ಸುದ್ದಿ

ಮಂಗಳೂರು: ಅಕ್ರಮ ಮದ್ಯ ತಯಾರಿ ಘಟಕ ಪತ್ತೆ; ಇಬ್ಬರ ಬಂಧನ

ಗೋವಾ ಮದ್ಯ ತಯಾರಿಸುತ್ತಿದ್ದ ಆರೋಪಿಗಳು ಮಂಗಳೂರು: ತೊಕ್ಕೊಟ್ಟಿನ ದೇರಳಕಟ್ಟೆ ಸಮೀಪ ಅಕ್ರಮ ಮದ್ಯ ತಯಾರಿ ನಡೆಸುತ್ತಿದ್ದ ಮನೆಗೆ ದಾಳಿ ಮಾಡಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಕಾಸರಗೋಡು ನಿವಾಸಿ ಪ್ರಣವ್ ವಿ ಶೆಣೈ (24) ಮತ್ತು ತಾಳಿಪಡ್ಪು ನಿವಾಸಿ ಅನೂಷ್ ಆರ್ (24)‌ ಎಂದು ಗುರುತಿಸಲಾಗಿದೆ. ಆರೋಪಿಗಳು ಕೊಣಾಜೆ ಠಾಣಾ ವ್ಯಾಪ್ತಿಯ ಪಜೀರು ಗ್ರಾಮದ ಕಂಬಳಪದವು ಶ್ರೀ ದುರ್ಗಾಕಾಳಿ ದೇವಸ್ಥಾನದ ರಸ್ತೆಯಲ್ಲಿರುವ ಮನೆಯಲ್ಲಿ ಥೋಮಸ್ ಮತ್ತು ಮಣಿಕುಟ್ಟನ್ ಜೊತೆ ಸೇರಿಕೊಂಡು ಅಕ್ರಮವಾಗಿ ಮದ್ಯ ತಯಾರಿ […]

ಮಂಗಳೂರು: ಅಕ್ರಮ ಮದ್ಯ ತಯಾರಿ ಘಟಕ ಪತ್ತೆ; ಇಬ್ಬರ ಬಂಧನ Read More »

ಅಫಘಾನಿಸ್ಥಾನದಲ್ಲಿ ಪ್ರಬಲ ಭೂಕಂಪ : 20ಕ್ಕೂ ಅಧಿಕ ಮಂದಿ ಸಾವು

ಅವಶೇಷಗಳಡಿ ಸಿಲುಕಿರುವ ನೂರಾರು ಮಂದಿಯ ರಕ್ಷಣೆಗೆ ಹರಸಾಹಸ ಕಾಬೂಲ್: ಪೂರ್ವ ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ಗಡಿಯ ಸನಿಹ 6.0 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿ 20ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, 115 ಮಂದಿ ಗಾಯಗೊಂಡಿದ್ದಾರೆ. ಭೂಕಂಪ ಬಹಳ ಪ್ರಬಲವಾಗಿದ್ದು ಇನ್ನೂ ಅನೇಕ ಮಂದಿ ಅವೇಷಗಳಡಿ ಸಿಲುಕಿರುವುದರಿಂದ ಸಾವು-ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ. ಗಾಯಾಳುಗಳನ್ನು ನಂಗ್ರಾರ್ ಮತ್ತು ಕುನಾರ್ ಪ್ರಾಂತ್ಯದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಭಾನುವಾರ ತಡರಾತ್ರಿ ಈ ಭೂಕಂಪ ಸಂಭವಿಸಿದ್ದು, ಆ ಬಳಿಕ ಪಶ್ಚಾತ್‌ಕಂಪನದ

ಅಫಘಾನಿಸ್ಥಾನದಲ್ಲಿ ಪ್ರಬಲ ಭೂಕಂಪ : 20ಕ್ಕೂ ಅಧಿಕ ಮಂದಿ ಸಾವು Read More »

