ಸುದ್ದಿ

ಕಾರು ಡಿಕ್ಕಿ : ರಸ್ತೆ ಬದಿ ನಿಂತಿದ್ದ ಬೇಕರಿ ಮಾಲೀಕನಿಗೆ ಗಂಭಿರ ಗಾಯ

ಸ್ಕೂಟಿ ಪಂಕ್ಚರ್‌ ಆದ ಹಿನ್ನೆಲೆಯಲ್ಲಿ ರಸ್ತೆ ಬದಿ ನಿಂತಿದ್ದಾಗ ಡಿಕ್ಕಿ ಹೊಡೆದ ಕಾರು ವಿಟ್ಲ: ಕಾರು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಿಂತಿದ್ದ ದ್ವಿಚಕ್ರ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ಬೆಳಗ್ಗೆ ವಿಟ್ಲ ಠಾಣಾ ವ್ಯಾಪ್ತಿಯ ಪರ್ತಿಪ್ಪಾಡಿ ಎಂಬಲ್ಲಿ ನಡೆದಿದೆ. ಕುಡ್ತಮುಗೇರಿನ ಪ್ರಗತಿ ಸ್ವೀಟ್ಸ್ ಬೇಕರಿಯ ಮಾಲೀಕ ಜಗನ್ನಾಥ ಶೆಟ್ಟಿಗಾರ್ ಗಂಭೀರ ಗಾಯಗೊಂಡವರು. ಜಗನ್ನಾಥ ಶೆಟ್ಟಿಗಾರ್ ಇಂದು ಬೆಳಗ್ಗೆ ಕುಡ್ತಮುಗೇರಿನಿಂದ ಪರ್ತಿಪ್ಪಾಡಿ ಕಡೆಗೆ ತೆರಳುತ್ತಿದ್ದ ವೇಳೆ ದಾರಿಮಧ್ಯೆ ಅವರ ದ್ವಿಚಕ್ರ ವಾಹನದ ಟಯರ್ ಪಂಕ್ಚರ್ […]

ಕಾರು ಡಿಕ್ಕಿ : ರಸ್ತೆ ಬದಿ ನಿಂತಿದ್ದ ಬೇಕರಿ ಮಾಲೀಕನಿಗೆ ಗಂಭಿರ ಗಾಯ Read More »

ಧರ್ಮಸ್ಥಳ ಪ್ರಕರಣ : ಮುಸುಕುಧಾರಿಯಿಂದ ಗನ್‌ಮ್ಯಾನ್‌ ಭದ್ರತೆಗೆ ಕೋರಿಕೆ

ನನ್ನ ಮೇಲೂ ದಾಳಿಯಾಗುವ ಸಾಧ್ಯತೆಯಿದೆ ಎಂದು ಎಸ್‌ಐಟಿ ಮುಂದೆ ಹೇಳಿಕೊಂಡ ದೂರುದಾರ ಮಂಗಳೂರು: ಧರ್ಮಸ್ಥಳ ಪ್ರಕರಣದ ಕೇಂದ್ರವಾಗಿರುವ ಮುಸುಕುಧಾರಿ ಅನಾಮಿಕ ವ್ಯಕ್ತಿ ಎಸ್‌ಐಟಿ ಬಳಿ ತನಗೆ ಗನ್‌ಮ್ಯಾನ್‌ ರಕ್ಷಣೆ ನೀಡುವಂತೆ ಕೋರಿಕೆ ಸಲ್ಲಿಸಿದ್ದಾರೆ. ಬುಧವಾರ ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲೆ ಹಲ್ಲೆ ಮಾಡಿದ ಬಳಿಕ ತುಸು ಉದ್ವಿಗ್ನ ವಾತಾವರಣವಿದೆ. ಬುಧವಾರ ಸಂಜೆ ಧರ್ಮಸ್ಥಳದಲ್ಲಿ ನಡೆದ ಘರ್ಷಣೆಯ ಬಳಿಕ ದೂರುದಾರನಿಂದ ಈ ವಿಶೇಷ ಮನವಿ ಬಂದಿದೆ. ನನ್ನ ಮೇಲೂ ದಾಳಿ ನಡೆಸುವ ಸಾಧ್ಯತೆ ಇರುವುದರಿಂದ ಗನ್‌ಮ್ಯಾನ್‌ ನೀಡಬೇಕೆಂದು ಮನವಿ ಮಾಡಿದ್ದಾರೆ.

