ಸುದ್ದಿ

ಜಗತ್ತಿಗೆ ಮತ್ತೆ ಕೋವಿಡ್‌ ಕಂಟಕ : ಏಷ್ಯಾದಲ್ಲಿ ಹರಡುತ್ತಿದೆ ಹೊಸ ರೂಪಾಂತರಿತ ವೈರಸ್‌

ಸಿಂಗಾಪುರ, ಹಾಂಕಾಂಗ್‌ನಲ್ಲಿ ಹೈಅಲರ್ಟ್‌ ಘೋಷಣೆ; ಭಾರತದಲ್ಲೂ ಕೆಲವು ಪ್ರಕರಣಗಳು ಪತ್ತೆ ನವದೆಹಲಿ: 2019ರಲ್ಲಿ ಜಗತ್ತಿಗೆ ಅಪ್ಪಳಿಸಿದ ಕೋವಿಡ್‌ ಸಾಂಕ್ರಾಮಿಕ ರೋಗ ಇನ್ನೂ ಸಂಪೂರ್ಣವಾಗಿ ನಿರ್ಮೂಲನವಾಗಿಲ್ಲ. 3 ವರ್ಷ ಜಗತ್ತನ್ನು ಇನ್ನಿಲ್ಲದಂತೆ ಕಾಡಿದ್ದ ಕೋವಿಡ್ ಮತ್ತೊಮ್ಮೆ ಏಷ್ಯಾದ ಕೆಲವು ಭಾಗಗಳಲ್ಲಿ ವೇಗವಾಗಿ ಹರಡುತ್ತಿದ್ದು, ಪ್ರಕರಣಗಳ ಸಂಖ್ಯೆ ನಿಧಾನವಾಗಿ ಹೆಚ್ಚಾಗುತ್ತಿದೆ. ಹಾಂಕಾಂಗ್‌ ಮತ್ತು ಸಿಂಗಾಪುರದಂತಹ ದೇಶಗಳಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ. ಅಲ್ಲಿನ ಆರೋಗ್ಯ ಇಲಾಖೆ ಅಧಿಕಾರಿಗಳು ಇದು ಹೊಸ ಅಲೆ ಎಂದು ದೃಢಪಡಿಸಿದ್ದಾರೆ. ಭಾರತದಲ್ಲೂ ಕೆಲವು ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಈ […]

ಜಗತ್ತಿಗೆ ಮತ್ತೆ ಕೋವಿಡ್‌ ಕಂಟಕ : ಏಷ್ಯಾದಲ್ಲಿ ಹರಡುತ್ತಿದೆ ಹೊಸ ರೂಪಾಂತರಿತ ವೈರಸ್‌ Read More »

ಅವಧಿಗಿಂತ ಮೊದಲೇ ಬರಲಿದೆ ಮುಂಗಾರು : ಮೇ 24ಕ್ಕೆ ಕೇರಳ ಪ್ರವೇಶ ಸಾಧ್ಯತೆ

ಮುಂಗಾರು ಪೂರ್ವ ಮಳೆಯ ಅಬ್ಬರದ ಜೊತೆಗೆ ಮಳೆಗಾಲವೂ ಶುರು ನವದೆಹಲಿ : ರಾಜ್ಯದಲ್ಲಿ ಮುಂಗಾರುಪೂರ್ವ ಮಳೆ ಅಬ್ಬರಿಸುತ್ತಿರುವಂತೆಯೇ ಹವಾಮಾನ ಇಲಾಖೆ ಈ ಸಲ ಮುಂಗಾರು ಪ್ರವೇಶ ಕೂಡ ಅವಧಿಗಿಂತ ಮುಂಚೆ ಆಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ನೈಋತ್ಯ ಮಾನ್ಸೂನ್ ಮುಂದಿನ 4ರಿಂದ 5 ದಿನಗಳಲ್ಲಿ ಕೇರಳಕ್ಕೆ ಆಗಮಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಪ್ರತಿ ವರ್ಷ ಜೂನ್ ತಿಂಗಳ ಆರಂಭದಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶವಾಗುತ್ತಿತ್ತು. ಆದರೆ ಈ ವರ್ಷ ಬಹಳ ಮುಂಚೆಯೇ