ಇಂದು ಬಿಜೆಪಿಯಿಂದ ಬೃಹತ್‌ ಧರ್ಮಸ್ಥಳ ಚಲೋ ಅಭಿಯಾನ

ಮಧ್ಯಾಹ್ನ ಧರ್ಮಸ್ಥಳದಲ್ಲಿ ಧರ್ಮ ಜಾಗೃತಿ ಸಮಾವೇಶ ಬೆಂಗಳೂರು: ಧರ್ಮಸ್ಥಳ ವಿರುದ್ಧ ನಡೆದಿರುವ ಷಡ್ಯಂತ್ರ ಪ್ರಕರಣವನ್ನು ಎನ್ಐಎ ತನಿಖೆಗೆ ಕೊಡುವಂತೆ ಒತ್ತಾಯಿಸಿ ಸೋಮವಾರ ಬೃಹತ್ ಧರ್ಮಸ್ಥಳ ಚಲೋ ಅಭಿಯಾನ ಹಾಗೂ ಧರ್ಮ ಜಾಗೃತಿ ಸಮಾವೇಶ ಬಿಜೆಪಿ ನಡೆಸಲಿದೆ. ಧರ್ಮಸ್ಥಳ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಹಾಗೂ ವ್ಯವಸ್ಥಿತ ಷಡ್ಯಂತ್ರ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಸೆ.1ರಂದು ಬಿಜೆಪಿ ಧರ್ಮಸ್ಥಳ ಚಲೋ ಅಭಿಯಾನ ನಡೆಸಲಿದೆ. ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕೆನ್ನುವುದು ಬಿಜೆಪಿಯ ಪ್ರಮುಖ ಬೇಡಿಕೆಯಾಗಿದೆ. ಧರ್ಮಸ್ಥಳ

ಇಂದು ಬಿಜೆಪಿಯಿಂದ ಬೃಹತ್‌ ಧರ್ಮಸ್ಥಳ ಚಲೋ ಅಭಿಯಾನ Read More »

ಮಟ್ಟಣ್ಣವರ್‌, ತಿಮರೋಡಿ ವಿರುದ್ಧ ಇನ್ನೊಂದು ಕೇಸ್‌ ದಾಖಲು

ಸುಳ್ಳು ಮಾಹಿತಿ ನೀಡಿದ ಆರೋಪದಲ್ಲಿ ದೂರು ಮಂಗಳೂರು: ಕೊಲೆ, ಕೊಲೆಯತ್ನ ಸೇರಿದಂತೆ ಹಲವು ಆರೋಪಗಳಿದ್ದ ರೌಡಿಶೀಟರ್‌ ಒಬ್ಬನನ್ನು ಕೋಟು ತೊಡಿಸಿ ಮಾನವ ಹಕ್ಕುಗಳ ಅಧಿಕಾರಿ ಎಂದು ಪರಿಚಯಿಸಿ ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಗಿರೀಶ್‌ ಮಟ್ಟಣ್ಣನವರ್‌ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಧರ್ಮಸ್ಥಳ ಕ್ಷೇತ್ರದ ಭಕ್ತ ಪ್ರವೀಣ್ ಕೆ.ಆರ್ ಎಂಬವರು ನೀಡಿದ ದೂರಿನಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಮಟ್ಟಣ್ಣನವರ್, ಮಹೇಶ್‌ ಶೆಟ್ಟಿ ತಿಮರೋಡಿ ಮತ್ತು ರೌಡಿಶೀಟರ್‌ ಮದನ್ ಬುಗುಡಿ ವಿರುದ್ಧ ಕೇಸ್‌

ಮಟ್ಟಣ್ಣವರ್‌, ತಿಮರೋಡಿ ವಿರುದ್ಧ ಇನ್ನೊಂದು ಕೇಸ್‌ ದಾಖಲು Read More »

