ಸುದ್ದಿ

ಸುಳ್ಯ : ಕ್ರಿಪ್ಟೋ ಕರೆನ್ಸಿ ಹೂಡಿಕೆ ನೆಪದಲ್ಲಿ 2.90 ಲ.ರೂ. ವಂಚನೆ

ಸುಳ್ಯ: ಕ್ರಿಪ್ಟೋ ಕರೆನ್ಸಿ ಇನ್‌ವೆಸ್ಟ್‌ಮೆಂಟ್‌ ಆ್ಯಂಡ್‌ ಟ್ರೇಡಿಂಗ್‌ ಹೆಸರಲ್ಲಿ ಸುಳ್ಯದ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಬಗ್ಗೆ ಮಂಗಳೂರು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ್ಯಪೊಂದರ ಮೂಲಕ ಪರಿಚಯವಾದ ಮಹಿಳೆಯ ಮಾತು ನಂಬಿ ಅವರು ಹಣ ಕಳೆದುಉಕೊಂಡಿದ್ದಾರೆ. ಸುಳ್ಯದ ಕೆರೆಮೂಲೆಯ 50 ವರ್ಷದ ವ್ಯಕ್ತಿ ವಂಚನೆಗೊಳಗಾದವರು. ಇವರು ಮೊಬೈಲ್‌ನಲ್ಲಿ ಚಾಟ್‌ಜಿಪಿಟಿ ಮೂಲಕ ಆ್ಯಪ್‌ವೊಂದನ್ನು ಡೌನ್‌ಲೋಡ್‌ ಮಾಡಿಕೊಂಡಿದ್ದು, ಅದರ ಮೂಲಕ ಇಶಾ ಸಿಂಗ್‌ ಎಂಬವರ ಪರಿಚಯವಾಗಿ ಬಳಿಕ ಟೆಲಿಗ್ರಾಂ ಚಾಟ್‌ ಮಾಡಿಕೊಂಡಿದ್ದರು. ಈ ವೇಳೆ ಇಶಾ ಸಿಂಗ್‌ ಕ್ರಿಪ್ಟೋ […]

ಸುಳ್ಯ : ಕ್ರಿಪ್ಟೋ ಕರೆನ್ಸಿ ಹೂಡಿಕೆ ನೆಪದಲ್ಲಿ 2.90 ಲ.ರೂ. ವಂಚನೆ Read More »

ಮಂಗಳೂರಿನಲ್ಲಿ ಪ್ರಥಮ ಬಾರಿಗೆ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಟೂರ್ನಮೆಂಟ್‌

ಅ.27ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಕ್ರೀಡಾಕೂಟಕ್ಕೆ ಚಾಲನೆ ಮಂಗಳೂರು: ಇದೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಅಂತಾರಾರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ “ಮಂಗಳೂರು ಇಂಡಿಯಾ ಇಂಟರ್‌ನ್ಯಾಷನಲ್ ಚಾಲೆಂಜ್ 2025” ಕ್ರೀಡಾಕೂಟ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಟೋಬರ್ 27ರಂದು ನಗರದ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ಚಾಲನೆ ನೀಡಲಿದ್ದಾರೆ. ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಕ್ರೀಡಾಕೂಟ ನಡೆಯುತ್ತಿದ್ದು, ಯಾವುದೇ ಲೋಪವಾಗದಂತೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಜಿಲ್ಲೆಯ ಕ್ರೀಡಾ ಮೂಲಸೌಲಭ್ಯಗಳು ಜಾಗತಿಕ ಮಟ್ಟದಲ್ಲಿ ಗುರುತಿಸುವಂತಾಗಬೇಕು. ಈ ಕ್ರೀಡಾಕೂಟದಲ್ಲಿ ದೇಶ-ವಿದೇಶಗಳಿಂದ ಕ್ರೀಡಾಪಟುಗಳು

ಮಂಗಳೂರಿನಲ್ಲಿ ಪ್ರಥಮ ಬಾರಿಗೆ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಟೂರ್ನಮೆಂಟ್‌ Read More »

