ಸುದ್ದಿ

ಅಂಬೇಡ್ಕರ್‌ಗೆ ಅವಮಾನ : ನಟ ಪ್ರಥಮ್‌ಗೆ ಮಸಿ ಬಳಿದ ದಲಿತ ಮುಖಂಡರು

ಪೊಲೀಸ್‌ ಠಾಣೆ ಎದುರೇ ನಟನನ್ನು ಅಡ್ಡಗಟ್ಟಿ ಕ್ಷಮೆ ಕೇಳಲು ಒತ್ತಾಯ ಬೆಂಗಳೂರು: ಅಂಬೇಡ್ಕರ್‌ಗೆ ಅಪಮಾನ ಮಾಡಿದ ಆರೋಪದ ಮೇಲೆ ಕನ್ನಡ ನಟ ಪ್ರಥಮ್‌ಗೆ ದಲಿತ ಸಂಘಟನೆಗಳ ಮುಖಂಡರು ಮಸಿ ಬಳಿದಿರುವ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಎದುರು ನಡೆದಿದೆ. ಜೀವ ಬೆದರಿಕೆ ಆರೋಪದ ಪ್ರಕರಣ ಸಂಬಂಧ ಪ್ರಥಮ್ ವಿಚಾರಣೆಗೆ ಪೊಲೀಸ್ ಠಾಣೆಗೆ ಆಗಮಿಸಿದ್ದರು. ಠಾಣೆಯಿಂದ ಹೊರಬಂದ ಕೂಡಲೇ ನಟನನ್ನು ದಲಿತ ಸಂಘಟನೆಗಳ ಮುಖಂಡರು ಅಡ್ಡಗಟ್ಟಿ ಕ್ಷಮೆ ಕೇಳುವಂತೆ ಒತ್ತಾಯಿಸಿದ್ದಾರೆ. ಸ್ಪಷ್ಟನೆ ನೀಡಲು ಮುಂದಾದ ಪ್ರಥಮ್‌ಗೆ ದಲಿತ […]

ಅಂಬೇಡ್ಕರ್‌ಗೆ ಅವಮಾನ : ನಟ ಪ್ರಥಮ್‌ಗೆ ಮಸಿ ಬಳಿದ ದಲಿತ ಮುಖಂಡರು Read More »

ಗ್ಯಾಸ್‌ ಸಿಲಿಂಡರ್‌ ಬೆಲೆ 34 ರೂ. ಇಳಿಕೆ

ನಾಲ್ಕು ತಿಂಗಳಲ್ಲಿ ಸತತ ಕಡಿತ ನವದೆಹಲಿ : ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್​ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 33.50ರೂ.ನಷ್ಟು ಕಡಿತ ಮಾಡಿವೆ. ಕೋಲ್ಕತ್ತಾ ಮತ್ತು ಚೆನ್ನೈನಲ್ಲಿ ಅತಿ ಹೆಚ್ಚು ಕಡಿತ ಮಾಡಲಾಗಿದೆ. ಆದರೆ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಮಹಾನಗರಗಳಲ್ಲಿ 19 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 33.5 ರೂ.ಗಳಿಂದ 34.5 ರೂ.ಗಳಿಗೆ ಇಳಿಸಲಾಗಿದೆ. ಚೆನ್ನೈಯಲ್ಲಿ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಈಗ ಪ್ರತಿ ಸಿಲಿಂಡರ್‌ಗೆ 1,800 ರೂ.ಗಳಿಗಿಂತ

ಗ್ಯಾಸ್‌ ಸಿಲಿಂಡರ್‌ ಬೆಲೆ 34 ರೂ. ಇಳಿಕೆ Read More »

