದು, ಇವರಿಂದ ಹಲವು ಮಾಹಿತಿಗಳು ಲಭ್ಯವಾಗಿವೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ವಿದ್ಯಾರ್ಥಿಯ ಪೋಷಕರೊಬ್ಬರು ತನ್ನ ಮಗನ ಬಳಿ ಸಣ್ಣ ಪ್ಯಾಕೆಟ್ ಗಾಂಜಾ ಸಿಕ್ಕಿದೆ ಎಂದು ಮಾಹಿತಿ ಪೊಲೀಸರಿಗೆ ಕೊಟ್ಟಿದ್ದರು. ಇವರಿಗೆ

ವಿದ್ಯಾರ್ಥಿಗಳ ಡ್ರಗ್ಸ್‌ ಜಾಲ ಭೇದಿಸಿದ ಪೊಲೀಸರು : ಐವರು ಸೆರೆ Read More »

ರೌಡಿಶೀಟರ್‌ ಆರಿಫ್‌ ಕೊಲೆ ಪ್ರಕರಣ : 7 ಆರೋಪಿಗಳ ಬಂಧನ

ಮಾ.27ರಂದು ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ಕೊಲೆಯಾಗಿದ್ದ ಆರಿಫ್‌ ಮಂಗಳೂರು: ಕಿನ್ಯ ಅಜ್ಜಿನಡ್ಕ ನಿವಾಸಿ ರೌಡಿಶೀಟರ್ ಆರಿಫ್ ಕೊಲೆ ಪ್ರಕರಣದ ಏಳು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಹಲ್ಲೆಯಲ್ಲಿ ನೇರವಾಗಿ ಭಾಗಿಯಾಗಿದ್ದ ರಿಫಾತ್, ಜುಟ್ಟು ಅಶ್ಫಾಕ್, ಖಲೀಲ್, ಶಾಕಿರ್, ಇರ್ಫಾನ್ ಮತ್ತು ರಿಜ್ವಾನ್ ಕೊಲೆಕೃತ್ಯಕ್ಕೆ ಸಹಕರಿಸಿದ ಇರ್ಷಾದ್ ಎಂದು ಗುರುತಿಸಲಾಗಿದೆ. ಮಾರ್ಚ್ 27ರ ನಸುಕಿನ ಹೊತ್ತು ಆರಿಫ್ ತನ್ನ ಬೈಕ್‌ನಲ್ಲಿ ಬಂದರ್ ಮೀನು ಮಾರುಕಟ್ಟೆಯ ಕಡೆಗೆ ಪ್ರಯಾಣಿಸುತ್ತಿದ್ದಾಗ ತೊಕ್ಕೊಟ್ಟು ಫ್ಲೈಓವರ್ ತಲುಪುತ್ತಿದ್ದಂತೆ ಹಿಂಬಾಲಿಸಿಕೊಂಡು ಬಂದ ಇನ್ನೊವಾ

ರೌಡಿಶೀಟರ್‌ ಆರಿಫ್‌ ಕೊಲೆ ಪ್ರಕರಣ : 7 ಆರೋಪಿಗಳ ಬಂಧನ Read More »

ಜಿಯೋ ಮಾರ್ಟ್‌ ಗೋಡೌನ್‌ ಬೆಂಕಿಗಾಹುತಿ : ಕೋಟಿಗಟ್ಟಲೆ ರೂಪಾಯಿ ಸರಕು ಭಸ್ಮ

ಬೆಂಗಳೂರು: ನೆಲಮಂಗಲದಲ್ಲಿರುವ ಜಿಯೋ ಮಾರ್ಟ್‌ ಗೋಡೌನ್‌ಗೆ ಬೆಂಕಿ ಬಿದ್ದು ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಬೆಂಕಿಯ ತೀವ್ರತೆಗೆ ಸಂಪೂರ್ಣ ಒಂದೂವರೆ ಎಕರೆಯಲ್ಲಿದ್ದ ಕಟ್ಟಡ ಹಾಗೂ ವಸ್ತುಗಳು ಸುಟ್ಟು ಭಸ್ಮವಾಗಿವೆ. ಅಗ್ನಿ ಅವಘಡದಿಂದ ನೆಲಮಂಗಲ ಹೆದ್ದಾರಿಯಲ್ಲಿ ಭಾರಿ ಹೊಗೆ ಆವರಿಸಿಕೊಂಡಿತ್ತು. ಇದರಿಂದ ಗೋಡೌನ್‌ ಒಳಗೆ ತೆರಳಲು ಅಗ್ನಿಶಾಮಕ ಸಿಬ್ಬಂದಿ ಪರದಾಡಿದರು. ಬಳಿಕ ಜೆಸಿಬಿ ಮೂಲಕ ಗೋಡೆ ಒಡೆದು ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಸುಮಾರು 10 ಅಗ್ನಿಶಾಮಕ ವಾಹನ ಬಳಸಿ ರಾತ್ರಿ ಪೂರ್ತಿ

