ಸುದ್ದಿ

ಪ್ರಚೋದನಕಾರಿ ಭಾಷಣ ಆರೋಪ : ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ದೂರು

ಉಪ್ಪಳಿಗೆ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಪ್ರಭಾಕರ ಭಟ್‌ ಪುತ್ತೂರು: ಇತ್ತೀಚೆಗೆ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಹಿಂದೂ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಈಶ್ವರಿ ಪದ್ಮುಂಜ ಎಂಬವರು ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅ.20ರಂದು ಪುತ್ತೂರಿನ ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಮಹಿಳೆಯರನ್ನು ಅವಮಾನಿಸಿ, ಗರ್ಭಿಣಿ ಮಹಿಳೆಯರನ್ನು ನಿಂದನೆ ಮಾಡಿದ್ದಾರೆಂದು ಆರೋಪಿಸಿ ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಕಾರ್ಯಕ್ರಮದ ಆಯೋಜಕರ ವಿರುದ್ಧ ಈಶ್ವರಿ […]

ಪ್ರಚೋದನಕಾರಿ ಭಾಷಣ ಆರೋಪ : ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ದೂರು Read More »

ಚೂರಿ ಇರಿತ ಪ್ರಕರಣ : ಪ್ರಮುಖ ಆರೋಪಿ ಸೆರೆ

ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾರ್ ಎದುರು ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿ ರೌಡಿ ಶೀಟರ್ ಗುರುರಾಜ್ ಆಚಾರಿ ಎಂಬಾತನನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಆರೋಪಿಗಳಿಗೆ ಆಶ್ರಯ ನೀಡಿದ್ದ ಮತ್ತೊಬ್ಬ ಆರೋಪಿ ಅಶೋಕ್ ಎಂಬಾತನಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಬಾರ್‌ನೊಳಗೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯು ತೀವ್ರಗೊಂಡು ಹೊರಗೆ ಚಾಕು ಇರಿತದಲ್ಲಿ ಅಂತ್ಯಗೊಂಡಿತ್ತು. ಈ ಘಟನೆಯಲ್ಲಿ ಗಾಯಗೊಂಡಿರುವ ನಿಝಾಮ್ ಮತ್ತು ಹಸನ್ ಮುಕ್ಷಿತ್ ಸ್ಥಳೀಯ ಆಸ್ಪತ್ರೆಯಲ್ಲಿ

ಚೂರಿ ಇರಿತ ಪ್ರಕರಣ : ಪ್ರಮುಖ ಆರೋಪಿ ಸೆರೆ Read More »

ಅಂತಿಮ ಹಂತಕ್ಕೆ ತಲುಪಿದ ಬುರುಡೆ ಷಡ್ಯಂತ್ರದ ತನಿಖೆ; ಸೋಮವಾರ ನಿರ್ಣಾಯಕ ವಿಚಾರಣೆ

ತಿಮರೋಡಿ ಸಹಿತ ನಾಲ್ವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್‌ ಮಂಗಳೂರು: ಧರ್ಮಸ್ಥಳ ಬುರುಡೆ ಬುರುಡೆ ಷಡ್ಯಂತ್ರ ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ವಿಚಾರಣೆಗಾಗಿ ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಜಯಂತ್‌ ಟಿ. ಮತ್ತು ವಿಠಲ ಗೌಡ ಅವರಿಗೆ ಸೇರಿದಂತೆ ನಾಲ್ವರಿಗೆ ನೋಟಿಸ್ ನೀಡಿದ್ದು, ಈ ನೋಟಿಸ್‌ ಸುತ್ತ ನಾನಾ ರೀತಿಯ ಊಹಾಪೋಹಗಳು ಹುಟ್ಟಿಕೊಂಡಿವೆ. ಸೋಮವಾರ ಬೆಳಿಗ್ಗೆ 10.30ಕ್ಕೆ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ. ಹಾಗೂ ವಿಠಲ ಗೌಡರಿಗೆ ನೋಟಿಸ್ ನೀಡಲಾಗಿದೆ.