ನಾಡ ಹಬ್ಬವನ್ನು ನಿಗದಿತ ಧರ್ಮದವರೇ ಉದ್ಘಾಟಿಸಬೇಕು ಎಂದೇನಿಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ದಸರಾ ನಾಡಹಬ್ಬವಾಗಿದ್ದು, ಇದನ್ನು ಎಲ್ಲರೂ ಆಚರಿಸುತ್ತಾರೆ. ಈ ಕಾರ್ಯಕ್ರಮವನ್ನು ಬಾನು ಮುಷ್ತಾಕ್ ಉದ್ಘಾಟಿಸುವುದು ಸೂಕ್ತವಾಗಿದೆ ಎಂದು ಸಿ.ಎಂ. ಸಿದ್ದರಾಮಯ್ಯ ಹೇಳಿದ್ದಾರೆ. ದಸರಾ ಉದ್ಘಾಟನೆಗೆ ಸಂಬಂದಿಸಿದ ಹಾಗೆ ಉನ್ನತ ಮಟ್ಟದ ಸಮಿತಿಯಲ್ಲಿ ಆಯ್ಕೆಯ ಅಧಿಕಾರ ನನಗೆ ನೀಡಲಾಗಿತ್ತು. ಅಲ್ಲಿ ಬಾನು ಮುಷ್ತಾಕ್ ಅವರನ್ನು ಆಹ್ವಾನ ಮಾಡುವುದೆಂದು ತೀರ್ಮಾನ ಮಾಡಲಾಯಿತು. ಆ ಹಿಂದೆ ಕವಿ ನಿಸಾರ್ ಅಹಮದ್ ಅವರು ದಸರಾ ಉದ್ಧಾಟಿಸಿದ್ದರು. ನಾಡಹಬ್ಬವನ್ನು ಇಂತದ್ದೇ ಧರ್ಮದವರು ಉದ್ಘಾಟನೆ ಮಾಡಬೇಕು ಎಂದೇನಿಲ್ಲ ಎಂದು ಅವರು ತಿಳಿಸಿದ್ದಾರೆ. ನಾಡಹಬ್ಬ ‌ದಸರಾ ಸಾಂಸ್ಕೃತಿಕ

ನಾಡ ಹಬ್ಬವನ್ನು ನಿಗದಿತ ಧರ್ಮದವರೇ ಉದ್ಘಾಟಿಸಬೇಕು ಎಂದೇನಿಲ್ಲ: ಸಿಎಂ ಸಿದ್ದರಾಮಯ್ಯ Read More »

ಮಳೆಯಿಂದಾಗುತ್ತಿರುವ ಪ್ರಾಕೃತಿಕ ವಿಪತ್ತಿನ ಬಗ್ಗೆ ಪ್ರಧಾನಿ ಮೋದಿ ಬೇಸರ

ನವದೆಹಲಿ: ಪ್ರಧಾನಿ ಮೋದಿ ಅವರು ತಮ್ಮ ತಿಂಗಳ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನಲ್ಲಿ ದೇಶದಲ್ಲಿ ನಡೆಯುತ್ತಿರುವ ಪ್ರಾಕೃತಿಕ ವಿಕೋಪಗಳ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಇದು ಪ್ರತಿಯೊಬ್ಬ ಭಾರತೀಯನನ್ನೂ ದುಃಖಕ್ಕೆ ದೂಡಿದೆ ಎಂದು ಹೇಳಿದ್ದಾರೆ. ಈ ಬಾರಿಯ ಮಳೆಗಾಲದಲ್ಲಿ ನಡೆಯುತ್ತಿರುವ ಪ್ರಾಕೃತಿಕ ವಿಕೋಪಗಳು ದೇಶವನ್ನು ಪರೀಕ್ಷೆಗೆ ಒಡ್ಡಿದೆ. ಪರಿಸರ ಮತ್ತು ಮಾನವನಿಗೆ ಸಾಕಷ್ಟು ಹಾನಿಗಳಾಗಿವೆ. ಕಳೆದ ಕೆಲವು ವಾರಗಳಲ್ಲಿ ನಾವು ಪ್ರವಾಹ, ಭೂಕುಸಿತದಂತಹ ಹಲವಾರು ಪ್ರಾಕೃತಿಕ ವಿನಾಶ ಕಂಡಿದ್ದೇವೆ. ಜನರ ಜೀವನ ಅಪಾಯದಲ್ಲಿದೆ. ಇದು ಪ್ರತಿಯೊಬ್ಬ

ಮಳೆಯಿಂದಾಗುತ್ತಿರುವ ಪ್ರಾಕೃತಿಕ ವಿಪತ್ತಿನ ಬಗ್ಗೆ ಪ್ರಧಾನಿ ಮೋದಿ ಬೇಸರ Read More »