ಧರ್ಮಸ್ಥಳ ಪ್ರಕರಣ : ಮುಸುಕುಧಾರಿಯಿಂದ ಗನ್‌ಮ್ಯಾನ್‌ ಭದ್ರತೆಗೆ ಕೋರಿಕೆ Read More »

ಮತಕಳ್ಳತನ ಆರೋಪ ಮಾಡಿದ ರಾಹುಲ್‌ ಗಾಂಧಿಗೆ ಬಿಜೆಪಿ 13 ಪ್ರಶ್ನೆ

ಇವುಗಳಿಗೆಲ್ಲ ನೀವು ಕ್ಷಮೆ ಯಾಚಿಸುವುದು ಯಾವಾಗ ಎಂದು ಕೇಳಿದ ಬಿಜೆಪಿ ಬೆಂಗಳೂರು : ಕಳೆದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಒಂದು ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್ ಪ್ರಮಾಣದ ಮತ ವಂಚನೆಯಾಗಿದೆ ಎಂದು ಆರೋಪಿಸಿ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಕರ್ನಾಟಕ ಬಿಜೆಪಿ 13 ಪ್ರಶ್ನೆಗಳನ್ನು ಕೇಳುವ ಮೂಲಕ ತಿರುಗೇಟು ನೀಡಿದೆ. *ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಾಗಿದ್ದ 40 ಸಾವಿರ ಕೋಟಿ ರೂ. ಅನುದಾನವನ್ನು ಅಲ್ಪಸಂಖ್ಯಾತರ ಕಲ್ಯಾಣಕ್ಕೆ ವಿನಿಯೋಗಿಸುವ ಮೂಲಕ ನಿಮ್ಮ ಸರ್ಕಾರ ಪರಿಶಿಷ್ಟರಿಗೆ ಮಹಾದ್ರೋಹ

ಮತಕಳ್ಳತನ ಆರೋಪ ಮಾಡಿದ ರಾಹುಲ್‌ ಗಾಂಧಿಗೆ ಬಿಜೆಪಿ 13 ಪ್ರಶ್ನೆ Read More »

ಕೌಶಲ್ಯಕ್ಕೆ ತಕ್ಕ ವೃತ್ತಿಯನ್ನು ಆರಿಸಿಕೊಳ್ಳಿ | ಪಯಣ ಕಾರ್ಯಕ್ರಮದಲ್ಲಿ ನಿತಿನ್

ಪುತ್ತೂರು: ಸ್ನಾತಕೋತ್ತರ ಶಿಕ್ಷಣ ವಿದ್ಯಾರ್ಥಿಗಳಲ್ಲಿರುವ ಕೌಶಲ್ಯಗಳನ್ನು ಅಭಿವೃದ್ಧಿಗೊಳಿಸುತ್ತದೆ. ವಿದ್ಯಾರ್ಥಿಗಳು ಶಿಕ್ಷಣ ಮುಗಿಸಿದ ನಂತರ ತಮ್ಮ ಕೌಶಲ್ಯಗಳಿಗನುಸಾರವಾಗಿ ವಿಭಿನ್ನ ಹಾದಿಯಲ್ಲಿ ಬದುಕನ್ನು ಕಟ್ಟಿಕೊಳ್ಳಬೇಕು. ಜೀವನದಲ್ಲಿಯಶಸ್ಸು ಪಡೆಯುವ ಮಾರ್ಗಗಳನ್ನು ಅನುಸರಿಸಬೇಕು ಎಂದು ಅಮೇರಿಕಾದ ಝಿಂಟೆಕ್ ಹೂಸ್ಟನ್ ಕಂಪನಿ ಉದ್ಯೋಗಿ ನಿತಿನ್ ಹೇಳಿದರು.ಅವರು ನಗರದ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಸ್ವಾಯತ್ತ ಮಹಾವಿದ್ಯಾಲಯದ ಐಕ್ಯೂಎಸಿ ಘಟಕ ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಜಂಟಿ ಆಶ್ರಯದಲ್ಲಿ ನಡೆದ ಪಯಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಅನುಭವೀ ವ್ಯಕ್ತಿಗಳ ಜತೆಗೆ, ಸಮಯವನ್ನು ಕಳೆದು ವೃತ್ತಿಜೀವನದ

ಕೌಶಲ್ಯಕ್ಕೆ ತಕ್ಕ ವೃತ್ತಿಯನ್ನು ಆರಿಸಿಕೊಳ್ಳಿ | ಪಯಣ ಕಾರ್ಯಕ್ರಮದಲ್ಲಿ ನಿತಿನ್ Read More »

