ಸುದ್ದಿ

ಇಂದು ಮತ್ತೆ ನಡೆಯಲಿದೆ ಯೂಟ್ಯೂಬರ್‌ ಸಮೀರ್‌ ವಿಚಾರಣೆ

ಪೊಲೀಸರ ಪ್ರಶ್ನೆಗಳ ಬಾಣದಿಂದ ಕಂಗಾಲಾದ ಸುಳ್ಳು ಸುದ್ದಿಕೋರ ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಮಹಿಳೆಯರ ರೇಪ್ ಮತ್ತು ಮರ್ಡರ್ ಆಗಿದೆ ಎಂದು ಎಐ ವಿಡಿಯೋ ಮಾಡಿ ಅಪಪ್ರಚಾರ ಮಾಡಿದ್ದ ಯೂಟ್ಯೂಬರ್‌ ಮಹಮ್ಮದ್‌ ಸಮೀರ್ ಬೆಳ್ತಂಗಡಿ ಠಾಣೆಯಲ್ಲಿ ಭಾನುವಾರ ಮಧ್ಯಾಹ್ನ ವಿಚಾರಣೆಗೆ ಹಾಜರಾಗಿದ್ದ. ಅಧಿಕಾರಿಗಳು ಆತನನ್ನು ಸುಮಾರು 4.30 ತಾಸುಗಳ ಕಾಲ ತೀವ್ರ ವಿಚಾರಣೆ ನಡೆಸಿದ್ದಾರೆ. ಸೋಮವಾರ ಕೂಡ ಸಮೀರ್‌ ವಿಚಾರಣೆ ನಡೆಯಲಿದೆ. ಸೋಮವಾರ ಲ್ಯಾಪ್‌ಟಾಪ್‌ ಮತ್ತು ಮೊಬೈಲ್‌ ಜೊತೆ ಬರಬೇಕೆಂದು ಪೊಲೀಸರು ಹೇಳಿದ್ದಾರೆ. ಕಾಲ್ಪನಿಕ ವಿಡಿಯೋ ಮೂಲಕ ದೊಂಬಿ […]

ಇಂದು ಮತ್ತೆ ನಡೆಯಲಿದೆ ಯೂಟ್ಯೂಬರ್‌ ಸಮೀರ್‌ ವಿಚಾರಣೆ Read More »

ಏರ್ಯ ಲಕ್ಷ್ಮೀ ನಾರಾಯಣ ಆಳ್ವ ಅವರ ಜನ್ಮಶತಮಾನೋತ್ಸವ ಗೌರವ ಪ್ರಶಸ್ತಿ ಪ್ರಕಟ

ಪ್ರೊ. ಕೆ. ಚಿನ್ನಪ್ಪ ಗೌಡ, ನಾ. ದಾಮೋದರ ಶೆಟ್ಟಿ ಆಯ್ಕೆ ಮಂಗಳೂರು: ಜಾನಪದ ವಿದ್ವಾಂಸ, ನಿವೃತ್ತ ಕುಲಪತಿ ಪ್ರೊ. ಕೆ. ಚಿನ್ನಪ್ಪ ಗೌಡ ಮತ್ತು ಸಾಹಿತಿ, ರಂಗಕರ್ಮಿ ನಾ. ದಾಮೋದರ ಶೆಟ್ಟಿ ಅವರು ಸಾಹಿತಿ, ಸಹಕಾರಿ ಕ್ಷೇತ್ರದ ಮುಖಂಡ ಏರ್ಯ ಲಕ್ಷ್ಮೀ ನಾರಾಯಣ ಆಳ್ವ ಅವರ ಜನ್ಮಶತಮಾನೋತ್ಸವ ಹಿನ್ನೆಲೆ ನೀಡುವ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಆ. 28 ರಂದು ಬಂಟ್ವಾಳ ಸಮೀಪದ ಏರ್ಯ ಬೀಡುವಿನಲ್ಲಿ ‌ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಸಾಹಿತಿ ಪ್ರೊ. ಹಂಪ ‌ನಾಗರಾಜಯ್ಯ ಕಾರ್ಯಕ್ರಮದ

ಏರ್ಯ ಲಕ್ಷ್ಮೀ ನಾರಾಯಣ ಆಳ್ವ ಅವರ ಜನ್ಮಶತಮಾನೋತ್ಸವ ಗೌರವ ಪ್ರಶಸ್ತಿ ಪ್ರಕಟ Read More »