ಅಂತಿಮ ಹಂತಕ್ಕೆ ತಲುಪಿದ ಬುರುಡೆ ಷಡ್ಯಂತ್ರದ ತನಿಖೆ; ಸೋಮವಾರ ನಿರ್ಣಾಯಕ ವಿಚಾರಣೆ Read More »

ಕರ್ನಾಟಕ ಪೊಲೀಸರ ಮುಡಿಗೇರಲಿದೆ ಹೊಸ ವಿನ್ಯಾಸದ ಟೋಪಿ

ಅ.28ರಂದು ಹೊಸ ಮಾದರಿಯ ಟೋಪಿ ವಿತರಣೆ ಬೆಂಗಳೂರು: ಕರ್ನಾಟಕ ಪೊಲೀಸ್​ ಇಲಾಖೆಯ ಕಾನ್‌ಸ್ಟೆಬಲ್‌ಗಳು ಮತ್ತು ಹಡ್‌ಕಾನ್‌ಸ್ಟೆಬಲ್‌ಗಳು ಧರಿಸುವ ಬ್ರಿಟಿಷ್​ ಕಾಲದ ಟೋಪಿಸದ್ಯದಲ್ಲೇ ಬದಲಾಗಲಿದೆ. ಒಂದು ಬದಿ ಚಪ್ಪಟೆಯಾಗಿರುವ ಸ್ಲೋಚ್​​​ ಹ್ಯಾಟ್​ಗೆ ಕೊಕ್​​ ನೀಡಲಾಗುತ್ತಿದ್ದು, ಅದರ ಬದಲಿಗೆ ಪೀಕ್ ಕ್ಯಾಪ್ ವಿತರಿಸಲು ಗೃಹ ಇಲಾಖೆ ಮುಂದಾಗಿದೆ. ಹೊಸ ಟೋಪಿಗಳು ಅಕ್ಟೋಬರ್ 28ರಿಂದಲೇ ಪೊಲೀಸರ ಕೈಸೇರಲಿವೆ. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಅ.28ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ. ಪರಮೇಶ್ವರ ಅವರು ಹೊಸ ಕ್ಯಾಪ್‌ಗಳ ವಿತರಣೆ

ಕರ್ನಾಟಕ ಪೊಲೀಸರ ಮುಡಿಗೇರಲಿದೆ ಹೊಸ ವಿನ್ಯಾಸದ ಟೋಪಿ Read More »

ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ಸಹಾಯವಾಣಿ ಸಂಖ್ಯೆ ಬದಲಾವಣೆ

ನವದೆಹಲಿ: ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯ ಕುರಿತು ಮಾಹಿತಿ ಮತ್ತು ನೆರವು ಪಡೆಯಲು ಈ ವರೆಗೆ ಬಳಕೆ ಮಾಡಲಾಗುತ್ತಿದ್ದ ಉಚಿತ ಸಹಾಯವಾಣಿ ಸಂಖ್ಯೆಯನ್ನು ಬದಲಾವಣೆ ಮಾಡಿದೆ. ಈ ಸಂಬಂಧ ಮಾಹಿತಿಯನ್ನು ಕೇಂದ್ರ ಮಹಿಳಾ ಮತ್ತು ಮಕ್ಕಳ‌ ಅಭಿವೃದ್ಧಿ ಸಚಿವಾಲಯವು ಪ್ರಕಟಿಸಿದ್ದು, ಇದೇ ತಿಂಗಳ 31 ರಂದು ಪ್ರಸ್ತುತ ಚಾಲ್ತಿಯಲ್ಲಿರುವ 14408 ಸಂಖ್ಯೆ ರದ್ದಾಗಲಿದೆ. ನ. 1 ರಿಂದ ತೊಡಗಿದಂತೆ ಹೊಸ ಸಹಾಯವಾಣಿ ಸಂಖ್ಯೆ 1515 ಕಾರ್ಯಾರಂಭ ಮಾಡಲಿದೆ ಎಂದು ತಿಳಿಸಿದೆ. ಗರ್ಭಿಣಿಯರು ಮತ್ತು

ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ಸಹಾಯವಾಣಿ ಸಂಖ್ಯೆ ಬದಲಾವಣೆ Read More »