ಬೀಡಿಕಾರ್ಮಿಕರ ಬೋನಸ್ ಸಾವಿರ ಬೀಡಿಗೆ ರೂ. 43.34

ಪುತ್ತೂರು: ಪ್ರತಿ ವರ್ಷದಂತೆ ಈ ವರ್ಷವೂ ಬೀಡಿಕಾರ್ಮಿಕರ ಬೋನಸ್, ರಜಾಸಂಬಳ, ಹಬ್ಬದ ರಜಾಸಂಬಳ ಒಟ್ಟಿಗೆ ಬಿಡುಗಡೆಯಾಗಿದ್ದು ಪ್ರತಿ ಸಾವಿರ ಬೀಡಿಗೆ ರೂ. 43.34 ರಂತೆ ಅಂದರೆ ಒಂದು ಲಕ್ಷ ಬೀಡಿಕಟ್ಟಿದವರಿಗೆತಲಾ ರೂ.4,334 ಬೋನಸ್ ಸಿಗಲಿದೆ ಎಂದು ಪುತ್ತೂರು ತಾಲೂಕು ಬೀಡಿಕೆಲಸಗಾರರ ಸಂಘದ ಅಧ್ಯಕ್ಷ, ನ್ಯಾಯವಾದಿ ಪಿ.ಕೆ.ಸತೀಶನ್, ಕಾರ್ಯದರ್ಶಿ ಬಿ.ಎಂ.ಭಟ್, ಖಜಾಂಜಿ ಈಶ್ವರಿ ಶಂಕರ್ ಮುಂಡೂರು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅದಲ್ಲದೆ ಸರಕಾರ ನಿಗದಿ ಪಡಿಸಿದ ಹೊಸ ಕನಿಷ್ಟ ಕೂಲಿ ಪ್ರತಿ ಸಾವಿರ ಬೀಡಿಗೆ ರೂ. 391.92 ರಂತೆ

ಬೀಡಿಕಾರ್ಮಿಕರ ಬೋನಸ್ ಸಾವಿರ ಬೀಡಿಗೆ ರೂ. 43.34 Read More »

ಧರ್ಮಸ್ಥಳ ಪ್ರಕರಣ : ಪುನೀತ್‌ ಕೆರೆಹಳ್ಳಿ, ಮಟ್ಟಣ್ಣವರ್‌, ತಿಮರೋಡಿ ವಿರುದ್ಧ ಎಫ್‌ಐಆರ್‌

ಗಲಭೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಕೇಸ್‌ ಬೆಳ್ತಂಗಡಿ : ಧರ್ಮಸ್ಥಳದಲ್ಲಿ ನಡೆದ ಗುಂಪು ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಪುನೀತ್ ಕೆರೆಹಳ್ಳಿ ವಿರುದ್ಧ ಪ್ರತ್ಯೇಕ ದೂರುಗಳು ದಾಖಲಾಗಿವೆ. ಧರ್ಮಸ್ಥಳದಲ್ಲಿ ಬುಧವಾರ ಸಂಭವಿಸಿದ ಗಲಭೆ ಪ್ರಕರಣದಲ್ಲಿ ಗಲಾಟೆಗೆ ಪ್ರಚೋದನೆ ನೀಡಿದ್ದಕ್ಕಾಗಿ ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಪುನೀತ್ ಕೆರೆಹಳ್ಳಿ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಧರ್ಮಸ್ಥಳದಲ್ಲಿ ನಡೆದ ಗಲಭೆಯಲ್ಲಿ ಅಪರಾಧಿಕ ಕೃತ್ಯಗಳನ್ನು ನಡೆಸಲು ದುಷ್ಪ್ರೇರಣೆಯಾಗುವಂತೆ ಮಾತನಾಡಿದ್ದಾರೆ

ಧರ್ಮಸ್ಥಳ ಪ್ರಕರಣ : ಪುನೀತ್‌ ಕೆರೆಹಳ್ಳಿ, ಮಟ್ಟಣ್ಣವರ್‌, ತಿಮರೋಡಿ ವಿರುದ್ಧ ಎಫ್‌ಐಆರ್‌ Read More »

