ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೋರ್ಟ್‌ ನೋಟಿಸ್‌

ಸದನದಲ್ಲಿ ಆರ್‌ಎಸ್‌ಎಸ್‌, ಬಜರಂಗ ದಳ ಟೀಕಿಸಿದ್ದ ಪ್ರಕರಣ ಬೆಂಗಳೂರು: ಅತಿಹೆಚ್ಚು ಅಪರಾಧ ಕೃತ್ಯಗಳಾಗುತ್ತಿರುವುದೇ ಆರ್‌ಎಸ್‌ಎಸ್​ ಮತ್ತು ಬಜರಂಗದಳದಿಂದ ಎಂದು ಸದನದಲ್ಲಿ ಟೀಕಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೋರ್ಟ್‌ ನೋಟಿಸ್‌ ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ ಸಿದ್ದರಾಮಯ್ಯನವರಿಗೆ ನೋಟಿಸ್ ಜಾರಿ ಮಾಡಿ ಜೂನ್ 26ರೊಳಗೆ ನೋಟಿಸ್‌ಗೆ ಉತ್ತರಿಸಬೇಕು ಎಂದು ಹೇಳಿದೆ. ಅತಿಹೆಚ್ಚು ಅಪರಾಧ ಕೃತ್ಯಗಳಾಗುತ್ತಿರುವುದೇ ಆರ್‌ಎಸ್‌ಎಸ್‌ ಮತ್ತು ಬಜರಂಗದಳದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸದನದಲ್ಲಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸದನದಲ್ಲಿ ಅಲ್ಲೋಲಕಲ್ಲೋಲ ಉಂಟಾಗಿತ್ತು. […]

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೋರ್ಟ್‌ ನೋಟಿಸ್‌ Read More »

ಮಂಗಳೂರು : ಭೀಕರ ಅಪಘಾತದಲ್ಲಿ ಕಾಂಗ್ರೆಸ್‌ ಯುವ ನಾಯಕನ ಸಹಿತ ಇಬ್ಬರು ದಾರುಣ ಸಾವು

ನಗರದ ಹೊರವಲಯ ಜಪ್ಪಿನಮೊಗರಿನಲ್ಲಿ ಸಂಭವಿಸಿದ ಅಪಘಾತ ಮಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ಜಪ್ಪಿನಮೊಗರು ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ.ಮೃತರನ್ನು ಅಮನ್ ರಾವ್ ಮತ್ತು ಓಂಶ್ರೀ ಪೂಜಾರಿ ಎಂದು ಗುರುತಿಸಲಾಗಿದೆ. ಕದ್ರಿ ನಿವಾಸಿಗಳಾದ ಈ ಇಬ್ಬರು ಯುವಕರು ಕಾರಿನಲ್ಲಿ ತಲಪಾಡಿಗೆ ಊಟಕ್ಕೆ ಹೋಗಿದ್ದರು. ಹಿಂತಿರುಗುತ್ತಿದ್ದಾಗ ಜಪ್ಪಿನಮೊಗರು ಬಳಿ ಅವರ ವಾಹನ ಭೀಕರ ಅಪಘಾತಕ್ಕೀಡಾಗಿದ್ದು, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಓಂಶ್ರೀ ಪೂಜಾರಿ ಅವರು ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ

ಮಂಗಳೂರು : ಭೀಕರ ಅಪಘಾತದಲ್ಲಿ ಕಾಂಗ್ರೆಸ್‌ ಯುವ ನಾಯಕನ ಸಹಿತ ಇಬ್ಬರು ದಾರುಣ ಸಾವು Read More »