ತಲಪಾಡಿ ಅಪಘಾತ : ಬಸ್‌ ಚಾಲಕ ಅರೆಸ್ಟ್‌

6 ಮಂದಿಯ ಪ್ರಾಣ ಬಲಿ ತೆಗೆದುಕೊಂಡಿದ್ದ ಭೀಕರ ಅಪಘಾತ ಮಂಗಳೂರು: ಆಗಸ್ಟ್ 28ರಂದು ಮಧ್ಯಾಹ್ನ ತಲಪಾಡಿಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತಕ್ಕೆ ಸಂಬಂಧಿಸಿ ಮಂಜೇಶ್ವರ ಪೊಲೀಸರು ಕರ್ನಾಟಕ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಬಾಗಲಕೋಟೆ ಅಂಬೇಡ್ಕರ್ ನಗರ ನಿವಾಸಿ ನಿಜಲಿಂಗಪ್ಪ ಚಲವಾದಿಯನ್ನು (47) ಬಂಧಿಸಿನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಎರಡು ವಾರಗಳ ನ್ಯಾಯಾಂಗ ಬಂಧನ ವಿಧಿಸಿದೆ. ತಲಪಾಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೆಎಸ್‌ಆರ್‌ಟಿಸಿ ಬಸ್ ಆಟೋರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ, ರಿಕ್ಷಾ ಚಾಲಕ ಸೇರಿ ಆರು ಮಂದಿ ಸಾವನ್ನಪ್ಪಿದ್ದರು.

ತಲಪಾಡಿ ಅಪಘಾತ : ಬಸ್‌ ಚಾಲಕ ಅರೆಸ್ಟ್‌ Read More »

ಯಕ್ಷಗಾನವನ್ನು ಅರ್ಧಕ್ಕೆ ನಿಲ್ಲಿಸಿದ ಪೊಲೀಸರು : ಜನರಿಂದ ಭಾರಿ ಆಕ್ರೋಶ ವ್ಯಕ್ತ

ಪಬ್‌, ಡಿಜೆ ನಡುರಾತ್ರಿವರೆಗೆ ನಡೆಯುತ್ತದೆ, ಕಲೆಗೆ ಏಕಿಲ್ಲ ಅವಕಾಶ ಎಂದು ಪ್ರಶ್ನೆ ಮಂಗಳೂರು: ಬಂಟ್ವಾಳದ ಪಾಣೆಮಂಗಳೂರು ಸಮೀಪದ ಸಜೀಪಮುನ್ನೂರು ಎಂಬಲ್ಲಿ ಗಣೇಶೋತ್ಸವ ಪ್ರಯುಕ್ತ ನಡೆಯುತ್ತಿದ್ದ ಯಕ್ಷಗಾನ ಪ್ರದರ್ಶನವನ್ನು ಪೊಲೀಸರು ಅರ್ಧದಲ್ಲಿಯೇ ನಿಲ್ಲಿಸಿದ ಕ್ರಮಕ್ಕೆ ಕರಾವಳಿಯಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ರಾತ್ರಿ 10 ಗಂಟೆ ನಂತರ ಧ್ವನಿವರ್ಧಕ ಬಳಸುವಂತಿಲ್ಲ ಎಂಬ ನಿಯಮದ ನೆಪದಲ್ಲಿ ಯಕ್ಷಗಾನ, ನಾಟಕ ಮತ್ತಿತರ ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ನಿಲ್ಲಿಸುವ ಘಟನೆಗಳು ಕರವಾಳಿಯಲ್ಲಿ ನಡೆಯುತ್ತಿದೆ. ಕೆಲವು ಕಡೆಗಳಲ್ಲಿ ಯಕ್ಷಗಾನ ಮತ್ತು ನಾಟಕ ಪ್ರದರ್ಶನಗಳನ್ನು ಅರ್ಧದಲ್ಲಿಯೇ

ಯಕ್ಷಗಾನವನ್ನು ಅರ್ಧಕ್ಕೆ ನಿಲ್ಲಿಸಿದ ಪೊಲೀಸರು : ಜನರಿಂದ ಭಾರಿ ಆಕ್ರೋಶ ವ್ಯಕ್ತ Read More »