ನಮ್ಮ ಮಾತು ಕೇಳದಿದ್ದರೆ ಬೀಳುತ್ತೆ ಕೇಸ್‌ : ಕ್ರಿಮಿನಲ್‌ಗಳಿಗೆ ಕಮಿಷನರ್‌ ಸುಧೀರ್ ರೆಡ್ಡಿ ವಾರ್ನಿಂಗ್

ಪಟಾಕಿ ಅಂಗಡಿ ಮಾಲಕರಿಂದ ಸುಲಿಗೆ ಮಾಡಿದ ಹಿನ್ನೆಲೆಯಲ್ಲಿ ಎಚ್ಚರಿಕೆ ಮಂಗಳೂರು: ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಗಳ ಜೊತೆಗೆ ತಿರುಗಾಡದಂತೆ ಈ ಮೊದಲೇ ಹೇಳಿದ್ದೆ. ರೌಡಿಗಳ ಜೊತೆಗಿದ್ದು ಅಪರಾಧದಲ್ಲಿ ಸಿಲುಕಬೇಡಿ ಎಂದೂ ಹೇಳಿದ್ದೆ. ನೀವು ನಮ್ಮ ಮಾತು ಕೇಳ್ತಾ ಇಲ್ಲ ಎನಿಸುತ್ತೆ. ನಮ್ಮ ಮಾತು ಕೇಳಲ್ಲಾಂದ್ರೆ ನಾವು ಏನು ಮಾಡಬೇಕೆಂದು ಗೊತ್ತಿದೆ. ನಾವು ನಮ್ಮ ಕೆಲಸ ಮಾಡ್ತೀವಿ. ನಿಮ್ಮ ಇಷ್ಟದಂತೆ ಮಾಡ್ಕೊಂಡ್ರೆ ನಮಗೆ ತೊಂದರೆ ಇಲ್ಲ. ಏನು ಬೇಕಾದರೂ ಮಾಡ್ಕೊಂಡು ಹೋಗಿ‌. ಪೊಲೀಸರು ತಮ್ಮ ಕೆಲಸ ಮಾಡುತ್ತಾರೆ ಎಂದು ಮಂಗಳೂರು

ನಮ್ಮ ಮಾತು ಕೇಳದಿದ್ದರೆ ಬೀಳುತ್ತೆ ಕೇಸ್‌ : ಕ್ರಿಮಿನಲ್‌ಗಳಿಗೆ ಕಮಿಷನರ್‌ ಸುಧೀರ್ ರೆಡ್ಡಿ ವಾರ್ನಿಂಗ್ Read More »

ಬೆಲೆ ಇಳಿಕೆಯಿಂದ ಜನ ಸಂಭ್ರಮಿಸಿದರೆ ಕಾಂಗ್ರೆಸ್‌ನವರಿಗೆ ಹೊಟ್ಟೆಯುರಿ : ಬಿಜೆಪಿ ಲೇವಡಿ

ರಾಜ್ಯದಲ್ಲಿ ಬೆಲೆ ಏರಿಸಿರುವುದಷ್ಟೆ ಕಾಂಗ್ರೆಸ್‌ ಸರ್ಕಾರದ ಸಾಧನೆ ಎಂದು ಟೀಕೆ ಮಂಗಳೂರು: ಕೇಂದ್ರ ಸರ್ಕಾರ ಜಿಎಸ್‌ಟಿ ದರ ಇಳಿಕೆ ಮಾಡಿ ಜನತೆಗೆ ನೆಮ್ಮದಿ ನೀಡಿದರೆ, ರಾಜ್ಯ ಸರ್ಕಾರ ಪ್ರತಿಯೊಂದು ವಸ್ತುಗಳ ಬೆಲೆ ಏರಿಸಿ ಜನರ ಬದುಕಿಗೆ ಸಂಕಷ್ಟ ತಂದೊಡ್ಡಿದೆ. ಕೇಂದ್ರದ ಜಿಎಸ್‌ಟಿ ದರ ಇಳಿಕೆ ಕುರಿತು ಶಾಸಕ ವೇದವ್ಯಾಸ ಕಾಮತ್ ಮನೆಮನೆಗೆ ಕರಪತ್ರ ವಿತರಣೆ ಕಾರ್ಯ ಆರಂಭಿಸಿದಾಗ ಕಾಂಗ್ರೆಸ್ ನಾಯಕರಾದ ಐವನ್ ಡಿಸೋಜ ಮತ್ತು ಪದ್ಮರಾಜ್ ಅವರಲ್ಲಿ ಹೊಟ್ಟೆಕಿಚ್ಚು ಶುರುವಾಗಿದೆ. ಜನರಿಗೆ ಸಿಗುತ್ತಿರುವ ಪ್ರಯೋಜನವೇ ಇವರಿಗೆ ಅಸಹ್ಯ

