ಸುದ್ದಿ

ಕುದುರೆಮುಖ ಅದಿರು ಕಾರ್ಖಾನೆ ಮುಚ್ಚಲು ಕಾಂಗ್ರೆಸ್‌ ವ್ಯವಸ್ಥಿತ ಷಡ್ಯಂತ್ರ : ಕುಮಾರಸ್ವಾಮಿ

ಬೆಂಗಳೂರು: ನನ್ನ ಮೇಲಿನ ರಾಜಕೀಯ ಹಗೆತನದಿಂದ ಕರ್ನಾಟಕದ ಪ್ರತಿಷ್ಠಿತ ಕೈಗಾರಿಕೆ, ಅಸಂಖ್ಯಾತರಿಗೆ ಉದ್ಯೋಗ ಕಲ್ಪಿಸಿದ್ದ ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆಯ ಮಂಗಳೂರು ಕಾರ್ಖಾನೆಯನ್ನು ಮುಚ್ಚಿಸಲು ರಾಜ್ಯದ ಕಾಂಗ್ರೆಸ್ ಸರಕಾರ ಷಡ್ಯಂತ್ರ ನಡೆಸಿದೆ ಎಂದು ಕೇಂದ್ರದ ಸಚಿವ ಎಚ್. ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.ನಾನು ಕೇಂದ್ರ ಮಂತ್ರಿಯಾಗಿ ಏಳು ತಿಂಗಳಾಯಿತು. ನನ್ನ ಎರಡೂ ಇಲಾಖೆಗಳ ಎಲ್ಲ ಕಾರ್ಖಾನೆ, ಕಂಪನಿಗಳಿಗೆ ಭೇಟಿ ನೀಡಿದ್ದೇನೆ. ನನ್ನ ಮನವಿಗಳನ್ನು ಪ್ರಧಾನಿ ಮೋದಿ ಅವರು ದೊಡ್ಡ ಮನಸ್ಸಿನಿಂದ ಪುರಸ್ಕರಿದ್ದಾರೆ. ಆದರೆ ಕರ್ನಾಟಕಕ್ಕೆ ಇಂತಹದ್ದು […]

ಕುದುರೆಮುಖ ಅದಿರು ಕಾರ್ಖಾನೆ ಮುಚ್ಚಲು ಕಾಂಗ್ರೆಸ್‌ ವ್ಯವಸ್ಥಿತ ಷಡ್ಯಂತ್ರ : ಕುಮಾರಸ್ವಾಮಿ Read More »

ವೀರಕಂಭ: ಮನೆಯ ಅಂಗಳಕ್ಕೆ  ಅಕ್ರಮ ಪ್ರವೇಶ ಮಾಡಿ ದಾಂದಲೆ ನಡೆಸಿ ಯುವಕನ ಮೇಲೆ ಹಲ್ಲೆ | 6 ವರ್ಷದ ಮಗುವಿನ ಮೇಲೆ ಹಲ್ಲೆ ನಡೆಸಿದ ಕಿರಾತಕ ಆರೋಪಿ ಮೋಹನ್ ವಿರುದ್ಧ ಪ್ರಕರಣ ದಾಖಲು

ವೀರಕಂಭ: ಮನೆ ಬಾಗಿಲಿಗೆ ಅಕ್ರಮ ಪ್ರವೇಶ ಮಾಡಿ ಮನೆಯಲ್ಲಿದ್ದ ಸದಸ್ಯರ ಮೇಲೆ ಹಲ್ಲೆ ನಡೆಸಿ  “ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಮೈರ ಎಂಬಲ್ಲಿ ನಡೆದಿದೆ. ವೀರಕಂಬ ಗ್ರಾಮದ ಮೈರ ನಿವಾಸಿ ಯತೀಶ ಎಮ್ ಸಿ ಎಂಬವರು ಜ.31  ರಂದು ರಾತ್ರಿ 8:00 ಗಂಟೆಗೆ  ಅವರ ಮನೆಯ ಅಂಗಳದಲ್ಲಿ ಮಗುವಿನ ಜೊತೆ ಆಟವಾಡುತ್ತಿರುವಾಗ ಮೋಹನ ಗೌಡ ಎಂಬಾತನು ಏಕಾ ಏಕಿಯಾಗಿ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ ಅವರ ಮೇಲೆ ಹಿಗ್ಗಾ ಮುಗ್ಗ ಹಲ್ಲೆ

