ಸುದ್ದಿ

ಅಕ್ರಮ ವಲಸಿಗರ ದೋಣಿ ಮುಳುಗಡೆ : 71 ಮಂದಿ ನಾಪತ್ತೆ

ಲಿಬಿಯಾದಿಂದ ಅಕ್ರಮವಾಗಿ ಯುರೋಪ್‌ಗೆ ಹೋಗಲು ಯತ್ನಿಸಿದಾಗ ದುರಂತ ರೋಮ್ : ಸಮುದ್ರ ಮಾರ್ಗದ ಮೂಲಕ ಯುರೋಪ್ ತಲುಪಲು ಯತ್ನಿಸುತ್ತಿದ್ದ 100ಕ್ಕೂ ಅಧಿಕ ಅಕ್ರಮ ವಲಸಿಗರ ದೋಣಿ ಮುಳುಗಿದ ದುರಂತ ಘಟನೆ ಇಟಲಿ ಕರಾವಳಿಯಲ್ಲಿ ಸಂಭವಿಸಿದೆ. ದುರಂತದಲ್ಲಿ 71 ವಲಸಿಗರು ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಆತಂಕ ಎದುರಾಗಿದೆ. ಲಿಬಿಯಾದಿಂದ ಯುರೋಪ್‌ಗೆ ಹೊರಟಿದ್ದ ಈ ಬೋಟ್‌ನಲ್ಲಿ ಒಟ್ಟು 105 ಜನರಿದ್ದರು ಎಂದು ಬದುಕುಳಿದವರು ತಿಳಿಸಿದ್ದಾರೆ. ಈಸ್ಟರ್ ರಜಾದಿನಗಳ ಸಂದರ್ಭದಲ್ಲಿ ಈ ಪ್ರಯಾಣವನ್ನು ಮಾಡಲಾಗಿತ್ತು. ಮೆಡಿಟರೇನಿಯನ್ ಸಮುದ್ರದ ಭೀಕರ ಅಲೆಗಳು […]

ಅಕ್ರಮ ವಲಸಿಗರ ದೋಣಿ ಮುಳುಗಡೆ : 71 ಮಂದಿ ನಾಪತ್ತೆ Read More »

ನಾಲ್ಕು ದಿನಗಳಿಂದ ಕಾಡಿನಲ್ಲಿ ನಾಪತ್ತೆಯಾಗಿದ್ದ ಯುವತಿ ಪತ್ತೆ

ಟ್ರೆಕ್ಕಿಂಗ್‌ಗೆ ಹೋಗಿ ದಾರಿ ತಪ್ಪಿ ಕಾಡಿನ ಪಾಳು ಬಂಗಲೆಯಲ್ಲಿದ್ದ ಕೇರಳದ ಯುವತಿ ಮಡಿಕೇರಿ: ತಡಿಯಂಡಮೋಳ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಎಂಬಾಕೆ ನಾಲ್ಕು ದಿನಗಳ ಸತತ ಹುಡುಕಾಟದ ಬಳಿಕ ಕೊ‌ನೆಗೂ ಪತ್ತೆ ಆಗಿದ್ದಾರೆ. ಆ ಮೂಲಕ ನಾಲ್ಕು ದಿನಗಳ‌ ಕಾರ್ಯಾಚರಣೆ ಯಶಸ್ವಿ ಆಗಿದ್ದು, ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ. ರಸ್ತೆ ಅರಿವಾಗದೆ ಪಾಳುಬಿದ್ದ ಬಂಗಲೆಯೊಂದರಲ್ಲಿ ಶರಣ್ಯ ಉಳಿದುಕೊಂಡಿದ್ದರು. ಸ್ಥಳೀಯ ಕುಡಿಯ ಯುವಕರು ಅವರನ್ನು ರಕ್ಷಿಸಿ ಕಾಡಿನಿಂದ

ನಾಲ್ಕು ದಿನಗಳಿಂದ ಕಾಡಿನಲ್ಲಿ ನಾಪತ್ತೆಯಾಗಿದ್ದ ಯುವತಿ ಪತ್ತೆ Read More »