ಬೆಲೆ ಇಳಿಕೆಯಿಂದ ಜನ ಸಂಭ್ರಮಿಸಿದರೆ ಕಾಂಗ್ರೆಸ್‌ನವರಿಗೆ ಹೊಟ್ಟೆಯುರಿ : ಬಿಜೆಪಿ ಲೇವಡಿ Read More »

ಚಿತ್ತಾಪುರ ಪಥ ಸಂಚಲನ ತಿಕ್ಕಾಟ : ಶಾಂತಿ ಸಭೆ ನಡೆಸಲು ಹೈಕೋರ್ಟ್‌ ಸೂಚನೆ

ಆರ್‌ಎಸ್‌ಎಸ್‌ ಸಹಿತ ಹಲವು ಸಂಘಟನೆಗಳಿಂದ ಪಥ ಸಂಚಲನ ನಡೆಸಲು ಅನುಮತಿ ಕೋರಿಕೆ ಬೆಂಗಳೂರು: ಕಲಬುರಗಿಯ ಚಿತ್ತಾಪುರದಲ್ಲಿ ನ.2ರಂದು ಆರ್‌ಎಸ್‌ಎಸ್‌ ಸಹಿತ ಹಲವು ಸಂಘಟನೆಗಳು ಪಥ ಸಂಚಲನ ನಡೆಸಲು ಪಟ್ಟು ಹಿಡಿದಿರುವ ಹಿನ್ನೆಲೆಯಲ್ಲಿ ಶಾಂತ ಸಭೆ ನಡೆಸುವಂತೆ ಜಿಲ್ಲಾಡಳಿತಕ್ಕೆ ಹೈಕೋರ್ಟ್‌ ಸೂಚಿಸಿದೆ. ಅಕ್ಟೋಬರ್ 28ರಂದು ಉದ್ದೇಶಿತ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್)ದ ರೂಟ್ ಮಾರ್ಚ್‌ನ ಆಯೋಜಕರೊಂದಿಗೆ ಶಾಂತಿ ಸಭೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಇದರಿಂದ ಅನುಮತಿ ಸಿಗುವ ನಿರೀಕ್ಷೆಯಲ್ಲಿದ್ದ ಆರ್‌ಎಸ್‌ಎಸ್‌ಗೆ ತುಸು ನಿರಾಶೆಯಾಗಿದೆ. ಪಥ

ಚಿತ್ತಾಪುರ ಪಥ ಸಂಚಲನ ತಿಕ್ಕಾಟ : ಶಾಂತಿ ಸಭೆ ನಡೆಸಲು ಹೈಕೋರ್ಟ್‌ ಸೂಚನೆ Read More »

