ಸುದ್ದಿ

2.75 ಕೋಟಿ ರೂ. ಬೆಲೆಯ ವಜ್ರದುಂಗುರ, ಸುಸಜ್ಜಿತ ಗ್ರಂಥಾಲಯ…

ಬಲು ರೋಚಕ ಬಹುಕೋಟಿ ಉದ್ಯಮಿ ರೋಷನ್‌ ಸಲ್ಡಾನನ ನಿಗೂಢ ಐಷಾರಾಮಿ ಬದುಕು ಮಂಗಳೂರು : ಉದ್ಯಮಿಗಳಿಗೆ ಬಹುಕೋಟಿ ರೂಪಾಯಿ ವಂಚಿಸಿದ ಆರೋಪದಲ್ಲಿ ಸೆರೆಯಾಗಿರುವ ಮಂಗಳೂರು ಜಪ್ಪಿನಮೊಗರಿನ ರೋಷನ್ ಸಲ್ಡಾನನ ಐಷಾರಾಮಿ ಜೀವನದ ಒಂದೊಂದೇ ರೋಚಕ ಮಾಹಿತಿ ಪೊಲೀಸ್‌ ವಿಚಾರಣೆ ಮುಂದುವರಿದಂತೆಲ್ಲ ಬಯಲಾಗಿ ಜನರನ್ನು ಬೆಚ್ಚಿಬೀಳಿಸುತ್ತಿದೆ. ಮಂಗಳೂರು ನಗರದಲ್ಲೂ ಈ ರೀತಿಯ ಒಬ್ಬ ವಂಚಕ ಇರಲು ಸಾಧ್ಯವೇ ಎಂದು ಜನರು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ. ರೋಷನ್ ಸಲ್ಡಾನ ಹೆಣೆದಿರುವ ವಂಚನೆಯ ಮಾಯಾಜಾಲ ಕಂಡು ಸ್ವತಹ ಮಂಗಳೂರು ಪೊಲೀಸರೇ ದಂಗಾಗಿದ್ದಾರೆ. ರೋಷನ್ […]

2.75 ಕೋಟಿ ರೂ. ಬೆಲೆಯ ವಜ್ರದುಂಗುರ, ಸುಸಜ್ಜಿತ ಗ್ರಂಥಾಲಯ… Read More »

ಪಾಕಿಸ್ತಾನ ವಿರುದ್ಧ ಆಡುವುದಿಲ್ಲ ಎಂದ ಭಾರತೀಯರು : ಅಂತಾರಾಷ್ಟ್ರೀಯ ಕ್ರಿಕೆಟ್‌ ಪಂದ್ಯವೇ ರದ್ದು

ಇರ್ಫಾನ್ ಪಠಾಣ್, ಹರ್ಭಜನ್ ಸಿಂಗ್, ಯೂಸುಫ್ ಪಠಾಣ್, ಸುರೇಶ್ ರೈನಾ, ಶಿಖರ್ ಧವನ್ ನಿರ್ಧಾರಕ್ಕೆ ಭಾರಿ ಮೆಚ್ಚುಗೆ ಲಂಡನ್‌ : ಭಾರತದ ತಂಡದ ಐವರು ಪ್ರಮುಖ ಆಟಗಾರರು ಪಾಕಿಸ್ತಾನ ವಿರುದ್ಧ ಯಾವ ಕಾರಣಕ್ಕೂ ಆಡುವುದಿಲ್ಲ ಎಂಬ ಗಟ್ಟಿ ನಿರ್ಧಾರ ತಳೆದ ಪರಿಣಾಮಬಾಗಿ ಕ್ರಿಕೆಟ್‌ ಪಂದ್ಯವೇ ರದ್ದಾಗಿದೆ. ವರ್ಲ್ಡ್​ ಚಾಂಪಿಯನ್​ಶಿಪ್​ ಆಫ್ ಲೆಜೆಂಡ್ಸ್ ಟೂರ್ನಿಯಲ್ಲಿ ಇಂದು ನಡೆಯಬೇಕಿದ್ದ ಇಂಡಿಯಾ ಚಾಂಪಿಯನ್ಸ್ ಹಾಗೂ ಪಾಕಿಸ್ತಾನ್ ಚಾಂಪಿಯನ್ಸ್ ತಂಡಗಳ ನಡುವಣ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಪಾಕಿಸ್ತಾನ್ ವಿರುದ್ಧದ ಈ ಪಂದ್ಯದಿಂದ ಭಾರತೀಯ ಆಟಗಾರರು

