ಸುದ್ದಿ

ನೀರಕಟ್ಟೆಯಲ್ಲಿ ಬಸ್‌ ಪಲ್ಟಿ : ಓರ್ವ ಪ್ರಯಾಣಿಕ ಸಾವು

ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಬಜತ್ತೂರು ಎಂಬಲ್ಲಿ ಖಾಸಗಿ ಬಸ್ಸೊಂದು ಪಲ್ಟಿಯಾಗಿ ಓರ್ವ ಪ್ರಯಾಣಿಕ ಮೃತಪಟ್ಟ ಘಟನೆ ಏ.4ರಂದು ಮುಂಜಾನೆ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಬಜತ್ತೂರು ಸಮೀಪ ನೀರಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ.ಮೃತಪಟ್ಟ ಪ್ರಯಾಣಿಕನ ಗುರುತು ಇನ್ನೂ ಪತ್ತಡೆಯಾಗಿಲ್ಲ. ಅಪಘಾತದಲ್ಲಿ ಕೆಲವು ಪ್ರಯಾಣಿಕರಿಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಸನ್ನು ಕ್ರೇನ್‌ ಸಹಾಯದಿಂದ ಮೇಲೆತ್ತಲಾಗಿದೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ನೀರಕಟ್ಟೆಯಲ್ಲಿ ಬಸ್‌ ಪಲ್ಟಿ : ಓರ್ವ ಪ್ರಯಾಣಿಕ ಸಾವು Read More »

3 ತಿಂಗಳಲ್ಲಿ 49.6 ಕೆಜಿ ಚಿನ್ನ ಸ್ಮಗ್ಲಿಂಗ್‌ ಮಾಡಿದ್ದ ರನ್ಯಾ ರಾವ್‌

ಹವಾಲ ಮೂಲಕ ದುಬೈಗೆ ಕೋಟಿಗಟ್ಟಲೆ ಹಣ ರವಾನೆ ಬೆಂಗಳೂರು : ನಟಿ ರನ್ಯಾ ರಾವ್‌ ಮೂರು ತಿಂಗಳಲ್ಲಿ ಬರೋಬ್ಬರಿ 49.6 ಕೆಜಿ ಚಿನ್ನ ಕಳ್ಳ ಸಾಗಾಟ ಮಾಡಿರುವ ವಿಚಾರ ಬಯಲಾಗಿದೆ. ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನ ಮೂರನೇ ಆರೋಪಿ ಸಾಹಿಲ್ ಜೈನ್ ಡಿಆರ್‌ಐ ಮುಂದೆ ಈ ವಿಚಾರ ಬಾಯಿಬಿಟ್ಟಿದ್ದಾನೆ. ನವಂಬರ್‌ನಿಂದ ರನ್ಯಾ ಬರೋಬ್ಬರಿ 49.6 ಕೆಜಿ ಚಿನ್ನ ಸಾಗಿಸಿದ್ದಾಳೆ. ಈ ಚಿನ್ನವನ್ನೆಲ್ಲ ತಂದು ಸಾಹಿಲ್ ಜೈನ್​ಗೆ ಕೊಟ್ಟಿದ್ದ ರನ್ಯಾ ಅದನ್ನು ಆತನ ಮೂಲಕ ಮಾರಾಟ ಮಾಡಿಸುತ್ತಿದ್ದಳು. ಅಷ್ಟೇ ಅಲ್ಲ

3 ತಿಂಗಳಲ್ಲಿ 49.6 ಕೆಜಿ ಚಿನ್ನ ಸ್ಮಗ್ಲಿಂಗ್‌ ಮಾಡಿದ್ದ ರನ್ಯಾ ರಾವ್‌ Read More »