ವೀರಕಂಭ: ಮನೆಯ ಅಂಗಳಕ್ಕೆ  ಅಕ್ರಮ ಪ್ರವೇಶ ಮಾಡಿ ದಾಂದಲೆ ನಡೆಸಿ ಯುವಕನ ಮೇಲೆ ಹಲ್ಲೆ | 6 ವರ್ಷದ ಮಗುವಿನ ಮೇಲೆ ಹಲ್ಲೆ ನಡೆಸಿದ ಕಿರಾತಕ ಆರೋಪಿ ಮೋಹನ್ ವಿರುದ್ಧ ಪ್ರಕರಣ ದಾಖಲು Read More »

ತಣ್ಣೀರು ಬಾವಿ ಕಡಲ ತೀರದಲ್ಲಿ ಕುಸ್ತಿ ಕಲರವ| ಮಂಗಳೂರಿಗರ ಗಮನ ಸೆಳೆದ ರಾಜ್ಯಮಟ್ಟದ ಬೀಚ್ ಕುಸ್ತಿ ಚಾಂಪಿಯನ್ ಶಿಪ್-2025| ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿ ಚಾಲನೆ

ಮಂಗಳೂರು : ತಣ್ಣೀರು ಬಾವಿ ಕಡಲತೀರದಲ್ಲಿ ಎರಡು ದಿನಗಳ ಕಾಲ ಆಯೋಜಿಸಿದ್ದ 2025ರ ರಾಜ್ಯಮಟ್ಟದ ಬೀಚ್ ಕುಸ್ತಿ ಚಾಂಪಿಯನ್ ಶಿಪ್ ಯಶಸ್ವಿಯಾಗಿ ನೆರವೇರಿತು. ಜಿಲ್ಲೆಯ ತಣ್ಣೀರು ಬಾವಿ ಕಡಲತೀರದಲ್ಲಿ ಮಂಗಳೂರು ಬೀಚ್ ಫೆಸ್ಟಿವಲ್ ನಲ್ಲಿ ಕರ್ನಾಟಕ ಕುಸ್ತಿ ಸಂಘದ ವತಿಯಿಂದ ತಪಸ್ಯ ಫೌಂಡೇಶನ್ ಸಹಕಾರದೊಂದಿಗೆ  ಎರಡು ದಿನಗಳ ಕಾಲ ಆಯೋಜಿಸಿದ್ದ ರಾಜ್ಯಮಟ್ಟದ ಕುಸ್ತಿ ಚಾಂಪಿಯನ್ ಶಿಪ್ -2025 ನಲ್ಲಿ ಮಂಗಳೂರು ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 110 ಕುಸ್ತಿಪಟುಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು, 15ಕ್ಕೂ ಹೆಚ್ಚು

ತಣ್ಣೀರು ಬಾವಿ ಕಡಲ ತೀರದಲ್ಲಿ ಕುಸ್ತಿ ಕಲರವ| ಮಂಗಳೂರಿಗರ ಗಮನ ಸೆಳೆದ ರಾಜ್ಯಮಟ್ಟದ ಬೀಚ್ ಕುಸ್ತಿ ಚಾಂಪಿಯನ್ ಶಿಪ್-2025| ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿ ಚಾಲನೆ Read More »

ಕಲಾಶ್ರೀ ಎ.ಜೆ. ಮತ್ತು ಸುಮಂತ್ ಕೆ.ಎಚ್. ಜೋಡಿಯ ನಿಶ್ಚಿತಾರ್ಥ

ಪುತ್ತೂರು: ಕಲಾಶ್ರೀ ಎಜೆ ಮತ್ತು ಸುಮಂತ್ ಕೆಎಚ್ ಅವರ ನಿಶ್ಚಿತಾರ್ಥ ಫೆ.೨ರಂದು ಅನ್ಯಾಡಿ ಮನೆ, ಕುದ್ಮಾರಿನಲ್ಲಿ ನಡೆಯಿತು. ಕಲಾಶ್ರೀ ಎಜೆ ಹಾಗೂ ಸುಮಂತ್ ಕೆ.ಎಚ್‌ರವರ ಕುಟುಂಬಸ್ಥರು, ಬಂಧುಬಳಗ ಆಗಮಿಸಿ ಶುಭ ಹಾರೈಸಿದರು.