ಚುನಾವಣೆಗೆ ಸ್ಪರ್ಧಿಸದಿರುವುದು ನನ್ನದೇ ನಿರ್ಧಾರ : ಅಣ್ಣಾಮಲೈ ಸ್ಪಷ್ಟನೆ

ಟಿಕೆಟ್‌ ನಿರಾಕರಣೆ ಬರೀ ಗುಲ್ಲು ಎಂದ ಮಾಜಿ ಅಧ್ಯಕ್ಷ ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್‌ ನಿರಾಕರಿಸಿದೆ ಎಂದು ಗುಲ್ಲೆಬ್ಬಿಸಿರುವ ಕುರಿತು ಸ್ಪಷ್ಟೀಕರಣ ನೀಡಿರುವ ತಮಿಳುನಾಡು ಬಿಜೆಪಿ ಘಟಕದ ಮಾಜಿ ಮುಖ್ಯಸ್ಥ ಅಣ್ಣಾಮಲೈಸ್ಪರ್ಧಿಸದಿರುವುದು ನನ್ನದೇ ನಿರ್ಧಾರ ಎಂದಿದ್ದಾರೆ. ಚೆನ್ನೈನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಾನು ನಿರ್ಧರಿಸಿದ್ದೇನೆ. ಪಕ್ಷದ ಕೋರ್ ಕಮಿಟಿಗೆ ಈ ನಿರ್ಧಾರವನ್ನ ಮುಂಚಿತವಾಗಿ ತಿಳಿಸಿದ್ದೇನೆ. ಯಾವುದೇ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಲಿಖಿತವಾಗಿ ಕೊಟ್ಟಿದ್ದೇನೆ. ಇದಿಷ್ಟಕ್ಕೇ ನನಗೆ ಟಿಕೆಟ್‌

ಚುನಾವಣೆಗೆ ಸ್ಪರ್ಧಿಸದಿರುವುದು ನನ್ನದೇ ನಿರ್ಧಾರ : ಅಣ್ಣಾಮಲೈ ಸ್ಪಷ್ಟನೆ Read More »

ಏ.16ರಿಂದ 19ರವರೆಗೆ ತಿಂಗಳಾಡಿಯಲ್ಲಿ ಸುಬ್ಬಜ್ಜನ ಮನೆಯಲ್ಲಿ ವಸತಿಯುತ ಬೇಸಿಗೆ ಶಿಬಿರ

ಮಕ್ಕಳಿಗೆ ಪ್ರಕೃತಿ ಒಡಲಿನ ಅಗಾಧತೆಯನ್ನು ತಿಳಿಸುವ ಅರ್ಥಪೂರ್ಣ ಶಿಬಿರ ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆ, ಪುತ್ತೂರು ತಾಲೂಕಿನ ತಿಂಗಳಾಡಿ ಎಂಬಲ್ಲಿ ನಡೆಯುವ ರಾಜ್ಯಮಟ್ಟದ ‘ಸುಬ್ಬಜ್ಜನ ಮನೆಯಲ್ಲಿ ವಸತಿಯುತ ಬೇಸಿಗೆ ಶಿಬಿರ’ವನ್ನು ಈ ಬಾರಿ ಏಪ್ರಿಲ್ 16ರಿಂದ 19ರವರೆಗೆ ನಡೆಸಲಾಗುತ್ತಿದೆ. ಕಾಡಿನ ರಹಸ್ಯ ತಿಳಿಯುವುದು, ಟ್ರೆಷರ್ ಹಂಟ್, ವರ್ಲಿ ಆರ್ಟ್, ನೀರಾಟ, ಗೋವು ಮೇವು, ಗೋ ಪೂಜೆ, ನಿತ್ಯ ಪೂಜೆ, ರಾಮಾಯಣ ದೃಶ್ಯ ಕಾವ್ಯ, ಭಗವದ್ ಗೀತೆ ಜೊತೆಗೆ ಜೀವನ ಕೌಶಲಗಳನ್ನು ತಿಳಿಸುವ ಹತ್ತು ಹಲವು ಕುತೂಹಲಕಾರಿ

ಏ.16ರಿಂದ 19ರವರೆಗೆ ತಿಂಗಳಾಡಿಯಲ್ಲಿ ಸುಬ್ಬಜ್ಜನ ಮನೆಯಲ್ಲಿ ವಸತಿಯುತ ಬೇಸಿಗೆ ಶಿಬಿರ Read More »