ರಾಜ್ಯಸಭೆಯಲ್ಲೂ ಪಾಸ್‌ ಆದ ವಕ್ಫ್‌ ಮಸೂದೆ

ಪರವಾಗಿ 138, ವಿರುದ್ಧ 95 ಮತಗಳು ನವದೆಹಲಿ: ರಾಜ್ಯಸಭೆಯಲ್ಲಿಯೂ ವಕ್ಫ್ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆಯುವಲ್ಲಿ ಎನ್​ಡಿಎ ಸರ್ಕಾರ ಯಶಸ್ವಿಯಾಗಿದೆ. ಗುರುವಾರ ತಡರಾತ್ರಿ ವಕ್ಫ್ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಮತಕ್ಕೆ ಹಾಕಲಾಯಿತು. ಮಸೂದೆಯ ಪರವಾಗಿ 138 ಮತಗಳು ಮತ್ತು ವಿರುದ್ಧವಾಗಿ 95 ಮತಗಳು ಚಲಾವಣೆಯಾದವು.ಇನ್ನು ಮಸೂದೆಯನ್ನು ರಾಷ್ಟ್ರಪತಿಗಳಿಗೆ ಕಳುಹಿಸಲಾಗುತ್ತದೆ. ಅವರು ಅಂಇಕತ ಹಾಕಿದ ಕೂಡಲೇ ಕಾನೂನಿನ ರೂಪ ಪಡೆಯುತ್ತದೆ. ರಾಜ್ಯಸಭೆಗೂ ಮುನ್ನ,ಸರ್ಕಾರ ಬುಧವಾರ ಲೋಕಸಭೆಯಲ್ಲಿ ಈ ಮಸೂದೆಯನ್ನು ಮಂಡಿಸಿತ್ತು. ಅಲ್ಲಿ ಸುಮಾರು 12 ಗಂಟೆಗಳ ಚರ್ಚೆಯ ನಂತರ

ರಾಜ್ಯಸಭೆಯಲ್ಲೂ ಪಾಸ್‌ ಆದ ವಕ್ಫ್‌ ಮಸೂದೆ Read More »

ರಾಡ್‍ಗಳಿಂದ ಹೊಡೆದಾಡಿಕೊಂಡ ಬಸ್‍ ಸಿಬ್ಬಂದಿಯರು | ಇಬ್ಬರು ಅರೆಸ್ಟ್‍

ಮಣಿಪಾಲ: ಮಣಿಪಾಲದಲ್ಲಿ ಎರಡು ಬಸ್ ಸಿಬ್ಬಂದಿಗಳು ಉಕ್ಕಿನ ರಾಡ್‌ಗಳಿಂದ ಹೊಡೆದಾಡಿಕೊಂಡ ಘಟನೆ ನಡೆದಿದೆ. ರಾಡ್‍ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಜಗಳವಾಡಿದ ಇಬ್ಬರು ಬಸ್‍  ಸಿಬ್ಬಂದಿಯನ್ನು ಬಂಧಿಸಲಾಗಿದೆ. ಬುಧವಾರ ಸಂಜೆ ಮಣಿಪಾಲ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಬಸ್  ಸಿಬ್ಬಂದಿ ಬೀದಿ ಜಗಳದಲ್ಲಿ ತೊಡಗಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗಿದೆ. ವಾಗ್ವಾದದಲ್ಲಿ ಬಸ್ ಕಂಡಕ್ಷರ್‌ಗಳಾದ ಅಲ್ಪಾಜ್ ಮತ್ತು ವಿಜಯಕುಮಾ‌ರ್ ಅವರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಎರಡೂ ಬಸ್‌ಗಳನ್ನು ಮಣಿಪಾಲ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಣಿಪಾಲ

ರಾಡ್‍ಗಳಿಂದ ಹೊಡೆದಾಡಿಕೊಂಡ ಬಸ್‍ ಸಿಬ್ಬಂದಿಯರು | ಇಬ್ಬರು ಅರೆಸ್ಟ್‍ Read More »

ಕಾಡಿನ ಮಧ್ಯೆ ಪತ್ತೆಯಾದ ಹೆಣ್ಣು ಮಗುವಿನ ಪ್ರಕರಣ | ಪೋಷಕರನ್ನು ಪತ್ತೆ ಹಚ್ಚಿದ  ಧರ್ಮಸ್ಥಳ ಪೋಲಿಸರು 