ಬಂಟ್ವಾಳ : ಅಡಿಕೆ ಕಳ್ಳನ ಬಂಧನ

2,20,00 ರೂ. ಮೌಲ್ಯದ ಒಣ ಅಡಿಕೆ ಕಳ್ಳತನ ಮಾಡಿದ್ದ ಆರೋಪಿ ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಣಿನಾಲ್ಕೂರು ಗ್ರಾಮದ ಪೂಂಜೂರು ಎಂಬಲ್ಲಿ ಜುಲೈ 3ರಿಂದ 22ರ ಅವಧಿಯಲ್ಲಿ ಸುಮಾರು 45 ಪ್ಲಾಸ್ಟಿಕ್ ಚೀಲದಲ್ಲಿದ್ದ 2,20,00 ರೂ. ಮೌಲ್ಯದ ಒಣ ಅಡಿಕೆ ಕಳ್ಳತನ ಪ್ರಕರಣವನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಜುಲೈ 28ರಂದು ಆರೋಪಿಗಳಲ್ಲಿ ಓರ್ವನಾದ ಸುಳ್ಯ ಪೈಚಾರು ಗ್ರಾಮ ನಿವಾಸಿ ಸತೀಶ್ (29 ವರ್ಷ) ಎಂಬಾತನನ್ನು ಬಂಧಿಸಿ ಕಳವುಗೈದ 74,000

ಬಂಟ್ವಾಳ : ಅಡಿಕೆ ಕಳ್ಳನ ಬಂಧನ Read More »

ತುಳುವಿಗೆ ಅಧಿಕೃತ ಭಾಷೆ ಸ್ಥಾನ ಅಧ್ಯಯನ ನಡೆಸಲು ಸಮಿತಿ ರಚಿಸಿದ ಸರ್ಕಾರ

ಆಂಧ್ರ ಪ್ರದೇಶಕ್ಕೆ ತೆರಳಿ ಮಾನದಂಡಗಳ ಕುರಿತು ಅಧ್ಯಯನ ನಡೆಸಲಿರುವ ಸಮಿತಿ ಮಂಗಳೂರು: ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸಲು ಅನುಸರಿಸಬೇಕಾದ ಮಾನದಂಡಗಳ ಬಗ್ಗೆ ಆಂಧ್ರ ಪ್ರದೇಶಕ್ಕೆ ತೆರಳಿ ಅಧ್ಯಯನ ನಡೆಸಲು ರಾಜ್ಯ ಸರಕಾರ ಸಮಿತಿ ರಚಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರ ಸಹಿತ 5 ಮಂದಿಯ ತಂಡವನ್ನು ಎರಡನೇ ಭಾಷೆಯನ್ನು ಅಧಿಕೃತ ಭಾಷೆ ಎಂದು ಘೋಷಿಸಲು ಅನುಸರಿಸಿರುವ ಮಾನದಂಡಗಳ ಅಧ್ಯಯನ ಮಾಡುವ ಸಲುವಾಗಿ ರಚನೆ ಮಾಡಲಾಗಿದೆ.

ತುಳುವಿಗೆ ಅಧಿಕೃತ ಭಾಷೆ ಸ್ಥಾನ ಅಧ್ಯಯನ ನಡೆಸಲು ಸಮಿತಿ ರಚಿಸಿದ ಸರ್ಕಾರ Read More »