ಅವಧಿಗಿಂತ ಮೊದಲೇ ಬರಲಿದೆ ಮುಂಗಾರು : ಮೇ 24ಕ್ಕೆ ಕೇರಳ ಪ್ರವೇಶ ಸಾಧ್ಯತೆ Read More »

ಗೇರುಕಟ್ಟೆಯ  ಯೋಗ ಶಿಕ್ಷಣ ತರಬೇತಿ ಕೇಂದ್ರದಲ್ಲಿ  ಶತ ದಿನದ  ಕಾರ್ಯಕ್ರಮ

ಗೇರುಕಟ್ಟೆ : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ರಿ. ಕರ್ನಾಟಕ ಕೇಂದ್ರ ಸಮಿತಿ ತುಮಕೂರು ನೇತ್ರಾವತಿ ವಲಯ ಮಂಗಳೂರು ವತಿಯಿಂದ ಬೆಳ್ತಂಗಡಿಯ ಕಳಿಯ ಗ್ರಾಮದ ಗೇರುಕಟ್ಟೆಯ ಕ್ಷೀರಸಂಗಮ ಸಭಾಭವನದಲ್ಲಿ ಜರಗುತ್ತಿರುವ ಉಚಿತ ಯೋಗ ಶಿಕ್ಷಣ ತರಬೇತಿಯ ನೂರನೇ ದಿನದ ಕಾರ್ಯಕ್ರಮವು ಭಾರತ ಮಾತಾ ಪೂಜನ ಕಾರ್ಯಕ್ರಮದೊಂದಿಗೆ ಜರಗಿತು. ಕೇಂದ್ರದ ಮುಖ್ಯ ಶಿಕ್ಷಕಿ ಪ್ರೇಮಲತಾ ಗಣೇಶ್  ಕಳಿಯ ಮಾತನಾಡಿ, ಶಾಖೆಯು ನಿರಂತರವಾಗಿ ಮುಂದುವರಿಯಬೇಕು.  ಯೋಗ ಬಂಧುಗಳು ಪ್ರತಿದಿನವು ಹಾಜರಾಗಿ ಮುಂದಕ್ಕೆ ಜರಗುವ ಪ್ರಶಿಕ್ಷಣ ತರಬೇತಿಯಲ್ಲಿ ಭಾಗವಹಿಸಿ  ಬೇರೆ

ಗೇರುಕಟ್ಟೆಯ  ಯೋಗ ಶಿಕ್ಷಣ ತರಬೇತಿ ಕೇಂದ್ರದಲ್ಲಿ  ಶತ ದಿನದ  ಕಾರ್ಯಕ್ರಮ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ)ವಿಟ್ಲ , ಪೆರ್ನೆ ವಲಯದಿಂದ “ಹಿಂದೂ ರುದ್ರಭೂಮಿ ಅಭಿವೃದ್ಧಿ” ಅನುದಾನದ ಮಂಜೂರಾತಿ ಪತ್ರ ವಿತರಣೆ

ಪೆರ್ನೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ)ವಿಟ್ಲ , ಪೆರ್ನೆ ವಲಯದ ಪೆರ್ನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹನುಮಾಜೆ “ಹಿಂದೂ ರುದ್ರಭೂಮಿ ಅಭಿವೃದ್ಧಿ”ಗೆ ಯೋಜನೆಯ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಮಂಜೂರಾಗಿರುವ ರೂ.2,50,000/- ಅನುದಾನದ ಮಂಜೂರಾತಿ ಪತ್ರವನ್ನು ದಕ್ಷಿಣ ಕನ್ನಡ -2 ಜಿಲ್ಲಾ ನಿರ್ದೇಶಕರಾದ ಶ್ರೀ ಬಾಬು ನಾಯ್ಕ್ ರವರು ಸಮಿತಿ ಸದಸ್ಯರಿಗೆ ವಿತರಿಸಿದ ಬಳಿಕ ಯೋಜನೆಯ ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಜನಜಾಗೃತಿ ವೇದಿಕೆಯ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ)ವಿಟ್ಲ , ಪೆರ್ನೆ ವಲಯದಿಂದ “ಹಿಂದೂ ರುದ್ರಭೂಮಿ ಅಭಿವೃದ್ಧಿ” ಅನುದಾನದ ಮಂಜೂರಾತಿ ಪತ್ರ ವಿತರಣೆ Read More »