ಉಜಿರೆ :  ಸುಮಾರು ದಿನಗಳ ಹಿಂದೆ  ಬೆಳಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಡೋಳುಕೆರೆ ಕಾಡಿನ ಮಧ್ಯೆ ಪತ್ತೆಯಾದ ಹೆಣ್ಣು ಮಗುವಿನ ಪೋಷಕರನ್ನು ಧರ್ಮಸ್ಥಳ ಪೊಲೀಸರು ಪತ್ತೆ ಮಾಡಿದ್ದಾರೆ. ಕಾಡಿನಲ್ಲಿ ಮಗು ಸಿಕ್ಕಿದ ತಕ್ಷಣ ಗ್ರಾಮದ ಜನರು ಈ ಕುರಿತು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗ್ರಾಮಸ್ಥರ  ಸಹಕಾರದೊಂದಿಗೆ ಮಗುವಿನ ತಂದೆ ತಾಯಿಯ ವಿವರಗಳು ಲಭಿಸಿದೆ. ಧರ್ಮಸ್ಥಳ ಪೊಲೀಸ್ ಠಾಣಾ ಸಬ್ ಇನ್ಸೆಕ್ಟರ್ ಸಮರ್ಥ ಆರ್. ಗಾಣಿಗೇರಾ ನೇತೃತ್ವದ ತಂಡವು ಮಗುವಿನ ತಂದೆ ರಂಜಿತ್ ಗೌಡನನ್ನು ಎ.2 ರಂದು

ಕಾಡಿನ ಮಧ್ಯೆ ಪತ್ತೆಯಾದ ಹೆಣ್ಣು ಮಗುವಿನ ಪ್ರಕರಣ | ಪೋಷಕರನ್ನು ಪತ್ತೆ ಹಚ್ಚಿದ  ಧರ್ಮಸ್ಥಳ ಪೋಲಿಸರು  Read More »

ಕ್ರಿಕೆಟರ್‌ ಮೊಹಮ್ಮದ್‌ ಶಮಿ ಅಕ್ಕ, ಬಾವ ನರೇಗಾ ಕೂಲಿ ಕಾರ್ಮಿಕರು!

ಕೋಟಿಗಟ್ಟಲೆ ಸಂಪಾದಿಸುವ ಕ್ರಿಕೆಟ್‌ ಆಟಗಾರನ ಕುಟುಂಬದವರ ಸ್ಥಿತಿ ಹೀಗಿದೆ ನೋಡಿ ಹೊಸದಿಲ್ಲಿ : ಟೀಮ್ ಇಂಡಿಯಾದ ವೇಗದ ಬೌಲರ್‌ ಮೊಹಮ್ಮದ್‌ ಶಮಿ ಕ್ರಿಕೆಟ್‌ ಮತ್ತು ಜಾಹೀರಾತು ಮೂಲಗಳಿಂದ ಕೋಟಿಗಟ್ಟಲೆ ಹಣ ಗಳಿಸಿರಬಹುದು. ಆದರೆ ಸರಕಾರಿ ದಾಖಲೆಗಳ ಪ್ರಕಾರ ಅವರ ಅಕ್ಕ, ಬಾವ, ಸೇರಿ ಕೆಲವು ಸಂಬಂಧಿಕರು ಮಾತ್ರ ನರೇಗಾದಡಿ ಕೂಲಿ ಕೆಲಸ ಮಾಡುವ ಕಾರ್ಮಿಕರು! ಮೊಹಮ್ಮದ್ ಶಮಿಯ ಸಹೋದರಿ ಮತ್ತು ಭಾವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ನರೇಗಾ) ಯೋಜನೆಯಲ್ಲಿ ವಂಚನೆ ಎಸಗಿದ್ದಾರೆ

ಕ್ರಿಕೆಟರ್‌ ಮೊಹಮ್ಮದ್‌ ಶಮಿ ಅಕ್ಕ, ಬಾವ ನರೇಗಾ ಕೂಲಿ ಕಾರ್ಮಿಕರು! Read More »

ಮಡಿಕೇರಿ : ಕೊಲೆಯಾಗಿದ್ದ ಮಹಿಳೆ ೫ ವರ್ಷದ ಬಳಿಕ ಹೋಟೆಲಿನಲ್ಲಿ ಗಂಡನ ಕೈಗೆ ಸಿಕ್ಕಿಬಿದ್ದಳು!