ಮಂಗಳೂರಿನಲ್ಲಿ ಎನ್‌ಐಎ ಕಚೇರಿ ಸ್ಥಾಪನೆ : ಅಮಿತ್‌ ಶಾಗೆ ಕ್ಯಾ.ಬ್ರಿಜೇಶ್‌ ಚೌಟ ಮನವಿ

ಕರಾವಳಿಯಲ್ಲಿ ಉಗ್ರರ ಸ್ಲೀಪರ್‌ ಸೆಲ್‌ಗಳ ಆತಂಕ ಇರುವ ಹಿನ್ನೆಲೆಯಲ್ಲಿ ಅಗತ್ಯ ಎಂದು ಮನವರಿಕೆ ಮಂಗಳೂರು: ಹಿಂದೂ ಕಾರ್ಯಕರ್ತರ ಹತ್ಯೆ, ಡ್ರಗ್ಸ್ ಮಾಫಿಯಾ, ಭಟ್ಕಳ, ಕಾಸರಗೋಡು ಸೇರಿದಂತೆ ಕರಾವಳಿ ಭಾಗದಲ್ಲಿ ಉಗ್ರ ಚಟುವಟಿಕೆಯ ಸ್ಲೀಪರ್ ಸೆಲ್‌ಗಳ ಆತಂಕದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಆದಷ್ಟು ಬೇಗ ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ದ ಕಚೇರಿ ಸ್ಥಾಪಿಸಬೇಕೆಂದು ಕೋರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಮನವಿ ಸಲ್ಲಿಸಿದ್ದಾರೆ. ಮಂಗಳೂರು ಭಟ್ಕಳ, ಕಾಸರಗೋಡಿನಂತಹ ಉಗ್ರ ಚಟುವಟಿಕೆಗಳ ಕೇಂದ್ರಗಳಿಗೆ

ಮಂಗಳೂರಿನಲ್ಲಿ ಎನ್‌ಐಎ ಕಚೇರಿ ಸ್ಥಾಪನೆ : ಅಮಿತ್‌ ಶಾಗೆ ಕ್ಯಾ.ಬ್ರಿಜೇಶ್‌ ಚೌಟ ಮನವಿ Read More »

ಟ್ರಂಪ್ ಸತ್ತ ಆರ್ಥಿಕತೆ ಹೇಳಿಕೆಗೆ ಖಡಕ್ ತಿರುಗೇಟು ನೀಡಿದ ಭಾರತ

ನವದೆಹಲಿ: ಯಾವುದೇ ವ್ಯಾಪಾರ ಒಪ್ಪಂದದ ಸಂದರ್ಭದಲ್ಲಿ ದೇಶದ ಹಿತಾಸಕ್ತಿಗೆ ಆದ್ಯತೆ ನೀಡಲಾಗುತ್ತದೆ ಎಂದು ಕೇಂದ್ರ ಸಚಿವ ಪೀಯುಷ್ ಗೋಯಲ್ ಹೇಳಿದ್ದಾರೆ. ಭಾರತದ ಸತ್ತ ಆರ್ಥಿಕತೆ ಎಂದ ಅಮೆರಿಕಾ ಅಧ್ಯಕ್ಷ ಟ್ರಂಪ್ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ಕಳೆದ ದಶಕದಲ್ಲಿ ಭಾರತ ದುರ್ಬಲ ಆರ್ಥಿಕತೆಯಿಂದ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕತೆಯಾಗಿ ಬೆಳೆಯುತ್ತಿದೆ ಎಂದಿದ್ದಾರೆ. ವಿಶ್ವದ ಆರ್ಥಿಕತೆಗಳಲ್ಲಿ ಭಾರತ ಬೆಳಗುತ್ತಿದೆ ಎಂದು ಜಾಗತಿಕ ಸಂಸ್ಥೆಗಳು, ಆರ್ಥಿಕ ತಜ್ಞರು ಹೇಳುತ್ತಿದ್ದಾರೆ ಎಂದು ಗೋಯಲ್ ನುಡಿದಿದ್ದಾರೆ.

ಟ್ರಂಪ್ ಸತ್ತ ಆರ್ಥಿಕತೆ ಹೇಳಿಕೆಗೆ ಖಡಕ್ ತಿರುಗೇಟು ನೀಡಿದ ಭಾರತ Read More »

ಮಾಲೇಗಾಂವ್‌ ಬಾಂಬ್‌ ಸ್ಫೋಟ ಪ್ರಕರಣ : ಬಿಜೆಪಿ ಮಾಜಿ ಸಂಸದೆ ಸಾಧ್ವಿ ಪ್ರಜ್ಞಾ ಠಾಕೂರ್‌ ದೋಷಮುಕ್ತಿ