ಎಲ್ಲ ರೀತಿಯ ಕ್ರಿಕೆಟ್‌ಗೆ ಚೇತೇಶ್ವರ ಪೂಜಾರ ಗುಡ್‌ಬೈ

ದಿಢೀರ್‌ ಎಂದು ನಿವೃತ್ತಿ ಘೋಷಿಸಿದ ಪರಿಪೂರ್ಣ ಟೆಸ್ಟ್‌ ಬ್ಯಾಟ್ಸ್‌ಮನ್‌ ಮುಂಬೈ: ಪರಿಪೂರ್ಣ ಟೆಸ್ಟ್‌ ಆಟದ ಕೊನೆಯ ಕೊಂಡಿ ಎಂದೇ ಅರಿಯಲ್ಪಡುತ್ತಿದ್ದ ಪ್ರತಿಭಾವಂತ ಟೆಸ್ಟ್‌ ಬ್ಯಾಟ್ಸ್‌ಮನ್‌ ಚೇತೇಶ್ವರ ಪೂಜಾರ ಎಲ್ಲ ಮಾದರಿಯ ಕ್ರಿಕೆಟ್‌ಗೆ ಇಂದು ನಿವೃತ್ತಿ ಘೋಷಿಸಿ ಕ್ರಿಕೆಟ್‌ ಅಭಿಮಾನಿಗಳಿಗೆ ಆಘಾತ ನೀಡಿದ್ದಾರೆ. ಈ ವರ್ಷ ದಿಗ್ಗಜರಾದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ, ರವಿಚಂದ್ರನ್‌ ಅಶ್ವಿನ್‌ ಟೆಸ್ಟ್‌ ಕ್ರಿಕೆಟ್‌ಗೆ ಗುಡ್‌ ಬೈ ಹೇಳಿದ ಬಳಿಕ ಈಗ ಪೂಜಾರ ಎಲ್ಲ ಮಾದರಿಯ ಕ್ರಿಕೆಟ್‌ಗೆ ದಿಢೀರ್‌ ಎಂದು ನಿವೃತ್ತಿ ಘೋಷಿಸಿದ್ದಾರೆ. ಈ

ಎಲ್ಲ ರೀತಿಯ ಕ್ರಿಕೆಟ್‌ಗೆ ಚೇತೇಶ್ವರ ಪೂಜಾರ ಗುಡ್‌ಬೈ Read More »

ಸಿದ್ದರಾಮಯ್ಯ ದೇಶದ ಮೂರನೇ ಅತಿ ಶ್ರೀಮಂತ ಮುಖ್ಯಮಂತ್ರಿ

ಎಡಿಆರ್‌ ಪ್ರಕಟಿಸಿದ ಪಟ್ಟಿಯಲ್ಲಿದೆ ಮುಖ್ಯಮಂತ್ರಿಗಳ ಸಂಪತ್ತಿನ ಕುತೂಹಲಕಾರಿ ಮಾಹಿತಿ ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ದೇಶದ ಮೂರನೇ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ. ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಈ ಮಾಹಿತಿಯಿದೆ. ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯನ್ನು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಬಿಡುಗಡೆ ಮಾಡಿದ್ದು, ಎಲ್ಲ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ 30 ಹಾಲಿ ಮುಖ್ಯಮಂತ್ರಿಗಳ ಆಸ್ತಿ ಮಾಹಿತಿ ಇದರಲ್ಲಿದೆ. ಮುಖ್ಯಮಂತ್ರಿಗಳು ಚುನಾವಣೆ ಸಮಯದಲ್ಲಿ ಸಲ್ಲಿಸಿರುವ ಪ್ರಮಾಣಪತ್ರಗಳ ಆಧಾರದಲ್ಲೇ ಅಸೋಸಿಯೇಷನ್ ಫಾರ್

ಸಿದ್ದರಾಮಯ್ಯ ದೇಶದ ಮೂರನೇ ಅತಿ ಶ್ರೀಮಂತ ಮುಖ್ಯಮಂತ್ರಿ Read More »

