ಸುದ್ದಿ

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಂಟ್ವಾಳ ಉಪತಹಶೀಲ್ದಾರ್‌, ಮತ್ತಿಬ್ಬರು

ಪೌತಿ ಖಾತೆ ಮಾಡಿಕೊಡಲು 20 ಸಾವಿರ ರೂ. ಲಂಚ ಸ್ವೀಕರಿಸುವಾಗ ರೆಡ್‌ಹ್ಯಾಂಡ್‌ ಆಗಿ ಹಿಡಿದ ಪೊಲೀಸರು ಬಂಟ್ವಾಳ : ಜಮೀನಿಗೆ ಪೌತಿ ಖಾತೆ ಮಾಡಿಕೊಡಲು 20 ರೂ. ಸಾವಿರ ರೂ. ಲಂಚ ಸ್ವೀಕರಿಸುತ್ತಿರುವಾಗಲೇ ಬಂಟ್ವಾಳ ಉಪತಹಶೀಲ್ದಾರ್‌ ಸೇರಿ ಮೂವರನ್ನು ಲೋಕಾಯುಕ್ತ ಪೊಲೀಸರು ರೆಡ್‌ಹ್ಯಾಂಡ್‌ ಅಗಿ ಹಿಡಿದಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಬುಧವಾರ ಮಧ್ಯಾಹ್ನ ತಾಲೂಕು ಕಚೇರಿಯ ಮೇಲೆ ದಾಳಿ ನಡೆಸಿದ್ದು, ಲಂಚ ಪಡೆಯುತ್ತಿರುವಾಗಲೇ ಉಪತಹಶೀಲ್ದಾರ್ ಸೇರಿದಂತೆ ಮೂವರು ವ್ಯಕ್ತಿಗಳನ್ನು ಹಿಡಿದು ಪ್ರಕರಣ ದಾಖಲಸಿಕೊಂಡಿದ್ದಾರೆ. ಆರೋಪಿಗಳನ್ನು ಉಪತಹಶೀಲ್ದಾರ್ ರಾಜೇಶ್ ನಾಯಕ್, […]

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಂಟ್ವಾಳ ಉಪತಹಶೀಲ್ದಾರ್‌, ಮತ್ತಿಬ್ಬರು Read More »

ಬಾವಿಗೆ ಹಾರಿ ಪ್ರಸಿದ್ಧ ಹಾಸ್ಯ ಕಲಾವಿದ ಗೋಪಾಲಕೃಷ್ಣ ಜೋಶಿಯವರ ಪುತ್ರ ಆತ್ಮಹತ್ಯೆ

ವಿಟ್ಲ: ಯಕ್ಷಗಾನ ಲೋಕದಲ್ಲಿ ರಸಿಕ ‘ರತ್ನ ಬಿರುದು’ ಪಡೆದ ಹಾಸ್ಯ ಕಲಾವಿದ ಗೋಪಾಲಕೃಷ್ಣ ಜೋಶಿಯವರ ಪುತ್ರ ರವಿ ಜೋಶಿ (68) ಬುಧವಾರ ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲದ ಅಡ್ಡದ ಬೀದಿಯಲ್ಲಿ ನಡೆದಿದೆ.ಇವರು ಕರ್ನಾಟಕ ಬ್ಯಾಂಕ್‌ ನ ನಿವೃತ್ತ ಉದ್ಯೋಗಿಯಾಗಿದ್ದರು. ಮನೆ ಮುಂದಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿದ ಜೋಶಿ ಆವರ ಶವವನ್ನು ಸ್ಥಳೀಯರು ಪತ್ತೆ ಹಚ್ಚಿದ್ದಾರೆ. ಸ್ಥಿಳಕ್ಕೆ ವಿಟ್ಲ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕಳೆದ ಮೂರು ವರ್ಷಗಳ ಹಿಂದೆ ಹಿರಿಯ ಪುತ್ರಿಯ ಅಕಾಲಿಕ ಮರಣದಿಂದ ಮನೋವೈಕಲ್ಯಕ್ಕೊಳಗಾಗಿ