ಮೆಟ್ರೊ ನಿಲ್ದಾಣಗಳಲ್ಲಿ ಅಮುಲ್‌ ಕಿಯೋಸ್ಕ್‌ : ಸರ್ಕಾರದ ವಿರುದ್ಧ ಕನ್ನಡಿಗರ ಆಕ್ರೋಶ

ಸೇವ್‌ ನಂದಿನಿ ಅಭಿಯಾನ ನಡೆಸಿ ಅಧಿಕಾರಕ್ಕೆ ಬಂದಿದ್ದ ಕಾಂಗ್ರೆಸ್‌ನಿಂದ ಸದ್ದಿಲ್ಲದೆ ಅಮುಲ್‌ಗೆ ಅನುಮತಿ ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಗೂ ಮೊದಲು ಗುಜರಾತ್‌ನ ಅಮುಲ್‌ ವಿರುದ್ಧ ಸೇವ್‌ ನಂದಿನಿ ಅಭಿಯಾನ ಮಾಡಿ ಕನ್ನಡಿಗರ ಅಭಿಮಾನವನ್ನು ಕೆರಳಿಸಿದ್ದ ಕಾಂಗ್ರೆಸ್‌ ಈಗ ಅಧಿಕಾರಕ್ಕೆ ಮರಳಿದ ಬಳಿಕ ಸದ್ದಿಲ್ಲದೆ ಬೆಂಗಳೂರಿನ ನಮ್ಮ ಮೆಟ್ರೊ ನಿಲ್ದಾಣಗಳಲ್ಲಿ ಅಮುಲ್‌ ಕಿಯೋಸ್ಕ್‌ಗಳನ್ನು ತೆರೆಯಲು ಅನುಮತಿ ನೀಡಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಮೆಟ್ರೋ ನಿಲ್ದಾಣಗಳಲ್ಲಿ ಹೊರರಾಜ್ಯದ ಅಮುಲ್ ಕಿಯೋಸ್ಕ್‌ಗಳನ್ನು ಸ್ಥಾಪಿಸಲಾಗಿದೆ. ಇಷ್ಟಾದರೂ ಅಧಿಕಾರ ಬರುವ ಮುಂಚೆ ಸೇವ್ ನಂದಿನಿ

ಮೆಟ್ರೊ ನಿಲ್ದಾಣಗಳಲ್ಲಿ ಅಮುಲ್‌ ಕಿಯೋಸ್ಕ್‌ : ಸರ್ಕಾರದ ವಿರುದ್ಧ ಕನ್ನಡಿಗರ ಆಕ್ರೋಶ Read More »

ಇಸ್ರೇಲ್‌ ಮೇಲೆ ಹೈಪರ್‌ಸಾನಿಕ್‌ ಕ್ಷಿಪಣಿ ಪ್ರಯೋಗಿಸಿದ ಇರಾನ್‌

ಅಮೆರಿಕ ಎಂಟ್ರಿಗೆ ಕ್ಷಣಗಣನೆ ; ಘನಘೋರ ಸಮರ ನಡೆಯುವ ಆತಂಕ ಟೆಹ್ರಾನ್‌ : ಇಸ್ರೇಲ್‌ ಮತ್ತು ಇರಾನ್‌ ನಡುವೆ ಕಳೆದ ಶುಕ್ರವಾರ ಶುರುವಾಗಿರುವ ಯುದ್ಧ ಮತ್ತಷ್ಟು ತೀವ್ರಗೊಂಡಿದ್ದು, ಇಸ್ರೇಲ್‌ ಮೇಲೆ ಹೈಪರ್‌ಸಾನಿಕ್‌ ಫತಾಹ್‌-1 ಕ್ಷಿಪಣಿ ಪ್ರಯೋಗಿಸಿರುವುದಾಗಿ ಇರಾನ್‌ ಹೇಳಿಕೊಂಡಿದೆ. ಇಸ್ರೇಲ್‌ನಲ್ಲಿ ಬುಧವಾರ ಮುಂಜಾನೆ ಭೀಕರ ಸ್ಫೋಟ ಸಂಭವಿಸಿದ್ದು, ಇದು ಹೈಪರ್‌ಸಾನಿಕ್‌ ಕ್ಷಿಪಣಿಯದ್ದೇ ಆಗಿರಬೇಕು ಎನ್ನಲಾಗಿದೆ. ಈ ನಡುವೆ ಇಸ್ರೇಲ್‌ ಕೂಡ ಇರಾನ್‌ ಮೇಲೆ ನಿರಂತರ ಕ್ಷಿಪಣಿ ಮಳೆಗರೆಯುತ್ತಿದೆ. ಹೈಪರ್‌ಸಾನಿಕ್‌ ಕ್ಷಿಪಣಿ ಅತ್ಯಂತ ಆಧುನಿಕ ಯುದ್ಧಾಸ್ತ್ರವಾಗಿದ್ದು, ಇದು ರಾಡಾರ್‌

ಇಸ್ರೇಲ್‌ ಮೇಲೆ ಹೈಪರ್‌ಸಾನಿಕ್‌ ಕ್ಷಿಪಣಿ ಪ್ರಯೋಗಿಸಿದ ಇರಾನ್‌ Read More »