ಬಾಲಿವುಡ್‌ ನಟಿ ಹುಮಾ ಖುರೇಶಿ ಸಹೋದರನ ಬರ್ಬರ ಹತ್ಯೆ

ಸ್ಕೂಟಿ ಪಾರ್ಕಿಂಗ್‌ ವಿಚಾರದಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ ಮುಂಬಯಿ: ಪಾರ್ಕಿಂಗ್ ವಿವಾದಕ್ಕೆ ಸಂಬಂಧಿಸಿ ನಡೆದ ಜಗಳದಲ್ಲಿ ಹಿಂದಿಯ ಜನಪ್ರಿಯ ನಟಿ ಹುಮಾ ಖುರೇಷಿ ಅವರ ಸಹೋದರ ಆಸಿಫ್ ಖುರೇಷಿ ಬರ್ಬರವಾಗಿ ಕೊಲೆಯಾಗಿದ್ದಾರೆ. ದೆಹಲಿಯ ನಿಜಾಮುದ್ದೀನ್‌ನಲ್ಲಿ ಸ್ಕೂಟಿ ಪಾರ್ಕಿಂಗ್ ವಿಚಾರದಲ್ಲಿ ಜಗಳ ನಡೆದು ಆಸಿಫ್‌ ಅವರನ್ನು ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಆಸಿಫ್ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಪೊಲೀಸರು ಇಬ್ಬರು ಆರೋಪಿಗಳನ್ನು ಅಲ್ಪಾವಧಿಯಲ್ಲಿಯೇ ಬಂಧಿಸಿದ್ದಾರೆ. ಗುರುವಾರ ನಿಜಾಮುದ್ದೀನ್‌ನ ಜಂಗ್‌ಪುರ ಭೋಗಲ್ ಬಜಾರ್ ಲೇನ್‌ನಲ್ಲಿ ರಾತ್ರಿ 11

ಬಾಲಿವುಡ್‌ ನಟಿ ಹುಮಾ ಖುರೇಶಿ ಸಹೋದರನ ಬರ್ಬರ ಹತ್ಯೆ Read More »

ಮಂಗಳೂರೇ ಭಾರತದಲ್ಲಿ ಅತ್ಯಂತ ಸುರಕ್ಷಿತ ನಗರ

ಜಾಗತಿಕವಾಗಿ ನಡೆದ ಸಮೀಕ್ಷೆಯಲ್ಲಿ ಕುಡ್ಲಕ್ಕೆ ಸಿಕ್ಕಿದ ಅಪೂರ್ವ ಹಿರಿಮೆ ಮಂಗಳೂರು: ದೇಶದಲ್ಲೇ ಅತ್ಯಂತ ಸುರಕ್ಷಿತ ನಗರ ಎಂದರೆ ನಮ್ಮ ಮಂಗಳೂರು. ಜಾಗತಿಕ ಸಂಸ್ಥೆಯೊಂದು ನಡೆಸಿದ ಸಮೀಕ್ಷೆಯಲ್ಲಿ ಮಂಗಳೂರಿಗೆ ಈ ಅಪೂರ್ವವಾದ ಹಿರಿಮೆ ಸಿಕ್ಕಿದೆ. ಡೇಟಾ ಸಂಸ್ಥೆ ನಂಬಿಯೊ ಪ್ರಕಟಿಸಿದ 2025ರ ಮಧ್ಯಭಾಗದ ಸುರಕ್ಷತಾ ಸೂಚ್ಯಂಕ ವರದಿಯಲ್ಲಿ ಮಂಗಳೂರು ನಗರ ಭಾರತದ ಅತ್ಯಂತ ಸುರಕ್ಷಿತ ನಗರವೆಂಬ ಸ್ಥಾನವನ್ನು ಪಡೆದುಕೊಂಡಿದೆ. 74.2 ಸುರಕ್ಷತಾ ಅಂಕಗಳೊಂದಿಗೆ ದೇಶದಲ್ಲಿ ಅಗ್ರಸ್ಥಾನದಲ್ಲಿರುವ ಮಂಗಳೂರು ಜಾಗತಿಕ ಮಟ್ಟದಲ್ಲಿ 49ನೇ ಶ್ರೇಯಾಂಕವನ್ನು ಗಳಿಸಿದೆ. ನಗರದ ಈ ಉನ್ನತ

ಮಂಗಳೂರೇ ಭಾರತದಲ್ಲಿ ಅತ್ಯಂತ ಸುರಕ್ಷಿತ ನಗರ Read More »

ಕಿವಿಗೆ ವಿಷ ಸುರಿದು ಗಂಡನನ್ನು ಕೊಂದ ಮಹಿಳೆ!