ಮುಂದಿನ ತಿಂಗಳು ಸಂಭವಿಸಲಿದೆ ಎರಡು ಗ್ರಹಣ

ಸೆ.7ಕ್ಕೆ ಚಂದ್ರ ಗ್ರಹಣ; ಸೆ.21ಕ್ಕೆ ಸೂರ್ಯ ಗ್ರಹಣ ಬೆಂಗಳೂರು : ಸೆಪ್ಟೆಂಬರ್ ತಿಂಗಳು ಖಗೋಳ ವಿಜ್ಞಾನ ಆಸಕ್ತರಿಗೆ ಬಹಳ ವಿಶೇಷವಾಗಿರಲಿದೆ. ಒಂದೇ ತಿಂಗಳಲ್ಲಿ ಎರಡು ದೊಡ್ಡ ಗ್ರಹಣಗಳು ಸಂಭವಿಸಲಿವೆ. ಸೆಪ್ಟೆಂಬರ್ 7ರಂದು ಚಂದ್ರ ಗ್ರಹಣ ಮತ್ತು ಸೆಪ್ಟೆಂಬರ್ 21ರಂದು ಸೂರ್ಯ ಗ್ರಹಣ ಸಂಭವಿಸಲಿದೆ. ಸೆ. 7ರಂದು ಸಂಭವಿಸಲಿರುವ ಚಂದ್ರ ಗ್ರಹಣ ಭಾರತದಲ್ಲಿ ಗೋಚರಿಸಲಿದೆ. 2025ರ ಎರಡನೇ ಸೂರ್ಯ ಗ್ರಹಣ ಸೆಪ್ಟೆಂಬರ್ 21ರ ರಾತ್ರಿ 11 ಗಂಟೆಗೆ ಪ್ರಾರಂಭವಾಗಿ ಸೆಪ್ಟೆಂಬರ್ 22ರ ಬೆಳಗ್ಗೆ 3.24ಕ್ಕೆ ಕೊನೆಗೊಳ್ಳುತ್ತದೆ. ಇದು ಭಾಗಶಃ

ಮುಂದಿನ ತಿಂಗಳು ಸಂಭವಿಸಲಿದೆ ಎರಡು ಗ್ರಹಣ Read More »

ಬಂಟ್ವಾಳ : ಅನ್ನಭಾಗ್ಯ ಅಕ್ಕಿ ಅಕ್ರಮವಾಗಿ ದಾಸ್ತಾನು ಇರಿಸಿದ್ದ ಗೋದಾಮಿಗೆ ದಾಳಿ

ಕಲ್ಲಡ್ಕ ಪಟ್ಟೆಕೋಡಿಯಲ್ಲಿ 25 ಕ್ವಿಂಟಾಲ್‌ಗೂ ಅಧಿಕ ಅಕ್ಕಿ ವಶ ಬಂಟ್ವಾಳ : ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಖಾಸಗಿ ಗೋದಾಮಿನಲ್ಲಿ ಅಕ್ರಮ ದಾಸ್ತಾನಿರಿಸಲಾಗಿದ್ದ ಸ್ಥಳಕ್ಕೆ ಆಹಾರ ಇಲಾಖಾಧಿಕಾರಿಗಳು ಶನಿವಾರ ದಾಳಿ ನಡೆಸಿ ಇಬ್ಬರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಟ್ವಾಳದ ಗೋಳ್ತಮಜಲು ಗ್ರಾಮದ ಕಲ್ಲಡ್ಕ ಸಮೀಪದ ಪಟ್ಟೆಕೋಡಿ ಎಂಬಲ್ಲಿ ಗೋದಾಮಿನಲ್ಲಿ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಲಾಗಿತ್ತು. ಪ್ರಕರಣಕ್ಕೆ ಸಂಬಂದಿಸಿ ಕಲ್ಲಡ್ಕ ನಿವಾಸಿಗಳಾದ ಗೋದಾಮು ನಿರ್ವಾಹಕ ಉಮ್ಮರಬ್ಬ ಯಾನೆ ಪುತ್ತುಮೋನು (47) ಹಾಗೂ ಕೆಲಸಗಾರ ರಫೀಕ್ (42) ಎಂಬವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಬಂಟ್ವಾಳ : ಅನ್ನಭಾಗ್ಯ ಅಕ್ಕಿ ಅಕ್ರಮವಾಗಿ ದಾಸ್ತಾನು ಇರಿಸಿದ್ದ ಗೋದಾಮಿಗೆ ದಾಳಿ Read More »