ಬೆಂಗಳೂರಿನ ಲಾಡ್ಜ್‌ನಲ್ಲಿ ಎಸ್‌ಐಟಿ ಶೋಧ

ಬುರುಡೆ ಗ್ಯಾಂಗ್‌ನ ಮೀಟಿಂಗ್‌ ನಡೆಯುತ್ತಿದ್ದ ಲಾಡ್ಜ್‌ ಬೆಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿದ್ಯಾರಣ್ಯಪುರದ ತಿಂಡ್ಲು ಸರ್ಕಲ್ ಬಳಿಯ ಲಾಡ್ಜ್ ಒಂದರಲ್ಲಿ ವಿಶೇಷ ತನಿಖಾ ತಂಡ ಮಹಜರು ಪ್ರಕ್ರಿಯೆ ನಡೆಸುತ್ತಿದೆ. ಆರೋಪಿ ಚಿನ್ನಯ್ಯನನ್ನು ಕರೆದುಕೊಂಡು ಬಂದ ಪೊಲೀಸರು ತಡರಾತ್ರಿಯಿಂದ ಲಾಡ್ಜ್‌ನಲ್ಲಿ ಮಹಜರು ಮಾಡುತ್ತಿದ್ದಾರೆ. ಈ ಲಾಡ್ಜ್‌ನಲ್ಲಿ ಬುರುಡೆ ಗ್ಯಾಂಗ್‌ ಸದಸ್ಯರು ಸೇರಿ ಷಡ್ಯಂತ್ರ ರೂಪಿಸಿದ್ದಾರೆ ಎನ್ನಲಾಗುತ್ತಿದೆ. ಬುರುಡೆ ತೆಗೆದುಕೊಂಡು ಬರುವ ಮೊದಲು ಇದೇ ಲಾಡ್ಜ್‌ನಲ್ಲಿ ಹಲವರನ್ನು ಭೇಟಿಯಾಗಿದ್ದ ಬಗ್ಗೆ ಎಸ್‌ಐಟಿ ಚಿನ್ನಯ್ಯ ಬಾಯಿಬಿಟ್ಟಿದ್ದಾನೆ. ಹೀಗಾಗಿ ಎಸ್‌ಪಿ

ಬೆಂಗಳೂರಿನ ಲಾಡ್ಜ್‌ನಲ್ಲಿ ಎಸ್‌ಐಟಿ ಶೋಧ Read More »

ಪ್ರಧಾನಿ ನರೇಂದ್ರ ಮೋದಿಯ ಐತಿಹಾಸಿಕ ಚೀನ ಭೇಟಿ ಪ್ರಾರಂಭ

7 ವರ್ಷಗಳ ಬಳಿಕ ಚೀನಕ್ಕೆ ಹೋದ ಮೋದಿ; ಅಧ್ಯಕ್ಷ ಷಿ ಜಿನ್​​ಪಿಂಗ್ ಜೊತೆ ಮಾತುಕತೆ ಬೀಜಿಂಗ್: ಪ್ರಧಾನಿ ನರೇಂದ್ರ ಮೋದಿ ಇಂದು ಚೀನ ಅಧ್ಯಕ್ಷ ಷಿ ಜಿನ್​​ಪಿಂಗ್ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜತೆ ಮಾತುಕತೆ ನಡೆಸಲಿದ್ದಾರೆ. ಜಪಾನ್ ಭೇಟಿ ಮುಗಿಸಿ ಪ್ರಧಾನಿ ನರೇಂದ್ರ ಮೋದಿ ಚೀನ ತಲುಪಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕ ಬೆದರಿಕೆ ಸಡ್ಡು ಹೊಡೆದು ಪ್ರಧಾನಿ ಮೋದಿ ಚೀನ ಭೇಟಿ ಕೈಗೊಂಡಿದ್ದು, ಇದನ್ನು ಇಡೀ ಜಗತ್ತು ಕುತೂಹಲದಿಂದ ವೀಕ್ಷಿಸುತ್ತಿದೆ.

ಪ್ರಧಾನಿ ನರೇಂದ್ರ ಮೋದಿಯ ಐತಿಹಾಸಿಕ ಚೀನ ಭೇಟಿ ಪ್ರಾರಂಭ Read More »

error: Content is protected !!
Scroll to Top