ಜಿಯೋ ಮಾರ್ಟ್‌ ಗೋಡೌನ್‌ ಬೆಂಕಿಗಾಹುತಿ : ಕೋಟಿಗಟ್ಟಲೆ ರೂಪಾಯಿ ಸರಕು ಭಸ್ಮ Read More »

ಮೀನುಗಾರಿಕಾ ದಕ್ಕೆ ಬಳಿ ವ್ಯಕ್ತಿಯ ಮೃತದೇಹ ಪತ್ತೆ: ಕೊಲೆ ಮಾಡಿ ಎಸೆದಿರುವ ಶಂಕೆ

ಮಂಗಳೂರು: ನಗರದ ಮೀನುಗಾರಿಕಾ ದಕ್ಕೆಯ ಬಳಿಯ ನದಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ನಾಸಿರ್ ಯಾನೆ ದಕ್ಕೆ ನಾಸಿರ್ ಕೊಲೆಯಾದ ವ್ಯಕ್ತಿ. ಈತ ಹಲವಾರು ಕಳ್ಳತನ, ದರೋಡೆ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿಯಾಗಿದ್ದಾನೆ. ಈತನನ್ನು ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ನದಿಗೆ ಹಾಕಿರುವ ಶಂಕೆ ವ್ಯಕ್ತವಾಗಿದೆ. ಆತನ ಹಣೆ ಮತ್ತು ದೇಹದಲ್ಲಿ ಗಾಯದ ಗುರುತಿದೆ. ದಕ್ಕೆಯ ಸಮೀಪ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಸಮೀಪದ ನದಿಯ ಪಕ್ಕ ಶವ ಪತ್ತೆಯಾಗಿರುವುದಾಗಿದೆ. ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ

ಮೀನುಗಾರಿಕಾ ದಕ್ಕೆ ಬಳಿ ವ್ಯಕ್ತಿಯ ಮೃತದೇಹ ಪತ್ತೆ: ಕೊಲೆ ಮಾಡಿ ಎಸೆದಿರುವ ಶಂಕೆ Read More »

ಚುನಾವಣಾ ಭಾಷಣದಲ್ಲಿ RSS ವಿರುದ್ಧ ನಾಲಿಗೆ ಹರಿಯಬಿಟ್ಟ ಮಲ್ಲಿಕಾರ್ಜುನ ಖರ್ಗೆ: ದೂರು ದಾಖಲು

ಗುವಾಹಟಿ: ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಆರ್‌ಎಸ್‌ಎಸ್ ಮತ್ತು ಬಿಜೆಪಿಯನ್ನು ವಿಷಕಾರಿ ಹಾವುಗಳಿಗೆ ಹೋಲಿಕೆ ಮಾಡಿದ್ದು, ಅವರ ವಿರುದ್ಧ ಅಸ್ಸಾಂ‌ನ ಎರಡು ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದೆ. ದಕ್ಷಿಣ ಅಸ್ಸಾಂನ ಶ್ರೀಭೂಮಿ ಜಿಲ್ಲೆಯ ಕರೀಂಗಂಜ್ ದಕ್ಷಿಣ ವಿಧಾನಸಭಾ ಕ್ಷೇತ್ರದ ನೀಲಂಬಜಾರ್‌ನಲ್ಲಿ ನಡೆದ ಚುನಾವಣಾ ಸಭೆಯಲ್ಲಿ ಖರ್ಗೆ ಈ ರೀತಿ ವಿವಾದಾತ್ಮಕ ಹೇಳಿಕೆ ನೀಡಿರುವುದಾಗಿ ಆರ್‌ಎಸ್‌ಎಸ್ ಆರೋಪಿಸಿದೆ. ‘ನಮಾಜ್ ಮಾಡುವಾಗ ನಿಮ್ಮ ಮುಂದೆ ವಿಷಕಾರಿ ಹಾವು ಬಂದರೆ, ನೀವು ಪ್ರಾರ್ಥನೆಯನ್ನು ನಿಲ್ಲಿಸಿ ಮೊದಲು

ಚುನಾವಣಾ ಭಾಷಣದಲ್ಲಿ RSS ವಿರುದ್ಧ ನಾಲಿಗೆ ಹರಿಯಬಿಟ್ಟ ಮಲ್ಲಿಕಾರ್ಜುನ ಖರ್ಗೆ: ದೂರು ದಾಖಲು Read More »