ಲವ್‌ ಜಿಹಾದ್‌ ಆರೋಪಿ ಸಮೀರ್‌ ವಿರುದ್ಧ ರೇಪ್‌ ಕೇಸ್‌ ದಾಖಲು

ಜಿಮ್‌ ಟ್ರೈನಿಂಗ್‌ಗೆ ಬಂದ ಯುವತಿಯರಿಗೆ ಲವ್‌ ಜಿಹಾದ್‌ ಬಲೆ ಬೆಂಗಳೂರು : ಹುಬ್ಬಳ್ಳಿಯ ಲವ್ ಜಿಹಾದ್ ಕೇಸ್‌ ಆರೋಪಿ ಜಿಮ್ ಟ್ರೈನರ್‌ ಸಮೀರ್ ವಿರುದ್ಧ ಸಂತ್ರಸ್ತ ಯುವತಿ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ್ದಾರೆ. ಸಂತ್ರಸ್ತ ಯುವತಿ ಶುಕ್ರವಾರ ರಾತ್ರಿ ಹುಬ್ಬಳ್ಳಿ ವಿದ್ಯಾನಗರ ಠಾಣೆಯಲ್ಲಿ ಸಮೀರ್ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ್ದಾರೆ. ನಾನು ಜಿಮ್‌ಗೆ ಹೋಗುವಾಗ ಸಮೀರ್ ಪರಿಚಯವಾಗಿದ್ದ. 2025ರ ಆ.16ರಂದು ನನ್ನನ್ನು ಮನೆಗೆ ಕರೆಸಿಕೊಂಡಿದ್ದ. ಆ ವೇಳೆ ಜ್ಯೂಸ್‌ನಲ್ಲಿ ಅಮಲು ಬರುವ ಪದಾರ್ಥ ಹಾಕಿ ನನಗೆ

ಲವ್‌ ಜಿಹಾದ್‌ ಆರೋಪಿ ಸಮೀರ್‌ ವಿರುದ್ಧ ರೇಪ್‌ ಕೇಸ್‌ ದಾಖಲು Read More »

ಬಾವಿಗೆ ಬಿದ್ದ ಕಾರು : 6 ಮಕ್ಕಳ ಸಹಿತ ಒಂಬತ್ತು ಮಂದಿ ಸಾವು

ಔತಣಕೂಟದಿಂದ ಹಿಂದಿರುಗುತ್ತಿದ್ದಾಗ ಸಂಭವಿಸಿದ ದುರಂತ ನಾಶಿಕ್‌: ಕಾರು ತೆರೆದ ಬಾವಿಗೆ ಬಿದ್ದು 6 ಮಕ್ಕಳ ಸಹಿತ 9 ಮಂದಿ ಸಾವನ್ನಪ್ಪಿದ ಭೀಕರ ಅಪಘಾತ ಶುಕ್ರವಾರ ರಾತ್ರಿ ಮಹಾರಾಷ್ಟ್ರದ ನಾಶಿಕ್‌ನಲ್ಲಿ ಸಂಭವಿಸಿದೆ. ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ನಾಶಿಕ್‌ ಜಿಲ್ಲೆಯ ದಿಂಡೋರಿ ಪಟ್ಟಣದ ಶಿವಾಜಿ ನಗರದಲ್ಲಿ ಈ ದಾರುಣ ಅಪಘಾತ ಸಂಭವಿಸಿದೆ. ಔತಣಕೂಟದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ವಿಶಾಲವಾದ ತೆರೆದ ಬಾವಿಗೆ ಬಿದ್ದಿದೆ. ಮೃತರೆಲ್ಲ ಒಂದೇ ಕುಟುಂಬದ ಸದಸ್ಯರು ಎನ್ನಲಾಗಿದೆ. ಮಕ್ಕಳಲ್ಲಿ ಐವರು

ಬಾವಿಗೆ ಬಿದ್ದ ಕಾರು : 6 ಮಕ್ಕಳ ಸಹಿತ ಒಂಬತ್ತು ಮಂದಿ ಸಾವು Read More »