17 ವರ್ಷದ ಬಳಿಕ ಎಲ್ಲ ಏಳು ಆರೋಪಿಗಳನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯ ಮುಂಬೈ: ನಾಸಿಕ್‌ ಸಮೀಪ ಮಾಲೇಗಾಂವ್‌ನಲ್ಲಿ 2008ರಲ್ಲಿ ಸಂಭವಿಸಿದ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಸಂಸದೆ ಪ್ರಜ್ಞಾ ಠಾಕೂರ್ ಸೇರಿ 7 ಆರೋಪಿಗಳನ್ನು ನ್ಯಾಯಾಲಯ ದೋಷಮುಕ್ತಿಗೊಳಿಸಿದೆ.ಪ್ರಕರಣ ಸಂಭವಿಸಿದ 17 ವರ್ಷಗಳ ಬಳಿಕ ತೀರ್ಪು ನೀಡುವ ಸಂದರ್ಭದಲ್ಲಿ ಎನ್‍ಐಎ ವಿಶೇಷ ಕೋರ್ಟ್ ಈ ಪ್ರಕರಣದ ತನಿಖೆಯೇ ಸರಿಯಾಗಿ ನಡೆದಿಲ್ಲ ಎಂದು ಅಭಿಪ್ರಾಯಪಟ್ಟು ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಏಪ್ರಿಲ್ 19ರಂದು ಪ್ರಕರಣದ ವಿಚಾರಣೆ ಮುಗಿಸಿದ್ದ ಕೋರ್ಟ್ ಮೇ

ಮಾಲೇಗಾಂವ್‌ ಬಾಂಬ್‌ ಸ್ಫೋಟ ಪ್ರಕರಣ : ಬಿಜೆಪಿ ಮಾಜಿ ಸಂಸದೆ ಸಾಧ್ವಿ ಪ್ರಜ್ಞಾ ಠಾಕೂರ್‌ ದೋಷಮುಕ್ತಿ Read More »

ಕಾಫಿರ್​ಗಳ ಮೇಲೆ ದಾಳಿ, ಸರ್ಕಾರ ಉರುಳಿಸಲು ಸಶಸ್ತ್ರ ದಂಗೆ : ಭಯಾನಕವಾಗಿದೆ ಲೇಡಿ ಟೆರರಿಸ್ಟ್‌ ಚಟುವಟಿಕೆ

ಆನ್‌ಲೈನ್‌ ಮೂಲಕ ಭಯೋತ್ಪಾದಕ ಚಟುವಟಿಕೆ ನಡೆಸುತ್ತಿದ್ದ ಶಮಾ ಪರ್ವೀನ್‌ ಅನ್ಸಾರಿ ಬೆಂಗಳೂರು : ನಿನ್ನೆ ಬೆಂಗಳೂರಿನಲ್ಲಿ ಸೆರೆಯಾಗಿರುವ ಲೇಡಿ ಟೆರರಿಸ್ಟ್‌ ಶಮಾ ಪರ್ವೀನ್ ಅನ್ಸಾರಿ ಅಲ್‌ಖೈದಾ ಸಂಘಟನೆಯ ಸಿದ್ಧಾಂತ ಪ್ರಚಾರಕಳಾಗಿದ್ದಳು. ಕಾಫಿರರನ್ನು ಕೊಲ್ಲುವುದು, ಸರ್ಕಾರ ಉರುಳಿಸಲು ಸಶಸ್ತ್ರ ದಂಗೆ ಎಬ್ಬಿಸುವುದು, ಕೋಮು ಗಲಭೆ ಸೃಷ್ಟಿಸಿ ಅಶಾಂತಿ ಉಂಟು ಮಾಡುವುದು ಮುಂತಾದ ಕೆಲಸಗಳನ್ನು ಮಾಡಲು ಆಕೆಯನ್ನು ನೇಮಿಸಿಕೊಳ್ಳಲಾಗಿತ್ತು ಎಂಬ ಭಯಾನಕ ವಿಚಾರ ಹೊರಬಿದ್ದಿದೆ. ಅಲ್ ಖೈದಾ ಉಗ್ರ ಸಂಘಟನೆ ಪರ ಬೆಂಗಳೂರಿನಿಂದ ಜಿಹಾದಿ ಚಟುವಟಿಕೆಗಳನ್ನು ನಡೆಸುತ್ತಿದ್ದ ಶಮಾ ಪರ್ವೀನ್