ಅಪ್ರಾಪ್ತ ವಯಸ್ಕಳ ಮೇಲೆ ಲೈಂಗಿಕ ದೌರ್ಜನ್ಯ : ಅಪರಾಧಿಗೆ 20 ವರ್ಷ ಜೈಲು

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ ಯುವಕ ಮಂಗಳೂರು : ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ರ ವಯಸ್ಸಿನ ಯುವತಿಯನ್ನು ಲಾಡ್ಜ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಸಮೀರ್ (20) ಎಂಬಾತನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ಮತ್ತು 55 ಸಾವಿರ ರೂ. ದಂಡ ವಿಧಿಸಿದೆ. ನ್ಯಾಯಾಧೀಶ ಮಾನು ಕೆ.ಎಸ್. ಶನಿವಾರ ಈ ತೀರ್ಪು ನೀಡಿದ್ದಾರೆ. ಮೂಲ್ಕಿ ಕಾರ್ನಾಡು ಲಿಂಗಪ್ಪಯ್ಯ ಕಾಡಿನ ಬಿಜಾಪುರ ಕಾಲನಿ ನಿವಾಸಿ ಸಮೀರ್ ಎಂಬಾತ ಅಪ್ರಾಪ್ತ ಯುವತಿಯ

ಅಪ್ರಾಪ್ತ ವಯಸ್ಕಳ ಮೇಲೆ ಲೈಂಗಿಕ ದೌರ್ಜನ್ಯ : ಅಪರಾಧಿಗೆ 20 ವರ್ಷ ಜೈಲು Read More »

ಶಿವ ರುದ್ರತಾಂಡವದ ಫೋಟೊ ಅಪ್‌ಲೋಡ್‌ ಮಾಡಿದ ಧರ್ಮಸ್ಥಳ ದೇಗುಲ

ಅಪಪ್ರಚಾರ ಮಾಡಿದವರಿಗೆ ಧರ್ಮವೇ ಗೆಲ್ಲುತ್ತದೆ ಎಂಬ ಸಂದೇಶ ಮಂಗಳೂರು: ನೂರಾರು ಶವ ಹೂತಿಟ್ಟಿದ್ದೇನೆ ಎಂದು ಹೇಳಿಕೊಂಡು ತಲೆಬುರುಡೆ ಸಮೇತ ಪೊಲೀಸರ ಬಳಿ ಬಂದಿದ್ದ ಮುಸುಕುಧಾರಿ ಚಿನ್ನಯ್ಯ ಎಂಬಾತನ ಬಂಧನವಾಗಿ ಬುರುಡೆ ಹಿಂದಿನ ಮುಸುಕು ಒಂದೊಂದಾಗಿ ಸರಿಯಲು ತೊಡಗಿದಂತೆ ಧರ್ಮಸ್ಥಳ ದೇವಸ್ಥಾನದ ಅಧಿಕೃತ ಸಾಮಾಜಿಕ ಜಾಲತಾಣ ಪುಟದಲ್ಲಿ ಶಿವ ರುದ್ರತಾಂಡವ ಮಾಡುತ್ತಿರುವ ಫೋಟೊ ಒಂದನ್ನು ಅಪ್ಲೋಡ್‌ ಮಾಡಿ ಕೊನೆಯ ಗೆಲುವು ಎಂದಿದ್ದರೂ ಧರ್ಮಕ್ಕೆ ಎನ್ನುವುದನ್ನು ಸೂಚಿಸಲಾಗಿದೆ. ಧರ್ಮ ವಿಜಯದ ಸಂಕೇತವಾಗಿ ಧರ್ಮಸ್ಥಳ ದೇವಸ್ಥಾನದ ಹಿಂದೆ ಶಿವ ರುದ್ರತಾಂಡವದ ಫೋಟೊ

ಶಿವ ರುದ್ರತಾಂಡವದ ಫೋಟೊ ಅಪ್‌ಲೋಡ್‌ ಮಾಡಿದ ಧರ್ಮಸ್ಥಳ ದೇಗುಲ Read More »