ಸಂಸದ ಶಶಿ ತರೂರ್‌ ಕಾರನ್ನು ತಡೆದು ಗನ್‌ಮ್ಯಾನ್‌ ಮೇಲೆ ಹಲ್ಲೆ

ಕಾಂಗ್ರೆಸ್‌ ಪರ ಚುನಾವಣೆ ಪ್ರಚಾರ ನಡೆಸುತ್ತಿದ್ದ ತರೂರ್‌ಗೆ ತಂಡದಿಂದ ತಡೆ ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯ ಹಿನ್ನೆಲೆ ಮಲಪ್ಪುರಂನಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಅವರ ಕಾರನ್ನು ತಡೆದು ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಈ ವೇಳೆ ಮಧ್ಯಪ್ರವೇಶಿಸಿದ ಶಶಿ ತರೂರ್‌ ಅವರ ಗನ್‌ಮ್ಯಾನ್‌ ಮೇಲೂ ಹಲ್ಲೆ ನಡೆಸಲಾಗಿದೆ. ಕೇರಳ ವಿಧಾನಸಭಾ ಚುನಾವಣೆ ಹಿನ್ನೆಲೆ ಮಲಪ್ಪುರಂ ಜಿಲ್ಲೆಯ ವಂಡೂರಿನ ಚೆಲ್ಲಿತೋಡೆಯಲ್ಲಿ ಪ್ರಚಾರಕ್ಕೆ ಆಗಮಿಸಿದ್ದ ಸಂಜೆ 7 ಗಂಟೆ ಸುಮಾರಿಗೆ ಘಟನೆ ನಡೆದಿದೆ.

ಸಂಸದ ಶಶಿ ತರೂರ್‌ ಕಾರನ್ನು ತಡೆದು ಗನ್‌ಮ್ಯಾನ್‌ ಮೇಲೆ ಹಲ್ಲೆ Read More »

ಆರ್‌ಎಸ್‌ಎಸ್‌ ಶಿಬಿರಗಳ ಮೇಲೆ ದಾಳಿ : ಪಾಕಿಸ್ಥಾನದ ಬೆದರಿಕೆಗೆ ಆಕ್ರೋಶ

ಆರ್‌ಎಸ್‌ಎಸ್ ಶಿಬಿರಗಳ ಮೇಲೆ ದಾಳಿ ಮಾಡುತ್ತೇವೆ ಎಂದ ಪಾಕ್‌ ಸಚಿವ ನವದೆಹಲಿ: ಪಾಕಿಸ್ತಾನ ಮತ್ತು ಭಾರತದ ನಡುವೆ ಮತ್ತೆ ಉದ್ವಿಗ್ನತೆ ಕಾಣಿಸಿಕೊಂಡಿದೆ. ಗಡಿ ಉದ್ವಿಗ್ನತೆಯ ನಡುವೆ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಆರ್‌ಎಸ್‌ಎಸ್‌ ಶಿಬಿರಗಳ ಮೇಲೆ ದಾಳಿ ಮಾಡುವ ಕುರಿತು ಭಾರತಕ್ಕೆ ಬಹಿರಂಗ ಬೆದರಿಕೆಯೊಡ್ಡಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂದಿನ ಬಾರಿ ಉಭಯ ರಾಷ್ಟ್ರಗಳ ನಡುವೆ ಸಂಘರ್ಷ ನಡೆದರೆ ಅದು ಕೇವಲ 200-250 ಕಿ.ಮೀ.ಗೆ ಸೀಮಿತವಾಗಿರುವುದಿಲ್ಲ. ನಾವು ಭಾರತದ ಗಡಿಯೊಳಗೆ ನುಗ್ಗಿ, ಅವರ ಮನೆಗಳೊಳಗೆ ಹಾಗೂ

ಆರ್‌ಎಸ್‌ಎಸ್‌ ಶಿಬಿರಗಳ ಮೇಲೆ ದಾಳಿ : ಪಾಕಿಸ್ಥಾನದ ಬೆದರಿಕೆಗೆ ಆಕ್ರೋಶ Read More »