ಕಲಾಶ್ರೀ ಎ.ಜೆ. ಮತ್ತು ಸುಮಂತ್ ಕೆ.ಎಚ್. ಜೋಡಿಯ ನಿಶ್ಚಿತಾರ್ಥ Read More »

ಗ್ಯಾರಂಟಿಗಳಿಂದಾಗಿ ಅನುದಾನ ಸಿಗುತ್ತಿಲ್ಲ : ರಾಜೀನಾಮೆ ಕಾರಣ ಬಯಲು ಮಾಡಿದ ಕಾಂಗ್ರೆಸ್‌ ಶಾಸಕ ಬಿ.ಆರ್‌ ಪಾಟೀಲ್‌

ಮುಖ್ಯಮಂತ್ರಿ ರಾಜಕೀಯ ಸಲಹೆಗಾರ ಹುದ್ದೆಗೆ ದಿಢೀರ್‌ ರಾಜೀನಾಮೆ ನೀಡಿದ್ದ ಪಾಟೀಲ್‌ ಬೆಂಗಳೂರು: ಮುಖ್ಯಮಂತ್ರಿಯ ರಾಜಕೀಯ ಸಲಹೆಗಾರ ಹುದ್ದೆಗೆ ನಿನ್ನೆ ದಿಢೀರ್‌ ಎಂದು ರಾಜೀನಾಮೆ ನೀಡಿ ಅಚ್ಚರಿ ಹುಟ್ಟಿಸಿದ್ದ ಶಾಸಕ ಬಿ.ಆರ್‌. ಪಾಟೀಲ್‌ ಇಂದು ತನ್ನ ನಡೆಯ ಹಿಂದಿನ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮಮದವರ ಜೊತೆ ಮಾತನಾಡಿದ ಪಾಟೀಲ್‌ ಗ್ಯಾರಂಟಿ ಯೋಜನೆಗಳಿಂದ ಕ್ಷೇತ್ರಗಳಿಗೆ ಅನುದಾನ ಸಿಗುತ್ತಿಲ್ಲ. ಸುಮ್ಮನೆ ರಾಜೀನಾಮೆ ಕೊಟ್ಟಿಲ್ಲ. ಕೆಲವು ಸಮಸ್ಯೆಗಳಿವೆ ಎಂದು ನೇರವಾಗಿ ವಾಗ್ದಾಳಿ ತನ್ನ ಸರಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ

ಗ್ಯಾರಂಟಿಗಳಿಂದಾಗಿ ಅನುದಾನ ಸಿಗುತ್ತಿಲ್ಲ : ರಾಜೀನಾಮೆ ಕಾರಣ ಬಯಲು ಮಾಡಿದ ಕಾಂಗ್ರೆಸ್‌ ಶಾಸಕ ಬಿ.ಆರ್‌ ಪಾಟೀಲ್‌ Read More »

ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

ಕೊನೇ ಕ್ಷಣದಲ್ಲಿ ಕಾರ್ಯಕ್ರಮಗಳೆಲ್ಲ ರದ್ದು ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಅನಾರೋಗ್ಯದ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಇಂದಿನ ಅವರ ಎಲ್ಲ ಕಾರ್ಯಕ್ರಮಗಳು ರದ್ದಾಗಿವೆ. ಮಂಡಿ ನೋವು ತೀವ್ರಗೊಂಡ ಕಾರಣ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ಆದರೆ ಈ ಕುರಿತು ಇನ್ನೂ ಅಧಿಕೃತ ಪ್ರಕಟಣೆ ಬಂದಿಲ್ಲ. ಇಂದು ನಿಗದಿಯಾಗಿದ್ದ ಚಿಕ್ಕಬಳ್ಳಾಪುರ ಮತ್ತು ರಾಮನಗರ ಪ್ರವಾಸ ರದ್ದಾಗಿದೆ. ಚಿಕ್ಕಬಳ್ಳಾಪುರದ ಹೊಸೂರು ಗ್ರಾಮಕ್ಕೆ ಇಂದು ಸಿದ್ದರಾಮಯ್ಯ ಭೇಟಿ ನೀಡಬೇಕಿತ್ತು. ಅಲ್ಲಿ ಬಿಗಿ ಭದ್ರತೆ ಸಹಿತ ಎಲ್ಲ ವ್ಯವಸ್ಥೆ ಮಾಡಲಾಗಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು Read More »

ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದ ಆರೋಪಿಗೆ ಗುಂಡೇಟು

ಮಂಗಳೂರು : ಬ್ಯಾಂಕ್ ದರೋಡೆ ಪ್ರಕರಣದ ಪ್ರಮುಖ ಆರೋಪಿ ಮುಂಬಯಿ ಧಾರಾವಿಯ ಮುರುಗನ್ ತೇವರ್ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಕೋಟೆಕಾರು ಅಜ್ಜಿನಡ್ಕ ಬಳಿ ನಿನ್ನೆ ಮಧ್ಯಾಹ್ನ ನಡೆದಿದೆ. ಪೊಲೀಸರು ಸ್ಥಳ ಮಹಜರು ನಡೆಸಲು ಆರೋಪಿ ಮುರುಗಂಡಿಯನ್ನು ಕೋಟೆಕಾರಿಗೆ ಕರೆದುಕೊಂಡು ಬಂದಿದ್ದಾಗ ಆತ ತಪ್ಪಿಸಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಶೂಟ್ ಮಾಡಿದ್ದಾರೆ. ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಕೆ.ಸಿ.ರೋಡ್ ಶಾಖೆಯಲ್ಲಿ ಜ.೧೭ರಂದು ಹಾಡಹಗಲೇ ಬ್ಯಾಂಕ್ ದರೋಡೆ ನಡೆಸಿದ ಆರೋಪಿಗಳನ್ನು. ಕೆಲವೇ ದಿನದಲ್ಲಿ

ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದ ಆರೋಪಿಗೆ ಗುಂಡೇಟು Read More »

ರಾಷ್ಟ್ರಪತಿಗೆ ಅವಮಾನ : ಸೋನಿಯಾ ಗಾಂಧಿ ವಿರುದ್ಧ ದೂರು

ಹೊಸದಿಲ್ಲಿ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಬಡಪಾಯಿ ಮಹಿಳೆ ಎಂದು ಕರೆದು ಹೀಯಾಳಿಸಿರುವ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಬಿಹಾರದಲ್ಲಿ ದೂರು ದಾಖಲಾಗಿದೆ. ಬಿಹಾರದ ಮುಜಾಫರ್‌ನಗರದ ವಕೀಲ ಸುಧೀರ್‌ ಓಜಾ ಎಂಬವರು ದೇಶದ ಪರಮೋಚ್ಛ ಸ್ಥಾನದಲ್ಲಿರುವ ವ್ಯಕ್ತಿಯ ಬಗ್ಗೆ ಕೀಳು ಪದಗಳಲ್ಲಿ ಟೀಕೆ ಮಾಡಿದ ಸೋನಿಯಾ ಗಾಂಧಿ ವಿರುದ್ಧ ಎಫ್‌ಐಆರ್‌ ದಾಖಲಿಸಿ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಬೇಕೆಂದು ಆಗ್ರಹಿಸಿ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದಾರೆ. ದೂರಿನಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಸಂಸದೆ

ರಾಷ್ಟ್ರಪತಿಗೆ ಅವಮಾನ : ಸೋನಿಯಾ ಗಾಂಧಿ ವಿರುದ್ಧ ದೂರು Read More »

ಪ್ರಾಣಿಬಲಿ ಪ್ರಕರಣಕ್ಕೆ ಟ್ವಿಸ್ಟ್‌ : ನನ್ನ ಮೇಲೇಯೇ ವಾಮಾಚಾರ ಎಂದು ಆರೋಪಿಸಿದ ಸ್ನೇಹಮಯಿ ಕೃಷ್ಣ

ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಬಲಿಗರ ವಿರುದ್ಧ ದೂರು ಮಂಗಳೂರು: ರಾಮ ಸೇನೆಯ ಸ್ಥಾಪಕ ಪ್ರಸಾದ್‌ ಅತ್ತಾವರ ಮುಡಾ ಕೇಸಿನ ದೂರುದಾರ ಸ್ನೇಹಮಯಿ ಕೃಷ್ಣ ಅವರ ಹೋರಾಟಕ್ಕೆ ಬಲ ತುಂಬಲು ಪ್ರಾಣಿಬಲಿ ಕೊಟ್ಟು ರಕ್ತಾಭಿಷೇಕ ಮಾಡಿಸಿದ್ದಾರೆ ಎಂಬ ಆರೋಪಕ್ಕೆ ಈಗ ಹೊಸದೊಂದು ಟ್ವಿಸ್ಟ್‌ ಸಿಕ್ಕಿದೆ. ಈಗ ಸ್ವತಹ ಸ್ನೇಹಮಯಿ ಕೃಷ್ಣ ಅವರೇ ನನ್ನ ಮೇಲೆ ವಾಮಾಚಾರ ಹಾಗೂ ವಶೀಕರಣ ಪ್ರಯೋಗ ನಡೆಯುತ್ತಿದೆ ಎಂದು ಆರೋಪಿಸಿದ್ದು, ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಬೆಂಬಲಿಗರ ವಿರುದ್ಧ ದೂರು ದಾಖಲಿಸಿದ್ದಾರೆ. ಮಂಗಳೂರಿನಲ್ಲಿ ಇತ್ತೀಚೆಗೆ

ಪ್ರಾಣಿಬಲಿ ಪ್ರಕರಣಕ್ಕೆ ಟ್ವಿಸ್ಟ್‌ : ನನ್ನ ಮೇಲೇಯೇ ವಾಮಾಚಾರ ಎಂದು ಆರೋಪಿಸಿದ ಸ್ನೇಹಮಯಿ ಕೃಷ್ಣ Read More »

18 ಪಾಕ್‌ ಸೈನಿಕರನ್ನು ಸಾಯಿಸಿದ ಬಂಡುಕೋರರು

ಕಾರ್ಯಾಚರಣೆಯಲ್ಲಿ 23 ಬಂಡುಕೋರರ ಹತ್ಯೆ ಇಸ್ಲಾಮಾಬಾದ್‌: ಬಲೂಚಿಸ್ಥಾನದ ವಾಯುವ್ಯ ಭಾಗದಲ್ಲಿ ಪ್ರತ್ಯೇಕತಾವಾದಿ ದಂಗೆಕೋರರೊಂದಿಗಿನ ಘರ್ಷಣೆಯಲ್ಲಿ ಪಾಕಿಸ್ಥಾನದ 18 ಸೈನಿಕರು ಸಾವಿಗೀಡಾಗಿದ್ದಾರೆ. ಇದೇ ವೇಳೆ 23 ಬಂಡುಕೋರರನ್ನು ಸೈನಿಕರು ಕೊಂದಿದ್ದಾರೆ. ಅಫ್ಘಾನಿಸ್ಥಾನದ ಗಡಿಯಲ್ಲಿರುವ ಕಲಾತ್‌ನಲ್ಲಿ ಪ್ರಮುಖ ಹೆದ್ದಾರಿಯಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿದ ದಂಗೆಕೋರರ ವಿರುದ್ಧ ನಡೆಸಿದ ಗುಂಡಿನ ದಾಳಿಯಲ್ಲಿ ಸೈನಿಕರು ಪಾಕ್‌ ಸೈನಿಕರು ಮೃತಪಟ್ಟಿದ್ದಾರೆ ಎಂದು ಸೇನೆ ತಿಳಿಸಿದೆ. ಶನಿವಾರ ಬೆಳಗ್ಗಿನಿಂದ ತೊಡಗಿ ರಾತ್ರಿಯಿಡೀ ಬಂಡುಕೋರರ ವಿರುದ್ಧ ನಡೆದ ಹೋರಾಟದ ನಂತರ ಭದ್ರತಾ ಪಡೆಗಳು ರಸ್ತೆ ತಡೆಯನ್ನು ತೆರವುಗೊಳಿಸುವಲ್ಲಿ ಯಶಸ್ವಿಯಾಗಿವೆ.

18 ಪಾಕ್‌ ಸೈನಿಕರನ್ನು ಸಾಯಿಸಿದ ಬಂಡುಕೋರರು Read More »

error: Content is protected !!
Scroll to Top