ವಂಚನೆ ಪ್ರಕರಣ ಸುಳಿಯಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್‌: ಜೂ.23ರಂದು ಇ.ಡಿ.ವಿಚಾರಣೆ

ಐಶ್ವರ್ಯಾ ಗೌಡ ಜುವೆಲ್ಲರಿ ಅಂಗಡಿ ಮಾಲೀಕನಿಗೆ 9 ಕೋ.ರೂ. ವಂಚಿಸಿದ ಪ್ರಕರಣ ಬೆಂಗಳೂರು: ಐಶ್ವರ್ಯ ಗೌಡ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಮಾಜಿ ಸಂಸದ ಡಿ.ಕೆ. ಸುರೇಶ್‌ ಅವರನ್ನು ಜೂ.23ರಂದು ವಿಚಾರಣೆಗೊಳಪಡಿಸಲಿದೆ. ಇ.ಡಿ.ಯಿಂದ ಸಮನ್ಸ್‌ ಜಾರಿಯಾಗಿರುವುದು ನಿಜ. ಅದರಂತೆ ಜೂ. 23ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಡಿ.ಕೆ. ಸುರೇಶ್‌ ಹೇಳಿದ್ದಾರೆ. ಅಧಿಕಾರಿಗಳು ಮನೆಗೆ ಬಂದು ಸಮನ್ಸ್‌ ನೀಡಿದಾಗ ನಾನು ಮನೆಯಲ್ಲಿ ಇರಲಿಲ್ಲ. ಅನಂತರ ಮನೆಗೆ ಬಂದು ಯಾವ ವಿಚಾರವಾಗಿ ಸಮನ್ಸ್‌ ಎಂದು ನೋಡಿದಾಗ ಐಶ್ವರ್ಯ

ವಂಚನೆ ಪ್ರಕರಣ ಸುಳಿಯಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್‌: ಜೂ.23ರಂದು ಇ.ಡಿ.ವಿಚಾರಣೆ Read More »

ದ್ವೇಷ ಭಾಷಣ : ಹಿಂದಿನ ಪೊಲೀಸ್‌ ಅಧಿಕಾರಿಗಳ ವಿರುದ್ಧ ತನಿಖೆಗೆ ಆಗ್ರಹಿಸಿದ ಸ್ಪೀಕರ್‌ ಖಾದರ್‌

ಹಿಂದಿನ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಗೃಹ ಸಚಿವ ಪರಮೇಶ್ವರ್‌ಗೆ ಪತ್ರ ಮಂಗಳೂರು: ದ್ವೇಷ ಭಾಷಣಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದ ದಕ್ಷಿಣ ಕನ್ನಡದ ಹಿಂದಿನ ಪೊಲೀಸ್‌ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ಗೃಹ ಸಚಿವರಿಗೆ ಸ್ಪೀಕರ್‌ ಯು.ಟಿ.ಖಾದರ್‌ ಪತ್ರ ಬರೆದಿದ್ದಾರೆ. ಇತ್ತೀಚೆಗೆ ಕರಾವಳಿ ಭಾಗದಲ್ಲಿ ನಡೆಯುತ್ತಿರುವ ದ್ವೇಷಭರಿತ ಭಾಷಣಗಳು, ಪ್ರಚೋದನಾತ್ಮಕ ಹೇಳಿಕೆಗಳು ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ಸಮಾಜ ಘಾತುಕ ವದಂತಿಗಳು ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದತೆಗೆ ಭಾರಿ ಧಕ್ಕೆ ಉಂಟುಮಾಡುವಂತಹ ಅಪಾಯಕಾರಿ ಸ್ಥಿತಿಯನ್ನು

ದ್ವೇಷ ಭಾಷಣ : ಹಿಂದಿನ ಪೊಲೀಸ್‌ ಅಧಿಕಾರಿಗಳ ವಿರುದ್ಧ ತನಿಖೆಗೆ ಆಗ್ರಹಿಸಿದ ಸ್ಪೀಕರ್‌ ಖಾದರ್‌ Read More »