ಮಂಗಳೂರು-ಬೆಂಗಳೂರು ರೈಲುಗಳ ರದ್ದು ಅವಧಿ ಮತ್ತಷ್ಟು ವಿಸ್ತರಣೆ

ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ಹಳಿ ವಿದ್ಯುದ್ದೀಕರಣ ಹಿನ್ನೆಲೆ ಬೆಂಗಳೂರು: ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ (ಘಾಟ್ ಸೆಕ್ಷನ್) ನಡುವಿನ ರೈಲ್ವೆ ವಿದ್ಯುದ್ದೀಕರಣ ಕಾರ್ಯವು ನಡೆಯುತ್ತಿರುವ ಕಾರಣ ನೈರುತ್ಯ ರೈಲ್ವೆ ಬೆಂಗಳೂರು – ಮಂಗಳೂರು – ಕಾರವಾರದ ನಡುವೆ ಸಂಚರಿಸುವ 6 ಪ್ರಮುಖ ರೈಲುಗಳ ರದ್ದು ಅವಧಿಯನ್ನು ಮತ್ತಷ್ಟು ದಿನ ವಿಸ್ತರಣೆ ಮಾಡಿದೆ. ನೈರುತ್ಯ ರೈಲ್ವೆ ನವೆಂಬರ್ 2ರಿಂದ ಡಿಸೆಂಬರ್ 15 ರವರೆಗೆ ಪ್ರತಿದಿನ ನಾಲ್ಕು ಗಂಟೆಗಳ ಕಾಲ ಲೈನ್ ಬ್ಲಾಕ್ ತೆಗೆದುಕೊಳ್ಳಲಿದೆ. ಈ ಕಾರಣದಿಂದಾಗಿ ಕೆಲವು

ಮಂಗಳೂರು-ಬೆಂಗಳೂರು ರೈಲುಗಳ ರದ್ದು ಅವಧಿ ಮತ್ತಷ್ಟು ವಿಸ್ತರಣೆ Read More »

ಸುಳ್ಳು ನಿರೂಪಣೆ ಸೃಷ್ಟಿಸಿ ಪ್ರಚಾರ ಮಾಡಿದರೆ ಕಠಿಣ ಕ್ರಮ : ಎಸ್‌ಪಿ ವಾರ್ನಿಂಗ್‌

ಜಾನುವಾರು ಸಾಗಿಸುತ್ತಿದ್ದವನ ಕಾಲಿಗೆ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಖಡಕ್‌ ಎಚ್ಚರಿಕೆ ನೀಡಿದ ಎಸ್‌ಪಿ ಪುತ್ತೂರು: ಘಟನೆಯನ್ನು ಎಲ್ಲರೂ ವಿಮರ್ಶೆ ಮಾಡಬಹುದು, ಆದರೆ ಸತ್ಯವನ್ನು ತಿರುಚಿ ಸುಳ್ಳು ನಿರೂಪಣೆ ಸೃಷ್ಟಿಸಿ ಪ್ರಚಾರಕ್ಕೆ ಬಳಸಿಕೊಳ್ಳುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಎಸ್‌ಪಿ ಅರುಣ್‌ ಕುಮಾರ್‌ ಪುತ್ತೂರಿನಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದವನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಪ್ರಕರಣದ ಹಿನ್ನೆಲೆಯಲ್ಲಿ ಎಚ್ಚರಿಸಿದ್ದಾರೆ. ಈಶ್ವರಮಂಗಲದಲ್ಲಿ ಲಾರಿಯೊಂದರಲ್ಲಿ ಅನಧಿಕೃತ ಗೋ ಸಾಗಾಟ ಪ್ರಕರಣದಲ್ಲಿ 12 ಗೋವುಗಳನ್ನು

ಸುಳ್ಳು ನಿರೂಪಣೆ ಸೃಷ್ಟಿಸಿ ಪ್ರಚಾರ ಮಾಡಿದರೆ ಕಠಿಣ ಕ್ರಮ : ಎಸ್‌ಪಿ ವಾರ್ನಿಂಗ್‌ Read More »

ಯಕ್ಷ ಕಲಾವಿದ ಸುಜನಾ ಸುಳ್ಯ ನಿಧನ

ಸುಳ್ಯ: ರಂಗಮನೆ’ ಎಂಬ ಕಲಾ ಕೇಂದ್ರದ ರೂವಾರಿ ಮತ್ತು ನಿರ್ದೇಶಕ ಜೀವನ್‌ರಾಮ್‌ ಸುಳ್ಯ ಅವರ ತಂದೆ, ತೆಂಕುತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ, ಸುಳ್ಯ ರಂಗ ಮನೆಯ ಸುಜನಾ ಸುಳ್ಯ ಅವರು ಇಂದು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಸುಳ್ಯದ ಜಯರಾಮ ನಾವೂರು ಅವರು ಸುಜನಾ ಸುಳ್ಯ ಎಂದೇ ಪ್ರಸಿದ್ಧರಾಗಿದ್ದವರು. ವಯೋಸಹಜ ಅನಾರೋಗ್ಯದ ಹಿನ್ನೆಲೆ ಅವರು ಸುಳ್ಯದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯಗಾರರಾಗಿದ್ದ ಅವರು, ಯಕ್ಷಗಾನ ಮತ್ತು ರಂಗಭೂಮಿ ಸೇರಿದಂತೆ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಂಡಿದ್ದರು.ಶ್ರೀಯುತರ ನಿಧನಕ್ಕೆ