ಜಿಮ್‌ ಟ್ರೈನರ್‌ನಿಂದ ಹಿಂದೂ ಯುವತಿಯರ ಲವ್‌ ಜಿಹಾದ್‌ : ಹುಬ್ಬಳ್ಳಿ ಪ್ರಕ್ಷುಬ್ಧ

ಜಿಮ್‌ಗೆ ಬರುತ್ತಿದ್ದ ಯುವತಿಯರನ್ನು ಬಲೆಗೆ ಬೀಳಿಸಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಆರೋಪ ಬೆಂಗಳೂರು: ಹುಬ್ಬಳ್ಳಿಯಲ್ಲಿ ಮುಸ್ಲಿಂ ಜಿಮ್ ಟ್ರೈನರ್‌ ಹಿಂದೂ ಯುವತಿಯರನ್ನು ಲವ್ ಜಿಹಾದ್ ಬಲೆಗೆ ಕೆಡವಿ ಕೆಡಿಸಿದ ಪ್ರಕರಣ ರಾಜ್ಯಾದ್ಯಂತ ಆಕ್ರೋಶದ ಕಿಡಿಯೆಬ್ಬಿಸಿದೆ. ಈ ಸಂಬಂಧ ಎರಡು ಕುಟುಂಬಗಳ ನಡುವೆ ಗಲಾಟೆ ಆಗಿದ್ದು, ಶ್ರೀರಾಮಸೇನೆ ಇದರಲ್ಲಿ ಎಂಟ್ರಿಯಾಗಿದೆ. ಎರಡು ಕುಟುಂಬಗಳು ಆರೋಪ-ಪ್ರತ್ಯಾರೋಪ ಮಾಡಿದ್ದಾರೆ. ಕುಟುಂಬಗಳಿಂದ ದೂರು ಪಡೆದು ತನಿಖೆ ಮಾಡುತ್ತಿದ್ದಾರೆ. ಮುಸ್ಲಿಂ ಜಿಮ್ ಟ್ರೈನರ್ ತನ್ನ ಜಿಮ್‌ಗೆ ಬರುತ್ತಿದ್ದ ಹಿಂದೂ ಯುವತಿಯರನ್ನು ಲವ್ ಜಿಹಾದ್ ಬಲೆಗೆ ಹಾಕಿಕೊಳ್ಳುತ್ತಿದ್ದ.

ಜಿಮ್‌ ಟ್ರೈನರ್‌ನಿಂದ ಹಿಂದೂ ಯುವತಿಯರ ಲವ್‌ ಜಿಹಾದ್‌ : ಹುಬ್ಬಳ್ಳಿ ಪ್ರಕ್ಷುಬ್ಧ Read More »

ದಿವಾಳಿಯಾಗಿರುವ ಪಾಕಿಸ್ತಾನದಲ್ಲಿ ಸಂಪನ್ಮೂಲ ಸಂಗ್ರಹಕ್ಕೆ ಸಗಣಿ ತೆರಿಗೆ!

ಜಾನುವಾರು ಸಾಕುವವರಿಗೆ ಹೊಸ ತೆರಿಗೆ ಹಾಕಲು ಮುಂದಾದ ಸರ್ಕಾರ ಇಸ್ಲಾಮಾಬಾದ್: ಪಾಕಿಸ್ತಾನ ಇದೀಗ ಹೊಸ ತೆರಿಗೆಯೊಂದನ್ನು ಜಾರಿಗೆ ತಂದಿದೆ. ಈ ಮೂಲಕ ಸ್ವಚ್ಛತೆಯ ದೃಷ್ಟಿಯಿಂದ ಎಮ್ಮೆ ಸಾಕಿದವರಿಗೆ ಇನ್ಮುಂದೆ ಸಗಣಿ ತೆರಿಗೆ ವಿಧಿಸಲಿದೆ. ಇಷ್ಟು ಕಾಲ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸರ್ಕಾರ ಹಣಕ್ಕಾಗಿ ವಿದೇಶಗಳು ಹಾಗೂ ಅಂತಾರಾಷ್ಟ್ರೀಯ ಸಂಸ್ಥೆಗಳ ಬಾಗಿಲು ಬಡಿಯುತ್ತಿತ್ತು. ಆದರೆ ಇದೀಗ ತನ್ನ ಜನರ ಜೇಬಿಗೆ ಕತ್ತರಿ ಹಾಕಿ, ಬೊಕ್ಕಸ ತುಂಬಿಸಿಕೊಳ್ಳಲು ಮುಂದಾಗಿದೆ. ಇದರ ಭಾಗವಾಗಿ ಎಮ್ಮೆಗಳನ್ನು ಸಾಕಿದವರಿಂದ `ಸೆಗಣಿ ತೆರಿಗೆ ವಸೂಲಿ’ ಮಾಡುವುದಾಗಿ

ದಿವಾಳಿಯಾಗಿರುವ ಪಾಕಿಸ್ತಾನದಲ್ಲಿ ಸಂಪನ್ಮೂಲ ಸಂಗ್ರಹಕ್ಕೆ ಸಗಣಿ ತೆರಿಗೆ! Read More »

error: Content is protected !!
Scroll to Top