ಪಾಕಿಸ್ತಾನ ವಿರುದ್ಧ ಆಡುವುದಿಲ್ಲ ಎಂದ ಭಾರತೀಯರು : ಅಂತಾರಾಷ್ಟ್ರೀಯ ಕ್ರಿಕೆಟ್‌ ಪಂದ್ಯವೇ ರದ್ದು Read More »

ತೀವ್ರಗೊಂಡ ಸಿದ್ದರಾಮಯ್ಯ-ಡಿಕೆಶಿ ತಿಕ್ಕಾಟ : ಹೈಕಮಾಂಡ್‌ ತೇಪೆ ವ್ಯರ್ಥ

ಸಾಧನಾ ಸಮಾವೇಶದಲ್ಲಿ ಡಿಸಿಎಂಗೆ ಸಿಎಂ ನೇರ ಟಕ್ಕರ್‌ ಬೆಂಗಳೂರು: ಹೈಕಮಾಂಡ್‌ ಎಷ್ಟೇ ತೇಪೆ ಹಾಕಿದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಡುವೆ ಮೂಡಿರುವ ಬಿರುಕು ಮುಚ್ಚಿಕೊಳ್ಳುತ್ತಿಲ್ಲ ಎನ್ನುವುದು ನಿನ್ನೆ ಮೈಸೂರಿನಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಜಗಜ್ಜಾಹೀರಾಗಿದೆ. ಈ ಸಮಾವೇಶದಲ್ಲಿ ಡಿಕೆಶಿಗೆ ಸ್ವಾಗತ ಕೋರಲು ಸಿದ್ದರಾಮಯ್ಯ ನಿರಾಕರಿಸಿರುವುದು ಇದಕ್ಕೂ ಮೊದಲು ಡಿಕೆಶಿ ತನ್ನ ಭಾಷಣ ಮುಗಿಸಿ ಅರ್ಧದಲ್ಲೇ ನಿರ್ಗಮಿಸಿರುವುದು ಕಾಂಗ್ರೆಸ್‌ನೊಳಗೆ ಮತ್ತೊಂದು ಸುತ್ತಿನ ಒಳಜಗಳಕ್ಕೆ ದಾರಿ ಮಾಡಿಕೊಟ್ಟಿದೆ. ಮೈಸೂರಿನಲ್ಲಿ ನಡೆಯುತ್ತಿದ್ದ ಸಮಾವೇಶದಿಂದ ದಿಢೀರ್ ನಿರ್ಗಮಿಸಿದ ಡಿ.ಕೆ ಶಿವಕುಮಾರ್

ತೀವ್ರಗೊಂಡ ಸಿದ್ದರಾಮಯ್ಯ-ಡಿಕೆಶಿ ತಿಕ್ಕಾಟ : ಹೈಕಮಾಂಡ್‌ ತೇಪೆ ವ್ಯರ್ಥ Read More »