ಹಿಂದೂ ಮುಖಂಡರ ಮನೆಗಳಲ್ಲಿ ಮಧ್ಯರಾತ್ರಿ ಪೊಲೀಸ್‌ ತಪಾಸಣೆ ಕುರಿತು ಸಮಗ್ರ ತನಿಖೆಗೆ ಆದೇಶ

ತನಿಖೆ ನಡೆಸಿ ಎರಡು ವಾರದಲ್ಲಿ ವರದಿ ನೀಡಲು ಡಿಜಿಗೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಆದೇಶ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪದೇ ಪದೆ ನಡೆದ ಹತ್ಯೆಗಳ ಹಿನ್ನೆಲೆಯಲ್ಲಿ ಪೊಲೀಸರು ಕಾನೂನು ಸುವ್ಯವಸ್ಥೆ ಪಾಲಿಸುವ ನೆಪದಲ್ಲಿ ಪುತ್ತೂರು ಸೇರಿದಂತೆ ವಿವಿಧೆಡೆ ಹಿಂದೂ ಮುಖಂಡರ, ಕಾರ್ಯಕರ್ತರ ಮನೆಗಳಿಗೆ ರಾತ್ರೋರಾತ್ರಿ ತೆರಳಿ ವಿಚಾರಣೆ ನಡೆಸಿದ್ದ ಕುರಿತು ಸಮಗ್ರ ತನಿಖೆ ನಡೆಸಿ ಎರಡು ವಾರಗಳಲ್ಲಿ ವರದಿ ಸಲ್ಲಿಸುವಂತೆ ತನಿಖಾ ವಿಭಾಗದ ಡಿಜಿಗೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಆದೇಶ ಮಾಡಿದೆ. ಹಿಂದೂ

ಹಿಂದೂ ಮುಖಂಡರ ಮನೆಗಳಲ್ಲಿ ಮಧ್ಯರಾತ್ರಿ ಪೊಲೀಸ್‌ ತಪಾಸಣೆ ಕುರಿತು ಸಮಗ್ರ ತನಿಖೆಗೆ ಆದೇಶ Read More »

ಮಂಗಳೂರಿನಲ್ಲಿ ಮತ್ತೆ ಮಳೆ ಅನಾಹುತ : ಮನೆ ಮೇಲೆ ಕುಸಿದು ಬಿದ್ದ ಗುಡ್ಡ

ಮೂರು ಮನೆಗಳಿಗೆ ಹಾನಿ; 40 ಮನೆಗಳು ಅಪಾಯದಲ್ಲಿ ಮಂಗಳೂರು: ಮಂಗಳೂರಿನಲ್ಲಿ ಸೋಮವಾರ ಮಳೆ ಅಬ್ಬರ ತುಸು ತಡಿಮೆಯಾಗಿದ್ದರೂ ಗುಡ್ಡ ಕುಸಿತ ಸಂಭವಿಸಿದೆ. ಮಂಗಳೂರು ಸಮೀಪದ ಕಣ್ಣೂರಿನ ದಯಂಬು ಎಂಬಲ್ಲಿ ಗುಡ್ಡ ಕುಸಿದು ಮನೆ ಮೇಲೆ ಬಿದ್ದಿದ್ದು, ಕುಟುಂಬವೊಂದು ಕೂದಲೆಲೆ ಅಂತರದಲ್ಲಿ ಪಾರಾಗಿದೆ. ಗುಡ್ಡದ ಕೆಳಭಾಗದಲ್ಲೇ ಇದ್ದ ಮನೆಯಲ್ಲಿ ವಾಸವಿದ್ದ ಕುಟುಂಬದವರು, ಗುಡ್ಡ ಕುಸಿತದ ಸದ್ದು ಕೇಳುತ್ತಿದ್ದಂತೆಯೇ ಓಡಿಹೋಗಿ ಬಚಾವಾಗಿದ್ದಾರೆ. ಮೂರು ಮನೆಗಳಿಗೆ ಕುಸಿತದಿಂದ ಹಾನಿಯಾಗಿದೆ. ಕಳೆದ ಶನಿವಾರದಿಂದೀಚೆಗೆ ಸುರಿಯುತ್ತಿರುವ ಭೀಕರ ಮಳೆಗೆ ಮಂಗಳೂರು ನಗರದಲ್ಲಿ ಅನೇಕ ಅನಾಹುತಗಳು

ಮಂಗಳೂರಿನಲ್ಲಿ ಮತ್ತೆ ಮಳೆ ಅನಾಹುತ : ಮನೆ ಮೇಲೆ ಕುಸಿದು ಬಿದ್ದ ಗುಡ್ಡ Read More »