ಟಿಪ್ಪರ್-ಕಾರ್ ಢಿಕ್ಕಿ: ಎರಡು ಸಾವು, ಮೂವರಿಗೆ ಗಾಯ

ಚಾಮರಾಜನಗರ: ಮೈಸೂರು – ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿ -766 ರ ಬಳಿ ಇಂದು ಮುಂಜಾನೆ ಟಿಪ್ಪರ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ‌ಕೇರಳ ಮೂಲದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಗುವೂ ‌ಸೇರು ಮೂವರು ಗಾಯಗೊಂಡ ಘಟನೆ ನಡೆದಿದೆ. ಮೃತರನ್ನು ಬಷೀರ್, ನಸೀಮಾ ಬಷೀರ್ ಎಂದು ಗುರುತಿಸಲಾಗಿದೆ. ಮಹಮ್ಮದ್ ಷಪಿ, ಜಸೀರಾ ಮತ್ತು ಮೂರು ವರ್ಷದ ಮಗು ಅಜೈಮ್ ಅನಾನ್‌ಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಗಾಯಾಳುಗಳನ್ನು ಮೈಸೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.

ಟಿಪ್ಪರ್-ಕಾರ್ ಢಿಕ್ಕಿ: ಎರಡು ಸಾವು, ಮೂವರಿಗೆ ಗಾಯ Read More »

ನೇತ್ರಾವತಿ ನದಿಗೆ ಹಾರಿ ವೃದ್ಧೆ ಆತ್ಮಹತ್ಯೆ

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವೃದ್ಧೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸರಪಾಡಿಯಲ್ಲಿ ನಡೆದಿದೆ. ಮೃತರನ್ನು ಅಲ್ಲಿಪಾದೆಯ ಉಜಿರಾಡಿ ನಿವಾಸಿ ಮೀನಾಕ್ಷಿ ಪೂಜಾರಿ (70) ಎಂದು ಗುರುತಿಸಲಾಗಿದೆ. ಸರಪಾಡಿಯ ಅಂಗಡಿಯೊಂದಕ್ಕೆ ಹೋಗಿ ಬಂದ ಮೀನಾಕ್ಷಿ ಅವರು, ಅಲ್ಲಿಂದ ನೇರವಾಗಿ ನೇತ್ರಾವತಿ ನದಿ ಸಮೀಪ ಬಂದಿದ್ದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲ್ಲೇ ಸಮೀಪದಲ್ಲಿ ಮರಳು ತೆಗೆಯುತ್ತಿದ್ದ ಕಾರ್ಮಿಕರು ನದಿಗೆ ಹಾರಿ ಅವರನ್ನು ಬದುಕಿಸಲು ಪ್ರಯತ್ನ ನಡೆಸಿದರಾದರೂ, ಆ ಪ್ರಯತ್ನ ವಿಫಲವಾಗಿದೆ. ಸ್ಥಳಕ್ಕೆ ಬಂಟ್ವಾಳ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

ನೇತ್ರಾವತಿ ನದಿಗೆ ಹಾರಿ ವೃದ್ಧೆ ಆತ್ಮಹತ್ಯೆ Read More »

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಬೆಳ್ಳಿ ರಥ ಸಮರ್ಪಣಾ ಆಮಂತ್ರಣ ಪತ್ರಿಕೆ ಬಿಡುಗಡೆ

ಸುಬ್ರಹ್ಮಣ್ಯ: ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಕಮಿಟಿ ಬಿ ಅಧ್ಯಕ್ಷ ಡಾ. ರೇಣುಕಾ ಪ್ರಾಸಾದ್ ಕೆ. ವಿ. ಮತ್ತು ಮನೆಯವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲಕ್ಕೆ ಸೇವಾ ರೂಪದಲ್ಲಿ ನೀಡುವ ಬೆಳ್ಳಿ ರಥ ಸಮರ್ಪಣಾ ಆಮಂತ್ರಣ ಪತ್ರಿಕೆ ಬಿಡುಗಡೆ ಕೆ.ವಿ.ಜಿ. ಸಮುದಾಯ ಭವನ ಅಮರಶ್ರೀಭಾಗ್‌ನಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ. ರೇಣುಕಾ ಪ್ರಸಾದ್, ಕಾರ್ಯಕ್ರಮದ ರೂಪುರೇಶೆಯ ಬಗ್ಗೆ ತಿಳಿಸಿದರು. ಹಾಗೆಯೇ ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರೀತಿಪೂರ್ವಕವಾಗಿ ಆಮಂತ್ರಿಸಿದರು. ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್‌ ಲಿಬರಲ್ ಎಜ್ಯುಕೇಶನ್‌ನ