ಯಕ್ಷ ಕಲಾವಿದ ಸುಜನಾ ಸುಳ್ಯ ನಿಧನ Read More »

ಪ್ರದೀಪ್ ಈಶ್ವರ್ ವಿರುದ್ಧ ಪ್ರತಾಪ್ ಸಿಂಹ ಕಿಡಿ: ಹೇಳಿದ್ದೇನು ಗೊತ್ತಾ?

ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ಪ್ರದೀಪ್ ಈಶ್ವರ್ ಟೀಕೆಗಳಿಗೆ ತಿರುಗೇಟು ನೀಡಿರುವ ಅವರು, ಮಗನೆ… ವೈಯಕ್ತಿಕ ವಿಚಾರದ ಬಗ್ಗೆ ಮಾತನಾಡಿದರೆ ಎಚ್ಚರ. ನನ್ನ ತಾಯಿಯನ್ನು ದಗಮನದಲ್ಲಿ ಇಟ್ಟುಕೊಂಡು ನಿಂದನಾತ್ಮಕ ಮಾತನಾಡಿದ್ದೀಯ. ನಿನಗೆ ವಾರ್ನಿಂಗ್ ಕೊಟ್ಟು ಹೇಳುತ್ತಿದ್ದೇನೆ. ಮುಳ್ಳು ಹಂದಿ ಮುಖ ಇರುವ ಕರ್ನಾಟಕದ ಏಕೈಕ ಕಾಮಿಡಿ ಪೀಸು ನಿಮ್ಮಪನಿಗೆ ಮಾತ್ರ ಹುಟ್ಟಿರುವುದು. ಇನ್ಯಾರು ವಾರಸದಾರರು ಅದಕ್ಕೆ ಬರುವುದಿಲ್ಲ. ಆದರೆ ನಮ್ಮಪ್ಪ ಏನಾದರೂ ಅವರ

ಪ್ರದೀಪ್ ಈಶ್ವರ್ ವಿರುದ್ಧ ಪ್ರತಾಪ್ ಸಿಂಹ ಕಿಡಿ: ಹೇಳಿದ್ದೇನು ಗೊತ್ತಾ? Read More »

ಕರ್ನೂಲ್ ಬಸ್ ಬೆಂಕಿಗಾಹುತಿ: ಸಂತ್ರಸ್ತರಿಗೆ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ನವದೆಹಲಿ: ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಖಾಸಗಿ ಬಸ್ ಬೆಂಕಿಗಾಹುತಿಯಾಗಿ ಮೃತಪಟ್ಟವರಿಗೆ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ, ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಿಂದ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ಈ ಕಷ್ಟದ ಸಮಯದಲ್ಲಿ ಸಂತ್ರಸ್ತ ಜನರು ಮತ್ತು ಅವರ ಕುಟುಂಬಗಳೊಂದಿಗೆ ನನ್ನ ಪ್ರಾರ್ಥನೆ ಇದೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಹೇಳಿದ್ದಾರೆ. ಪಿಎಂಎನ್‌ಆರ್‌ಎಫ್‌ನಿಂದ ಮೃತರ ಸಂಬಂಧಿಕರಿಗೆ 2 ಲಕ್ಷ ರೂ.ಗಳ ಪರಿಹಾರವನ್ನು

ಕರ್ನೂಲ್ ಬಸ್ ಬೆಂಕಿಗಾಹುತಿ: ಸಂತ್ರಸ್ತರಿಗೆ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ Read More »

error: Content is protected !!
Scroll to Top