ಪತ್ನಿಯನ್ನು ಸಾಯಿಸಿದ ಆರೋಪದಲ್ಲಿ ಜೈಲಿಗೆ ಹೋಗಿ ಬಂದಿದ್ದ ಗಂಡನಿಗೆ ಶಾಕ್ ಮಡಿಕೇರಿ : ಐದು ವರ್ಷದ ಹಿಂದೆ ಕೊಲೆಯಾಗಿದ್ದಾಳೆ ಎಂದು ಭಾವಿಸಲಾಗಿದ್ದ ಹೆಂಡತಿ ಹೋಟೆಲೊಂದರಲ್ಲಿ ಪ್ರಿಯಕರನ ಜೊತೆ ಗಂಡನ ಕೈಗೆ ಸಿಕ್ಕಿಬಿದ್ದ ಸಿನಿಮಾ ಮಾದರಿ ಘಟನೆಯೊಂದು ಮಡಿಕೇರಿಯಲ್ಲಿ ಸಂಭವಿಸಿದೆ. ಕುಶಾಲನಗರ ತಾಲೂಕಿನ ಬಸವನಹಳ್ಳಿ ಗ್ರಾಮದಲ್ಲಿ ಐದು ವರ್ಷಗಳ ಹಿಂದೆ ನಡೆದಿದೆ ಎನ್ನಲಾಗಿದ್ದ ಈ ಕೊಲೆ ಪ್ರಕರಣ ಸಸ್ಪೆನ್ಸ್​ ಥ್ರಿಲ್ಲರ್ ಸಿನಿಮಾದಂತೆ ಅನಾವರಣಗೊಂಡಿದೆ. ತಾನು ಮಾಡದ ಕೊಲೆಗಾಗಿ ಗಂಡ ಎರಡು ವರ್ಷ ಜೈಲು ಶಿಕ್ಷೆಯನ್ನು ಅನುಭವಿಸಿದ್ದರು. ಪೊಲೀಸರು ಮಲ್ಲಿಗೆ

ಮಡಿಕೇರಿ : ಕೊಲೆಯಾಗಿದ್ದ ಮಹಿಳೆ ೫ ವರ್ಷದ ಬಳಿಕ ಹೋಟೆಲಿನಲ್ಲಿ ಗಂಡನ ಕೈಗೆ ಸಿಕ್ಕಿಬಿದ್ದಳು! Read More »

ಬೆಲೆ ಏರಿಕೆ ವಿರುದ್ಧ ಬಿಜೆಪಿ ಹೋರಾಟ : ಇಂದು ಮುಖ್ಯಮಂತ್ರಿ ಮನೆಗೆ ಮುತ್ತಿಗೆ

ಎರಡನೇ ದಿನ ಪ್ರವೇಶಿಸಿದ ಅಹೋರಾತ್ರಿ ಧರಣಿ ಬೆಂಗಳೂರು: ಬೆಲೆ ಏರಿಕೆ ನೀತಿ ಖಂಡಿಸಿ ಕಾಂಗ್ರೆಸ್‌ ಸರಕಾರದ ಬಿಜೆಪಿ ಬೆಂಗಳುರಿನಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ. ಇಂದು ಮಧ್ಯಾಹ್ನಕ್ಕೆ ಅಹೋರಾತ್ರಿ ಹೋರಾಟ ಕೊನೆಗೊಳಿಸಲು ನಿರ್ಧರಿಸಲಾಗಿದೆ. ಹೀಗಾಗಿ, ಇಂದು ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ತೀವ್ರಗೊಳಿಸಲಿದೆ. ಸಿಎಂ ಮನೆ ಮುತ್ತಿಗೆ ಯತ್ನ ಹಾಗೂ ರಸ್ತೆ ತಡೆಗೆ ಬಿಜೆಪಿ ನಿರ್ಧರಿಸಿದೆ. ಫ್ರೀಡಂ ಪಾರ್ಕ್ ಇರುವ ಶೇಷಾದ್ರಿ ರಸ್ತೆ ತಡೆ ನಡೆಸುವ ಮೂಲಕ ಸರ್ಕಾರಕ್ಕೆ ಬಿಜೆಪಿ ನಾಯಕರು ಬಿಸಿ ಮುಟ್ಟಿಸಲಿದ್ದಾರೆ.