ಬಾವಿಗೆ ಹಾರಿ ಪ್ರಸಿದ್ಧ ಹಾಸ್ಯ ಕಲಾವಿದ ಗೋಪಾಲಕೃಷ್ಣ ಜೋಶಿಯವರ ಪುತ್ರ ಆತ್ಮಹತ್ಯೆ Read More »

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೆಜ್ಜೆ ಇಡುವ ವಿದ್ಯಾರ್ಥಿಗಳಿಗೆ ಆಶಾದೀಪ

ವಿದತ್ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆ 2025 ವಿದ್ಯಾರ್ಥಿಗಳ ಪರೀಕ್ಷಾ ಕನಸುಗಳನ್ನು ನನಸುಗೊಳಿಸಲು. “ವಿದತ್ ಲರ್ನಿಂಗ್ ಸೆಂಟರ್ ” ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ ಆಗಸ್ಟ್ 17, 2025ರಂದು ವಿದತ್ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆಯನ್ನು ಆಯೋಜಿಸಿದೆ. 11 ಮತ್ತು 12 ನೇ ತರಗತಿಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಾದ JEE, KCET, NEET ತಯಾರಿ ನಡೆಸಲು ವಿಶೇಷ ಪ್ರವೇಶ ಪರೀಕ್ಷೆಯನ್ನು ಆಯೋಜಿಸಿದೆ. ಈ ಪರೀಕ್ಷೆಯ ಮೂಲಕ ವಿದ್ಯಾರ್ಥಿಗಳಿಗೆ ಕೋಚಿಂಗ್ ಫೀಸ್’ನಲ್ಲಿ 90%ರಷ್ಟು ರಿಯಾಯಿತಿ ಪಡೆಯುವ ಸುವರ್ಣಾವಕಾಶ ಲಭ್ಯವಿದೆ. KCET,

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೆಜ್ಜೆ ಇಡುವ ವಿದ್ಯಾರ್ಥಿಗಳಿಗೆ ಆಶಾದೀಪ Read More »

ಧರ್ಮಸ್ಥಳ ಪ್ರಕರಣ : ಮುಸುಕುಧಾರಿಯ ಮಂಪರು ಪರೀಕ್ಷೆ ಆಗಲಿದೆಯಾ?

ಗುಂಡಿಗಳಲ್ಲಿ ಹೆಣಗಳ ಕುರುಹು ಪತ್ತೆಯಾಗದಿರುವ ಹಿನ್ನೆಲೆಯಲ್ಲಿ ಹೆಚ್ಚುತ್ತಿದೆ ಅನುಮಾನ ಮಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿಟ್ಟೆದ್ದೇನೆ ಎಂದು ಆರೋಪಿಸಿದ ಮುಸುಕುಧಾರಿ ವ್ಯಕ್ತಿ ತೋರಿಸಿದ 16ಕಿಇಂತಲೂ ಹೆಚ್ಚು ಸ್ಥಳಗಳಲ್ಲಿ ಅಗೆದರೂ ಶವದ ಯಾವುದೇ ಕುರುಹುಗಳು ಪತ್ತೆಯಾಗದಿರುವ ಹಿನ್ನೆಲೆಯಲ್ಲಿ ಈ ವ್ಯಕ್ತಿಯನ್ನೇ ವಶಕ್ಕೆ ತೆಗೆದುಕೊಂಡು ತನಿಖೆಗೆ ಒಳಪಡಿಸಬೇಕೆಂಬ ಆಗ್ರಹ ಬಲವಾಗಿ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅವನನ್ನು ಮಂಪರು ಪರೀಕ್ಷೆಗೆ ಒಳಪಡಿಸುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಮುಸುಕುಧಾರಿ ತೋರಿಸಿದ ಬಹುಮುಖ್ಯ ಸ್ಥಳ ಎನ್ನಲಾಗುತ್ತಿದ್ದ 13ನೇ ಪಾಯಿಂಟ್‌ನಲ್ಲಿ ಮಂಗಳವಾರ ಜಿಪಿಆರ್‌

ಧರ್ಮಸ್ಥಳ ಪ್ರಕರಣ : ಮುಸುಕುಧಾರಿಯ ಮಂಪರು ಪರೀಕ್ಷೆ ಆಗಲಿದೆಯಾ? Read More »