ಟೆಹ್ರಾನ್‌ ನಗರ ತೊರೆಯಲು ಭಾರತೀಯರಿಗೆ ತುರ್ತು ಸೂಚನೆ

ಹತ್ತು ಸಾವಿರಕ್ಕೂ ಅಧಿಕ ಭಾರತೀಯರನ್ನು ತಾಯ್ನಾಡಿಗೆ ಕರೆತರುವ ಸವಾಲು ನವದೆಹಲಿ: ಭಾರತೀಯರೆಲ್ಲರೂ ಕೂಡಲೇ ಟೆಹ್ರಾನ್‌ ನಗರದಿಂದ ಹೊರಬೇಕೆಂದು ಭಾರತ ಸರ್ಕಾರ ಟೆಹ್ರಾನ್‌ನಲ್ಲಿರುವ ಭಾರತೀಯ ಪ್ರಜೆಗಳಿಗೆ ಮಂಗಳವಾರ ತುರ್ತು ಸೂಚನೆ ನೀಡಿದೆ. ಇಸ್ರೇಲ್‌ ಮತ್ತು ಇರಾನ್‌ ನಡುವಿನ ಸಮರ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಟೆಹ್ರಾನ್‌ ನಗರದಿಂದ ದೂರ ಹೋಗುವಂತೆ ಭಾರತೀಯರಿಗೆ ಸೂಚಿಸಿದೆ. ಇಸ್ರೇಲ್‌ ಸತತವಾಗಿ ಟೆಹ್ರಾನ್‌ ನಗರದ ಮೇಲೆ ಕ್ಷಿಪಣಿ ದಾಳಿ ನಡೆಸುತ್ತಿದ್ದು, ಅಲ್ಲಿ ಇರುವುದು ಅಪಾಯಕಾರಿಯಾಗಿ ಪರಿಣಮಿಸಿದೆ. ಜೊತೆಗೆ ಅಮೆರಿಕ ಕೂಡ ಟೆಹ್ರಾನ್‌ ಬಿಟ್ಟು ಹೋಗುವಂತೆ

ಟೆಹ್ರಾನ್‌ ನಗರ ತೊರೆಯಲು ಭಾರತೀಯರಿಗೆ ತುರ್ತು ಸೂಚನೆ Read More »

ಇಸ್ರೇಲ್‌-ಇರಾನ್‌ ರಣರಂಗಕ್ಕೆ ಅಮೆರಿಕ ನೇರ ಎಂಟ್ರಿ?

ಟ್ರಂಪ್‌ ಎಚ್ಚರಿಕೆ ಬೆನ್ನಲ್ಲೇ ಇರಾನ್‌ನಲ್ಲಿ ಹೆಚ್ಚಾದ ಭೀತಿ ತೈಲ, ಗ್ಯಾಸ್‌ ಬೆಲೆ ಏರಿಕೆ ಆತಂಕ ಟೆಹ್ರಾನ್‌ : ಇರಾನ್​​ನ ರಾಜಧಾನಿ ಟೆಹ್ರಾನ್ ಬಿಟ್ಟುಹೋಗುವಂತೆ ಅಲ್ಲಿನ ಜನರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಎಚ್ಚರಿಕೆ ನೀಡಿರುವುದು ಇಸ್ರೇಲ್‌-ಇರಾನ್‌ ಸಮರದಲ್ಲಿ ಅಮೆರಿಕವೂ ಭಾಗಿಯಾಗುತ್ತಾ ಎಂಬ ದೊಡ್ಡ ಪ್ರಶ್ನೆಯನ್ನು ಹುಟ್ಟುಹಾಕಿದೆ. ಒಂದು ವೇಳೆ ಅಮೆರಿಕ ನೇರವಾಗಿ ರಣರಂಗಕ್ಕೆ ಇಳಿದರೆ ಘನಘೋರ ಸಮರ ನಡೆಯುವ ಭಿತಿ ಉಂಟಾಗಿದೆ. ಹೀಗಾದರೆ ಇದರ ಪರಿಣಾಮ ಬರೀ ಇರಾನ್‌ ಮಾತ್ರವಲ್ಲ ಇಡೀ ಜಗತ್ತಿಗೆ ತಟ್ಟಲಿದೆ. ಟ್ರಂಪ್‌ ಹೇಳಿಕೆಯಿಂದಾಗಿ

ಇಸ್ರೇಲ್‌-ಇರಾನ್‌ ರಣರಂಗಕ್ಕೆ ಅಮೆರಿಕ ನೇರ ಎಂಟ್ರಿ? Read More »

error: Content is protected !!
Scroll to Top