ಕೆಟ್ಟ ರಸ್ತೆಗಳಿಂದ ಬೆನ್ನು ನೋವು : 50 ಲ.ರೂ. ಪರಿಹಾರ ಕೋರಿ ಪಾಲಿಕೆಗೆ ನೋಟಿಸ್‌

ಮೂಲಸೌಕರ್ಯ ಒದಗಿಸಲು ವಿಫಲವಾಗಿರುವ ಬಿಬಿಎಂಪಿ ಅನಾರೋಗ್ಯಕ್ಕೆ ಹೊಣೆ ಎಂದ ತೆರಿಗೆದಾರ ಬೆಂಗಳೂರು: ವಾಹನ ಚಲಾಯಿಸಲು ಯೋಗ್ಯವಲ್ಲದ ರಸ್ತೆಗಳಿಂದ ನಿರಂತರ ದೈಹಿಕ ಯಾತನೆ ಅನುಭವಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ತೆರಿಗೆದಾರರೊಬ್ಬರು 50 ಲಕ್ಷ ರೂ. ಪರಿಹಾರ ಕೋರಿ ಬಿಬಿಎಂಪಿಗೆ ಲೀಗಲ್‌ ನೋಟಿಸ್‌ ಕಳುಹಿಸಿದ್ದಾರೆ. ರಿಚ್ಮಂಡ್ ಟೌನ್ ನಿವಾಸಿಯಾಗಿರುವ ದಿವ್ಯಕಿರಣ್ ಎಂಬವರು ಕಳುಹಿಸಿದ ನೋಟಿಸ್‌ನಲ್ಲಿ, ನಾನು ತೆರಿಗೆ ಪಾವತಿಸುವ ನಾಗರಿಕನಾಗಿದ್ದೇನೆ. ಆದರೆ ಬಿಬಿಎಂಪಿ ಮೂಲಸೌಕರ್ಯಗಳನ್ನು ನಿರ್ವಹಿಸುವಲ್ಲಿ ವಿಫಲವಾಗಿದೆ. ಇದರಿಂದ ನಾನು ದೈಹಿಕ ಮತ್ತು ಮಾನಸಿಕ ಯಾತನೆಯನ್ನು ನಿರಂತರವಾಗಿ ಎದುರಿಸುತ್ತಿದ್ದೇನೆ. ಕೆಟ್ಟ ರಸ್ತೆಯಿಂದ

ಕೆಟ್ಟ ರಸ್ತೆಗಳಿಂದ ಬೆನ್ನು ನೋವು : 50 ಲ.ರೂ. ಪರಿಹಾರ ಕೋರಿ ಪಾಲಿಕೆಗೆ ನೋಟಿಸ್‌ Read More »

ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದ ನಿರ್ಲಕ್ಷ್ಯ : ಪೊಲೀಸರ ಅಮಾನತು

ವಿದೇಶದಲ್ಲಿ ನೌಕರಿ ಕೊಡಿಸುವ ಆಮಿಷದಲ್ಲಿ 300ಕ್ಕೂ ಹೆಚ್ಚು ಮಂದಿಗೆ ಪಂಗನಾಮ ಮಂಗಳೂರು : ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ನೂರಾರು ಜನರಿಗೆ ಕೋಟಿಗಟ್ಟಲೆ ರೂಪಾಯಿ ಪಂಗನಾಮ ಹಾಕಿರುವ ಕಂಪನಿಯ ಬಗ್ಗೆ ಮೊದಲೇ ಎಚ್ಚರಿಕೆ ನೀಡಿದ್ದರೂ ತನಿಖೆ ಮಾಡದೆ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಅರೋಪ ಕೇಳಿಬಂದಿದೆ. ವಂಚನೆ ಪ್ರಕರಣದ ತನಿಖೆಯಲ್ಲಿ ನಿರ್ಲಕ್ಷ್ಯ ತೋರಿದ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಆದೇಶ ಹೊರಡಿಸಿದ್ದಾರೆ. ನಕಲಿ ಸಂಸ್ಥೆಯ ಬಗ್ಗೆ ಆಫೀಸ್ ಪ್ರೊಟೆಕ್ಟರ್

ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದ ನಿರ್ಲಕ್ಷ್ಯ : ಪೊಲೀಸರ ಅಮಾನತು Read More »

ಕಾಂಗ್ರೆಸ್‌-ಬಿಜೆಪಿ ಸಿಂಧೂರ ಜಟಾಪಟಿ : ಆರೋಪಗಳಿಗೆ ತಿರುಗೇಟು

ರಾಹುಲ್‌ ಗಾಂಧಿ ಪಾಕಿಸ್ಥಾನ ಭಾಷೆಯಲ್ಲಿ ಮಾತನಾಡುತ್ತಿದ್ದಾರೆ ಎಂದು ಟೀಕೆ ನವದೆಹಲಿ: ಆಪರೇಷನ್ ಸಿಂದೂರ ಕಾರ್ಯಾಚರಣೆಯ ಬಗ್ಗೆ ಸೇನೆ ಮತ್ತು ಸರಕಾರವನ್ನು ದೂಷಿಸುತ್ತಿರುವ ಕಾಂಗ್ರೆಸ್‌ಗೆ ಬಿಜೆಪಿ ತಿರುಗೇಟು ನೀಡಿದೆ. ವಿದೇಶಾಂಗ ಸಚಿವ ಎಸ್.ಜೈಶಂಕರ್ ಹೇಳಿದ ಒಂದು ಮಾತನ್ನು ಹಿಡಿದುಕೊಂಡು ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಪವನ್‌ ಖೇರ ಮುಂತದವರು ವಾಗ್ದಾಳಿ ಮಾಡುತ್ತಿದ್ದಾರೆ. ರಾಹುಲ್‌ ಗಾಂಧಿಯಂತೂ ಯುದ್ಧದಲ್ಲಿ ಭಾರತ ಎಷ್ಟು ಯುದ್ಧ ವಿಮಾನಗಳನ್ನು ಕಳೆದುಕೊಂಡಿದೆ ಎಂಬ ಲೆಕ್ಕ ಕೇಳುತ್ತಿದ್ದಾರೆ. ವಿದೇಶಾಂಗ ಸಚಿವರನ್ನು ಪಾಕಿಸ್ಥಾನದ ಪರವಾಗಿರುವವರು ಎಂದು ಕೂಡ

ಕಾಂಗ್ರೆಸ್‌-ಬಿಜೆಪಿ ಸಿಂಧೂರ ಜಟಾಪಟಿ : ಆರೋಪಗಳಿಗೆ ತಿರುಗೇಟು Read More »

ಬಾಡಿಗೆ ಮನೆಯಲ್ಲಿ ಮಹಿಳೆಯ ಶವ ಪತ್ತೆ : ಕೊಲೆ ಶಂಕೆ

ಮಂಗಳೂರು: ನಗರ ಹೊರವಲಯದ ಕುಡುಪು ಗ್ರಾಮದ ಪಾಲ್ದನೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಪಲ್ಲವಿ ಎಂಬ ಮಹಿಳೆಯ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಮನೆಯ ಕೊಠಡಿಯಲ್ಲಿ ಪತ್ತೆಯಾಗಿದೆ. ಪಲ್ಲವಿಯ ಪತಿ ನವೀನ್ ಹಾಗೂ ಅತ್ತೆ ಶಾಂತಾ ಸೇರಿಕೊಂಡು ಕೊಲೆ ಮಾಡಿದ್ದಾರೆ ಎಂದು ದೂರಲಾಗಿದೆ. ಭಾನುವಾರ ಶವ ಪತ್ತೆಯಾಗಿದ್ದು, ಘಟನೆಯ ಬಳಿಕ ನವೀನ್ ತಲೆಮರೆಸಿಕೊಂಡಿರುವುದು ಅನುಮಾನಕ್ಕೆ ಕಾರಣವಾಗಿದೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪಾಲ್ದನೆಯ ಕರುಣಾಕರ ಶೆಟ್ಟಿಯ ಮನೆಯ