ಬೆಲೆ ಏರಿಕೆ ವಿರುದ್ಧ ಬಿಜೆಪಿ ಹೋರಾಟ : ಇಂದು ಮುಖ್ಯಮಂತ್ರಿ ಮನೆಗೆ ಮುತ್ತಿಗೆ Read More »

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿದ ಭಕ್ತಿ ರಥಯಾತ್ರೆ

ಪುತ್ತೂರು : ಉಡುಪಿ ಪೇಜಾವರ ಅಧೋಕ್ಷಜ ಮಠ ಹಾಗೂ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಪೆರಣಂಕಿಲ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಲಿರುವ ಭಕ್ತಿ ಸಿದ್ದಾಂತೋತ್ಸವ- ರಾಮೋತ್ಸವದ ಪ್ರಯುಕ್ತ ಏ.2 ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿದ ಭಕ್ತಿ ರಥಯಾತ್ರೆಯನ್ನು ದೇವಳದ ವ್ಯವಸ್ಥಾಪನಾ ಸಮಿತಿಯಿಂದ ಸ್ವಾಗತಿಸಲಾಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯರು ಹಾಗು ವಿ.ಹಿಂ.ಪ. ಪ್ರಮುಖರು ಭಕ್ತಿ ರಥಯಾತ್ರೆಯನ್ನು ಸ್ವಾಗತಿಸಿದರು. ದೇವಳದ ಪ್ರಧಾನ ಅರ್ಚಕ ವೇ.ಮೂ ವಸಂತ ಕೆದಿಲಾಯರು ಭಕ್ತಿ ರಥಕ್ಕೆ ಪೂಜೆಯನ್ನು

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿದ ಭಕ್ತಿ ರಥಯಾತ್ರೆ Read More »

ಅಣ್ಣನ ಜೊತೆ ಬೈಕ್‌ನಲ್ಲಿ ಹೋಗುತ್ತಿದ್ದ ಯುವತಿಯನ್ನು ಅಪಹರಿಸಿ ಅತ್ಯಾಚಾರ

ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿಬೀಳಿಸುವ ಕೃತ್ಯ ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿಬೀಳಿಸುವ ಅತ್ಯಾಚಾರ ನಡೆದಿದೆ. ಬುಧವಾರ ಮಧ್ಯರಾತ್ರಿ ಕೆ.ಆರ್​ ಪುರಂ ರೈಲ್ವೆ ಸ್ಟೇಷನ್​ನಿಂದ ಅಣ್ಣನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ಬಿಹಾರದ ಯುವತಿಯನ್ನು ದುಷ್ಕರ್ಮಿಗಳು ಅಪಹರಿಸಿ ಅತ್ಯಾಚಾರ ಎಸಗಿದ್ದಾರೆ. ಯುವತಿಯ ಅಣ್ಣನ ಮೇಲೂ ಹಲ್ಲೆ ನಡೆಸಿದ್ದಾರೆ. ಘಟನೆ ಸಂಬಂಧ ಮಾದೇವಪುರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಿಹಾರ ಮೂಲದ ಯುವತಿ ಕೇರಳದ ಎರ್ನಾಕುಲಂನಿಂದ ಬೆಂಗಳೂರಿನ ಕೆ.ಆರ್.ಪುರಂ ರೈಲ್ವೆ ನಿಲ್ದಾಣಕ್ಕೆ ಬಂದಿದ್ದಳು. ಆಕೆಯನ್ನು ಕರೆದುಕೊಂಡು ಹೋಗಲು ದೊಡ್ಡಮ್ಮನ ಮಗ ಬಂದಿದ್ದರು.ಅಲ್ಲಿಂದ ಅವರು

ಅಣ್ಣನ ಜೊತೆ ಬೈಕ್‌ನಲ್ಲಿ ಹೋಗುತ್ತಿದ್ದ ಯುವತಿಯನ್ನು ಅಪಹರಿಸಿ ಅತ್ಯಾಚಾರ Read More »

error: Content is protected !!
Scroll to Top