ಮತಾಂತರದ ಬೃಹತ್‌ ಜಾಲ ಭೇದಿಸಿದ ಪೊಲೀಸರು : 6 ರಾಜ್ಯಗಳಲ್ಲಿ ಹತ್ತು ಮಂದಿ ಬಂಧನ

ಮತಾಂತರಕ್ಕೆ ಬರುತ್ತಿತ್ತು ಅಮೆರಿಕ, ಕೆನಡದಿಂದ ಫಂಡಿಂಗ್‌ ಲಖನೌ: ಉತ್ತರ ಪ್ರದೇಶದ ಸ್ವಯಂಘೋಷಿತ ದೇವಮಾನವ ಜಮಾಲುದ್ದೀನ್ ಅಲಿಯಾಸ್ ಛಂಗೂರ್ ಬಾಬಾ ಮತಾಂತರದ ಸೀಕ್ರೆಟ್‌ ಬಯಲಾದ ಬೆನ್ನಲ್ಲೇ ಉತ್ತರ ಪ್ರದೇಶದ ಪೊಲೀಸರು ಮತ್ತೊಂದು ಮತಾಂತರದ ಬೃಹತ್‌ ಜಾಲವನ್ನ ಭೇದಿಸಿದ್ದಾರೆ. ಅಂತಾರಾಷ್ಟ್ರೀಯ ಹಣಕಾಸು ನೆರವು ಪಡೆದು ಐಸಿಸ್‌ ಮಾದರಿಯಲ್ಲಿ ಮತಾಂತರ ದಂಧೆ ನಡೆಸುತ್ತಿದ್ದ ಬೃಹತ್‌ ಜಾಲ ಭೇದಿಸಿರುವ ಪೊಲೀಸರು 6 ರಾಜ್ಯಗಳಲ್ಲಿ 10 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರನ್ನು ಗೋವಾದ ಆಯೇಷಾ (ಅಲಿಯಾಸ್ ಎಸ್.ಬಿ. ಕೃಷ್ಣ), ಕೋಲ್ಕತ್ತಾದ ಅಲಿ ಹಸನ್ (ಅಲಿಯಾಸ್ ಶೇಖರ್

ಮತಾಂತರದ ಬೃಹತ್‌ ಜಾಲ ಭೇದಿಸಿದ ಪೊಲೀಸರು : 6 ರಾಜ್ಯಗಳಲ್ಲಿ ಹತ್ತು ಮಂದಿ ಬಂಧನ Read More »

ತೆಲುಗಿನ ಖ್ಯಾತ ನಟ ಫಿಶ್‌ ವೆಂಕಟ್‌ ನಿಧನ

ಎಲ್ಲ ಸ್ಟಾರ್‌ ನಟರೊಂದಿಗೆ ಅಭಿನಯಿಸಿದ್ದ ಹಾಸ್ಯ ನಟ ಹೈದರಾಬಾದ್: ಕೋಟ ಶ್ರೀನಿವಾಸ್ ರಾವ್ ನಿಧನ ಬೆನ್ನಲ್ಲೇ ತೆಲುಗು ಚಿತ್ರರಂಗಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಖ್ಯಾತ ಹಾಸ್ಯ ನಟ ಫಿಶ್ ವೆಂಕಟ್ (53) ಶನಿವಾರ ನಿಧನರಾಗಿದ್ದಾರೆ. ತೆಲುಗು ಚಿತ್ರರಂಗದಲ್ಲಿ ಹಾಸ್ಯ ನಟನಾಗಿ ತಮ್ಮದೇ ಆದ ಛಾಪು ಮೂಡಿಸಿದ್ದ ಫಿಶ್ ವೆಂಕಟ್ ಅನಾರೋಗ್ಯದ ಕಾರಣದಿಂದಾಗಿ ಕೊನೆಯುಸಿರೆಳೆದಿದ್ದಾರೆ. ಫಿಶ್ ವೆಂಕಟ್ ಟಾಲಿವುಡ್‌ನಲ್ಲಿ ಹಲವು ಚಿತ್ರಗಳಲ್ಲಿ ಖಳ ನಟನಾಗಿ, ಹಾಸ್ಯ ನಟನಾಗಿ ನಟಿಸಿದ್ದರು. ಅನಾರೋಗ್ಯ ಕಾರಣದಿಂದಾಗಿ ಕಳೆದ ಕೆಲವು ಕಾಲದಿಂದ ಸಿನಿಮಾಗಳಿಂದ ದೂರ

ತೆಲುಗಿನ ಖ್ಯಾತ ನಟ ಫಿಶ್‌ ವೆಂಕಟ್‌ ನಿಧನ Read More »

ಕನ್ನಡದ ಧ್ವಜಕ್ಕೆ ಅಧಿಕೃತ ಮಾನ್ಯತೆ : ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