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಬೆಳ್ಳಿ ರಥ ಸಮರ್ಪಣಾ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ನ. 10: ರೇಣುಕಾ ಪ್ರಸಾದ್ ಕೆ.ವಿ. ಕುಟುಂಬದಿಂದ ಕುಕ್ಕೆ ಕ್ಷೇತ್ರಕ್ಕೆ ಬೆಳ್ಳಿ ರಥ ಸಮರ್ಪಣೆ

ಸುಬ್ರಹ್ಮಣ್ಯ: ನವೆಂಬರ್ 10 ರಂದು ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ನಮ್ಮ ಕುಟುಂಬದ ವತಿಯಿಂದ ಬೆಳ್ಳಿ ರಥ ಸಮರ್ಪಣಾ ಕಾರ್ಯಕ್ರಮ ನಡೆಯಲಿದೆ ಎಂದು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್‌ ಕಮಿಟಿ ಬಿ ಇದರ ಅಧ್ಯಕ್ಷ, ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ‌. ರೇಣುಕಾ ಪ್ರಸಾದ್ ಕೆ. ವಿ. ತಿಳಿಸಿದ್ದಾರೆ. ಕೆ.ವಿ.ಜಿ. ಡೆಂಟಲ್ ಕಾಲೇಜು ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳ್ಳಿ ರಥ ನಿರ್ಮಾಣ ಕಾರ್ಯ ಕೊನೆಯ ಹಂತದಲ್ಲಿದೆ. ನವೆಂಬರ್ 3 ರಂದು ಕೋಟೇಶ್ವರದಿಂದ ಹೊರಟು ನ. 4

ನ. 10: ರೇಣುಕಾ ಪ್ರಸಾದ್ ಕೆ.ವಿ. ಕುಟುಂಬದಿಂದ ಕುಕ್ಕೆ ಕ್ಷೇತ್ರಕ್ಕೆ ಬೆಳ್ಳಿ ರಥ ಸಮರ್ಪಣೆ Read More »

ಗ್ಯಾಸ್‌ ಗೀಸರ್‌ ಲೀಕ್‌ ಆಗಿ ಅಕ್ಕ-ತಂಗಿ ಸಾವು

ಸ್ನಾನ ಮಾಡುತ್ತಿದ್ದಾಗ ಸಂಭವಿಸಿದ ದಾರುಣ ಘಟನೆ ಮೈಸೂರು : ಸ್ನಾನಕ್ಕೆ ತೆರಳಿದಾಗ ಗ್ಯಾಸ್ ಗೀಸರ್ ಲೀಕ್ ಆಗಿ ಅಕ್ಕ ಮತ್ತು ತಂಗಿ ಉಸಿರುಗಟ್ಟಿ ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಬೆಟ್ಟದಪುರ ಎಂಬಲ್ಲಿ ಸಂಭವಿಸಿದೆ. ಮೃತರನ್ನು ಗುಲ್ಫಾರ್ಮ್ (23) ಮತ್ತು ಸಿಮ್ರಾನ್ ತಾಜ್ (20) ಎಂದು ಗುರುತಿಸಲಾಗಿದೆ. ಅಕ್ಕ-ತಂಗಿಯರಾದ ಗುಲ್ಫಾರ್ಮ್, ಸಿಮ್ರಾನ್ ತಾಜ್ ಇಬ್ಬರೂ ಒಟ್ಟಿಗೆ ಸ್ನಾನ ಮಾಡಲು ಹೋಗಿದ್ದಾರೆ. ಆದರೆ ಸ್ನಾನಕ್ಕೆ ಹೋದವರು ಬಹಳ ಸಮಯವಾದರೂ ಹೊರಗೆ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ತಂದೆ ಅಲ್ತಾಫ್‌

ಗ್ಯಾಸ್‌ ಗೀಸರ್‌ ಲೀಕ್‌ ಆಗಿ ಅಕ್ಕ-ತಂಗಿ ಸಾವು Read More »

error: Content is protected !!
Scroll to Top