ಧರ್ಮಸ್ಥಳ ತನಿಖೆ ಮುಗಿಯುವ ಮೊದಲೇ ತೀರ್ಪು ಕೊಡುವುದು ಬೇಡ : ಸ್ಪೀಕರ್‌ ಖಾದರ್‌ ಮನವಿ

ಸದನದಲ್ಲಿ ಇನ್ನಷ್ಟು ಚರ್ಚೆಗೆ ಅವಕಾಶ ಕೊಡುವ ಭರವಸೆ ಕೊಟ್ಟ ಸ್ಪೀಕರ್‌ ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಮುಗಿಯುವವರೆಗೆ ಧಾರ್ಮಿಕ ಸ್ಥಳದ ಪಾವಿತ್ರ್ಯವನ್ನು ಎಲ್ಲರೂ ಕಾಪಾಡಬೇಕು ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಮನವಿ ಮಾಡಿದ್ದಾರೆ. ಧರ್ಮಸ್ಥಳ ಪ್ರಕರಣದ ಬಗ್ಗೆ ವಿಧಾನಸೌಧಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಧರ್ಮಸ್ಥಳ ಕೇಸ್ ಬಗ್ಗೆ ಈಗಾಗಲೇ ನಾನು ಪ್ರತಿಕ್ರಿಯೆ ನೀಡಿದ್ದೇನೆ. ಮಂಗಳವಾರ ವಿಪಕ್ಷಗಳು ಚರ್ಚೆಗೆ ಅವಕಾಶ ಕೇಳಿದ್ದವು. ಶೂನ್ಯವೇಳೆಯಲ್ಲಿ ಅವಕಾಶ ಕೊಟ್ಟಿದ್ದೆ. ಸರ್ಕಾರವೂ ಅದಕ್ಕೆ ಉತ್ತರ ಕೊಟ್ಟಿದೆ. ಮತ್ತಷ್ಟು ಚರ್ಚೆಗೆ ಅವಕಾಶ ಬೇಕು

ಧರ್ಮಸ್ಥಳ ತನಿಖೆ ಮುಗಿಯುವ ಮೊದಲೇ ತೀರ್ಪು ಕೊಡುವುದು ಬೇಡ : ಸ್ಪೀಕರ್‌ ಖಾದರ್‌ ಮನವಿ Read More »

ವಿಜಯಪುರ-ಮಂಗಳೂರು ರೈಲು ಇನ್ನು ಕಾಯಂ ಸಂಚಾರ

ಸೆ.1ರಿಂದ ಕಾಯಂಗೊಳಿಸಿ ನೈಋತ್ಯ ರೈಲ್ವೆ ಆದೇಶ ಮಂಗಳೂರು: ವಿಜಯಪುರ–ಮಂಗಳೂರು ನಡುವಿನ ಸೆಂಟ್ರಲ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 07377/78 ವಿಶೇಷ ರೈಲು) ಇನ್ನು ಮುಂದೆ ಕಾಯಂ ಆಗಿ ಓಡಲಿದೆ. ಇಷ್ಟರ ತನಕ ತಾತ್ಕಾಲಿಕ ನೆಲೆಯಲ್ಲಿ ಸಂಚಾರ ನಡೆಸುತ್ತಿದ್ದ ಈ ರೈಲಿನ ಅವಧಿಯನ್ನು ಕಾಲಕಾಲಕ್ಕೆ ವಿಸ್ತರಿಸಲಾಗುತ್ತಿತ್ತು. ಇದೀಗ ನೈರುತ್ಯ ರೈಲ್ವೆ ವಲಯ ರೈಲು ಸೇವೆಯನ್ನು ಕಾಯಂಗೊಳಿಸಿ ಆದೇಶ ಹೊರಡಿಸಿದೆ. ವಿಜಯಪುರದಿಂದ ಸೆಪ್ಟೆಂಬರ್ 1 ಹಾಗೂ ಮಂಗಳೂರು ಸೆಂಟ್ರಲಿನಿಂದ ಸೆಪ್ಟೆಂಬರ್ 2ರಿಂದ ಈ ರೈಲು ಕಾಯಂ ರೈಲಾಗಿ ಓಡಲಿದೆ. ಈ ರೈಲನ್ನು