ಜ್ವಲಂತ ಸಮಸ್ಯೆಗಳಿಂದ ಗಮನ ತಿರುಗಿಸುವ ತಂತ್ರ ಎಂದು ಬಿಜೆಪಿ ಟೀಕೆ ಬೆಂಗಳೂರು : ಈಗಾಗಲೇ ಭಾಷೆಯ ವಿಚಾರವಾಗಿ ಹಲವು ರಾಜ್ಯಗಳಲ್ಲಿ ಹೋರಾಟ ನಡೆಯುತ್ತಿದೆ. ಇದರ ನಡುವೆ ಕರ್ನಾಟಕ ಸರ್ಕಾರ ಕನ್ನಡ ಧ್ವಜಕ್ಕೆ ಅಧಿಕೃತ ಮಾನ್ಯತೆ ಆಗ್ರಹಿಸಿ ಕೇಂದ್ರದ ಎದುರು ಕೋರಿಕೆ ಮಂಡಿಸಿದೆ. ಹಳದಿ-ಕೆಂಪು ಬಾವುಟಕ್ಕೆ ಅಧಿಕೃತ ಮಾನ್ಯತೆ ಕೊಡುವಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. 2017ರಲ್ಲೇ ಬಾವುಟ ಅಧಿಕೃತ ಕೋರಿ ಕೇಂದ್ರಕ್ಕೆ ಅಂದಿನ ಸಿದ್ದರಾಮಯ್ಯ ಸರ್ಕಾರ ಮನವಿ ಸಲ್ಲಿಸಿತ್ತು.

ಕನ್ನಡದ ಧ್ವಜಕ್ಕೆ ಅಧಿಕೃತ ಮಾನ್ಯತೆ : ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ Read More »

ಎನ್‌ಕೌಂಟರ್‌ನಲ್ಲಿ ಆರು ನಕ್ಸಲರ ಹತ್ಯೆ

ಅಪಾರ ಎಕೆ 47 ರೈಫಲ್‌, ಸ್ಫೋಟಕ ಪತ್ತೆ ರಾಯ್‌ಪುರ: ಛತ್ತೀಸ್‌ಗಢದ ದಟ್ಟಾರಣ್ಯದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 6 ಮಾವೋವಾದಿ ನಕ್ಸಲರು ಹತ್ಯೆಗೀಡಾಗಿದ್ದಾರೆ. ಎನ್‌ಕೌಂಟರ್‌ ನಡೆದ ಸ್ಥಳದಲ್ಲಿ ಹಲವು ಎಕೆ 47 ಮತ್ತು ಎಸ್‌ಎಕ್‌ಆರ್‌ ರೈಫಲ್‌ಗಳು, ಸ್ಫೋಟಕಗಳು ಪತ್ತೆಯಾಗಿವೆ. ನಾರಾಯಣಪುರ ಜಿಲ್ಲೆಯ ಅಬುಜ್‌ಮದ್ ಪ್ರದೇಶದ ದಟ್ಟ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿವೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ನಕ್ಸಲ್‌ ಭದ್ರಕೋಟೆಯಾದ ಅಬುಜ್‌ಮದ್ ಕೋರ್ ವಲಯದಲ್ಲಿ ನಕ್ಸಲರ ವಿರುದ್ಧ ನಡೆದ ಮಹತ್ವದ ಕಾರ್ಯಾಚರಣೆಯಲ್ಲಿ ಈ ಎನ್‌ಕೌಂಟರ್ ಸಹ

ಎನ್‌ಕೌಂಟರ್‌ನಲ್ಲಿ ಆರು ನಕ್ಸಲರ ಹತ್ಯೆ Read More »

ಭಾರಿ ಮಳೆ : ಮಂಗಳೂರು, ಬಂಟ್ವಾಳ ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ

ಬಂಟ್ವಾಳ : ಭಾರಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಬಂಟ್ವಾಳ ಮತ್ತು ಮಂಗಳೂರು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜು.19ರಂದು ಎಲ್ಲ ಅಂಗನವಾಡಿ, ಸರ್ಕಾರ, ಅನುದಾನಿತ, ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆವರೆಗೆ ರಜೆ ನೀಡಿ ತಹಶೀಲ್ದಾರರು ಆದೇಶ ಹೊರಡಿಸಿದ್ದಾರೆ. ಮಂಗಳೂರು ತಾಲೂಕಿನಲ್ಲಿ ಪದವಿಪೂರ್ವ ತರಗತಿಗಳಿಗೂ ರಜೆ ನೀಡಲಾಗಿದೆ.