ಮಾಸ್ಕ್ ಮ್ಯಾನ್ ಚೆನ್ನಯ್ಯ ಬಂಧನ, ನಿಜ ರೂಪ ದರ್ಶನ: 10 ದಿನ SIT ಕಸ್ಟಡಿಗೆ

ಧರ್ಮಸ್ಥಳ: ನೂರಾರು ಶವಗಳನ್ನು ‌ಹೂತಿದ್ದಾಗಿ ಹೇಳಿದ ಅನಾಮಿಕ ದೂರುದಾರ ಮಾಸ್ಕ್‌ಮ್ಯಾನ್ ಯಾರು ಎನ್ನುವ ಸತ್ಯ ಬಯಲಾಗಿದ್ದು, ಇದು ಧರ್ಮಸ್ಥಳದ ಅಭಿಮಾನಿಗಳಿಗೆ ಸಂತಸ ನೀಡಿದೆ. ಮುಸುಕುಧಾರಿಯ ಹೆಸರು ಚೆನ್ನಯ್ಯ ಯಾನೆ ಚೆನ್ನನನ್ನು ‌ಸುಳ್ಳು ದೂರು ನೀಡಿದ ಆರೋಪ ಮತ್ತು ಮೊದಲ ಬುರುಡೆಯನ್ನು ‌ಎಲ್ಲಿಂದ ತಂದ ಎನ್ನುವ ಮಾಹಿತಿ ನೀಡದ ಆರೋಪದಡಿ SIT ಅಧಿಕಾರಿಗಳು ಬಂಧಿಸಿರುವುದಾಗಿದೆ. ಈತ ಕಟ್ಟಿದ ಬುರುಡೆ ಕಥೆ, ನೂರಾರು ಹೆಣಗಳನ್ನು ಹೂಳಲಾಗಿದೆ ಎನ್ನುವ ಪ್ರಕರಣ ಇಡೀ ದೇಶವನ್ನೇ ಧರ್ಮಸ್ಥಳದತ್ತ ‌ತಿರುಗುವಂತೆ ಮಾಡಿತ್ತು. ಅಲ್ಲದೆ ಈ ವರೆಗೆ

ಮಾಸ್ಕ್ ಮ್ಯಾನ್ ಚೆನ್ನಯ್ಯ ಬಂಧನ, ನಿಜ ರೂಪ ದರ್ಶನ: 10 ದಿನ SIT ಕಸ್ಟಡಿಗೆ Read More »

ಸುಜಾತ ಭಟ್ ಮನೆಗೆ ಬಿಗು ಪೊಲೀಸ್‌ ಭದ್ರತೆ

ಆರೋಗ್ಯ ಸರಿಯಿಲ್ಲ, ರಕ್ಷಣೆ ಕೊಡಿ ಎಂದು ಮೊರೆಯಿಟ್ಟಿದ್ದ ಸುಜಾತ ಭಟ್‌ ಬೆಂಗಳೂರು: ನಿನ್ನೆಯಿಂದೀಚೆಗೆ ಗಳಿಗೆಗೊಂದು ಹೇಳಿಕೆ ನೀಡಿ ಗೊಂದಲ ಸೃಷ್ಟಿಸುತ್ತಿರುವ ಸುಜಾತ ಭಟ್‌ಗೆ ಪೊಲೀಸ್‌ ರಕ್ಷಣೆ ನೀಡಲಾಗಿದೆ. ನನಗೆ ಆರೋಗ್ಯ ಸರಿಯಿಲ್ಲ, ಬೆದರಿಕೆ ಇದೆ. ನನಗೆ ರಕ್ಷಣೆ ಕೊಡಿ ಎಂದು ಸ್ಥಳೀಯ ಪೊಲೀಸರಿಗೆ ಸುಜಾತ ಭಟ್ ಮನವಿ ಮಾಡಿರುವ ಹಿನ್ನೆಲೆಯಲ್ಲಿ ಪೊಲೀಸರು ಸುಜಾತ ಭಟ್‌ ಇರುವ ಮನೆಗೆ ಭದ್ರತೆ ಒದಗಿಸಿದ್ದಾರೆ. ಬ್ಯಾರಿಕೇಡ್ ಹಾಕಿ ಹದಿನೈದಕ್ಕೂ ಹೆಚ್ಚು ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ಸುಜಾತ ಭಟ್ ಮನವಿ ಹಿನ್ನೆಲೆಯಲ್ಲಿ ಬೆಂಗಳೂರಿನ

ಸುಜಾತ ಭಟ್ ಮನೆಗೆ ಬಿಗು ಪೊಲೀಸ್‌ ಭದ್ರತೆ Read More »

error: Content is protected !!
Scroll to Top