ವಿಜಯಪುರ-ಮಂಗಳೂರು ರೈಲು ಇನ್ನು ಕಾಯಂ ಸಂಚಾರ Read More »

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ 3 ಕಿ.ಮೀ. ವ್ಯಾಪ್ತಿಯಲ್ಲಿ ಆ.15ರಿಂದ ಪ್ಲಾಸ್ಟಿಕ್‌ ನಿಷೇಧ

ಏಕಬಳಕೆ ಪ್ಲಾಸ್ಟಿಕ್‌ ನಿಷೇಧಿಸಿ ಆದೇಶ; ಬಳಸಿದರೆ ಕಠಿಣ ದಂಡನೆ ಸುಬ್ರಹ್ಮಣ್ಯ : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರವಾಗಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.15ರಿಂದ ಏಕಬಳಕೆಯ ಪ್ಲಾಸ್ಟಿಕ್‌ ಚೀಲಗಳ ಬಳಕೆ ಸಂಪೂರ್ಣವಾಗಿ ರದ್ದಾಗಲಿದೆ. ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎಲ್ಲಾ ದೇವಸ್ಥಾನಗಳಲ್ಲಿ ಏಕಬಳಕೆಯ ಪ್ಲಾಸ್ಟಿಕ್‌ ಉತ್ಪಾದನೆ, ಸಂಗ್ರಹ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು, ಈ ಪ್ರಕಾರ ಸುಬ್ರಹ್ಮಣ್ಯ ಕ್ಷೇತ್ರದಲ್ಲೂ ಪ್ಲಾಸ್ಟಿಕ್‌ ಬಳಕೆ ನಿಷೇಧವಾಗಲಿದೆ. ಪ್ಲಾಸ್ಟಿಕ್‌ನ ನೀರಿನ ಬಾಟಲಿ ಅಂತೆಯೇ ಏಕಬಳಕೆಯ ತೆಳು ಪ್ಲಾಸ್ಟಿಕ್‌ ಚೀಲಗಳು ಸೇರಿದಂತೆ ಎಲ್ಲ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ 3 ಕಿ.ಮೀ. ವ್ಯಾಪ್ತಿಯಲ್ಲಿ ಆ.15ರಿಂದ ಪ್ಲಾಸ್ಟಿಕ್‌ ನಿಷೇಧ Read More »

ನಿಲ್ಲಿಸಿದ್ದ ಬಸ್ಸಿನ ಒಳಗೆ ಬೆಂಕಿ ಅವಘಡ : ಅಪರಿಚಿತ ವ್ಯಕ್ತಿ ಸಜೀವ ದಹನ

ಮೂರು ತಿಂಗಳಿಂದ ರಸ್ತೆ ಬದಿ ಅನಾಥ ಸ್ಥಿತಿಯಲ್ಲಿದ್ದ ಬಸ್‌ ಬೆಂಗಳೂರು: ಬಾಣಸವಾಡಿ ಅಗ್ನಿಶಾಮಕದಳ ಕಚೇರಿ ಬಳಿಯೇ ಶಾಲಾ ವಾಹನವೊಂದರ ಒಳಗೆ ಬೆಂಕಿ ಅವಘಡ ಸಂಭವಿಸಿ ಅದರೊಳಗಿದ್ದ ವ್ಯಕ್ತಿ ಸಜೀವ ದಹನ ಆದ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಒಎಂಬಿಆರ್‌ ಲೇಔಟ್‌ನಲ್ಲಿ ರಾತ್ರಿ 10 ಗಂಟೆ ವೇಳೆಗೆ ಬಸ್ಸಿನ ಒಳಗೆ ಬೆಂಕಿ ಹತ್ತಿಕೊಂಡಿದೆ. ಕೂಡಲೇ ಅಗ್ನಿಶಾಮಕದಳ ವಾಹನ ದೌಡಾಯಿಸಿ ಬೆಂಕಿ‌ ನಂದಿಸಿದೆ. ಆದರೆ ಬಸ್ಸಿನ ಒಳಗೆ ಇದ್ದ ವ್ಯಕ್ತಿಯನ್ನು ಉಳಿಸಲು ಸಾಧ್ಯವಾಗಿಲ್ಲ. ಬಸ್‌ನ ಒಳಗೆ ಸಂಪೂರ್ಣ ಸುಟ್ಟು ಕರಕಲಾದ