ಭಾರಿ ಮಳೆ : ಮಂಗಳೂರು, ಬಂಟ್ವಾಳ ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ Read More »

ಬಸ್‌ ಪಲ್ಟಿಯಾಗಿ 25ಕ್ಕೂ ಹೆಚ್ಚು ಟೆಕ್ಕಿಗಳಿಗೆ ಗಾಯ

ಕುದುರೆಮುಖಕ್ಕೆ ಪ್ರವಾಸ ಹೊರಟಿದ್ದ ಬಸ್‌ ಅಪಘಾತ ಚಿಕ್ಕಮಗಳೂರು: ಖಾಸಗಿ ಬಸ್ ಪಲ್ಟಿಯಾಗಿ 25ಕ್ಕೂ ಹೆಚ್ಚು ಟೆಕ್ಕಿಗಳು ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ದೇವನ ಗೂಲ್ ಗ್ರಾಮದ ಬಳಿ ಇಂದು ಮುಂಜಾನೆ ಸಂಭವಿಸಿದೆ. ಖಾಸಗಿ ಕಂಪನಿ ನೌಕರರು ಬೆಂಗಳೂರಿನಿಂದ ಕುದುರೆಮುಖಕ್ಕೆ ಪ್ರವಾಸಕ್ಕೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ವೀಕೆಂಡ್ ಹಿನ್ನೆಲೆ ಎಂ.ಎನ್.ಸಿ ಕಂಪನಿಯಲ್ಲಿ ಕೆಲಸ ಮಾಡುತ್ತಿವ 40ಕ್ಕೂ ಹೆಚ್ಚು ಯುವಕ–ಯುವತಿಯರು ನೇತ್ರಾವತಿ ಪೀಕ್ ಟ್ರಕ್ಕಿಂಗ್‍ಗೆ ಹೊರಟಿದ್ದರು. ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಅಪಘಾತದಲ್ಲಿ 25ಕ್ಕೂ ಹೆಚ್ಚು

ಬಸ್‌ ಪಲ್ಟಿಯಾಗಿ 25ಕ್ಕೂ ಹೆಚ್ಚು ಟೆಕ್ಕಿಗಳಿಗೆ ಗಾಯ Read More »

ಮಾಜಿ ಸಂಸದ ಅನಂತ ಕುಮಾರ್‌ ಹೆಗಡೆಗೆ ಜೀವ ಬೆದರಿಕೆ ಕರೆ

ಇ-ಮೇಲ್‌ ಮೂಲಕ ಜೀವ ಬೆದರಿಕೆ ಒಡ್ಡಿರುವ ಕುರಿತು ದೂರು ದಾಖಲು ಬೆಂಗಳೂರು: ಮಾಜಿ ಸಂಸದ ಅನಂತ ಕುಮಾರ್ ಹೆಗಡೆ ಅವರಿಗೆ ಇ-ಮೇಲ್‌ ಮೂಲಕ ಜೀವ ಬೆದರಿಕೆ ಒಡ್ಡಲಾಗಿದೆ. ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆಯ ಇ-ಮೇಲ್ ಸಂದೇಶ ಬಂದಿದ್ದು, ಈ ಬಗ್ಗೆ ಅನಂತ ಕುಮಾರ್ ಹೆಗಡೆ ಆಪ್ತ ಕಾರ್ಯದರ್ಶಿ ಸುರೇಶ್ ಶೆಟ್ಟಿಯವರು ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜೂನ್ 24ರಂದು ಅನಂತ ಕುಮಾರ್ ಹೆಗಡೆ ಅವರಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಸಂದೇಶ ಬಂದಿತ್ತು. ನ್ಯಾಯಾಲಯದ

ಮಾಜಿ ಸಂಸದ ಅನಂತ ಕುಮಾರ್‌ ಹೆಗಡೆಗೆ ಜೀವ ಬೆದರಿಕೆ ಕರೆ Read More »

error: Content is protected !!
Scroll to Top