ಬಾಡಿಗೆ ಮನೆಯಲ್ಲಿ ಮಹಿಳೆಯ ಶವ ಪತ್ತೆ : ಕೊಲೆ ಶಂಕೆ Read More »

ಬೆಂಗಳೂರಿನಲ್ಲಿ 50ಕ್ಕೂ ಅಧಿಕ ಬಡಾವಣೆಗಳು ಜಲಾವೃತ : 4 ಮಂದಿ ಸಾವು

ರಾಜಧಾನಿಯಲ್ಲಿ ಅವಾಂತರಗಳ ಸರಮಾಲೆ ಸೃಷ್ಟಿಸಿದ ಮಳೆ ಬೆಂಗಳೂರು : ಬೆಂಗಳೂರಿನಾದ್ಯಂತ ಪೂರ್ವ ಮುಂಗಾರು ಮಳೆ ಅಬ್ಬರಿಸುತ್ತಿದೆ. ಕಳೆದ ನಾಲ್ಕು ದಿನಗಳಿಂದ ಚುರುಕಾಗಿರುವ ಮಳೆ ಗುಡುಗು, ಮಿಂಚು ಸಹಿತ ಸುರಿಯುತ್ತಿದೆ. ಮೊನ್ನೆ ಸುರಿದ ಮಳೆಯ ಅವಾಂತರ, ಸಮಸ್ಯೆಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಅದಾಗಲೇ ಮಂಗಳವಾರ ಬೆಳ್ಳಂಬೆಳ್ಳಗ್ಗೆ ಬರೋಬ್ಬರಿ 135 ಮಿಲಿ ಮೀಟರ್ ಮಳೆ ಆಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ. ನಗರಾದ್ಯಂತ ಇಂದು ಬೆಳಗ್ಗೆ ಸುರಿದ ಮಳೆ ವಿವರ ಹೀಗಿದೆ: ಬೆಂಗಳೂರಿನಲ್ಲಿ ರಾಜರಾಜೇಶ್ವರಿ

ಬೆಂಗಳೂರಿನಲ್ಲಿ 50ಕ್ಕೂ ಅಧಿಕ ಬಡಾವಣೆಗಳು ಜಲಾವೃತ : 4 ಮಂದಿ ಸಾವು Read More »

ಕರಾವಳಿಯಲ್ಲಿ ಬೇಸಿಗೆಯಲ್ಲೇ ಮಳೆಗಾಲದ ಪರಿಸ್ಥಿತಿ: ಎಲ್ಲೆಡೆ ಧಾರಾಕಾರ ಮಳೆ

ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ನಿನ್ನೆಯಿಂದೀಚೆಗೆ ಕರಾವಳಿಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇನ್ನೂ 2-3 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಭಾರಿ ಮಳೆಯಿಂದಾಗಿ ಅಲ್ಲಲ್ಲಿ ಅನಾಹುತಗಳು ಸಂಭವಿಸಿವೆ. ಹಲವೆಡೆ ನೀರು ಜಮೆಯಾಗಿ ಜನರು ಸಮಕಷ್ಟಕ್ಕೀಡಾದರು. ಮೇ 20ರಿಂದ 22ರ ತನಕ ಅತಿಹೆಚ್ಚು ಮಳೆಯಾಗುವ ಮುನ್ಸೂಚನೆ ಹಿನ್ನಲೆ ಭಾರತ

ಕರಾವಳಿಯಲ್ಲಿ ಬೇಸಿಗೆಯಲ್ಲೇ ಮಳೆಗಾಲದ ಪರಿಸ್ಥಿತಿ: ಎಲ್ಲೆಡೆ ಧಾರಾಕಾರ ಮಳೆ Read More »

error: Content is protected !!
Scroll to Top