ಯೂಟ್ಯೂಬ್‌ ನೋಡಿ ಸಾಯಿಸುವ ಖತರ್‌ನಾಕ್‌ ಐಡಿಯಾ ಕಂಡುಕೊಂಡಿದ್ದ ಹೆಂಡತಿ ಹೈದರಾಬಾದ್‌: ಆಹಾರದಲ್ಲಿ ವಿಷಬೆರೆಸಿ ಸಾಯಿಸುವುದು ಸಾಮಾನ್ಯ ವಿಚಾರ. ಆದರೆ ತೆಲಂಗಾಣದ ಮಹಿಳೆಯೊಬ್ಬಳು ಗಂಡನನ್ನು ಸಾಯಿಸಲು ಬೇರೆಯೇ ಆದ ವಿಧಾನ ಅನುಸರಿಸಿದ್ದಾಳೆ. ಈಕೆ ಕಿವಿಗೆ ವಿಷ ಸುರಿದು ಗಂಡನನ್ನು ಸಾಯಿಸಿದ್ದಾಳೆ. ಈಕೆಗೆ ಈ ಖತರ್‌ನಾಕ್‌ ಐಡಿಯಾ ಸಿಕ್ಕಿದ್ದು ಯೂಟ್ಯೂಬ್‌ನಲ್ಲಂತೆ. ಮಹಿಳೆ ತನ್ನ ಪ್ರಿಯಕರನ ಜೊತೆ ಸೇರಿ ಗಂಡನನ್ನು ಅತ್ಯಂತ ಕ್ರೂರವಾಗಿ ಕೊಲೆ ಮಾಡಿದ್ದಾಳೆ. ಈ ಕೊಲೆಗೆ ಎಷ್ಟು ಚೆನ್ನಾಗಿ ಸಂಚು ರೂಪಿಸಲಾಗಿತ್ತೆಂದರೆ ಮೊದಲು ಪೊಲೀಸರಿಗೆ ಕೂಡ ಈ ರೀತಿ

ಕಿವಿಗೆ ವಿಷ ಸುರಿದು ಗಂಡನನ್ನು ಕೊಂದ ಮಹಿಳೆ! Read More »

ಲಕ್ಷ ದಾಟಿದ ಚಿನ್ನ, ಬೆಳ್ಳಿ ಬೆಲೆ : ಏರಿಕೆಯಲ್ಲಿ ಸಾರ್ವಕಾಲಿಕ ದಾಖಲೆ

ಟ್ರಂಪ್‌ ಡಬ್ಬಲ್‌ ಸುಂಕದಿಂದ ಚಿನ್ನದ ಮಾರುಕಟ್ಟೆಯಲ್ಲಿ ಬಿರುಗಾಳಿ ನವದೆಹಲಿ: ಭಾರತೀಯ ಆಮದುಗಳ ಮೇಲೆ ಟ್ರಂಪ್‌ ಹೆಚ್ಚುವರಿ ಶೇ.25 ಸುಂಕ ವಿಧಿಸಿದ ಪರಿಣಾಮ ಚಿನ್ನದ ಬೆಲೆ ಭಾರಿ ಏರಿಕೆ ಕಂಡಿದೆ.ಭಾರತದ ಮೇಲೆ ಟ್ರಂಪ್‌ ಸುಂಕ ಘೋಷಿಸಿದ ಹಿನ್ನೆಲೆ ಹೂಡಿಕೆದಾರರು ಸುರಕ್ಷಿತ ಹೂಡಿಕೆಗಳತ್ತ ಮುಖ ಮಾಡಿದ್ದಾರೆ. ಹೀಗಾಗಿ ಚಿನ್ನದ ಬೆಲೆ 3,600 ರೂ. ಏರಿಕೆಯಾಗಿದ್ದು, 10 ಗ್ರಾಂಗೆ 1,02,620 ರೂ.ಗೆ ತಲುಪಿ ದಾಖಲೆ ಮಾಡಿದೆ.‌ ಅಖಿಲ ಭಾರತ ಸರಾಫ ಸಂಘದ ಪ್ರಕಾರ ಶೇ.99.9 ಶುದ್ಧತೆಯ ಚಿನ್ನ ಬುಧವಾರ 10 ಗ್ರಾಂಗೆ

ಲಕ್ಷ ದಾಟಿದ ಚಿನ್ನ, ಬೆಳ್ಳಿ ಬೆಲೆ : ಏರಿಕೆಯಲ್ಲಿ ಸಾರ್ವಕಾಲಿಕ ದಾಖಲೆ Read More »

error: Content is protected !!
Scroll to Top