ನಿಲ್ಲಿಸಿದ್ದ ಬಸ್ಸಿನ ಒಳಗೆ ಬೆಂಕಿ ಅವಘಡ : ಅಪರಿಚಿತ ವ್ಯಕ್ತಿ ಸಜೀವ ದಹನ Read More »

ನಿಂತಿದ್ದ ಲಾರಿಗೆ ವ್ಯಾನ್‌ ಡಿಕ್ಕಿ : 7 ಮಕ್ಕಳ ಸಹಿತ 10 ಮಂದಿ ಸಾವು

ದೇವಸ್ಥಾನದಿಂದ ಹಿಂದಿರುಗುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತ ಜೈಪುರ: ಪಿಕ್​​ಅಪ್ ವ್ಯಾನ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ 7 ಮಕ್ಕಳು ಸೇರಿ 10 ಮಂದಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ದೌಸಾ ಎಂಬಲ್ಲಿ ಇಂದು ನಸುಕಿನ ಹೊತ್ತು ನಡೆದಿದೆ. ಪಿಕ್‌ಅಪ್‌ ವ್ಯಾನಿನಲ್ಲಿದ್ದವರು ಖತುಶ್ಯಾಮ್​ ದೇವಸ್ಥಾನಕ್ಕೆ ಭೇಟಿ ನೀಡಿ ಮನೆಗೆ ಹಿಂದಿರುಗುತ್ತಿದ್ದಾಗ ಈ ದುರಂತ ನಸುಕಿನ 3.30ರ ವೇಳೆಗೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸುಮಾರು 7-8 ಜನರನ್ನು ಜೈಪುರದ ಎಸ್​ಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನಿಂತಿದ್ದ ಲಾರಿಗೆ ವ್ಯಾನ್‌ ಡಿಕ್ಕಿ : 7 ಮಕ್ಕಳ ಸಹಿತ 10 ಮಂದಿ ಸಾವು Read More »

ಆ.17ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ

ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನಿಗೆ ವಿಶೇಷ ಪೂಜೆ ಸಲ್ಲಿಸಲಿರುವ ಬಿಜೆಪಿ ಶಾಸಕರು ಬೆಂಗಳೂರು: ಹೆಣಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಿ ಹಿಂದುಗಳ ಪುಣ್ಯಕ್ಷೇತ್ರವಾಗಿರುವ ಧರ್ಮಸ್ಥಳದ ವಿರುದ್ಧ ನಿರಂತರವಾಗಿ ನಡೆಯುತ್ತಿರುವ ಅಪಪ್ರಚಾರ ಹಾಗೂ ತೇಜೋವಧೆಯ ವಿರುದ್ಧ ಬಿಜೆಪಿ ಅಖಾಡಕ್ಕಿಳಿದಿದೆ. ತಲೆಬುರುಡೆ ಶೋಧಕ್ಕಾಗಿ ಧರ್ಮಸ್ಥಳದಲ್ಲಿ ಕಳೆದ ಸುಮಾರು 14 ದಿನಗಳಿಂದ ನಡೆಯುತ್ತಿರುವ ಅಗೆತ ಕಾರ್ಯಾಚರಣೆ ಹಾಗೂ ಇದರ ಸುತ್ತಮುತ್ತ ನಡೆಯುತ್ತಿರುವ ಬೆಳವಣಿಗೆಗಳಿಂದ ಧರ್ಮಸ್ಥಳದ ಪಾವಿತ್ರ್ಯಕ್ಕೆ ಅಪಚಾರವಾಗುತ್ತಿದೆ ಎಂದು ಬಿಜೆಪಿ ಶಾಸಕರು ಸದನದಲ್ಲೂ ಮಾತನಾಡಿದ್ದಾರೆ. ಇದರ ಬೆನ್ನಿಗೆ ಬಿಜೆಪಿ ಧರ್ಮಸ್ಥಳ ಚಲೋ

ಆ.17ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ Read More »

error: Content is protected !!
Scroll to Top