ದಿವಾಕರ ಆಚಾರ್ಯ ಗೇರುಕಟ್ಟೆ ಅವರಿಗೆ ಯಕ್ಷಗಾನದಲ್ಲಿ ಡಿಪ್ಲೊಮಾ ಪದವಿ ಪ್ರದಾನ

ಬೆಂಗಳೂರು: ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಸಂಯೋಜಿತವಾಗಿ ಬೆಂಗಳೂರಿನ ಕಲಾ ಕದಂಬ ಆರ್ಟ್ ಸೆಂಟರ್ ಮೂಲಕ 2024-25 ನೇ ಸಾಲಿನ ಯಕ್ಷಗಾನ ಸರ್ಟಿಫಿಕೇಟ್ ಮತ್ತು ಡಿಪ್ಲೊಮಾ ಪದವಿಯ ಎರಡು ಸೆಮಿಸಸ್ಟರ್‌ಗಳ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಪದವಿ ಪ್ರದಾನ ಸಮಾರಂಭವು ವಿಶ್ವವಿದ್ಯಾಲಯದ ನಿಕಟಪೂರ್ವ ಕುಲಪತಿ ಪ್ರೊ. ನಾಗೇಶ ವಿ. ಬೆಟ್ಟಕೋಟೆ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಬಿ.ಎಂ.ಶ್ರೀ ಕಲಾಭವನದಲ್ಲಿ ಜರಗಿತು. ವಿ.ವಿ ಕುಲಪತಿ ಡಾ.ಕೆ.ರಾಮಕೃಷ್ಣಯ್ಯ ಅವರು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ದಿವಾಕರ ಆಚಾರ್ಯ ಗೇರುಕಟ್ಟೆ ಅವರಿಗೆ

ದಿವಾಕರ ಆಚಾರ್ಯ ಗೇರುಕಟ್ಟೆ ಅವರಿಗೆ ಯಕ್ಷಗಾನದಲ್ಲಿ ಡಿಪ್ಲೊಮಾ ಪದವಿ ಪ್ರದಾನ Read More »

ನಾಳೆ ಮೂರು ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣೆ

ಕರ್ನಾಟಕದ ಎರಡು ಕ್ಷೇತ್ರಗಳಲ್ಲಿ ಉಪಚುನಾವಣೆ ನವದೆಹಲಿ: ಅಸ್ಸಾಂ ಮತ್ತು ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯ ಕರ್ನಾಟಕದ ಎರಡುಕ್ಷೇತ್ರಗಳಿಗೆ ಏಪ್ರಿಲ್ 9ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಯ ಪ್ರಚಾರ ಮಂಗಳವಾರ ಸಂಜೆ ಕೊನೆಗೊಂಡಿದೆ. ಏಪ್ರಿಲ್ 9ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಅಸ್ಸಾಂನ 126 ಸ್ಥಾನಗಳು, ಕೇರಳದ 140 ಸ್ಥಾನಗಳು ಮತ್ತು ಪುದುಚೇರಿಯ 30 ಸ್ಥಾನಗಳಿಗೆ ಗುರುವಾರ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಅಸ್ಸಾಂನಲ್ಲಿ ಒಟ್ಟು 25 ಮಿಲಿಯನ್ ಮತದಾರರಿದ್ದಾರೆ, ಇದರಲ್ಲಿ

ನಾಳೆ ಮೂರು ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣೆ Read More »

ಜಾತ್ರಾ ಸಂದರ್ಭ ರಥದ ಚಕ್ರದಡಿ ‌ಸಿಲುಕಿ ವ್ಯಕ್ತಿ ಮೃತ್ಯು

ಕಲಬುರ್ಗಿ: ಹಾಗರಗುಂಡಗಿ ಗ್ರಾಮದ ಶ್ರೀ ಶರಣಬಸವೇಶ್ವರ ದೇವರ ಜಾತ್ರೆಯ ರಥೋತ್ಸವದ ವೇಳೆ ರಥದ ಚಕ್ರದಡಿಗೆ ಸಿಲುಕಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ. ಮೃತನನ್ನು ವಿನೋದ್ ರೆಡ್ಡಿ ಎಂದು ಗುರುತಿಸಲಾಗಿದೆ. ರಥದ ಹಗ್ಗವನ್ನು ಎಳೆಯುತ್ತಿದ್ದ ‌ವೇಳೆ ಅಯತಪ್ಪಿ ಬಿದ್ದು ಈ ದುರ್ಘಟನೆ ಸಂಭವಿಸಿದೆ. ರಥದ ಚಕ್ರ ವಿನೋದ್ ಅವರ ತೊಡೆಯ ಮೇಲೆ ಚಲಿಸಿದ್ದು, ಪರಿಣಾಮ ಅವರಿಗೆ ತೀವ್ರ ರಕ್ತಸ್ರಾವ ಉಂಟಾಗಿದೆ. ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆಗೆ ಸಂಬಂಧಿಸಿದ ಹಾಗೆ ಫರಹತ್ತಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾತ್ರಾ ಸಂದರ್ಭ ರಥದ ಚಕ್ರದಡಿ ‌ಸಿಲುಕಿ ವ್ಯಕ್ತಿ ಮೃತ್ಯು Read More »

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಉಪಚುನಾವಣೆ ಮತದಾನ ಮುಕ್ತಾಯಗೊಂಡ ಕೂಡಲೇ ಪಿಯು ರಿಸಲ್ಟ್‌ ಘೋಷಣೆ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್ 9) ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದ್ದು, ಈ ಕುರಿತು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧಿಕೃತ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ನಾಳೆ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡ ನಂತರ ಸಂಜೆ ವೇಳೆಗೆ ಸಚಿವರು ಫಲಿತಾಂಶ ಘೋಷಿಸಲಿದ್ದಾರೆ. ಈಗಾಗಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ Read More »

error: Content is protected !!
Scroll to Top