ಕಾಫಿರ್​ಗಳ ಮೇಲೆ ದಾಳಿ, ಸರ್ಕಾರ ಉರುಳಿಸಲು ಸಶಸ್ತ್ರ ದಂಗೆ : ಭಯಾನಕವಾಗಿದೆ ಲೇಡಿ ಟೆರರಿಸ್ಟ್‌ ಚಟುವಟಿಕೆ Read More »

ಧರ್ಮಸ್ಥಳ ಪ್ರಕರಣ : ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ಜಟಾಪಟಿ

ಎಸ್‌ಐಟಿ, ಸರ್ಕಾರ ನಿಗೂಢ ಮೌನ; ಬಿಜೆಪಿಯಿಂದ ತೀವ್ರ ಆಕ್ಷೇಪ ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವ ಆರೋಪದ ಬಗ್ಗೆ ಎಸ್‌ಐಟಿ ತನಿಖೆ ತೀವ್ರಗೊಳ್ಳುತ್ತಿರುವಂತೆಯೇ ಇತ್ತ ಸೋಷಿಯಲ್‌ ಮೀಡಿಯಾದಲ್ಲಿ ಪರ ಮತ್ತು ವಿರೋಧ ಚರ್ಚೆಯೂ ತೀವ್ರಗೊಂಡಿದೆ. ತನಿಖೆ ನಡೆಸುತ್ತಿರುವ ಎಸ್‌ಐಟಿ ಆಗಲಿ ಅಥವಾ ಸರ್ಕಾರವಾಗಲಿ ಪ್ರಕರಣದ ಬಗ್ಗೆ ಯಾವುದೇ ಅಧಿಕೃತ ಹೇಳಿಕೆಯನ್ನು ಇಷ್ಟರ ತನಕ ನೀಡಿಲ್ಲ. ಆದರೆ ಸೋಷಿಯಲ್‌ ಮೀಡಿಯಾ ಮತ್ತು ಕೆಲವು ಸುದ್ದಿ ವಾಹಿನಿಗಳಲ್ಲಿ ಈ ಬಗ್ಗೆ ನಾನಾ ರೀತಿಯ ಸುದ್ದಿಗಳನ್ನು, ಚರ್ಚೆಗಳನ್ನು ಮತ್ತು ವೀಡಿಯೊಗಳನ್ನು

ಧರ್ಮಸ್ಥಳ ಪ್ರಕರಣ : ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ಜಟಾಪಟಿ Read More »

ಪುತ್ತೂರು: ಪೋಕ್ಸೋ ಕೇಸ್‌ ಅಪರಾಧಿಗೆ ಕಠಿಣ ಜೈಲು ಶಿಕ್ಷೆ, ದಂಡ

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ರಿಯಲ್ಲಿ 7 ವರ್ಷದ ಹಿಂದೆ ನಡೆದಿದ್ದ ಪ್ರಕರಣ ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಏಳು ವರ್ಷಗಳ ಹಿಂದೆ ದಾಖಲಾಗಿದ್ದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ಮೈಂದನಡ್ಕ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಗದಗ ಜಿಲ್ಲೆಯ ರೋಣ ತಾಲೂಕಿನ ಅಪರಾಧಿ ಪೀರೇಶ್ ಪೀರಪ್ಪ ಸಂಗಪ್ಪ ಮಾಲೋತ್ತರ ಎಂಬಾತನಿಗೆ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಠಿಣ ಕಾರಾಗೃಹ ವಾಸದ ಶಿಕ್ಷೆ ವಿಧಿಸಿ ಬುಧವಾರ ತೀರ್ಪು ನೀಡಿದೆ. 2007ರ ಅಗಸ್ಟ್ ತಿಂಗಳಲ್ಲಿ

ಪುತ್ತೂರು: ಪೋಕ್ಸೋ ಕೇಸ್‌ ಅಪರಾಧಿಗೆ ಕಠಿಣ ಜೈಲು ಶಿಕ್ಷೆ, ದಂಡ Read More »

error: Content is protected !!
Scroll to Top